Tag: Nitin Krishnamurthy

  • ವೀಕೆಂಡ್ ನಿಂದ ವಿದೇಶದಲ್ಲಿಯೂ ‘ಹಾಸ್ಟೆಲ್ ಬಾಯ್ಸ್’ ಹಂಗಾಮ

    ವೀಕೆಂಡ್ ನಿಂದ ವಿದೇಶದಲ್ಲಿಯೂ ‘ಹಾಸ್ಟೆಲ್ ಬಾಯ್ಸ್’ ಹಂಗಾಮ

    ಳ್ಳೆಯ ಸಿನಿಮಾಗಳಿಲ್ಲದೇ ಸೊರಗಿದ್ದ ಸ್ಯಾಂಡಲ್ ವುಡ್ ಇಂಡಸ್ಟ್ರೀಗೆ ಹಾಸ್ಟೆಲ್ ಹುಡುಗರು (Hostel Hudugaru) ಬೇಕಾಗಿದ್ದಾರೆ ಚಿತ್ರ ಹೊಸ ಚೈತನ್ಯ ತಂದು ಕೊಟ್ಟಿದೆ. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕ್ವಾಟ್ಲೆಗೆ ಪ್ರೇಕ್ಷಕ ಹೊಟ್ಟೆ ಹುಣ್ಣಾಗುವಂತೆ ನಕ್ಕುತ್ತಿದ್ದಾರೆ. ಭರಪೂರ ಮನರಂಜನೆ ಉಣಬಡಿಸಿರುವ ಈ ಸಿನಿಮಾಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಬರೀ ರಾಜ್ಯ ಮಾತ್ರವಲ್ಲ ಹೊರರಾಜ್ಯಗಳಿಗೂ ಹಾಸ್ಟೆಲ್ ಹುಡುಗರ  ಹಾವಳಿ ಹಬ್ಬಿದೆ. ಈಗ ವಿದೇಶದಲ್ಲಿಯೂ ಧಮಾಕ ಎಬ್ಬಿಸಲು ಬಾಯ್ಸ್ ರೆಡಿಯಾಗಿದ್ದಾರೆ.

    ಹಾಸ್ಟೆಲ್ ಹುಡುಗರ ಬೇಕಾಗಿದ್ದಾರೆ ಸಿನಿಮಾ ವಿದೇಶದಲ್ಲಿಯೂ (Abroad) ಬಿಡುಗಡೆಯಾಗುತ್ತಿದೆ. ಕೆನಡಾ, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಯುಕೆ ಮತ್ತು ಯೂರೋಪ್ ದೇಶಗಳಲ್ಲಿ ಇದೇ ವೀಕೆಂಡ್ ನಿಂದ ತುಂಗಾ ಹಾಸ್ಟೆಲ್ ಬಾಯ್ಸ್ ಕ್ವಾಟ್ಲೆ ಶುರುವಾಗಲಿದೆ. ಆರಂಭದಿಂದಲೂ ತಮ್ಮ ಚಿತ್ರವನ್ನು ಅತ್ಯಂತ ಕೆಟ್ಟ ಚಿತ್ರ ಎನ್ನುತ್ತಲೇ ಅತ್ಯುತ್ತಮ ಸಿನಿಮಾ ಎಂದು ಪ್ರೇಕ್ಷಕರಿಂದ ಬೆನ್ನು ತಟ್ಟಿಸಿಕೊಂಡಿರುವ ಚಿತ್ರತಂಡ ವಿಶ್ವಾದ್ಯಂತ ತಮ್ಮ ಸಿನಿಮಾವನ್ನು ಸಂಭ್ರಮಿಸುವ ತವಕದಲ್ಲಿದೆ. ಇದನ್ನೂ ಓದಿ:ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಬಾಲಿಗೆ ಹಾರಿದ ಹರ್ಷಿಕಾ ಪೂಣಚ್ಚ

    ಹೈದರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಹಲವರು ರಾಜ್ಯಗಳಲ್ಲಿ ನಿತಿನ್ ಕೃಷ್ಣಮೂರ್ತಿ (Nitin Krishnamurthy) ಚೊಚ್ಚಲ ಕನಸ್ಸಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ವರುಣ್ ಗೌಡ (Varun Gowda), ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ.

