Tag: Nitish Rana

  • ಸಿಕ್ಸ್‌ ಮೇಲೆ ಸಿಕ್ಸ್‌, ನೋಟ್‌ಬುಕ್ ಸ್ಟೈಲ್‌ ಸಂಭ್ರಮಾಚರಣೆ – ರಾಥಿಯನ್ನು ಬೆಂಡೆತ್ತಿ ಕಿಚಾಯಿಸಿದ ರಾಣಾ

    ಸಿಕ್ಸ್‌ ಮೇಲೆ ಸಿಕ್ಸ್‌, ನೋಟ್‌ಬುಕ್ ಸ್ಟೈಲ್‌ ಸಂಭ್ರಮಾಚರಣೆ – ರಾಥಿಯನ್ನು ಬೆಂಡೆತ್ತಿ ಕಿಚಾಯಿಸಿದ ರಾಣಾ

    ನವದೆಹಲಿ: ದೆಹಲಿ ಪ್ರೀಮಿಯರ್‌ ಲೀಗ್‌ (Delhi Premier League) ಕ್ರಿಕೆಟಿನಲ್ಲಿ ಡೆಲ್ಲಿ ಸೂಪರ್‌ಸ್ಟಾರ್‌ ತಂಡದ ದಿಗ್ವೇಶ್‌ ರಾಥಿ (Digvesh Rathi) ಮತ್ತು ಡೆಲ್ಲಿ ಲಯನ್ಸ್‌ ತಂಡದ ನಾಯಕ ನಿತೀಶ್‌ ರಾಣಾ (Nitish Rana) ಪರಸ್ಪರ ಜಗಳಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಸೃಷ್ಟಿಸಿದೆ.

    10ನೇ ಓವರ್‌ ಎಸೆಯುವಾಗ ನಿತೀಶ್‌ ರಾಣಾ ಕ್ರೀಸ್‌ನಲ್ಲಿ ಇದ್ದರು. ಈ ವೇಳೆ ರಾಥಿ ಬೌಲಿಂಗ್‌ ಮಾಡಲು ಓಡಿ ಬಂದಿದ್ದರೂ ಬಾಲ್‌ ಎಸೆಯಲಿಲ್ಲ. ಇದಕ್ಕೆ ಸಿಟ್ಟಾದ ರಾಣಾ ರಾಥಿ ಮತ್ತೊಮ್ಮೆ ಬಾಲ್‌ ಎಸೆಯಲು  ಬಂದಾಗ ಕೈ ಎತ್ತಿ ತಡೆದು ಬೌಲಿಂಗ್‌ ನಿಲ್ಲಿಸಿದರು. ನಂತರ ಎಸೆತವನ್ನು ರಿವರ್ಸ್‌ ಸ್ವೀಪ್‌ ಮೂಲಕ ಸಿಕ್ಸ್‌ಗೆ ಅಟ್ಟಿದರು.

    ಈ ಬೆನ್ನಲ್ಲೇ ರಾಣಾ ಅವರು ರಾಥಿ ಸ್ಟೈಲ್‌ನಲ್ಲಿ ನೋಟ್‌ಬುಕ್ ಸಂಭ್ರಮಾಚರಣೆ ಮಾಡಿ ಕಿಚಾಯಿಸಿದರು. ಇದಕ್ಕೆ ರಾಥಿ ಸಿಟ್ಟಾಗಿ ಏನೋ ಹೇಳಿದ್ದಾರೆ. ರಾಥಿ ಮಾತಿಗೆ ಕೋಪಗೋಂಡ ರಾಣಾ ಜಗಳ ಮಾಡುತ್ತಾ ರಾಥಿ ಹತ್ತಿರ ಬಂದರು. ಈ ಸಮಯದಲ್ಲಿ ಉಳಿದ ಆಟಗಾರರು ಮತ್ತು ಅಂಪೈರ್‌ ಮಧ್ಯಪ್ರವೇಶಿಸಿ ರಾಣಾ ಅವರನ್ನು ತಡೆದರು. ಇದನ್ನೂ ಓದಿ: ಮುಖ್ಯಕೋಚ್‌ ಹುದ್ದೆಗೆ ಗುಡ್‌ಬೈ ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

    ನಿತೀಶ್‌ ರಾಣಾ ಅವರ ಅಜೇಯ ಶತಕ 134 ರನ್‌(55 ಎಸೆತ, 8 ಬೌಂಡರಿ, 15 ಸಿಕ್ಸ್‌) ನೆರವಿನಿಂದ ಡೆಲ್ಲಿ ಲಯನ್ಸ್‌ 3 ವಿಕೆಟ್‌ ನಷ್ಟಕ್ಕೆ 202 ರನ್‌ ಹೊಡೆದು 7 ವಿಕೆಟ್‌ಗಳ ಜಯ ಸಾಧಿಸಿತು. ಅದರಲ್ಲೂ ದಿಗ್ವೇಶ್‌ ರಾಥಿ ಎಸೆದ 11 ಎಸೆತದಲ್ಲಿ ರಾಣಾ 38 ರನ್‌ ಹೊಡೆದು ಬೆಂಡೆತ್ತಿದ್ದರು. ಇದನ್ನೂ ಓದಿ: 5 ಎಸೆತಗಳಲ್ಲಿ 5 ವಿಕೆಟ್ ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

    26 ವರ್ಷದ ದಿಗ್ವೇಶ್‌ ಈ ಬಾರಿಯ ಐಪಿಎಲ್‌ನಲ್ಲಿ ಕಮಾಲ್‌ ಮಾಡಿದ್ದರು. 13 ಪಂದ್ಯಗಳಲ್ಲಿ 14 ವಿಕೆಟ್‌ ಪಡೆದು ಮಿಂಚಿದ್ದರು. ಚೊಚ್ಚಲ ಐಪಿಎಲ್‌ ಆವೃತ್ತಿಯಲ್ಲಿ ಉದ್ಧಟತನ ತೋರಿದ್ದಕ್ಕೆ ದಿಗ್ವೇಶ್ ಅವರನ್ನು ಅಮಾನತು ಮಾಡಲಾಗಿತ್ತು. ವಿಕೆಟ್‌ ಪಡೆದ ನಂತರ ನೋಟ್‌ಬುಕ್ ಸಂಭ್ರಮಾಚರಣೆ ಮಾಡಿದ್ದಕ್ಕಾಗಿ ರಾಥಿ ಅವರಿಗೆ ದಂಡ ವಿಧಿಸಲಾಗಿತ್ತು.

  • ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    ಲಕ್ನೋ: ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್‌ ಸಿಕ್ಸರ್‌, ಬೌಂಡರಿ ಆಟದ ಹೊರತಾಗಿಯೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಕೆಕೆಆರ್‌ ವಿರುದ್ಧ 1 ರನ್‌ ರೋಚಕ ಜಯ ಸಾಧಿಸಿದೆ. ಈ ಮೂಲಕ ಲಕ್ನೋ ತಂಡ ಪ್ಲೆ ಆಫ್‌ಗೆ ಹಾರಿದೆ. ಕೆಕೆಆರ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ.

    14ರ ಪೈಕಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು +0284 ರನ್‌ ರೇಟ್‌ನೊಂದಿಗೆ 17 ಅಂಕ ಪಡೆದು 3ನೇ ಸ್ಥಾನ ಪಡೆದುಕೊಂಡಿದೆ.

    ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೆಕೆಆರ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 175 ರನ್‌ ಗಳಿಸಿ 1 ರನ್‌ ನಿಂದ ವಿರೋಚಿತ ಸೋಲನುಭವಿಸಿತು.

