Tag: no-confidence motion

  • 50 ರಿಂದ 100 ಕೋಟಿ ಕೊಟ್ಟು ಕರ್ನಾಟಕದಲ್ಲಿ ನಮ್ಮ ಶಾಸಕರ ಖರೀದಿಗೆ ಯತ್ನಿಸಿದ್ರಿ – ಲೋಕಸಭೆಯಲ್ಲಿ ಬಿಜೆಪಿ ವಿರುದ್ಧ ಖರ್ಗೆ ಕಿಡಿ

    50 ರಿಂದ 100 ಕೋಟಿ ಕೊಟ್ಟು ಕರ್ನಾಟಕದಲ್ಲಿ ನಮ್ಮ ಶಾಸಕರ ಖರೀದಿಗೆ ಯತ್ನಿಸಿದ್ರಿ – ಲೋಕಸಭೆಯಲ್ಲಿ ಬಿಜೆಪಿ ವಿರುದ್ಧ ಖರ್ಗೆ ಕಿಡಿ

    ನವದೆಹಲಿ: ಕರ್ನಾಟಕ ವಿಧಾನಸಭೆ ಬಳಿಕ ಬಹುಮತ ಸಾಬೀತು ಪಡಿಸಲು ಬಿಜೆಪಿಯವರು ಶಾಸಕರ ಖರೀದಿಗೆ ಮುಂದಾಗಿದ್ದರು ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

    ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ವೇಳೆ ಮಾತನಾಡಿದ ಅವರು, ಬಿಜೆಪಿ ನಾಯಕರು ದೂರವಾಣಿ ಕರೆ ಮಾಡಿ ಆಪರೇಷನ್ ಕಮಲಕ್ಕೆ ಮುಂದಾಗಿದ್ದರು. ನಮ್ಮ ಹತ್ತಿರ ಅವರು ನಡೆಸಿದ ಸಂಭಾಷಣೆಯ ಧ್ವನಿಯ ಮುದ್ರಣವಿದೆ ಎಂದು ದೂರಿದರು. ಆದರೆ ಈ ವೇಳೆ ಸ್ಪೀಕರ್ ಸುಮಿತ್ರಾ ಮಹಾಜನ್ ನಿಮ್ಮ ಸಮಯ ಮುಗಿದಿದೆ. ನೀವು ಹೊರಗೆ ಈ ಆರೋಪ ಮಾಡಿ, ಲೋಕಸಭೆಯಲ್ಲಿ ಆರೋಪ ಸಲ್ಲದು ಎಂದು ಸೂಚಿಸಿದ್ದರು. ಆದರೆ ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಹಿಂದಿನ ಸಾಲಿನಲ್ಲಿ ಕುಳಿತಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ, ನಮ್ಮ ಬಳಿ ಸೂಕ್ತ ದಾಖಲೆಗಳಿವೆ. ಹೀಗಾಗಿ ಆರೋಪ ಮಾಡುತ್ತಿದ್ದೇವೆ ಎಂದು ಗರಂ ಆದರು.

    ಕಾಂಗ್ರೆಸ್ ರಾಷ್ಟ್ರದ ಬಹು ದೊಡ್ಡ ಪಕ್ಷ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಉಳಿದ ಪಕ್ಷಗಳಿಗೆ 30 ನಿಮಿಷ ಕಾಲಾವಕಾಶ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೂ ಅಷ್ಟೇ ಸಮಯ ನಿಗಧಿಯಾಗಿದೆ. ಹೀಗಾಗಿ 130 ಕೋಟಿ ಜನರಿಗೆ ಬಿಜೆಪಿಯ ಭ್ರಷ್ಟಾಚಾರ ಸಾಬೀತು ಪಡಿಸಲು ಇಷ್ಟು ಸಮಯ ಸಾಲುವುದಿಲ್ಲ ಎಂದು ಹೇಳಿದರು.

    ತಮ್ಮ ಭಾಷಣದ ವೇಳೆ ಬಿಜೆಪಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದು, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದಂತೆ ಮಾಡಲು ಹಲವು ಕ್ರಮಗಳನ್ನು ಎದುರಿಸಿದೆ ಎಂದು ಆರೋಪಿಸಿದರು. ಅಲ್ಲದೇ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ಬಿಜೆಪಿ ಮರೆತಿದೆ ಎಂದು ತಮ್ಮ ಮಾತಿನ ಮೂಲಕ ತಿವಿದರು.

