Tag: no more

  • ಖ್ಯಾತ ವೈದ್ಯ,  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ

    ಖ್ಯಾತ ವೈದ್ಯ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ

    ಹಾಸನ: ಖ್ಯಾತ ಹಾಗೂ ಅಪರೂಪದ ವೈದ್ಯರು, ಸಮಾಜ ಸೇವಕರೂ ಆಗಿದ್ದ ಹಿರಿಯ ವೈದ್ಯ ಡಾ. ಗುರುರಾಜ ಹೆಬ್ಬಾರ್ (72) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಅಭಿಮಾನಿ ಬಳಗ ಕಳೆದ ಆ.19 ರಂದು ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಹೆಬ್ಬಾರರು ಎಲ್ಲರನ್ನೂ ಅಗಲಿದ್ದಾರೆ.

    ಮೃತರ ನಿಧನಕ್ಕೆ ವೈದ್ಯರ ಸಂಘ ಸೇರಿ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. 1959 ರ ಜ.1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲೂಕಿನ ಸೋಮೇಶ್ವರದಲ್ಲಿ ಜನಿಸಿದ ಇವರು, ನಂತರ ಹಾಸನಕ್ಕೆ ಬಂದು ಕಟ್ಟಾಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮುಗಿಸಿದ್ದರು. ಹಾಸನದ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ, ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿ, ಆಲೂರು ತಾಲೂಕು ಪಾಳ್ಯದಲ್ಲಿ ಖಾಸಗಿ ಕ್ಲಿನಿಕ್ ತೆರೆದರು. ಬಳಿಕ ಬೈಚನಹಳ್ಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸಲ್ಲಿಸಿದ ಶ್ರೀಯುತರು, ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ, ಹಾಸನದಲ್ಲಿ ಖಾಸಗಿ ಕ್ಲಿನಿಕ್ ತೆರೆದು, ತರುವಾಯ ಎಂ.ಜಿ.ರಸ್ತೆಯಲ್ಲಿ ಶ್ರೀ ರಾಮಕೃಷ್ಣ ನರ್ಸಿಂಗ್ ಹೋಂ ಸ್ಥಾಪಿಸಿದರು. ಇದನ್ನೂ ಓದಿ: ಬ್ರಹ್ಮಪುತ್ರ ನದಿ ದಂಡೆ ಬಳಿಯ 330 ಎಕರೆಯಲ್ಲಿರುವ ಅಕ್ರಮ ಮನೆ ತೆರವು!

    ಹೆಬ್ಬಾರ್ ಅವರು ಕೇವಲ ವೈದ್ಯರಷ್ಟೇ ಅಲ್ಲ, ಸಮಾಜ ಸೇವಕರಾಗಿ ತಮ್ಮ ತನು, ಮನ, ಧನ ವ್ಯಯಿಸಿದರು. ಬಡವರ ಬಂಧುವಾಗಿ, ಬಡವರಿಗಾಗಿಯೇ ಹಾಸನದಲ್ಲಿ ಮೊದಲಿಗೆ ಸಹಕಾರಿ ತತ್ವದಡಿ ಜನಕಲ್ಯಾಣ ರೀಸರ್ಚ್ ಅಂಡ್ ಚಾರಿಟಬಲ್ ಟ್ರಸ್ಟ್ ನಿಂದ ಸಿ.ಟಿ. ಸ್ಕ್ಯಾನಿಂಗ್ ಸೆಂಟರ್ ತೆರೆದರು. ಸಂಜೀವಿನಿ ಸಹಕಾರಿ ಆಸ್ಪತ್ರೆ, ಕಾಮಧೇನು ಸಹಕಾರಿ ವಿದ್ಯಾಶ್ರಮ (ವೃದ್ಧಾಶ್ರಮ), ರೈತ ಬಂಧು ಸಹಕಾರಿ ಸಂಸ್ಥೆ, ಪರಿಪೂರ್ಣ ಚಾರಿಟಬಲ್ ಟ್ರಸ್ಟ್‍ನಿಂದ ಪತ್ರಿಕೋದ್ಯಮ ಕ್ಷೇತ್ರಕ್ಕೂ ಪದಾರ್ಪಣೆ ಮಾಡಿದ್ದರು.

