Tag: noteban

  • ನೋಟ್‌ಬ್ಯಾನ್‌ ಎಫೆಕ್ಟ್- ದಯಾಮರಣಕ್ಕೆ ಮೈಸೂರಿನ ಕುಟುಂಬ ಅರ್ಜಿ

    ನೋಟ್‌ಬ್ಯಾನ್‌ ಎಫೆಕ್ಟ್- ದಯಾಮರಣಕ್ಕೆ ಮೈಸೂರಿನ ಕುಟುಂಬ ಅರ್ಜಿ

    ಮೈಸೂರು: ನೋಟ್ ಬ್ಯಾನ್ ಆಗಿ ವರ್ಷಗಳೇ ಕಳೆದಿವೆ. ಕೆಲವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರೆ ಮತ್ತೆ ಕೆಲವರು ಉದ್ಯಮದಲ್ಲಿ ನಷ್ಟ ಅನುಭವಿಸಿದ್ದಾರೆ. ಮೈಸೂರಿನ ಕುಟುಂಬವೊಂದಕ್ಕೆ ನೋಟ್ ಬ್ಯಾನ್ ಪರಿಣಾಮದಿಂದಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಪ್ರಧಾನಿ ಮೋದಿ ಅವರು ನವೆಂಬರ್ 8, 2016 ನೋಟ್ ಬ್ಯಾನ್ ಮಾಡಿ ಮೂರೂವರೆ ವರ್ಷಗಳೇ ಕಳೆದಿದೆ. ಆದರೂ, ನೋಟ್ ಬ್ಯಾನ್ ಎಫೆಕ್ಟ್ ಮಾತ್ರ ಬಾಧಿಸುತ್ತಲೇ ಇದೆ. ಹೀಗೆ ನೋಟ್ ಬ್ಯಾನ್ ಎಫೆಕ್ಟ್ ನಿಂದ ನೊಂದ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮನಗುನಹಳ್ಳಿ ಗ್ರಾಮದ ಶೇಖರ್ ಮತ್ತವರ ಕುಟುಂಬ ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದೆ.

    ಪರೋಟ ವ್ಯಾಪಾರ ಮಾಡುತ್ತಿದ್ದ ಶೇಖರ್ 40 ಜನರಿಗೆ ಕೆಲಸ ನೀಡಿದ್ದರು. ವ್ಯಾಪಾರವೂ ಭರ್ಜರಿಯಾಗಿ ನಡೆದು ತಿಂಗಳಿಗೆ ಲಕ್ಷಾಂತರ ರೂಪಾಯಿ ಆದಾಯವಿತ್ತು. ಇದೇ ಖುಷಿಯಲ್ಲಿ ನಿವೇಶನ ಖರೀದಿ ಮಾಡಿದ ಶೇಖರ್, ಮೈಸೂರಿನ ದಿವಾನ್ಸ್ ಹೌಸಿಂಗ್ ಫೈನಾನ್ಸ್ ನಲ್ಲಿ ಮನೆ ಸಾಲ ಪಡೆದು ಮನೆಯೂ ಕಟ್ಟಿಕೊಂಡರು. ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ನೋಟ್ ಬ್ಯಾನ್ ಬಳಿಕ ಇದ್ದಕ್ಕಿದ್ದಂತೆ ವ್ಯಾಪಾರ ಕುಸಿದು ಹೋಗಿದೆ ಎಂದು ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಶೇಖರ್ ಹೇಳಿದ್ದಾರೆ.

