Tag: Nita Ambani

  • ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿಗೆ ‘ಸಿಟಿಜನ್ ಆಫ್ ಮುಂಬೈ’ ಪ್ರಶಸ್ತಿ

    ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿಗೆ ‘ಸಿಟಿಜನ್ ಆಫ್ ಮುಂಬೈ’ ಪ್ರಶಸ್ತಿ

    ಮುಂಬೈ: ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಅವರಿಗೆ ರೋಟರಿ ಕ್ಲಬ್ ಆಫ್ ಬಾಂಬೆ (Rotary Club Bombay) ಪ್ರತಿಷ್ಠಿತ ‘ಸಿಟಿಜನ್ ಆಫ್ ಮುಂಬೈ 2023-24’ (Citizen of Mumbai 2023-24) ಪ್ರಶಸ್ತಿ ನೀಡಿ ಗೌರವಿಸಿದೆ.

    ರಿಲಯನ್ಸ್ ಫೌಂಡೇಶನ್ (Reliance Foundation) ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿಯನ್ನು ಹಂಚಿಕೊಂಡಿದೆ. ಆರೋಗ್ಯ, ಶಿಕ್ಷಣ, ಕ್ರೀಡೆ, ಕಲೆ, ಸಂಸ್ಕೃತಿ ಕ್ಷೇತ್ರಗಳಲ್ಲಿ ಪರಿವರ್ತನಾಶೀಲ ಸಂಸ್ಥೆಗಳನ್ನು ರಚಿಸಿ, ನಿರಂತರ ಕೊಡುಗೆಗಳನ್ನು ನೀಡಿದ ನೀತಾ ಅಂಬಾನಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

    ರೋಟರಿಯೊಂದಿಗೆ ನನ್ನ ಕುಟುಂಬದ ಒಡನಾಟ ದಶಕಗಳಷ್ಟು ಹಳೆಯದು. 1969ರಲ್ಲಿ ನನ್ನ ಮಾವ ಧೀರೂಭಾಯಿ ಅಂಬಾನಿ ರೋಟರಿಯನ್ ಆಗಿದ್ದರು. ನಂತರ 2003ರಲ್ಲಿ ಮುಖೇಶ್ ಆದರು. ರೋಟರಿಯನ್ ಆಗಿ ಇದು ನನ್ನ 25ನೇ ವರ್ಷ. ನಾನು ಈ ಪ್ರಯಾಣವನ್ನು ವರ್ಷಗಳಿಂದ ಮುಂದುವರಿಸಿಕೊಂಡು ಬಂದಿದ್ದೇನೆ ಎಂದು ನೀತಾ ಅಂಬಾನಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: Asian Games 2023- ಮಹಿಳಾ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ

    ಸಿಟಿಜನ್ ಆಫ್ ಮುಂಬೈ ಪ್ರಶಸ್ತಿ ರೋಟರಿ ಕ್ಲಬ್ ಆಫ್ ಬಾಂಬೆ ನೀಡುವ ಪ್ರತಿಷ್ಠಿತ ಗೌರವ. ಇದನ್ನು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹಕೊಡುಗೆ ನೀಡಿದವರಿಗೆ ಪ್ರತಿ ವರ್ಷ ನೀಡಲಾಗುತ್ತದೆ. ಇದನ್ನೂ ಓದಿ: ಕಾವೇರಿಗಾಗಿ ಶುಕ್ರವಾರ ಕರ್ನಾಟಕ ಬಂದ್- 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಕ್ಕಳಿಗಾಗಿ ನೀತಾ ಅಂಬಾನಿ ತ್ಯಾಗ – ರಿಲಯನ್ಸ್‌ ಬೋರ್ಡ್‌ ಏರಿದ ಇಶಾ, ಆಕಾಶ್‌, ಅನಂತ್‌ ಅಂಬಾನಿ

    ಮಕ್ಕಳಿಗಾಗಿ ನೀತಾ ಅಂಬಾನಿ ತ್ಯಾಗ – ರಿಲಯನ್ಸ್‌ ಬೋರ್ಡ್‌ ಏರಿದ ಇಶಾ, ಆಕಾಶ್‌, ಅನಂತ್‌ ಅಂಬಾನಿ

    ಮುಂಬೈ: ಮಕ್ಕಳಿಗಾಗಿ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (Reliance Industries Limited) ಕಂಪನಿಯ ನಿರ್ದೇಶಕ ಸ್ಥಾನದಿಂದ ನೀತಾ ಅಂಬಾನಿ (Nita Ambani) ಕೆಳಗೆ ಇಳಿದಿದ್ದಾರೆ.

    ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಅವರ ಮಕ್ಕಳಾದ ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ (Isha Ambani, Akash Ambani, Anant Ambani) ಅವರನ್ನು ಕಂಪನಿಯ ಕಾರ್ಯ ನಿರ್ವಾಹಕಯೇತರ (ನಾನ್ ಎಕ್ಸಿಕ್ಯೂಟಿವ್) ನಿರ್ದೇಶಕರನ್ನಾಗಿ ನೇಮಿಸಲು ಸೋಮವಾರ ನಡೆದ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನಿರ್ದೇಶಕರ ಮಂಡಳಿ ಶಿಫಾರಸು ಮಾಡಿದೆ.

    ಮಾನವ ಸಂಪನ್ಮೂಲ, ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಯ ಶಿಫಾರಸುಗಳನ್ನು ಪರಿಗಣಿಸಿರುವ ಮಂಡಳಿ, ಈ ಮೂವರ ನೇಮಕಾತಿಗಾಗಿ ಅನುಮೋದನೆ ನೀಡಲು ಶಿಫಾರಸು ಮುಂದಿಟ್ಟಿದೆ. ಶೇರ್ ಹೋಲ್ಡರ್‌ಗಳ ಒಪ್ಪಿಗೆ ಬಳಿಕ ಅವರು ಅಧಿಕಾರ ಸ್ವೀಕರಿಸಿದ ದಿನಾಂಕದಿಂದ ನೇಮಕಾತಿ ಜಾರಿಗೆ ಬರಲಿದೆ.