    ಅಷ್ಟೇ ಅಲ್ಲದೆ ನಂದಗೋಕುಲ ಶಿಶುಕೇಂದ್ರ, ಗೋ ಸಂರಕ್ಷಣೆ, ಪ್ರಾಣಿಹಿಂಸಾ ನಿವಾರಣಾ ಸಂಘ, ಹಾಸನಾಂಬ ಧರ್ಮಛತ್ರ ಹೀಗೆ ನಾನಾ ಸಂಸ್ಥೆಗಳ ಹುಟ್ಟಿಗೆ ಕಾರಣರಾದರು.ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆಗಿರುವ ಶ್ರೀಯುತರು, ಬಡವರು, ದೀನ ದಲಿತರು, ಅಸಹಾಯಕರನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ಬಡವರಿಗೆ ಉಚಿತವಾಗಿ ವೈದ್ಯಕೀಯ ಸೇವೆ ನೀಡಿದ್ದರು.

    ಅಸಹಾಯಕರಿಗೆ ಆರ್ಥಿಕ ನೆರವನ್ನೂ ಒದಗಿಸಿದ್ದರು. ಕೊಡುಗೈ ದಾನಿಯಾಗಿ ಕೈ ನೀಡಿ ನೀಡಿದರೇ ಹೊರತು, ಎಂದಿಗೂ ಯಾರ ಮುಂದೆಯು ಕೈ ಚಾಚಿದವರಲ್ಲ. ಸದಾ ಹಸನ್ಮುಖಿಯಾಗಿ ಎಲ್ಲರನ್ನೂ ಪ್ರೀತಿಸುವ, ಎಲ್ಲರನ್ನೂ ಸಮಾನವಾಗಿ ಕಾಣುವ ಜಾತ್ಯಾತೀತ ವ್ಯಕ್ತಿತ್ವ ಇವರದಾಗಿತ್ತು. ಅಜಾತ ಶತ್ರು ಎಂದೇ ಖ್ಯಾತನಾಮರಾಗಿದ್ದ ಡಾ.ಗುರುರಾಜ್ ಹೆಬ್ಬಾರರು, ಶಿಸ್ತುಬದ್ಧ ಜೀವನ, ಭ್ರಷ್ಟಾಚಾರದ ಕಡುವೈರಿಯಾಗಿದ್ದರು. ಇಂಥ ಅಪರೂಪದ ವ್ಯಕ್ತಿತ್ವದ ವೈದ್ಯರು ಇನ್ನಿಲ್ಲವಾಗಿರುವುದು ಅಪಾರ ಮಂದಿಗೆ ಅತೀವ ನೋವು ತರಿಸಿದೆ.

    ಜಿಲ್ಲೆಯ ಹಿರಿಯ ವೈದ್ಯರು, ಸಮಾಜ ಸೇವಕರಾದ ಡಾ. ಗುರುರಾಜ್ ಹೆಬ್ಬಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ನನ್ನ ಆತ್ಮೀಯ ಒಡನಾಡಿಯೂ ಆಗಿದ್ದ ಹೆಬ್ಬಾರರ ನಿಧನ ನನಗೆ ವೈಯಕ್ತಿಕವಾಗಿ ಅತೀವ ನೋವು ತಂದಿದೆ. ಶ್ರೀಯುತರು ವೈದ್ಯರಾಗಿ ಅಲ್ಲದೆ, ಸಮಾಜ ಸೇವಕರಾಗಿಯೂ ಅಪಾರ ಜನ ಮನ್ನಣೆ ಗಳಿಸಿದ್ದರು ಎಂದು ಸ್ಮರಿಸಿದ್ದಾರೆ. ಡಾ.ಮುನಿವೆಂಕಟೇಗೌಡರು, ಡಾ. ಗುರುರಾಜ್ ಹೆಬ್ಬಾರ್ ಅವರು ನನ್ನ ತವರು ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಬಡವರಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ಒದಗಿಸಲು ಸಂಜೀವಿನಿ ಆಸ್ಪತ್ರೆ ಸ್ಥಾಪಿಸಿ ಸಾಕಷ್ಟು ಶ್ರಮಿಸಿದ್ದರು. ಅವರ ಸೇವೆ ಸದಾ ಸ್ಮರಣೀಯ ಎಂದು ಗುಣಗಾನ ಮಾಡಿದ್ದಾರೆ.