    ನೋಟ್ ಬ್ಯಾನ್ ಬಳಿಕ ವ್ಯಾಪಾರ ಕುಸಿದು, ಮನೆಗೆ ಪಡೆದ ಸಾಲ ತೀರಿಸಲು ಸಾಧ್ಯವಾಗಿಲ್ಲ. ಹೇಗೋ ಮಾಡಿ 2017ರವರಗೆ ಮನೆ ಸಾಲದ ಕಂತು ಕಟ್ಟಿದ್ದಾರೆ. ಆದರೆ ಮುಂದೆ ಕಟ್ಟಲು ಸಾಧ್ಯವಾಗಿಲ್ಲ. ಹೀಗಾಗಿ ಫೈನಾನ್ಸ್ ನವರು ಸಾಕಷ್ಟು ಬಾರಿ ನೋಟಿಸ್ ನೀಡಿದ್ದಾರೆ. ಕಡೆಗೆ ಮನೆ ಜಪ್ತಿ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಶೇಖರ್ ಪತ್ನಿ ರಮಾದೇವಿ ಪುತ್ರಿ ಮಾನಸ ಪುತ್ರ ಪೂರ್ಣಚಂದ್ರ ಜೊತೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರು, ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ತಹಶೀಲ್ದಾರ್, ಶಾಸಕರಿಗೂ ಪತ್ರ ಬರೆದಿದ್ದಾರೆ ಎಂದು ಸ್ಥಳೀಯರಾದ ಸತ್ಯಪ್ಪ ತಿಳಿಸಿದ್ದಾರೆ.

    ಮಾನಸಿಕವಾಗಿ ಸಾಕಷ್ಟು ನೊಂದಿರುವ ಶೇಖರ್ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

  • ಮಟಾಶ್ ಅಂದ್ರೆ ಅಂತ್ಯವಷ್ಟೇ ಮುಕ್ತಾಯವಲ್ಲ!

    ಮಟಾಶ್ ಅಂದ್ರೆ ಅಂತ್ಯವಷ್ಟೇ ಮುಕ್ತಾಯವಲ್ಲ!

    ಬೆಂಗಳೂರು: ಎಸ್.ಡಿ ಅರವಿಂದ್ ನಿರ್ದೇಶನದ ಮಟಾಶ್ ಚಿತ್ರದ ಸುತ್ತ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಈ ಚಿತ್ರ ನೋಟು ಅಮಾನ್ಯೀಕರಣದ ಸುತ್ತಲಿನ ಸತ್ಯ ಘಟನೆಯನ್ನಾಧರಿಸಿದೆ ಅಂತೊಂದು ಸುದ್ದಿ ಹೊರ ಬಿದ್ದ ಕ್ಷಣದಿಂದಲೇ ಜನ ಇತ್ತಲೇ ದೃಷ್ಟಿ ನೆಟ್ಟಿದ್ದಾರೆ. ಹಾಗಾದರೆ ಈ ಚಿತ್ರ ಅಸಲೀ ಕಥೆಗೇ ದೃಶ್ಯ ರೂಪ ನೀಡಿದೆಯಾ? ನೋಟು ಅಮಾನ್ಯೀಕರಣ ಸರಿ ಮತ್ತು ತಪ್ಪುಗಳೆಂಬ ವಾದ ಚಾಲ್ತಿಯಲ್ಲಿದೆಯಲ್ಲಾ? ಈ ಚಿತ್ರ ಈ ಬಗ್ಗೆ ಒಂದು ನಿಲುವು ಪ್ರಕಟಿಸುತ್ತದೆಯಾ… ಇಂಥಾ ಪ್ರಶ್ನೆಗಳ ಸರಮಾಲೆಯೇ ಇದೆ.

