Tag: nithyananda

  • ಹೊಸ ವಿವಾದದಲ್ಲಿ ನಿತ್ಯಾನಂದ – ವರ್ಷಕ್ಕೆ 8.96 ಲಕ್ಷ, ಬೊಲಿವಿಯಾದಲ್ಲಿ ಬೆಂಗಳೂರಿನ 5 ಪಟ್ಟು ಭೂಮಿ ಲೀಸ್‌ಗೆ ಪಡೆದು ವಂಚನೆ

    ಹೊಸ ವಿವಾದದಲ್ಲಿ ನಿತ್ಯಾನಂದ – ವರ್ಷಕ್ಕೆ 8.96 ಲಕ್ಷ, ಬೊಲಿವಿಯಾದಲ್ಲಿ ಬೆಂಗಳೂರಿನ 5 ಪಟ್ಟು ಭೂಮಿ ಲೀಸ್‌ಗೆ ಪಡೆದು ವಂಚನೆ

    ನವದೆಹಲಿ: ಭಾರತದಿಂದ ಓಡಿಹೋಗಿ ತನ್ನದೇ ಆದ ಕೈಲಾಸ ದೇಶ ಸ್ಥಾಪಿಸಿರುವ ನಿತ್ಯಾನಂದ (Nithyananda) ವಿರುದ್ಧ ಭೂ ವಂಚನೆ (Land Scam) ಯತ್ನ ಆರೋಪ ಕೇಳಿ ಬಂದಿದೆ. ದಕ್ಷಿಣ ಅಮೆರಿಕ ಖಂಡದಲ್ಲಿರುವ ಬೊಲಿವಿಯಾ (Bolivia) ದೇಶದಲ್ಲಿ 3,900 ಚದರ ಕಿಲೋಮೀಟರ್ ಭೂ ಕಬಳಿಕೆ ಆರೋಪ ಎದುರಿಸುತ್ತಿದ್ದಾರೆ.

    ಬೊಲಿವಿಯಾದ ಅಮೇಜಾನ್ ಪ್ರದೇಶದ ಬುಡಕಟ್ಟು ಜನಾಂಗಕ್ಕೆ ಅಸ್ತಿತ್ವದಲ್ಲಿಲ್ಲದ ಕೈಲಾಸ ದೇಶ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಅಮೆಜಾನ್ ಮಳೆ ಕಾಡು ಪ್ರದೇಶದ ಭೂಮಿಯನ್ನು ನಿತ್ಯಾನಂದ ಗ್ಯಾಂಗ್ 1 ಸಾವಿರ ವರ್ಷ ಲೀಸ್‌ಗೆ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ.


    2024ರ ಅಕ್ಟೋಬರ್- ನವೆಂಬರ್ ನಡುವೆ ಈ ಅನಧಿಕೃತ ಭೂವ್ಯವಹಾರ ನಡೆದಿದೆ. 1,08,000 ಡಾಲರ್‌ಗೆ (ವರ್ಷಕ್ಕೆ 8.96 ಲಕ್ಷ ರೂ.) ಈ ಭೂಮಿಯನ್ನು ಅಕ್ರಮವಾಗಿ ಲೀಸ್‌ಗೆ ಪಡೆದಿದೆ. ಪ್ರಕರಣ ಸಂಬಂಧ ಇದೀಗ ನಿತ್ಯಾನಂದನ 20ಕ್ಕೂ ಅಧಿಕ ಅನುಯಾಯಿಗಳನ್ನು ಬೊಲಿವಿಯಾದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌

    ಈ ಭೂಮಿಯು ದೆಹಲಿಯ ಗಾತ್ರಕ್ಕಿಂತ 2.6 ಪಟ್ಟು, ಮುಂಬೈನ ಗಾತ್ರಕ್ಕಿಂತ 6.5 ಪಟ್ಟು, ಬೆಂಗಳೂರಿನ ಗಾತ್ರಕ್ಕಿಂತ 5.3 ಪಟ್ಟು, ಕೋಲ್ಕತ್ತಾದ ಗಾತ್ರಕ್ಕಿಂತ 19 ಪಟ್ಟು ದೊಡ್ಡದಾಗಿದೆ.

    ಬಂಧಿತರ ಪೈಕಿ ಬಹುತೇಕ ಮಹಿಳೆಯರಿದ್ದಾರೆ. 122 ಚೀನಿಯರು, 7 ಜನ ಭಾರತೀಯರಿದ್ದಾರೆ. ಕೆಲವರನ್ನ ಬೊಲಿವಿಯಾದಿಂದ ಗಡೀಪಾರು ಮಾಡಲಾಗಿದೆ. ನಿತ್ಯಾನಂದ ತಂಡ ಆರೋಪ ನಿರಾಕರಿಸಿದೆ. ತಪ್ಪು ವರದಿಯಿಂದ ಹಿಂದು ಸನ್ಯಾಸಿಗಳನ್ನ ಬಂಧಿಸಿ ಹಲ್ಲೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದೆ.

     

  • PublicTV Explainer: ನಿತ್ಯಾನಂದನ ಕೈಲಾಸದಲ್ಲಿರಲು ಈ ರೂಲ್ಸ್ ಫಾಲೋ ಮಾಡ್ಲೇಬೇಕಂತೆ

    PublicTV Explainer: ನಿತ್ಯಾನಂದನ ಕೈಲಾಸದಲ್ಲಿರಲು ಈ ರೂಲ್ಸ್ ಫಾಲೋ ಮಾಡ್ಲೇಬೇಕಂತೆ

    – ಕೈಲಾಸ ಮಾನ್ಯತೆ ಪಡೆದ ದೇಶವೇ ಅಥವಾ ಕಾಲ್ಪನಿಕವೇ?

    ದೊಂದು ವಿಶ್ವಮಟ್ಟದ ಮಹಾಸಭೆ. ಆ ಸಭೆಯಲ್ಲಿ ಕೇಸರಿ ಬಣ್ಣದ ಸೀರೆಯುಟ್ಟು, ತಲೆಗೆ ಟರ್ಬನ್ ಹಾಕಿಕೊಂಡು ತನ್ನ ದೇಶದ ಬಗ್ಗೆ ಮಾತನಾಡುತ್ತ ‘ಕೈಲಾಸ’ ಕನ್ಯೆಯೊಬ್ಬಳು ಕ್ಷಣಮಾತ್ರದಲ್ಲಿ ವಿಶ್ವದ ಗಮನ ಸೆಳೆದಿದ್ದಳು. ಆ ಸಂದರ್ಭದಲ್ಲಿ ಯಾರೀ ಸುಂದರಿ? ಇವಳು ಪ್ರತಿನಿಧಿಸುತ್ತಿರುವ ದೇಶ ಯಾವುದು? ಹೀಗೆ ಹಲವು ಪ್ರಶ್ನೆಗಳು ಮೂಡಿದ್ದಂತೂ ನಿಜ. ಆ ಕೈಲಾಸ ಕನ್ಯೆ, ಸುಂದರಿ ಬೇರಾರು ಅಲ್ಲ. ಸ್ವಯಂಘೋಷಿತ ದೇವಮಾನವ ನಿತ್ಯಾನಂದ (Nithyananda) ಸ್ಥಾಪಿಸಿದ್ದಾರೆ ಎನ್ನಲಾದ ಕೈಲಾಸ (Kailasa) ದೇಶದ ಪ್ರತಿನಿಧಿ ಎಂಬುದು ನಂತರ ಎಲ್ಲರಿಗೂ ತಿಳಿಯಿತು.

    ಅದೇನೇ ಇರಲಿ, ಜಿನೀವಾದಲ್ಲಿ ಈಚೆಗೆ ನಡೆದ ಸಭೆಯಲ್ಲಿ ವಿಶೇಷ ವೇಷಭೂಷಣದೊಂದಿಗೆ ಕಾಣಿಕೊಂಡು ಕೈಲಾಸ ದೇಶ ಪ್ರತಿನಿಧಿ ವಿಜಯಪ್ರಿಯ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡರು. ಜೊತೆಗೆ ಸಭೆಯಲ್ಲಿ ಆಕೆಯಾಡಿದ ಮಾತುಗಳು ಅಷ್ಟೇ ವಿವಾದವನ್ನು ಹುಟ್ಟುಹಾಕಿತು. ಇದೊಂದು ವಿಚಾರದಿಂದ ಕೈಲಾಸ ದೇಶ ಸಂಸ್ಥಾಪಕ ನಿತ್ಯಾನಂದ ಕೂಡ ಮತ್ತೆ ಮುನ್ನಲೆಗೆ ಬಂದರು. ಈಗಂತೂ ಒಂದಲ್ಲ ಒಂದು ಕಾರಣಕ್ಕೆ ಕೈಲಾಸ ಸುಂದರಿ ಮತ್ತು ನಿತ್ಯಾನಂದನ ಕೈಲಾಸ ದೇಶದ ಬಗ್ಗೆ ಚರ್ಚೆಯಾಗುತ್ತಲೇ ಇದೆ.

