Tag: nirmalanandanatha swamiji

  • ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ

    ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ

    • ಹೊಸ ಜಾತಿ ಸೇರ್ಪಡೆ ಮಾಡಿರುವುದು ಸರಿ ಇಲ್ಲ: ನಂಜಾವಧೂತ ಶ್ರೀ
    • ಅಗತ್ಯವಿದ್ರೆ ಮಾತ್ರ ಉಪಜಾತಿ ಬರೆಸಿ: ನಿಶ್ಚಲಾನಂದ ಶ್ರೀ

    ಬೆಂಗಳೂರು: ತರಾತುರಿ ಜಾತಿಗಣತಿ (Caste Census) ಹಾಗೂ ಜಾತಿಗಳ ಜೊತೆ ಕ್ರಿಶ್ಚಿಯನ್ ದರ್ಮ ಸೇರಿಸುವುದು ಬೇಡ ಎಂದು ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಒಕ್ಕಲಿಗ ಸಮುದಾಯದ ಸಭೆ (Vokkaliga) ಬಳಿಕ ಅವರು ಮಾತನಾಡಿದರು. ಈ ವೇಳೆ, ಸಮೀಕ್ಷೆ ಮುಂದೂಡಬೇಕು, ಕಾಲಮಿತಿ ಹೆಚ್ಚು ಮಾಡಿ ಸಮೀಕ್ಷೆ ನಡೆಸಬೇಕು. ನಾವು ಕೂಡ ಸಮೀಕ್ಷೆ ಸ್ವಾಗತಿಸುತ್ತೇವೆ, ಕೆಲ ನ್ಯೂನತೆ ಸರಿಪಡಿಸಬೇಕು. ಕ್ರಿಶ್ಚಿಯನ್, ಜೈನ ಈ ರೀತಿ ಧರ್ಮಗಳ ಜಾತಿಗಳಿಗೆ ಸೇರಿಸುವುದು ಸರಿ ಇಲ್ಲ ಎಂದು ಅವರು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಒಕ್ಕಲಿಗ ಸಭೆಯಲ್ಲಿ ಹೆಚ್‌ಡಿಕೆ-ಡಿಕೆಶಿ ಮುಖಾಮುಖಿ

    15 ದಿನಗಳ ಕಾಲ ಸಮೀಕ್ಷೆ ಮಾಡಲು ಹೊರಟಿದ್ದಾರೆ. ಅದರಲ್ಲಿ, 9 ದಿನಗಳು ನವರಾತ್ರಿ, ಎಲ್ಲರೂ ಶ್ರದ್ಧೆಯಿಂದ ಆಚರಣೆ ಮಾಡ್ತಾರೆ. ಹೀಗಾಗಿ ಸಮೀಕ್ಷೆಯಿಂದ ಯಾವ ಮಟ್ಟಕ್ಕೆ ಪೂರ್ಣ ಆಗುತ್ತೆ. ರಜೆಯ ಕಾರಣ ಎಲ್ಲರೂ ಅವರವರ ಊರಿಗೆ ಹೋಗ್ತಾರೆ. ಸಮೀಕ್ಷೆಯ ಸದ್ದುದ್ದೇಶ ಅರ್ಥಪೂರ್ಣ ಆಗಬೇಕು. ಎಲ್ಲರೂ ಒಕ್ಕಲಿಗ ಎಂದು ಬರೆಸಬೇಕು. ಕೋಡ್ ಎ 1545 ಎಂದು ಬರೆಸಬೇಕು. ಜಾತಿಗಣತಿ ಮುಂದೂಡಿ ಅನ್ನೋದು ನಮ್ಮ ನಿರ್ಣಯ, ಸರ್ಕಾರ ಸ್ಪಂದಿಸುವ ಭರವಸೆ ಇದೆ ಎಂದರು.

    ಇದೇ ವೇಳೆ ಧರ್ಮ ಸೇರಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಶ್ರೀಗಳು, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಕುರುಬ ಸರಿ ಇಲ್ಲ. ಇದು ಮುಂದೆ ಮುಸ್ಲಿಂ ಒಕ್ಕಲಿಗ, ಮುಸ್ಲಿಂ ಲಿಂಗಾಯತ ಅಂದ್ರೆ ಹೇಗೆ? ಮುಸ್ಲಿಂ ಹಿಂದೂ ಅಂತಾ ಮಾಡಿದ್ರೆ.? ಇದನ್ನ ಸಹಿಸಲು ಆಗಲ್ಲ.

    ಇನ್ನು ಸಭೆ ಬಳಿಕ ಮಾತನಾಡಿದ ನಂಜಾವಧೂತ ಸ್ವಾಮೀಜಿ (Nanjavadhutha Swamiji), ಈ ಹಿಂದೆ ಮರುಸಮೀಕ್ಷೆಗೆ ಒತ್ತಾಯಿಸಿದ್ದೆವು. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ ಹೊಸ ಗಣತಿ ಮಾಡ್ತಿದ್ದಾರೆ. ಅದಕ್ಕೆ ನಮ್ಮವರ ತಕಾರರು ಇಲ್ಲ. ಆದ್ರೆ ಧರ್ಮದ ಹೆಸರು ತಳುಕು ಹಾಕುವುದು, ಹೊಸ ಜಾತಿ ಹಾಕಿ ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ಯಾವುದೇ ಪ್ರಕ್ರಿಯೆ ನಡೆಯದೇ ಹೊಸ ಜಾತಿ ಸೇರ್ಪಡೆ ಮಾಡಿರುವುದು ಸರಿ ಇಲ್ಲ ಎಂದು ಕಿಡಿಕಾರಿದರು.

    ಕೃಷಿ ಚಟುವಟಿಕೆಗಳು, ಸಾಲು ಸಾಲು ಹಬ್ಬ, ಪಿತೃಪಕ್ಷ ಎಲ್ಲರೂ ಒಂದೇ ದಿನ ಆಚರಣೆ ಮಾಡಲ್ಲ. 9 ದಿನಗಳ ನವರಾತ್ರಿ ಇರುತ್ತೆ, ಸ್ವಾಮೀಜಿಗಳು ಪೂಜೆಯಲ್ಲಿ ಇರ್ತಾರೆ. ಆಯೋಗದ್ದು ಅವಸರದ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ನಿರ್ಧಾರ ಏಕಪಕ್ಷೀಯ. ತರಾತುರಿಯಲ್ಲಿ ಜಾತಿಗಣತಿಗೆ ಮುಂದಾಗಿದೆ. ಏಳೂವರೆ ಕೋಟಿ ಜನರ ಸಮೀಕ್ಷೆಯನ್ನ 15 ದಿನದಲ್ಲಿ ಹೇಗೆ ಪೂರ್ಣಗೊಳಿಸ್ತೀರಾ? ಸರ್ಕಾರ ಮಧ್ಯಪ್ರವೇಶ ಮಾಡಬೇಕು. ಸಮೀಕ್ಷೆಯನ್ನ ಮುಂದೂಡಬೇಕು. ನಮಗೆ ಭಯ ಇಲ್ಲ, ಆದರೆ ಕಾಲಾವಕಾಶ ಕೊಡಿ ಎಂದರು.