    ಆದರೆ ನಿರ್ದೇಶಕ ಎಸ್.ಡಿ ಅರವಿಂದ್ ಇದೊಂದು ಸತ್ಯ ಘಟನೆಯಾಧಾರಿತ ಕಾಲ್ಪನಿಕ ಕಥಾ ಹಂದರ ಹೊಂದಿರುವ ಚಿತ್ರ ಎಂಬ ಖಚಿತ ವಿಚಾರವನ್ನು ಹೊರ ಹಾಕುತ್ತಾರೆ. ಆದರೆ ಕಾಲ್ಪನಿಕ ಕಥೆಯಲ್ಲಿಯೇ ವಾಸ್ತವ ಎದುರಾಗಲೂ ಬಹುದೆಂಬ ಸುಳಿವು ಕೊಡುವ ಮೂಲಕ ಕುತೂಹಲವನ್ನು ಮತ್ತಷ್ಟು ನಿಗಿ ನಿಗಿಸುವಂತೆಯೂ ಮಾಡುತ್ತಾರೆ. ನಿಖರವಾಗಿ ಹೇಳ ಬೇಕೆಂದರೆ ಇದು ಪಕ್ಕಾ ಕಮರ್ಷಿಯಲ್ ಅಂಶಗಳನ್ನು ಹೊಂದಿರೋ ಚಿತ್ರವಂತೆ.

    ಯೂಥ್‍ಫುಲ್ ಸಬ್ಜೆಕ್ಟಿನ ಈ ಚಿತ್ರ ನೋಟು ಅಮಾನ್ಯೀಕರಣ ನಡೆದಾದ ನಂತರದ ಐವತ್ತು ದಿನಗಳಲ್ಲಿ ನಡೆದ ಕಥಾವಳಿಗಳನ್ನಿಟ್ಟಿಕೊಂಡೇ ಒಂದು ಔಟ್ ಆಂಡ್ ಔಟ್ ಎಂಟರ್ಟೈನರ್ ಕಥೆಯನ್ನು ಹೇಳ ಹೊರಟಿದೆ. ಈ ಮೂಲಕವೇ ಈ ಹೊತ್ತಿನ ಯುವ ಜನಾಂಗದ ಮನಸ್ಥಿತಿಯನ್ನೂ ಅನಾವರಣಗೊಳಿಸಲಿದೆಯಂತೆ. ಇಲ್ಲಿ ಅಂದದ ಹಾಡುಗಳಿರುತ್ತವೆ, ಮೈ ನವಿರೇಳಿಸೋ ಚೇಸಿಂಗ್ ಸೀನುಗಳಿರುತ್ತವೆ. ರೋಮಾಂಚನಗೊಳಿಸೋ ಎಲ್ಲ ಅಂಶಗಳೂ ಇರುತ್ತವೆ ಎಂಬುದು ನಿರ್ದೇಶಕರ ಅಭಿಪ್ರಾಯ.

    ಹೀಗೆ ಬಹಳಷ್ಟು ಕುತೂಹಲ ಕೆರಳಿಸಿರುವ ಈ ಚಿತ್ರದ ವಿಚಾರದಲ್ಲಿ ಅರವಿಂದ್ ಅವರು ಭಾರೀ ಪರಿಶ್ರಮ ವಹಿಸಿದ್ದಾರೆ. ಈ ಚಿತ್ರವನ್ನು ಅವರೇ ಸ್ವತಃ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಹನ್ನೊಂದು ಹಾಡುಗಳಿವೆ. ಅವೆಲ್ಲದಕ್ಕೂ ಅವರೇ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಅದರಲ್ಲೊಂದಷ್ಟು ಹಾಡುಗಳಿಗೆ ಸಾಹಿತ್ಯವನ್ನೂ ಬರೆದಿದ್ದಾರೆ. ಹೆಚ್ಚೂ ಕಮ್ಮಿ ಈ ಚಿತ್ರವನ್ನವರು ಒನ್ ಮ್ಯಾನ್ ಆರ್ಮಿಯಂತೆಯೇ ನಿಭಾಯಿಸಿದ್ದಾರೆ.

