Tag: Non covid

  • ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ನಾನ್ ಕೋವಿಡ್ ರೋಗಿಗಳ ಪರದಾಟ

    ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ನಾನ್ ಕೋವಿಡ್ ರೋಗಿಗಳ ಪರದಾಟ

    ದಾವಣಗೆರೆ: ಕೊರೊನಾ ರೋಗಿಗಳಿಗೆ ಅಷ್ಟೇ ಅಲ್ಲ ಈಗ ನಾನ್ ಕೋವಿಡ್ ರೋಗಿಗಳಿಗೂ ಚಿಕಿತ್ಸೆಗೆ ಸಮಸ್ಯೆಯಾಗಿದೆ. ರೋಗಿಯೊಬ್ಬರನ್ನು ನಾಲ್ಕೈದು ಆಸ್ಪತ್ರೆಗಳಿಗೆ ಸುತ್ತಾಡಿ ಕೊನೆಗೆ ಚಿಕಿತ್ಸೆ ಸಿಗದೆ ಮನೆಗೆ ವಾಪಸ್ಸು ಕರೆದುಕೊಂಡು ಹೋದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ವಿಜಯನಗರ ಜಿಲ್ಲೆಯ, ಹರಪನಹಳ್ಳಿ ತಾಲೂಕಿನ ಕೋಡಿಯಾಲ ಗ್ರಾಮದ ನಿವಾಸಿ ವೃದ್ಧೆ ಅನುಸೂಯಮ್ಮ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅನುಸೂಯಮ್ಮ ಅವರನ್ನು ಚಿಕಿತ್ಸೆಗೆಂದು ದಾವಣಗೆರೆ ನಗರದ ಜಿಲ್ಲಾಸ್ಪತ್ರೆಗೆ ಕರೆತರಳಾಗಿತ್ತು. ಆದರೆ ಆಸ್ಪತ್ರೆಗೆ ಬರುತ್ತಿದ್ದಂತೆ, ಇಲ್ಲಿ ಬೆಡ್ ಖಾಲಿ ಇಲ್ಲ ಇದು ಕೋವಿಡ್ ಆಸ್ಪತ್ರೆಯಾಗಿದ್ದು, ನಾನ್ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಇಲ್ಲಿಂದ ರೆಫರೆನ್ಸ್ ಲೆಟರ್ ಪಡೆದುಕೊಂಡು ಹೋಗಿ ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿ ವೃದ್ದೆಯ ಕುಟುಂಬಸ್ಥರಿಗೆ ತಿಳಿಸಿದರು.

    ವೈದ್ಯರ ಮಾಹಿತಿ ಆಧರಿಸಿ ಅನುಸೂಯಮ್ಮ ಅವರನ್ನು ಪಕ್ಕದ ಖಾಸಗಿ ಆಸ್ಪತ್ರೆಗೆ ಕರೆ ತಂದರು. ಆದರೆ ಅಲ್ಲಿ ಕೂಡ ಬೆಡ್ ಸಿಗದೆ ಹೈರಾಣಾದರು. ಬಳಿಕ ಬೆಡ್‍ಗಾಗಿ ಸುತ್ತಾಟ ನಡೆಸಿದ ಅನುಸೂಯಮ್ಮ ಅವರ ಸಂಬಂಧಿಕರು, ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರು ಕೂಡ ಆಸ್ಪತ್ರೆ ಸಿಬ್ಬಂದಿ ದಾಖಲು ಮಾಡಿಕೊಳ್ಳದೆ ಇರುವುದುದನ್ನು ಕಂಡು ಮಾಧ್ಯಮದ ಮುಂದೆ ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲಾಸ್ಪತ್ರೆಯಿಂದ ರೆಫರೆನ್ಸ್ ಲೆಟರ್ ಇದ್ದರೂ ಅಡ್ಮಿಷನ್ ಮಾಡಿಸಿಕೊಳ್ಳದ ಖಾಸಗಿ ಆಸ್ಪತ್ರೆಗಳು, 20 ಸಾವಿರ ಮುಂಗಡ ಹಣ ಕಟ್ಟಿ ಆಗ ಅಡ್ಮಿಷನ್ ಮಾಡಿಕೊಳ್ಳುತ್ತೇವೆ ಎಂದು ಖಾಸಗಿ ಆಸ್ಪತ್ರೆ ಸಿಬ್ಬಂದಿ ತಿಳಿಸಿದಾಗ ಹಣ ಕಟ್ಟಲಾಗದೆ ಕುಟುಂಬದ ಸದಸ್ಯರು ರೋಗಿಯನ್ನು ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದಾರೆ.