    ಸಭೆ ಬಳಿಕ ನಿಶ್ಚಲಾನಂದ ಸ್ವಾಮೀಜಿಗಳು (Nischalananda Sri) ಮಾತನಾಡಿ, ಜಾತಿಗಣತಿಯನ್ನ ಸ್ವಾಗತಿಸುತ್ತೇವೆ. ಆದರೆ ಕೃಷಿ, ದಸರಾ ಕೆಲಸ ಇದೆ, ತರಾತುರಿಯಲ್ಲಿ ಜಾತಿಗಣತಿ ಮಾಡಬಾರದು. ಕನಿಷ್ಠ 60 ದಿನ ಮುಂದೂಡುವಂತೆ ಸರ್ಕಾರಕ್ಕೆ ಮನವಿ ಮಾಡಿ ನಿರ್ಣಯ ಕೈಗೊಂಡಿದ್ದೇವೆ. ಅಲ್ಲದೇ ಒಕ್ಕಲಿಗ ಮೊದಲು ಬರೆಸಬೇಕು, ಅಗತ್ಯ ಇದ್ರೆ ಉಪಜಾತಿ ಬರೆಸಬೇಕು ಅಂತಾ ನಿರ್ಣಯ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಾತಿ ಗಣತಿಯಲ್ಲಿ ಸಾಕಷ್ಟು ದೋಷಗಳಿವೆ, ಸಮೀಕ್ಷೆ ಮುಂದೂಡಬೇಕು: ವಚನಾನಂದ ಸ್ವಾಮೀಜಿ

  • ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ – ಅಶೋಕ್‌ಗೆ ಡಿಕೆಶಿ ಪ್ರಶ್ನೆ

    ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ – ಅಶೋಕ್‌ಗೆ ಡಿಕೆಶಿ ಪ್ರಶ್ನೆ

    – ಫೆಬ್ರವರಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನ: ಡಿಸಿಎಂ

    ಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಬಿಜೆಪಿಯವರು ಎಲ್ಲೋಗಿದ್ರು? ನಿರ್ಮಲಾನಂದನಾಥ ಸ್ವಾಮೀಜಿಗಳ (Nirmalanandanatha Swamiji) ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ? ಆಗ ಅಶೋಕ್ ಎಲ್ಲಿದ್ದರು? ಶ್ರೀಗಳು ಕ್ರಿಮಿನಲ್‌ ತರಹ ಅವರ ನಂಬರ್‌ ಕೊಟ್ಟಿದ್ದರು. ಅದರ ರಿಪೋರ್ಟ್‌ ಬಗ್ಗೆ ಗೊತ್ತಿದ್ಯಾ? ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಪ್ರಶ್ನಿಸಿದರು.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಮತದಾನ ಇಲ್ಲದಂತೆ ಮಾಡಬೇಕು ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್‌ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್‌

    ವಿಧಾನಸೌಧದಲ್ಲಿ (VidhanaSoudha) ಸಿಎಂ ಉತ್ತರ ಕೊಟ್ಟಿದ್ದಾರೆ. ನಾನು ನಮ್ಮ ಸ್ವಾಮೀಜಿಗಳಿಗೆ ಹಾಗೂ ಎಲ್ಲ ಸ್ವಾಮೀಜಿಗಳಿಗೆ ಮನವಿ ಮಾಡುತ್ತೇನೆ. ಸಂವಿಧಾನ, ಯಾರ ಹಕ್ಕುಗಳ ಬಗ್ಗೆ ಮಾತನಾಡುವುದು ಬೇಡ, ಜಾತಿಗಳ ಬಗ್ಗೆ ಮಾತನಾಡುವುದು ಬೇಡ. ನಮ್ಮದು ಮಾನವ ಧರ್ಮ, ನಮ್ಮದು ಸಂವಿಧಾನ, ಎರಡಕ್ಕೂ ನಾವು ಹೆಚ್ಚಿಗೆ ಒತ್ತು ಕೊಟ್ಟು ಹೋಗಬೇಕು. ನಾನು ಸ್ವಾಮೀಜಿಗಳು ಹಾಗೂ ಪೊಲೀಸರಿಗೆ ಹೇಳುತ್ತೇನೆ, ಯಾರು ಕೂಡ ಕಾನೂನಿಗಿಂತ ದೊಡ್ಡವರಲ್ಲ. ನಾನು ಮಾತಾಡಿದ್ರೂ ಕೇಸ್ ಹಾಕ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಶೋ ಕಂಟಿನ್ಯೂ ಮಾಡೋಕೆ ಆಗಲ್ಲ ಎಂದು ಕಣ್ಣೀರಿಟ್ಟ ಶೋಭಾ- ಕಿಚ್ಚನ ಮಾತಿಗೆ ಡೋರ್ ಓಪನ್

    ನಮ್ಮ ಕಾಂಗ್ರೆಸ್ ಆಫೀಸ್ ಹುಡುಗರ ಮೇಲೆ ಕೇಸ್ ಬಿಜೆಪಿ ಸರ್ಕಾರ ಇದ್ದಾಗ ಹಾಕಿದ್ದಾರೆ. ಸ್ವಾಮೀಜಿಗಳ ವಿಚಾರಕ್ಕೆ ಉಗ್ರ ಹೋರಾಟ ಮಾಡ್ತಿನಿ ಅಂತ ಅಶೋಕ್ ಹೇಳ್ತಾರೆ. ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಎಲ್ಲೋಗಿದ್ರು? ಎಲ್ಲಿ ಹೋಗಿದ್ದರು ಬಿಜೆಪಿಯವರು? ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ, ಆಗ ಅಶೋಕ್ ಎಲ್ಲೋಗಿದ್ರು? ಶ್ರೀಗಳು ಕ್ರಿಮಿನಲ್‌ ತರಹ ಅವರ ನಂಬರ್‌ ಕೊಟ್ಟಿದ್ದರು. ಅದರ ರಿಪೋರ್ಟ್‌ ಬಗ್ಗೆ ಗೊತ್ತಿದ್ಯಾ? ಸುಮ್ಮನೆ ಒಣ ರಾಜಕಾರಣ ಬಿಟ್ಟು ಬಿಡಿ, ಬೆಂಕಿ ಹಚ್ಚಿ ಅದರಲ್ಲಿ ಬಿಡಿ ಸೇದ್ಕೊಂಡು ಕೂತಿದ್ದಾನೆ ಅಶೋಕ್ ಎಂದು ಲೇವಡಿ ಮಾಡಿದರು.

    ಸಮಾವೇಶದಿಂದ ಸ್ಥಳೀಯ ಚುನಾವಣೆಗಳಿಗೆ ಸಹಾಯಕ ಎಂಬ ವಿಚಾರಕ್ಕೆ ಉತ್ತರಿಸಿ, ಏನಾದ್ರೂ ಒಂದು ಉದ್ದೇಶ ಇರಬೇಕು ಅಲ್ವಾ? ಎಲೆಕ್ಷನ್ ಬರುತ್ತಲೇ ಇರುತ್ತದೆ. ನಾವು ಕೂಡ ತಯಾರಿ ಮಾಡಿಕೊಳ್ಳಬೇಕಲ್ವಾ? ಮುಂದಿನ ಫ್ರಬವರಿಯಲ್ಲಿ ಚುನಾವಣೆ ಮಾಡಬೇಕೆಂದು ತೀರ್ಮಾನ ಆಗಿದೆ. ಎಲ್ಲಾ ಕಂಪ್ಲೀಟ್ ಆಗಿ ಎಲೆಕ್ಟರೋಲ್‌ ವರ್ಕ್ಸ್ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಎಸ್‌ವೈ ಕುಟುಂಬ ದೇಶದಲ್ಲಿಯೇ ಪ್ರಾಮಾಣಿಕ ಕುಟುಂಬ, ವಿಜಯೇಂದ್ರ ಅಪ್ಪಟ ಚಿನ್ನ – ಯತ್ನಾಳ್ ವ್ಯಂಗ್ಯ

    ಇದೇ ವೇಳೆ ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ ಡಿಕೆಶಿ, ನಾನು ಮುಖ್ಯಮಂತ್ರಿ ಅಲ್ಲ ಡಿಸಿಎಂ. ಆದ್ರೆ ಪಾರ್ಟಿ ಅಧ್ಯಕ್ಷ ಸದ್ಯಕ್ಕೆ ಇದರ ಬಗ್ಗೆ ಚರ್ಚೆ ಇಲ್ಲ, ಅದರ ಅವಶ್ಯಕತೆಯೂ ಇಲ್ಲ. ಇನ್ನೂ ವಿಧಾನಸಭೆಯಲ್ಲಿ ಯಾವ ಸ್ಥಾನವೂ ಖಾಲಿ ಇಲ್ಲ. ನಾನು ಪಾರ್ಟಿ ಪ್ರೆಸಿಡೆಂಟ್ ಆದ್ರೆ ನಾನೇನು ಹೇಳಬೇಕಿಲ್ಲ ಎಂದರು.