    ಈ ಚಿತ್ರಕ್ಕೆ ಮಟಾಶ್ ಅಂತ ಹೆಸರಿಡಲೂ ಕಾರಣವಿದೆ. ಮಟಾಶ್ ಅಂದರೆ ಪರಿಪೂರ್ಣತೆ ಇಲ್ಲದ ಅಂತ್ಯ ಎಂಬ ಅರ್ಥ ಧ್ವನಿಸುತ್ತೆ. ನೋಟು ಅಮಾನ್ಯೀಕರಣದ ವಿಚಾರದಲ್ಲಿ ಹಳೇ ನೋಟುಗಳ ಕಥೆ ಮುಗಿದಂತೆ ಕಂಡರೂ ಅದರ ಪರಿಣಾಮ ಇನ್ನೂ ಬಾಕಿ ಉಳಿದುಕೊಂಡಿದೆ. ಉದ್ದೇಶವೂ ಸಂಪೂರ್ಣವಾಗಿ ಈಡೇರಿದಂತಿಲ್ಲ. ಈ ಕಾರಣದಿಂದಷ್ಟೇ ಈ ಚಿತ್ರಕ್ಕೆ ಮಟಾಶ್ ಎಂಬ ಹೆಸರಿಡಲಾಗಿದೆಯಂತೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬ್ಯಾನ್ ಆದ ನೋಟುಗಳ ಹಾಸಿಗೆ- 100 ಕೋಟಿ ರೂ. ಹಳೇ ನೋಟು ಜಪ್ತಿ!

    ಬ್ಯಾನ್ ಆದ ನೋಟುಗಳ ಹಾಸಿಗೆ- 100 ಕೋಟಿ ರೂ. ಹಳೇ ನೋಟು ಜಪ್ತಿ!

    ಕಾನ್ಪುರ: ಅಂದಾಜು 100 ಕೋಟಿ ರೂ. ಮೊತ್ತದ ಬ್ಯಾನ್ ಆದ ನೋಟುಗಳನ್ನ ಉತ್ತರಪ್ರದೇಶ ಪೊಲೀಸರು ಬುಧವಾರದಂದು ಕಾನ್ಪುರದಲ್ಲಿ ಜಪ್ತಿ ಮಾಡಿದ್ದಾರೆ.

    ಜಪ್ತಿ ಮಾಡಲಾಗಿರೋ ಹಣದ ನಿರ್ದಿಷ್ಟ ಮೊತ್ತವನ್ನು ತಿಳಿಯಲು ಎಣಿಕಾ ಕಾರ್ಯ ನಡೆಯುತ್ತಿದೆ. ಜಪ್ತಿಯಾಗಿರೋ ಹಣ ಹಳೇ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳಲ್ಲಿವೆ. ಕಾನ್ಪುರದ ಸೇಸಾಮೌ ಪಾಕೆಟ್‍ನಲ್ಲಿ ಈ ದಾಳಿ ನಡೆದಿದೆ.

    ಕೋಟಿಗಟ್ಟಲೆ ಬ್ಯಾನ್ ಆದ ನೋಟುಗಳು ಕಾನ್ಪುರ ನಿವಾಸಿಯೊಬ್ಬರ ಮನೆಯಲ್ಲಿದೆ ಎಂದು ನಮಗೆ ಮಾಹಿತಿ ಬಂದಿತ್ತು. ಆರ್‍ಬಿಐ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡ ದಾಳಿ ನಡೆಸಿತ್ತು. ಇನ್ನೂ ಶೋಧ ಕಾರ್ಯ ಹಾಗೂ ಎಣಿಕಾ ಕಾರ್ಯ ನಡೆಯುತ್ತಿರುವುದರಿಂದ ನಿಗದಿತ ಮೊತ್ತ ಎಷ್ಟು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಎಸ್‍ಎಸ್‍ಪಿ ಎಕೆ ಮೀನಾ ಹೇಳಿದ್ದಾರೆ.

    ಕಂತೆ ಕಂತೆ ನೋಟುಗಳನ್ನ ಹಾಸಿಗೆಯಂತೆ ಜೋಡಿಸಿರುವ ಫೋಟೋ ಹಾಗೂ ವಿಡಿಯೋವನ್ನ ಸುದ್ದಿ ಸಂಸ್ಥೆ ಹಂಚಿಕೊಂಡಿದೆ. ನೋಟುಗಳ ಆರೋಪಿಯ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ಐಟಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

    2016ರ ನವೆಂಬರ್ 8ರಂದು ಕೇಂದ್ರ ಸರ್ಕಾರ ಹಳೇ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿತ್ತು.

