Tag: Nivedita Gowda

  • ಮಿಸೆಸ್ ಇಂಡಿಯಾ ಆದ ಚಂದನ್ ರಾಣಿ ನಿವೇದಿತಾ ಗೌಡ

    ಮಿಸೆಸ್ ಇಂಡಿಯಾ ಆದ ಚಂದನ್ ರಾಣಿ ನಿವೇದಿತಾ ಗೌಡ

    ಬಿಗ್‍ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರುವ ನಿವೇದಿತಾ ಗೌಡ, ರ‍್ಯಾಪರ್ ಚಂದನ್ ಶೆಟ್ಟಿ ಅವರ ಜೊತೆ ಸಪ್ತಪದಿ ತುಳಿದು ಸಾಂಸಾರಿಕ ಜೀವನದಲ್ಲಿ ಖುಷಿಯಾಗಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ಇವರು ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಕಳೆದ 2 ತಿಂಗಳಿಂದ ಮಿಸೆಸ್ ಇಂಡಿಯಾ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ ಇವರು ಈಗ ಗೆಲುವಿನ ನಗೆ ಬೀರಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಪ್ಡೇಟ್‍ಗಳ ಬಗ್ಗೆ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಳ್ಳುತ್ತಿರುವ ಮುದ್ದು ಬೊಂಬೆ ನಿವೇದಿತಾ ಗೌಡ ಈಗ ಮಿಸೆಸ್ ಇಂಡಿಯಾ ಆಗಿದ್ದಾರೆ. ಮಿಸೆಸ್ ಇಂಡಿಯಾ ಆಗಲು ಅವರು ಮಾಡುತ್ತಿದ್ದ ತಯಾರಿಗಳ ಬಗ್ಗೆ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದ ನಿವೇದಿತಾ ಗೆಲುವಿನ ಕಿರೀಟವನ್ನು ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ. ಇದನ್ನೂ ಓದಿ: ಆಮೀರ್ ಖಾನ್ ಮನೆಯ ಔತಣ ಕೂಟದಲ್ಲಿ ಧನುಷ್‌ ನಟನೆಯ ಹಾಲಿವುಡ್ ಚಿತ್ರತಂಡ

     

    View this post on Instagram

     

    A post shared by Mrs. India Inc (@mrsindiainc)

    ಮಿಸೆಸ್ ಇಂಡಿಯಾ ಆಗಿರುವ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ ನಿವೇದಿತಾ ತಂಡ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ, ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಅವರು ನಮ್ರತೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಎಲ್ಲರಿಗೂ ಗೊತ್ತಿರುವಂತೆ ನಿವೇದಿತಾ ಗೌಡ ಒಂದು ಯೂಟ್ಯೂಬ್ ಚಾನೆಲ್ ಕೂಡ ಹೊಂದಿದ್ದಾರೆ. ಅದರಲ್ಲಿ ಅವರು ಹೋಮ್ ಟೂರ್, ಬಟ್ಟೆ ಕಲೆಕ್ಷನ್ ಹಾಗೂ ಬ್ಯಾಗ್ ಕಲೆಕ್ಷನ್ ಸೇರಿದಂತೆ ಹಲವಾರು ರೀತಿಯ ವೀಡಿಯೋಗಳನ್ನು ಮಾಡಿ ಅಭಿಮಾನಿಗಳ ಜೊತೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಈ ಬಾರಿ ಮಿಸೆಸ್ ಇಂಡಿಯಾಗೆ ಅವರು ಹೇಗೆಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ, ಅವರ ಡಯೆಟ್ ಏನು ಎಂಬ ಬಗ್ಗೆ ಹೇಳಿದ್ದರು. ಇದನ್ನೂ ಓದಿ: ಸೊಳ್ಳೆ ಪರದೆ ಡ್ರೆಸ್ ಧರಿಸಿ ಬಂದ ಉರ್ಫಿ ಜಾವೇದ್‌ಗೆ ನೆಟ್ಟಿಗರಿಂದ ಫುಲ್ ಕ್ಲಾಸ್

    ಅಲ್ಲದೇ, ಈ ವೀಡಿಯೋದಲ್ಲಿ ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಏನು ಮಾಡುತ್ತಾರೆ ಎಂಬುದನ್ನ ಸಹ ತೋರಿಸಿದ್ದಾರೆ. ಹೇಗೆ ನೈಸರ್ಗಿಕವಾಗಿ ಮುಖದ ಅಂದವನ್ನು ಹೆಚ್ಚು ಮಾಡಿಕೊಳ್ಳಬಹುದು ಎಂಬುದನ್ನ ತೋರಿಸಿದ್ದಾರೆ. ಫೇಸ್ ಮಸಾಜ್‍ಗಳನ್ನು ಹೇಳಿಕೊಟ್ಟಿದ್ದು, ಯಾವುದರಿಂದ ಏನು ಲಾಭ ಎಂಬುದನ್ನ ಸಹ ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಚಂದನದ ಗೊಂಬೆ ನಿವೇದಿತಾ ಗೌಡಗೆ ಫುಲ್ ಕ್ಲಾಸ್

