Tag: Nivedita Gowda

  • ಶೂಟಿಂಗ್ ಸ್ಪಾಟ್ ನಲ್ಲೇ ಮದುವೆ ವಾರ್ಷಿಕೋತ್ಸವ ಆಚರಿಸಿದ ಚಂದನ್

    ಶೂಟಿಂಗ್ ಸ್ಪಾಟ್ ನಲ್ಲೇ ಮದುವೆ ವಾರ್ಷಿಕೋತ್ಸವ ಆಚರಿಸಿದ ಚಂದನ್

    ದುವೆ ವಾರ್ಷಿಕೋತ್ಸವವನ್ನು (Wedding Anniversary) ಈ ಬಾರಿ ಶೂಟಿಂಗ್ ಸ್ಪಾಟ್ ನಲ್ಲಿ ಆಚರಿಸಿಕೊಂಡಿದ್ದಾರೆ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ. ಈ ಜೋಡಿ ಇದೇ ಮೊದಲಬಾರಿಗೆ ಬೆಳ್ಳಿತೆರೆಯ ಮೇಲೂ ಜೋಡಿಯಾಗಿ ಕಾಣಿಸಿಕೊಂಡಿದ್ದು, ಚಿತ್ರಕ್ಕೆ ಕ್ಯಾಂಡಿ ಕ್ರಶ್ ಎಂದು ಹೆಸರಿಡಲಾಗಿದೆ.

    ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ (Puneeth Srinivas) ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪುನೀತ್ ಶ್ರೀನಿವಾಸ್ ಕನ್ನಡ  ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ  ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ  ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು  12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ  ನಿರ್ದೇಶನಕ್ಕಿಳಿದಿದ್ದಾರೆ.

    ಅವರು ತಮ್ಮ  ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು  ಆರಂಭಿಸಿದ್ದು, ಶ್ರೀ ಚೌಡೇಶ್ಬರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡಿದ್ದಾರೆ.

     

    ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಸದ್ಯ ರೊಮ್ಯಾಂಟಿಕ್ ಗೀತೆಯೊಂದರ ಶೂಟ್ ಮಾಡುತ್ತಿದ್ದಾರೆ ನಿರ್ದೇಶಕರು.

  • ಮಹಿಳಾ ಪ್ರಧಾನ ಸಿನಿಮಾದಲ್ಲಿ ನಿವೇದಿತಾ ಗೌಡ

    ಮಹಿಳಾ ಪ್ರಧಾನ ಸಿನಿಮಾದಲ್ಲಿ ನಿವೇದಿತಾ ಗೌಡ

    ದೇ ಮೊದಲ ಬಾರಿಗೆ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Nivedita Gowda) ದಂಪತಿ ಹಿರಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ನಿವೇದಿತಾ, ಈ ಹಿಂದೆಯೂ ಸಿನಿಮಾದಲ್ಲಿ ನಟಿಸುವಂತೆ ಆಫರ್ ಬಂದಿತ್ತು. ಆಗ ನಾನಿನ್ನೂ ಓದುತ್ತಿದ್ದೆ. ಹಾಗಾಗಿ ಒಪ್ಪಿಕೊಳ್ಳಲಿಲ್ಲ. ಈಗ ಒಪ್ಪಿಕೊಂಡಿದ್ದೇನೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ನನ್ನ ವೃತ್ತಿ ಬದುಕಿಗೆ ಒಳ್ಳೆಯ ವೇದಿಕೆಯನ್ನು ಒದಗಿಸಲಿದೆ ಎಂದಿದ್ದಾರೆ.

    ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ (Puneeth Srinivas) ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರೇ ದಂಪತಿಗೆ ಕತೆ ಒಪ್ಪಿಸಿ ಚಿತ್ರ ಮಾಡಲು ಮುಂದಾಗಿದ್ದಾರೆ.

    ಪುನೀತ್ ಶ್ರೀನಿವಾಸ್ ಕನ್ನಡ  ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ  ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ  ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು  12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ  ನಿರ್ದೇಶನಕ್ಕಿಳಿಯುತ್ತಿದ್ದಾರೆ.

    ಅವರು ತಮ್ಮ  ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು  ಆರಂಭಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ  ಶ್ರೀ ಚೌಡೇಶ್ವರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದ್ದಾರೆ.

     

    ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮುಂದಿನ ತಿಂಗಳಿಂದ ಆರಂಭಿಸಿ ಬಹುತೇಕ ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆ ಚಿತ್ರತಂಡಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಮುಹೂರ್ತದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನಿರ್ದೇಶಕ ಪುನೀತ್ ತಿಳಿಸಿದ್ದಾರೆ.

  • ಚಂದನ್ ಶೆಟ್ಟಿ-ನಿವೇದಿತಾ  ಜೋಡಿಯ ಹೊಸ ಹೆಜ್ಜೆ ‘ನಾದ ಯೋಗಿ’

    ಚಂದನ್ ಶೆಟ್ಟಿ-ನಿವೇದಿತಾ ಜೋಡಿಯ ಹೊಸ ಹೆಜ್ಜೆ ‘ನಾದ ಯೋಗಿ’

    ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ (Chandan Shetty) ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ (Nada Yogi) ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ.

    ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ (Nivedita Gowda) ಚಾಲನೆ ನೀಡಿದರು.  ಗಣಪತಿ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ಕುರಿತಾದ ‘ಗಂ ಗಣಪತಿ’ ಹಾಡಿನೊಂದಿಗೆ ಚಾನಲ್ ಆರಂಭವಾಗಿದೆ. ಈ ಕುರಿತು ಚಂದನ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಕಳೆದ ಎಂಟು ವರ್ಷಗಳ ಹಿಂದೆ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ  ಮೊದಲ ಹಾಡು ಬಿಡುಗಡೆಯಾಗಿತ್ತು. ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ನಾದ ಯೋಗಿ ಎಂಬ ಹೊಸ ಯೂಟ್ಯೂಬ್ ಚಾನಲ್ ಅನ್ನು ಜೀರೋ ಸಬ್ ಸ್ಕ್ರೈಬರ್ ನೊಂದಿಗೆ ಆರಂಭಿಸಿದ್ದಾರೆ. ಈ ಚಾನಲ್ ಬರೀ ಭಕ್ತಿಗೀತೆಗಳಿಗೆ ಮೀಸಲು ಆಗಿರಲಿದೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ’ಕೆಂದಾವರೆ’ ಫಸ್ಟ್ ಲುಕ್ ರಿಲೀಸ್- ಹೊಸಬರ ತಂಡಕ್ಕೆ ಅಶ್ವಿನಿ ಪುನೀತ್ ಸಾಥ್

    ಈಗಿನ ಯುವಜನತೆಗೆ ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಸಲುವಾಗಿ ನಾದಯೋಗಿ ಚಾನಲ್ ಅನ್ನು ಆರಂಭಿಸಿದ್ದೇನೆ. ಇದಕ್ಕೆ ನನಗೆ ಮೈಸೂರಿನ ಅರ್ಜುನ್ ಅವದೂತರು ಪ್ರೇರಣೆ. ಇದರ ಮೊದಲ ಗೀತೆಯಾಗಿ ಗಂ ಗಣಪತಿ ಎಂಬ ಹಾಡನ್ನು ಬಿಡುಗಡೆ ಮಾಡಿದ್ದೇವೆ‌. ಮುಂದೆ ಕೂಡ ಹನುಮ, ಶಿವ ಸೇರಿದಂತೆ ಅನೇಕ ದೇವರುಗಳ ಹಾಡುಗಳನ್ನು ಬಿಡುಗಡೆ ಮಾಡುತ್ತೇವೆ‌. ಈಗ ಬಿಡುಗಡೆಯಾಗಿರುವ ಗಣಪತಿ ಹಾಡಿನಲ್ಲಿ ನಲವತ್ತೆಂಟು ಗಣಪತಿ ನಾಮಗಳಿದೆ. ನನ್ನ ತಮ್ಮ ಪುನೀತ್ ಅದ್ಭುತವಾಗಿ ಈ ಹಾಡಿನ ವಿಡಿಯೋ ಮಾಡಿದ್ದಾನೆ. ನಾನೇ ಹಾಡಿದ್ದೇ‌ನೆ. ಮುಂದೆ ನಾದ ಯೋಗಿಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ನೀಡಲಾಗುವುದು ಎಂದು ಚಂದನ್ ಶೆಟ್ಟಿ ತಿಳಿಸಿದರು‌.

    ಚಂದನ್ ಶೆಟ್ಟಿ ಅವರ ನೂತನ ಪ್ರಯತ್ನಕ್ಕೆ  ಶುಭಕೋರಲು ನಿರ್ಮಾಪಕರಾದ ಸಂಜಯ್ ಗೌಡ, ಗೋವಿಂದರಾಜು, ನವರಸನ್ ಮುಂತಾದ ಗಣ್ಯರು ಆಗಮಿಸಿ ಶುಭ ಕೋರಿದರು. ಪುನೀತ್ ಶೆಟ್ಟಿ ಅವರು ಹಾಡಿನ ಬಗ್ಗೆ ಮಾತನಾಡಿದರು. ಸಮಾರಂಭದ ನಂತರ ಕೇಕ್ ಕಟ್ ಮಾಡುವ ಮೂಲಕ ಚಂದನ್ ಶೆಟ್ಟಿ ಅವರ ಹುಟ್ಟುಹಬ್ಬ ಆಚರಿಸಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀರೊಳಗೂ ರೊಮ್ಯಾನ್ಸ್ ಮಾಡಿದ ಚಂದನ್ ಶೆಟ್ಟಿ-ನಿವ್ವಿ

    ನೀರೊಳಗೂ ರೊಮ್ಯಾನ್ಸ್ ಮಾಡಿದ ಚಂದನ್ ಶೆಟ್ಟಿ-ನಿವ್ವಿ

    ಗಾಯಕ ಚಂದನ್ ಶೆಟ್ಟಿ (Chandan Shetty) ಮತ್ತು ಕಿರುತೆರೆ ನಟಿ ಹಾಗೂ ಚಂದನ್ ಪತ್ನಿ ನಿವೇದಿತಾ ಗೌಡ (Nivedita Gowda) ಹಾಲಿಡೇ ಮೂಡ್ ನಲ್ಲಿದ್ದಾರೆ. ಪ್ರವಾಸದಲ್ಲಿ ವಿಡಿಯೋವೊಂದನ್ನು ಮಾಡಿದ್ದು, ಆ ವಿಡಿಯೋ ಸಖತ್ ವೈರಲ್ ಆಗಿದೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅಂಡರ್ ವಾಟರ್ ಶೂಟ್ ಮಾಡಿದ್ದು, ನೀರಿನೊಳಗೆ ರೊಮ್ಯಾನ್ಸ್ (Romance) ಮಾಡಿದ್ದಾರೆ.