    ಚರ್ಚೆಯಾಗುತ್ತಿರುವ ವಿಷಯ ಯಾವುದು ಅಂತೀರಾ? ಅದೇ ‘ಕೈಲಾಸ ದೇಶ’. ನಾವೆಲ್ಲ ಅಜ್ಞಾತ ಸ್ಥಳದಲ್ಲಿರುವ ಕೈಲಾಸ ದೇಶದ ಬಗ್ಗೆ ಕೇಳಿದ್ದೇವೆ ಅಷ್ಟೆ. ಆ ದೇಶ ಕಾಲ್ಪನಿಕವೇ ಅಥವಾ ನಿಜಬವಾಗಿಯು ಇದೆಯೇ? ಇದ್ದರೆ ಮಾನ್ಯತೆ ಪಡೆದಿದೆಯೇ? ಅಲ್ಲಿಗೆ ಹೋಗಿ ವಾಸಿಸಲು ಇತರೆ ದೇಶಗಳಲ್ಲಿ ಇರುವಂತೆ ನೀತಿ-ನಿಯಮಗಳೇನಾದರು ಇವೆಯೇ ಎಂಬೆಲ್ಲ ಪ್ರಶ್ನೆಗಳು ಉದ್ಭವಿಸುತ್ತವೆ. ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ.

    ಕೈಲಾಸ ಕಾಲ್ಪನಿಕ ದೇಶವೇ?: ಅತ್ಯಾಚಾರದ ಆರೋಪದ ಮೇಲೆ ಕಾನೂನು ಕ್ರಮದ ಸಂಕಷ್ಟಕ್ಕೆ ಸಿಲುಕಿ ಭಾರತದಿಂದ (India) ನಾಪತ್ತೆಯಾಗಿ ನಿಗೂಢ ಸ್ಥಳದಲ್ಲಿದ್ದ ಎನ್ನುವಷ್ಟರಲ್ಲಿ ಈಕ್ವೆಡಾರ್ ಬಳಿ ಕೈಲಾಸ ದೇಶ ಸ್ಥಾಪಿಸಿಕೊಂಡಿದ್ದಾನೆ. ಅಲ್ಲಿ 20 ಲಕ್ಷ ಹಿಂದೂಗಳ ಜನಸಂಖ್ಯೆಯಿದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದರೂ, ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿಲ್ಲ. ಕೈಲಾಸ ಗಣರಾಜ್ಯವು ಇನ್ನೂ ನಿತ್ಯಾನಂದರಿಂದ ಸ್ವಘೋಷಿತ ರಾಷ್ಟ್ರವಾಗಿದೆ. ಪ್ರಸ್ತುತ ದೇಶವಾಗಿ ಯಾವುದೇ ಅಂತಾರಾಷ್ಟ್ರೀಯ ಮನ್ನಣೆಯನ್ನು ಹೊಂದಿಲ್ಲ. ಯುಎನ್ ಅವರಿಗೆ ರಾಷ್ಟ್ರವಾಗಿ ಮಾನ್ಯತೆ ನೀಡದಿದ್ದರೂ, ಈಕ್ವೆಡಾರ್ ಬಳಿ ಕೈಲಾಸ ಎಂಬ ಹೆಸರಿನ ದೇಶವನ್ನು ನಿರ್ಮಿಸಿದ್ದಾನೆ. ಇದು ತನ್ನ ದೇಶ ಎಂಬಂತೆ ನಿತ್ಯಾನಂದ ಬಿಂಬಿಸುತ್ತಿದ್ದಾನೆ.

    ನಿತ್ಯಾನಂದನ ದೇಶಕ್ಕೂ ಇದೆ ಧ್ವಜ, ಲಾಂಛನ, ಪಾಸ್‌ಪೋರ್ಟ್: ಕೈಲಾಸ ದೇಶದಲ್ಲಿ ಧ್ವಜ, ಲಾಂಛನ, ಪಾಸ್‌ಪೋರ್ಟ್‌ ಗಳಿವೆ. ಅಷ್ಟೇ ಅಲ್ಲದೇ ಕೈಲಾಸದಲ್ಲಿ ಪ್ರಧಾನಿ ಸೇರಿದಂತೆ ಸಚಿವ ಸಂಪುಟನ್ನು ಸಹ ರಚಿಸಲಾಗಿದೆ. ಕೈಲಾಸದ ಪಾಸ್‌ಪೋರ್ಟ್ ಎರಡು ಮಾದರಿಗಳಲ್ಲಿದೆ. ಒಂದು ಬಂಗಾರದ ಬಣ್ಣದ್ದಾಗಿದ್ದರೆ, ಇನ್ನೊಂದು ಕೆಂಪು ಬಣ್ಣದ್ದಾಗಿದೆ. ದೇಶದ ಧ್ವಜವು ಮೆರೂನ್ ಬಣ್ಣದ್ದಾಗಿದೆ. ಇದರಲ್ಲಿ ಎರಡು ಲಾಂಚನಗಳಿದ್ದು, ಒಂದು ನಿತ್ಯಾನಂದ ಹಾಗೂ ಇನ್ನೊಂದು ನಂದಿಯ ಚಿತ್ರವಾಗಿದೆ.

    ಕೈಲಾಸಕ್ಕೆ ಹೋಗೋದು ಅಷ್ಟು ಸುಲಭ ಅಲ್ಲ!: ಕೈಲಾಸ ದೇಶಕ್ಕೆ ಹೋಗಲು ಯಾವುದೇ ನಿರ್ಬಂಧಗಳಿಲ್ಲ. ವಿಶ್ವದ ಯಾವುದೇ ಮೂಲೆಗಳಿಂದ ಹಿಂದೂಗಳು ಈ ದೇಶಕ್ಕೆ ಬರಬಹುದಾಗಿದೆ. ಆದರೆ ನಿತ್ಯಾನಂದನ ಕೈಲಾಸಕ್ಕೆ ಹೋಗುವುದು ಎಂದರೆ ಅಷ್ಟು ಸುಲಭದ ಕೆಲಸವಲ್ಲ. ಅಲ್ಲಿ ಹೋಗುವುವರು ಬಹುಮುಖ್ಯವಾಗಿ ಹಿಂದೂಗಳಾಗಿರಬೇಕು. ಅದರ ಜೊತೆಗೆ ನಿತ್ಯಾನಂದನ ಅನುಯಾಯಿಗಳಾಗಿರಬೇಕು. ಕೇವಲ ನಿತ್ಯಾನಂದನ ಅನುಯಾಯಿ ಆದರೊಂದೇ ಸಾಕಾಗುವುದಿಲ್ಲ. ಅವರ ಬೋಧನೆಗಳ ಮೂಲಕವೇ ಜೀವನವನ್ನು ಮುನ್ನಡೆಸಬೇಕು ಎನ್ನುವುದು ಕೈಲಾಸದ ಬಹುಮುಖ್ಯ ನಿಯಮವಾಗಿದೆ.

    ಪ್ರಧಾನಿಯ ಅನುಮತಿ ಬೇಕಂತೆ!: ಈ ಮೇಲೆ ತಿಳಿಸಲಾದ ನಿಯಮಗಳ ಜೊತೆಗೆ ನಿತ್ಯಾನಂದನ ಕೈಲಾಸ ಗಣರಾಜ್ಯಕ್ಕೆ ಪಾಸ್‍ಪೋರ್ಟ್ ಹಾಗೂ ಪ್ರವೇಶವನ್ನು ಪಡೆಯಲು ಇನ್ನೂ ನಿಯಮಗಳು ಬಾಕಿಯಿದೆ. ಅವುಗಳನ್ನೆಲ್ಲ ಪಾಲಿಸಿದ ನಂತರ ಅಲ್ಲಿನ ಪ್ರಧಾನಿಯ ಅನುಮತಿ ಪಡೆದರೇ ಮಾತ್ರ ಕೈಲಾಸದ ಪ್ರವೇಶವನ್ನು ಪಡೆಯಬಹುದಾಗಿದೆ. ಇದರ ಜೊತೆಗೆ ಪ್ರವೇಶಕ್ಕೆ ಕೈಲಾಸದ ಕ್ಯಾಬಿನೆಟ್ ಒಪ್ಪಿಗೆಯನ್ನು ಪಡೆಯುವುದು ಕಡ್ಡಾಯವಾಗಿದೆ.