    ಚಂದನದ ಗೊಂಬೆ ನಿವೇದಿತಾ ಗೌಡಗೆ ಫುಲ್ ಕ್ಲಾಸ್

    ಬಿಗ್ ಬಾಸ್ ಸ್ಪರ್ಧೆ ನಿವೇದಿತಾ ಗೌಡ ಇದೀಗ ಫುಲ್ ಬ್ಯುಸಿಯಾಗಿದ್ದಾರೆ. ಒಂದು ಕಡೆ ರಿಯಾಲಿಟಿ ಶೋ ಮತ್ತೊಂದು ಕಡೆ ಅವರೇ ನಂಬಿಕೊಂಡಿರುವ ರೀಲ್ಸ್ ಕಮಿಟ್ಮೆಂಟ್ ಗಳು ಇದರ ನಡುವೆ ಮತ್ತೊಂದು ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ದಿನವೀಡಿ ಆ ಸಾಹಸ ಕೆಲಸದಲ್ಲೇ ಬ್ಯುಸಿಯಾಗಿದ್ದಾರೆ. ಅದೇನು ಅನ್ನುವುದನ್ನು ಅವರು ಅಭಿಮಾನಿಗಳಿಗೆ ನಿತ್ಯವೂ ವಿಡಿಯೋ ಅಥವಾ ಫೋಟೋ ಮೂಲಕ ಅಪ್ ಡೇಟ್ ಕೊಡುತ್ತಲೇ ಇರುತ್ತಾರೆ. ಇದನ್ನೂ ಓದಿ : ಯಶ್ ಆಸೆ ಈಡೇರಿಸುತ್ತಾರಾ ತಮಿಳಿನ ಖ್ಯಾತ ನಿರ್ದೇಶಕ ಶಂಕರ್

    ಸದ್ಯ ಕಾಮಿಡಿ ಶೋವೊಂದರಲ್ಲಿ ಕಲಾವಿದೆಯಾಗಿ ನಟಿಸುತ್ತಿರುವ ನಿವೇದಿತಾ ಗೌಡ, ಈ ನಡುವೆ ಮಿಸ್ಟ್ರೆಸ್ ಇಂಡಿಯಾ ಶೋನಲ್ಲಿ ಭಾಗಿಯಾಗುವ ಕನಸು ಕಂಡಿದ್ದಾರೆ. ಕೇವಲ ಭಾಗಿ ಆಗುವುದು ಮಾತ್ರವಲ್ಲ, ಅದಕ್ಕಾಗಿ ತರಬೇತಿಯನ್ನೂ ಪಡೆದುಕೊಳ್ಳುತ್ತಿದ್ದಾರೆ. ತಾವು ಏನೆಲ್ಲ ತರಬೇತಿ ಪಡೆಯುತ್ತಿದ್ದೇನೆ ಎನ್ನುವುದನ್ನು ಕೇವಲ ನಿವೇದಿತಾ ಗೌಡ ಮಾತ್ರವಲ್ಲ, ಅವರಿಗೆ ತರಬೇತಿ ಕೊಡುತ್ತಿರುವ ಸಂಸ್ಥೆಯು ಕೂಡ ಹಲವು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದೆ. ಇದನ್ನೂ ಓದಿ : ಪ್ರಾದೇಶಿಕ ಭಾಷಾ ಮಹತ್ವ ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತ ಪಡಿಸಿದ ಕಿಚ್ಚ ಸುದೀಪ್

    ಮೊದ ಮೊದಲು ಆತ್ಮವಿಶ್ವಾಸದ ಕುರಿತು ನಿವೀ ತರಬೇತಿ ಪಡೆದಿದ್ದಾರಂತೆ. ಆನಂತರ, ಸ್ಟೈಲೀಶ್ ಮ್ಯಾನರಿಸಂ, ಕ್ಯಾಟ್ ವಾಕ್ ಹೇಗೆ ಮಾಡೋದು, ಕಾಸ್ಟ್ಯೂಮ್‍ ಸೆನ್ಸ್, ಹೀಗೆ ಹಲವು ಹಂತಗಳಲ್ಲಿ ಈ ಕುರಿತು ತರಬೇತಿ ಪಡೆಯುತ್ತಿದ್ದಾರಂತೆ. ಈ ತರಬೇತಿ ಪಡೆಯುವುದಕ್ಕಾಗಿ ತಾವು ಎಷ್ಟೊಂದು ಕಷ್ಟ ಪಡುತ್ತಿದ್ದೇನೆ ಎನ್ನುವ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದಾರೆ. ಹಾಗಾಗಿ ಫುಲ್ ಕ್ಲಾಸಿನಲ್ಲೇ ದಿನಗಳನ್ನು ಕಳೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ : ನಾಲ್ಕೈದು ವರ್ಷ ಪ್ರಶಾಂತ್ ನೀಲ್ ತೆಲುಗಿನಲ್ಲೇ ಲಾಕ್ : ಮತ್ತೆ ರಕ್ತದ ಹಿಂದೆ ಬಿದ್ದ ಕೆಜಿಎಫ್ ಡೈರೆಕ್ಟರ್

    ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗಿಯಾಗುವುದು ಅವರ ಕನಸಾಗಿತ್ತಂತೆ. ಅದಕ್ಕೆ ಈಗ ಅವಕಾಶ ಸಿಕ್ಕಿದೆ. ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಇಷ್ಟೊಂದು ತರಬೇತಿ ಪಡೆಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ತಮ್ಮಲ್ಲಿ ಏನೆಲ್ಲ ಬದಲಾವಣೆ ಆಗುತ್ತಿದೆ ಎನ್ನುವ ಕುರಿತು ಅವರು ಆಯಾ ಹಂತದ ಫೋಟೋ ಶೂಟ್ ಕೂಡ ಮಾಡಿಸಿಕೊಳ್ಳುತ್ತಿದ್ದಾರಂತೆ.

  • ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

    ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

    ಬಿಗ್ ಬಾಸ್ ನಂತರ ಸಿಲೆಬ್ರಿಟಿಯಾದ ಸಾಮಾನ್ಯ ಹುಡುಗಿ ನಿವೇದಿತಾ ಗೌಡ, ರಾಪರ್ ಚಂದನ್ ಶೆಟ್ಟಿ ಅವರನ್ನು ಮದುವೆಯಾದ ನಂತರ ಇನ್ನೂ ಹೆಚ್ಚು ಸುದ್ದಿ ಮಾಡಿದ್ದರು. ಆನಂತರ ಅವರು ನಟನೆ, ಶೋಗಳಿಗಿಂತಲೂ ಅವರು ಹಾಕುತ್ತಿರುವ ವಿಡಿಯೋ, ಫೋಟೋಗಳಿಂದಾಗಿಯೇ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಅಮ್ಮಂದಿರ ದಿನದ ವಿಶೇಷ: ತನ್ನ ಪುಟ್ಟ ರಾಜಕುಮಾರನಿಗಾಗಿ ಭಾವನಾತ್ಮಕ ಸಾಲು ಬರೆದ ಕಾಜಲ್ 

    ಇನ್ಸ್ಟ್, ರೀಲ್ಸ್ ಗಳಲ್ಲಿ ನಿತ್ಯವೂ ಅವರು ಒಂದಿಲ್ಲೊಂದು ವಿಡಿಯೋ ಅಪ್ ಡೇಟ್ ಮಾಡುತ್ತಲೇ ಇರುತ್ತಾರೆ. ಅದರಲ್ಲೂ ಪತಿ ಚಂದನ್ ಶೆಟ್ಟಿ ಅವರನ್ನು ಕಿಚಾಯಿಸುವುದರಲ್ಲೇ ಹೆಚ್ಚು ಸಮಯ ಕಳೆಯುತ್ತಿರುವ ನಿವೇದಿತಾ, ಇದೀಗ ಹೊಸ ಜವಾಬ್ದಾರಿಗೆ ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಮಿಸೆಸ್ ಇಂಡಿಯಾ ಆಗುವ ಕನಸು ಕಾಣುತ್ತಿದ್ದಾರಂತೆ.

    ಮಿಸೆಸ್ ಇಂಡಿಯಾ ಆಗಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ಇದೀಗ ಅಂಥದ್ದೇ ಕನಸು ಕಾಣುತ್ತಿದ್ದಾರಂತೆ ನಿವೇದಿತಾ ಗೌಡ. ಅದಕ್ಕಾಗಿ ಅವರು ತರಬೇತಿಯನ್ನು ಪಡೆಯುತ್ತಿದ್ದಾರಂತೆ. ಕ್ಯಾಟ್ ವಾಕ್ ಹೇಗೆ ಮಾಡುವುದು ಎನ್ನುವುದರ ಕುರಿತು ಟ್ರೈನಿಂಗ್ ಪಡೆಯುತ್ತಿದ್ದು, ಆ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಮ್ಮಂದಿರ ದಿನದ ವಿಶೇಷ ಫೋಟೋ ಶೇರ್ ಮಾಡಿದ ಸಿಂಡ್ರೆಲಾ 

    ಮಿಸೆಸ್ ಇಂಡಿಯಾ ಆಗಲು ಏನೆಲ್ಲ ತಯಾರಿ ಬೇಕು, ಹೇಗಿರಬೇಕು? ಯಾವೆಲ್ಲ ತರಬೇತಿ ಪಡೆಯಬೇಕು ಎನ್ನುವುದರ ಕುರಿತು ನುರಿತ ತರಬೇತಿದಾರರಿಂದ ಅವರು ಟ್ರೈನಿಂಗ್ ಪಡೆಯುತ್ತಿದ್ದಾರಂತೆ. ಮುಂದಿನ ದಿನಗಳಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲೂ ನಿವೇದಿತಾ ಭಾಗಿಯಾಗಲಿದ್ದಾರಂತೆ.

  • ಚಂದನ್, ನಿವೇದಿತಾ ದಾಂಪತ್ಯಕ್ಕೆ 2 ವರ್ಷ – ಔಟ್ ಆಫ್ ಸ್ಟೇಶನ್‍ಗೆ ಹಾರಿದ ಕ್ಯೂಟ್ ಜೋಡಿ

    ಚಂದನ್, ನಿವೇದಿತಾ ದಾಂಪತ್ಯಕ್ಕೆ 2 ವರ್ಷ – ಔಟ್ ಆಫ್ ಸ್ಟೇಶನ್‍ಗೆ ಹಾರಿದ ಕ್ಯೂಟ್ ಜೋಡಿ

    ಬೆಂಗಳೂರು: ಸ್ಯಾಂಡಲ್‍ವುಡ್ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

    ಚಂದನ್ ಹಾಗೂ ನಿವೇದಿತಾ ಗೌಡ ಆಗಾಗ ಫೋಟೋ ಹಾಗೂ ವೀಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಇತ್ತೀಚೆಗಷ್ಟೇ ಚಂದನ್ ಲಕ್ ಲಕ್ ಲಂಬೋರ್ಗಿನಿ ಹಾಡು ಬಿಡುಗಡೆ ಮಾಡಿದ್ದರು. ಇನ್ನೂ ಈ ಹಾಡು ಸಖತ್ ಸದ್ದು ಮಾಡಿತ್ತು. ಸದ್ಯ ಚಂದನ್ ನಿವೇದಿತಾ ಕೈ ಹಿಡಿದು ಇಂದಿಗೆ 2 ವರ್ಷ ತುಂಬಿದ್ದು, ಇದೇ ಖುಷಿಯಲ್ಲಿ ಜೋಡಿ ಔಟ್ ಆಫ್ ಸ್ಟೇಷನ್‍ನಲ್ಲಿ ಟೂರ್ ಹೊಡೆಯುತ್ತಿದ್ದಾರೆ.