     

    ಇಡೀ ಸ್ಯಾಂಡಲ್ ವುಡ್ ಬೆಂಬಲವಾಗಿ ನಿಂತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಹೊಸ ಹುರುಪು ತಂದುಕೊಟ್ಟಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ. ಕಳೆದ ಶುರುವಾರ ರಾಜ್ಯಾದ್ಯಂತ ತೆರೆಕಂಡ ಸಿನಿಮಾ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕಪ್ರಭುವಿಗೆ ಮನರಂಜನೆ ರಸದೌತಣ ನೀಡುವಲ್ಲಿ ಹೊಸಬರ ತಂಡ ಯಶಸ್ವಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸ್ಟೆಲ್ ಹುಡುಗರಿಗೆ ಅಂದೇ ಸಿಕ್ಕಿತ್ತು ಅಪ್ಪು ಆಶೀರ್ವಾದ:  ವಿಘ್ನವಿನಾಶಕನಿಗೆ ಪೂಜೆ ಸಲ್ಲಿಸಿ ಬೇಡಿದ್ದೇನು ಪರಮಾತ್ಮ?

    ಹಾಸ್ಟೆಲ್ ಹುಡುಗರಿಗೆ ಅಂದೇ ಸಿಕ್ಕಿತ್ತು ಅಪ್ಪು ಆಶೀರ್ವಾದ: ವಿಘ್ನವಿನಾಶಕನಿಗೆ ಪೂಜೆ ಸಲ್ಲಿಸಿ ಬೇಡಿದ್ದೇನು ಪರಮಾತ್ಮ?

    ಸುದ್ದಿ ಪೂರ್ತಿ ಓದಿದ್ಮೇಲೆ ನೀವೆಲ್ಲ ಸೇರಿಕೊಂಡು ಆ ವಿಧಿಗೆ ಮತ್ತೆ ಶಾಪ ಹಾಕ್ತೀರಿ, ಆಫ್ ಕೋರ್ಸ್ ಹಾಕಲೇಬೇಕು. ಯಾಕಂದ್ರೆ, ಅಪ್ಪು ಸ್ಟಾರ್ ಅನ್ನೋದು ಜನಕ್ಕೆ ಗೊತ್ತಿತ್ತು. ಆದರೆ ಆ ಭಗವಂತನಿಗೆ ಅಪ್ಪು ಬರೀ ನಾಯಕನಟನಾಗಿ ಉಳಿದಿಲ್ಲ ಎನ್ನುವ ಸತ್ಯದ ಅರಿವಾಗಿತ್ತು. ದೊಡ್ಮನೆ ಹುಡುಗ ಯುದ್ದ ಮಾಡದೇ ಕರುನಾಡೆಂಬ ರಾಜ್ಯ ಗೆದ್ದಿದ್ದಾನೆ, ರಾಜನಾಗುವ ಅವಕಾಶ ಇದ್ದರೂ ಸಾಮಾನ್ಯನಂತೆ ಬದುಕುತ್ತಿದ್ದಾನೆನ್ನುವ ಸಂಗತಿಯೂ ದೇವರಿಗೆ ತಿಳಿದಿತ್ತು. ದಾನ ಧರ್ಮದಲ್ಲಿ, ಕಷ್ಟಕ್ಕೆ ಸ್ಪಂದಿಸುವುದರಲ್ಲಿ, ಸಹಾಯಕ್ಕೆ ಧಾವಿಸುವುದರಲ್ಲಿ ನನಗಿಂತ ಒಂದು ಹೆಜ್ಜೆ ಮುಂದೆ ಇದ್ದಾನೆ. ಈ ಕಲಿಯುಗದಲ್ಲಿ ದಾನಶೂರ ಕರ್ಣನಾಗಿ, ದೇವತಾ ಮನುಷ್ಯನಾಗಿ ಮುನ್ನಡೆಯುತ್ತಿದ್ದಾನೆನ್ನುವ ವಿಚಾರವೂ ಗೊತ್ತಾಗಿತ್ತು. ಇಷ್ಟಾದ್ರೂ ಕೂಡ ಅಪ್ಪು ಮೇಲೆ ಆ ಭಗವಂತ ಕರುಣೆ ತೋರದೇ ಏಕಾಏಕಿ ಹೊತ್ತೊಯ್ದುಬಿಟ್ಟ. ಆದ್ರೀಗ ಆ ಭಗವಂತನಿಗೆ ಅರಿವಾಗಿದೆ ನಾನು ಕುಣಿಕೆ ಸರಿದಿದ್ದು ಸಾಕ್ಷಾತ್ ಪರಮಾತ್ಮನಿಗೆ ಅಂತ.