  • ಒಕ್ಕಲಿಗರ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿ ಮುಜುಗರಕ್ಕೀಡಾದ ಜಾರ್ಜ್‌

    ಒಕ್ಕಲಿಗರ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿ ಮುಜುಗರಕ್ಕೀಡಾದ ಜಾರ್ಜ್‌

    ಚಿಕ್ಕಮಗಳೂರು: ಒಕ್ಕಲಿಗರ ಸಂಘದ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣಕ್ಕೆ ಮುಂದಾದ ಸಚಿವ ಕೆ.ಜೆ.ಜಾರ್ಜ್‌ (K.J.George) ಅವರಿಗೆ ವಿರೋಧದ ಬಿಸಿ ತಟ್ಟಿದೆ.

    ಚಿಕ್ಕಮಗಳೂರು (Chikkamagaluru) ನಗರದ ಎಐಟಿ ವೃತ್ತದ ಬಳಿ ಇರುವ ಒಕ್ಕಲಿಗರ ಬೆಳ್ಳಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ಜಾರ್ಜ್ ಭಾಷಣ ಮಾಡತೊಡಗಿದರು.

    ಈ ವೇಳೆ ಒಕ್ಕಲಿಗ ಸಮಾಜದ ಯುವಕರು ಮಧ್ಯೆ ಪ್ರವೇಶಿಸಿ, ಇದು ರಾಜಕೀಯ ವೇದಿಕೆಯಲ್ಲ. ರಾಜಕೀಯ ಮಾತಾಡುವುದಾದರೆ ಕೆಳಗಿಳಿಯುವಂತೆ ಒತ್ತಾಯಿಸಿದರು. ಈ ಸಮಯದಲ್ಲಿ ಯುವಕರು ಮತ್ತು ಜಾರ್ಜ್‌ ಮಧ್ಯೆ ಸ್ವಲ್ಪ ವಾಗ್ವಾದ ನಡೆಯಿತು.

    ಇದೇ ವೇಳೆ ರಾಜಕೀಯ ಮಾಡಬೇಡಿ, ನನಗೂ ರಾಜಕೀಯ ಬರುತ್ತೆ ಎಂದು ಸಚಿವರು ಸಿಟ್ಟಾಗಿದ್ದಾರೆ. ಬಳಿಕ ಶ್ರೀಗಳ (Nirmalanandanatha Swamiji) ಪ್ರವೇಶದಿಂದಾಗಿ, ಯುವಕರು ಸುಮ್ಮನಾಗಿದ್ದಾರೆ. ಇದರಿಂದ ವಾತಾವರಣ ತಿಳಿಯಾಗಿದೆ. ಬಳಿಕ ತಮ್ಮ ಮಾತಿಗೆ ಸಭೆಯಲ್ಲೇ ಸಚಿವರು ಕ್ಷಮೆಯಾಚಿಸಿದರು.

  • ಹೆಚ್‌ಡಿಕೆ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು: ಸಚಿವ ಚಲುವರಾಯಸ್ವಾಮಿ

    ಹೆಚ್‌ಡಿಕೆ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು: ಸಚಿವ ಚಲುವರಾಯಸ್ವಾಮಿ

    ಮಂಡ್ಯ: ನಿರ್ಮಲಾನಂದನಾಥ ಶ್ರೀಗಳ (Nirmalanandanatha Swamiji) ಫೋನ್‌ನ್ನು ಕುಮಾರಸ್ವಾಮಿ (H.D.Kumaraswamy) ಟ್ಯಾಪ್ ಮಾಡಿಸಿದ್ರು. ಈಗ ಹೇಗೆ ಹೋಗಿ ಶ್ರೀಗಳ ಬಳಿ ಆಶೀರ್ವಾದ ಕೇಳ್ತಾರೆ ಎಂದು ಸಚಿವ ಚಲುವರಾಯಸ್ವಾಮಿ (Cheluvarayaswamy), ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್‌ನ್ನು ಟ್ಯಾಪ್ ಮಾಡಿದ್ದಾರೆ. ಇದೀಗ ಹೇಗೆ ಅವರ ಬಳಿ ಹೋಗಿ ಕುಮಾರಸ್ವಾಮಿ ಆಶೀರ್ವಾದ ಕೇಳ್ತ ಇದ್ದಾರೆ. ನಾವು ಸಹ ಜೆಎಸ್‌ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ನಾವು ಹೋಗಿದ್ದೀವಿ, ಅವರು ಹೋಗಿದ್ದಾರೆ. ಇದು ಚುನಾವಣೆ ವೇಳೆ ಸಹಜವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಸ್ವಾಮೀಜಿ ಕಾರ್ಯಕ್ರಮಕ್ಕೆ ಹೆಚ್‍ಡಿಕೆ ಹೋಗಿ ಬರೋದ್ರೊಳಗೆ ಆಪರೇಷನ್ ಮುಗಿದು ಹೋಗಿತ್ತು: ಡಿಕೆಶಿ

    ಕುಮಾರಸ್ವಾಮಿ, ಸ್ವಾಮೀಜಿ ಫೋನ್ ಟ್ಯಾಪ್ ಮಾಡಿದ್ದಾರೆ. ಸ್ವಾಮೀಜಿಗಳು ಯಾರಿಗೂ ಪ್ರಚಾರ ಮಾಡೋಕೆ ಆಗಲ್ಲ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯ ಮಠ ಆದ್ರೂ ಸಹ ರಾಜ್ಯದಲ್ಲಿ ಅತ್ಯಂತ ಜಾತ್ಯತೀತ ಮಠವಾಗಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದವರು ಬಾಲಗಂಗಾಧರನಾಥ ಶ್ರೀಗಳು. ಜೆಡಿಎಸ್‌ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರುಕುಳ‌ ಕೊಟ್ಟರು ಎಂದು ಸಹ ಗೊತ್ತಿದೆ. ಈಗ ಚುನಾವಣೆ ಬಂದಿದೆ. ಅದಕ್ಕೆ ಮಠಕ್ಕೆ‌ ಕುಮಾರಸ್ವಾಮಿ ಹೋಗ್ತಾ ಇದ್ದಾರೆ ಅಷ್ಟೇ ಎಂದಿದ್ದಾರೆ.

  • ಭಾನುವಾರ ದುಬೈನಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಉತ್ಸವ

    ಭಾನುವಾರ ದುಬೈನಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಉತ್ಸವ

    ಬೆಂಗಳೂರು: ದುಬೈನಲ್ಲಿ (Dubai) ಭಾನುವಾರ (ಅ.29) ಬೆಂಗಳೂರು ನಿರ್ಮಾತೃ ಕೆಂಪೇಗೌಡ ಉತ್ಸವ (Kempegowda Utsav) ನಡೆಯಲಿದೆ.