    ಅಂಡರ್ ವಾಟರ್ (Underwater) ನಲ್ಲಿ ತುಟಿಗೆ ತುಟಿ ಬೆರೆಸಿ ರೊಮ್ಯಾಂಟಿಕ್ ಆಗಿ ವಿಡಿಯೋ ಶೂಟ್ ಮಾಡಿದ್ದು, ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಚಂದನ್ ಶೆಟ್ಟಿ. ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಾಮೆಂಟ್ಸ್ ಬರುತ್ತಿವೆ. ಕೆಲವರು ಸಪೋರ್ಟ್ ಮಾಡಿದರೆ ಇನ್ನೂ ಕೆಲವರು ಖಾಸಗಿ ಸಂಗತಿಗಳನ್ನು ಬಹಿರಂಗವಾಗಿ ತೋರಿಸುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ಸಮಂತಾ ನಟನೆಯ ಹಾಲಿವುಡ್ ಸಿನಿಮಾಗೆ ಟೈಟಲ್ ಫಿಕ್ಸ್

    ಕಾಮೆಂಟ್ ಗಳು ಏನೇ ಇರಲಿ ಚಂದನ್ ಮತ್ತು ನಿವೇದಿತಾ ಕೆಲ ಹೊತ್ತು ನೀರಿನೊಳಗೆ ರೊಮ್ಯಾನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಉಚಿತ ಮನರಂಜನೆ ನೀಡಿದ್ದಾರೆ. ದಾಂಪತ್ಯದ ಅನ್ಯೋನ್ಯತೆಗೆ ಸಾಕ್ಷಿ ಎನ್ನುವಂತೆ ವಿಡಿಯೋ ಮಾಡಿದ್ದಾರೆ. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

  • ಗಂಡನ ಹಣ ಖರ್ಚು ಮಾಡಿದರೆ ನಿಮಗೇನು ಸಮಸ್ಯೆ?: ಗರಂ ಆದ ನಿವೇದಿತಾ

    ಗಂಡನ ಹಣ ಖರ್ಚು ಮಾಡಿದರೆ ನಿಮಗೇನು ಸಮಸ್ಯೆ?: ಗರಂ ಆದ ನಿವೇದಿತಾ

    ಟಿ, ಗಾಯಕ ಚಂದನ್ ಶೆಟ್ಟಿ ಅವರ ಪತ್ನಿ ನಟಿ ನಿವೇದಿತಾ ಗೌಡ ಸದ್ಯ ಬಾಲಿಯಲ್ಲಿ ಬೀಡು ಬಿಟ್ಟಿದ್ದಾರೆ. ತಾವು ಒಬ್ಬರೇ ಬಾಲಿಗೆ ಹೋದ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು ನಿವಿ. ಬಾಲಿಯಲ್ಲಿ ಕಳೆದ ದಿನಗಳನ್ನು ಫೋಟೋಗಳ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಒಂದೊಂದೇ ಪೋಸ್ಟ್ ಮಾಡುತ್ತಿದ್ದಾರೆ. ಈ ಫೋಟೋ ಕಂಡು ಕೆಲವರು ಕೆಟ್ಟದ್ದಾಗಿ ನಿವೇದಿತಾಗೆ ಕಾಮೆಂಟ್ ಮಾಡಿದ್ದಾರೆ. ಇದರಿಂದಾಗಿ ನಿವಿ ಸಹಜವಾಗಿಯೇ ಗರಂ ಆಗಿದ್ದಾರೆ.

    ಗಂಡ ದುಡಿದ ದುಡ್ಡಿನಲ್ಲಿ ಒಬ್ಬಳೇ ಎಂಜಾಯ್ ಮಾಡುತ್ತಿದ್ದೀಯಾ? ಎಂದು ಕೆಲವರು ಕೆಟ್ಟದ್ದಾಗಿಯೇ ಕಾಮೆಂಟ್ ಮಾಡಿದ್ದು, ಅದಕ್ಕೆ ನಿವಿ ಅಷ್ಟೇ ತೀಕ್ಷ್ಣವಾಗಿ ಉತ್ತರ ನೀಡಿದ್ದಾರೆ. ‘ನಾನು ನನ್ನ ದುಡ್ಡಿನಲ್ಲಿ ಪ್ರವಾಸ ಮಾಡುತ್ತಿರುವುದು. ನನಗೂ ದುಡಿಯುವ ಶಕ್ತಿ ಇದೆ. ಹುಡುಗರು ಸೋಲೋ ಟ್ರಿಪ್ ಹೋದರೆ, ಯಾರಿಗೂ ಏನೂ ಅನಿಸುವುದಿಲ್ಲ. ಹುಡುಗಿಯರು ಹೋದರೆ, ಈ ರೀತಿ ಕೆಟ್ಟ ಕಾಮೆಂಟ್ ಮಾಡುತ್ತೀರಿ. ಅಷ್ಟಕ್ಕೂ ನಾನು ನನ್ನ ಗಂಡನ ದುಡ್ಡಿನಲ್ಲಿ ಹೋದರೆ ನಿಮಗೇನು ಸಮಸ್ಯೆ? ಎಂದು ಹೇಳುವ ಮೂಲಕ ಚಳಿ ಬಿಡಿಸಿದ್ದಾರೆ.. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್

    ಕಿರುತೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ನಿವೇದಿತಾ ಗೌಡ ಬಳಿಕ ನಟನೆ, ಮಾಡೆಲಿಂಗ್, ಮದುವೆ, ಸಂಸಾರ ಅಂತಾ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಬಾಲಿಯಲ್ಲಿ ನಟಿ ಕಾಲ ಕಳೆಯುತ್ತಿದ್ದಾರೆ. ಪತಿ ಚಂದನ್‌ನ ಬಿಟ್ಟು ಸೋಲೋ ಟ್ರಿಪ್‌ನ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಟ್ರಿಪ್ ಫೋಟೋ, ವೀಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತಿದೆ.