    ಭಾರತದ ಮೇಲೆ ರಿಲಯನ್ಸ್ ಫೌಂಡೇಷನ್ ಮತ್ತಷ್ಟು ದೊಡ್ಡ ಮಟ್ಟದಲ್ಲಿ ಬೆಳೆಸಲು ಹಾಗೂ ಮಾರ್ಗದರ್ಶನ ನೀಡಲು ತಮ್ಮ ಉತ್ಸಾಹ ಹಾಗೂ ಸಮಯವನ್ನು ಮೀಸಲಿಡಲು ಬಯಸಿರುವ ನೀತಾ ಅಂಬಾನಿ ಅವರ ನಿರ್ಧಾರವನ್ನು ಗೌರವಿಸಿರುವ ನಿರ್ದೇಶಕರ ಮಂಡಳಿಯು ಅವರ ರಾಜೀನಾಮೆಯನ್ನು ಸ್ವೀಕರಿಸಿದೆ.

    ಮುಕೇಶ್‌ ಅಂಬಾನಿ ಮುಖ್ಯಸ್ಥರಾಗಿರುವ ರಿಲಯನ್ಸ್‌ ಇಂಡಸ್ಟ್ರೀಸ್‌ ಕಂಪನಿ ಬೋರ್ಡ್‌ನಲ್ಲಿ ನೀತಾ ಅಂಬಾನಿ ನಿರ್ದೇಶಕರಾಗಿದ್ದರು. ಸದ್ಯ ನೀತಾ ಅಂಬಾನಿ ರಿಲಯನ್ಸ್‌ ಫೌಂಡೇಶನ್‌ ಮುಖ್ಯಸ್ಥರಾಗಿದ್ದು, ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

    ರಿಲಯನ್ಸ್ ಫೌಂಡೇಷನ್ ನಿರ್ದೇಶಕರಾಗಿ ನೀತಾ ಅಂಬಾನಿ ಅವರು ಆರ್‌ಐಎಲ್‌ನ ಎಲ್ಲಾ ಮಂಡಳಿ ಸಭೆಗಳಲ್ಲಿ ಖಾಯಂ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಇದರಿಂದ ಕಂಪನಿಯು ಅವರ ಸಲಹೆಗಳ ಪ್ರಯೋಜನ ಪಡೆಯುವುದನ್ನು ಮುಂದುವರಿಸಲು ನೆರವಾಗಲಿದೆ ಎಂದು ರಿಲಯನ್ಸ್ ಹೇಳಿಕೆ ತಿಳಿಸಿದೆ.  ಇದನ್ನೂ ಓದಿ: ವಿಶ್ವದಲ್ಲೇ ಮೊದಲ ಬಾರಿಗೆ ಮೊಬೈಲ್ ಪ್ರೀಪೇಯ್ಡ್ ಪ್ಲ್ಯಾನ್‌ ಜೊತೆಗೆ ನೆಟ್‌ಫ್ಲಿಕ್ಸ್‌ ಸಬ್‌ಸ್ಕ್ರಿಪ್ಷನ್ ಪರಿಚಯಿಸುತ್ತಿದೆ Reliance Jio

     

    ರೀಟೇಲ್, ಡಿಜಿಟಲ್ ಸೇವೆಗಳು ಮತ್ತು ಸರಕು ವ್ಯವಹಾರಗಳು ಸೇರಿದಂತೆ ಆರ್‌ಐಎಲ್‌ನ ಪ್ರಮುಖ ವ್ಯವಹಾರಗಳನ್ನು ಮುನ್ನಡೆಸುವ ಹಾಗೂ ನಿರ್ವಹಿಸುವ ಕಾರ್ಯದಲ್ಲಿ ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರು ಕಳೆದ ಕೆಲವು ವರ್ಷಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆರ್‌ಐಎಲ್‌ನ ಪ್ರಮುಖ ಅಂಗ ಸಂಸ್ಥೆಗಳ ಮಂಡಳಿಗಳಲ್ಲಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಆರ್‌ಐಎಲ್ ಮಂಡಳಿಗೆ ಅವರ ನೇಮಕಾತಿಯು, ಅವರ ದೃಷ್ಟಿಕೋನ ಮತ್ತು ಹೊಸ ಆಲೋಚನೆಗಳಿಂದ ಕಂಪೆನಿಯ ಉನ್ನತಿಗೆ ನೆರವಾಗಲಿದೆ ಎಂದು ಮಂಡಳಿ ಅಭಿಪ್ರಾಯಪಟ್ಟಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ ಆರಂಭ

    ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ ಆರಂಭ

    ಮುಂಬೈ: ಭಾರತ ಮತ್ತು ವಿದೇಶಗಳ ಕಲಾವಿದರು, ಧಾರ್ಮಿಕ ಮುಖಂಡರು, ಕ್ರೀಡಾಳುಗಳು ಮತ್ತು ಉದ್ಯಮಿಗಳ ಜತೆಗೆ ದೇಶದ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ನೀತಾ ಮುಕೇಶ್ ಅಂಬಾನಿ (Mukesh Ambani) ಸಾಂಸ್ಕೃತಿಕ ಕೇಂದ್ರವನ್ನು (Nita Mukesh Ambani Cultural Centre) ಶುಕ್ರವಾರ ಉದ್ಘಾಟಿಸಲಾಯಿತು. ರಿಲಯನ್ಸ್ ಫೌಂಡೇಷನ್ (Reliance Industries) ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಮತ್ತು ಅವರ ಮಗಳು ಇಶಾ ಅಂಬಾನಿ ಆತಿಥ್ಯ ವಹಿಸಿದ್ದರು.