    ಯುಎಇ ಒಕ್ಕಲಿಗರ ಸಂಘದಿಂದ (Okkaligas Union UAE) ಕೆಂಪೇಗೌಡ ಉತ್ಸವ ಆಯೋಜನೆ ಮಾಡಲಾಗಿದ್ದು, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಸಾನಿಧ್ಯದಲ್ಲಿ ಕೆಂಪೇಗೌಡ ಉತ್ಸವ ನಡೆಯಲಿದೆ. ಇದನ್ನೂ ಓದಿ: ದಸರಾ ವಜ್ರಮುಷ್ಠಿ ಕಾಳಗದ ವಿಜೇತ ಚನ್ನಪಟ್ಟಣದ ಪ್ರವೀಣ್ ಜೆಟ್ಟಿಗೆ ಸನ್ಮಾನ

    ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾಗವಹಿಸುತ್ತಿದ್ದು, ಸಚಿವರಾದ ಕೆ.ವೆಂಕಟೇಶ್, ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸೇರಿದಂತೆ ಕರ್ನಾಟಕದಿಂದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್

    ಈಗಾಗಲೇ ದುಬೈನಲ್ಲಿರುವ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಅವರನ್ನ ದುಬೈ ಒಕ್ಕಲಿಗ ಸಂಘದ ಸಂಚಾಲಕ ಕಿರಣ್ ಗೌಡ ಸೇರಿದಂತೆ ಸಂಘದ ಸದಸ್ಯರು ಸ್ವಾಗತಿಸಿ ಬರಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸೋದಾಗಿ ಚೈತ್ರಾ ಮಾದರಿಯಲ್ಲೇ ಕೋಟಿ ಕೋಟಿ ವಂಚನೆ- ಆರೋಪಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶರ್ಟ್‌ ಬಟನ್‌ ಹಾಕಿ ಶಿಸ್ತಿನಿಂದ ನಡೆದುಕೊಳ್ಳಿ: ಕಾಂಗ್ರೆಸ್‌ ಶಾಸಕರಿಗೆ ಚುಂಚಶ್ರೀ ಪಾಠ

    ಶರ್ಟ್‌ ಬಟನ್‌ ಹಾಕಿ ಶಿಸ್ತಿನಿಂದ ನಡೆದುಕೊಳ್ಳಿ: ಕಾಂಗ್ರೆಸ್‌ ಶಾಸಕರಿಗೆ ಚುಂಚಶ್ರೀ ಪಾಠ

    ಮಂಡ್ಯ: ಶರ್ಟ್‌ ಬಟನ್ ‌ಹಾಕಿ ಶಿಸ್ತಿನಿಂದ ನಡೆದುಕೊಳ್ಳಿ ಎಂದು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ (Congress) ಶಾಸಕರಿಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಶಿಸ್ತಿನ ಪಾಠ ಹೇಳಿದರು.

    ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಇಂದು ಆದಿಚುಂಚನಗಿರಿ ಮಠಕ್ಕೆ ಮಂಡ್ಯ ಕಾಂಗ್ರೆಸ್ ಶಾಸಕ ಭೇಟಿ ನೀಡಿದರು. ಪೂಜೆ ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಡಿಕೆಶಿ, ಸಿದ್ದು ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ

    ಮಾತುಕತೆ ವೇಳೆ ಮಂಡ್ಯ ಶಾಸಕ ರವಿಕುಮಾರ್ (Ganiga Ravikumar) ಶರ್ಟ್ ಬಟನ್ ಹಾಕಿಲ್ಲದಿರುವುದನ್ನು ಶ್ರೀಗಳು ಗಮನಿಸಿದರು. ಶರ್ಟ್‌ ಬಟನ್‌ ಹಾಕುವಂತೆ ಸೂಚಿಸಿ ಕಾಂಗ್ರೆಸ್‌ ಶಾಸಕನಿಗೆ ಶಿಸ್ತಿನ ಪಾಠ ಹೇಳಿದರು.

    ನೀನಿಗ ಶಾಸಕ, ಹೀಗೆಲ್ಲ ಓಡಾಡಬಾರದು. ಮೊದಲು ಶರ್ಟ್ ಬಟನ್ ಹಾಕಿ ಎಂದು ತಿಳಿಸಿದರು. ಶ್ರೀಗಳ ಶಿಸ್ತಿನ ಪಾಠದ ಬೆನ್ನಲ್ಲೇ ಎಚ್ಚೆತ್ತು ಶಾಸಕ ಗಣಿಗ ರವಿಕುಮಾರ್ ಶರ್ಟ್ ಬಟನ್ ಹಾಕಿಕೊಂಡರು. ಇದನ್ನೂ ಓದಿ: ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಕೆ. ಹೆಚ್ ಮುನಿಯಪ್ಪ

  • ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ

    ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ

    ಬೆಂಗಳೂರು: ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು (H.D. Kumaraswamy) ಭಾನುವಾರ ಆದಿಚುಂಚನಗಿರಿ ಶ್ರೀಗಳು (Nirmalanandanatha Swamiji) ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

    ಆಸ್ಪತ್ರೆಗೆ ತೆರಳಿ ಶ್ರೀಗಳು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದರು. ವಿಶ್ರಾಂತಿ ಪಡೆದು ಶೀಘ್ರ ಗುಣಮುಖರಾಗಿ ಎಂದು ಶ್ರೀಗಳು ಹಾರೈಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ತಾರಾ ಮೆರುಗು

    ನಿರಂತರ ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ತೊಡಗಿಕೊಂಡ ಪರಿಣಾಮ ಕುಮಾರಸ್ವಾಮಿಯವರಿಗೆ ಜ್ವರ ಕಾಣಿಸಿಕೊಂಡಿತ್ತು. ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಅವರು ಶನಿವಾರ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

    ವಿಶ್ರಾಂತಿ ನಂತರ ಚುನಾವಣಾ (Election) ಪ್ರಚಾರದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ (JDS) ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲೇ ಕುಳಿತು ಪ್ರಚಾರದ ರೂಟ್ ಮ್ಯಾಪ್ ಸಿದ್ಧಪಡಿಸಿದ ಹೆಚ್‌ಡಿಕೆ

  • ಉರಿಗೌಡ, ನಂಜೇಗೌಡ ಹೆಸರುಗಳನ್ನು ನಾನು ಸೃಷ್ಟಿ ಮಾಡಿಲ್ಲ : ಅಡ್ಡಂಡ ಕಾರ್ಯಪ್ಪ

    ಉರಿಗೌಡ, ನಂಜೇಗೌಡ ಹೆಸರುಗಳನ್ನು ನಾನು ಸೃಷ್ಟಿ ಮಾಡಿಲ್ಲ : ಅಡ್ಡಂಡ ಕಾರ್ಯಪ್ಪ

    ಹಾಸನ: ಉರಿಗೌಡ, ನಂಜೇಗೌಡ ಆ ಎರಡು ಹೆಸರುಗಳನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಉರಿಗೌಡ, ನಂಜೇಗೌಡ ವಿಚಾರ ಈಗ ಚರ್ಚೆಗೆ ಬಂದಿದ್ದು ನನ್ನ ದುರದೃಷ್ಟ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ (Addanda Cariappa) ಹೇಳಿದರು.