    ಬಾಲಿಗೆ ತಾವು ಸೋಲೋ ಟ್ರಿಪ್ ಹೊರಟಿರುವುದಾಗಿ ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಸದ್ಯ ತಮ್ಮ ಸೋಲೋ ಟ್ರಿಪ್‌ನ್ನ ನಿವೇದಿತಾ ಸಖತ್ ಆಗಿ ಏಂಜಾಯ್ ಮಾಡ್ತಿದಾರೆ. ಇನ್ನೂ ಸದ್ಯದಲ್ಲೇ ನಿವೇದಿತಾ ಗೌಡ, ನಾಯಕಿಯಾಗಿ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ತೆರೆಮರೆಯಲ್ಲಿ ಅದಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಹಾಸ್ಟೆಲ್ ನಲ್ಲಿ ಅಕ್ಕಿ ಹಿಟ್ಟು ಮುಖಕ್ಕೆ ಬಳಸುತ್ತಿದ್ದೆ, ಫಸ್ಟ್ ಟೈಮ್ ರೊಟ್ಟಿ ಮಾಡಿದ್ದೀನಿ : ನಿವೇದಿತಾ ಗೌಡ

    ಹಾಸ್ಟೆಲ್ ನಲ್ಲಿ ಅಕ್ಕಿ ಹಿಟ್ಟು ಮುಖಕ್ಕೆ ಬಳಸುತ್ತಿದ್ದೆ, ಫಸ್ಟ್ ಟೈಮ್ ರೊಟ್ಟಿ ಮಾಡಿದ್ದೀನಿ : ನಿವೇದಿತಾ ಗೌಡ

    ವಾರಕ್ಕೊಂದು ಹೊಸ ಹೊಸ ಅಡುಗೆ ಮಾಡುವ ಮೂಲಕ ನಿವೇದಿತಾ ಗೌಡ (Nivedita Gowda) ಪಾಕ ಪ್ರಪಂಚಕ್ಕೂ ಕಾಲಿಡುತ್ತಿದ್ದಾರೆ. ತಮಗೆ ಗೊತ್ತಿರುವ, ಕೇಳಿರುವ ಅಡುಗೆಯನ್ನೂ ಮಾಡುವ ಅವರು ಈ ಬಾರಿ ಅಕ್ಕಿ ರೊಟ್ಟಿ ಮಾಡುವುದಕ್ಕೆ ಮುಂದಾಗಿದ್ದಾರೆ. ತಾವು ಅಕ್ಕಿ ರೊಟ್ಟಿಯನ್ನು ಹೇಗೆ ಮಾಡಿದ್ದಾರೆ ಎನ್ನುವುದನ್ನು ಶೂಟ್ ಮಾಡಿ, ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ವಿಡಿಯೋ ಈಗ ಸಖತ್ ವೈರಲ್ ಕೂಡ ಆಗಿದೆ.

    ಅಕ್ಕಿ ರೊಟ್ಟಿ (Akki Rotti) ಹೇಗೆ ಮಾಡುವುದೋ ಗೊತ್ತಿಲ್ಲ, ಆದರೂ ಮಾಡುತ್ತಿರುವೆ ಎಂದು ಮಾತು ಶುರು ಮಾಡುವ ನಿವೇದಿತಾ, ತಮ್ಮ ಉದ್ದನೆಯ ಉಗುರುಗಳ ಬಗ್ಗೆ ಹೇಳುತ್ತಾರೆ. ಬೆರಳಿನಲ್ಲಿ ಉಗುರುಗಳು ಉದ್ದ ಇರುವ ಕಾರಣಕ್ಕಾಗಿ ಅಕ್ಕಿ ಹಿಟ್ಟು ಹೇಗೆ ಕಲಸುತ್ತೇನೋ ಗೊತ್ತಿಲ್ಲ. ಉಗುರುಗಳು ಸಪೋರ್ಟ್ ಮಾಡುತ್ತಿಲ್ಲವೆಂದು ಕಾಮಿಡಿ ಮಾಡುತ್ತಾರೆ. ಅಲ್ಲದೇ, ಹಾಸ್ಟೆಲ್ ನಲ್ಲಿ ಇದ್ದಾಗ ಅಕ್ಕಿ ಹಿಟ್ಟನ್ನು ಮುಖಕ್ಕೆ ಹಚ್ಚಿಕೊಳ್ಳಲು ಬಳಸುತ್ತಿದ್ದೆ. ಇದೇ ಮೊದಲ ಬಾರಿಗೆ ರೊಟ್ಟಿ ಮಾಡಲು ಬಳಸುತ್ತಿರುವುದಾಗಿಯೂ ಅವರು ಹೇಳುತ್ತಾರೆ. ಇದನ್ನೂ ಓದಿ: ಧ್ರುವ ಸರ್ಜಾ ಜೊತೆ ಸ್ಕ್ರೀನ್ ಶೇರ್ ಮಾಡ್ತಾರಾ ರವಿಮಾಮನ ಬೆಡಗಿ ಶಿಲ್ಪಾ ಶೆಟ್ಟಿ