    ಚೇಸಿಂಗ್‌ ಆರಂಭಿಸಿದ ಕೆಕೆಆರ್‌ ಉತ್ತಮ ಆರಂಭ ಪಡೆದರೂ ಬಳಿಕ ಕೆಕೆಆರ್‌ ಬೌಲಿಂಗ್‌ ದಾಳಿಗೆ ತತ್ತರಿಸಿತು. ಮೊದಲ ವಿಕೆಟ್‌ ಪತನಕ್ಕೆ ಜೇಸನ್‌ ರಾಯ್‌, ವೆಂಕಟೇಶ್‌ ಅಯ್ಯರ್‌ ಜೋಡಿ 5.5 ಓವರ್‌ಗಳಲ್ಲಿ 61 ರನ್‌ ಕಲೆಹಾಕಿತ್ತು. ಅಯ್ಯರ್‌ 24 ರನ್‌, ಜೇಸನ್‌ ರಾಯ್‌ 28 ಎಸೆತಗಳಲ್ಲಿ 45 ರನ್‌ ಗಳಿಸಿದರು. ಬಳಿಕ ನಿತೀಶ್‌ ರಾಣಾ, ರಹ್ಮದ್ದುಲ್ಲಾ ಗುರ್ಭಜ್‌ 10 ರನ್‌, ರಸ್ಸೆಲ್‌ 7 ರನ್‌ ಗಳಿಸಿ ಕೈಚೆಲ್ಲಿದರು. ಕೊನೆಯಲ್ಲಿ ರಿಂಕು ಸಿಂಗ್‌ ಹೋರಾಟ ಅರ್ಧ ಶತಕದ ಹೋರಾಟ ನಡೆಸಿದರೂ ತಂಡ ವಿರೋಚಿತ ಸೋಲಿಗೆ ಗುರಿಯಾಯಿತು. ರಿಂಕು ಸಿಂಗ್‌ 33 ಎಸೆತಗಳಲ್ಲಿ ಭರ್ಜರಿ 67 ರನ್‌ (6 ಬೌಂಡರಿ, 4 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟ ಎದುರಿಸಿತ್ತು. ಕ್ವಿಂಟನ್‌ ಡಿ ಕಾಕ್‌ 28 ರನ್‌ (27 ಎಸೆತ, 2 ಸಿಕ್ಸರ್‌), ಪ್ರೇರಕ್‌ ಮಂಕದ್‌ 26 ರನ್‌ (20 ಎಸೆತ, 5 ಬೌಂಡರಿ) ಗಳಿದರೂ, ನಿಧಾನಗತಿಯ ಬ್ಯಾಟಿಂಗ್‌ನಿಂದ ತಂಡ ಕಡಿಮೆ ರನ್‌ ದಾಖಲಿಸಿತ್ತು. ಮೊದಲ 10 ಓವರ್‌ಗಳಲ್ಲಿ 73 ರನ್‌ ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡಿತ್ತು. ನಂತರ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ನಿಕೋಲಸ್‌ ಪೂರನ್‌ ಭರ್ಜರಿ ಅರ್ಧಶತಕದ ಬ್ಯಾಟಿಂಗ್‌ನಿಂದ ತಂಡ 170ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಲಕ್ನೋ ತಂಡದ ಪರ ಡಿಕಾಕ್‌ 28 ರನ್‌, ಮಂಕದ್‌ 26 ರನ್‌, ಆಯುಷ್‌ ಬದೋನಿ 25 ರನ್‌ ಗಳಿಸಿದರೆ ನಿಕೋಲಸ್‌ ಪೂರನ್‌ 58 ರನ್‌ (30 ಎಸೆತ, 5 ಸಿಕ್ಸರ್‌, 4 ಬೌಂಡರಿ) ಚಚ್ಚಿದರು.

    ಕೆಕೆಆರ್‌ ವೈಭವ್‌ ಅರೋರಾ, ಶಾರ್ದೂಲ್‌ ಠಾಕೂರ್‌, ಸುನೀಲ್‌ ನರೇನ್‌ ತಲಾ 2 ವಿಕೆಟ್‌ ಕಿತ್ತರೆ, ಪರ ಹರ್ಷಿತ್‌ ರಾಣಾ ಹಾಗೂ ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ನಿವೃತ್ತಿಯ ಬಗ್ಗೆ ಮತ್ತೊಮ್ಮೆ ಬಿಗ್‌ ಹಿಂಟ್‌ ಕೊಟ್ಟ ಮಹಿ

    ನಿವೃತ್ತಿಯ ಬಗ್ಗೆ ಮತ್ತೊಮ್ಮೆ ಬಿಗ್‌ ಹಿಂಟ್‌ ಕೊಟ್ಟ ಮಹಿ

    ಚೆನ್ನೈ: ಸಿಎಸ್‌ಕೆ (CSK) ತಂಡದ ನಾಯಕ ಎಂ.ಎಸ್‌ ಧೋನಿ (MS Dhoni) ಭಾನುವಾರ‌ ನಡೆದ ಪಂದ್ಯದ ಬಳಿಕ ತಮ್ಮ ನಿವೃತ್ತಿಯ ಬಗ್ಗೆ ದೊಡ್ಡ ಹಿಂಟ್‌ ಕೊಟ್ಟಿದ್ದಾರೆ. ಈಗಾಗಲೇ ಎಲ್ಲಾ ಮಾದರಿಯ ಕ್ರಿಕೆಟ್‌ಗೂ ಗುಡ್‌ಬೈ ಹೇಳಿರುವ ಮಹಿ ಪಾಲಿಗೆ ಈ ಬಾರಿಯ ಐಪಿಎಲ್‌ (IPL 2023) ಕೊನೆಯ ಟೂರ್ನಿಯಾಗಿದೆ.

    ಭಾನುವಾರ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ನಡೆದ ಪಂದ್ಯದ ಬಳಿಕ ಚೆಪಾಕ್‌ನ ತವರು ಮೈದಾನದಲ್ಲಿ ನಡೆದ ಕೊನೆಯ ಪಂದ್ಯದ ಬಳಿಕ ವಿಶೇಷ ಲ್ಯಾಪ್ ಆಫ್ ಗೌರವ ಸಲ್ಲಿಸಲಾಯಿತು. ಚೆನ್ನೈ ತಂಡಕ್ಕಾಗಿ ಅನೇಕ ವರ್ಷಗಳಿಂದ ತನಗೆ ಮತ್ತು ತಂಡಕ್ಕೆ ನೀಡಿದ ಬೆಂಬಲಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ರಿಂಕು, ರಾಣಾ ಬ್ಯಾಟಿಂಗ್‌ ಕಮಾಲ್‌ – ಕೋಲ್ಕತ್ತಾಗೆ 6 ವಿಕೆಟ್‌ಗಳ ಭರ್ಜರಿ ಜಯ

    ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಚೆನ್ನೈ ಸೋತರೂ ಮೈದಾನದ ಸುತ್ತಲೂ ಹೋಗುವಾಗ ನಗುಮುಖದಿಂದಲೇ ಲ್ಯಾಕ್‌ಆಫ್‌ ಮಾಡಿದರು. ಇದೇ ವೇಳೆ ಅಭಿಮಾನಿಗಳಿಗೆ ಚೆಂಡು ಹಾಗೂ ಚೆನ್ನೈ ಜೆರ್ಸಿಯನ್ನು ಗಿಫ್ಟ್‌ ಮಾಡಿ, ತವರು ಮೈದಾನದಿಂದ ಹೊರನಡೆದರು. ಚೆನ್ನೈ ಸೂಪರ್‌ ಕಿಂಗ್ಸ್‌ ಪ್ಲೆ ಆಫ್‌ ಪ್ರವೇಶಿಸಿದರೆ, ಮತ್ತೊಮ್ಮೆ ತವರಿಗೆ ಮರಳು ಸಾಧ್ಯತೆಗಳಿವೆ. ಇದನ್ನೂ ಓದಿ: 59 ರನ್‌ಗಳಿಗೆ ರಾಜಸ್ಥಾನ್‌ ಆಲೌಟ್‌ – RCBಗೆ 112 ರನ್‌ಗಳ ಭರ್ಜರಿ ಜಯ – ಪ್ಲೆ ಆಫ್‌ ಕನಸು ಜೀವಂತ

    ಚೆನ್ನೈ 13 ರಲ್ಲಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿ +0.381 ರನ್‌ರೇಟ್‌ನೊಂದಿಗೆ 15 ಅಂಕ ಪಡೆದು 2ನೇ ಸ್ಥಾನದಲ್ಲಿದೆ. 3 ಮತ್ತು 4ನೇ ಸ್ಥಾನದಲ್ಲಿ ಮುಂಬೈ ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಗಳು ಕ್ರಮವಾಗಿ ಸ್ಥಾನ ಪಡೆದಿವೆ. ನಂತರದ ಸ್ಥಾನಗಳಲ್ಲಿ ಆರ್‌ಸಿಬಿ, ರಾಜಸ್ಥಾನ್‌ ರಾಯಲ್ಸ್‌, ಕೆಕೆಆರ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳೂ ಸಹ ಪ್ಲೆ ಆಫ್‌ ಹಾದಿಯಲ್ಲಿ ಪೈಪೋಟಿಗೆ ಬಿದ್ದಿವೆ.

    ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ 6 ವಿಕೆಟ್‌ ನಷ್ಟಕ್ಕೆ 144 ರನ್‌ ಗಳಿಸಿತ್ತು. 145 ರನ್‌ ಅಲ್ಪ ಮೊತ್ತದ ಗುರಿ ಪಡೆದ ಕೋಲ್ಕತ್ತಾ ನೈಟ್‌ರೈಡರ್ಸ್‌ 18.3 ಓವರ್‌ಗಳಲ್ಲೇ 4 ವಿಕೆಟ್‌ ನಷ್ಟಕ್ಕೆ 147 ರನ್‌ ಗಳಿಸಿ ಗೆಲುವು ಸಾಧಿಸಿತು.

  • ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

    ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

    ನವದೆಹಲಿ: ಕೆಕೆಆರ್ (KKR) ತಂಡದ ಕ್ರಿಕೆಟಿಗ ನಿತೀಶ್ ರಾಣಾ (Nitish Rana)ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು (Delhi Police) ಓರ್ವನನ್ನು ಬಂಧಿಸಿದ್ದಾರೆ.

    KILLING CRIME

    ರಾಣಾ ಅವರ ಪತ್ನಿ ಸಾಚಿ ಮಾರ್ವಾ (Saachi Marwah) ಅವರು ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯಲು ಪ್ರಾರಂಭಿಸಿದ್ದಾರೆ. ಕೃತ್ಯವನ್ನು ಮುರ್ವಾ ಅವರು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ನಾನು ಪೊಲೀಸರಿಗೆ ಫೋನ್‍ನಲ್ಲಿ ಮಾಹಿತಿ ನೀಡಿದಾಗ, ಸುರಕ್ಷಿತವಾಗಿ ಮನೆ ತಲುಪಿದ್ದೀರಾ? ಹೋಗಲಿ ಬಿಡಿ, ಮುಂದಿನ ಬಾರಿ ಇದೇ ರೀತಿ ನಡೆದರೆ ನಂಬರ್ ನೋಟ್ ಮಾಡಿಕೊಳ್ಳುವಂತೆ ಹೇಳಿದರು. ಅದಕ್ಕೆ ಪ್ರತಿಯಾಗಿ ಮಾರ್ವಾ ಅವರು ಮುಂದಿನ ಬಾರಿ ಅವರ ಫೋನ್ ನಂಬರ್‌ಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಆಕ್ರೋಶದಿಂದ ಬರೆದುಕೊಂಡಿದ್ದಾರೆ.

    ಮಾರ್ವಾ ಅವರು ಆರ್ಕಿಟೆಕ್ಚರಲ್ ಡಿಸೈನರ್ ಆಗಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಕ್ರಿಕೆಟಿಗ ನಿತೀಶ್ ರಾಣಾ ಅವರ ಪತ್ನಿಯಾಗಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

  • ರಿಂಕು, ರಾಣಾ ಬ್ಯಾಟಿಂಗ್‌, ಮ್ಯಾಜಿಕ್‌ ಫೀಲ್ಡಿಂಗ್‌ – KKRಗೆ 5 ರನ್‌ಗಳ ರೋಚಕ ಜಯ

    ರಿಂಕು, ರಾಣಾ ಬ್ಯಾಟಿಂಗ್‌, ಮ್ಯಾಜಿಕ್‌ ಫೀಲ್ಡಿಂಗ್‌ – KKRಗೆ 5 ರನ್‌ಗಳ ರೋಚಕ ಜಯ

    ಹೈದರಾಬಾದ್‌: ರಿಂಕು ಸಿಂಗ್‌ (Rinku Singh), ನಾಯಕ ನಿತೀಶ್‌ ರಾಣಾ (Nitish Rana) ಸಂಘಟಿತ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿತು.

    ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತ್ತು. ಗೆಲುವಿಗೆ 172 ರನ್‌ ಗುರಿ ಪಡೆದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 166 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಹೈದರಾಬಾದ್‌ ತಂದ ಮೊದಲ 10 ಓವರ್‌ಗಳಲ್ಲಿ 75 ರನ್‌ ಗಳಿಸಿತ್ತು. ಇನ್ನೂ 60 ಎಸೆತಗಳಲ್ಲಿ 97 ರನ್‌ಗಳ ಅಗತ್ಯವಿತ್ತು. ರನ್‌ ಗಳಿಕೆಯಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೂ ಪ್ರಮುಖ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕ ಏಡನ್‌ ಮಾರ್ಕ್ರಮ್‌ ಹಾಗೂ ಹೆನ್ರಿಕ್ ಕ್ಲಾಸೆನ್ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ತಂಡಕ್ಕೆ ಮತ್ತಷ್ಟು ರನ್‌ ಸೇರ್ಪಡೆಯಾಯಿತು. ತಂಡದಲ್ಲಿ ಗೆಲುವಿನ ಆಸೆಯೂ ಚಿಗುರಿತ್ತು.

    11 ರಿಂದ 19ನೇ ಓವರ್‌ವರೆಗೆ ಕ್ರಮವಾಗಿ 15, 12, 12, 10, 10, 4, 8, 5, 12 ರನ್‌ ಸೇರ್ಪಡೆಯಾಯಿತು. ಕೊನೆಯ ಓವರ್‌ನಲ್ಲಿ 9 ರನ್‌ ಬೇಕಿದ್ದಾಗ ವರುಣ್‌ ಚಕ್ರವರ್ತಿ ಬೌಲಿಂಗ್‌ನಲ್ಲಿದ್ದರು. ಮೊದಲ ಎರಡು ಎಸೆತಗಳಲ್ಲಿ ತಲಾ ಒಂದೊಂದು ರನ್‌ ಸೇರ್ಪಡೆಯಾಯಿತು. ಆದ್ರೆ ಕ್ರೀಸ್‌ನಲ್ಲಿದ್ದ ಅಬ್ದುಲ್ ಸಮದ್‌ 3ನೇ ಎಸೆತವನ್ನು ಸಿಕ್ಸ್‌ ಸಿಡಿಸಲು ಯತ್ನಿಸಿ ಬೌಂಡರಿ ಲೈನ್‌ ಕ್ಯಾಚ್‌ ನೀಡಿ ನಿರಾಸೆ ಮೂಡಿಸಿದರು. ಬಳಿಕ 3 ಎಸೆತದಲ್ಲಿ ಒಂದೊಂದು ರನ್‌ ಗಳಷ್ಟೇ ಗಳಿಸಲಾಗಿ ತಂಡ ಸೊಲೊಪ್ಪಿಕೊಂಡಿತು.

    ಹೈದರಾಬಾದ್‌ ಪರ ಮಯಾಂಕ್‌ ಅಗರ್ವಾಲ್‌ 18 ರನ್‌, ರಾಹುಲ್‌ ತ್ರಿಪಾಠಿ 20 ರನ್‌, ಏಡನ್‌ ಮಾರ್ಕ್ರಮ್‌ 41 ರನ್‌, ಹೆನ್ರಿಕ್ ಕ್ಲಾಸೆನ್ 36 ರನ್‌ ಹಾಗೂ ಅಬ್ದುಲ್‌ ಸಮದ್‌ 21 ರನ್‌ ಗಳಿಸಿದರು.