    ಹಾಸನದಲ್ಲಿ ಬೇಲೂರಿನ ಶ್ರೀ ಚನ್ನಕೇಶವನಿಗೆ ಬೇಕಿಲ್ಲ ಕುರಾನ್ ಪಠಣ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1996ರಲ್ಲಿ ರಾಜೇಶ್‌ಗೌಡ ಎನ್ನುವವರು ಮುನ್ನಲೆಗೆ ತಂದಿದ್ದಾರೆ. ಆದರೆ ಈಗ ರಾಜೇಶ್‌ಗೌಡ ಇಲ್ಲ, ಅವರು ನಿಧನ ಹೊಂದಿದ್ದಾರೆ. ಅವರು ಸುವರ್ಣ ಮಂಡ್ಯ ಅನ್ನುವ ಪುಸ್ತಕದಲ್ಲಿ ಇದನ್ನು ದಾಖಲಿಸಿದ್ದಾರೆ. ಟಿಪ್ಪು ಸುಲ್ತಾನ್ ಯಾರು ಕೊಂದರು ಅನ್ನುವುದು ಗೊಂದಲದಲ್ಲಿದೆ‌. ನಾನು ನಾಟಕವನ್ನು ಬರೆಯುವುದರೊಳಗೆ ಅದನ್ನು ಅಧ್ಯಯನ ಮಾಡಿದ್ದೇನೆ ಎಂದು ತಿಳಿಸಿದರು.‌

    ಬ್ರಿಟಿಷರು ಟಿಪ್ಪುವನ್ನು ಹತ್ಯೆ ಮಾಡಿಲ್ಲ ಅಂತಾರೆ, ಇನ್ನೊಂದು ಕಡೆ ಬ್ರಿಟಿಷರು ಟಿಪ್ಪುವನ್ನು ಹತ್ಯೆ ಮಾಡಿದರು ಅಂಥ ಹೇಳಿಕೊಂಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಹಾಕಿರುವ ಶಿಲಾ‌ಸ್ತಂಭಗಳಲ್ಲಾಗಲಿ ಎಲ್ಲಿಯೂ ಇಲ್ಲ. ಶ್ರೀರಂಗಪಟ್ಟಣ ವಾಟರ್‌ಗೇಟ್ ಬಳಿ ಆತ ಬಿದ್ದಿದ್ದ ಅಂತ ಹೇಳಲಾಗಿದೆ.‌ ಅಲ್ಲಿಂದ ಮುನ್ನೂರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿತ್ತು ಎನ್ನುವ ಅನೇಕ ಗೊಂದಲಗಳಿವೆ. ಆ ಪಾತ್ರಗಳು ನನ್ನ ಸೃಷ್ಟಿಯಲ್ಲ, 1996ರಲ್ಲೇ ದಾಖಲಾಗಿದೆ. ಈ ಬಗ್ಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಆ ಪುಸ್ತಕ ಬಿಡುಗಡೆಯೂ ಆಗಿದೆ.‌ ಆ ಪುಸ್ತಕದ ದಾಖಲೆಗಳನ್ನು ತೆಗೆದುಕೊಂಡು, ಲಾವಣಿಗಳಲ್ಲಿ ಒಂದು ಲೈನ್ ಬಂದಿರುವುದನ್ನು ನೋಡಿ ನಾನು ದಾಖಲಿಸಿದ್ದೇನೆ ಎಂದರು.

    ನಿರ್ಮಲಾನಂದನಾಥ ಸ್ವಾಮೀಜಿಯವರು ಈ ನಾಡಿನ ಸಂತ. ಅದರಲ್ಲೂ ನಿರ್ಮಲಾನಂದನಾಥ ಸ್ವಾಮೀಜಿಯವರು ಎಂಟೆಕ್ ಮಾಡಿಕೊಂಡು ವಿಜ್ಞಾನಿ ಆಗಿರುವವರು. ಅವರಿಗೆ ಅವರದ್ದೇ ಆದ ಗೌರವವಿದೆ. ನಾನು ಅವರ ಬಗ್ಗೆ ಅವಹೇಳನಕಾರಿಯಾಗಿ ಅಥವಾ ನೋವಾಗುವ ರೀತಿ ಮಾತನಾಡಿಲ್ಲ. ಆದರೆ ಸಮಾಜದ ಪ್ರಮುಖರು ಇದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯೇ ಅವರಿಗೆ ಕ್ಷಮೆ ಕೇಳಿದ್ದೇನೆ, ಅದು ಮುಗಿದ ಅಧ್ಯಾಯ, ಮತ್ತೆ ಕೆದಕುವುದು ಬೇಡ. ಒಕ್ಕಲಿಗರು ಅಂದರೆ ಅದು ಗಂಗರಸರು, ವೀರರು. ಮಲ್ಲಗೌಡ ಎನ್ನುವ ಪಾತ್ರ, ಶಾಸನ ಇದೆ ಅವರಲ್ಲಿ ಅನೇಕ ಐತಿಹ್ಯಗಳಿವೆ. ನಮ್ಮ ನಾಡಿನಲ್ಲಿ ದೇವೇಗೌಡರು, ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದವರು. ನಾಡಿಗೆ ಬಹಳ ಕೊಡುಗೆಯನ್ನು ಕೊಟ್ಟಿದ್ದಾರೆ. ನಾನು ಆ ಜನಾಂಗವನ್ನು ಎಲ್ಲಿಯೂ ದೂಷಿಸಿಲ್ಲ ಎಂದು ಸ್ಪಷ್ಟಪಡಿಸಿದರು.

    ಪ್ರೊ. ಕೃಷ್ಣೇಗೌಡರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅದು ಅವರ ಅಭಿಪ್ರಾಯ, ರಾಜಕೀಯ ಮಾತನಾಡಬಾರದು ಅಂತ ಎಲ್ಲೂ ಇಲ್ಲ. ರಾಜಕೀಯ ಅದೊಂದು ಪವಿತ್ರವಾದ ಫೀಲ್ಡ್. ರಾಜಕೀಯವನ್ನು ಕೆಲವರು ಗಬ್ಬು ಎಬ್ಬಿಸಿದ್ದಕ್ಕೆ ಅದರ ಬಗ್ಗೆ ಅಹಸ್ಯ ಹುಟ್ಟಿದೆ.‌ ಅದು ಅವರ ಸ್ವಂತ ಅಭಿಪ್ರಾಯ, ಅವರನ್ನು ರಂಗಾಯಣಕ್ಕೆ ಕರೆಸಿದ್ದೇನೆ, ಅವರ ಬಗ್ಗೆ ಗೌರವವಿದೆ ಎಂದರು. ನಾನು 2012 ರಲ್ಲೇ ಟಿಪ್ಪು ಸುಲ್ತಾನ್ ಬಗ್ಗೆ ಪುಸ್ತಕ ಬರೆದು ಟಿಪ್ಪು ಮತ್ತು ಕೊಡವರು ಅಂತ ಪ್ರಕಟ ಮಾಡಿದ್ದೇನೆ. ಇದು ಚುನಾವಣೆ ಹೊತ್ತಿನಲ್ಲಿ ಕಾಕತಾಳೀಯವಾಗಿ ಬಂದುಬಿಡ್ತು. ಅದೇ ಎಫೆಕ್ಟ್ ಆಗ್ತಿರೋದು, ಚುನಾವಣೆ ಬಂದರುವುದರಿಂದ ಎಲ್ಲಾ ಮಾತಗಳು ರಾಜಕೀಯಕರಣಗೊಳ್ಳುತ್ತಿದೆ. ಸ್ವಾಮೀಜಿಯವರ ಹೇಳಿಕೆಗೆ ನನ್ನ ಸಹಮತವಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ತಂದೆ, ಮಕ್ಕಳಿಗೆ ಟಿಕೆಟ್