    ಈರುಳ್ಳಿ ಹೆಚ್ಚುವಾಗ ಮೆಡಿಕಲ್ ವಿದ್ಯಾರ್ಥಿಗಳನ್ನು ನೆನಪಿಸಿಕೊಳ್ಳುವ ನಿವೇದಿತಾ ‘ಮೆಡಿಕಲ್ ಸ್ಟೂಡೆಂಟ್ ಪ್ರಾಣಿಗಳನ್ನು ಕಟ್ ಮಾಡುತ್ತಾರಲ್ಲ, ನನಗೆ ಆ ಫೀಲ್ ಆಗುತ್ತಿದೆ ಎನ್ನುತ್ತಾರೆ. ಅಲ್ಲದೇ, ತಮಗೆ ಸಬ್ಬಸಗಿ ಅಂದರೆ ತುಂಬಾ ಇಷ್ಟ. ಅದರ ಘಮಲು ಇನ್ನೂ ಇಷ್ಟ ಎಂದು ಆ ಸೊಪ್ಪನ್ನು ಪರಿಚಯಿಸುತ್ತಾರೆ. ಕರಿಬೇವು ಹಿಡಿದುಕೊಂಡು, ಅಯ್ಯೋ ಇದು ನನಗೆ ಸಖತ್ ಕನ್ಫ್ಯೂಸ್ ಮಾಡುತ್ತಿದೆ ಎಂದು ಹೇಳುತ್ತಾರೆ. ಒಂದು ರೀತಿಯಲ್ಲಿ ತಮಾಷೆಯಾಗಿಯೇ ನರೇಟ್ ಮಾಡುತ್ತಾ ಹೋಗಿದ್ದಾರೆ ನಿವಿ.

    ಇವತ್ತು ಅಕ್ಕಿರೊಟ್ಟಿ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದಂತೆಯೇ ಪತಿ ಚಂದನ್ ಶೆಟ್ಟಿ (Chandan Shetty) ಬೆಳಗ್ಗೆಯೇ ಮನೆಯಿಂದ ತಪ್ಪಿಸಿಕೊಂಡು ಹೋಗಿದ್ದಾರಂತೆ. ಹಾಗಾಗಿ ಅಕ್ಕಿ ರೊಟ್ಟಿ ತಿನ್ನಲು ಯಾರೂ ಇಲ್ಲ, ನಾನು ಅಡುಗೆ (Cooking) ಮಾಡುತ್ತಿದ್ದೇನೆ ಎಂದು ಕೇಳುತ್ತಿದ್ದಂತೆಯೇ ಚಂದನ್ ಹೊರಟೇ ಬಿಟ್ಟರು. ಇದೀಗ ನಾನು ಮಾಡಿದ ಅಕ್ಕಿರೊಟ್ಟಿಯನ್ನು ನಾನೇ ತಿನ್ನಬೇಕು ಎಂದು ಚಂದನ್ ಕಾಲು ಎಳೆಯುತ್ತಾರೆ. ಈವರೆಗೂ ಗಂಡನ ಮೇಲೆಯೇ ಎಲ್ಲ ಪ್ರಯೋಗ ಮಾಡಿದ ನಿವೇದಿತಾ, ಆ ವೇಳೆಯಲ್ಲಿ ಚಂದನ್ ಇಲ್ಲದೇ ಇರುವುದಕ್ಕೆ ಬೇಸರಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿವೇದಿತಾ ಗೌಡ ‘ಸ್ಮೋಕ್’ ಮಾಡಿಲ್ಲ, ಹೊಗೆ ಬಿಟ್ಟಿದ್ದಕ್ಕೆ ಕಾರಣ ಬೇರೆಯೇ ಇದೆ

    ನಿವೇದಿತಾ ಗೌಡ ‘ಸ್ಮೋಕ್’ ಮಾಡಿಲ್ಲ, ಹೊಗೆ ಬಿಟ್ಟಿದ್ದಕ್ಕೆ ಕಾರಣ ಬೇರೆಯೇ ಇದೆ

    ರಡು ದಿನಗಳ ಹಿಂದೆಯಷ್ಟೇ ‘ಗಿಚ್ಚಿ ಗಿಲಿ ಗಿಲಿ’ ರಿಯಾಲಿಟಿ ಶೋ ರನ್ನರ್ ಅಪ್ ಆಗಿ ಹೊರ ಹೊಮ್ಮಿರುವ ನಟಿ ನಿವೇದಿತಾ ಗೌಡ (Nivedita Gowda),  ಶೂಟಿಂಗ್ ಇರದೇ ಇರುವ ಕಾರಣಕ್ಕಾಗಿ ಬೆಂಗಳೂರಿನ ವಿವಿಪುರಂನಲ್ಲಿರುವ (VV Puram) ಫುಡ್ ಸ್ಟ್ರೀಟ್‍ ಗೆ ಭೇಟಿ ನೀಡಿದ್ದಾರೆ. ಅಲ್ಲಿ ಹತ್ತಾರು ಬಗೆಯ ತಿಂಡಿ, ಚಾಟ್ಸ್ ಸವಿದಿದ್ದಾರೆ. ಕೊನೆಯಲ್ಲಿ ಬಾಯಿಯಿಂದ ಹೊಗೆ ಬಿಟ್ಟು ಎಲ್ಲರನ್ನೂ ಕನ್ಫೂಸ್ ಮಾಡಿದ್ದಾರೆ. ಇದೀಗ ಆ ವಿಡಿಯೋ ಟ್ರೋಲ್ ಆಗುತ್ತಿದೆ.