    ಈ ವಿಶೇಷ ದಿನದಂದು ನಿವೇದಿತಾ ಗೌಡ ತಮ್ಮ ಮದುವೆಯ ಫೋಟೋಗಳನ್ನು ಕೊಲಾಜ್ ಮಾಡಿರುವ ಪುಟ್ಟ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಸಿಹಿ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಇನ್ನೂ ಈ ಕ್ಯೂಟ್ ಜೋಡಿಗೆ ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದನ್ನೂ ಓದಿ: ಮತ್ತೊಬ್ಬ ರಾಜಕಾರಣಿ ಪುತ್ರ ಚಂದನವನದಲ್ಲಿ ‘ಗತವೈಭವ’ ಮಾಡಲು ಎಂಟ್ರಿ!

    ಬಿಗ್‍ಬಾಸ್ ಸೀಸನ್-5ರಲ್ಲಿ ಖ್ಯಾತಿ ಪಡೆದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ. ಬಿಗ್‍ಬಾಸ್ ಮನೆಯಿಂದ ಹೊರಬಂದ ಮೇಲೆ ಈ ಜೋಡಿ ಪ್ರೀತಿಯಲ್ಲಿ ಬಿದ್ದಿದ್ದರು. ಮೈಸೂರಿನ ದಸರಾ ಕಾರ್ಯಕ್ರಮದ ವೇಳೆ ಚಂದನ್ ನಿವೇದಿತಾ ಬಳಿ ಪ್ರೇಮ ನಿವೇದನೆ ಮಾಡಿಕೊಳ್ಳುವ ಮೂಲಕ ನಿವೇದಿತಾ ಮುಂದೆ ಮದುವೆ ಪ್ರಪೋಸಲ್ ಇಟ್ಟರು. ಈ ವೇಳೆ ಚಂದನ್ ಪ್ರೀತಿಗೆ ಮನಸೋತು ನಿವೇದಿತಾ ಗೌಡ ಕೂಡ ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದರು.

    ನಂತರ 2020ರ ಫೆಬ್ರವರಿ 27ರಂದು ಮೈಸೂರಿನಲ್ಲಿ ಶುಭ ಮೂಹೂರ್ತದಲ್ಲಿ ಶುಭ ಮೂಹೂರ್ತದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಚಂದನ್ ನಿವೇದಿತರನ್ನು ವರಿಸಿದರು. ಈ ಜೋಡಿ ಮದುವೆಗೆ ಅನೇಕ ಚಿತ್ರರಂಗದ ಗಣ್ಯರು ಆಗಮಿಸಿ ಶುಭ ಕೋರಿದ್ದರು. ಇದನ್ನೂ ಓದಿ: ದೇಶ ವಿದೇಶದಲ್ಲಿ ಜೇಮ್ಸ್ ಅಬ್ಬರ ಶುರು – ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ಜೇಮ್ಸ್!

  • ಚಂದನ್ ಶೆಟ್ಟಿ ದಂಪತಿಯಿಂದ ಕೊರೊನಾ ಜಾಗೃತಿ ರ‍್ಯಾಪ್ ಸಾಂಗ್

    ಚಂದನ್ ಶೆಟ್ಟಿ ದಂಪತಿಯಿಂದ ಕೊರೊನಾ ಜಾಗೃತಿ ರ‍್ಯಾಪ್ ಸಾಂಗ್

    – ಎಣ್ಣೆ ಸಪ್ಲೈ ಮಾಡ್ಬೋದೇನೋ ಕುಡುಕ್ರೂ ಸ್ವಲ್ಪ ತಡ್ಕಳಿ
    – ಕೊರೊನಾ ನಿಂಗೆ ಸದ್ಯದಲ್ಲೇ ಮಾಡ್ತೀವಿ ತಿಥಿನಾ

    ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ತಮ್ಮ ವಿಭಿನ್ನ ಶೈಲಿಯ ರ‍್ಯಾಪ್ ಸಾಂಗ್‍ಗಳ ಮೂಲಕ ಯುವ ಸಮುದಾಯಕ್ಕೆ ಹತ್ತಿರವಾಗಿದ್ದಾರೆ. ಕೊರೊನಾ ಬಗ್ಗೆ ದೇಶವನ್ನೇ ಸ್ತಬ್ಧವನ್ನಾಗಿಸಿದ್ದು, ಎಲ್ಲರೂ ಸ್ವಯಂ ದಿಗ್ಬಂಧನ ವಿಧಿಸಿಕೊಂಡಿದ್ದಾರೆ. ಈ ಮಧ್ಯೆ ಹಾಡಿನ ಮೂಲಕ ಸಂಗೀತಗಾರರು ಜಾಗೃತಿ ಮೂಡಿಸುತ್ತಿದ್ದಾರೆ. ಇತ್ತೀಚೆಗೆ ಖ್ಯಾತ ಸಿನಿಮಾ ಸಾಹಿತಿ ಜಯಂತ್ ಕಾಯ್ಕಿಣಿ ಅವರು ಬರೆದಿದ್ದ ಸಾಹಿತ್ಯಕ್ಕೆ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ಧ್ವನಿ ನೀಡಿದ್ದರು. ಇದೀಗ ಚಂದನ್ ಶೆಟ್ಟಿ ತಾವೇ ರಚಿಸಿದ ಹಾಡನ್ನು ಹೇಳಿದ್ದಾರೆ.