    ಜಿಲ್ಲಾಧಿಕಾರಿಗಳು ಎಲ್ಲಾ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತದೆ ಎಂದು ಹೇಳುತ್ತಿದ್ದಾರೆ ವಿನಃ ವಾಸ್ತವವಾಗಿ ನಡೆಯುತ್ತಿರುವುದೇ ಬೇರೆ. ಹಾಗಾಗಿ ಇನ್ನಾದರೂ ಜಿಲ್ಲಾಧಿಕಾರಿಗಳು ಖಾಸಗಿ ಆಸ್ಪತ್ರೆಯ ಮೇಲೆ ಕಡಿವಾಣ ಹಾಕಬೇಕು. ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಖಾಸಗಿ ಆಸ್ಪತ್ರೆ ಮೊಂಡಾಟ ಮುಂದುವರಿಕೆ – ಸೂಕ್ತ ಚಿಕಿತ್ಸೆ ಸಿಗದೆ ವೃದ್ಧೆ ಸಾವು

    ಖಾಸಗಿ ಆಸ್ಪತ್ರೆ ಮೊಂಡಾಟ ಮುಂದುವರಿಕೆ – ಸೂಕ್ತ ಚಿಕಿತ್ಸೆ ಸಿಗದೆ ವೃದ್ಧೆ ಸಾವು

    ಬೆಂಗಳೂರು: ಸರ್ಕಾರ ಎಷ್ಟು ಬಾರಿ ಎಚ್ಚರಿಕೆ ಕೊಟ್ಟಿದ್ದರೂ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.

    70 ವರ್ಷದ ವೃದ್ಧೆಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮಿ ಲೇಔಟ್‍ನಲ್ಲಿ ವೃದ್ಧೆಗೆ ಆರೋಗ್ಯ ಸಮಸ್ಯೆ ಕಾಣಿಸಿದೆ. ತಕ್ಷಣ ಅವರನ್ನು ವೆಸ್ಟ್ ಆಫ್ ಕಾರ್ಡ್ ರೋಡ್‍ನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

    ಆಸ್ಪತ್ರೆಯಲ್ಲಿ ಆಕ್ಸಿಜನ್ ಲೆವೆಲ್ ಕಡಿಮೆಯಾಗಿದೆ. ಆದರೆ ಇಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಬೆಡ್ ಇಲ್ಲ ಎಂದು ಹೇಳಿ ವೈದ್ಯರು ಕಳುಹಿಸಿದ್ದಾರೆ. ಕೊನೆಗೆ ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿಯೇ ವೃದ್ಧೆ ಮೃತಪಟ್ಟಿದ್ದಾರೆ.

    ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಬೆಡ್ ಇಲ್ಲ ಅಂತ ನೆಪ ಹೇಳಿ, ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಪರಿಣಾಮ 70 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಇದರಿಂದ ಸರ್ಕಾರ ಎಷ್ಟೇ ಎಚ್ಚರಿಕೆ ಕೊಟ್ಟರೂ ಖಾಸಗಿ ಆಸ್ಪತ್ರೆ ಮಾತ್ರ ಅಮಾನವೀಯವಾಗಿ ವರ್ತಿಸುತ್ತಿರುವುದು ಪದೇ ಪದೇ ಸಾಬೀತಾಗುತ್ತಿದೆ.