    ಬೇರೆ ಜಿಲ್ಲೆಯಲ್ಲಿ ಹುಟ್ಟಿ ನಮ್ಮೂರಿಗೆ ಬಂದು ಬಡವರಿಗೆ ಶ್ರೀಯುತರು ಸ್ಪಂದಿಸಿದ ರೀತಿಯನ್ನು ಎಂದೂ ಮರೆಯಲಾಗದು. ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿ, ಖಾಸಗಿಯಾಗಿಯೂ ಜನಸೇವೆ ಮಾಡಬಹುದು ಎಂಬುದನ್ನು ಹೆಬ್ಬಾರರು ತೋರಿಸಿಕೊಟ್ಟಿದ್ದರು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲೇ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ, ಕೃಷಿ ಸಾಧಕಿ ಸುಮಂಗಲಮ್ಮ ಇನ್ನಿಲ್ಲ

    ರಾಜ್ಯದಲ್ಲೇ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ, ಕೃಷಿ ಸಾಧಕಿ ಸುಮಂಗಲಮ್ಮ ಇನ್ನಿಲ್ಲ

    ಚಿತ್ರದುರ್ಗ: ಮಹಿಳೆ ಮನಸು ಮಾಡಿದರೆ ಏನೆಲ್ಲ ಸಾಧಿಸಬಹುದು ಎನ್ನುವುದಕ್ಕೆ ಉದಾಹರಣೆಯಾಗಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವ ಎನಿಸಿದ್ದ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಗ್ರಾಮದ ಕೃಷಿಕ ವೀರಭದ್ರಪ್ಪನವರ ಪತ್ನಿ, ರಾಜ್ಯದಲ್ಲಿ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸುಮಂಗಲಮ್ಮ ವೀರಭದ್ರಪ್ಪ(69) ವಿಧಿವಶರಾಗಿದ್ದಾರೆ.

    ಹೃದಯಾಘಾತದಿಂದ ಇಂದು ಬೆಳಗಿನ ಜಾವ 3.30ಕ್ಕೆ ಸುಮಂಗಲಮ್ಮ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಅವರ ಕರ್ಮ ಭೂಮಿಯಲ್ಲೆ ಇಂದು ನೆರವೇರಿದ್ದು, ಮೃತರ ನಿಧನಕ್ಕೆ ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಕೃಷಿಕ ಬಂಧುಗಳು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ರೈತ ಮಹಿಳೆ ಸುಮಂಗಲಮ್ಮಗೆ ರಾಜ್ಯೋತ್ಸವ ಪ್ರಶಸ್ತಿ- ಸಚಿವ ರಾಮುಲು ಅಭಿನಂದನೆ

    ಮಕ್ಕಳಿಗೆ ಶಿಕ್ಷಣ ಕೊಡಿಸಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವಂತೆ ಬೆಳೆಸಿದ್ದಲ್ಲದೆ, ತಾವು ನಂಬಿದ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವರಿಯದೆ ದುಡಿಮೆ ಮಾಡುತ್ತಿದ್ದ ಸುಮಂಗಲಮ್ಮ, ಟ್ರ್ಯಾಕ್ಟರ್ ಡ್ರೈವಿಂಗ್ ಲೈಸೆನ್ಸ್ ಪಡೆದ ರಾಜ್ಯದ ಮೊದಲ ಮಹಿಳೆಯಾಗಿ, ಜಮೀನಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದರು.

    ದಂಪತಿಯ ಅವಿರತ, ದಣಿವರಿಯದ ದುಡಿಮೆಯಿಂದ ಅವರ ಬರಡಾಗಿದ್ದ ಕೃಷಿ ಭೂಮಿ ಇಂದು ನಂದನವನವಾಗಿದೆ. ಅನೇಕ ಕೃಷಿಕರು, ವಿಶ್ವವಿದ್ಯಾಲಯದವರು ಇವರ ಕಾರ್ಯಕ್ಷೇತ್ರಕ್ಕೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುವ ಮಾಹಿತಿ ಕೇಂದ್ರ ಎನಿಸಿದೆ. ಇವರ ಕೃಷಿ ಕ್ಷೇತ್ರದಲ್ಲಿ ಸುಮಾರು 50 ಜನ ಕೆಲಸದವರು ಇರುತ್ತಾರೆ, ಅವರಿಗೆಲ್ಲ ನಿತ್ಯ ದಾಸೋಹದ ಜೊತೆಗೆ ಭೇಟಿ ನೀಡುವ ಎಲ್ಲರಿಗೂ ಊಟ, ಉಪಚಾರವನ್ನು ನೀಡಲಾಗುತ್ತದೆ.