    ಉರಿಗೌಡ (Urigowda), ನಂಜೇಗೌಡ (Nanjegowda) ಬಗ್ಗೆ ಸಂಶೋಧನೆ ನಡೆಯಬೇಕು ಅಂತ ಸ್ವಾಮೀಜಿ ಹೇಳಿದ್ದಾರೆ, ಅದಕ್ಕೆ ನನ್ನ ಸಹಮತವಿದೆ. ಸಂಶೋಧನೆ ನಡೆಯಲಿ ಅಂತ ನಾನು ಹೇಳುತ್ತಿದ್ದೇನೆ‌. ಉರಿಗೌಡ, ನಂಜೇಗೌಡ ಚಿತ್ರಗಳು ನಾಟಕದ್ದು, ಅದನ್ನು ನಾನು ತಿರಸ್ಕರಿಸುತ್ತೇನೆ.‌ ಆ ಫೋಟೋಗಳನ್ನು ಯಾರು ವ್ಯಾಟ್ಸ‌ಪ್‌ ಅಲ್ಲಿ ಹಾಕಿದ್ದಾರೆ ಅದು ಸುಳ್ಳು. ಅದು ತಮಿಳುನಾಡಿನ ಚಿತ್ರಗಳು. ನಾನು ನನ್ನ ನಾಟಕದ ಅನೇಕ ಫೋಟೋಗಳನ್ನು ಹಾಕಿದ್ದೇನೆ.‌ ಅದರಲ್ಲಿ ನನ್ನ ನಾಟಕದಲ್ಲಿ ಬರುವ ಪಾತ್ರಧಾರಿಗಳ ಫೋಟೋ ಇದೆ.‌ ಟಿಪ್ಪುವನ್ನು ಕೊಂದಿರುವುದು ಉರಿಗೌಡ, ನಂಜೇಗೌಡ ಅಂತ ನನ್ನ ನಾಟಕದಲ್ಲಿ ಬಂದಿದೆ. ಇನ್ನಷ್ಟು ಸಂಶೋಧನೆ ನಡೆಯಲಿ. ನಾನು ಆ ಎರಡು ಪಾತ್ರಗಳನ್ನು ತಂದಿರುವುದಕ್ಕೆ ಅನೇಕ ಕಾರಣಗಳಿವೆ. ಆ ಹೆಸರುಗಳು ನನ್ನ ಸೃಷ್ಟಿ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 12 ಲಕ್ಷ ರೂ. ಹಣ ಜಪ್ತಿ

  • ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ

    ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ

    ಬೆಳಗಾವಿ: ಬಿಜೆಪಿಯ (BJP) ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಮಹನೀಯರ ಜೀವನ ಚರಿತ್ರೆ ಬಗ್ಗೆ ಸುಳ್ಳು ಹೇಳಲು ಹೊರಟಿದೆ. ಕಾಲ್ಪನಿಕ ಕಥೆಗಳ ಮೂಲಕ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

    ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್ (C.N.Ashwath Narayan) ಹಾಗೂ ಶೋಭಾ ಕರಂದ್ಲಾಜೆ (Shobha karandlaje) ಟಿಪ್ಪು ಬಗ್ಗೆ ತಪ್ಪು ಮಾಹಿತಿ ನೀಡಲು ಹೊರಟಿದ್ದಾರೆ. ಟಿಪ್ಪು ಸಾಧನೆ ಬಗ್ಗೆ ಇತಿಹಾಸವೇ ಇದೆ. ಇದರ ಕುರಿತು ಸಾಕಷ್ಟು ಗ್ರಂಥಗಳಿವೆ. ಈಗ ಉರಿಗೌಡ, ನಂಜೇಗೌಡ ಬಗ್ಗೆ ಚಿತ್ರ ಮಾಡುತ್ತಿದ್ದಾರೆ. ಒಕ್ಕಲಿಗರ ಮತ ಸೆಳೆಯಲು ಮತ್ತು ಅವರ ಭಾವನೆಗಳಿಗೆ ಧಕ್ಕೆ ತರಲು ಬಿಜೆಪಿಯವರು ಮುಂದಾಗಿದ್ದಾರೆ. ನಿರ್ಮಲಾನಂದ ಸ್ವಾಮೀಜಿ (Nirmalanandanatha Swamiji) ಇದರ ಬಗ್ಗೆ ಹೋರಾಟ ಮಾಡಬೇಕು. ಸಾಹಿತಿಗಳು, ಹೋರಾಟಗಾರರು ಹಾಗೂ ಎಲ್ಲಾ ಸಮಾಜಗಳ ಮಠಾಧೀಶರು ಇದಕ್ಕೆ ಕೈಜೋಡಿಸಬೇಕು ಎಂದರು. ಇದನ್ನೂ ಓದಿ: ಶೋಭಾ ಡೆವಲಪರ್ಸ್ ಕಚೇರಿಗೆ ಐಟಿ ಶಾಕ್

    ಹೆಸರುಗಳನ್ನು ಬದಲಾವಣೆ ಮಾಡಲು ಸಾಧ್ಯವೇ? ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಇದನ್ನು ಖಂಡಿಸಲು ನಿರ್ಮಲಾನಂದ ಸ್ವಾಮೀಜಿ ಸಭೆ ನಡೆಸಬೇಕು. ಯಾವ ನಿರ್ದೇಶಕ ಬೇಕಾದರೂ ಬರಲಿ, ಅವರನ್ನು ಎದುರಿಸಲು, ಉತ್ತರ ಕೊಡಲು ನಾವು ಸಿದ್ಧರಾಗಿದ್ದೇವೆ. ಒಕ್ಕಲಿಗ ಸಮಾಜಕ್ಕೆ ಅಗೌರವ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದಕ್ಕೆ ನಾವು ಹೋರಾಟ ಮಾಡುತ್ತೇವೆ, ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಖಲಿಸ್ತಾನಿ ನಾಯಕರು ಮಾನವ ಬಾಂಬರ್‌ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ

    ಬಿಜೆಪಿ ಕಾಲ್ಪನಿಕ ಕಥೆ ಮೂಲಕ ತಪ್ಪು ಸಂದೇಶ ರವಾನಿಸುತ್ತಿದೆ. ಯಾವುದೋ ಒಂದು ಪುಸ್ತಕದಲ್ಲಿ ಈ ಬಗ್ಗೆ ಸಣ್ಣ ಉಲ್ಲೇಖ ಇದೆ. ಸಂಶೋಧನೆ ಮೂಲಕ ಇತಿಹಾಸ ಬರೆದಿರುತ್ತಾರೆ, ಸಂಶೋಧನೆ ಮೂಲಕವೇ ಇತಿಹಾಸ ಇರಬೇಕು. ಉರಿಗೌಡ-ನಂಜೇಗೌಡ ಹೆಸರನ್ನು ಇಷ್ಟು ದಿನ ಎಲ್ಲಿ ಕೇಳಿದ್ದೀರಿ? ಬಿಜೆಪಿ ನಾಯಕರ ಮೇಲೆ ಮೊದಲು ಕೇಸ್ ಹಾಕಬೇಕು. ಯಾರು ಪ್ರಚೋದನೆ ಮಾಡುತ್ತಿದ್ದಾರೆ ಅವರ ಮೇಲೆ ಕೇಸ್ ಹಾಕಬೇಕು. ಪೇ ಸಿಎಂ ಅಭಿಯಾನ ಆದಾಗ ನನ್ನ ಮತ್ತು ಸಿದ್ದರಾಮಯ್ಯ (Siddaramaiah) ಮೇಲೆ ಕೇಸ್ ಹಾಕಿದ್ದರು. ಈಗೇಕೆ ಸೈಲೆಂಟ್ ಆಗಿದ್ದೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಬಂತು ಮೊದಲ ಎಫ್‌ಡಿಐ – ಶಾಪಿಂಗ್‌ ಮಾಲ್‌ ನಿರ್ಮಾಣಕ್ಕೆ ಭೂಮಿ ಪೂಜೆ

    ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಶೋಭಾ ಕರಂದ್ಲಾಜೆ, ಅಶ್ವಥ್ ನಾರಾಯಣ್ ಮತ್ತು ಸಿಟಿ ರವಿಯವರು (C.T.Ravi) ಒಕ್ಕಲಿಗ ಹಾಗೂ ಹಿಂದೂ ವಿರೋಧಿಗಳು. ನಿರ್ಮಲಾನಂದ ಸ್ವಾಮೀಜಿ ಯಾವ ಡೈರೆಕ್ಟರನ್ನು ಕರೆದು ಮಾತನಾಡಬೇಡಿ. ಕರೆದರೆ ಒಕ್ಕಲಿಗ ಸಮಾಜ ತಲೆ ತಗ್ಗಿಸಿದಂತೆ ಆಗುತ್ತದೆ. ನಾನೂ ಕೂಡ ಸ್ವಾಮೀಜಿಗೆ ಪತ್ರಬರೆದು ಮನವಿ ಮಾಡುತ್ತೇನೆ. ಈ ಹೋರಾಟದ ನಾಯಕತ್ವ ನಿರ್ಮಲಾನಂದ ಸ್ವಾಮೀಜಿಯವರು ವಹಿಸಿಕೊಳ್ಳಬೇಕು. ಎಲ್ಲಾ ಸಮಾಜದ ಸ್ವಾಮೀಜಿಗಳು ಇದಕ್ಕೆ ಕೈಜೋಡಿಸಬೇಕು. ಒಕ್ಕಲಿಗ ಸ್ವಾಮೀಜಿ ಮೊದಲು ಹೋರಾಟ ಮಾಡಲಿ. ಬಳಿಕ ಪಕ್ಷದ ಕಡೆಯಿಂದ ಹೋರಾಟ ಮಾಡಲು ಯೋಚಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಫೋಟೋ ಸ್ಟೇಟಸ್ ಹಾಕಿದ್ದ ಯವಕನಿಗೆ ಹಲ್ಲೆ – ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್‌

    ನಿರ್ಮಲಾನಂದ ಸ್ವಾಮೀಜಿಯವರನ್ನು ಮುನಿರತ್ನ (Munirathna) ಭೇಟಿ ಮಾಡಿ ಮಾತುಕತೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿ ಹಾಗೂ ಮುನಿರತ್ನ ಸಭೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಈ ಚಿತ್ರ ಆಗಬಾರದೆಂದು ಸ್ವಾಮೀಜಿಗೆ ನಾನು ಮನವಿ ಮಾಡುತ್ತೇನೆ ಎಂದರು. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣಕ್ಕೆ ಬ್ರೇಕ್‌ – ಸಿನಿಮಾ ಮಾಡಲ್ಲ ಎಂದ ಮುನಿರತ್ನ

    ಬೆಳಗಾವಿಯಲ್ಲಿ (Belagavi) ರಾಹುಲ್ ಗಾಂಧಿ (Rahul Gandhi) ಸಮಾವೇಶದ ಕುರಿತು ಮಾತನಾಡಿದ ಅವರು, ಭಾರತ ಜೋಡೋ ಯಾತ್ರೆ ಬಳಿಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಯುವ ಕ್ರಾಂತಿ ಸಮಾವೇಶ ನಡೆಸುತ್ತಿದ್ದಾರೆ. ಇಂದು ಕಾಂಗ್ರೆಸ್ಸಿಗೆ (Congress) ಐತಿಹಾಸಿಕ ಕ್ಷಣ. ದೇಶ ಹಾಗೂ ರಾಜ್ಯದ ಬದಲಾವಣೆಗೆ ಯುವಕರು ಎಚ್ಚರಿಕೆ ವಹಿಸಬೇಕು. ಮಹಿಳೆಯರು, ಯುವಕರು ಒಗ್ಗಟ್ಟಾದಾಗ ಬದಲಾವಣೆ ಸಾಧ್ಯವಾಗುತ್ತದೆ. ಮಹಿಳೆಯರು, ಯುವಕರಿಗೆ ಜಾಗೃತಿಯ ಅಗತ್ಯವಿದೆ. ಅದಕ್ಕಾಗಿ ರಾಹುಲ್ ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಂದು ಕಿತ್ತೂರು ಕರ್ನಾಟಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಹವಾ

    ಪ್ರಿಯಾಂಕಾ ಗಾಂಧಿ (Priyanka Gandhi Vadra) ಬೆಂಗಳೂರಿಗೆ (Bengaluru) ಬಂದು ಗೃಹಲಕ್ಷ್ಮಿ ಯೋಜನೆ ಘೋಷಿಸಿದರು. ಅದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಸರ್ಕಾರ ಕೂಡ ಬಿಪಿಎಲ್ ಕಾರ್ಡುದಾರರಿಗೆ ನೀಡುವ ಯೋಜನೆಗೆ ಮುಂದಾಗಿದೆ. ನಮ್ಮ ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ, ಮಾಡಲಿ. ಚುನಾವಣೆಯಲ್ಲಿ 500ಕ್ಕೂ ಅಧಿಕ ಭರವಸೆಯನ್ನು ಪ್ರಣಾಳಿಕೆಯಲ್ಲಿ ಹಾಕಿದ್ದಾರೆ. ನಾಲ್ಕು ಬಜೆಟ್ ಮಂಡಿಸುವ ಅವಕಾಶ ಇದ್ದರೂ ಬಹುತೇಕ ಯೋಜನೆ ಜಾರಿಯಾಗಲಿಲ್ಲ. ಕಾಂಗ್ರೆಸ್ ಯೋಜನೆ ನೋಡಿ ಬಿಜೆಪಿ ಸರ್ಕಾರ ನಮ್ಮನ್ನು ಫಾಲೋ ಮಾಡುತ್ತಿದೆ. ಗೃಹಲಕ್ಷ್ಮಿಗೆ ಪರ್ಯಾಯವಾಗಿ ಸ್ತ್ರಿಶಕ್ತಿ ಯೋಜನೆ, ಯುವಶಕ್ತಿ ಯೋಜನೆಗೆ ಬಿಜೆಪಿ ಮುಂದಾಗಿದೆ ಎಂದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಆಪ್ತ ನಾಗೇಶ್ ಮನ್ನೋಳ್ಕರ್‌ಗೆ ಮತ್ತೊಂದು ಶಾಕ್