    ಈ ಕ್ಷಣಕ್ಕೆ ಅಪ್ಪು ಬರೀ ನಟರಾಗಿ ಉಳಿದಿಲ್ಲ ಬದಲಾಗಿ ದೇವರ ಸ್ಥಾನದಲ್ಲಿ ಕೂತಿದ್ದಾರೆ. ಅವರ ಅಭಿಮಾನಿಗಳ ಹಾದಿಯಾಗಿ ಕರುನಾಡಿನ ಎಷ್ಟೋ ಜನ ಅಪ್ಪುನಾ (Puneeth Rajkumar) ಮನೆದೇವರಂತೆ ಪೂಜಿಸ್ತಿದ್ದಾರೆ. ಒಳ್ಳೆ ಕೆಲಸಕ್ಕೆ ಕೈ ಹಾಕುವ ಮುನ್ನ ಹಲವರು ಅಪ್ಪುನಾ ನೆನೆಯುತ್ತಿದ್ದಾರೆ. ಕೆಲವರು ಪರಮಾತ್ಮನ ಸನ್ನಿಧಿಗೆ ಬಂದು ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುತ್ತಿದ್ದಾರೆ. ಆದರೆ ಈ ಹಾಸ್ಟೆಲ್ ಹುಡುಗರಿಗೆ  (Hostel Hudugaru Bekagiddare) ಅಂಜನಿಪುತ್ರನ ಆಶೀರ್ವಾದ ಅಂದೇ ಸಿಕ್ಕಿತ್ತು. ಅಚ್ಚರಿ ಅಂದರೆ ಹಾಸ್ಟೆಲ್ ಹುಡುಗರಿಗೆ ಒಳ್ಳೆದಾಗಬೇಕು ಅಂತ ಸ್ವತಃ ಪವರ್ ಸ್ಟಾರ್ ಪರಮಾತ್ಮನ ಮೊರೆ ಹೋಗಿದ್ದರು. ವಿಘ್ನವಿನಾಶಕನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದದ ಜೊತೆಗೆ ಹಾಸ್ಟೆಲ್ ಹುಡುಗರನ್ನು ಭೇಟಿ ಮಾಡಿದ್ದರು. ಅಷ್ಟಕ್ಕೂ, ಆ ಹಾಸ್ಟೆಲ್ ಹುಡುಗರು ಬೇರಾರು ಅಲ್ಲ ಜುಲೈ 21ರಂದು ನಿಮ್ಮ ಮುಂದೆ ಹಾಜರಾಗಲಿರುವ `ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಟೀಮ್