    ಉದ್ಘಾಟನಾ ಸಮಾರಂಭದಲ್ಲಿ, ನೀತಾ ಅಂಬಾನಿ ಮಾತನಾಡಿ, ಸಾಂಸ್ಕೃತಿಕ ಕೇಂದ್ರವು ಪಡೆಯುತ್ತಿರುವ ಬೆಂಬಲದಿಂದ ನಾನು ಸಂತುಷ್ಟಗೊಂಡಿದ್ದೇನೆ. ಇದು ವಿಶ್ವದ ಅತ್ಯುತ್ತಮ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದೆ. ಎಲ್ಲ ಕಲೆ ಮತ್ತು ಕಲಾವಿದರಿಗೆ ಇಲ್ಲಿ ಸ್ವಾಗತ. ಸಣ್ಣ ಪಟ್ಟಣಗಳು ​​ಮತ್ತು ದೂರದ ಪ್ರದೇಶಗಳ ಯುವಕರು ಇಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಲು ಅವಕಾಶ ಪಡೆಯುತ್ತಾರೆ. ವಿಶ್ವದ ಅತ್ಯುತ್ತಮ ಪ್ರದರ್ಶನಗಳು ಇಲ್ಲಿ ನಡೆಯಲಿವೆ ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಬಣ್ಣದ ಉಡುಗೆಯಲ್ಲಿ ಮಿರಿಮಿರಿ ಮಿಂಚಿದ ರಶ್ಮಿಕಾ, ತಮನ್ನಾ – ಇಲ್ಲಿದೆ ಕಣ್ಮನ ಸೆಳೆಯುವ Photos

    ಮುಕೇಶ್ ಅಂಬಾನಿ ಮಾತನಾಡಿ, ಮುಂಬೈ ಜೊತೆಗೆ, ಇದು ದೇಶದ ದೊಡ್ಡ ಕಲಾ ಕೇಂದ್ರವಾಗಿ ಹೊರಹೊಮ್ಮುತ್ತದೆ. ಇಲ್ಲಿ ದೊಡ್ಡ ಪ್ರದರ್ಶನಗಳನ್ನು ನಡೆಸಬಹುದು. ಭಾರತೀಯರು ತಮ್ಮ ಎಲ್ಲ ಕಲಾತ್ಮಕತೆಯೊಂದಿಗೆ ಮೂಲ ಪ್ರದರ್ಶನಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

    ಸಾಂಸ್ಕೃತಿಕ ಕೇಂದ್ರದಲ್ಲಿ ಅತಿಥಿಗಳಿಗೆ ಆತಿಥ್ಯ ನೀಡಲಾಯಿತು. ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ, ಲಾನ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಅಥ್ಲೀಟ್ ದೀಪಾ ಮಲಿಕ್ ಸಹ ಕಲಾವಿದರನ್ನು ಪ್ರೋತ್ಸಾಹಿಸಲು ಕೇಂದ್ರದಲ್ಲಿ ಉಪಸ್ಥಿತರಿದ್ದರು.

    ಸೂಪರ್ ಸ್ಟಾರ್ ರಜನಿಕಾಂತ್, ಅಮೀರ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕ್ ಚೋಪ್ರಾ, ವರುಣ್ ಧವನ್, ಸೋನಮ್ ಕಪೂರ್, ಅನುಪಮ್ ಖೇರ್, ಜಾವೇದ್ ಅಖ್ತರ್, ಶಬಾನಾ ಅಜ್ಮಿ, ಸುನೀಲ್ ಶೆಟ್ಟಿ, ಶಾಹಿದ್ ಕಪೂರ್, ವಿದ್ಯಾ ಬಾಲನ್, ಆಲಿಯಾ ಭಟ್, ದಿಯಾ ಮಿರ್ಜಾ, ಶ್ರದ್ಧಾ ಕಪೂರ್, ರಾಜು ಹಿರಾನಿ, ತುಷಾರ್ ಕಪೂರ್ ಹೀಗೆ ಇಡೀ ಸಂಜೆ ಬಾಲಿವುಡ್ ತಾರೆಯರಿಂದ ತುಂಬಿತ್ತು. ಕೈಲಾಶ್ ಖೇರ್ ಮತ್ತು ಮೇಮ್ ಖಾನ್ ಸಹ ಉಪಸ್ಥಿತರಿದ್ದರು. ಇದನ್ನೂ ಓದಿ: ಮೊದಲ ದಿನವೇ 38 ಕೋಟಿ ಬಾಚಿದ ‘ದಸರಾ’ ಸಿನಿಮಾ

    ಎಮ್ಮಾ ಚೇಂಬರ್ಲೇನ್, ಗಿಗಿ ಹಡಿದ್ ಅವರಂತಹ ಅಂತಾರಾಷ್ಟ್ರೀಯ ಖ್ಯಾತಿಯ ಮಾಡೆಲ್‌ಗಳು ಈ ಸಂದರ್ಭ ರಂಗೇರುವಂತೆ ಮಾಡಿದರು. ದೇವೇಂದ್ರ ಫಡ್ನವಿಸ್, ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ, ಸ್ಮೃತಿ ಇರಾನಿ ಮುಂತಾದ ರಾಜಕಾರಣಿಗಳೂ ಕಾರ್ಯಕ್ರಮದಲ್ಲಿದ್ದರು.

    ಸದ್ಗುರು ಜಗ್ಗಿ ವಾಸುದೇವ್, ಸ್ವಾಮಿ ನಾರಾಯಣ ಪಂಥದ ರಾಧಾನಾಥ್ ಸ್ವಾಮಿ, ರಮೇಶ್ ಭಾಯಿ ಓಜಾ, ಸ್ವಾಮಿ ಗೌರ್ ಗೋಪಾಲ್ ದಾಸ್ ಅವರಂತಹ ಆಧ್ಯಾತ್ಮಿಕ ಗುರುಗಳ ಉಪಸ್ಥಿತಿಯು ಪ್ರೇಕ್ಷಕರನ್ನು ಪುಳಕಗೊಳಿಸಿತು. ಇದನ್ನೂ ಓದಿ: ಟಾಲಿವುಡ್ ಅಂಗಳಕ್ಕೆ ‘ಮಫ್ತಿ’ ಡೈರೆಕ್ಟರ್ ಕಾಲಿಡುವುದು ಪಕ್ಕಾ

  • 40 ವರ್ಷಗಳ ನಂತರ ಭಾರತದಲ್ಲಿ ಮತ್ತೆ IOC ಅಧಿವೇಶನ

    40 ವರ್ಷಗಳ ನಂತರ ಭಾರತದಲ್ಲಿ ಮತ್ತೆ IOC ಅಧಿವೇಶನ

    ನವದೆಹಲಿ: 2023ರ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (ಐಒಸಿ)ಯ ಅಧಿವೇಶನವನ್ನು ಮುಂಬೈನಲ್ಲಿ ಆಯೋಜಿಸುವ ಅವಕಾಶವನ್ನು ಭಾರತ ತನ್ನದಾಗಿಸಿಕೊಂಡಿದೆ.