  • 13 ವರ್ಷದ ಬಳಿಕ ಏರಿಕೆ ಕಂಡಿತು ಭಾರತದ ಮೂಡೀಸ್ ರೇಟಿಂಗ್

    13 ವರ್ಷದ ಬಳಿಕ ಏರಿಕೆ ಕಂಡಿತು ಭಾರತದ ಮೂಡೀಸ್ ರೇಟಿಂಗ್

    ಮುಂಬೈ: ಸುಲಭ ವಹಿವಾಟು ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಜಿಗಿದು 100ನೇ ಸ್ಥಾನ ಪಡೆದಿದ್ದ ಭಾರತಕ್ಕೆ ಈಗ ಜಾಗತಿಕ ಮಟ್ಟದ ರೇಟಿಂಗ್ ಏಜೆನ್ಸಿ `ಮೂಡೀಸ್’ ಬಿಎಎ2 ರೇಟಿಂಗ್ ನೀಡಿ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಹೊಗಳಿದೆ.

    13 ವರ್ಷದ ಬಳಿಕ ಮೂಡೀಸ್ ರೇಟಿಂಗ್ ಮೇಲ್ದರ್ಜೆಗೆ ಏರಿದ್ದು, 2004ರಲ್ಲಿ ಭಾರತಕ್ಕೆ `ಬಿಎಎ3′ ರೇಟಿಂಗ್ ನೀಡಿತ್ತು. ನೋಟು ನಿಷೇಧ, ಜಿಎಸ್‍ಟಿ ಜಾರಿ, ಬ್ಯಾಂಕ್ ಖಾತೆಗಳಿಗೆ ಹಾಗೂ ಸರ್ಕಾರದ ಸೌಲಭ್ಯಗಳಿಗೆ ಆಧಾರ್ ಕಡ್ಡಾಯಗೊಳಿಸಿದ ಪರಿಣಾಮ ದೇಶದ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ ಬೀರಿದೆ ಎಂದು ಮೂಡಿಸ್ ತನ್ನ ವರದಿಯಲ್ಲಿ ತಿಳಿಸಿದೆ.

    ದೇಶಿ ಮತ್ತು ವಿದೇಶಿ ಹೂಡಿಕೆ ಬೆಳವಣಿಗೆ ಆಗುತ್ತಿದೆ. ಉತ್ಪಾದನೆ, ಉದ್ಯಮಗಳಿಗೆ ಪೂರಕ ವಾತಾವರಣ ನಿರ್ಮಾಣವಾಗುತ್ತಿರುವುದರಿಂದ ದೇಶದ ಅರ್ಥವ್ಯವಸ್ಥೆ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಮೂಡಿಸ್ ಹೇಳಿದೆ.

    ನೋಟ್ ಬ್ಯಾನ್ ಮತ್ತು ತರಾತುರಿಯಲ್ಲಿ ಜಿಎಸ್‍ಟಿಯನ್ನು ಜಾರಿಗೊಳಿಸಿದ್ದರಿಂದ ದೇಶದ ಅರ್ಥವ್ಯವಸ್ಥೆ ಕುಸಿದುಬಿದ್ದಿದೆ ಎಂದು ಪ್ರತಿಪಕ್ಷಗಳು ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಟೀಕಿಸಿತ್ತು. ಆದರೆ ಈಗ ಮೂಡಿಸ್ ರೇಟಿಂಗ್ ಏರಿಸಿದ್ದರಿಂದ ಪ್ರತಿಪಕ್ಷಗಳ ಟೀಕೆಗೆ ಉತ್ತರ ನೀಡಲು ಬಿಜೆಪಿಗೆ ಪ್ರಬಲ ಅಸ್ತ್ರವೊಂದು ಈಗ ಸಿಕ್ಕಿದಂತಾಗಿದೆ.