    ಕೇವಲ ಕೃಷಿಯಷ್ಟೇ ಅಲ್ಲದೆ ಸಾಮಾಜಿಕ ಸಂಘಟನೆಗಳಲ್ಲಿ ಭಾಗಿಯಾಗಿ ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಮಾರ್ಗದರ್ಶನ ಮಾಡುತ್ತಿದ್ದ ಈ ದಿಟ್ಟ ಮಹಿಳೆ, ಸಂಘ ಪರಿವಾರದಲ್ಲಿ ಭಾರತೀಯ ಕಿಸಾನ್ ಸಂಘದ ಅಖಿಲ ಭಾರತ ತಂಡದಲ್ಲಿಯೂ ಸಕ್ರಿಯ ಸದಸ್ಯರಾಗಿದ್ದರು. ಶ್ರೀಮಂತ ಮನೆತನದವರಾಗಿದ್ದರೂ ಉಡುಗೆ, ತೊಡುಗೆ, ಸಮಾಜ ಕಾರ್ಯದಲ್ಲಿ ಮಾತ್ರ ಸಾಮಾನ್ಯರಲ್ಲಿ ಸಾಮಾನ್ಯರಂತೆಯೇ ಜೀವನ ಸಾಗಿಸಿದವರು. ಇವರ ಕಾರ್ಯ ಗಮನಿಸಿದ ರಾಜ್ಯ ಸರ್ಕಾರ, ಕೃಷಿ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ 2020-21ನೇ ಸಾಲಿನ ರಾಜ್ಯೋತ್ಸವವ ಪ್ರಶಸ್ತಿ ನೀಡಿ ಗೌರವಿಸಿತ್ತು.

  • ಗಾಯಕ ವಿಜಯ್ ಪ್ರಕಾಶ್‍ಗೆ ಪಿತೃ ವಿಯೋಗ

    ಗಾಯಕ ವಿಜಯ್ ಪ್ರಕಾಶ್‍ಗೆ ಪಿತೃ ವಿಯೋಗ

    ಮೈಸೂರು: ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರ ತಂದೆ ಇಂದು ವಿಧಿವಶರಾಗಿದ್ದಾರೆ.

    ವಿದ್ವಾನ್ ಎಲ್ ರಾಮಶೇಷ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಇಂದು ಬೆಳಗ್ಗಿನ ಜಾವ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ವಿದ್ವಾನ್ ಅವರು ಮೈಸೂರಿನ ಬೋಗಾದಿ 2ನೇ ಹಂತದಲ್ಲಿ ವಾಸವಿದ್ದರು. ವಿದ್ವಾನ್ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸದ್ಯ ವಿಜಯ್ ಪ್ರಕಾಶ್ ಅವರು ಅಮೆರಿಕ ಪ್ರವಾಸದಲ್ಲಿದ್ದು, ಈ ವಿಷಯ ತಿಳಿದು ಹಿಂತಿರುಗುತ್ತಿದ್ದಾರೆ.

    ಮಂಗಳವಾರ ವಿದ್ವಾನ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.

  • ನಮ್ಮೂರ ಮಂದಾರ ಹೂವೆ, ಅಮೃತ ವರ್ಷಿಣಿ ಚಿತ್ರದ ನಿರ್ಮಾಪಕಿ ಜಯಶ್ರೀ ನಿಧನ

    ನಮ್ಮೂರ ಮಂದಾರ ಹೂವೆ, ಅಮೃತ ವರ್ಷಿಣಿ ಚಿತ್ರದ ನಿರ್ಮಾಪಕಿ ಜಯಶ್ರೀ ನಿಧನ

    ಹೈದರಾಬಾದ್: ಸ್ಯಾಂಡಲ್‍ವುಡ್ ಖ್ಯಾತ ನಿರ್ಮಾಪಕಿ ಜಯಶ್ರೀ ದೇವಿ(60) ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಹೈದರಾಬಾದಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಜಯಶ್ರೀ ಅವರು ಬೆಳಗ್ಗೆ ನಿಧನರಾಗಿದ್ದಾರೆ. ಜಯಶ್ರೀ ಅವರ ಮೃತದೇಹವನ್ನು ಬೆಂಗಳೂರಿಗೆ ತಂದು ಇಲ್ಲಿಯೇ ಅವರ ಅಂತ್ಯ ಸಂಸ್ಕಾರ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ.