    `ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಯುವನಿರ್ದೇಶಕ ನಿತಿನ್ ಕೃಷ್ಣಮೂರ್ತಿ (Nitin Krishnamurthy) ಡೈರೆಕ್ಟ್ ಮಾಡಿರುವ ಚಿತ್ರ. ಸಂಪೂರ್ಣ ಹೊಸಬರೇ ತುಂಬಿರುವ ಈ ಚಿತ್ರದಲ್ಲಿ, ಮೋಹಕ ತಾರೆ ರಮ್ಯಾ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಲೂಸಿಯಾ ಪವನ್, ದಿಗಂತ್, ಶೈನ್ ಶೆಟ್ಟಿ ಮಿಂಚಿರೋದ್ರಿಂದ ಹಾಸ್ಟೆಲ್ ಹುಡುಗರು ಸಾಕಷ್ಟು ಸೌಂಡ್ ಮಾಡ್ತಿದ್ದಾರೆ. ಇವತ್ತು ಈ ಚಿತ್ರ ಇಷ್ಟೊಂದು ಸದ್ದು ಸುದ್ದಿ ಮಾಡ್ತಿರುವುದಕ್ಕೆ ಮೊದಲ ಕಾರಣ ಅಪ್ಪು ಅಂದರೆ ಬಹುಶಃ ತಪ್ಪಾಗಲಿಕ್ಕಿಲ್ಲ. ಅವತ್ತು ಈ ಚಿತ್ರತಂಡ ಡೇಟ್ಸ್ ಕೇಳಿದಾಗ ಬರೀ ಲಯನ್ ಡೇಟ್ಸ್‍ನ ಕೊಟ್ಟು ಕಳುಹಿಸದೇ ಅಪ್ಪು ಡೇಟ್ ಕೊಟ್ಟರು. ಸದಾಶಿವನಗರದಲ್ಲಿರುವ ತಮ್ಮ ಆಫೀಸ್‍ಗೆ ಬರುವಂತೆ ತಿಳಿಸಿದರು. ಅವರೆಲ್ಲರು ಬಂದು ಆಫೀಸ್‍ನಲ್ಲಿ ಹಾಜರಾಗುವಷ್ಟರಲ್ಲಿ ಸದಾಶಿವನಗರದಲ್ಲಿದ್ದ ಗಣೇಶನ ಸನ್ನಿಧಿಗೆ ಹೋಗಿ ಪುನೀತ್ ಪೂಜೆ ಮಾಡಿಸಿದ್ದಾರೆ. ಅಲ್ಲಿಂದ ಬಂದು ಇಡೀ ಟೀಮ್‍ಗೆ ಪ್ರಸಾದ ನೀಡಿ ಪ್ರೋಮೋ ಶೂಟ್‍ನಲ್ಲಿ ಭಾಗಿಯಾಗಿ ಫಸ್ಟ್ ಲುಕ್ ಲಾಂಚ್ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ:ಅಪಘಾತದಿಂದ ಚೇತರಿಸಿಕೊಂಡ್ರಾ ಸಾಯಿ ಧರಂ ತೇಜ್- ನಟ ಹೇಳೋದೇನು?

    ಫಸ್ಟ್ ಲುಕ್ ಬಿಡುಗಡೆ ಮಾಡಿಕೊಡಲು ಒಪ್ಪಿಕೊಂಡಿದ್ದ ಅಪ್ಪು ನೇರವಾಗಿ ಪೋಸ್ಟರ್ ರಿಲೀಸ್ ಮಾಡಿಕೊಡಬಹುದಿತ್ತು. ಆದರೆ, ಪ್ರತಿಭಾವಂತರ ತಂಡವೊಂದು ಹೊಸ ಪ್ರಯೋಗ ಮಾಡ್ತಿರುವುದನ್ನು ಗಮನಿಸಿದ ಪವರ್‌ ಸ್ಟಾರ್ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಈ ಸತ್ಯ ಇಲ್ಲಿವರೆಗೂ ಯಾರಿಗೂ ಗೊತ್ತಿರಲಿಲ್ಲ. ಇತ್ತೀಚೆಗೆ ದೇವಸ್ಥಾನದ ಅರ್ಚಕರೇ ಈ ಸತ್ಯವನ್ನ ಸೋಷಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. ಅಂದ್ಹಾಗೇ, ಕಣ್ಣಮುಂದಿನ ಉದಾಹರಣೆ ಅಷ್ಟೇ, ಇಂತಹ ಎಷ್ಟೋ ಘಟನೆಗಳಿಗೆ ಅಪ್ಪು ಸಾಕ್ಷಿಯಾಗಿದ್ದಾರೆ. ಪ್ರತಿಭಾವಂತರನ್ನ ಪ್ರೋತ್ಸಾಹಿಸಿ ಬೆಂಬಲಿಸಿದ್ದಾರೆ. ತಮಗಷ್ಟೇ ಅಲ್ಲ ತಮ್ಮ ಸುತ್ತಮುತ್ತಲಿನವರೆಲ್ಲರಿಗೂ ಒಳ್ಳೆದಾಗಬೇಕು, ಎಲ್ಲರೂ ನೆಮ್ಮದಿಯಿಂದ- ಸಂತೋಷದಿಂದ ಬಾಳಬೇಕು, ಎಲ್ಲರೂ ತಮ್ಮಂತೆಯೇ ಬೆಳಿಬೇಕು ಅಂತ ಹಾರೈಸುವ ದೊಡ್ಡಮನಸ್ಸಿರುವ ದೊಡ್ಮನೆ ರಾಜಕುಮಾರನ್ನ ಆ ದೇವರು ಇಷ್ಟು ಬೇಗ  ಕಿತ್ಕೊಂಡಿದ್ದು ನಮ್ಮೆಲ್ಲರ ದೌರ್ಭಾಗ್ಯವೇ ಸರೀ.