    ಕೆಕೆಆರ್‌ ಪರ ವೈಭವ್‌ ಅರೋರ, ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರೆ, ಹರ್ಶಿತ್‌ ರಾಣಾ, ರಸ್ಸೆಲ್‌, ಅನುಕುಲ್‌ ರಾಯ್‌ ಹಾಗೂ ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ತಂಡ ಒಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಿದ್ದರೂ ರನ್‌ ಕಲೆಹಾಕುತ್ತಾ ಸಾಗಿತು. ಮಧ್ಯಮ ಕ್ರಮಾಂಕದಲ್ಲಿ ನಾಯಕ ನಿತೀಶ್‌ ರಾಣಾ, ರಿಂಕು ಸಿಂಗ್ ಹಾಗೂ ಆ್ಯಂಡ್ರೆ ರಸ್ಸೆಲ್‌ ಬ್ಯಾಟಿಂಗ್‌ ನೆರವಿನಿಂದ 170 ರನ್‌ಗಳ ಗಡಿದಾಟುವಲ್ಲಿ ಯಶಸ್ವಿಯಾಯಿತು.

    ಕೆಕೆಆರ್‌ ಪರ ನಾಯಕ ರಿಂಕು ಸಿಂಗ್‌ 46 ರನ್‌ (35 ಎಸೆತ, 4 ಬೌಂಡರಿ, 1 ಸಿಕ್ಸರ್‌), ನಿತೀಶ್‌ ರಾಣಾ 42 ರನ್‌ (31 ಎಸೆತ, 3 ಬೌಂಡರಿ, 3 ಸಿಕ್ಸರ್‌), ರಸ್ಸೆಲ್‌ 24 ರನ್‌ ಹಾಗೂ ಜೇಸನ್‌ ರಾಯ್‌ 20 ರನ್‌ ಗಳಿಸಿ ತಂಡಕ್ಕೆ ನೆರವಾದರು.

    ಹೈದರಾಬಾದ್‌ ಪರ ಮಾರ್ಕೊ ಜಾನ್ಸೆನ್‌, ಟಿ. ನಟರಾಜನ್‌ ತಲಾ 2 ವಿಕೆಟ್‌ ಪಡೆದರೆ, ಭುವನೇಶ್ವರ್‌ ಕುಮಾರ್‌, ಕಾರ್ತಿಕ್‌ ತ್ಯಾಗಿ, ಏಡನ್‌ ಮಾರ್ಕ್ರಮ್‌, ಮಯಾಂಕ್‌ ಮಾರ್ಕಂಡೆ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ತವರಿನಲ್ಲಿ ಸೇಡು ತೀರಿಸಿಕೊಳ್ಳಲು RCB ಕಾತರ – ಆದ್ರೆ KGF ಬಿಟ್ರೆ ಬ್ಯಾಟಿಂಗ್‌ನದ್ದೇ ಚಿಂತೆ

    ತವರಿನಲ್ಲಿ ಸೇಡು ತೀರಿಸಿಕೊಳ್ಳಲು RCB ಕಾತರ – ಆದ್ರೆ KGF ಬಿಟ್ರೆ ಬ್ಯಾಟಿಂಗ್‌ನದ್ದೇ ಚಿಂತೆ

    ಬೆಂಗಳೂರು: ಕಳೆದ ಬಾರಿ ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌ (KKR) ವಿರುದ್ಧ 81 ರನ್‌ಗಳಿಂದ ಹೀನಾಯವಾಗಿ ಸೋತಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಇಂದು (ಏ.26) ತವರಿನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾತರವಾಗಿದೆ.

    31 ಪಂದ್ಯಗಳಲ್ಲಿ ಮುಖಾಮುಖಿಯಾಗಿರುವ ಇತ್ತಂಡಗಳ ಪೈಕಿ ಆರ್‌ಸಿಬಿ 14 ರಲ್ಲಿ ಗೆಲುವು ಸಾಧಿಸಿದ್ದರೆ, ಕೆಕೆಆರ್‌ 17 ಪಂದ್ಯಗಳಲ್ಲಿ ಜಯಗಳಿಸಿದೆ. 2023ರ ಆವೃತ್ತಿಯಲ್ಲಿ 7 ಪಂದ್ಯಗಳನ್ನಾಡಿರುವ ಆರ್‌ಸಿಬಿ 4 ರಲ್ಲಿ ಗೆದ್ದು, 8 ಅಂಕಗಳೊಂದಿಗೆ ಪ್ಲೆ ಆಫ್‌ ಕನಸು ಜೀವಂತವಿರಿಸಿಕೊಂಡಿದೆ. ಆದರೆ 7 ಪಂದ್ಯಗಳಲ್ಲಿ ಕೇವಲ 2 ಪಂದ್ಯ ಗೆದ್ದು 4 ಅಂಕ ಗಳಿಸಿರುವ ಕೆಕೆಆರ್‌ ಪ್ಲೆ ಆಫ್‌ ಹಾದಿ ಕಠಿಣವಾಗಿಸಿಕೊಂಡಿದೆ. ಉಳಿದ 7 ಪಂದ್ಯಗಳಲ್ಲಿ ಕನಿಷ್ಠ 6 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಇದನ್ನೂ ಓದಿ: IPL 2023: ಶಾರ್ದೂಲ್‌ ಬೆಂಕಿ ಬ್ಯಾಟಿಂಗ್‌, ವರುಣ್ ಮಿಂಚಿನ ಬೌಲಿಂಗ್‌ – RCBಗೆ ಹೀನಾಯ ಸೋಲು

    KGF ಬಿಟ್ರೆ ಬ್ಯಾಟಿಂಗ್‌ನದ್ದೇ ಚಿಂತೆ:
    ಆರ್‌ಸಿಬಿ ತಂಡ 7 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ 200ಕ್ಕೂ ಹೆಚ್ಚು ರನ್‌ ಗಳಿಸಿದೆ. ಅದರಲ್ಲೂ ಸಿಎಸ್‌ಕೆ (CSK) ವಿರುದ್ಧ ನಡೆದ ಪಂದ್ಯದಲ್ಲಿ ಚೇಸಿಂಗ್‌ನಲ್ಲಿ 218 ರನ್‌ ಸಿಡಿಸಿದ್ದು ವಿಶೇಷ. ಆದ್ರೆ ಆರ್‌ಸಿಬಿ ಪ್ರತಿ ಇನ್ನಿಂಗ್ಸ್‌ನಲ್ಲೂ KGF (ವಿರಾಟ್‌ ಕೊಹ್ಲಿ (Virat Kohli), ಗ್ಲೇನ್‌ ಮ್ಯಾಕ್ಸ್‌ವೆಲ್‌ ಹಾಗೂ ಫಾಫ್‌ ಡು ಪ್ಲೆಸಿಸ್‌) (Faf du Plessis) ಬ್ಯಾಟಿಂಗ್‌ ಆಧಾರ ಸ್ತಂಭವಾಗಿದ್ದಾರೆ. ಈ ಮೂವರನ್ನ ಬಿಟ್ಟರೆ, ಮಧ್ಯಮ ಕ್ರಮಾಂಕದಲ್ಲಿ ಸಂಪೂರ್ಣ ಬ್ಯಾಟಿಂಗ್‌ ವೈಫಲ್ಯ ಎದುರಿಸಬೇಕಾಗಿದೆ. ಕಳೆದ ಸೀಜನ್‌ನಲ್ಲಿ ಆರ್‌ಸಿಬಿ ಪರ ಅಬ್ಬರಿಸಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ ತಂಡದಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡಿದ್ದ ದಿನೇಶ್‌ ಕಾರ್ತಿಕ್‌ ಕಳಪೆ ಫಾರ್ಮ್‌ನಿಂದ ಟೀಕೆಗೆ ಗುರಿಯಾಗಿದ್ದಾರೆ.