    ದೇಶದ ಮೊದಲ ವೈಯಕ್ತಿಕ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಅಭಿನವ್‌ ಬಿಂದ್ರಾ, ಐಒಸಿ ಸದಸ್ಯೆ ನೀತಾ ಅಂಬಾನಿ, ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ ಅಧ್ಯಕ್ಷ ನರೀಂದರ್‌ ಬಾತ್ರಾ ಮತ್ತು ಕ್ರೀಡಾ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಅವರನ್ನು ಒಳಗೊಂಡ ನಿಯೋಗವು ಚೀನಾದಲ್ಲಿ ನಡೆಯುತ್ತಿರುವ 139ನೇ ಐಒಸಿ ಅಧಿವೇಶನದಲ್ಲಿ ಪಾಲ್ಗೊಂಡಿತ್ತು. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್

    ಭಾರತದಲ್ಲಿ ಎರಡನೇ ಬಾರಿಗೆ ಐಒಸಿ ಅಧಿವೇಶನ ಆಯೋಜಿಸುವ ಅವಕಾಶ ಲಭಿಸಿದೆ. 1983ರಲ್ಲಿ ನವದೆಹಲಿಯಲ್ಲಿ ಮೊದಲ ಬಾರಿಗೆ ಐಒಸಿ ಅಧಿವೇಶನ ಆಯೋಜಿಸಲಾಗಿತ್ತು.

    40 ವರ್ಷಗಳ ಬಳಿಕ ಒಲಿಂಪಿಕ್‌ ಆಂದೋಲನ ಭಾರತಕ್ಕೆ ಮರಳಿದೆ. 2023ರಲ್ಲಿ ಮುಂಬೈನಲ್ಲಿ ಐಒಸಿ ಅಧಿವೇಶನವನ್ನು ಆಯೋಜಿಸುವ ಗೌರವವನ್ನು ಭಾರತಕ್ಕೆ ವಹಿಸಿದ್ದಕ್ಕಾಗಿ ನಾನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಗೆ ನಿಜವಾಗಿಯೂ ಕೃತಜ್ಞಳಾಗಿದ್ದೇನೆ ಎಂದು ನೀತಾ ಅಂಬಾನಿ ತಿಳಿಸಿದ್ದಾರೆ. ಇದನ್ನೂ ಓದಿ: ಆರ್​ಸಿಬಿಯಲ್ಲಿ K.G.F ಸ್ಟಾರ್ಸ್

    ಇದು ಭಾರತದ ಒಲಿಂಪಿಕ್‌ ಮಹತ್ವಾಕಾಂಕ್ಷೆಗೆ ಮಹತ್ವದ ಬೆಳವಣಿಗೆಯಾಗಲಿದ್ದು, ಭಾರತೀಯ ಕ್ರೀಡೆಗೆ ಹೊಸ ಯುಗದ ಆರಂಭಕ್ಕೆ ನಾಂದಿ ಹಾಡಲಿದೆ. ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಕ್ರೀಡೆಯು ಯಾವಾಗಲೂ ಭರವಸೆ ಮತ್ತು ಸ್ಫೂರ್ತಿಯ ದಾರಿದೀಪವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಹರಾಜು ಪ್ರಕ್ರಿಯೆಯ ಯಶಸ್ವಿ ನಂತರ ಮಾತನಾಡಿದ ನರೀಂದರ್‌ ಬಾತ್ರಾ, ನೀತಾ ಅಂಬಾನಿ ಅವರ ದೂರದೃಷ್ಟಿ ಮತ್ತು ನಾಯಕತ್ವಕ್ಕೆ ನನ್ನ ಸಲಾಮ್.‌ ಮುಂದಿನ ವರ್ಷ ಮುಂಬೈನಲ್ಲಿ ನಡೆಯಲಿರುವ ಐಒಸಿ ಅಧಿವೇಶನ ಭಾರತದ ಕ್ರೀಡೆಗೆ ಹೊಸ ಯುಗದ ಆರಂಭವಾಗಲಿದೆ. ಭಾರತದಲ್ಲಿ ಒಲಿಂಪಿಕ್‌ ಕ್ರೀಡಾಕೂಟವನ್ನು ಆಯೋಜಿಸುವ ದೀರ್ಘಾವಧಿಯ ಗುರಿಯ ಸಾರ್ಥಕತೆ ಲಭಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಐಒಸಿ ಅಧಿವೇಶನವು ಐಒಸಿ ಸದಸ್ಯರ ಸಾಮಾನ್ಯ ಸಭೆಯಾಗಿದೆ. ಇದು ಐಒಸಿಯ ಸರ್ವೋಚ್ಚ ಅಂಗವಾಗಿದೆ. ಇಲ್ಲಿ ಕೈಗೊಳ್ಳುವ ನಿರ್ಧಾರಗಳು ಅಂತಿಮವಾಗಿರುತ್ತವೆ. ವರ್ಷಕ್ಕೊಮ್ಮೆ ಸಾಮಾನ್ಯ ಅಧಿವೇಶನ ನಡೆಸಲಾಗುತ್ತದೆ. ಆದರೆ ಬೃಹತ್‌ ಅಧಿವೇಶನವನ್ನು ಅಧ್ಯಕ್ಷರು ಅಥವಾ ಕನಿಷ್ಠ ಮೂರನೇ ಒಂದು ಭಾಗದಷ್ಟು ಸದಸ್ಯರು ಲಿಖಿತ ಕೋರಿಕೆಯ ಮೇರೆಗೆ ಕರೆಯಬಹುದು. ಇದನ್ನೂ ಓದಿ: Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್

    ಐಒಸಿಯಲ್ಲಿ ಒಟ್ಟು 101 ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಹೆಚ್ಚುವರಿಯಾಗಿ 45 ಗೌರವ ಸದಸ್ಯರು ಮತ್ತು ಒಬ್ಬರು ಗೌರವಾನ್ವಿತ ಸದಸ್ಯರು ಇದ್ದು, ಇವರಿಗೆ ಮತದಾನದ ಹಕ್ಕು ಇರುವುದಿಲ್ಲ. ಸದಸ್ಯರ ಜೊತೆಗೆ 50ಕ್ಕೂ ಹೆಚ್ಚು ಕ್ರೀಡಾ ಒಕ್ಕೂಟಗಳು (ಬೇಸಿಗೆ, ಚಳಿಗಾಲದ ಕ್ರೀಡಾ ವಿಭಾಗಗಳು), ಹಿರಿಯ ಪ್ರತಿನಿಧಿಗಳು (ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳು) ಸಹ ಐಒಸಿ ಅಧಿವೇಶನದಲ್ಲಿ ಭಾಗವಹಿಸುತ್ತಾರೆ.