    ಕೈಲಾಸ ಯಾವ ದೇಶ ಗೊತ್ತಾ?: www.kailaasa.org ಹೆಸರಿನಲ್ಲಿ ಪ್ರತ್ಯೇಕ ವೆಬ್‍ಸೈಟ್ ಅನ್ನು ತೆರೆಯಲಾಗಿದ್ದು, ಅದರಲ್ಲಿ ಕೈಲಾಸದ ಕುರಿತು ವಿವರಿಸಲಾಗಿದೆ. ಕೈಲಾಸ ಒಂದು ರಾಜಕೀಯೇತರ ದೇಶವಾಗಿದ್ದು, ಎಲ್ಲ ಮಾನವರು ಪ್ರಬುದ್ಧರಾಗಿ ಬದುಕುವುದು ಇದರ ಗುರಿಯಾಗಿದೆ. ಅಧಿಕೃತ ಹಿಂದೂ ಧರ್ಮದ ಆಧಾರದ ಮೇಲೆ ಪ್ರಬುದ್ಧ ನಾಗರಿಕತೆ ಸಂರಕ್ಷಣೆ, ಪುನರುಜ್ಜೀವನ ನಡೆಸುವುದು ಕೈಲಾಸದ ಉದ್ದೇಶವಾಗಿದೆ ಎಂದು ಬರೆದುಕೊಂಡಿದ್ದಾರೆ.

    ನಿತ್ಯಾನಂದನ ರಾಷ್ಟ್ರಕ್ಕೆ ಹಣ ಎಲ್ಲಿಂದ ಬರುತ್ತೆ? : ನಿತ್ಯಾನಂದ ತನ್ನ ದೇಶಕ್ಕಾಗಿ ಪ್ರತ್ಯೇಕ ಕರೆನ್ಸಿಯೊಂದೇ ಅಲ್ಲದೇ ಪ್ರತ್ಯೇಕ ರಿಸರ್ವ್ ಬ್ಯಾಂಕ್ ಅನ್ನು ಸೃಷ್ಟಿಸಿದ್ದಾನೆ. ಇದಕ್ಕೆ ‘ಹಿಂದೂ ರಿಸರ್ವ್ ಬ್ಯಾಂಕ್’ ಎಂದು ಹೆಸರಿಟ್ಟಿದ್ದಾನೆ. ಅಷ್ಟೇ ಅಲ್ಲದೇ ತನ್ನ ದೇಶವು ಧಾರ್ಮಿಕ ಆರ್ಥಿಕತೆಯ ಮೂಲಕ ಮುನ್ನಡೆಯುತ್ತಿದೆ ಎಂದು ಹೇಳಿಕೊಂಡಿದ್ದಾನೆ. ಈ ಹಿಂದೂ ರಿಸರ್ವ್ ಬ್ಯಾಂಕ್‍ಗೆ ದೇಣಿಗೆಗಳನ್ನು ನೀಡಲೆಂದೇ ವೆಬ್‍ಸೈಟ್ ಅನ್ನು ತೆರೆಯಲಾಗಿದೆ.

    ಕೈಲಾಸಕ್ಕೂ ಅಮೆರಿಕಗೂ ಇದೆಯಾ ನಂಟು? : ನಿತ್ಯಾನಂದನ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸವು ಅಮೆರಿಕದ 30ಕ್ಕೂ ಹೆಚ್ಚು ನಗರಗಳ ಜೊತೆ ಸ್ನೇಹಪೂರ್ವಕವಾಗಿ ಸೇರಿರುವ ನಗರಗಳೆಂಬ ಒಪ್ಪಂದವನ್ನು ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ನ್ಯೂಜೆರ್ಸಿಯ ನೆವಾರ್ಕ್ ನಗರ ನಿತ್ಯಾನಂದನ ನಕಲಿ ರಾಷ್ಟ್ರದೊಂದಿಗೆ ಸಿಸ್ಟರ್ ಸಿಟಿ ಒಪ್ಪಂದವನ್ನು ರದ್ದುಗೊಳಿಸಿದೆ. ಇದಾದ ಬಳಿಕ ಅಮೆರಿಕದ ರಿಚ್ಮಂಡ್, ವರ್ಜೀನಿಯಾ, ಡೇಟನ್, ಬಹಿಯೊ, ಬುಯೆನಾ ಪಾರ್ಕ್, ಫ್ಲೋರಿಡಾ ಮುಂತಾದ ನಗರಾಡಳಿತಗಳು ಕೈಲಾಸದೊಂದಿಗೆ ಒಪ್ಪಂದ ಮಾಡಿಕೊಂಡು ತಾವೂ ಕೈಲಾಸದ ಭಾಗವಾಗಿರುವುದಾಗಿ ಹಾಗೂ ಉಪನಗರಗಳ ಮಾದರಿಯಲ್ಲಿ ಇರುವುದಾಗಿ ಘೋಷಿಸಿಕೊಂಡಿದೆ. ಇದನ್ನೂ ಓದಿ: PublicTV Explainer: ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ರೋಗ ಯಾವುದು ಗೊತ್ತಾ?

    ನೆವಾರ್ಕ್ ಹಾಗೂ ಕೈಲಾಸ ನಡುವಿನ ಸಿಸ್ಟರ್ ಸಿಟಿ ಒಪ್ಪಂದಕ್ಕೆ ಈ ವರ್ಷ ಜನವರಿ 12 ರಂದು ಸಹಿ ಹಾಕಲಾಗಿತ್ತು. ಈ ಒಪ್ಪಂದದ ಸಮಾರಂಭವನ್ನು ಕೂಡಾ ನೆವಾರ್ಕ್ ನ ಸಿಟಿ ಹಾಲ್‍ನಲ್ಲಿ ನಡೆಸಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಅಮೆರಿಕದ ಫಾಕ್ಸ್ ನ್ಯೂಸ್ ಸಂಸ್ಥೆ ತನಿಖಾ ವರದಿಯೊಂದನ್ನು ಸಿದ್ಧಪಡಿಸಿದ್ದು, ಅದರಲ್ಲಿ ನಿತ್ಯಾನಂದ ಎಂಬ ನಕಲಿ ಸ್ವಾಮೀಜಿ ವಾಸ್ತವದಲ್ಲಿ ಅಸ್ತಿತ್ವದಲ್ಲಿಯೇ ಇಲ್ಲದ ಕೇವಲ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳಬಹುದಾದಂತಹ ದೇಶವೊಂದನ್ನು ಸೃಷ್ಟಿಸಿದ್ದಾನೆ. ಅದಕ್ಕೆ ಕೈಲಾಸ ಎಂಬ ಹೆಸರು ಕೂಡಾ ಇಟ್ಟಿದ್ದಾನೆ. ಆ ದೇಶಕ್ಕೆ ಕರೆನ್ಸಿ, ಪಾಸ್‍ಪೋರ್ಟ್, ರಾಷ್ಟ್ರ ಲಾಂಛನ ಎಲ್ಲವೂ ಇರುವುದಾಗಿ ಘೋಷಿಸಿದ್ದಾನೆ. ಇಂತಹ ನಕಲಿ ಗುರುವಿನ ಜೊತೆ ಅಮೆರಿಕದ ಈ ಮಹಾನಗರಗಳು ಒಪ್ಪಂದ ಮಾಡಿಕೊಂಡಿರುವುದು ಹಾಸ್ಯಾಸ್ಪದ, ಇದು ತನಿಖೆಗೆ ಅರ್ಹವಾದ ವಿಚಾರ ಎಂದು ತಿಳಿಸಿದೆ. ಈ ತನಿಖಾ ವರದಿ ಪ್ರಕಟಗೊಳ್ಳುತ್ತಲೇ ನ್ಯೂಜೆರ್ಸಿ ನಗರ ಕೈಲಾಸದೊಂದಿಗೆ ಮಾಡಿಕೊಂಡಿದ್ದ ಸಿಸ್ಟರ್ ಸಿಟಿ ಒಪ್ಪಂದವನ್ನು ರದ್ದುಗೊಳಿಸಿದೆ. ಇದನ್ನೂ ಓದಿ: PublicTV Explainer: ತೃತೀಯಲಿಂಗಿಗಳು, ಸಲಿಂಗಕಾಮಿಗಳು ರಕ್ತದಾನ ಮಾಡುವಂತಿಲ್ಲ – ಯಾಕೆ ಗೊತ್ತಾ?