    ಇನ್ನೂ ಪ್ರತಿ ಪಂದ್ಯದಲ್ಲೂ ಆರಂಭಿಕರ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿರುವ ಕೆಕೆಆರ್‌ ಉತ್ತಮ ಸ್ಕೋರ್‌ ಗಳಿಸುತ್ತಿದೆಯಾದರೂ ಪಂದ್ಯ ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ. ಹಾಗಾಗಿ ಈ ಪಂದ್ಯ ಇತ್ತಂಡಗಳಿಗೂ ನಿರ್ಣಾಯಕವಾಗಿದ್ದು, ಜಯ ಯಾರ ಪಾಲಿಕೆ ಒಲಿಯಲಿದೆ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

    ಈಡನ್‌ ಗಾರ್ಡನ್‌ ಅಂಗಳದಲ್ಲಿ ಕಳೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 204‌ ರನ್‌ ಗಳಿಸಿತ್ತು. 205 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಕಳಪೆ ಬ್ಯಾಟಿಂಗ್‌ನಿಂದ 17.4 ಓವರ್‌ಗಳಲ್ಲೇ 123 ರನ್‌ಗಳಿಗೆ ಸರ್ವಪತನ ಕಂಡಿತ್ತು.

  • IPL 2023: ಇಶಾನ್‌ ಕಿಶನ್‌ ಶೈನ್‌, ಅಯ್ಯರ್‌ ಶತಕದಾಟ ವ್ಯರ್ಥ – ಮುಂಬೈಗೆ 5 ವಿಕೆಟ್‌ಗಳ ಜಯ

    IPL 2023: ಇಶಾನ್‌ ಕಿಶನ್‌ ಶೈನ್‌, ಅಯ್ಯರ್‌ ಶತಕದಾಟ ವ್ಯರ್ಥ – ಮುಂಬೈಗೆ 5 ವಿಕೆಟ್‌ಗಳ ಜಯ

    ಮುಂಬೈ: ಇಶಾನ್‌ ಕಿಶನ್‌ (Ishan Kishan) ಹಾಗೂ ಸೂರ್ಯಕುಮಾರ್‌ ಯಾದವ್‌ (Suryakumar Yadav) ಭರ್ಜರಿ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್‌, ಕೋಲ್ಕತ್ತಾ ನೈಟ್‌ರೈಡರ್ಸ್‌ (KolkataKnight Riders) ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ.

    ವಾಂಖೆಡೆ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ (KKR) 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 185 ರನ್‌ ಗಳಿಸಿತು. 186 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್‌ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ 17.4 ಓವರ್‌ಗಳಲ್ಲೇ 186 ರನ್‌ ಗಳಿಸಿ ಗೆದ್ದು ಬೀಗಿತು.

    ಬೃಹತ್‌ ಮೊತ್ತದ ಗುರಿ ಪಡೆದ ಮುಂಬೈ ಇಂಡಿಯನ್ಸ್‌ ತಂಡ ಸ್ಫೋಟಕ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ (Rohit Sharma) ಹಾಗೂ ಇಶಾನ್‌ ಕಿಶನ್‌ ಜೋಡಿ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿ ಕೆಕೆಆರ್‌ ಬೌಲರ್‌ಗಳನ್ನ ಚೆಂಡಾಡಿದರು. ಮೊದಲ ವಿಕೆಟ್‌ ಪತನಕ್ಕೆ ಈ ಜೋಡಿ 4.5 ಓವರ್‌ಗಳಲ್ಲಿ 65 ರನ್‌ ಸಿಡಿಸಿತ್ತು. ಈ ವೇಳೆ ರೋಹಿತ್‌ ಶರ್ಮಾ 13 ಎಸೆತಗಳಲ್ಲಿ 20 ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೆ 25 ಎಸೆತಗಳಲ್ಲಿ ಸ್ಫೋಟಕ 58 ರನ್‌ (5 ಬೌಂಡರಿ, 5 ಸಿಕ್ಸರ್)‌ ಚಚ್ಚಿದ ಇಶಾನ್‌ ಕಿಶನ್‌ ಸಹ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು.

    ನಂತರ 3ನೇ ವಿಕೆಟ್‌ಗೆ ಜೊತೆಯಾದ ಮಿಸ್ಟರ್‌ 360 ಸೂರ್ಯಕುಮಾರ್‌ ಯಾದವ್‌ (Suryakumar Yadav), ತಿಲಕ್‌ ವರ್ಮಾ ಸಹ ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡದ ಗೆಲುವಿಗೆ ನೆರವಾದರು. ಕಳೆದ ಮೂರು ಪಂದ್ಯಗಳಲ್ಲೂ ಕಳಪೆ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಸೂರ್ಯಕುಮಾರ್‌ ಯಾದವ್‌, ಈ ಪಂದ್ಯದಲ್ಲಿ ಉತ್ತಮ ಫಾರ್ಮ್‌ ಸಾಬೀತುಪಡಿಸಿದ್ರು. ಸೂರ್ಯ ಕೇವಲ 25 ಎಸೆತಗಳಲ್ಲಿ 43 ರನ್‌ (3 ಸಿಕ್ಸರ್‌, 4 ಬೌಂಡರಿ) ಗಳಿದರೆ, ತಿಲಕ್‌ ವರ್ಮಾ 30 ರನ್‌ (25 ಎಸೆತ, 1 ಸಿಕ್ಸರ್‌, 3 ಬೌಂಡರಿ) ಬಾರಿಸಿದರು. ಈ ನಡುವೆ ನೆಹಾಲ್ ವಧೇರಾ 6 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು.

    ಕೊನೆಯಲ್ಲಿ ಟಿಮ್‌ ಡೇವಿಡ್‌ 13 ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿ ಸಹಿತ 24 ರನ್‌ ಚಚ್ಚಿದರೆ, ಕ್ಯಾಮರೂನ್‌ ಗ್ರೀನ್‌ 1 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ಕೆಕೆಆರ್‌ ಪರ ಸುಯಶ್‌ ಸರ್ಮಾ 2 ವಿಕೆಟ್‌ ಕಿತ್ತರೆ, ಶಾರ್ದೂಲ್‌ ಠಾಕೂರ್‌, ವರುಣ್‌ ಚಕ್ರವರ್ತಿ ಹಾಗೂ ಲಾಕಿ ಫರ್ಗುಸನ್ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: 9 ಸಿಕ್ಸ್‌, 5 ಬೌಂಡರಿ – IPLನಲ್ಲಿ ವೇಗದ ಶತಕ ಸಿಡಿಸಿ ಮೆರೆದಾಡಿದ ವೆಂಕಟೇಶ್‌ ಅಯ್ಯರ್‌

    ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ಪರ ವೆಂಕಟೇಶ್ ಅಯ್ಯರ್ (Venkatesh Iyer) ಏಕಾಂಗಿ ಹೋರಾಟ ನಡೆಸಿದರು. ಆರಂಭಿಕರಾಗಿ ಕಣಕ್ಕಿಳಿದ ರಹಮಾನುಲ್ಲಾ ಗುರ್ಬಾಜ್, ನಾರಾಯಣ್‌ ಜಗದೀಶನ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರು. 3ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ವೆಂಕಟೇಶ್‌ ಅಯ್ಯರ್‌ ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾದರು. ಭದ್ರವಾಗಿ ಕ್ರೀಸ್‌ನಲ್ಲಿ ನೆಲೆಯೂರಿದ ಅಯ್ಯರ್‌ ಮುಂಬೈ ಬೌಲರ್‌ಗಳನ್ನ ಬೆಂಡೆತ್ತಿದರು. ಕೇವಲ 51 ಎಸೆತಗಳನ್ನು ಎದುರಿಸಿ ಸ್ಫೋಟಕ 104 ರನ್‌ (9 ಸಿಕ್ಸರ್‌, 6 ಬೌಂಡರಿ) ಸಿಡಿಸಿದರು. ವೆಂಕಟೇಶ್ ಐಯ್ಯರ್ ಸಿಡಿಸಿದ ಈ ಶತಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಕಳೆದ 15 ವರ್ಷಗಳಲ್ಲಿಯೇ ಮೊದಲ ಶತಕವಾಗಿದೆ. ಈ ಮೂಲಕ ಕೆಕೆಆರ್ ಫ್ರಾಂಚೈಸಿಯ ಸುದೀರ್ಘ ಕಾಲದ ಶತಕದ ಬರವನ್ನು ನೀಗಿಸಿದರು.