    ಜಯಶ್ರೀ ಅವರು ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಕುಮಾರ್ ಗೋವಿಂದ ಅವರು ನಟಿಸಿದ ‘ಕೋಣ ಈದೈತೆ’ ಚಿತ್ರವನ್ನು ನಿರ್ದೇಶನ ಹಾಗೂ ನಿರ್ಮಿಸುವುದರ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದರು.

    ಜಯಶ್ರೀ ಅವರು ಭವಾನಿ, ನಮ್ಮೂರ ಮಂದಾರ ಹೂವೆ, ಅಮೃತವರ್ಷಿಣಿ, ಶ್ರೀ ಮಂಜುನಾಥ, ನಿಶ್ಯಬ್ಧ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇತ್ತೀಚೆಗೆ ತೆರೆ ಕಂಡ ರಿಯಲ್‍ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ `ಮುಕುಂದ -ಮುರಾರಿ’ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿರ್ದೇಶಕ ಕಲಾ ಸಾಮ್ರಾಟ್ ಎಸ್. ನಾರಾಯಣ್ ತಾಯಿ ನಿಧನ

    ನಿರ್ದೇಶಕ ಕಲಾ ಸಾಮ್ರಾಟ್ ಎಸ್. ನಾರಾಯಣ್ ತಾಯಿ ನಿಧನ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ, ನಿರ್ದೇಶಕ ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರ ತಾಯಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

    ಎಸ್. ನಾರಾಯಣ್ ಅವರ ತಾಯಿ ಕಮಲಮ್ಮ(84) ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ 25 ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.

    ಕಮಲಮ್ಮ ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ ನಿಧನರಾಗಿದ್ದಾರೆ. ಕಮಲಮ್ಮ ಅವರ ಅಂತ್ಯಕ್ರಿಯೆಯನ್ನು ಭದ್ರಾವತಿಯ ಹೊಳೆಹೊನ್ನೂರು ರಸ್ತೆಯಲ್ಲಿರುವ ಚಿತಾಗಾರದಲ್ಲಿ ಸಂಜೆ 3ರ ನಂತರ ನೆರವೇರಿಸಲಾಗುತ್ತದೆ ಎಂಬುದು ತಿಳಿದು ಬಂದಿದೆ. ಕಮಲಮ್ಮ ಅವರು ದಿವಂಗತ ಎಸ್. ವರದರಾಜ್ ಅವರ ಪತ್ನಿಯಾಗಿದ್ದು, ಇವರಿಗೆ ಮೂರು ಜನ ಗಂಡು ಮಕ್ಕಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಷ್ಟ್ರದ ಜನಪ್ರಿಯ ನಾಯಕರೊಬ್ರು ಅಸ್ತಂಗತವಾಗ್ತಿದ್ದಾರೆ- ಎಸ್‍.ಎಂ ಕೃಷ್ಣ ಸಂತಾಪ

    ರಾಷ್ಟ್ರದ ಜನಪ್ರಿಯ ನಾಯಕರೊಬ್ರು ಅಸ್ತಂಗತವಾಗ್ತಿದ್ದಾರೆ- ಎಸ್‍.ಎಂ ಕೃಷ್ಣ ಸಂತಾಪ

    ಬೆಂಗಳೂರು: ನನ್ನ ಸ್ನೇಹಿತರಾದಂತಹ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಹಠಾತ್ ನಿಧನ ನನಗೆ ಹಾಗೂ ಅವರ ಸಹಸ್ರಾರು ಸ್ನೇಹಿತರಿಗೆ ಬಹಳ ದೊಡ್ಡ ಆಘಾತವನ್ನುಂಟು ಮಾಡಿದೆ. ಈ ಮೂಲಕ ಇಂದು ರಾಷ್ಟ್ರದ ಜನಪ್ರಿಯ ನಾಯಕರೊಬ್ಬರು ಅಸ್ತಂಗತವಾಗ್ತಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಮಂತ್ರಿ ಎಸ್. ಎಂ ಕೃಷ್ಣ ಸಂತಾಪ ಸೂಚಿಸಿದ್ದಾರೆ.