  • ನಮ್ಮ ಕೈಲಾಸ ಗಡಿಯಿಲ್ಲದ ದೇಶ – ನಿತ್ಯಾನಂದ

    ನಮ್ಮ ಕೈಲಾಸ ಗಡಿಯಿಲ್ಲದ ದೇಶ – ನಿತ್ಯಾನಂದ

    ನವದೆಹಲಿ: ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸವು ಗಡಿರಹಿತ ಸೇವಾ ಆಧಾರಿತ ರಾಷ್ಟ್ರ ಎಂದು ಸ್ವಯಂಘೋಷಿತ ದೇವಮಾನವ ನಿತ್ಯಾನಂದ (Nithyananda) ತಿಳಿಸಿದ್ದಾರೆ.

    ಕೈಲಾಸವು ಬಹು ಘಟಕಗಳು, ಎನ್‌ಜಿಓಗಳು, ದೇವಾಲಯಗಳು ಮತ್ತು ಬಹುದೇಶಗಳಲ್ಲಿನ ಮಠಗಳ ಮೂಲಕ ಕಾರ್ಯನಿರ್ವಹಿಸುತ್ತದೆ ಎಂದು ದಿ ವಾಷಿಂಗ್ಟನ್ ಪೋಸ್ಟ್‌ನ ಮಾರ್ನಿಂಗ್ ಮಿಕ್ಸ್ ಸಿಬ್ಬಂದಿ ಬರಹಗಾರರ ಪ್ರಶ್ನೆಗೆ ನಿತ್ಯಾನಂದ ಇಮೇಲ್ (Email)  ಮೂಲಕ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಹಿಂದೂ ಹೆಣ್ಣುಮಕ್ಕಳನ್ನು ಅವಮಾನಿಸಿದ್ರೆ ಕೈ ಕತ್ತರಿಸುತ್ತೇವೆ – ಕೇಂದ್ರ ಸಚಿವ ಚೌಬೆ ವಿವಾದಾತ್ಮಕ ಹೇಳಿಕೆ 

    ನಿಮ್ಮ ರಾಷ್ಟ್ರವು ಹೇಗೆ ಕಾರ್ಯನಿರ್ವಹಿಸುತ್ತದೆ? ನಿಮ್ಮ ರಾಷ್ಟ್ರಕ್ಕೆ ಚುನಾವಣೆಗಳಿವಿಯೆ? ಅಲ್ಲಿನ ಪ್ರಜೆಗಳಿಗೆ ಪಾಸ್‌ಪೋರ್ಟ್, ಜನನ ಪ್ರಮಾಣಪತ್ರ ಸೇರಿದಂತೆ ಏನಾದರೂ ದಾಖಲೆಗಳಿವೆಯಾ ಎಂಬ ಪ್ರಶ್ನೆಗಳಿಗೆ ನಿತ್ಯಾನಂದರ ಪತ್ರಿಕಾ ಕಚೇರಿಯು (Press Office) ವಿಡಿಯೋ ಮೂಲಕ ಉತ್ತರ ನೀಡಿದೆ. ಅಲ್ಲದೇ ಇದರ ಮಾಹಿತಿಯನ್ನು ನಿತ್ಯಾನಂದರ ಟ್ವಿಟ್ಟರ್ (Twitter) ಖಾತೆಯಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: 5 ವರ್ಷದಲ್ಲಿ ಎನ್‍ಜಿಓಗಳಿಗೆ 89,000 ಕೋಟಿ ರೂ. ವಿದೇಶಿ ನಿಧಿ- ಕರ್ನಾಟಕಕ್ಕೆ 2ನೇ ಸ್ಥಾನ 

    ನಾವು ಪ್ರಾಚೀನ ಪ್ರಬುದ್ಧ ಹಿಂದೂ ನಾಗರಿಕತೆಯ ರಾಷ್ಟ್ರದ ಪುನರುಜ್ಜೀವನವಾಗಿದ್ದೇವೆ. ವಿಶ್ವಸಂಸ್ಥೆಯಿಂದ (UNO) ಗುರುತಿಸಲ್ಪಟ್ಟ ಎನ್‌ಜಿಓಗಳ ಮೂಲಕ ಪ್ರಪಂಚದಾದ್ಯಂತ ಅನೇಕ ದೇಶಗಳಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ. ಇದನ್ನು ಸಾರ್ವಭೌಮ ಆದೇಶವನ್ನು ಹೊಂದಿರುವ ಮಾಲ್ಟಾ (Malta) ದೇಶದಲ್ಲಿ ಸ್ಥಾಪಿಸಲಾಗಿದೆ. ಇದು ಗಡಿರಹಿತ ಸೇವಾ ಕೇಂದ್ರಿತ ರಾಷ್ಟ್ರ. ಇದನ್ನು ನಿತ್ಯಾನಂದರು ಸ್ಥಾಪಿಸಿದರು ಎಂದು ಪತ್ರಿಕಾ ಕಚೇರಿಯು ತಿಳಿಸಿದೆ. ಇದನ್ನೂ ಓದಿ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ 

    ಅತ್ಯಾಚಾರ ಪ್ರಕರಣಗಳ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಓಡಿಹೋಗಿದ್ದಾನೆ ಎಂದು ಟೀಕಿಸಲಾಗಿದೆ. ಈ ಆರೋಪಗಳೆಲ್ಲವೂ ಸುಳ್ಳು. ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರು ನಿರಪರಾಧಿ ಎಂದು ಕ್ಯಾಲಿಫೋರ್ನಿಯಾದ (California) ನ್ಯಾಯಾಲಯದಲ್ಲಿ ಎಪ್ರಿಲ್ 4, 2013ರಲ್ಲಿ ಸಾಬೀತಾಯಿತು. ಅಲ್ಲದೇ ನ್ಯಾಯಾಲಯವು ಸುಳ್ಳು ಸಾಕ್ಷಿದಾರರಿಗೆ ಅರ್ಧ ಮಿಲಿಯನ್ ಡಾಲರ್ ದಂಡವನ್ನು ವಿಧಿಸಿತು ಎಂದು ಪತ್ರಿಕಾ ಕಚೇರಿಯು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ತರಬೇತಿ ವಿಮಾನ ಪತನ – ಮಹಿಳಾ ಪೈಲಟ್‌, ಮಾರ್ಗದರ್ಶಿ ಸಾವು

  • ಸಿಸ್ಟರ್ ಸಿಟಿ ಹಗರಣ – ನಿತ್ಯಾನಂದನ ನಕಲಿ ದೇಶದೊಂದಿಗೆ ಅಮೆರಿಕದ 30 ನಗರಗಳು ಒಪ್ಪಂದ!

    ಸಿಸ್ಟರ್ ಸಿಟಿ ಹಗರಣ – ನಿತ್ಯಾನಂದನ ನಕಲಿ ದೇಶದೊಂದಿಗೆ ಅಮೆರಿಕದ 30 ನಗರಗಳು ಒಪ್ಪಂದ!