    ನಂತರ ಕಣಕ್ಕಿಳಿದರವರಲ್ಲಿ ಯಾರೊಬ್ಬರು ಉತ್ತಮ ಪ್ರದರ್ಶನ ತೋರದೇ ಇದ್ದರಿಂದ ಕೆಕೆಆರ್‌ ತಂಡ 185 ರನ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ನಾಯಕ ನಿತೀಶ್‌ ರಾಣಾ 5 ರನ್‌, ಶಾರ್ದೂಲ್‌ ಠಾಕೂರ್‌ 13 ರನ್‌, ರಿಂಕು ಸಿಂಗ್‌ 18 ರನ್‌ ಗಳಿಸಿದ್ರೆ, ಕೊನೆಯಲ್ಲಿ ಆ್ಯಂಡ್ರೆ ರಸ್ಸೆಲ್‌ 21 ರನ್‌ (11 ಎಸೆತ, 3 ಬೌಂಡರಿ, 1‌ ಸಿಕ್ಸರ್), ಸುನೀಲ್‌ ನರೇನ್‌ 2 ರನ್‌ ಗಳಿಸಿ ಅಜೇಯರಾಗುಳಿದರು.

    ಇನ್ನೂ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ಮುಂಬೈ ಇಂಡಿಯನ್ಸ್‌ ಪರ ಹೃತಿಕ್‌ ಶೋಕೀನ್‌ 2 ವಿಕೆಟ್‌ ಪಡೆದರೆ, ಕ್ಯಾಮರೂನ್ ಗ್ರೀನ್, ದುವಾನ್‌ ಜಾನ್ಸೆನ್‌, ಪಿಯೂಷ್‌ ಚಾವ್ಲಾ ಹಾಗೂ ರಿಲೇ ಮೆರೆದಿಥ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಸಂಕ್ಷಿಪ್ತ ಸ್ಕೋರ್‌
    ಕೋಲ್ಕತ್ತಾ ನೈಟ್‌ರೈಡರ್ಸ್‌ – 20 ಓವರ್‌ – 185/6
    ಮುಂಬೈ ಇಂಡಿಯನ್ಸ್‌ – 17.4 ಓವರ್‌ – 186/5

  • 9 ಸಿಕ್ಸ್‌, 5 ಬೌಂಡರಿ – IPLನಲ್ಲಿ ವೇಗದ ಶತಕ ಸಿಡಿಸಿ ಮೆರೆದಾಡಿದ ವೆಂಕಟೇಶ್‌ ಅಯ್ಯರ್‌

    9 ಸಿಕ್ಸ್‌, 5 ಬೌಂಡರಿ – IPLನಲ್ಲಿ ವೇಗದ ಶತಕ ಸಿಡಿಸಿ ಮೆರೆದಾಡಿದ ವೆಂಕಟೇಶ್‌ ಅಯ್ಯರ್‌

    ಮುಂಬೈ: ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ತಂಡದ ಆಟಗಾರ ವೆಂಕಟೇಶ್‌ ಅಯ್ಯರ್‌ (Venkatesh Iyer) 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ವೇಗದ ಶತಕ ಸಿಡಿಸಿ ವಿಶೇಷ ಸಾಧನೆ ಮಾಡಿದ್ದಾರೆ.

    ಎರಡು ದಿನಗಳ ಹಿಂದೆ ಕೆಕೆಆರ್‌ ವಿರುದ್ಧ ನಡೆದ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಆಟಗಾರ ಹ್ಯಾರಿ ಬ್ರೂಕ್‌ 55 ಎಸೆತಗಳಲ್ಲಿ ಚೊಚ್ಚಲ ಶತಕ ಸಿಡಿಸಿ ಸಾಧನೆ ಮಾಡಿದ್ದರು. ಇಂದು (ಏಪ್ರಿಲ್‌ 16) ವೆಂಕಟೇಶ್‌ ಅಯ್ಯರ್‌ 49 ಎಸೆತಗಳಲ್ಲೇ ಭರ್ಜರಿ 100 ರನ್‌ ಬಾರಿಸಿದರು. 9 ಸಿಕ್ಸರ್‌ ಹಾಗೂ 5 ಬೌಂಡರಿಗಳೂ ಇದರಲ್ಲಿ ಸೇರಿವೆ. ಒಟ್ಟಾರೆ ಈ ಪಂದ್ಯದಲ್ಲಿ ವೆಂಕಟೇಶ್‌ 51 ಎಸೆತಗಳಲ್ಲಿ 104 (6 ಬೌಂಡರಿ, 9 ಸಿಕ್ಸರ್‌) ಚಚ್ಚಿದರು. ಇದನ್ನೂ ಓದಿ: IPL 2023: ಡೆಲ್ಲಿಗೆ ಸತತ 5ನೇ ಸೋಲು – ತವರಿನಲ್ಲಿ RCBಗೆ 23 ರನ್‌ಗಳ ಭರ್ಜರಿ ಜಯ

    ಭಾನುವಾರ ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 185 ರನ್‌ ಗಳಿಸಿತು. ಮೊದಲ 23 ಎಸೆತಗಳಲ್ಲಿ 50 ರನ್‌ ಗಳಿಸಿದ್ದ ವೆಂಕಟೇಶ್‌ ಅಯ್ಯರ್‌, ಕೊನೆಯಲ್ಲಿ ನಿಧಾನಗತಿಯ ಬ್ಯಾಟಿಂಗ್‌ನಿಂದ ಮುಂದಿನ 26 ಎಸೆತಗಳಲ್ಲಿ 50 ರನ್‌ ಗಳಿಸಿ ಶತಕ ಪೂರೈಸಿದರು. ಇದನ್ನೂ ಓದಿ: ಐಪಿಎಲ್‌ನಲ್ಲಿ ಮೊದಲ ಶತಕ – ಕೋಲ್ಕತ್ತಾ ಬೌಲರ್‌ಗಳನ್ನು ಚೆಂಡಾಡಿದ ಬ್ರೂಕ್‌

    ರನ್‌ ಏರಿದ್ದು ಹೇಗೆ?
    50 ರನ್‌ 30 ಎಸೆತ
    100 ರನ್‌ 64 ಎಸೆತ
    150 ರನ್‌ 99 ಎಸೆತ
    185 ರನ್‌ 120 ಎಸೆತ

  • ಕೊನೆಯವರೆಗೂ ಹೋರಾಡಿದ ರಿಂಕು – ಹೈದರಾಬಾದ್‌ಗೆ 23 ರನ್‌ಗಳ ಜಯ

    ಕೊನೆಯವರೆಗೂ ಹೋರಾಡಿದ ರಿಂಕು – ಹೈದರಾಬಾದ್‌ಗೆ 23 ರನ್‌ಗಳ ಜಯ

    ಕೋಲ್ಕತ್ತಾ: ಆರಂಭಿಕ ಆಟಗಾರ ಹ್ಯಾರಿ ಬ್ರೂಕ್‌ (Harry Brook) ಅವರ ಸ್ಫೋಟಕ ಶತಕದಿಂದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ವಿರುದ್ಧ 23 ರನ್‌ಗಳ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 4 ವಿಕೆಟ್‌ ನಷ್ಟಕ್ಕೆ 228 ರನ್‌ ಹೊಡೆಯಿತು. 229 ರನ್‌ಗಳ ಸವಾಲು ಪಡೆದ ಕೋಲ್ಕತ್ತಾ 7 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿ ಸೋಲನ್ನು ಒಪ್ಪಿಕೊಂಡಿತು.