    ಅನಂತ್ ಕುಮಾರ್ ಅವರ ಬೆಂಗಳೂರು ನಿವಾಸದಲ್ಲಿ ಸಚಿವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಕರ್ನಾಟಕದ ಯಾವುದೇ ಜ್ವಲಂತ ಸಮಸ್ಯೆ ಎದುರು ಬಂದಾಗ ನನ್ನ ಕಣ್ಣಿಗೆ ದೆಹಲಿ ಮಟ್ಟದಲ್ಲಿ ಕಾಣುತ್ತಿದ್ದ ಮೊದಲಿಗ ಅಂದ್ರೆ ಅದು ಅನಂತ್ ಕುಮಾರ್ ಅವರಾಗಿದ್ದರು. ನದಿ ನೀರು, ಗಡಿ ಪ್ರಶ್ನೆ ಇರಬಹುದು ಅಥವಾ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಈ ಎಲ್ಲಾ ವಿಚಾರಗಳಲ್ಲಿಯೂ ನಾನು ಮತ್ತು ಅವರು ಬೇರೆ ಬೇರೆ ಪಕ್ಷದಲ್ಲಿದ್ದರೂ ಕೂಡ ನನ್ನ ಭುಜಕ್ಕೆ ಭುಜ ಕೊಟ್ಟು ಕರ್ನಾಟಕದ ಬೆಳವಣಿಗೆಗೆ ಸರ್ವತೋಮುಖವಾಗಿ ಸಹಕಾರ ಕೊಟ್ಟು ಸಹಾಯ ಮಾಡಿದ ಅವರನ್ನು ಇಂದು ನಾನು ಅತ್ಯಂತ ಬೇಸರದಿಂದ ಸ್ಮರಿಸಿಕೊಳ್ಳುತ್ತಿದ್ದೇನೆ ಅಂತ ಹೇಳಿದ್ರು.

    ಅನಂತ್ ಕುಮಾರ್ ಅವರು ವಿಶೇಷ ಗುಣವೆಂದರೆ, ಎಲ್ಲರೂ ನನ್ನವರೇ ಎಂಬ ಅತ್ಯಂತ ದೊಡ್ಡ ಹೃದಯ ವೈಶಾಲ್ಯದಿಂದ ಜನರನ್ನು ನೋಡುತ್ತಿದ್ದರು. ಇದು ಕೇವಲ ರಾಜ್ಯ ಮಟ್ಟದಲ್ಲಿ ಅಲ್ಲ. ರಾಷ್ಟ್ರಮಟ್ಟದಲ್ಲೂ ಅವರ ಗುಣ ಇದೇ ಆಗಿತ್ತು. ನಾನು ವಿದೇಶಾಂಗ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರನ್ನು ವಿರೋಧ ಪಕ್ಷದಲ್ಲಿ ನೋಡುತ್ತಿದ್ದೆ. ಆ ವೇಳೆ ಅನಂತ್ ಅವರು ಇಡೀ ದೇಶದಲ್ಲಿ ತಮ್ಮ ವ್ಯಕ್ತಿತ್ವದ ಛಾಯೆಯ ಛಾಪು ಮೂಡಿಸಿದ್ರು. ಆದ್ರೆ ವಿಧಿ ತನ್ನ ಕೈವಾಡ ಮಾಡುತ್ತಲೇ ಇರುತ್ತದೆ. ಇಂದು ಅತ್ಯಂತ ಜನಪ್ರಿಯ ನಾಯಕನೊಬ್ಬ ರಾಷ್ಟ್ರದಿಂದ ಅಸ್ತಂಗತವಾಗುತ್ತಿದ್ದಾರೆ. ಅವರಿಗೆ ನನ್ನ ಗೌರವಪೂರ್ಣ ನಮನ ಸಲ್ಲಿಸಲು ಅವರ ಮನೆಗೆ ಬಂದಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಕೃಷ್ಣ ಅವರು ಸಂತಾಪ ಸೂಚಿಸಿದ್ರು.

    https://www.youtube.com/watch?v=48qGsizNGvg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನಂತ್ ಕುಮಾರ್ ಸಾವಿನಲ್ಲೂ ವಿಕೃತಿ ಮೆರೆದ ಮುಸ್ಲಿಂ ಪೇಜ್

    ಅನಂತ್ ಕುಮಾರ್ ಸಾವಿನಲ್ಲೂ ವಿಕೃತಿ ಮೆರೆದ ಮುಸ್ಲಿಂ ಪೇಜ್

    ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ದೇಶ, ರಾಜ್ಯದ ರಾಜಕಾರಣಿಗಳು ಮತ್ತು ಇತರರು ಕಂಬನಿ ಮಿಡಿಯುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಪೇಜ್ ಒಂದು ವಿಕೃತಿ ಮೆರೆದಿದೆ.

