ದಕ್ಷಿಣ ಭಾರತದ ನಟಿ ನಿವೇತಾ ಪೇತುರಾಜ್ (Nivetha Pethuraj) ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ಖಾಸಗಿ ವಿಚಾರಗಳಿಂದ ಹೆಚ್ಚೆಚ್ಚು ಸುದ್ದಿಯಾಗ್ತಿದ್ದಾರೆ. ಇದೀಗ ಬಾಯ್ಫ್ರೆಂಡ್ ತಾವು ಮೋಸ (Cheat) ಹೋಗಿರೋದಾಗಿ ನಟಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ತಪ್ಪು ಮಾಡಿದ್ದಾಗಿ ಒಪ್ಪಿಕೊಂಡ ನಟಿ ಸಮಂತಾ
ನಾವು ಏನಾದರೂ ನೆಗೆಟಿವ್ ಆಗಿ ಯೋಚಿಸಿದರೆ ಅದು ಸಂಭವಿಸುತ್ತದೆ. ನನ್ನ ಗೆಳೆಯ ನನಗೆ ಮೋಸ ಮಾಡುತ್ತಾನೆ ಎಂದು ಭಾವಿಸಿದೆ. ಅದೇ ಸಂಭವಿಸಿತು. ಆತ ನನಗೆ ಮೋಸ ಮಾಡಿ ಬೇರೆ ಹುಡುಗಿಯ ಜೊತೆ ಹೋಗಿದ್ದಾನೆ ಎಂದು ಬೇಸರದಿಂದ ನಟಿ ನಿವೇತಾ ಮಾತನಾಡಿದ್ದಾರೆ.
ತಮಿಳಿನ ‘ಒರು ನಾಳ್ ಕೂತು’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ನಟಿ ಪಾದಾರ್ಪಣೆ ಮಾಡಿದರು. ಬಳಿಕ ತಮಿಳು ಮತ್ತು ತೆಲುಗಿನಲ್ಲಿ ನಟಿ ಬ್ಯುಸಿಯಾದರು.
ತಮಿಳು ನಟಿ ನಿವೇತಾ ಪೇತುರಾಜ್ ಮೊನ್ನೆಯಷ್ಟೇ ಗಾಸಿಪ್ ಕುರಿತಾಗಿ ಗರಂ ಆಗಿದ್ದರು. ತಮ್ಮನ್ನು ರಾಜಕಾರಣಿ ಉದಯನಿಧಿ ಸ್ಟಾಲಿನ್ (Udayanidhi) ಜೊತೆ ಕೆಟ್ಟದ್ದಾಗಿ ಬಿಂಬಿಸುತ್ತಿರುವುದಕ್ಕೆ ತರಾಟೆಗೆ ತಗೆದುಕೊಂಡಿದ್ದರು. ಇದೀಗ ಸಮಾಧಾನದಿಂದ ಗಾಸಿಪ್ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಕಷ್ಟದ ದಿನಗಳನ್ನೂ ಅವರು ಹಂಚಿಕೊಂಡಿದ್ದಾರೆ.
ತಮ್ಮ ಸಿನಿಮಾದಲ್ಲಿ ನಟಿಸಿದ್ದ ನಟಿಯೊಬ್ಬರಿಗೆ ರಾಜಕಾರಣಿಯೊಬ್ಬರು ಕೋಟ್ಯಂತರ ಮೌಲ್ಯದ ಫ್ಲ್ಯಾಟ್ ಕೊಡಿಸಿ, ದುಬೈನಲ್ಲಿ ಇಟ್ಟಿದ್ದಾರೆ ಎನ್ನುವ ವಿಚಾರ ತಮಿಳು ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ನಟಿ ನಿವೇತಾ ಪೇತುರಾಜ್, ಆ ರಾಜಕಾರಣಿಯಿಂದ (Politician) ಸಾಕಷ್ಟು ದುಬಾರಿ ಗಿಫ್ಟ್ ಗಳನ್ನು ಪಡೆದುಕೊಂಡಿದ್ದಾರೆ ಎಂದೂ ಹೇಳಲಾಗಿತ್ತು. ಆ ರಾಜಕಾರಣಿ ಬೇರೆ ಯಾರೂ ಅಲ್ಲ, ಉದಯನಿಧಿ ಸ್ಟಾಲಿನ್ ಎಂದೂ ತಳುಕು ಹಾಕಲಾಗಿತ್ತು.
ಸೋಷಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಾಕಷ್ಟು ಹರಿದಾಡಿದ್ದರಿಂದ ನಿವೇತಾ ಪೇತುರಾಜ್ (Nivetha Pethuraj) ಗರಂ ಆಗಿದ್ದರು. ಈ ಸುದ್ದಿಯನ್ನು ಹರಡುತ್ತಿರುವವರಿಗೆ ವಾರ್ನ್ ಕೂಡ ನೀಡಿದ್ದರು. ನಾನು 16ನೇ ವಯಸ್ಸಿನಲ್ಲೇ ದುಡಿಯಲು ಪ್ರಾರಂಭಿಸಿದವಳು. ಅತ್ಯಂತ ಸುಂಸ್ಕೃತ ಮನೆತನದಿಂದ ಬಂದವಳು. ದುಡ್ಡು ಮಾಡಲು ಅಡ್ಡ ದಾರಿ ಹಿಡಿಯುವವಳು ಅಲ್ಲ. ಈ ಸುದ್ದಿಯನ್ನು ಹಬ್ಬಿಸುವಾಗ ಎಚ್ಚರವಿರಲಿ ಎಂದಿದ್ದರು ನಿವೇತಾ.
ತಮ್ಮ ಕುಟುಂಬ ಹತ್ತಾರು ವರ್ಷಗಳಿಂದ ದುಬೈನಲ್ಲಿ (Dubai) ನೆಲೆಸಿದೆ. ನಾನೂ ಕೂಡ ಸಂಪಾದನೆ ಮಾಡಿಕೊಂಡು ಬಂದಿದ್ದೇನೆ. ಅದಕ್ಕಾಗಿ ಈವರೆಗೂ ಯಾವುದೇ ಅಡ್ಡದಾರಿ ತುಳಿದಿಲ್ಲ. ಅದರ ಅವಶ್ಯಕತೆಯೂ ತಮಗಿಲ್ಲ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಹಾಗಾಗಿ ಇಂತಹ ವಿಷಯಗಳು ಬಂದಾಗ ನೋವಾಗತ್ತೆ ಎನ್ನುವುದು ನಿವೇತಾ ಮಾತು. ತಮಗೆ ಯಾವುದೇ ರಾಜಕಾರಣಿಯ ಜೊತೆ ನಂಟಿಲ್ಲ. ಅವರೊಂದಿಗೆ ಕೆಲಸ ಮಾಡಿದ್ದೇನೆ. ಅದು ಆಯಾ ಸಿನಿಮಾಗೆ ಮಾತ್ರ ಸಿಮೀತ. ಅದರಾಚೆ ಯಾವ ಸ್ನೇಹವೂ ಇಲ್ಲ ಎನ್ನುವುದನ್ನು ಅವರು ಸ್ಪಷ್ಟ ಪಡಿಸಿದ್ದಾರೆ.
ಯಾರಿದು ನಿವೇತಾ?
ತೆಲುಗು ಮತ್ತು ತಮಿಳು ನಟಿ ನಿವೇತಾ ಪೇತುರಾಜ್. ತಮಿಳಿನ ಒರು ನಾಲ್ ಕೂತು ಸಿನಿಮಾದ ಮೂಲಕ 2016ರಲ್ಲಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಮೆಂಟಲ್ ಮದಿಲೋ ಚಿತ್ರದಿಂದ ತೆಲುಗು ಸಿನಿಮಾ ರಂಗದಲ್ಲೂ ತಮ್ಮನ್ನು ತಾವು ಗುರುತಿಸಿಕೊಂಡರು.
ತಮಿಳು ನಾಡಿನ ಮಧುರೈನಲ್ಲಿ ಜನಿಸಿದರೂ, ನಂತರದ ದಿನಗಳಲ್ಲಿ ಕುಟುಂಬ ಸಮೇತ ಅವರು ದುಬೈನಲ್ಲಿ ವಾಸವಿದ್ದಾರೆ. ಹದಿನೆಂಟಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ನಿವೇತಾ, ಚಿತ್ರಲಹರಿ, ಕೆಂಪು, ಪಾಮಗ್, ಬ್ಲಡಿ ಮೇರಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ಇವರು ನಾಯಕಿಯಾಗಿ ನಟಿಸಿದ್ದಾರೆ. ಹಿಂದಿಯಲ್ಲಿ ಕಾಲಾ ಧಾರಾವಾಹಿಯಲ್ಲೂ ಇವರು ಕಾಣಿಸಿಕೊಂಡಿದ್ದಾರೆ.