    ಕೊರೊನಾ ಇಡೀ ದೇಶವನ್ನೇ ಹಿಂಡಿ ಹಿಪ್ಪೆ ಮಾಡುತ್ತಿದ್ದು, ದೇಶದ ಜನತೆ ಭಯಭೀತರಾಗಿದ್ದಾರೆ. ಹೀಗಾಗಿ ಎಲ್ಲೆಡೆ ಜಾಗೃತಿ ಹೆಚ್ಚಾಗುತ್ತಿದ್ದು, ಸಿನಿಮಾ ತಾರೆಯರಂತೂ ಟೊಂಕ ಕಟ್ಟಿ ನಿಂತಿದ್ದಾರೆ. ಎಲ್ಲರೂ ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದು, ಮನೆಯಲ್ಲೇ ಇರಿ, ಆರೋಗ್ಯವಾಗಿರಿ ಎಂಬ ಸಂದೇಶವನ್ನು ನೀಡುತ್ತಿದ್ದಾರೆ. ಇದಕ್ಕೆ ತಕ್ಕಂತೆ ಸಂಗೀತಗಾರರು ಹಾಗೂ ಸಾಹಿತಿಗಳು ಸಹ ತಮ್ಮ ವಿಭಿನ್ನ ಶೈಲಿಯಲ್ಲಿ ಹಾಡು ರಚಿಸುವ ಮೂಲಕ ಜನರಿಗೆ ತಿಳಿ ಹೇಳುತ್ತಿದ್ದಾರೆ.

     

    View this post on Instagram

     

    Be home .. Be safe ..

    A post shared by Chandan Shetty (@chandanshettyofficial) on

    ರ‍್ಯಾಪರ್ ಚಂದನ್ ಶೆಟ್ಟಿ ಸಹ ತಮ್ಮ ಶೈಲಿಯಲ್ಲಿ ರ‍್ಯಾಪ್ ಗೀತೆಯನ್ನು ರಚಿಸಿದ್ದು, ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಸೇರಿಕೊಂಡು ತಾವೇ ರಚಿಸಿದ ಹಾಡನ್ನು ಹೇಳಿದ್ದಾರೆ. ಇದನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ರ‍್ಯಾಪ್ ಸಾಂಗ್ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ. ಕೊರೊನಾ…ಕೊರೊನಾ….ಕೊರೊನಾ…..ನಿಂಗೆ ಸದ್ಯದಲ್ಲೇ ಮಾಡ್ತೀವಿ ತಿಥಿನಾ ಎಂಬ ಸಾಲುಗಳು ಯುವ ಸಮುದಾಯಕ್ಕೆ ಅಪ್ಯಾಯಮಾನವಾಗುತ್ತವೆ.

    ಎಣ್ಣೆ ಸಪ್ಲೈ ಮಾಡ್ಬೋದೇನೋ ಕುಡುಕ್ರೂ ಸ್ವಲ್ಪ ತಡ್ಕಳಿ, ನಾವೆಲ್ಲಾ ಮನೆಲೇ ಇರೋಣ, ಮಿಸ್ ಆದರೆ ಡೈರೆಕ್ಟೂ ಸ್ಮಶಾನ ಎಂಬ ಸಾಲುಗಳು ಯುವಕರನ್ನು ಹೆಚ್ಚು ಸೆಳೆಯುತ್ತವೆ. ಇದರೊಂದಿಗೆ ಮಾಸ್ಕ್, ಗುಂಪು ಸೇರದಂತೆ ಕೇಳಿಕೊಂಡಿದ್ದಾರೆ. ಇದು ಮೇಡ್ ಇನ್ ಚೀನಾ ಎಂದು ಹರಿಹಾಯ್ದಿದ್ದಾರೆ.

  • ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ

    ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ

    ಮೈಸೂರು: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಹನಿಮೂನ್‍ಗೂ ಕೊರೊನಾ ಬಿಸಿ ತಟ್ಟುತ್ತಿದೆ. ಹನಿಮೂನ್ ಮುಗಿಸಿ ಮೈಸೂರಿಗೆ ಆಗಮಿಸುವ ನವದಂಪತಿಗಳಿಗೆ ಕಡ್ಡಾಯ ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಕಚೇರಿಗೆ ನ್ಯಾಷನಲ್ ಸ್ಟೂಡೆಂಟ್ಸ್ ಯುನಿಯನ್ ಆಫ್ ಇಂಡಿಯಾದ ಅಧ್ಯಕ್ಷ ರಫೀಕ್ ಅಲಿ ಮನವಿ ಸಲ್ಲಿಸಿದ್ದಾರೆ.

    ಮೈಸೂರಿನಲ್ಲಿ ಈವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ ನಂತರ ಯೂರೋಪ್‍ಗೆ ಹನಿಮೂನ್ ಹೋಗಿದ್ದಾರೆ. ಹನಿಮೂನ್ ಮುಗಿಸಿ ಮೈಸೂರಿಗೆ ಆಗಮಿಸುವ ಸಂದರ್ಭದಲ್ಲಿ ಸೆಲೆಬ್ರಿಟಿಗಳು ಎಂಬ ಕಾರಣದಿಂದ ಅವರನ್ನು ತಪಾಸಣೆ ಮಾಡದೇ ನಿರ್ಲಕ್ಷ್ಯಿಸಬಾರದು. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಎಂದು ಮನವಿ ಮಾಡಲಾಗಿದೆ.

    ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಅವರನ್ನು ತಪಾಸಣೆಗೆ ಒಳಪಡಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಚಂದನ್ ಶೆಟ್ಟಿ – ನಿವೇದಿತಾ ಗೌಡ ಮದುವೆ ನಂತರ ಯೂರೋಪ್‍ಗೆ ಪ್ರವಾಸ ಕೈಗೊಂಡಿದ್ದಾರೆ. ಯೂರೋಪ್‍ನ ಇಟಲಿಯಲ್ಲಿ ಈಗಾಗಲೇ ಶೇ.30 ರಷ್ಟು ಭಾಗ ಕೊರೊನಾ ಆವರಿಸಿದೆ. ಇದುವರೆಗೂ ಇಟಲಿಯಲ್ಲಿ 12,462 ಕೊರೊನಾ ಪಾಸಿಟಿವ್ ಕೇಸ್‍ಗಳು ಬೆಳಕಿಗೆ ಬಂದಿದ್ದು, 827 ಜನ ಮೃತಪಟ್ಟಿದ್ದಾರೆ.