    ಹೌದು. ಮಂಗಳೂರು ಮುಸ್ಲಿಂ ಪೇಜ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಅನಂತ್ ಕುಮಾರ್ ನಿಧನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಪೇಜ್ ನಲ್ಲಿ `ಜಾತಿ ರಾಜಕಾರಣ ಕುತಂತ್ರಿ ಬ್ರಾಹ್ಮಣ ಅನಂತ ಕುಮಾರ್ ಮೇಲೆ ಹೋಗಿಯೂ ಜಾತಿ ವಿಷ ಬೀಜ ಬಿತ್ತಬೇಡ’ ಎಂದು ಬರೆದು ಪೋಸ್ಟ್ ಮಾಡಲಾಗಿದೆ.

    ಅಲ್ಲದೇ ಅನಂತ್ ಕುಮಾರ್ ಅವರ ಫೋಟೋ ಹಾಕಿ ಅದರ ಮೇಲೆ `ಜಾತಿ ಜಾತಿ ರಾಮ ರಾಮ ಅನ್ನುತ್ತಲೇ ಹೊಗೆ ಹಾಕಿಕೊಂಡ ಕೋಮುವಾದಿ ಅನಂತ್ ಕುಮಾರ್ ದೇಶ ಹಾಳು ಮಾಡಲು ಇನ್ನೊಮ್ಮೆ ಹುಟ್ಟಿ ಬರಬೇಡ’ ಎಂದು ಬರೆದುಕೊಳ್ಳುವ ಮೂಲಕ ತಮ್ಮ ವಿಕೃತ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ.

    ಪೇಜ್ ನಲ್ಲಿ ಪೋಸ್ಟ್ ಹಾಕುತ್ತಿದ್ದಂತೆಯೇ ಸಾವಿನಲ್ಲೂ ವಿಕೃತಿ ಮೆರೆದ ಮನಸ್ಥಿತಿಗಳ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ ಪೇಜ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತ್ ಕುಮಾರ್ (59) ಅವರು ಇಂದು ನಸುಕಿನ ಜಾವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸದ್ಯ ಅನಂತ ಕುಮಾರ್ ಅವರ ಮೃತದೇಹವನ್ನು ಸಚಿವರ ಬೆಂಗಳೂರು ನಿವಾಸದಲ್ಲಿ ಇಡಲಾಗಿದ್ದು, ಸಾರ್ವಜನಿಕರು ಮೃತರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

    ಮಂಗಳವಾರ ನಗರದ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಯಲಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

    https://www.youtube.com/watch?v=uK_SiBW5Ly0

    https://www.youtube.com/watch?v=Xe5uJiq9Y18

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ನಿಧನ

    ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ನಿಧನ

    ಬಾಗಲಕೋಟೆ: ಹುಟ್ಟು ಹೋರಾಟಗಾರ, ಅತ್ಯುತ್ತಮ ವಾಗ್ಮಿ ಹಾಗೂ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ(85) ಇಂದು ಮುಂಜಾನೆ ನಿಧನರಾಗಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ಬಾಬುರೆಡ್ಡಿ ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿಯೇ ವಿಧಿವಶರಾಗಿದ್ದಾರೆ.

    1985 ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದ ಬಾಬುರೆಡ್ಡಿ ತುಂಗಳ ಅವರು ಕುರುಕ್ಷೇತ್ರ ವಾರಪತ್ರಿಕೆ ಸಂಪಾದಕರೂ ಆಗಿದ್ದರು. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಸ್ವಗ್ರಾಮ ಬಿದರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.