ತಮ್ಮ ಸಿನಿಮಾದಲ್ಲಿ ನಟಿಸಿದ್ದ ನಟಿಯೊಬ್ಬರಿಗೆ ರಾಜಕಾರಣಿಯೊಬ್ಬರು ಕೋಟ್ಯಂತರ ಮೌಲ್ಯದ ಫ್ಲ್ಯಾಟ್ ಕೊಡಿಸಿ, ದುಬೈನಲ್ಲಿ ಇಟ್ಟಿದ್ದಾರೆ ಎನ್ನುವ ವಿಚಾರ ತಮಿಳು ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ನಟಿ ನಿವೇತಾ ಪೇತುರಾಜ್, ಆ ರಾಜಕಾರಣಿಯಿಂದ (Politician) ಸಾಕಷ್ಟು ದುಬಾರಿ ಗಿಫ್ಟ್ ಗಳನ್ನು ಪಡೆದುಕೊಂಡಿದ್ದಾರೆ ಎಂದೂ ಹೇಳಲಾಗಿತ್ತು.
ಸೋಷಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಾಕಷ್ಟು ಹರಿದಾಡಿದ್ದರಿಂದ ನಿವೇತಾ ಪೇತುರಾಜ್ (Nivetha Pethuraj) ಗರಂ ಆಗಿದ್ದಾರೆ. ಈ ಸುದ್ದಿಯನ್ನು ಹರಡುತ್ತಿರುವವರಿಗೆ ವಾರ್ನ್ ಕೂಡ ನೀಡಿದ್ದಾರೆ. ನಾನು 16ನೇ ವಯಸ್ಸಿನಲ್ಲೇ ದುಡಿಯಲು ಪ್ರಾರಂಭಿಸಿದವಳು. ಅತ್ಯಂತ ಸುಂಸ್ಕೃತ ಮನೆತನದಿಂದ ಬಂದವಳು. ದುಡ್ಡು ಮಾಡಲು ಅಡ್ಡ ದಾರಿ ಹಿಡಿಯುವವಳು ಅಲ್ಲ. ಈ ಸುದ್ದಿಯನ್ನು ಹಬ್ಬಿಸುವಾಗ ಎಚ್ಚರವಿರಲಿ ಎಂದಿದ್ದಾರೆ ನಿವೇತಾ.
ತಮ್ಮ ಕುಟುಂಬ ಹತ್ತಾರು ವರ್ಷಗಳಿಂದ ದುಬೈನಲ್ಲಿ (Dubai) ನೆಲೆಸಿದೆ. ನಾನೂ ಕೂಡ ಸಂಪಾದನೆ ಮಾಡಿಕೊಂಡು ಬಂದಿದ್ದೇನೆ. ಅದಕ್ಕಾಗಿ ಈವರೆಗೂ ಯಾವುದೇ ಅಡ್ಡದಾರಿ ತುಳಿದಿಲ್ಲ. ಅದರ ಅವಶ್ಯಕತೆಯೂ ತಮಗಿಲ್ಲ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಹಾಗಾಗಿ ಇಂತಹ ವಿಷಯಗಳು ಬಂದಾಗ ನೋವಾಗತ್ತೆ ಎನ್ನುವುದು ನಿವೇತಾ ಮಾತು.
ತಮಗೆ ಯಾವುದೇ ರಾಜಕಾರಣಿಯ ಜೊತೆ ನಂಟಿಲ್ಲ. ಅವರೊಂದಿಗೆ ಕೆಲಸ ಮಾಡಿದ್ದೇನೆ. ಅದು ಆಯಾ ಸಿನಿಮಾಗೆ ಮಾತ್ರ ಸಿಮೀತ. ಅದರಾಚೆ ಯಾವ ಸ್ನೇಹವೂ ಇಲ್ಲ ಎನ್ನುವುದನ್ನು ಅವರು ಸ್ಪಷ್ಟ ಪಡಿಸಿದ್ದಾರೆ.