  • ಹನಿಮೂನ್‍ಗೆ ವಿದೇಶಕ್ಕೆ ಹಾರಿದ ಬಿಗ್‍ಬಾಸ್ ಜೋಡಿ

    ಹನಿಮೂನ್‍ಗೆ ವಿದೇಶಕ್ಕೆ ಹಾರಿದ ಬಿಗ್‍ಬಾಸ್ ಜೋಡಿ

    ಬೆಂಗಳೂರು: ಬಿಗ್‍ಬಾಸ್ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಕಳೆದವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ಜೋಡಿ ಹನಿಮೂನ್‍ಗಾಗಿ ವಿದೇಶಕ್ಕೆ ಹಾರಿದ್ದಾರೆ.

    ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಫೆಬ್ರವರಿ 25, 26 ರಂದು ಮೈಸೂರಿನಲ್ಲಿ ಸಪ್ತಪದಿ ತುಳಿದಿದ್ದರು. ಈಗ ಚಂದನ್ ತನ್ನ ಪತ್ನಿಯೊಂದಿಗೆ ಹನಿಮೂನ್‍ಗೆ ವಿದೇಶಕ್ಕೆ ಹೋಗಿದ್ದಾರೆ. ಹನಿಮೂನ್‍ಗೆ ಹೋಗುವ ಮುನ್ನ ಏರ್‌ಪೋರ್ಟ್‌ನಲ್ಲಿ ಇಬ್ಬರು ಒಟ್ಟಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ನಂತರ ಆ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುವ ಮೂಲಕ ತಾವೂ ಹನಿಮೂನ್‍ಗೆ ಹೋಗುತ್ತಿರುವ ವಿಚಾರವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಇಷ್ಟು ದಿನ ಮನೆಯಲ್ಲಿ ಒಬ್ಬನೇ ಇರ್ತಿದ್ದೆ, ಇನ್ಮುಂದೆ ಹೆಂಡ್ತಿ ಇರ್ತಾಳೆ: ಚಂದನ್

    ಕಳೆದ ದಿನ ನಿವೇದಿತಾ ಇಬ್ಬರ ಪಾಸ್‍ಪೋರ್ಟ್ ಹಿಡಿದುಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದರು. ಜೊತೆಗೆ ಹನಿಮೂನ್‍ಗೆ ಯಾವ ವಿದೇಶಕ್ಕೆ ಹೋಗಲಿದ್ದೇವೆ ಎಂಬುದನ್ನು ತಿಳಿಸಿದ್ದರು. ಚಂದನ್ ಮತ್ತು ನಿವೇದಿತಾ ಜೋಡಿ ನೆದರ್‌ಲ್ಯಾಂಡ್‌ನ ಆಂಸ್ಟರ್ಡ್ಯಾಮ್ ಹೋಗಿದ್ದು, ಅಲ್ಲಿನ ಸುತ್ತಮುತ್ತಲ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಚಂದನ್ ಶೆಟ್ಟಿ, ನಿವೇದಿತಾ ಗೌಡಾಗೆ ಜಾಗ್ವಾರ್ ಕಾರು ಗಿಫ್ಟ್

    ಮದುವೆಯ ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಚಂದನ್ ಶೆಟ್ಟಿ, ನಿವೇದಿತಾಗೆ ಹನಿಮೂನ್‍ಗಾಗಿ ಪ್ಯಾರಿಸ್‍ಗೆ ಹೋಗಬೇಕು ಎಂಬ ಆಸೆ ಇದೆ. ಹೀಗಾಗಿ ಅಲ್ಲಿಗೆ ಹೋಗುವುದಾಗಿ ತಿಳಿಸಿದ್ದರು. ಈಗ ಬಿಗ್‍ಬಾಸ್ ಜೋಡಿ  ಹನಿಮೂನ್‍ಗೆ ಆಂಸ್ಟರ್ಡ್ಯಾಮ್ ಗೆ ಹೋಗಿದ್ದಾರೆ.

    https://www.instagram.com/p/B9L8peMJMIM/

    ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ ಮೈಸೂರಿನ ಹಿನಕಲ್‍ನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ನಡೆದಿದೆ. ಇವರಿಬ್ಬರ ಮದುವೆ ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ನಡೆದಿತ್ತು. ಮದುವೆಯ ಉಡುಗೊರೆಯಾಗಿ ಚಂದನ್ ಪೋಷಕರು ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