    ವಾಷಿಂಗ್ಟನ್: ಸ್ವಯಂ ಘೋಷಿತ ದೇವಮಾನವ ಹಾಗೂ ಭಾರತದಿಂದ ಪಲಾಯನಗೈದ ನಿತ್ಯಾನಂದನ (Nithyananda) ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ (United States of Kailasa) ಅಮೆರಿಕದ (America) 30 ಕ್ಕೂ ಹೆಚ್ಚು ನಗರಗಳ ಜೊತೆ ಸ್ನೇಹಪೂರ್ವಕವಾಗಿ ಸೇರಿರುವ ನಗರಗಳೆಂಬ ಒಪ್ಪಂದವನ್ನು ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

    ನ್ಯೂಜೆರ್ಸಿಯ ನೆವಾರ್ಕ್ ನಗರ ನಿತ್ಯಾನಂದನ ನಕಲಿ ರಾಷ್ಟ್ರದೊಂದಿಗೆ ಸಿಸ್ಟರ್ ಸಿಟಿ (Sister City) ಒಪ್ಪಂದವನ್ನು ರದ್ದುಗೊಳಿಸಿದೆ. ಇದಾದ ಬಳಿಕ ಅಮೆರಿಕದ ರಿಚ್ಮಂಡ್, ವರ್ಜೀನಿಯಾ, ಡೇಟನ್, ಬಹಿಯೊ, ಬುಯೆನಾ ಪಾರ್ಕ್, ಫ್ಲೋರಿಡಾ ಮುಂತಾದ ನಗರಾಡಳಿತಗಳು ಕೈಲಾಸದೊಂದಿಗೆ ಒಪ್ಪಂದ ಮಾಡಿಕೊಂಡು ತಾವೂ ಕೈಲಾಸದ ಭಾಗವಾಗಿರುವುದಾಗಿ ಹಾಗೂ ಉಪನಗರಗಳ ಮಾದರಿಯಲ್ಲಿ ಇರುವುದಾಗಿ ಘೋಷಿಸಿಕೊಂಡಿದೆ.

     

    ನೆವಾರ್ಕ್ ಹಾಗೂ ಕೈಲಾಸ ನಡುವಿನ ಸಿಸ್ಟರ್ ಸಿಟಿ ಒಪ್ಪಂದಕ್ಕೆ ಈ ವರ್ಷ ಜನವರಿ 12 ರಂದು ಸಹಿ ಹಾಕಲಾಗಿತ್ತು. ಈ ಒಪ್ಪಂದದ ಸಮಾರಂಭವನ್ನು ಕೂಡಾ ನೆವಾರ್ಕ್‌ನ ಸಿಟಿ ಹಾಲ್‌ನಲ್ಲಿ ನಡೆಸಲಾಗಿತ್ತು. ಇದನ್ನೂ ಓದಿ: ಭದ್ರತಾ ಪಡೆಯಿಂದ ಉಗ್ರರ ಮೇಲೆ ಗುಂಡಿನ ದಾಳಿ

    ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಅಮೆರಿಕದ ಫಾಕ್ಸ್ ನ್ಯೂಸ್ ಸಂಸ್ಥೆ ತನಿಖಾ ವರದಿಯೊಂದನ್ನು ಸಿದ್ಧಪಡಿಸಿದ್ದು, ಅದರಲ್ಲಿ ನಿತ್ಯಾನಂದ ಎಂಬ ನಕಲಿ ಸ್ವಾಮೀಜಿ ವಾಸ್ತವದಲ್ಲಿ ಅಸ್ತಿತ್ವದಲ್ಲಿಯೇ ಇಲ್ಲದ ಕೇವಲ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳಬಹುದಾದಂತಹ ದೇಶವೊಂದನ್ನು ಸೃಷ್ಟಿಸಿದ್ದಾನೆ. ಅದಕ್ಕೆ ಕೈಲಾಸ ಎಂಬ ಹೆಸರು ಕೂಡಾ ಇಟ್ಟಿದ್ದಾನೆ. ಆ ದೇಶಕ್ಕೆ ಕರೆನ್ಸಿ, ಪಾಸ್‌ಪೋರ್ಟ್, ರಾಷ್ಟ್ರ ಲಾಂಛನ ಎಲ್ಲವೂ ಇರುವುದಾಗಿ ಘೋಷಿಸಿದ್ದಾನೆ. ಇಂತಹ ನಕಲಿ ಗುರುವಿನ ಜೊತೆ ಅಮೆರಿಕದ ಈ ಮಹಾನಗರಗಳು ಒಪ್ಪಂದ ಮಾಡಿಕೊಂಡಿರುವುದು ಹಾಸ್ಯಾಸ್ಪದ, ಇದು ತನಿಖೆಗೆ ಅರ್ಹವಾದ ವಿಚಾರ ಎಂದು ತಿಳಿಸಿದೆ.

    ಈ ತನಿಖಾ ವರದಿ ಪ್ರಕಟಗೊಳ್ಳುತ್ತಲೇ ನ್ಯೂಜೆರ್ಸಿ ನಗರ ಕೈಲಾಸದೊಂದಿಗೆ ಮಾಡಿಕೊಂಡಿದ್ದ ಸಿಸ್ಟರ್ ಸಿಟಿ ಒಪ್ಪಂದವನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಚಿತ್ರ : ಫಿಲ್ಮ್ ಚೇಂಬರ್ ಗೆ ಪತ್ರ ಬರೆದ ಒಕ್ಕಲಿಗರ ಸಂಘ

  • ನಿತ್ಯಾನಂದನಿಗೆ ಭಾರತದಲ್ಲಿರೋ ಹಿಂದೂ ವಿರೋಧಿಗಳಿಂದ ಕಿರುಕುಳ- ಕ್ರಮಕ್ಕೆ ಶಿಷ್ಯೆ ಒತ್ತಾಯ

    ನಿತ್ಯಾನಂದನಿಗೆ ಭಾರತದಲ್ಲಿರೋ ಹಿಂದೂ ವಿರೋಧಿಗಳಿಂದ ಕಿರುಕುಳ- ಕ್ರಮಕ್ಕೆ ಶಿಷ್ಯೆ ಒತ್ತಾಯ

    ಬರ್ರೆನ್: ನಿತ್ಯಾನಂದನಿಗೆ (Nithyananda) ಭಾರತದಿಂದ ಕಿರುಕುಳ ನೀಡುತ್ತಿಲ್ಲ. ಆದ್ರೆ ಭಾರತದಲ್ಲಿರುವ ಕೆಲವು ಹಿಂದೂ ವಿರೋಧಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕೈಲಾಸ ಯುನೈಟೆಡ್ ಸ್ಟೇಟ್ಸ್‌ನ (United States Of Kailasa) ಶಾಶ್ವತ ರಾಯಭಾರಿ ವಿಜಯಾಪ್ರಿಯಾ ನಿತ್ಯಾನಂದ (Vijayapriya Nithyananda) ಸ್ಪಷ್ಟನೆ ನೀಡಿದ್ದಾರೆ.

    ಇತ್ತೀಚೆಗೆ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ (UN) ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (CRSR) ಮಹಾಸಭೆಯಲ್ಲಿ ಸ್ವಯಂಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಶಿಷ್ಯೆ ಭಾಗವಹಿಸಿದ್ದರು ಎಂದು ಹೇಳಲಾಗಿತ್ತು. ಈ ಸಭೆಯಲ್ಲಿ ನಿತ್ಯಾನಂದಗೆ ತನ್ನ ಜನ್ಮಸ್ಥಳದಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದರು. ಈ ಕುರಿತು ಸ್ಪಷ್ಟನೆ ನೀಡಿರುವ ನಿತ್ಯಾನಂದನ ಶಿಷ್ಯೆ, ಹಿಂದೂ ವಿರೋಧಿಗಳ ವಿರುದ್ಧ ಕ್ರಮಕ್ಕೆ ಅಗ್ರಹಿಸಿದ್ದಾರೆ.

    ಫೆಬ್ರವರಿ 24 ರಂದು ನಡೆದ ಮಹಾಸಭೆಯಲ್ಲಿ ನೀಡಿದ್ದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಿತ್ಯಾನಂದ ತಮ್ಮ ಜನ್ಮಸ್ಥಳದಲ್ಲಿ ಕೆಲವು ಹಿಂದೂ ವಿರೋಧಿಗಳಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ನಾನು ಹೇಳಿದ್ದೆ. ಕೈಲಾಸ ಯುನೈಟೆಡ್ ಸ್ಟೇಟ್ಸ್ ಭಾರತವನ್ನು ಉನ್ನತ ಗೌರವದಿಂದಲೇ ಕಾಣುತ್ತದೆ. ಈಗಲೂ ಭಾರತವನ್ನು ಗುರುಪೀಠವೆಂದೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ – ಭಾರತೀಯ ಮೂಲದ ವಿದ್ಯಾರ್ಥಿನಿ ಸಾವು

    ನಮ್ಮ ಕಳಕಳಿ ಏನಿದ್ದರೂ ಹಿಂದೂ ವಿರೋಧಿ ಅಂಶಗಳ ಕಡೆಗೆ ಮಾತ್ರ ಕೇಂದ್ರೀಕೃತವಾಗಿದೆ. ಹಿಂದೂ ಧರ್ಮ ಮತ್ತು ಕೈಲಾಸದ ಪರಮೋಚ್ಚ ಮಠಾಧೀಶರ ವಿರುದ್ಧ ಹಿಂಸಾಚಾರ ಮುಂದುವರೆಸುವ ಇಂತಹ ಅಂಶಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಾವು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.