    ಎನಿವೇ, ಅಪ್ಪು ಆಶೀರ್ವಾದ ಪಡೆದು ನಿಮ್ಮೆಲ್ಲರಿಗೂ ದರ್ಶನ ನೀಡಲು ಬರುತ್ತಿರುವ `ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ತಂಡವನ್ನ ನೀವೆಲ್ಲರೂ ಪ್ರೋತ್ಸಾಹಿಸಬೇಕಿದೆ. ಅಪ್ಪು ಸ್ಥಾನದಲ್ಲಿ ನಿಂತು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಟ್ರೇಲರ್ ಲಾಂಚ್ ಮಾಡಿಕೊಟ್ಟಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಬೆನ್ನೆಲುಬಾಗಿ ನಿಂತಿದ್ದಾರೆ. ಸಮಸ್ತ ದೊಡ್ಮನೆ ರಾಜಕುಮಾರನ ಅಭಿಮಾನಿ ದೇವರುಗಳು ಹಾಸ್ಟೆಲ್ ಹುಡುಗರಿಗೆ ಸಪೋರ್ಟ್ ಮಾಡ್ತಿದ್ದಾರೆ. ಸರಿಸುಮಾರು 500 ಜನ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದು, ಕನ್ನಡ ಕಲಾಭಿಮಾನಿಗಳಿಗೆ ಮಸ್ತ್ ಮನರಂಜನೆ ನೀಡಲು ಬರ್ತಿದ್ದಾರೆ. ವರುಣ್ ಸ್ಟುಡಿಯೋಸ್ (Varun Studios) ಹಾಗೂ ಗುಲ್‍ಮೋಹರ್ ಫಿಲ್ಮಂಸ್ ಬ್ಯಾನರ್ ಅಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಎಸ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರ ಪರಂವಃ ಬ್ಯಾನರ್ ಅಡಿ ಈ ಸಿನಿಮಾನ ಪ್ರಸೆಂಟ್ ಮಾಡಲಾಗ್ತಿದ್ದು, ಇದೇ ಜುಲೈ 21ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಗೆ ತರಲಾಗ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸ್ಟೆಲ್ ಹುಡುಗರ ಜೊತೆ ನಿಂತುಕೊಂಡ ‘ದೂದ್ ಪೇಡಾ’ ದಿಗಂತ್