    ಸೋಷಿಯಲ್ ಮೀಡಿಯಾದಲ್ಲಿ ನಿವಿ ಯಾವಾಗಲೂ ಬ್ಯುಸಿ. ಒಂದಿಲ್ಲೊಂದು ಚಟುವಟಿಕೆಗಳನ್ನು ಮಾಡುತ್ತಲೇ ಅವುಗಳನ್ನು ವಿಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಲೇ ಇರುತ್ತಾರೆ. ರೀಲ್ಸ್ ನಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದವರು, ಇದೀಗ ತಿಂಡಿ, ತಿನಿಸು ಮಾಡುವುದು ಹೇಗೆ ಎನ್ನುವುದನ್ನು ಹೇಳಿಕೊಡುತ್ತಿದ್ದಾರೆ. ಮಾಡಿದ ಅಡುಗೆಯನ್ನು ಚಂದನ್ (Chandan Shetty) ಮೇಲೆ ಪ್ರಯೋಗ ಮಾಡಿಯೇ ಸೇಡು ತೀರಿಸಿಕೊಳ್ಳುತ್ತಾರೆ. ಇದನ್ನೂ ಓದಿ:ಮತ್ತೆ ಒಂದಾದ ʻಪಂಚರಂಗಿ’ ದಿಗಂತ್‌- ನಿಧಿ ಸುಬ್ಬಯ್ಯ ಜೋಡಿ

    ಫುಡ್ ಬಗ್ಗೆ ಮಾತನಾಡಿದಾಗೆಲ್ಲ ನಿವಿ ಅಭಿಮಾನಿಗಳು ನೀವು ವಿವಿಪುರಂ ಫುಡ್ ಸ್ಟ್ರೀಟ್‍ ಗೆ (Food Street) ಹೋಗಿಲ್ಲವಾ? ಎಂದು ಎಲ್ಲರೂ ಕೇಳುತ್ತಿದ್ದರಂತೆ. ಈವರೆಗೂ ಅವರು ಅಲ್ಲಿಗೆ ಹೋಗಿಲ್ಲವಂತೆ. ಹಾಗಾಗಿ ಗಿಚ್ಚಿಗಿಲಿಗಿಲಿ ಮುಗಿಯುತ್ತಿದ್ದಂತೆಯೇ ಫುಡ್ ಸ್ಟ್ರೀಟ್ ಗೆ ಬಂದು, ಅಲ್ಲಿನ ವಿವಿಧ ತಿಂಡಿ ತಿನಿಸುಗಳನ್ನು ಸವಿದಿದ್ದಾರೆ. ಮೂವತ್ತಕ್ಕೂ ಹೆಚ್ಚು ಬಗೆಯ ತಿಂಡಿಗಳು ಇಲ್ಲಿದ್ದರೂ, ನನಗೆ ಐದಾರು ಮಾತ್ರ ತಿನ್ನುವುದಕ್ಕೆ ಸಾಧ್ಯವೆಂದು ಹೇಳಿದ್ದಾರೆ. ಅಲ್ಲದೇ, ಬೇರೆ ಬೇರೆ ತಿಂಡಿ ತಿನಿಸುಗಳ ಬಗ್ಗೆಯೂ ಪರಿಚಯ ಮಾಡಿಕೊಟ್ಟಿದ್ದಾರೆ.

    ಚಾಟ್ಸ್ (Chats)ತಿನ್ನುವುದು ಮುಗಿಯುತ್ತಿದ್ದಂತೆಯೇ ಸ್ಮೋಕಿಂಗ್ (Smoke) ಐಸ್ ಕ್ರೀಮ್ ಕೂಡ ಸವಿದಿದ್ದು, ಐಸ್ ಕ್ರೀಮ್ ತಿನ್ನುವಾಗ ಬರುವ ಹೊಗೆಯನ್ನು ಕ್ಯಾಮೆರಾ ಮುಂದೆ ಬಿಟ್ಟಿದ್ದಾರೆ. ಹಾಗಾಗಿ ನಿವೇದಿತಾ ಸ್ಮೋಕ್ ಮಾಡಿದ್ದಾರೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ. ಆದರೆ, ಅವರು ತಿಂದಿದ್ದು ಹೊಗೆ ಬರುವ ಐಸ್ ಕ್ರೀಮ್ ಎನ್ನುವುದು ಅವರು ಹಾಕಿರುವ ವಿಡಿಯೋ ನೋಡಿಯೇ ಗೊತ್ತಾಗುತ್ತದೆ. ಏನೇ ಆಗಲಿ, ನಿವಿ ಸಖತ್ ಎಂಜಾಯ್ ಮಾಡಿದ್ದಾರೆ ಫುಡ್ ಸ್ಟ್ರೀಟ್ ನಲ್ಲಿ.

    Live Tv
    [brid partner=56869869 player=32851 video=960834 autoplay=true]

  • ಬೋರಾದಾಗೆಲ್ಲ ಶಾಪಿಂಗ್ ಮಾಡ್ತಾರಂತೆ ನಿವೇದಿತಾ ಗೌಡ

    ಬೋರಾದಾಗೆಲ್ಲ ಶಾಪಿಂಗ್ ಮಾಡ್ತಾರಂತೆ ನಿವೇದಿತಾ ಗೌಡ

    ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ನಿವೇದಿತಾ ಗೌಡ ವಿಂಟರ್ ಶಾಪಿಂಗ್ ಮಾಡಿದ್ದಾರೆ. ಈ ಕುರಿತು ಅವರು ವಿಡಿಯೋವೊಂದನ್ನು ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಮೊನ್ನೆಯಷ್ಟೇ ನನಗೆ ಸಖತ್ ಬೋರ್ ಆಗಿತ್ತು. ಹಾಗಾಗಿ ಶಾಪಿಂಗ್ ಮಾಡಲು ಹೋಗಿದ್ದೆ ಎಂದು ಮಾತು ಶುರು ಮಾಡಿ, ಏನೆಲ್ಲ ಶಾಪಿಂಗ್ ಮಾಡಿದ್ದಾರೆ ಎನ್ನುವುದನ್ನೂ ತೋರಿಸಿದ್ದಾರೆ.