    ನಮ್ಮ ಆಡಳಿತ ಅವಧಿಯಲ್ಲಿ ರೈತರ ಸಮಸ್ಯೆಗಳನ್ನು ಬಗೆ ಹರಿಸಲು ಹಲವು ಯೋಜನೆಗಳನ್ನು ಜಾರಿ ಮಾಡಲಾಗಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ರೈತರ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮಾಣ ಹೆಚ್ಚಳವಾಗಿದೆ. ಆದರೆ ಅವರು ಅಂದಾನಿ, ಅಂಬಾನಿ ಬಗ್ಗೆ ಮಾತನಾಡುತ್ತಿದ್ದು, ರೈತರ ಪರ ಮಾತನಾಡಿಲ್ಲ. ಕಾಂಗ್ರೆಸ್ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಿಜೆಪಿ ಅವರು ಅಂಗೀಕರಿಸಿಲ್ಲ ಎಂದು ಆರೋಪಿಸಿದರು.

  • ಅವಿಶ್ವಾಸ ಮಂಡನೆ ವಿರುದ್ಧ ಶಿವಸೇನೆ ಮತ – ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬೆಂಬಲ

    ಅವಿಶ್ವಾಸ ಮಂಡನೆ ವಿರುದ್ಧ ಶಿವಸೇನೆ ಮತ – ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬೆಂಬಲ

    ನವದೆಹಲಿ: ಆಂಧ್ರಪ್ರದೇಶದ ತೆಲುಗುದೇಶಂ ಪಕ್ಷ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಂಡಸಲಿಚ್ಚಿಸಿರುವ ಅವಿಶ್ವಾಸ ಮಂಡನೆ ವಿರುದ್ಧ ಮತ ನೀಡಿ, ಬಿಜೆಪಿಗೆ ಬೆಂಬಲ ನೀಡಲು ಶಿವಸೇನೆ ಮುಂದಾಗಿದೆ.

    ಶಿವಸೇನೆ ಪಕ್ಷ ತನ್ನ ಸಂಸದರಿಗೆ ಈ ಕುರಿತು ವಿಪ್ ಜಾರಿ ಮಾಡಿದ್ದು, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಲು ಸೂಚಿಸಿದೆ.

    ಇದಕ್ಕೂ ಮುನ್ನ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರಿಗೆ ಕರೆ ಮಾಡಿ ಬೆಂಬಲ ನೀಡಲು ಮನವಿ ಮಾಡಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿತ್ತು, ಇದರ ಬೆನ್ನಲ್ಲೇ ಸದ್ಯ ಶಿವಸೇನೆ ವಿಪ್ ಜಾರಿ ಮಾಡಿದೆ.

    ಶಿವಸೇನೆ ಪಕ್ಷದ ನಿರ್ಣಯಕ್ಕೂ ಮುನ್ನ ತಮಿಳುನಾಡು ಸಿಎಂ ಕೆ ಪಳಣಿಸ್ವಾಮಿ ಅವರು ಎಐಎಂಡಿಕೆ ಪಕ್ಷ ಅವಿಶ್ವಾಸ ನಿರ್ಣಯ ವಿರುದ್ಧ ಮತ ಚಲಾಯಿಸುವುದಾಗಿ ಪರೋಕ್ಷವಾಗಿ ತಿಳಿಸಿದ್ದರು.

    ಅಂದಹಾಗೇ ತೆಲುಗುದೇಶಂ ಪಕ್ಷವೂ ಆಂಧ್ರ ಪ್ರದೇಶದ ವಿಶೇಷ ಸ್ಥಾನಮಾನ ಆಗ್ರಹಿಸಿ ಸಂಸತ್ ನಲ್ಲಿ ಕೇಂದ್ರ ಸರ್ಕಾರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕಲ್ಪಿಸಿವಂತೆ ಮನವಿ ಮಾಡಿತ್ತು. ಇದರಂತೆ ಮನ್ಸೂನ್ ಅಧಿವೇಶನದ ಮೊದಲ ದಿನವಾದ ಬುಧವಾರದಂದು ಸ್ಪೀಕರ್ ಸುಮಿತ್ರಾ ಮಹಾಜನ್ ಟಿಡಿಪಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಶುಕ್ರವಾರ ಅವಕಾಶ ನೀಡಿದ್ದರು.

    ಈ ಹಿಂದೆ ಹಲವು ಬಾರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ 2019ರ ಲೋಕಸಭಾ ಚುನಾವಣೆಯ ವೇಳೆ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದರು. ಅಲ್ಲದೇ ಮಹಾರಾಷ್ಟ್ರ ಚುನಾವಣೆಯ ವೇಳೆಯೂ ಏಕಾಂಗಿಯಾಗಿ ಸ್ಪರ್ಧೆ ಮಾಡುವ ನಿರ್ಣಯವನ್ನು ಶಿವಸೇನೆ ಪಕ್ಷ ಘೋಷಿಸಿತ್ತು.