  • ಬಿಗ್‍ಬಾಸ್ ಟ್ರೋಫಿನೂ ಬಂತು, ವಿನ್ನರೂ ಸಿಕ್ಕಿದ್ರು: ನಿವೇದಿತಾ

    ಬಿಗ್‍ಬಾಸ್ ಟ್ರೋಫಿನೂ ಬಂತು, ವಿನ್ನರೂ ಸಿಕ್ಕಿದ್ರು: ನಿವೇದಿತಾ

    ಮೈಸೂರು: ನನಗೆ ಬಿಗ್‍ಬಾಸ್ ಟ್ರೋಫಿನೂ ಬಂತು, ಜೊತೆಗೆ ವಿನ್ನರೂ ಸಿಕ್ಕಿದ್ದಾರೆ ಎಂದು ನಿವೇದಿತಾ ಗೌಡ ತಮ್ಮ ಮದುವೆಯ ಬಗ್ಗೆ ಮಾತನಾಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಿವೇದಿತಾ ಗೌಡ, ಬಿಗ್‍ಬಾಸ್‍ಗೆ ಹೋಗುವಾಗ ನನ್ನ ಜೀವನದಲ್ಲಿ ಈ ರೀತಿಯ ಟ್ವಿಸ್ಟ್ ಸಿಗುತ್ತೆ ಎಂದುಕೊಂಡಿರಲಿಲ್ಲ. ಆದರೆ ಇದು ನನ್ನ ಜೀವನದ ಸುಂದರವಾದ ಟ್ವಿಸ್ಟ್. ಇದು ಜೀವನ ಪೂರ್ತಿ ನೆನಪಿನಲ್ಲಿರುತ್ತದೆ. ಇವರು ಬಿಗ್‍ಬಾಸ್ ವಿನ್ನರ್, ನಾನು ಇವರನ್ನು ಮದುವೆಯಾಗಿದ್ದೇನೆ. ಹೀಗಾಗಿ ಟ್ರೋಫಿನೂ ಬಂತೂ, ವಿನ್ನರೂ ಸಿಕ್ಕಿದ್ದಾರೆ ನನಗೆ ಎಂದು ಸಂತಸದಿಂದ ಹೇಳಿದರು. ಇದನ್ನೂ ಓದಿ: ಚಂದನ್ ಶೆಟ್ಟಿ, ನಿವೇದಿತಾ ಗೌಡಾಗೆ ಜಾಗ್ವಾರ್ ಕಾರು ಗಿಫ್ಟ್

    ಬಿಗ್‍ಬಾಸ್ ಇಲ್ಲ ಎಂದಿದ್ದರೆ ನಾವು ಭೇಟಿಯಾಗುತ್ತಿರಲಿಲ್ಲ. ಹೀಗಾಗಿ ನಾವಿಬ್ಬರೂ ಒಬ್ಬೊಬ್ಬರನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಬಿಗ್‍ಬಾಸ್ ಕಾರಣ. ಬಿಗ್‍ಬಾಸ್ ಹೋಗುವ ಮೊದಲೇ ಚಂದನ್ ಶೆಟ್ಟಿ ಗೊತ್ತಿತ್ತು. ಆದರೆ ಆ ಸಂದರ್ಭದಲ್ಲಿ ಚಂದನ್ ಸಿಂಗರ್ ಅನ್ನೋ ಭಾವನೆ ಇತ್ತು. ಈಗ ಅವರನ್ನು ಅರ್ಥ ಮಾಡಿಕೊಂಡು ಮದುವೆಯಾದ ಮೇಲೆ ಬೇರೆ ಭಾವನೆ ಇದೆ ಎಂದರು. ಇದನ್ನೂ ಓದಿ: ಇಷ್ಟು ದಿನ ಮನೆಯಲ್ಲಿ ಒಬ್ಬನೇ ಇರ್ತಿದ್ದೆ, ಇನ್ಮುಂದೆ ಹೆಂಡ್ತಿ ಇರ್ತಾಳೆ: ಚಂದನ್

    ಚಂದನ್ ಮನೆಯವರು ತುಂಬಾ ಒಳ್ಳೆಯವರು. ನನಗೆ ಗೊತ್ತಿಲ್ಲದ್ದನ್ನು ಅವರೇ ಹೇಳಿಕೊಡುತ್ತಾರೆ. ನನ್ನ ಕನಸಿನ ರೀತಿ ಮದುವೆಯಾಗಿದೆ. ಇದೇ ರೀತಿ ಮದುವೆಯಾಗಬೇಕು ಎಂಬ ಆಸೆ ಇತ್ತು. ಹೀಗಾಗಿ ಮದುವೆ ಕೆಲಸದ ಜೊತೆಗೆ ನಾನು ಅವರಿಗೆ ಒತ್ತಡ ಹಾಕುತ್ತಿದ್ದೆ. ಆದರೂ ಅವರು ಎಲ್ಲವನ್ನೂ ನಿಭಾಯಿಸಿಕೊಂಡು ನನ್ನ ಇಷ್ಟದಂತೆ ಎಲ್ಲವನ್ನೂ ತಯಾರು ಮಾಡಿದ್ದರು ಎಂದು ಮದುವೆ ಬಗ್ಗೆ ನಿವೇದಿತಾ ಗೌಡ ಮಾತನಾಡಿದರು.

  • ಇಷ್ಟು ದಿನ ಮನೆಯಲ್ಲಿ ಒಬ್ಬನೇ ಇರ್ತಿದ್ದೆ, ಇನ್ಮುಂದೆ ಹೆಂಡ್ತಿ ಇರ್ತಾಳೆ: ಚಂದನ್

    ಇಷ್ಟು ದಿನ ಮನೆಯಲ್ಲಿ ಒಬ್ಬನೇ ಇರ್ತಿದ್ದೆ, ಇನ್ಮುಂದೆ ಹೆಂಡ್ತಿ ಇರ್ತಾಳೆ: ಚಂದನ್

    ಮೈಸೂರು: ಇಷ್ಟು ದಿನ ಒಬ್ಬನೇ ಮನೆಯಲ್ಲಿ ಇರುತ್ತಿದ್ದೆ. ಇನ್ಮುಂದೆ ನನ್ನ ಜೊತೆ ಹೆಂಡತಿ ಕೂಡ ಇರುತ್ತಾಳೆ ಎಂದು ರ‍್ಯಾಪರ್ ಚಂದನ್ ಶೆಟ್ಟಿ ಮದುವೆಯಾದ ನಂತರ ಮೊದಲ ಬಾರಿಗೆ ಮಾತನಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವರ ಚಂದನ್, ಇವತ್ತಿನಿಂದ ಜೀವನ ಬೇರೆ ತರನೇ ಇರುತ್ತದೆ. ಇಷ್ಟು ದಿನ ಒಬ್ಬನೇ ಮನೆಯಲ್ಲಿ ಇರುತ್ತಿದ್ದೆ. ಇನ್ಮುಂದೆ ನನ್ನ ಜೊತೆ ಹೆಂಡತಿ ಕೂಡ ಇರುತ್ತಾಳೆ. ತುಂಬಾ ಖುಷಿಯಾಗುತ್ತಿವೆ. ಜೀವನದಲ್ಲಿ ಮದುವೆ ಅನ್ನೋದು ತುಂಬಾ ಮುಖ್ಯವಾದ ವಿಚಾರವಾಗಿದೆ. ಇವತ್ತಿನಿಂದ ಜೀವನವೂ ತುಂಬಾ ಚೆನ್ನಾಗಿರುತ್ತೆ ಅಂದುಕೊಂಡಿದ್ದೀನಿ ಎಂದು ಸಂತಸದಿಂದ ಹೇಳಿದರು. ಇದನ್ನೂ ಓದಿ: ನಾನಿಷ್ಟಪಟ್ಟ ಹುಡ್ಗನೊಂದಿಗೆ ಮದ್ವೆಯಾಗಿದ್ದು ತುಂಬಾನೇ ಖುಷಿಯಾಗಿದೆ: ನಿವೇದಿತಾ