    ಅವರ ಬಳಿ ಕೆಂಪು ಬಣ್ಣದ ಡ್ರೆಸ್ ಇದೆಯಂತೆ. ಆ ಡ್ರೆಸ್ ಗೆ ಮ್ಯಾಚ್ ಆಗುವಂತಹ ಹೀಲ್ಸ್ ಬೇಕಿತ್ತಂತೆ. ಅದನ್ನು ಖರೀದಿಸಲು ಹೋಗಿ ಬೇರೆ ಏನೆಲ್ಲ ಪರ್ಚೇಸ್ ಮಾಡಬೇಕಾಯಿತು ಎಂಬುದನ್ನು ವಿವರಿಸಿದ್ದಾರೆ. ಶಾಪಿಂಗ್ ಮಾಡಿರುವ ವಸ್ತುಗಳನ್ನು ಅವರು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಕೂಡ ಆಗಿದೆ. ಇದನ್ನೂ ಓದಿ:ಮತ್ತೆ ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸುಶ್ಮಿತಾ ಸೇನ್

    ಕೆಂಪು ಬಣ್ಣದ ಹೀಲ್ಸ್ ಖರೀದಿಸಲು ಹೋಗಿದ್ದೆ. ಆದರೆ, ಅಂಗಡಿಗೆ ಹೋದಾಗ ಏನೆಲ್ಲ ಹೊಸ ಹೊಸ ವಸ್ತುಗಳು ಬಂದಿದ್ದವು. ಎಲ್ಲವನ್ನೂ ಖರೀದಿಸಬೇಕು ಅಂತ ಅನಿಸಿತು. ಅದರಲ್ಲೂ ನನಗೆ ಬ್ಯಾಗ್ ಗಳು ಅಂದರೆ ತುಂಬಾ ಇಷ್ಟ ಹಾಗಾಗಿ ಅಷ್ಟೊಂದು ಬ್ಯಾಗ್ ಖರೀದಿಸಿದೆ ಎಂದು ಹೇಳಿಕೊಂಡಿದ್ದಾರೆ. ಯಾವ ವಸ್ತುಗಾಗಿ ಶಾಪಿಂಗೆಗೆ ಹೋಗಿದ್ದೆನೋ, ಅದನ್ನು ಬಿಟ್ಟು ಬಿಳಿದೆಲ್ಲವನ್ನೂ ತಂದೆ ಎಂದು ಹೇಳಿಕೊಂಡಿದ್ದಾರೆ. ಕೆಂಪು ಹೀಲ್ಸ್ ಗಾಗಿ ಮತ್ತೊಮ್ಮೆ ಶಾಪಿಂಗ್ ಗೆ ಹೋಗಬೇಕು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಂದನ್ ಶೆಟ್ಟಿ ಜೊತೆಗೆ ‘ಮಾಯಗಾರ’ನ ಇಷ್ಟ ಪಡುತ್ತಿದ್ದಾರಂತೆ ಬೇಬಿ ಡಾಲ್ ನಿವೇದಿತಾ ಗೌಡ

    ಚಂದನ್ ಶೆಟ್ಟಿ ಜೊತೆಗೆ ‘ಮಾಯಗಾರ’ನ ಇಷ್ಟ ಪಡುತ್ತಿದ್ದಾರಂತೆ ಬೇಬಿ ಡಾಲ್ ನಿವೇದಿತಾ ಗೌಡ

    ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳನ್ನು ಎಂಗೇಜ್ ಆಗಿಡುವ ನಿವೇದಿತಾ ಗೌಡ ಹೊಸ ಹೊಸ ಸುದ್ದಿಗಳನ್ನು ಕೊಡುತ್ತಲೇ ಇರುತ್ತಾರೆ. ಅದರಲ್ಲೂ ರೀಲ್ಸ್ ನಲ್ಲಿ ಹೊಸ ಹಳೆ ಹಾಡಿಗೆ ಹೆಜ್ಜೆ ಹಾಕುತ್ತಾ, ಅಭಿಮಾನಿಗಳನ್ನು ರಂಜಿಸುತ್ತಾರೆ. ಈ ಸಲವೂ ಅವರು ವಿಶೇಷ ಹಾಡಿಗೆ ಸೊಂಟ ಬಳಕುಸಿದ್ದು, ಈ ವಿಡಿಯೋ ರಿಪೀಟ್ ಆದರೂ, ನನ್ನಿಷ್ಟದ ಹಾಡು ಎಂದು ಬರೆದುಕೊಂಡಿದ್ದಾರೆ.

    ರವಿಚಂದ್ರನ್ ಅಭಿನಯದ ರಾಮಾಚಾರಿ ಸಿನಿಮಾದ ‘ಆಕಾಶದಾಗೆ ಯಾರೋ ಮಾಯಗಾರನೋ’ ಹಾಡೆಂದರೆ ನಿವೇದಿತಾ ಗೌಡ ಅವರಿಗೆ ಅಚ್ಚುಮೆಚ್ಚಂತೆ. ಹಾಗಾಗಿಯೇ ರಾಮಚಾರಿಯ ಹುಡುಗಿ ಮಾಲಾಶ್ರೀ ಅವರ ಗೆಟಪ್ ನಲ್ಲೇ ಕಾಸ್ಟ್ಯೂಮ್ ಹಾಕಿ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಮಾಯಾಗಾರನ ಹಾಡು ಯಾವಾಗಲೂ ನನಗೆ ಇಷ್ಟವೆಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಿನಿಮಾ ಆಗಲಿದೆ ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ: ಯಾರಾಗಲಿದ್ದಾರೆ ಹೀರೋಯಿನ್?