    ಹಾಸ್ಟೆಲ್ ಹುಡುಗರ ಜೊತೆ ನಿಂತುಕೊಂಡ ‘ದೂದ್ ಪೇಡಾ’ ದಿಗಂತ್

    ಸಿನಿಮಾ ಮಾಡುವುದೇ ಒಂದು ಸಾಹಸ. ಸಿನಿಮಾ ಮಾಡಿ ಜನರಿಗೆ ತಲುಪಿಸುವುದು ಇನ್ನೂ ದೊಡ್ಡ ಸಾಹಸ. ಅದಕ್ಕೆ ಸರಿಯಾದ ರೀತಿಯ ಪ್ರಚಾರದ ಅವಶ್ಯಕತೆ ಬಹುಮುಖ್ಯ. ವಿಶೇಷ ರೀತಿಯ ಚಿತ್ರಕ್ಕೆ ವಿಶಿಷ್ಟ ಪ್ರಕಾರದ ಪ್ರಚಾರ‌ ಬೇಕು. ವಿಶಿಷ್ಟ ರೀತಿಯಲ್ಲಿ ಪ್ರಚಾರ ನಡೆಸುತ್ತಿರುವುದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿಮಾತಂಡ.

    ಆರಂಭದ ದಿನದಿಂದಲೂ ನಾನಾ ಬಗೆಯಲ್ಲಿ ಚಿತ್ರಪ್ರೇಮಿಗಳನ್ನು ಸೆಳೆಯುತ್ತಿರುವ ಈ ಚಿತ್ರಕ್ಕೀಗ ಮತ್ತೊಬ್ಬ ಸ್ಟಾರ್ ಸಾಥ್ ಕೊಟ್ಟಿದ್ದಾರೆ. ಹಾಸ್ಟೆಲ್ ಹುಡುಗರಿಗೆ ದೂದ್ ಪೇಡಾ ಸಿಹಿ ಸಿಕ್ಕಿದೆ. ಅಂದರೆ ದೂದ್ ಪೇಡಾ ದಿಗಂತ್ (Digant) ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ:ಹೊಸ ತಂಡದ ‘ಅಗ್ರಸೇನಾ’ ಪ್ರಯತ್ನಕ್ಕೆ ಪ್ರೇಕ್ಷಕರ ಉತ್ತಮ ಪ್ರತಿಕ್ರಿಯೆ

    ಪುನೀತ್ ರಾಜಕುಮಾರ್, ರಮ್ಯಾ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಶೈನ್ ಶೆಟ್ಟಿ, ಪವನ್ ಕುಮಾರ್ ಬೆಂಬಲ ಕೊಟ್ಟಿರುವ ಈ ಚಿತ್ರದಲ್ಲಿ ದಿಗ್ಗಿ ಬಣ್ಣ ಹಚ್ಚಿದ್ದಾರೆ. ಆದರೆ ಅವರ ಪಾತ್ರವೇನೆಂಬುದನ್ನು ಚಿತ್ರತಂಡ ಸಸ್ಪೆನ್ಸ್ ಆಗಿ ಇಟ್ಟಿದೆ. ಜುಲೈ 7ಕ್ಕೆ ದಿಗಂತ್ ಲುಕ್ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದ್ದಾರೆ.

    ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ (Nitin Krishnamurthy) ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ. ವರುಣ್ ಕುಮಾರ್ ಗೌಡ (Varun), ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ.

    ಪ್ರತಿ ಬಾರಿ ಯುನಿಕ್ ಕಾನ್ಸೆಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಸಿನಿಮಾ ಜುಲೈನಲ್ಲಿ ತೆರೆಗೆ ಬರಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಹಾಸ್ಟೆಲ್ ಹುಡುಗರ’ ಜೊತೆಯಲ್ಲಿ ಮೋಹಕ ತಾರೆ ರಮ್ಯಾ:  ಟೀಸರ್ ರಿಲೀಸ್