    2004ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಇದ್ದಾಗ ಮೂಡಿಸ್ ರೇಟಿಂಗ್ ಏರಿಕೆಯಾಗಿತ್ತು. ಈಗ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಮತ್ತೊಮ್ಮೆ ರೇಟಿಂಗ್ ಏರಿಕೆಯಾಗಿದೆ.

    ಏನಿದು ಮೂಡಿಸ್ ರೇಟಿಂಗ್?
    ಅಮೆರಿಕದ ಮೂಲದ ಮೂಡೀಸ್ ಅರ್ಥವ್ಯವಸ್ಥೆ, ವಿದೇಶಿ ಹೂಡಿಕೆ, ಸಾಲ ಯೋಗ್ಯತೆಯ ಪರಿಸ್ಥಿತಿ ಮತ್ತು ಅದರ ಮೇಲೆ ಪರಿಣಾಮ ಬೀರುತ್ತಿರುವ ವಾಸ್ತವ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ವಿವಿಧ ದೇಶಗಳಿಗೆ ರೇಟಿಂಗ್ ನೀಡುತ್ತದೆ. 1909ರಲ್ಲಿ ಈ ಮೂಡಿಸ್ ಕಂಪೆನಿ ಆರಂಭಗೊಂಡಿದ್ದು, ಉತ್ತಮ ರೇಟಿಂಗ್ ನೀಡಿದರೆ ಹೂಡಿಕೆದಾರರು ಆ ದೇಶದಲ್ಲಿ ಬಂಡವಾಳ ಹೂಡಲು ಮುಂದೆ ಬರುತ್ತಾರೆ. ಜಾಗತಿಕ ಮಟ್ಟದಲ್ಲಿ ಮೂಡೀಸ್ ಜತೆಗೆ ಸ್ಟ್ಯಾಂಡರ್ಡ್ ಅಂಡ್ ಪೂರ್, ಫೆಚ್ ಸೇರಿದಂತೆ ಕೆಲವು ಪ್ರತಿಷ್ಠಿತ ರೇಟಿಂಗ್ ಏಜೆನ್ಸಿಗಳು ಕಾರ್ಯ ನಿರ್ವಹಿಸುತ್ತಿವೆ.

    ಏನಿದು ಬಿಎಎ2 ರೇಟಿಂಗ್?
    ಮಧ್ಯಮ ಪ್ರಮಾಣದ ಆರ್ಥಿಕ ಅಭಿವೃದ್ಧಿಯನ್ನು ಬಿಎಎ2 ರೇಟಿಂಗ್ ಸೂಚಿಸುತ್ತದೆ. ಅಭಿವೃದ್ಧಿ ಹೊಂದಿದ ಅರ್ಥ ವ್ಯವಸ್ಥೆಗೆ ಎಎಎ ರೇಟಿಂಗ್ ನೀಡಲಾಗುತ್ತದೆ.

    ಬ್ರಿಕ್ಸ್ ರೇಟಿಂಗ್ ಬೇಕು ಎಂದಿದ್ದ ಮೋದಿ:
    ಈ ವರ್ಷ ಚೀನಾದಲ್ಲಿ ನಡೆದ ಬ್ರಿಕ್ಸ್(ಬ್ರೆಜೆಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ) ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಪಾಶ್ಚಿಮಾತ್ಯ ರಾಷ್ಟ್ರಗಳು ನೀಡುವ ಕ್ರೆಡಿಟ್ ರೇಟಿಂಗ್ ಬದಲಾಗಿ ಬ್ರಿಕ್ಸ್ ರಾಷ್ಟ್ರಗಳು ತಮ್ಮದೇ ಆದ ರೇಟಿಂಗ್ ಏಜೆನ್ಸಿಯನ್ನು ಸ್ಥಾಪಿಸಬೇಕು ಎಂದು ಹೇಳಿದ್ದರು.