ತೆಲುಗು ಚಿತ್ರರಂಗದ ಯಂಗ್ ಅಂಡ್ ಪ್ರಾಮಿಸಿಂಗ್ ಹೀರೋ ವಿಶ್ವಕ್ ಸೇನ್ ಫಲಕ್ನುಮಾ ದಾಸ್ ಸಿನಿಮಾ ಮೂಲಕ ತಾವೊಬ್ಬ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ ಅನ್ನೋದನ್ನು ಸಾಬೀತುಪಡಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದು ಗೆದ್ದಿರುವ ವಿಶ್ವಕ್ ಸೇನ್ ಇದೀಗ ಧಮ್ಕಿ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮೆರವಣಿಗೆ ಹೊರಡಲು ಸಜ್ಜಾಗಿದ್ದಾರೆ.
ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚಿರುವ ಅವರು ನಿರ್ದೇಶಕನಾಗಿಯೂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮನ್ಮಯೆ ಕ್ರಿಯೇಷನ್ಸ್ ಮತ್ತು ವಿಶ್ವಕ್ ಸೇನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕರಾಟೆ ರಾಜು ನಿರ್ಮಾಣ ಮಾಡ್ತಿರುವ ಧಮ್ಕಿ ಚಿತ್ರಕ್ಕೆ ಪ್ರಸನ್ನ ಕುಮಾರ್ ಬೆಜವಾಡ ಕಥೆ ಮತ್ತು ಸಂಭಾಷಣೆ ಬರೆದಿದ್ದು, ವಿಶ್ವಕ್ ಸೇನ್ ಗೆ ಜೋಡಿಯಾಗಿ ನಿವೇತಾ ಪೇತುರಾಜ್ ನಟಿಸುತ್ತಿದ್ದಾರೆ. ಇದನ್ನೂ ಓದಿ:ಪ್ರೀ ವೆಡ್ಡಿಂಗ್ ಫೋಟೋಶೂಟ್ನಲ್ಲಿ ಮಿಂಚಿದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ- ಸುಹಾಸ್
ಧಮ್ಕಿ ರೋಮ್ಯಾಂಟಿಕ್ ಕಾಮಿಡಿ, ಆಕ್ಷನ್ ಥ್ರಿಲ್ಲರ್ ಕಂಟೆಂಟ್ ಒಳಗೊಂಡಿದ್ದು, ಸಂಪೂರ್ಣ ಮನರಂಜನೆ ಜೊತೆಗೆ ಪಕ್ಕ ಆಕ್ಷನ್ ಪ್ರೇಮಿಗಳಿಗೆ ಸಿನಿಮಾ ಥ್ರಿಲ್ ನೀಡಲಿದೆ. ಈಗಾಗಲೇ 95ರಷ್ಟು ಶೂಟಿಂಗ್ ಮುಗಿಸಿರುವ ಚಿತ್ರತಂಡ ಉಳಿದ ಭಾಗದ ಚಿತ್ರೀಕರಣವನ್ನೂ ಈ ವಾರದಲ್ಲಿ ಮುಗಿಸಲು ಯೋಜನೆ ಹಾಕಿಕೊಂಡಿದೆ. ಹೈದ್ರಾಬಾದ್ ಸಾರಥಿ ಸ್ಟುಡಿಯೋದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಸಲು ಅದ್ಧೂರಿ ಸೆಟ್ ಹಾಕಿದೆ. ಆದಷ್ಟು ಬೇಗ ಉಳಿದ ಶೂಟಿಂಗ್ ಮುಗಿಸಿ ಬೆಳಗಿನ ಹಬ್ಬ ದೀಪಾವಳಿಗೆ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಮುನ್ನುಡಿ ಬರೆಯಲಿದೆ.ರಾವ್ ರಮೇಶ್, ಹೈಪರ್ ಆದಿ, ರೋಹಿಣಿ ಮತ್ತು ಪೃಥ್ವಿರಾಜ್ ಸೇರಿದಂತೆ ಇತರ ತಾರಾಗಣ ಚಿತ್ರದಲ್ಲಿ. ದಿನೇಶ್ ಕೆ ಬಾಬು ಛಾಯಾಗ್ರಹಣ, ಲಿಯಾನ್ ಜೇಮ್ಸ್ ಸಂಗೀತ ಮತ್ತು ಅನ್ವರ್ ಅಲಿ ಸಂಕಲನ ಚಿತ್ರಕ್ಕಿದೆ..
Live Tv
[brid partner=56869869 player=32851 video=960834 autoplay=true]