    ‘ಹಾಸ್ಟೆಲ್ ಹುಡುಗರ’ ಜೊತೆಯಲ್ಲಿ ಮೋಹಕ ತಾರೆ ರಮ್ಯಾ: ಟೀಸರ್ ರಿಲೀಸ್

    ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಈ ಸಿನಿಮಾ ಹೆಸರು ನೀವು ಕೇಳಿರ್ತೀರಾ. ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸಖತ್ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವೀಡಿಯೋಗಳು ನಿಮ್ಮನ್ನು ಸೆಳೆದಿರುತ್ತೆ. ಅದಕ್ಕೂ ಮಿಗಿಲಾಗಿ ಎಲ್ಲರ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದ ವೀಡಿಯೋನಂತೂ ಕಣ್ತುಂಬಿಕೊಂಡಿರ್ತಿರಾ.ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರೋ ಈ ಚಿತ್ರತಂಡ ಇದೀಗ  ಸ್ಯಾಂಡಲ್ ವುಡ್ ಕ್ವೀನ್ ಮೋಹಕ ತಾರೆ ರಮ್ಯಾ  (Ramya) ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕೆ ಕರೆತಂದಿದೆ.

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ಗಮನ ಸೆಳೆದಿತ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಟೀಂ. ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದ್ರೆ ಇಂಟ್ರಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಹೀಗೆ ವಿಭಿನ್ನವಾಗಿ ಸಿನಿಮಾ ಪ್ರಚಾರ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಚಿತ್ರತಂಡ. ಈ ಬಾರಿ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕಾಗಿ ಕರೆತಂದಿದೆ. ರಮ್ಯಾ ಕೂಡ ಚಿತ್ರತಂಡಕ್ಕೆ ಸಾಥ್ ನೀಡಲು ಒಪ್ಪಿದ್ದು, ಬಹಳ ಖುಷಿಯಿಂದಲೇ ಚಿತ್ರದ ಪ್ರಮೋಷನಲ್ ಕಂಟೆಂಟ್ ವೀಡಿಯೋ ನಲ್ಲಿ ಭಾಗಿಯಾಗಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಮೋಹಕ ತಾರೆ ಭಾಗಿಯಾಗಿರುವ ಚಿತ್ರದ ಪ್ರಮೋಷನಲ್ ಟೀಸರ್ ಬಿಡುಗಡೆ ಮಾಡುತ್ತಿದೆ ಚಿತ್ರತಂಡ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ ಸ್ಮಾರ್ಟ್ ಗೇಮ್ ಆಡ್ತಿದ್ದಾರೆ: ನೇಹಾ ಗೌಡ

    ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರದ ಕಥೆ ಮೊದಲು ಕೇಳಿದವರು ಮತ್ತದೇ ನಮ್ಮೆಲ್ಲರ ಪ್ರೀತಿಯ ರಾಜರತ್ನ ಪುನೀತ್ ರಾಜ್ ಕುಮಾರ್. ಚಿತ್ರತಂಡ ಈ ಸಿನಿಮಾ ಚಿತ್ರೀಕರಣಕ್ಕೂ ಮೊದಲು ಅಪ್ಪು ಅವರ ಬಳಿ ಹೋಗಿ ಸಿನಿಮಾ ಬಗ್ಗೆ ಮಾತುಕತೆ ನಡೆಸಿದೆ. ಕಥೆ ಕೇಳಿ ಸಖತ್ ಇಂಪ್ರೆಸ್ ಆದ ಅಪ್ಪು ಸಿನಿಮಾ ಮಾಡಿ ಎಂದು ಇಡೀ ತಂಡಕ್ಕೆ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ರಂತೆ. ಅವರ ಆರ್ಶೀವಾದದೊಂದಿಗೆ ಸಿನಿಮಾ ಚಿತ್ರೀಕರಣ ಆರಂಭಿಸಿದ್ವಿ ಎಂದು ನಿರ್ಮಾಪಕ ವರುಣ್ ಕುಮಾರ್ ಹಾಗೂ ಪ್ರಜ್ವಲ್ ಬಿಪಿ ತಿಳಿಸಿದ್ದಾರೆ.

    ಯೂತ್ ಸಬ್ಜೆಕ್ಟ್ ಒಳಗೊಂಡ  ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ (Nitin Krishnamurthy) ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಪ್ಲ್ಯಾನ್ ನಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]