Tag: Non Resident Indians

  • ಮಾಲ್ಡೀವ್ಸ್ 152,  ಕತಾರ್‌ನಿಂದ 182 ಅನಿವಾಸಿ ಭಾರತೀಯರು ಬೆಂಗಳೂರಿಗೆ ಆಗಮನ

    ಮಾಲ್ಡೀವ್ಸ್ 152, ಕತಾರ್‌ನಿಂದ 182 ಅನಿವಾಸಿ ಭಾರತೀಯರು ಬೆಂಗಳೂರಿಗೆ ಆಗಮನ

    ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

    ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ ಒಬ್ಬ ಬಾಲಕ ಸೇರಿದಂತೆ 132 ಪುರುಷರು ಮತ್ತು 20 ಮಹಿಳೆಯರಿದ್ದಾರೆ.

    ತಜ್ಞ ವೈದ್ಯರು ಹಾಗೂ ಸಿಬ್ಬಂದಿ 152 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಇಬ್ಬರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್‍ಗಾಗಿ ಕಳುಹಿಸಿಕೊಡಲಾಗಿದೆ. ಉಳಿದಂತೆ 150 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‍ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

    ದೋಹಾದಿಂದ 182 ಜನ ಆಗಮನ
    ರಾತ್ರಿ 9 ಗಂಟೆಗೆ ಕತಾರ್‍ನ ದೋಹಾದಿಂದ ಸಹ ಒಟ್ಟು 182 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಹತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ 182 ಜನ ಬಂದಿಳಿದಿದ್ದಾರೆ. ಹತ್ತು ವರ್ಷದೊಳಗಿನ 16 ಮಕ್ಕಳು, 127 ಪುರುಷರು ಮತ್ತು 39 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಎಲ್ಲರನ್ನೂ 14 ದಿನಗಳ ಕ್ವಾರಂಟೈನ್‍ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

  • ಏರ್ ಲಿಫ್ಟ್ 2.0- 31 ದೇಶಗಳಿಂದ 149 ವಿಮಾನಗಳ ಮೂಲಕ ತಾಯ್ನಾಡಿಗೆ ಭಾರತೀಯರು

    ಏರ್ ಲಿಫ್ಟ್ 2.0- 31 ದೇಶಗಳಿಂದ 149 ವಿಮಾನಗಳ ಮೂಲಕ ತಾಯ್ನಾಡಿಗೆ ಭಾರತೀಯರು

    – ಮತ್ತೊಂದು ಬೃಹತ್ ಕಾರ್ಯಚರಣೆಗೆ ಮುಂದಾದ ಕೇಂದ್ರ

    ನವದೆಹಲಿ: ಮೊದಲ ಹಂತದ ವಂದೇ ಭಾರತ್ ಮಿಷನ್ ಅಂತ್ಯವಾಗುತ್ತಿರುವ ಬೆನ್ನಲೆ ಎರಡನೇ ಹಂತದಲ್ಲಿ ಮತ್ತೊಂದು ಬೃಹತ್ ಕಾರ್ಯಚರಣೆಗೆ ಕೇಂದ್ರ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಮೇ 16ರಿಂದ ಎರಡನೇ ಹಂತದ ಕಾರ್ಯಚರಣೆಗೆ ಮೋದಿ ಸರ್ಕಾರ ಹಸಿರು ನಿಶಾನೆ ತೋರಲಿದೆ.

    ಮೇ 16ರಿಂದ 22ರವರೆಗೆ ಎರಡನೇ ಹಂತದಲ್ಲಿ ವಂದೇ ಭಾರತ್ ಮಿಷನ್ ಆರಂಭವಾಗಲಿದ್ದು, ಏಳು ದಿನಗಳಲ್ಲಿ 31 ದೇಶಗಳಿಂದ ಭಾರತದ ಹದಿನೈದು ನಗರಗಳಿಗೆ 149 ವಿಶೇಷ ವಿಮಾನಗಳಲ್ಲಿ ಮತ್ತಷ್ಟು ಅನಿವಾಸಿ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ.