    ಕೋಲ್ಕತ್ತಾ 30 ರನ್‌ಗಳಿಸುವಷ್ಟರಲ್ಲೇ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡಿತ್ತು. ನಾಯಕ ನಿತೀಶ್‌ ರಾಣಾ (Nitish Rana) ಮತ್ತು ರಿಂಕು ಸಿಂಗ್‌ (Rinku Singh) ಸ್ಫೋಟಕ ಆಟವಾಡಿದರು. ರಾಣಾ 75 ರನ್‌(41 ಎಸೆತ, 5 ಬೌಂಡರಿ, 6 ಸಿಕ್ಸರ್‌) ಹೊಡೆದು ಔಟಾದರು. ಕೊನೆಯವರೆಗೂ ಹೋರಾಡಿದ ರಿಂಕು ಔಟಾಗದೇ 58 ರನ್‌(31 ಎಸೆತ, 4 ಬೌಂಡರಿ, 4 ಸಿಕ್ಸರ್‌) ಚಚ್ಚಿದ್ದರು.

    ಕೊನೆಯ 24 ಎಸೆತದಲ್ಲಿ ಕೋಲ್ಕತ್ತಾ ಗೆಲ್ಲಲು 70 ರನ್‌ಗಳ ಅವಶ್ಯಕತೆಯಿತ್ತು. ರಾಣಾ ಮತ್ತು ರಿಂಕು ಸಿಂಗ್‌ 6ನೇ ವಿಕೆಟಿಗೆ 39 ಎಸೆತಗಳಲ್ಲಿ 69 ರನ್‌ ಹೊಡೆದಿದ್ದರು. 17ನೇ ಓವರ್‌ನ ಮೊದಲ ಎಸೆತವನ್ನು ರಾಣಾ ಸಿಕ್ಸರ್‌ಗೆ ಅಟ್ಟಿದ್ದರೆ ಎರಡನೇ ಎಸೆತವನ್ನೂ ಸಿಕ್ಸರ್‌ಗೆ ಅಟ್ಟುವ ಪ್ರಯತ್ನ ನಡೆಸಿದರು. ಆದರೆ ಕ್ಯಾಚ್‌ ಔಟಾದ ಪರಿಣಾಮ ಪಂದ್ಯ ಹೈದರಬಾದ್‌ ಕಡೆಗೆ ತಿರುಗಿತು.

    ಬ್ರೂಕ್‌ ಶತಕ:
    ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಆರಂಭಿಕ ಆಟಗಾರ ಹ್ಯಾರಿ ಬ್ರೂಕ್‌ ಈ ಐಪಿಎಲ್‌ (IPL 2023) ಅವೃತ್ತಿಯಲ್ಲಿ ಮೊದಲ ಶತಕ (Century) ಸಿಡಿಸಿದ್ದಾರೆ. ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧದ ಪಂದ್ಯದಲ್ಲಿ 55 ಎಸೆತಗಳಲ್ಲಿ ಔಟಾಗದೇ 100 ರನ್‌ (12 ಬೌಂಡರಿ, 3 ಸಿಕ್ಸರ್‌) ಚಚ್ಚಿದ್ದರು. ಇದು ಈ ಐಪಿಎಲ್‌ನಲ್ಲಿ ತಂಡವೊಂದರ ಅತಿ ಹೆಚ್ಚು ಸ್ಕೋರ್‌ ಆಗಿರುವುದು ವಿಶೇಷ.

    ಮೊದಲ 32 ಎಸೆತಗಳಲ್ಲಿ 50 ರನ್‌ ಬಂದರೆ ನಂತರ 33 ಎಸೆತದಲ್ಲಿ ಬ್ರೂಕ್‌ 50 ರನ್‌ ಚಚ್ಚಿದ್ದಾರೆ. ಹೈದರಾಬಾದ್‌ ಪರ ನಾಯಕ ಐಡೆನ್ ಮಾರ್ಕ್ರಾಮ್ 50 ರನ್‌(26 ಎಸೆತ, 2 ಬೌಂಡರಿ, 5 ಸಿಕ್ಸರ್‌), ಅಭಿಷೇಕ್‌ ಶರ್ಮಾ 32 ರನ್‌ (17 ಎಸೆತ, 3 ಬೌಂಡರಿ, 2 ಸಿಕ್ಸರ್)‌, ಕ್ಲಾಸೆನ್‌ ಔಟಾಗದೇ 1 6 ರನ್‌ (6 ಎಸೆತ, 2 ಬೌಂಡರಿ, 1 ಸಿಕ್ಸರ್‌) ಹೊಡೆದರು. ಇತರೇ ರೂಪದಲ್ಲಿ 12 ರನ್‌ (1 ನೋಬಾಲ್‌, 11 ವೈಡ್‌) ಬಂದಿತ್ತು.

    ರನ್‌ ಏರಿದ್ದು ಹೇಗೆ?
    50 ರನ್‌ – 26 ಎಸೆತ
    100 ರನ್‌ – 66 ಎಸೆತ
    150 ರನ್‌ – 59 ಎಸೆತ
    200 ರನ್‌ – 109 ಎಸೆತ
    228 ರನ್‌ – 120 ಎಸೆತ

  • IPL 2023: ಕೊನೆಯ ಓವರ್‌ನಲ್ಲಿ 6, 6, 6, 6, 6 -‌ KKRಗೆ 3 ವಿಕೆಟ್‌ಗಳ ರೋಚಕ ಜಯ

    IPL 2023: ಕೊನೆಯ ಓವರ್‌ನಲ್ಲಿ 6, 6, 6, 6, 6 -‌ KKRಗೆ 3 ವಿಕೆಟ್‌ಗಳ ರೋಚಕ ಜಯ

    ಅಹಮದಾಬಾದ್‌: ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್‌ ಸಿಡಿಸಿದ 5 ಭರ್ಜರಿ ಸಿಕ್ಸರ್‌ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌, ಹಾಲಿ ಚಾಂಪಿಯನ್ಸ್‌ ಗುಜರಾತ್‌ ಜೈಂಟ್ಸ್‌ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

    ಕೆಕೆಆರ್‌ ಗೆಲುವಿಗೆ ಕೊನೆಯ ಓವರ್‌ನಲ್ಲಿ 29 ರನ್‌ಗಳ ಅಗತ್ಯವಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಉಮೇಶ್‌ ಯಾದವ್‌ ಮೊದಲ ಎಸೆತದಲ್ಲಿ 1 ರನ್‌ ತೆಗೆದುಕೊಂಡರು. ನಂತರ ಕ್ರೀಸ್‌ಗೆ ಬಂದ ರಿಂಕು ಸಿಂಗ್‌ ಸತತ 5 ಎಸೆತಗಳನ್ನೂ ಭರ್ಜರಿ ಸಿಕ್ಸರ್‌ ಬಾರಿಸಿ ತಂಡವನ್ನು ಗೆಲುವಿನ ಹಾದಿಗೆ ಕೊಂಡೊಯ್ದರು. ಈ ಮೂಲಕ ಗೆಲುವಿನ ಹಾದಿಯಲ್ಲಿದ್ದ ಹಾಲಿ ಚಾಂಪಿಯನ್ಸ್‌ ಪಡೆಗೆ ಸೋಲುಣಿಸಿ ಕೆಕೆಆರ್‌ ತಂಡ ಸತತ 2ನೇ ಗೆಲುವು ದಾಖಲಿಸಿತು.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ತಂಡ ಸಾಯಿ ಸುದರ್ಶನ್ ಹಾಗೂ ವಿಜಯ್ ಶಂಕರ್ ಅಮೋಘ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 204 ರನ್‌ ಗಳಿಸಿತು. 205 ರನ್‌ ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿ ರೋಚಕ ಜಯ ಸಾಧಿಸಿತು. ಇದನ್ನೂ ಓದಿ: RCB ಅಭಿಮಾನಿಗಳೇ ಎಚ್ಚರ – ಬ್ಲ್ಯಾಕ್‌ನಲ್ಲಿ ದುಬಾರಿ ಬೆಲೆಗೆ ಟಿಕೆಟ್ ಖರೀದಿಸಿ ಮೋಸ ಹೋಗದಿರಿ