  • UAE T20 ಲೀಗ್‍ನ ಕ್ರಿಕೆಟ್ ತಂಡ ಖರೀದಿಸಿದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್

    UAE T20 ಲೀಗ್‍ನ ಕ್ರಿಕೆಟ್ ತಂಡ ಖರೀದಿಸಿದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್

    ದುಬೈ: ಯುನೈಟಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ‘ಯುಎಇ ಟಿ20 ಲೀಗ್’ ಟೂರ್ನಿಗಾಗಿ ಭಾರತದ ಉದ್ಯಮಿ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ತಂಡವೊಂದನ್ನು ಖರೀದಿಸಿರುವ ಬಗ್ಗೆ ವರದಿಯಾಗಿದೆ.

    ಎಮಿರೆಟ್ಸ್ ಕ್ರಿಕೆಟ್ ಮಂಡಳಿ ಈ ಟಿ20 ಟೂರ್ನಿಯನ್ನು ನಡೆಸುತ್ತಿದ್ದು, ಈ ಟೂರ್ನಿಗಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಸಹಮಾಲೀಕತ್ವದ ರಿಲಯನ್ಸ್ ಸ್ಟ್ರಾಟೆಜಿಕ್ ಬಿಸಿನೆಸ್ ವೆಂಚರ್ಸ್ ಲಿಮಿಟೆಡ್(RSBL) ಹೊಸ ತಂಡವನ್ನು ಖರೀದಿಸಿ ಕ್ರಿಕೆಟ್‍ಗೆ ಮತ್ತಷ್ಟು ಒತ್ತುಕೊಡುತ್ತಿದೆ. ಇದನ್ನೂ ಓದಿ: ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣೀಕೃತ ಮಾಂಸ ಮಾತ್ರ ಸೇವಿಸಬೇಕೆಂದ ಬಿಸಿಸಿಐ

    ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗಾಗಲೇ ಭಾರತದ ಅತೀ ದೊಡ್ಡ ಕ್ರಿಕೆಟ್ ಲೀಗ್ ಐಪಿಎಲ್‍ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಲೀಕತ್ವವನ್ನು ನಿರ್ವಹಿಸುತ್ತಿದೆ. ಇದೀಗ ಯುಎಇ ಟಿ20 ಲೀಗ್‍ನಲ್ಲಿ ಇನ್ನೊಂದು ತಂಡವನ್ನು ಖರೀದಿಸುವ ಮೂಲಕ ಎರಡು ಕ್ರಿಕೆಟ್ ತಂಡದ ಮಾಲೀಕತ್ವವನ್ನು ಪಡೆದುಕೊಂಡಿದೆ, ಈ ಮೂಲಕ ಹೊರ ದೇಶಗಳಲ್ಲೂ ಕೂಡ ಕ್ರೀಡಾ ಕ್ಷೇತ್ರಕ್ಕೆ ಕೊಡುಗೆ ನೀಡಲು ಮುಂದಾಗಿದೆ.

    ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಂಬೈ ಇಂಡಿಯನ್ಸ್ ತಂಡದ ಮಾಲೀಕರಾದ ನೀತಾ ಅಂಬಾನಿ, ಮುಂಬೈ ಇಂಡಿಯನ್ಸ್ ಬಳಿಕ ಇದೀಗ ಇನ್ನೊಂದು ತಂಡವನ್ನು ಖರೀದಿಸಲು ಮುಂದಾಗಿದ್ದೇವೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಭಿಮಾನಿಗಳು ನೀಡಿರುವ ಪ್ರೋತ್ಸಾಹ ಇದಕ್ಕೆ ಮುಖ್ಯ ಕಾರಣ ಈ ಮೂಲಕ ಜಾಗತೀಕ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ವೃದ್ಧಿಸಲು ಸಜ್ಜಾಗಿದ್ದೇವೆ. ಈ ಬಾಂಧವ್ಯ ದೀರ್ಘ ಕಾಲದವರೆಗೆ ಮುಂದುವರಿಯಲಿದೆ ಎಂದಿದ್ದಾರೆ. ಇದನ್ನೂ ಓದಿ: ಕಪ್ ಗೆಲ್ಲಲು ಲಕ್ಕಿ ಕಲರ್ ಆದ ಹಳದಿ ಜೆರ್ಸಿ

    ವರ್ಷಕ್ಕೆ ಒಂದು ಬಾರಿ ನಡೆಯುವ ಯುಎಇ ಟಿ20 ಲೀಗ್ 6 ತಂಡಗಳನ್ನು ಹೊಂದಿದ್ದು, 34 ಪಂದ್ಯಗಳು ಈ ಟೂರ್ನಿಯಲ್ಲಿ ನಡೆಯಲಿದೆ. ಯುವ ಆಟಗಾರರಿಗೆ ಯುಎಇ ಲೀಗ್ ಮೂಲಕ ಕ್ರಿಕೆಟ್‍ಗೆ ಉತ್ತೇಜನ ನೀಡುತ್ತಿದೆ. ಈ ಬಾರಿಯ ಯುಎಇ ಲೀಗ್ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರ ಬರಬೇಕಾಗಿದೆ. ಇದನ್ನೂ ಓದಿ: ಚಹರ್ ಸಿಕ್ಸ್‌ಗೆ ಸೆಲ್ಯೂಟ್ ಹೊಡೆದ ರೋಹಿತ್

  • ಕೋವಿಡ್‍ನಿಂದ ಮೃತಪಟ್ಟರೆ 5 ವರ್ಷದವರೆಗೆ ಕುಟುಂಬಕ್ಕೆ ಸಿಗಲಿದೆ ಉದ್ಯೋಗಿಯ ಸಂಬಳ – ರಿಲಯನ್ಸ್ ಘೋಷಣೆ

    ಕೋವಿಡ್‍ನಿಂದ ಮೃತಪಟ್ಟರೆ 5 ವರ್ಷದವರೆಗೆ ಕುಟುಂಬಕ್ಕೆ ಸಿಗಲಿದೆ ಉದ್ಯೋಗಿಯ ಸಂಬಳ – ರಿಲಯನ್ಸ್ ಘೋಷಣೆ

    ಮುಂಬೈ: ಕೋವಿಡ್ 19 ನಿಂದ ಮೃತರಾದ ಸಿಬ್ಬಂದಿಯ ಕುಟುಂಬಕ್ಕೆ ಸಹಾಯ ಮಾಡಲು ರಿಲಯನ್ಸ್ ಇಂಡಸ್ಟ್ರೀಸ್ ಮುಂದಾಗಿದೆ. ಕಂಪನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಉದ್ಯೋಗಿಗಳಿಗೆ ಪತ್ರ ಬರೆದು ಆತ್ಮಸ್ಪೈರ್ಯ ತುಂಬಿದ್ದಾರೆ.

    ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ವ್ಯಕ್ತಿ ಕೋವಿಡ್‍ನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ 10 ಲಕ್ಷ ರೂ ನೀಡಲು ರಿಲಯನ್ಸ್ ನಿರ್ಧರಿಸಿದೆ. ಸಾವನ್ನಪ್ಪಿದ ಉದ್ಯೋಗಿಯ ನಾಮಿನಿಗೆ 10 ಲಕ್ಷ ಹಣವನ್ನು ನೇರವಾಗಿ ಪಾವತಿಸಿ ಅವರ ಕುಟುಂಬಕ್ಕೆ ಧೈರ್ಯ ತುಂಬಲಿದೆ ಎಂದು ನೀತಾ ಅಂಬಾನಿ ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ಸಾವನ್ನಪ್ಪಿದ ಉದ್ಯೋಗಿಯ ಕೊನೆಯದಾಗಿ ಪಡೆದ ವೇತನವನ್ನು ಐದು ವರ್ಷಗಳ ಕಾಲ ಕುಟುಂಬಕ್ಕೆ ನೀಡಲಾಗುವುದು. ಇದನ್ನೂ ಓದಿ: ರೈತರೊಂದಿಗೆ ರಿಲಯನ್ಸ್ ಒಪ್ಪಂದ- ಎಂಎಸ್‌ಪಿಗಿಂತ ಹೆಚ್ಚಿನ ದರ

    ಸಾವನ್ನಪ್ಪಿದ ಕುಟುಂಬದ ಮಕ್ಕಳು ದೇಶದಲ್ಲಿ ಎಲ್ಲೇ ಓದಿದರೂ ಅವರು ಡಿಗ್ರಿ ಪದವಿವರೆಗಿನ ಟ್ಯೂಷನ್ ಫೀಸ್, ಹಾಸ್ಟೆಲ್ ವ್ಯವಸ್ಥೆ, ಬುಕ್ ಫೀಸ್‍ಗಳನ್ನು ಸಂಪೂರ್ಣವಾಗಿ ಕಂಪನಿಯೇ ಪಾವತಿಸಲಿದೆ.

    ಮಕ್ಕಳು ಪದವಿ ಪಡೆಯುವವರೆಗೂ ಕುಟುಂಬದ ಪೋಷಕರು, ಹೆಂಡತಿ ಅಥವಾ ಗಂಡ ಹಾಗೂ ಮಕ್ಕಳ ಆರೋಗ್ಯ ವಿಮೆಯನ್ನು ಶೇ.100ರವರೆಗೆ ಭರಿಸಲಾಗುವುದು.

    ರಿಲಯನ್ಸ್ ಸಂಸ್ಥೆಗೆ ನಮ್ಮ ಸಹೋದ್ಯೋಗಿಗಳ ಕೊಡುಗೆ ಅಪಾರವಾಗಿದೆ. ಈಗಾಗಲೇ ಉದ್ಯೋಗಿಗಳಿಗೆ ಉಚಿತ ಲಸಿಕೆ ಅಭಿಯಾನ ನಡೆಸಲಾಗಿದೆ. ಎಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧ ಹೋರಾಡೋಣ. ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿರಿ.

  • ಅಜ್ಜನಾಗಿ ಬಡ್ತಿ ಪಡೆದ ಉದ್ಯಮಿ ಮುಖೇಶ್ ಅಂಬಾನಿ

    ಅಜ್ಜನಾಗಿ ಬಡ್ತಿ ಪಡೆದ ಉದ್ಯಮಿ ಮುಖೇಶ್ ಅಂಬಾನಿ

    -ಶ್ಲೋಕಾ, ಆಕಾಶ್ ದಂಪತಿಗೆ ಗಂಡು ಮಗು

    ನವದೆಹಲಿ: ಆಕಾಶ್ ಮತ್ತು ಶ್ಲೋಕಾ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಖ್ಯಾತ ಉದ್ಯಮಿ ರಿಲಾಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅಜ್ಜನಾಗಿ ಬಡ್ತಿ ಪಡೆದಿದ್ದಾರೆ.

    ಮುಂಬೈನ ಆಸ್ಪತ್ರೆಯಲ್ಲಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಧೀರೂಬಾಯಿ ಹಾಗೂ ಕೋಕಿಲಾಬೆನ್ ಅಂಬಾನಿ ಕುಟುಂಬದ ಮರಿಮೊಮ್ಮಗನನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ಮೂಲಕ ನೀತಾ ಮತ್ತು ಮುಕೇಶ್ ಅಂಬಾನಿ ಅಜ್ಜ, ಅಜ್ಜಿಯಾಗಿದ್ದಾರೆ.

    ಕೃಷ್ಣ ಪರಮಾತ್ಮನ ದಯೆ ಮತ್ತು ಆಶೀರ್ವಾದದಿಂದ ಶ್ಲೋಕಾ ಹಾಗೂ ಆಕಾಶ್ ಅಂಬಾನಿ ಅವರಿಗೆ ಗಂಡು ಸಂತಾನವಾಗಿದೆ. ನೀತಾ ಮತ್ತು ಮುಕೇಶ್ ಅಂಬಾನಿ ಅವರು ಮೊದಲ ಬಾರಿ ಅಜ್ಜ-ಅಜ್ಜಿಯಾದ ಬಗ್ಗೆ ಸಂತಸ ಪಟ್ಟಿದ್ದಾರೆ ಎಂದು ವರದಿಯಾಗಿದೆ.