    ಈ ಪೈಕಿ 14 ದೇಶಗಳಿಂದ ಕರ್ನಾಟಕಕ್ಕೆ 17 ವಿಮಾನಗಳು ಆಗಮಿಸಲಿವೆ. ಅಮೆರಿಕದಿಂದ 3, ಕೆನಡಾದಿಂದ 2 ಹಾಗೂ ಯುಎಇ, ಸೌದಿ ಅರೆಬಿಯಾ, ಮಲೇಷಿಯಾ, ಒಮನ್, ಫಿಲಿಪೈನ್ಸ್, ಫ್ರಾನ್ಸ್, ಜರ್ಮನಿ, ಕತಾರ್, ಇಂಡೋನೇಷ್ಯಾ, ಐರ್ಲೆಂಡ್, ಆಸ್ಟ್ರೇಲಿಯಾ, ಜಪಾನ್ ಗಳಿಂದ ತಲಾ ಒಂದೊಂದು ವಿಮಾನ ರಾಜ್ಯಕ್ಕೆ ಬರಲಿದೆ.

    ಕೊರೊನಾ ಸಂಕಷ್ಟದಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ನಿರ್ಧಿರಿತ್ತು. ಮೊದಲ ಹಂತದಲ್ಲಿ 12 ದೇಶಗಳಿಂದ 64 ವಿಶೇಷ ವಿಮಾನ, 11 ಹಡಗುಗಳ ಮೂಲಕ ಸುಮಾರು ಹದಿನೈದು ಸಾವಿರ ವಿದ್ಯಾರ್ಥಿಗಳು, ಅನಿವಾಸಿ ಭಾರತೀಯರು, ವಲಸೆ ಕಾರ್ಮಿಕರನ್ನು ಕರೆಲಾಗಿತ್ತು. ನಾಳೆಗೆ ಮೊದಲ ಹಂತದ ಕಾರ್ಯಚರಣೆ ಅಂತ್ಯವಾಗಲಿದೆ.

    ಮೊದಲ ಹಂತದ ಕಾರ್ಯಚರಣೆ ಆರಂಭವಾಗುತ್ತಿದ್ದಂತೆ ಪ್ರಪಂಚದ ಇತರೆ ದೇಶಗಳಿಂದ ಭಾರತಕ್ಕೆ ವಾಪಸ್ ಕರೆಸಿಕೊಳ್ಳುವಂತೆ ಸುಮಾರು 60 ಸಾವಿರ ಮನವಿಗಳು ಕೇಂದ್ರ ಸರ್ಕಾರಕ್ಕೆ ಬಂದಿತ್ತು. ಈ ಪೈಕಿ ಕೇರಳಕ್ಕೆ ತಲುಪಿಸುವಂತೆ 25,246, ತಮಿಳುನಾಡಿಗೆ 6,617, ಮಹಾರಾಷ್ಟ್ರಕ್ಕಾಗಿ 4,341, ಉತ್ತರ ಪ್ರದೇಶ 3,715, ರಾಜಸ್ಥಾನ 3,320, ತೆಲಂಗಾಣ 2,796, ಕರ್ನಾಟಕ 2,786 , ಆಂಧ್ರಪ್ರದೇಶ 2,445, ಗುಜರಾತ್ 2,330, ದೆಹಲಿ ತಲುಪಿಸಲು 2,232 ಮಂದಿ ನೋಂದಣಿ ಮಾಡಿಕೊಂಡಿದ್ದರು. ಈ ಮನವಿಗಳ ಹಿನ್ನಲೆ ಎರಡನೇ ಹಂತದ ಕಾರ್ಯಚರಣೆಗೆ ಕೇಂದ್ರ ಮುಂದಾಗಿದೆ.