    Vijayapriya Nithyananda

    ನಿತ್ಯಾನಂದನ ಶಿಷ್ಯೆ ಹೇಳಿದ್ದೇನು?: ಜಿನಿವಾದಲ್ಲಿ ಈಚೆಗೆ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (ಸಿಇಎಸ್‌ಆರ್) ಮಹಾಸಭೆಯಲ್ಲಿ ವಿಶ್ವಸಂಸ್ಥೆಯ ಖಾಯಂ ರಾಯಭಾರಿ ಎಂದು ಹೇಳಿರುವ ವಿಜಯಪ್ರಿಯಾ, ನಿತ್ಯಾನಂದ ತನ್ನ ಜನ್ಮಸ್ಥಳವಾದ ಭಾರತ ದೇಶದಿಂದ ಹಿಂಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: `ಕೈಲಾಸ’ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ- UN ಮಹಾಸಭೆಯಲ್ಲಿ ನಿತ್ಯಾನಂದ ಶಿಷ್ಯೆ ಪ್ರತಿಪಾದನೆ

    Kailasa

    ಕೈಲಾಸ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ. ಅದನ್ನು ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶ (ಸುಪ್ರೀಂ ಪಾಂಟಿಫ್ ಆಫ್ ಹಿಂದೂಯಿಸಂ – ಎಸ್‌ಪಿಹೆಚ್) ನಿತ್ಯಾನಂದ ಪರಮಶಿವಂ ಸ್ಥಾಪಿಸಿದ್ದಾರೆ. ಅವರು ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿಶೈವ, ಸ್ಥಳೀಯ ಬುಡಕಟ್ಟು ಸೇರಿ ಹಿಂದೂ ಧರ್ಮದ 10 ಸಾವಿರ ಸಂಪ್ರದಾಯಗಳನ್ನ ಪುನರುಜ್ಜೀವನಗೊಳಿಸಿದ್ದಾರೆ. ಕೈಲಾಸ ಸುಸ್ಥಿರ ಅಭಿವೃದ್ಧಿಯೊಂದಿಗೆ ಯಶಸ್ವಿಯಾಗಿದೆ ಎಂದು ಪ್ರತಿಪಾದಿಸಿದ್ದರು.

    Nithyananda

    ನಾನಾ ದೇಶಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಹಿಂಸೆಗಳು, ಪುರುಷ ಪ್ರಧಾನ ಸಮಾಜಗಳಲ್ಲಿ ಒಳಗಾಗುತ್ತಿರುವ ಅಪಮಾನಗಳ ಬಗ್ಗೆ ಪ್ರತಿಪಾದಿಸಿದ್ದಾರೆ. ಜಗತ್ತಿನಲ್ಲಿ ಶೇ.82ರಷ್ಟು ಮಹಿಳೆಯರು ಪದೇ ಪದೇ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರಶ್ನಿಸಿದ್ದಕ್ಕಾಗಿ ಶೇ. 42ರಷ್ಟು ಮಹಿಳೆಯರು, ಅತ್ಯಾಚಾರ ಸೇರಿದಂತೆ ಅನೇಕ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು.

  • ನಿತ್ಯಾನಂದನ ದೇಶದಲ್ಲಿ ಉದ್ಯೋಗವಕಾಶ- ಹಣವಿಲ್ಲದಿದ್ರೂ ಕೈಲಾಸಕ್ಕೆ ಹೋದ್ರೆ ಕೈತುಂಬಾ ಸಂಬಳ

    ನಿತ್ಯಾನಂದನ ದೇಶದಲ್ಲಿ ಉದ್ಯೋಗವಕಾಶ- ಹಣವಿಲ್ಲದಿದ್ರೂ ಕೈಲಾಸಕ್ಕೆ ಹೋದ್ರೆ ಕೈತುಂಬಾ ಸಂಬಳ

    ಕೈಲಾಸ: ವಿವಾದಿತ ಸ್ವಯಂಘೋಷಿತ ಸ್ವಾಮೀಜಿ ನಿತ್ಯಾನಂದ (Nithyananda) ಮತ್ತೆ ಸುದ್ದಿಯಲ್ಲಿದ್ದಾರೆ. ಸದಾ ವಿವಾದಗಳಿಂದ ಸುದ್ದಿಯಾಗುತ್ತಿದ್ದ ನಿತ್ಯಾನಂದ ಇದೀಗ ಕೈಲಾಸ ದೇಶದಲ್ಲಿ ಭಾರೀ ಉದ್ಯೋಗಾವಕಾಶವಿದೆ (Job) ಎಂದು ಹೇಳುತ್ತಿದ್ದಾರೆ.

    ಹೌದು.. ಹಿರಿಯರು ಕಾಸಿದ್ರೆ ಕೈಲಾಸ (Kailasa) ಎನ್ನುತ್ತಿದ್ದರು. ಆದರೆ ನಿತ್ಯಾನಂದ ಹಣ ಇಲ್ಲದಿದ್ದರೂ ಕೈಲಾಸಕ್ಕೆ ಕರೆ ಮಾಡಿ, ಕೈತುಂಬಾ ಹಣ ಬರುವ ಕೆಲಸ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ನಿತ್ಯಾನಂದನೇ ನಿರ್ಮಿಸಿರುವ ಕೈಲಾಸ ದೇಶದಲ್ಲಿ ಸಾಕಷ್ಟು ಉದ್ಯೋಗವಕಾಶಗಳಿವೆಯಂತೆ. ವಿವಿಧ ರೀತಿಯ ಉದ್ಯೋಗಗಳಿವೆ. ಅರ್ಹ ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉದ್ಯೋಗಕ್ಕೆ ಸೇರುವವರಿಗೂ ಉದ್ಯೋಗದ ಜೊತೆಗೆ ಆಕರ್ಷಕ ವೇತನ, ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುವುದು ಎಂದು ಕೈಲಾಸದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಕೇವಲ ನಿತ್ಯಾನಂದ ಕಟ್ಟಿಕೊಂಡ ಕೈಲಸ ದೇಶದಲ್ಲೊಂದೇ ಅಲ್ಲ, ಭಾರತದ ವಿವಿಧ ಕೈಲಾಸ ಶಾಖೆಗಳು ಉತ್ತಮ ಸಂಬಳದೊಂದಿಗೆ ಉದ್ಯೋಗಗಳನ್ನು ಒದಗಿಸುತ್ತಿವೆ. ಸೂಕ್ತ ವೇತನದೊಂದಿಗೆ ಕೈಲಾಸದ ಭಾರತೀಯ ಶಾಖೆಯಲ್ಲಿ 1 ವರ್ಷದ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಉದ್ಯೋಗಿಗಳು ಕೈಲಾಶ್-ಸಂಯೋಜಿತ ಕಂಪನಿಗಳಲ್ಲಿ ಕೆಲಸ ಮಾಡಲು ವಿದೇಶಕ್ಕೆ ಹೋಗಬಹುದು ಎಂದು ಪ್ರಕಟಣೆ ತಿಳಿಸಿದೆ.