    2019 ಮಾರ್ಚ್‍ನಲ್ಲಿ ಹಸೆಮಣೆ ಏರಿದ್ದ ಮುಕೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೇಹ್ತಾ ವಿವಾಹ ಅದ್ದೂರಿಯಾಗಿ ನೆರವೆರಿತ್ತು. ಮದುವೆ ಸಮಾರಂಭದಲ್ಲಿ ಟೋನಿ ಬ್ಲೇರ್, ಸಚಿನ್ ತೆಂಡೂಲ್ಕರ್, ಅಮಿರ್ ಖಾನ್ ಹೀಗೆ ಹಲವಾರು ಗಣ್ಯಾತೀಗಣ್ಯರು ಭಾಗವಹಿಸಿದ್ದರು. ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ವಿವಾಹವಾಗಿದ್ದ ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹತಾ ಇದೀಗ ಸಂತಾನ ಪಡೆದಿದ್ದಾರೆ.

  • ನ್ಯೂಯಾರ್ಕ್ ಮ್ಯೂಸಿಯಂಗೆ ಟ್ರಸ್ಟಿಯಾದ ನೀತಾ ಅಂಬಾನಿ

    ನ್ಯೂಯಾರ್ಕ್ ಮ್ಯೂಸಿಯಂಗೆ ಟ್ರಸ್ಟಿಯಾದ ನೀತಾ ಅಂಬಾನಿ

    ನ್ಯೂಯಾರ್ಕ್: ಶಿಕ್ಷಣ ತಜ್ಞೆ ಹಾಗೂ ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರನ್ನು ಅಮೆರಿಕದ ಬಹುದೊಡ್ಡ ಕಲಾಕೇಂದ್ರವಾಗಿರುವ ನ್ಯೂಯಾರ್ಕ್ ಮೆಟ್ರೊಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ಸ್​ಗೆ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದೆ.

    ಮಂಗಳವಾರ ನೀತಾ ಅಂಬಾನಿ ಅವರನ್ನು ಗೌರವಾನ್ವಿತ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಮ್ಯೂಸಿಯಂನ ಅಧ್ಯಕ್ಷ ಡೇನಿಯನ್ ಬ್ರಾಡ್ಸ್ಕಿ ಘೋಷಿಸಿದ್ದಾರೆ. ನೀತಾ ಅಂಬಾನಿ ಅವರು ಈ ಸ್ಥಾನಕ್ಕೆ ಆಯ್ಕೆ ಆದ ಮೊದಲ ಭಾರತೀಯ ಮಹಿಳೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ.

    ಮೆಟ್ರೊಪಾಲಿಟನ್ ಕಲಾ ವಸ್ತು ಸಂಗ್ರಹಾಲಯದ ಮೇಲೆ ನೀತಾ ಅಂಬಾನಿ ತೋರುತ್ತಿರುವ ಬದ್ಧತೆ, ಭಾರತದ ಕಲೆ, ಸಂಸ್ಕೃತಿಯನ್ನು ಬೆಳೆಸುವ ಬಗ್ಗೆ ಅವರಿಗಿರುವ ಕಾಳಜಿ ನಿಜಕ್ಕೂ ಅದ್ಭುತವಾದದ್ದು. ಅವರ ಬೆಂಬಲ ಕಾಳಜಿಯಿಂದ ಮ್ಯೂಸಿಯಂನಲ್ಲಿ ದೇಶದ ವಿವಿಧ ಮೂಲೆಮೂಲೆಗಳ ಕಲೆ, ಸಂಸ್ಕೃತಿಗಳನ್ನು ಅಧ್ಯಯನ ಮಾಡಿ, ಪ್ರದರ್ಶಿಸಲು ಸಹಾಯಕವಾಗಿದೆ. ಜೊತೆಗೆ ಅವರು ಭಾರತದಲ್ಲಿ ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ನಿಜಕ್ಕೂ ಮೆಚ್ಚುವಂತಹದ್ದು. ಅವರನ್ನು ಮ್ಯೂಸಿಯಂಗೆ ಟ್ರಸ್ಟಿಯಾಗಿ ಆಯ್ಕೆ ಮಾಡಿರುವುದು ನಿಜಕ್ಕೂ ಖುಷಿಯ ವಿಷಯವಾಗಿದೆ ಎಂದು ಡೇನಿಯಲ್ ಬ್ರಾಡ್ಸ್ಕಿ ನೀತಾ ಅವರನ್ನು ಹೊಗಳಿದ್ದಾರೆ.

    ಈ ಮ್ಯೂಸಿಯಂ 149 ವರ್ಷಗಳ ಇತಿಹಾಸ ಹೊಂದಿದೆ. ಅಮೆರಿಕದ ನಾಗರಿಕರು, ಉದ್ಯಮಿಗಳು ಸೇರಿ ಇಲ್ಲಿನ ಜನರಿಗೆ ಕಲೆ ಮತ್ತು ಕಲಾ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ಮ್ಯೂಸಿಯಂ ಸ್ಥಾಪನೆ ಮಾಡಲಾಗಿದೆ. ಇಲ್ಲಿ ಪ್ರಪಂಚದ ಹಲವು ಪ್ರದೇಶಗಳ 5 ಸಾವಿರಕ್ಕೂ ಹೆಚ್ಚು ವರ್ಷಗಳ ಪುರಾತನ ಕಲೆಗಳನ್ನು ಬಿಂಬಿಸುವ ಸಾವಿರಾರು ಕಲಾ ವಸ್ತುಗಳು ಇವೆ. ಈ ಮ್ಯೂಸಿಯಂ ಈಗ ಅಪರೂಪದ, ಪ್ರಾಚೀನ ಹಾಗೂ ಸುಂದರ ವಸ್ತುಗಳ ಖಜಾನೆಯಾಗಿದೆ.

    ಈ ಹಿಂದೆ ನೀತಾ ಅಂಬಾನಿ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಸದಸ್ಯೆಯಾಗಿ ಆಯ್ಕೆ ಆಗಿದ್ದರು. ಈ ಮೂಲಕ ಈ ಸ್ಥಾನಕ್ಕೆ ಏರಿದ ಮೊದಲ ಭಾರತದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.