    1991ರಲ್ಲಿ ಬಿಡುಗಡೆಯಾದ ರಾಮಾಚಾರಿಯ ಬಹುತೇಕ ಹಾಡುಗಳು ಹಿಟ್. ಅದರಲ್ಲೂ ಮನೋ ಮತ್ತು ಎಸ್.ಜಾನಕಿ ಅವರ ಧ್ವನಿಯಲ್ಲಿ ಮೂಡಿ ಬಂದ  ಆಕಾಶದಾಗೆ ಯಾರೋ ಮಾಯಗಾರನೋ ಹಾಡು ಎವರ್ ಗ್ರೀನ್. ಈ ಹಾಡಿನಲ್ಲಿ ರವಿಚಂದ್ರನ್ ಮತ್ತು ಮಾಲಾಶ್ರೀ ಕಂಡ ರೀತಿಯು ಸೊಗಸು ಸೊಗಸು. ಈ ಕಾರಣಕ್ಕಾಗಿಯೇ ನಿವೇದಿತಾ ಗೌಡ ಅವರಿಗೂ ಈ ಹಾಡು ಇಷ್ಟವಂತೆ.

    Live Tv
    [brid partner=56869869 player=32851 video=960834 autoplay=true]

  • ಚಂದನ್ ಶೆಟ್ಟಿ ಮನೇಲಿ ಇರದೇ ಹೋದರೆ ನಿವೇದಿತಾ ಗೌಡಗೆ ಭಯಂಕರ ಭಯವಂತೆ

    ಚಂದನ್ ಶೆಟ್ಟಿ ಮನೇಲಿ ಇರದೇ ಹೋದರೆ ನಿವೇದಿತಾ ಗೌಡಗೆ ಭಯಂಕರ ಭಯವಂತೆ

    ನಿನ್ನೆಯಷ್ಟೇ ಮಿಸೆಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿರುವ ನಟಿ ನಿವೇದಿತಾ ಗೌಡ, ತಮ್ಮ ಖಾಸಗಿ ಬದುಕಿನ ಬಗ್ಗೆ ಹತ್ತು ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಮನೆಯಲ್ಲಿ ಒಂಟಿಯಾಗಿ ಇರುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ. ರಾತ್ರಿ ಹೊತ್ತು ಪತಿ ಚಂದನ್ ಶೆಟ್ಟಿ ಮನೆಯಲ್ಲಿ ಇರದೇ ಇದ್ದರೆ, ಇಡೀ ರಾತ್ರಿ ನಿದ್ದೆಯೇ ಬರುವುದಿಲ್ಲ ಎನ್ನುವ ಸಂಗತಿಯನ್ನೂ ಅವರು ಹೇಳಿದ್ದಾರೆ.

    ರಾತ್ರಿ ಹೊತ್ತು ಒಬ್ಬಳೆ ಮನೆಯಲ್ಲಿ ಇದ್ದರೆ ತುಂಬಾ ಭಯವಾಗುತ್ತದೆ. ಹಾಗಾಗಿ ಇಡೀ ಮನೆ ಬೆಳಕಿನಿಂದ ತುಂಬಿರುತ್ತದೆ. ಅಷ್ಟೂ ಲೈಟ್ಸ್ ಆನ್ ಮಾಡಿಕೊಂಡೇ ಮನೆತುಂಬಾ ಓಡಾಡಿಕೊಂಡಿರುತ್ತೇನೆ. ನನ್ನಿಷ್ಟದ ವೆಬ್ ಸೀರಿಸ್ ನೋಡುತ್ತೇನೆ. ಒಂದೊಂದು ವೆಬ್ ಸೀರಿಸ್ ಅನ್ನು ಹತ್ತಿಪ್ಪತ್ತು ಬಾರಿ ನೋಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈ ಸಲುವಾಗಿಯೇ ಆದಷ್ಟು ಒಂಟಿಯಾಗಿ ಇರದಂತೆ ಪತಿ ಎಚ್ಚರಿಕೆ ವಹಿಸುತ್ತಾರೆ ಎಂದೂ ಗಂಡನ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಇದನ್ನೂ ಓದಿ:ರಣ್‌ವೀರ್ ಸಂಪೂರ್ಣ ಬೆತ್ತಲೆ:ಕಣ್ಣುಮುಚ್ಚಿಕೊಂಡ ದೀಪಿಕಾ

    ಮಿಸೆಸ್ ಇಂಡಿಯಾ ತಯಾರಿ ಬಗ್ಗೆಯೂ ಅವರು ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಸೌಂದರ್ಯ ಸ್ಪರ್ಧೆಯಲ್ಲಿ ಭಾಗಿ ಆಗಬೇಕು ಎನ್ನುವುದು ಅವರ ಚಿಕ್ಕಂದಿನ ಕನಸಾಗಿತ್ತಂತೆ. ಅದಕ್ಕೆ ಪ್ರೋತ್ಸಾಹ ನೀಡಿದ್ದು ಅವರು ತಾಯಿ ಎನ್ನುವುದನ್ನೂ ಹೇಳಿದ್ದಾರೆ. ಹಲವು ದಿನಗಳಿಂದ ಕಷ್ಟಪಟ್ಟು ಮಿಸೆಸ್‍ ಇಂಡಿಯಾ ಸ್ಪರ್ಧೆಗಾಗಿ ತಯಾರಿ ನಡೆಸಿದ್ದನ್ನೂ ಅವರು ಹಂಚಿಕೊಂಡಿದ್ದಾರೆ. ಕೊನೆಗೂ ಆ ಟೈಟಲ್ ಅನ್ನು ಗೆಲ್ಲುವಲ್ಲಿ ಸಫಲರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]