  • ಚಿತಾಗಾರಗಳ ಮುಂದೆ ಅಂಬುಲೆನ್ಸ್‌ಗಳು ಕ್ಯೂ

    ಚಿತಾಗಾರಗಳ ಮುಂದೆ ಅಂಬುಲೆನ್ಸ್‌ಗಳು ಕ್ಯೂ

    ಬೆಂಗಳೂರು: ದಿನೇ ದಿನೇ ಕೊರೊನಾ ಮತ್ತು ನಾನ್ ಕೋವಿಡ್ ವ್ಯಕ್ತಿಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತಾಗಾರಗಳ ಮುಂದೆ ಸಾಲು ಸಾಲಾಗಿ ಅಂಬುಲೆನ್ಸ್‌ಗಳು ಕ್ಯೂ ನಿಂತಿವೆ.

    ಚಾಮರಾಜಪೇಟೆ, ಬನಶಂಕರಿ ಮತ್ತು ಹೆಬ್ಬಾಳ ವಿದ್ಯುತ್ ಚಿತಾಗಾರದ ಮುಂದೆ ಅಂಬುಲೆನ್ಸ್ ಮತ್ತು ಜನರು ಸಾಲಾಗಿ ಕ್ಯೂ ನಿಂತಿದ್ದಾರೆ. ಕೋವಿಡ್ ಮತ್ತು ನಾನ್ ಕೋವಿಡ್ ವ್ಯಕ್ತಿಗಳ ಸಾವಿನ ಸಂಖ್ಯೆ ಜಾಸ್ತಿ ಆಗುತ್ತಿದೆ. ಇತ್ತ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ಸಮಯ ಬೇಕಾಗುತ್ತೆ. ಹೀಗಾಗಿ ಮೃತ ದೇಹವನ್ನು ಸಂಬಂಧಿಕರು ಅಂಬುಲೆನ್ಸ್‌ನಲ್ಲಿ ತಂದು ವಿದ್ಯುತ್ ಚಿತಾಗಾರದ ಮುಂದೆ ನಿಲ್ಲಿಸಲಾಗಿದೆ.

    ಇತ್ತ ಚಿತಾಗಾರದಲ್ಲಿ ಸಿಬ್ಬಂದಿ ಕಡಿಮೆ ಇದ್ದಾರೆ. ಹೀಗಾಗಿ ಅಂತ್ಯಕ್ರಿಯೆ ಮಾಡಲು ತಡವಾಗುತ್ತಿದೆ. ಆದ್ದರಿಂದ ಸಂಬಂಧಿಕರು ಚಿತಾಗಾರದ ಮುಂದೆ, ರಸ್ತೆ ಪಕ್ಕದಲ್ಲಿಯೇ ಮೃತದೇಹವನ್ನು ಇಟ್ಟುಕೊಂಡು ಅಂತ್ಯಕ್ರಿಯೆಗಾಗಿ ಕಾಯುತ್ತಿದ್ದಾರೆ. ಹೆಬ್ಬಾಳ ಚಿತಾಗಾರದಲ್ಲಿ ಕೊರೊನಾ ರೋಗಿಗಳ ಅಂತ್ಯಸಂಸ್ಕಾರಕ್ಕೆ ಸರತಿ ಸಾಲಿನಲ್ಲಿ ಕಾಯಲಾಗುತ್ತಿದೆ. ಪಿಪಿಇ ಕಿಟ್ ಧರಿಸಿ ಸಿಬ್ಬಂದಿ ಕುಟುಂಬಸ್ಥರು ಕಾಯುತ್ತಿದ್ದಾರೆ.

    ಈಗಾಗಲೇ ಬಿಬಿಎಂಪಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಮಾಡಲು ಪ್ರತ್ಯೇಕ ವಿದ್ಯುತ್ ಚಿತಾಗಾರ ಮಾಡಲು ಸಿದ್ಧತೆ ನಡೆಸುತ್ತಿದೆ. ಜೊತೆಗೆ ಚಿತಾಗಾರದಲ್ಲಿ ಸಿಬ್ಬಂದಿ ಹೆಚ್ಚಿಸುವ ಸಾಧ್ಯತೆ ಕೂಡ ಇದೆ.