  • 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾರ್ದಿಕ್ ಪಾಂಡ್ಯ – ನೀತಾ ಅಂಬಾನಿ ಭೇಟಿ

    26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾರ್ದಿಕ್ ಪಾಂಡ್ಯ – ನೀತಾ ಅಂಬಾನಿ ಭೇಟಿ

    ಲಂಡನ್: ಟೀಂ ಇಂಡಿಯಾದ ಆಲ್‍ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ 26ನೇ ವಂಸತಕ್ಕೆ ಕಾಲಿಟಿದ್ದು, ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಪಾಂಡ್ಯ ಆದಷ್ಟು ಬೇಗ ಚೇತರಿಸಿಕೊಂಡು ಮತ್ತೆ ಫೀಲ್ಡ್ ಅಲ್ಲಿ ಮಿಂಚಲಿ ಎಂದು ಸಹ ಆಟಗಾರರು ಹಾಗೂ ಅಭಿಮಾನಿಗಳು ಶುಭಹಾರೈಸಿದ್ದಾರೆ.

    ಬೆನ್ನು ನೋವಿಗೊಳಗಾಗಿರುವ ಹಾರ್ದಿಕ್ ಪಾಂಡ್ಯ ಲಂಡನ್‍ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಇದೀಗ ನಿಧಾನವಾಗಿ ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತಾ ನಡೆದಾಟವನ್ನು ಆರಂಭಿಸಿದ್ದಾರೆ. ಇತ್ತೀಚಿನ ಟೀಂ ಇಂಡಿಯಾ ಪಂದ್ಯಗಳಲ್ಲಿ ಕಾಣದ ಹಾರ್ದಿಕ್‍ನನ್ನು ಅಭಿಮಾನಿಗಳು ಸಖತ್ ಮಿಸ್ ಮಾಡಿಕೊಳ್ಳುತ್ತಿದ್ದು, ಆದಷ್ಟು ಬೇಗ ಚೇತರಿಸಿಕೊಂಡು ತಂಡಕ್ಕೆ ವಾಪಸ್ಸಾಗಿ ಎಂದು ಹಾರೈಸಿದ್ದಾರೆ. ಜೊತೆಗೆ ಟೀಂ ಇಂಡಿಯಾ ಆಟಗಾರರಾದ ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್ ಹಾಗೂ ಇತರರು ಬರ್ತ್‍ಡೇ ಬಾಯ್‍ಗೆ ವಿಷ್ ಮಾಡಿದ್ದಾರೆ.

    ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವ ಮೂಲಕ ಹಾರ್ದಿಕ್ ಪಾಂಡ್ಯ ಪ್ರತಿಭೆಯನ್ನು ಗುರುತಿಸಲಾಗಿತ್ತು. ಹೀಗಾಗಿ ತಮ್ಮ ನೆಚ್ಚಿನ ಆಟಗಾರನಿಗೆ ಮುಂಬೈ ಇಂಡಿಯನ್ಸ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಷ್ ಮಾಡಿ ಪೋಸ್ಟ್ ಹಾಕಲಾಗಿದೆ. ಈ ನಡುವೆ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಪತ್ನಿ ಹಾಗೂ ಮುಂಬೈ ಇಂಡಿಯನ್ಸ್ ಐಪಿಎಲ್ ತಂಡದ ಒಡತಿ ನೀತಾ ಅಂಬಾನಿ ಅವರು ಲಂಡನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾರ್ದಿಕ್‍ರನ್ನು ಭೇಟಿಯಾಗಿ ಬೇಗನೇ ಫಿಟ್ ಆಗುವಂತೆ ಹಾರೈಸಿದ್ದಾರೆ. ನೀವು ನನ್ನ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ಧನ್ಯವಾದ ಬಾಬಿ ಎಂದು ಬರೆದು ನೀತಾ ಅಂಬಾನಿ ಜೊತೆಗಿನ ಫೋಟೋವನ್ನು ಹಾರ್ದಿಕ್ ಇನ್‍ಸ್ಟಾಗ್ರಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    https://www.instagram.com/p/B3btFpHFT1G/

    ಏಕದಿನ ವಿಶ್ವಕಪ್ ಮುನ್ನವೇ ಹಾರ್ದಿಕ್‍ಗೆ ಗಾಯದ ಸಮಸ್ಯೆ ಕಾಣಿಸಿತ್ತು. ಬಳಿಕ ಐಪಿಎಲ್ ಹಾಗೂ ಏಕದಿನ ವಿಶ್ವಕಪ್ ನಲ್ಲಿ ಭಾಗವಹಿಸಿದ್ದರೂ ಗಾಯದ ಸಮಸ್ಯೆ ಬೆನ್ನು ಬಿಡದೇ ಕಾಡಿತ್ತು. ಇದರಿಂದಾಗಿ ಶಸ್ತ್ರಚಿತಿತ್ಸೆಗೊಳಗಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೊನೆಯದಾಗಿ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಭಾಗವಹಿಸಿದ್ದರು. ಇದೀಗ ಎರಡರಿಂದ ಐದು ತಿಂಗಳುಗಳ ಕಾಲ ವಿಶ್ರಾಂತಿ ಅಗತ್ಯವಿದೆ. ಹಾಗಾಗಿ ಮುಂಬರುವ ಬಾಂಗ್ಲಾದೇಶ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆಯಿದೆ.

    ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ ಸೋಮವಾರ ತಮ್ಮ 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಆಗ ಹಾರ್ದಿಕ್ ಪಾಂಡ್ಯ ವಿಡಿಯೋ ಅಪ್ಲೋಡ್ ಮಾಡಿಕೊಂಡು, ಹುಟ್ಟು ಹಬ್ಬದ ಶುಭಾಶಯಗಳು ಜಹೀರ್ ಖಾನ್. ನಾನು ಈ ವಿಡಿಯೋದಲ್ಲಿ ಮಾಡಿದಂತೆ ನೀವೂ ಹೀಗೆ ಮಾಡುತ್ತೀರಿ ಎಂದು ನಾನು ನಂಬುತ್ತೇನೆ ಎಂದು ಬರೆದುಕೊಂಡಿದ್ದರು. ಹಾರ್ದಿಕ್ ಶುಭಾಶಯಕ್ಕೆ ಜಹೀರ್ ಖಾನ್ ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ಗರಂ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಕಟು ಪದಗಳಿಂದ ಟೀಕಿಸಿದ್ದರು. ಹಲವರು ನಯವಾದ ಮಾತುಗಳಿಂದಲೇ ಹಾರ್ದಿಕ್ ಪಾಂಡ್ಯ ಕಾಲೆಳೆದಿದ್ದರು.