    ನಿತ್ಯಾನಂದ ಹಿಂದೂ ವಿಶ್ವವಿದ್ಯಾನಿಲಯ, ಸಾಗರೋತ್ತರ ದೇವಾಲಯಗಳು, ಭಾರತದಲ್ಲಿನ ಕೈಲಾಸ ದೇವಾಲಯಗಳು, ಕೈಲಾಸ ಐಟಿ ಇಲಾಖೆ, ಕೈಲಾಸ ವಿದೇಶಿ ರಾಯಭಾರ ಕಚೇರಿ, ಕೊಳಾಯಿ ಮತ್ತು ಎಲೆಕ್ಟ್ರಿಕಲ್ ಘಟಕ, ಗ್ರಂಥಾಲಯವು ಅನೇಕ ಸ್ಥಳಗಳಲ್ಲಿ ಖಾಲಿಯಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಭಾರತದ ವಿವಿಧ ಶಾಖೆಗಳಲ್ಲಿ ಒಂದು ವರ್ಷ ತರಬೇತಿ ನೀಡಲಾಗುತ್ತದೆ. ಬಳಿಕ ಊಟ, ವಸತಿ, ವೈದ್ಯಕೀಯ ವೆಚ್ಚವನ್ನು ಉಚಿತವಾಗಿ ನೀಡಿ ಕೈಲಾಸದಲ್ಲಿ ಉದ್ಯೋಗ ನೀಡಲಾಗುತ್ತದೆ. ಆಸಕ್ತರು ಸಂಪರ್ಕಿಸುವಂತೆ ತಿಳಿಸಿದೆ. ಇದನ್ನೂ ಓದಿ: ಕೇಸರಿ ಕಂಡರೆ ಕಾಂಗ್ರೆಸ್‌ಗೆ ಅಲರ್ಜಿ ಯಾಕೆ?- ವಿವೇಕ ಯೋಜನೆ ಸಮರ್ಥನೆ ಮಾಡಿಕೊಂಡ ಸಿಎಂ ಬೊಮ್ಮಾಯಿ

    ಕೆಲ ದಿನಗಳ ಹಿಂದೆಯಷ್ಟೇ ನಿತ್ಯಾನಂದ ತೀವ್ರ ಅಸ್ವಸ್ಥರಾಗಿದ್ದರು ಎಂದು ಹೇಳಲಾಗಿತ್ತು. ಈತ ಶ್ರೀಲಂಕಾದಲ್ಲಿ ವೈದ್ಯಕೀಯ ಆಶ್ರಯ ಪಡೆದಿದ್ದ ಎನ್ನಲಾಗಿದೆ. ನಿತ್ಯಾನಂದ ಸ್ವಾಮಿ ಅವರ ಆರೋಗ್ಯ ಹದಗೆಟ್ಟಿದ್ದು, ಪ್ರಾಣಕ್ಕೆ ಅಪಾಯವಿದೆ ಎಂದು ಶ್ರೀಲಂಕಾಕ್ಕೆ ತೆರಳಿದ್ದರು ಎಂದು ಹೇಳಲಾಗಿತ್ತು. ಇದನ್ನೂ ಓದಿ: ನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ: ಪ್ರತಾಪ್ ಸಿಂಹ

    Live Tv
    [brid partner=56869869 player=32851 video=960834 autoplay=true]

  • ಗರ್ಭಿಣಿಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ: ನಿತ್ಯಾನಂದನ ಕರೆಯೋಲೆ

    ಗರ್ಭಿಣಿಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ: ನಿತ್ಯಾನಂದನ ಕರೆಯೋಲೆ

    ಬೆಂಗಳೂರು: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ (Nithyananda) ಕೈಲಾಸ (Kailasa) ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ.

    ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ (Delivery) ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ. ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್‍ಎ (DNA) ದಯಪಾಲಿಸುವುದಾಗಿ ತಿಳಿಸಿದ್ದು, ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ಟಿಪ್ಪು ಎಕ್ಸ್‌ಪ್ರೆಸ್ ಇನ್ನುಮುಂದೆ ಒಡೆಯರ್ ಎಕ್ಸ್‌ಪ್ರೆಸ್ – ಶಿವಮೊಗ್ಗಕ್ಕೆ ಕುವೆಂಪು ಎಕ್ಸ್‌ಪ್ರೆಸ್

    ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್‌ಪೋರ್ಟ್‌ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ. ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್‍ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ.

    ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ. ಇದನ್ನೂ ಓದಿ: ಕದ್ದು ಮುಚ್ಚಿ ಮಾಲ್ಡೀವ್ಸ್‌ಗೆ ಹಾರಿದ ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ

    ಕೈಲಾಸ ಎಲ್ಲಿದೆ?
    ಕೈಲಾಸ ಎಲ್ಲಿದೆ ಎಂಬುದು ನಿಖರವಾಗಿ ತಿಳಿದಿಲ್ಲ. ಆದರೆ ಮಾಧ್ಯಮಗಳ ಪ್ರಕಾರ ದಕ್ಷಿಣ ಅಮೆರಿಕದ ಈಕ್ವೆಡಾರ್‌ನ ಸಮುದ್ರದ ಮಧ್ಯದಲ್ಲಿರುವ ಪುಟ್ಟ ದ್ವೀಪವನ್ನು ನಿತ್ಯಾನಂದ ಖರೀದಿಸಿ ಅದಕ್ಕೆ ಕೈಲಾಸ ಎಂದು ನಾಮಕರಣ ಮಾಡಿದ್ದಾನೆ ಎನ್ನಲಾಗುತ್ತಿದೆ. ಆದರೆ ಈಕ್ವೆಡಾರ್ ಇದನ್ನು ಅಲ್ಲಗಳೆದಿದ್ದು, ಅಂತಹ ಯಾವುದೇ ವ್ಯಕ್ತಿಗೆ ದ್ವೀಪವನ್ನು ನೀಡಿಲ್ಲ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ನನಗೆ ತುರ್ತು ವೈದ್ಯಕೀಯ ನೆರವು ನೀಡಿ – ಲಂಕಾಗೆ ನಿತ್ಯಾನಂದ ಮನವಿ

    ನನಗೆ ತುರ್ತು ವೈದ್ಯಕೀಯ ನೆರವು ನೀಡಿ – ಲಂಕಾಗೆ ನಿತ್ಯಾನಂದ ಮನವಿ

    ಕೊಲಂಬೊ: ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಶ್ರೀಲಂಕಾದಿಂದ ವೈದ್ಯಕೀಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

    ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದ ತನಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಲಂಕಾ ಅಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯುಕೆ ಹಿಂದಿಕ್ಕಿ ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯ ದೇಶವಾಗಿ ಹೊರಹೊಮ್ಮಿದ ಭಾರತ

    ಕಳೆದ ಆಗಸ್ಟ್ 7ರಂದೇ ನಿತ್ಯಾನಂದ ಕೈಲಾಸ ಸಾರ್ವಭೌಮ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯದ ಕೊರೆತೆಯನ್ನು ಉಲ್ಲೇಖಿಸಿ ಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ನಾನು ಅಸ್ವಸ್ಥನಾಗಿದ್ದೇನೆ, ಜೀವಕ್ಕೆ ಅಪಾಯವಿದ್ದು, ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಕೋರಿದ್ದರು. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಗಲಾಟೆ – ಹಿಂದೂ ಯುವಕರಿಗೆ ಗಾಯ, ಮೂವರು ವಶಕ್ಕೆ

    ನಿತ್ಯಾನಂದ ಬರೆದ ಪತ್ರದಲ್ಲಿ ಏನಿತ್ತು?
    ಹಿಂದೂ ಧರ್ಮದ ಪರಮ ಪೀಠಾಧಿಪತಿ ಶ್ರೀ ನಿತ್ಯಾನಂದ ಪರಮಶಿವಂ ಅವರ ಆರೋಗ್ಯ ಸ್ಥಿತಿ ಏರುಪೇರಾಗಿದ್ದು, ತುರ್ತು ವೈದ್ಯಕೀಯ ಸೇವೆಗಳ ಅಗತ್ಯವಿದೆ. ಪ್ರಸ್ತುತ ಕೈಲಾಸದಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಖಾಲಿಯಾಗುತ್ತಿದ್ದು, ಆದ್ದರಿಂದ ಆರೋಗ್ಯ ಸ್ಥಿತಿಯನ್ನು ಸುಧಾರಿಸಲು ಇನ್ನಷ್ಟು ಮೂಲ ಸೌಕರ್ಯಗಳ ಅಗತ್ಯವಿದೆ. ನಿತ್ಯಾನಂದ ತೀವ್ರವಾಗಿ ಅಸ್ವಸ್ಥಗೊಂಡಿರುವುದರಿಂದ ವೈದ್ಯಕೀಯ ಚಿಕಿತ್ಸೆ ಅಗತ್ಯವಿದ್ದು, ಕೂಡಲೇ ಸಹಾಯ ಮಾಡುವಂತೆ ಪತ್ರ ಬರೆದಿದ್ದರು.