    ಇದನ್ನೂ ಓದಿ: ಸುಲಭ ವಹಿವಾಟು ವಿಶ್ವದ ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಏರಿ 100ನೇ ಸ್ಥಾನಕ್ಕೆ ಜಿಗಿದ ಭಾರತ

     

  • ನೋಟ್‍ ಬ್ಯಾನ್‍ಗೆ 1 ವರ್ಷ- 125 ಕೋಟಿ ಭಾರತೀಯರು ಹೋರಾಡಿ ಗೆದ್ದಿದ್ದಾರೆ ಎಂದ ಮೋದಿ, ದುರಂತವೆಂದು ಟೀಕಿಸಿದ ರಾಗಾ

    ನೋಟ್‍ ಬ್ಯಾನ್‍ಗೆ 1 ವರ್ಷ- 125 ಕೋಟಿ ಭಾರತೀಯರು ಹೋರಾಡಿ ಗೆದ್ದಿದ್ದಾರೆ ಎಂದ ಮೋದಿ, ದುರಂತವೆಂದು ಟೀಕಿಸಿದ ರಾಗಾ

    ನವದೆಹಲಿ: ಕಪ್ಪುಹಣ, ಭ್ರಷ್ಟಾಚಾರ, ಖೋಟಾ ನೋಟು ಹಾಗೂ ಭಯೋತ್ಪಾದನೆ ತಡೆಯಲೆಂದು ಪ್ರಧಾನಿ ನರೇಂದ್ರ ಮೋದಿ ಏಕಾಏಕಿ ನೋಟ್ ಬ್ಯಾನ್ ಮಾಡಿ ಇಂದಿಗೆ ಒಂದು ವರ್ಷವೇ ಕಳೆಯಿತು. ಹೀಗಾಗಿ ನೋಟ್ ಬ್ಯಾನ್‍ಗೆ ಸಹಕರಿಸಿದ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.

    125 ಕೋಟಿ ಭಾರತೀಯರು ನಿರ್ಣಾಯಕ ಯುದ್ಧದಲ್ಲಿ ಹೋರಾಡಿ ಗೆದ್ದಿದ್ದಾರೆ ಅಂತ ಟ್ವೀಟ್ ಮಾಡಿರುವ ಪ್ರಧಾನಿ ನೋಟ್ ಬ್ಯಾನ್‍ನಿಂದ ಆಗಿರೋ ಪ್ರಯೋಜನದ ಬಗ್ಗೆ ಕಿರುಚಿತ್ರವನ್ನು ಟ್ವೀಟಿಸಿದ್ದಾರೆ.

    ಇನ್ನು ನೋಟು ಅಮಾನ್ಯ ಒಂದು ದುರಂತ ಅಂತ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ. ಮುಂದಾಲೋಚನೆ ಇಲ್ಲದೇ ಕೈಗೊಂಡಿರುವ ನೋಟ್ ಬ್ಯಾನ್‍ನಿಂದ ಕೋಟ್ಯಾಂತರ ಜನರ ಬದುಕು ನಾಶವಾಗಿದೆ. ಪ್ರಾಮಾಣಿಕ ಭಾರತೀಯರ ಜೊತೆ ಸದಾ ನಾವಿರುತ್ತೇವೆ ಅಂತ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ದೇಶದಲ್ಲಿ ನೋಟ್ ಬ್ಯಾನ್ ಆಗಿ ಇಂದಿಗೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ ಕರಾಳ ದಿನ ಆಚರಣೆ ಮಾಡಲು ಮುಂದಾಗಿದೆ. ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ದೇಶದಾದ್ಯಂತ ಸಾವನ್ನಪ್ಪಿದ 150ಕ್ಕೂ ಹೆಚ್ಚು ಜನರಿಗೆ ಮೊಂಬತ್ತಿ ಬೆಳಗಿ ನಮನ ಸಲ್ಲಿಸಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ ಅಂತಾ ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ನೋಟ್ ಬ್ಯಾನ್ ವರ್ಷಾಚರಣೆ ಹಿನ್ನೆಲೆಯಲ್ಲಿ ದೆಹಲಿ ಪ್ರದೇಶ ಕಾಂಗ್ರೆಸ್ ಮತ್ತು ಎಐಸಿಸಿ ನೇತೃತ್ವದಲ್ಲಿ ಹಲವೆಡೆ ಪ್ರತಿಭಟನೆ ನಡೆಯಲಿದೆ. ದೆಹಲಿ ಪ್ರದೇಶ ಕಾಂಗ್ರೆಸ್ ವತಿಯಿಂದ ಆರ್‍ಬಿಐ ಮುಂಭಾಗ ಪ್ರತಿಭಟನೆ ಹಾಗೂ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ನೋಟ್ ಬ್ಯಾನ್ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