    ಕರ್ನಾಟಕ ಜನತೆ ಎಲ್ಲರೂ ಪ್ರೀತಿ ಕೊಟ್ಟಿದ್ದೀರಾ. ನಿಮ್ಮೆಲ್ಲರ ಆಶೀರ್ವಾದದಿಂದ ನಾವಿಬ್ಬರು ಇಂದು ಮದುವೆಯಾಗಿದ್ದೇವೆ. ಜೀವನ ಪೂರ್ತಿ ನೆನಪಿನಲ್ಲಿ ಉಳಿಯುವಂತೆ ಮದುವೆ ಮಾಡಿಕೊಳ್ಳುಬೇಕು ಅಂದುಕೊಂಡಿದ್ದೆವು. ಅದೇ ರೀತಿ ಮದುವೆ ಕೂಡ ಅದ್ಧೂರಿಯಾಗಿ ಆಗಿದೆ. ನಿಜಕ್ಕೂ ತುಂಬಾ ಖುಷಿಯಾಗಿದೆ ಎಂದು ಚಂದನ್ ಹೇಳಿದರು.

    ಕಳೆದ ವರ್ಷದ ‘ಯುವ ದಸರಾ 2019’ ಕಾರ್ಯಕ್ರಮದಲ್ಲಿ ಹಾಡಲು ಬಂದಿದ್ದ ಚಂದನ್ ಶೆಟ್ಟಿ, ನಿವೇದಿತಾ ಅವರಿಗೆ ವೇದಿಕೆಯಲ್ಲೇ ಉಂಗುರ ತೊಡಿಸಿ ಪ್ರೇಮ ನಿವೇದನೆ ಮಾಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೊಳಗಾಗಿತ್ತು. ಬಳಿಕ ಸ್ವತಃ ಚಂದನ್ ಅವರೇ ಕ್ಷಮೆ ಕೇಳಿದ್ದರು. ನಂತರ ಅಕ್ಟೋಬರ್ 21ರಂದು ಮೈಸೂರಿನ ಸದರ್ನ್ ಸ್ಟಾರ್ ಹೋಟೆಲಲ್ಲಿ ನಿಶ್ಚಿತಾರ್ಥ ನಡೆದಿದ್ದು, ಇಂದು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ಇವರಿಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್‍ಬಾಸ್ ಜೋಡಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್‍ಬಾಸ್ ಜೋಡಿ

    ಮೈಸೂರು: ಕನ್ನಡ ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 5’ರಲ್ಲಿ ಆರಂಭವಾದ ‘ಪ್ರೀತಿ’ ಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಮೈಸೂರಿನ ಹಿನಕಲ್‍ನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ಬಿಗ್‍ಬಾಸ್ ಜೋಡಿ ಮದುವೆ ನಡೆದಿದೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಮದುವೆ ಗೌಡ ಹಾಗೂ ಶೆಟ್ಟಿ ಸಂಪ್ರದಾಯಗಳೆರಡರಲ್ಲೂ ನಡೆದಿದೆ. ಬೆಳಗ್ಗೆ 8.15 ರಿಂದ 9 ಗಂಟೆಗೆ ಧಾರಾ ಮುಹೂರ್ತವಿತ್ತು. ಮೀನ ಲಗ್ನದಲ್ಲಿ ನಿವೇದಿತಾಳನ್ನು ಚಂದನ್ ಶೆಟ್ಟಿ ವರಿಸಿದ್ದಾರೆ.

    ಈ ಕಾರ್ಯಕ್ರಮದಲ್ಲಿ ನಿವೇದಿತಾ ಪೋಷಕರಾದ ಹೇಮ ಮತ್ತು ರಮೇಶ್, ಚಂದನ್‍ಶೆಟ್ಟಿ ಪೋಷಕರಾದ ಪ್ರೇಮಲತಾ ಹಾಗೂ ಪರಮೇಶ್, ಆಪ್ತರು, ಸ್ನೇಹಿತರು, ಹಿತೈಷಿಗಳ ಸಮ್ಮುಖದಲ್ಲಿ ನಿವೇದಿತಾಗೆ ಚಂದನ್ ತಾಳಿ ಕಟ್ಟಿದ್ದಾರೆ.

     

    ಮಂಗಳವಾರ ಸಂಜೆ ಚಂದನ್ ಮತ್ತು ನಿವೇದಿತಾ ಆರತಕ್ಷತೆ ನಡೆದಿದೆ. ಬೇಬಿ ಡಾಲ್ ಮೆರೂನ್ ಕಲರ್ ಗೌನ್‍ನಲ್ಲಿ ಮಿಂಚಿದರೆ, ಚಂದನ್ ಕೂಡ ಅದೇ ಕಲರ್ ಧಿರಿಸಿನಲ್ಲಿ ಕಂಗೊಳಿಸುತ್ತಿದ್ದರು.