    ಬಾಬುರೆಡ್ಡಿ ತುಂಗಳ ಅವರು ಹುಟ್ಟು ಹೋರಾಟಗಾರರಾಗಿದ್ದರು. ಅಲ್ಲದೇ ಅತ್ಯುತ್ತಮ ವಾಗ್ಮಿ ಕೂಡ ಆಗಿದ್ದರು. ಬಾಬುರೆಡ್ಡಿ ಅವರ ಭಾಷಣ ಆಲಿಸಲೆಂದು ಸಾಕಷ್ಟು ಜನರು ಬರುತ್ತಿದ್ದರು. ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಇರುವ ಶ್ರಮಬಿಂದು ಸಾಗರ ಬ್ಯಾರೇಜನ್ನು ದಿವಂಗತ ಶಾಸಕ ಸಿದ್ದು ನ್ಯಾಮಗೌಡರ ನೇತೃತ್ವದಲ್ಲಿ ನಿರ್ಮಾಣ ಮಾಡಲಾಗಿತ್ತು. ಬಾಬುರೆಡ್ಡಿ ತುಂಗಳ ಅವರು ಈ ಬ್ಯಾರೇಜ್ ನಿರ್ಮಾಣದ ಹೊಣೆ ಹೊತ್ತಿದ್ದ ಕೃಷ್ಣಾ ತೀರದ ರೈತ ಸಂಘದ ಮೊದಲ ಅಧ್ಯಕ್ಷರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಂಚಿ ಜಗದ್ಗುರು ಶಂಕರಾಚಾರ್ಯ ಶ್ರೀ ಜಯೇಂದ್ರ ಸರಸ್ವತಿ ವಿಧಿವಶ

    ಕಂಚಿ ಜಗದ್ಗುರು ಶಂಕರಾಚಾರ್ಯ ಶ್ರೀ ಜಯೇಂದ್ರ ಸರಸ್ವತಿ ವಿಧಿವಶ

    ಚೆನ್ನೈ: ಕಂಚಿ ಪೀಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ತಮಿಳುನಾಡಿನ ಕಂಚೀಪುರಂನಲ್ಲಿ ನಿಧನ ಹೊಂದಿದ್ದಾರೆ.

    82 ವರ್ಷದ ಕಂಚಿಶ್ರೀಯವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವರ್ಷದಿಂದ ಆವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಸ್ವಾಮೀಜಿಯವರು ಈ ಹಿಂದೆ ಅಂದ್ರೆ ಜನವರಿ ತಿಂಗಳಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಕೂಡ ಆಗಿದ್ದರು. ಆ ಬಳಿಕ ಅವರ ಆರೋಗ್ಯ ಹದಗೆಡುತ್ತಾ ಬಂದಿತ್ತು.

    ಶಂಕರಾಚಾರ್ಯರು 8ನೇ ಶತಮಾನದಲ್ಲಿ ಸ್ಥಾಪಿಸಿದ ಪೀಠಗಳಲ್ಲಿ ಕಂಚಿ ಪೀಠ ಕೂಡಾ ಒಂದು. 1994ರಲ್ಲಿ ಚಂದ್ರಶೇಖರ ಸರಸ್ವತಿ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ, ಮಠದ 69ನೇ ಪೀಠಾಧಿಪತಿಯಾಗಿ ಜಯೇಂದ್ರ ಸರಸ್ವತಿ ಸ್ವಾಮೀಜಿ ಅಧಿಕಾರ ಸ್ವೀಕರಿಸಿದ್ದು, ದೇಶಾದ್ಯಂತ ಅಸಂಖ್ಯಾತ ಭಕ್ತರನ್ನು ಹೊಂದಿದ್ದರು.

    ಕಂಚಿ ವರದರಾಜ ಪೆರುಮಾಳ್ ದೇವಸ್ಥಾನದ ಮ್ಯಾನೇಜರ್ ಕೊಲೆ ಪ್ರಕರಣದಲ್ಲಿ 2004ರಲ್ಲಿ ಸ್ವಾಮೀಜಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ 2013ರಲ್ಲಿ ಸ್ವಾಮೀಜಿ ಹಾಗೂ ಇತರೆ 22 ಜನರ ಮೇಲಿದ್ದ ಆರೋಪವನ್ನ ತೆರವುಗೊಳಿಸಲಾಗಿತ್ತು.

    ಸ್ವಾಮೀಜಿ ನಿಧನಕ್ಕೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.