    ಹೂಡಿಕೆ ಮಾಡೋದಾಗಿ ಆಫರ್: ಅಲ್ಲದೇ ಈಕ್ವೆಡಾರ್ ದ್ವೀಪವೊಂದನ್ನು ಖರೀದಿಸಿ ಅಲ್ಲಿಯೇ ಕೈಲಾಸ ದೇಶ ನಿರ್ಮಿಸಿರುವ ನಿತ್ಯಾನಂದ ಇದೀಗ ಲಂಕಾ ಸರ್ಕಾರ ವೈದ್ಯಕೀಯ ನೆರವು ನೀಡಿವುದಾದರೇ ಅಲ್ಲಿಯೇ ಲಕ್ಷಾಂತರ ಮೌಲ್ಯದ ಡಾಲರ್ ಹೂಡಿಕೆ ಮಾಡುವುದಾಗಿ ಆಫರ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿತ್ಯಾನಂದನನ್ನ ಮದುವೆ ಆಗೋಕೆ ರೆಡಿ ಎಂದ ನಟಿ: ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ ಪ್ರಿಯಾ ಆನಂದ್

    ನಿತ್ಯಾನಂದನನ್ನ ಮದುವೆ ಆಗೋಕೆ ರೆಡಿ ಎಂದ ನಟಿ: ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ ಪ್ರಿಯಾ ಆನಂದ್

    ಲಯಾಳಂ ಸ್ಟಾರ್ ನಟಿ ಪುನೀತ್ ನಾಯಕಿ ಪ್ರಿಯಾ ಆನಂದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದು, ಅದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಮೆರಿಕಾದಲ್ಲಿ ಬೆಳೆದ ಈ ಚೆಲುವೆ ಬಹುಭಾಷಾ ನಟಿ ಎಂದೇ ಫೇಮಸ್ ಆಗಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರೊಂದಿಗೆ `ಜೇಮ್ಸ್’ ಸೇರಿದಂತೆ ಕನ್ನಡದ ಕೆಲ ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆಯೂ ಇವರದ್ದು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಪ್ರಿಯಾ ಆನಂದ್ ತಮ್ಮ ಮದುವೆಯ ಬಗ್ಗೆ ಕೆಲವು  ಮಾತುಗಳನ್ನು ಆಡಿದ್ದಾರೆ.

    ತಮ್ಮ ಮದುವೆ ಕುರಿತಂತೆ ಮಾತನಾಡಿರುವ ಪ್ರಿಯಾ, ದೇಶಬಿಟ್ಟು, ತಮ್ಮದೇ ದೇಶವೊಂದನ್ನು ನಿರ್ಮಿಸಿರುವ, ಬಿಡದಿಯ ನಿತ್ಯಾನಂದ ಸ್ವಾಮಿಯನ್ನು ಮದುವೆಯಾಗಲು ಬಯಸಿದ್ದೇನೆ ಎಂದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಿತ್ಯಾನಂದ ಸ್ವಾಮಿಯನ್ನು ಸಾವಿರಾರು ಭಕ್ತರು ಪೂಜಿಸುತ್ತಾರೆ. ನಾನು ಅವರನ್ನು ಮದುವೆಯಾದರೆ, ನಾನು ನನ್ನ ಹೆಸರನ್ನು ಸಹ ಬದಲಾಯಿಸಬೇಕಾಗಿಲ್ಲ ಎಂದಿದ್ದಾರೆ. ಈ ಹೇಳಿಕೆ ವೈರಲ್ ಆದ ಬೆನ್ನಲ್ಲೇ ಜೇಮ್ಸ್ ನಾಯಕಿ ಈ ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ನಿತ್ಯಾನಂದ ಸ್ವಾಮಿಯನ್ನು ಮದುವೆಯಾಗಲು ಬಯಸಿದ ‘ಜೇಮ್ಸ್’ ಚೆಲುವೆ ಪ್ರಿಯಾ ಆನಂದ್

    ನಾನು ಈ ಹೇಳಿಕೆ ನೀಡಿ ಒಂದು ವಾರ ಕಳೆದಿದೆ. ಆದರೆ, ನಾನು ಹೇಳಿಕೆ ನೀಡಿರುವುದು ಕೇವಲ ತಮಾಷೆಗಾಗಿ ಅಷ್ಟೇ ನಿತ್ಯಾನಂದ ಬಗ್ಗೆ ಮಾಡೋ ಟ್ರೋಲ್ಸ್, ಮಿಮ್ಸ್, ವಿಡಿಯೋಗಳು ನನಗೆ ತುಂಬಾ ಇಷ್ಟ. ನಾನು ಮದುವೆ ಆಗುತ್ತೀನಿ ಎಂದಿದ್ದು ಜಸ್ಟ್ ಕಾಮಿಡಿ ಎಂದು ಪ್ರಿಯಾ ಆನಂದ್ ಸ್ಪಷ್ಟನೆ ನೀಡಿದ್ದಾರೆ. ಇದನ್ನು ದೊಡ್ಡದು ಮಾಡೋ ಅಗತ್ಯವಿಲ್ಲ ಎಂದು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ – ಎಲ್ಲಿದ್ದಾರೆ ನಿತ್ಯಾನಂದ?

    ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ – ಎಲ್ಲಿದ್ದಾರೆ ನಿತ್ಯಾನಂದ?

    ಚೆನ್ನೈ: ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಸುದ್ದಿಯಾಗಿದ್ದ ನಿತ್ಯಾನಂದ ಕೆಲವು ದಿನಗಳ ಬಳಿಕ ಫೇಸ್‌ಬುಕ್ ಮೂಲಕ ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದರು. ಇದೀಗ ನಿತ್ಯಾನಂದ ಅವರ ಮೂರ್ತಿಗೆ ಪೂಜೆ ಸಲ್ಲಿಸುತ್ತಿರುವ ವೀಡಿಯೋವೊಂದು ವೈರಲ್ ಆಗುತ್ತಿದ್ದು, ಮತ್ತೆ ಚರ್ಚೆಗೆ ಕಾರಣವಾಗಿದ್ದಾರೆ.

    ಕೈಲಾಸದಲ್ಲಿ ತಲೆಮರೆಸಿಕೊಂಡಿರುವ ನಿತ್ಯಾನಂದ ಅವರ ಪ್ರತಿಮೆಯನ್ನು ಸ್ಥಾಪಿಸಿ, ಪೂಜೆ, ಅಭಿಷೇಕ, ಅರ್ಚನೆಗಳನ್ನು ಮಾಡಲಾಗುತ್ತಿದೆ. ಚೈತ್ರ ನಕ್ಷತ್ರ ಹಬ್ಬದ ಹಿನ್ನೆಲೆ ಮೂರ್ತಿಗೆ ಪೂಜೆ ಸಲ್ಲಿಸಲಾಗಿದ್ದು, ಅದರ ವೀಡಿಯೋ ಈಗ ವೈರಲ್ ಆಗುತ್ತಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

    ಕೆಲವು ದಿನಗಳ ಹಿಂದೆ ನಿತ್ಯಾನಂದ ಅವರಿಗೆ ಅನಾರೋಗ್ಯವಿದ್ದ ಹಿನ್ನೆಲೆ ಅವರ ಮರಣ ಸಂಭವಿಸಿದೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಇದರ ಬೆನ್ನಲ್ಲೇ ಕೈಲಾಸದಿಂದ ಸಂದೇಶವೊಂದು ಬಂದಿದ್ದು, ನಿತ್ಯಾನಂದ ಸ್ವಾಮೀಜಿ ಆರೋಗ್ಯವಾಗಿದ್ದಾರೆ, ಶೀಘ್ರವೇ ಭಕ್ತರಿಗೆ ದರ್ಶನ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: ನಂದಿಬೆಟ್ಟಕ್ಕೆ ಹರಿದು ಬಂದ ಜನಸಾಗರ – ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ನಿಂತು ಹೈರಾಣಾದ ಪ್ರವಾಸಿಗರು

    ಇದೀಗ ನಿತ್ಯಾನಂದ ಅವರ ಮೂರ್ತಿಗೆ ಪೂಜೆ ಸಲ್ಲಿಸುತ್ತಿರುವ ವೀಡಿಯೋ ವೈರಲ್ ಆಗುತ್ತಿದ್ದಂತೆ ಜನರಲ್ಲಿ ಮತ್ತೆ ಪ್ರಶ್ನೆ ಎದ್ದಿದೆ. ಅನಾರೋಗ್ಯ ಎಂದಿದ್ದ ಬಳಿಕ ಯಾವುದೇ ಸುಳಿವು ನೀಡದ ನಿತ್ಯಾನಂದ ಸ್ವತಃ ಉತ್ತರಿಸುವವರೆಗೂ ಗೊಂದಲ ಮುಂದುವರಿದಿದೆ.