    ನಾವು ಜನಪರ ಯೋಜನೆ ಬಗ್ಗೆ ವಿಚಾರ ಮಾಡುತ್ತಿದ್ದೇವೆ. ಬಿಜೆಪಿ ಭ್ರಷ್ಟಾಚಾರದ (Corruption) ಬಗ್ಗೆ ಚಿಂತೆ ಮಾಡುತ್ತದೆ. ಬಿಜೆಪಿ ದೇಶದಲ್ಲೇ ಅತಿ ಭ್ರಷ್ಟ ಸರ್ಕಾರವಾಗಿದೆ. ಮಂತ್ರಿಗಳು, ಶಾಸಕರು ನೇರವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಆಗಿದ್ದು, ಯುವಕರು ರೋಸಿ ಹೋಗಿದ್ದಾರೆ. ಅಧಿಕಾರ ಇದ್ದಾಗ ಮಾಡದ ಬಿಜೆಪಿಯವರು ಈಗ ಪ್ರಣಾಳಿಕೆಯಲ್ಲಿ ಹಾಕುತ್ತಿದ್ದಾರೆ. ಯುವಕರು, ಮಹಿಳೆಯರನ್ನು ಸೆಳೆಯಲು ಭರವಸೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು. ಇದೇ ವೇಳೆ ಕನಕಪುರಕ್ಕೆ (Kanakapura) ಬರುತ್ತೇನೆ ಎಂಬ ರಮೇಶ್ ಜಾರಕಿಹೊಳಿ (Ramesh Jarakiholi) ವಿಚಾರಕ್ಕೆ ಐ ವಿಶ್ ಹಿಮ್ ಎಂದು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – ರೇವಣ್ಣ ಸವಾಲು

  • ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣಕ್ಕೆ ಬ್ರೇಕ್‌ – ಸಿನಿಮಾ ಮಾಡಲ್ಲ ಎಂದ ಮುನಿರತ್ನ

    ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣಕ್ಕೆ ಬ್ರೇಕ್‌ – ಸಿನಿಮಾ ಮಾಡಲ್ಲ ಎಂದ ಮುನಿರತ್ನ

    ವಿವಾದ ಹುಟ್ಟುಹಾಕಿದ್ದ ಉರಿಗೌಡ-ನಂಜೇಗೌಡ (Urigowda-Nanjegowda) ಚಿತ್ರ ನಿರ್ಮಾಣವನ್ನು ಸಚಿವ ಮುನಿರತ್ನ (Munirathna) ಕೈಬಿಟ್ಟಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಭೇಟಿ ಬಳಿಕ ಚಿತ್ರಕ್ಕೆ ಬ್ರೇಕ್‌ ಬಿದ್ದಿದೆ.

    ಮಂಡ್ಯದ ಕೊಮ್ಮೇರನಹಳ್ಳಿಯಲ್ಲಿ ಸಚಿವ ಮುನಿರತ್ನ ಮಾತನಾಡಿ, ವೃಷಭ ಪ್ರೊಡಕ್ಷನ್‌ನಲ್ಲಿ ಮೇ 14ರಂದು ಚಿತ್ರೀಕರಣದ ಮುಹೂರ್ತ ಮಾಡಬೇಕು ಅಂದುಕೊಂಡಿದ್ದೆ. ಬಹಳ ದೊಡ್ಡ ಸಿನಿಮಾ ಮಾಡಬೇಕು ಅಂದುಕೊಂಡಿದ್ದೆ. ಮೈಸೂರು ಸಂಸ್ಥಾನ ಹಾಗೂ ಟಿಪ್ಪು ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಚರ್ಚೆಯಾಗಿತ್ತು. ಕುಮಾರಸ್ವಾಮಿ ಅವರು ಮುನಿರತ್ನನಿಗೆ ಅಶ್ವಥ್‌ ನಾರಾಯಣ್ ಸಿನಿಮಾ ಮಾಡೋಕೆ ಹೇಳಿರಬೇಕು ಎಂದಿದ್ದರು. ಅಲ್ಲಿಯವರೆಗೆ ನನಗೆ ಸಿನಿಮಾ ಮಾಡುವ ಆಲೋಚನೆ ಇರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಸಿನಿಮಾ : ಇಂದು ಮಹತ್ವದ ನಿರ್ಧಾರ

    ಉರಿಗೌಡ-ನಂಜೇಗೌಡ ವಿಚಾರದಲ್ಲಿ ಒಂದಷ್ಟು ದಾಖಲೆ ಸಿಗುತ್ತಿವೆ, ಒಂದಷ್ಟು ಸಿಗುತ್ತಿಲ್ಲ. ನನಗ ಚಿತ್ರ ಮಾಡಬೇಕು ಅನ್ನಿಸಿತು. ಸ್ವಾಮೀಜಿ ಅವರ ಜೊತೆ ಚರ್ಚೆ ಮಾಡಿದೆ. ಆಗ ನನಗೆ ಅನ್ನಿಸಿತು, ಯಾರಿಗೂ ಮನಸ್ಸು ನೋಯಿಸಿ ಸಿನಿಮಾ ಮಾಡಬಾರದು. ಸಿನಿಮಾ ಮಾಡಲು ಕಥೆಗಳು ತುಂಬಾ ಸಿಗುತ್ತದೆ. ಸ್ವಾಮೀಜಿ ಅವರಿಗೆ ಹೇಳಿದ್ದೇನೆ. ಯಾರ ಮನಸ್ಸು ನೋಯಿಸುವ ಉದ್ದೇಶ ನನ್ನದಲ್ಲ. ನಾನು ಈ‌ ಸಿನಿಮಾವನ್ನು ಇಲ್ಲಿಗೆ ಕೈ ಬಿಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ಬಿಜೆಪಿಯವನು ಅಂತಾ ನಾನು ಈ ಸಿನಿಮಾ ಮಾಡಲು ಹೋಗಲ್ಲ. ಶ್ರೀಗಳು ನೈಜತೆ ಇದ್ದರೆ ಅದರ ಬಗ್ಗೆ ಯೋಜನೆ ಮಾಡಿ ಎಂದರು. ಗೊಂದಲ ಇರುವಾಗ ಯಾವುದು ಸೂಕ್ತ ಎಂದು ಕೇಳಿದರು. ಶ್ರೀಗಳ ಮಾತಿನಂತೆ ನಾನು ಸಿನಿಮಾ ಮಾಡಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉರಿಗೌಡ- ನಂಜೇಗೌಡ ಚಿತ್ರ: ಚುಂಚಶ್ರೀ ಭೇಟಿಯಾಗಲಿರುವ ಮುನಿರತ್ನ

    ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಉರಿಗೌಡ-ನಂಜೇಗೌಡ ವಿಚಾರ ಭಾರಿ ಸದ್ದು ಮಾಡುತ್ತಿದೆ. ಟಿಪ್ಪು ಸುಲ್ತಾನ್‌ (Tipu Sultan) ಕೊಂದವರು ಉರಿಗೌಡ-ನಂಜೇಗೌಡ ಎಂದು ಬಿಜೆಪಿ ನಾಯಕರು ಬಿಂಬಿಸಿದ್ದರು. ಚುನಾವಣೆ ಹೊತ್ತಿನಲ್ಲಿ ಒಕ್ಕಲಿಗ ಸಮುದಾಯದ ಓಲೈಕೆಗಾಗಿ ಬಿಜೆಪಿ ವೋಟ್‌ಬ್ಯಾಂಕ್‌ ರಾಜಕೀಯ ಮಾಡುತ್ತಿದೆ ಎಂದು ಪ್ರತಿಪಕ್ಷಗಳ ನಾಯಕರು ಟೀಕಾಪ್ರಹಾರ ನಡೆಸಿದ್ದರು. ಇದರ ಬೆನ್ನಲ್ಲೇ ಈ ಇಬ್ಬರೂ ನಾಯಕರ ಬಗ್ಗೆ ಸಿನಿಮಾ ಮಾಡುವುದಾಗಿ ಸಚಿವ ಮುನಿರತ್ನ ಘೋಷಿಸಿದ್ದರು.