    ಚೇಸಿಂಗ್‌ ಆರಂಭಿಸಿದ ಕೆಕೆಆರ್‌ ಉತ್ತಮ ಶುಭಾರಂಭ ಪಡೆಯುವಲ್ಲಿ ವಿಫಲವಾಯಿತು. ಆದರೂ 3ನೇ ವಿಕೆಟ್‌ಗೆ ಜೊತೆಯಾದ ವೆಂಕಟೇಶ್‌ ಅಯ್ಯರ್‌, ನಾಯಕ ನಿತೀಶ್‌ ರಾಣ ಭರ್ಜರಿ ಬ್ಯಾಟಿಂಗ್‌ ನಡೆಸಿದರು. 3ನೇ ವಿಕೆಟ್‌ ಪತನಕ್ಕೆ ಈ ಜೋಡಿ 55 ಎಸೆತಗಳಲ್ಲಿ 100 ರನ್‌ ಕಲೆಹಾಕಿತ್ತು. ಇದರಿಂದ ತಂಡದಲ್ಲಿ ಗೆಲುವಿನ ಆಸೆ ಚಿಗುರಿತ್ತು. ಅಷ್ಟರಲ್ಲೇ ನಿತೀಶ್‌ ರಾಣ 29 ಎಸೆತಗಳಲ್ಲಿ ಭರ್ಜರಿ 45 ರನ್‌ (4 ಬೌಂಡರಿ, 3 ಸಿಕ್ಸರ್‌) ಗಳಿಸಿ ಔಟಾದರು. ಇನ್ನೂ 207.50 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ ಏಕಾಂಗಿ ಹೋರಾಟ ನಡೆಸಿದ ವೆಂಕಟೇಶ್‌ ಅಯ್ಯರ್‌ 40 ಎಸೆತಗಳಲ್ಲಿ ಬರೋಬ್ಬರಿ 83 ರನ್‌ (5 ಸಿಕ್ಸರ್‌, 8 ಬೌಂಡರಿ) ಬಾರಿಸಿ ವಿಕೆಟ್‌ ಒಪ್ಪಿಸಿದರು.

    ಈ ಬೆನ್ನಲ್ಲೇ ಆಂಡ್ರೆ ರಸ್ಸೆಲ್‌, ಸುನೀಲ್‌ ನರೇನ್‌, ಶಾರ್ದೂಲ್‌ ಠಾಕೂರ್‌ ರಶೀದ್‌ ಖಾನ್‌ ಸ್ಪಿನ್‌ ದಾಳಿಗೆ ಮಕಾಡೆ ಮಲಗಿದರು. ಇದರಿಂದ ತಂಡ ಗೆಲುವಿನ ಭರವಸೆ ಕೈಚೆಲ್ಲಿತು. ಆದರೆ ಕ್ರೀಸ್‌ನಲ್ಲಿದ್ದ ರಿಂಕು ಸಿಂಗ್‌ ಕೊನೆಯ ಓವರ್‌ನಲ್ಲಿ ಭರ್ಜರಿ 5 ಸಿಕ್ಸರ್‌ ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. 228.57 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಿಂಕು ಸಿಂಗ್‌ 21 ಎಸೆತಗಳಲ್ಲಿ 48 ರನ್‌ (6 ಸಿಕ್ಸರ್‌, 1 ಬೌಂಡರಿ) ಬಾರಿಸಿದರೆ, ಉಮೇಶ್‌ ಯಾದವ್‌ 5 ರನ್‌ ಗಳಿಸಿ ಅಜೇಯರಾಗುಳಿದರು.

    ಗುಜರಾತ್‌ ಜೈಂಟ್ಸ್ ಪರ ರಶೀದ್‌ ಖಾನ್‌ 4 ಓವರ್‌ಗಳಲ್ಲಿ 37 ರನ್‌ ನೀಡಿ 3 ಪ್ರಮುಖ ವಿಕೆಟ್‌ ಕಿತ್ತರೆ, ಅಲ್ಝರಿ ಜೋಸೆಫ್‌ 2 ವಿಕೆಟ್‌ ಹಾಗೂ, ಮೊಹಮ್ಮದ್‌ ಶಮಿ, ಜಾಸ್‌ ಲಿಟಲ್‌ ತಲಾ ಒಂದು ವಿಕೆಟ್‌ ಕಬಳಿಸಿ ಮಿಂಚಿದರು. ಇದನ್ನೂ ಓದಿ: ಒಂದೇ ಕೈಯಲ್ಲಿ ಜಡೇಜಾ ಕ್ಯಾಚ್‌ – 10 ವರ್ಷದ ಹಿಂದೆ ʼಸರ್‌ ಜಡೇಜಾʼ ಎಂದಿದ್ದ ಧೋನಿ ಟ್ವೀಟ್‌ ವೈರಲ್‌

    ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ಪರ ಆರಂಭಿಕ ವೃದ್ಧಿಮಾನ್‌ ಸಹಾ 17 ರನ್‌ಗಳಿಸಿ ವಿಕೆಟ್ ಕಳೆದುಕೊಂಡ ಬಳಿಕ ಕ್ರೀಸ್‌ಗಿಳಿದ ಸಾಯಿ ಸುದರ್ಶನ್‌ ಮತ್ತೊಮ್ಮೆ ಜವಾಬ್ದಾರಿಯುತ ಪ್ರದರ್ಶನ ನೀಡಿ ಗಮನಸೆಳೆದರು. ಸತತ 2ನೇ ಅರ್ಧ ಶತಕ ಸಿಡಿಸಿ ತಂಡ ಬೃಹತ್‌ ಮೊತ್ತ ಪೇರಿಸಲು ನೆರವಾದರು. ಸುದರ್ಶನ್‌ 38 ಎಸೆತಗಳಲ್ಲಿ 53 ರನ್‌ (2 ಸಿಕ್ಸರ್‌, 3 ಬೌಂಡರಿ) ಗಳಿಸಿ ಮಿಂಚಿದರು. ಸುದರ್ಶನ್‌ಗೆ ಉತ್ತಮ ಸಾಥ್ ನೀಡಿದ ಶುಭಮನ್‌ ಗಿಲ್ 39 ರನ್‌ (31 ಎಸೆತ, 5 ಬೌಂಡರಿ) ಗಳಿಸಿ ಔಟಾದರು. ಈ ಬೆನ್ನಲ್ಲೇ ಅಭಿನಮ್ ಮನೋಹರ್ 14 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

    ನಂತರ ಜೊತೆಯಾದ ವಿಜಯ್‌ ಶಂಕರ್‌ ಹಾಗೂ ಡೇವಿಡ್‌ ಮಿಲ್ಲರ್‌ ಜೋಡಿ ಭರ್ಜರಿ ರನ್‌ ಕಲೆಹಾಕಿತು. ಮುರಿಯದ 5ನೇ ವಿಕೆಟ್‌ಗೆ ಈ ಜೋಡಿ ಕೇವಲ 16 ಎಸೆತಗಳಲ್ಲಿ ಭರ್ಜರಿ 51 ರನ್‌ ಸಿಡಿಸಿತ್ತು. ಈ ವೇಳೆ ವಿಜಯ್‌ ಶಂಕರ್‌ 13 ಎಸೆತಗಳಲ್ಲಿ 46 ರನ್‌ ಚಚ್ಚಿದರೆ, ಮಿಲ್ಲರ್‌ 3 ಎಸೆತಗಳಲ್ಲಿ 2 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. 262 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ವಿಜಯ್‌ ಶಂಕರ್‌ 24 ಎಸೆತಗಳಲ್ಲಿ ಸ್ಫೋಟಕ 63 ರನ್‌ (4 ಬೌಂಡರಿ, 5 ಸಿಕ್ಸರ್)‌ ಚಚ್ಚಿ ತಂಡದ ಮೊತ್ತ 200ರ ಗಡಿ ದಾಟಿಸಿದರು.

    ಕೊಲ್ಕತ್ತಾ ನೈಟ್ ರೈಡರ್ಸ್ ಪರ ಸುನಿಲ್ ನರೇನ್‌ 3 ವಿಕೆಟ್ ಕಿತ್ತರೆ, ಸುಯಶ್ ಶರ್ಮಾ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.