    https://www.youtube.com/watch?v=R5Cc-PrwTBU

    https://www.youtube.com/watch?v=vBwvhMHsHMY

  • ನೋಟ್‍ ಬ್ಯಾನ್ ಮಾಡಿ ಇಂದಿಗೆ ಒಂದು ವರ್ಷ – ಕಾಂಗ್ರೆಸ್ ನಿಂದ ಕರಾಳ ದಿನ ಆಚರಣೆ

    ನೋಟ್‍ ಬ್ಯಾನ್ ಮಾಡಿ ಇಂದಿಗೆ ಒಂದು ವರ್ಷ – ಕಾಂಗ್ರೆಸ್ ನಿಂದ ಕರಾಳ ದಿನ ಆಚರಣೆ

    ಬೆಂಗಳೂರು, ನವದೆಹಲಿ: ದೇಶದಲ್ಲಿ ನೋಟ್ ಬ್ಯಾನ್ ಆಗಿ ಇಂದಿಗೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ ಕರಾಳ ದಿನ ಆಚರಣೆ ಮಾಡಲು ಮುಂದಾಗಿದೆ.

    ರಾಜ್ಯ ಕಾಂಗ್ರೆಸ್ ನಾಯಕರು ಸಹಾ ಬೆಂಗಳೂರಿನಲ್ಲಿ ಕರಾಳ ದಿನ ಆಚರಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯಿಂದ ಫ್ರೀಡಂಪಾರ್ಕ್ ವರೆಗೆ ಕಾಂಗ್ರೆಸ್ ನಾಯಕರು ಜಾಥಾ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್,ಎಸ್.ಆರ್.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಬಹುತೇಕ ಸಚಿವರು ಹಾಗೂ ಶಾಸಕರುಗಳು ಪಾಲ್ಗೊಳ್ಳಲಿದ್ದಾರೆ.

    ಬಳಿಕ ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ನೋಟ್ ಬ್ಯಾನ್ ಮಾಡಿ ಒಂದು ವರ್ಷವಾದ ನವೆಂಬರ್ 8 ರಂದು ಜನ ಸಾಮಾನ್ಯರು ನೋಟ್‍ ಬ್ಯಾನ್‍ ನಿಂದ ನರಳುವಂತಾಗಿದ್ದು ಸಫರಿಂಗ್ ಡೇ ಆಚರಿಸಲಿದೆ. ರಾಜ್ಯ ಕಾಂಗ್ರೆಸ್ ನಾಯಕರುಗಳು ಸಂಜೆ 6 ಗಂಟೆಗೆ ಬ್ರಿಗೇಡ್ ರಸ್ತೆಯ ವಾರ್ ಮೆಮೋರಿಯಲ್‍ ನಲ್ಲಿ ಸತ್ತವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ದೇಶದಾದ್ಯಂತ ಸಾವನ್ನಪ್ಪಿದ 150ಕ್ಕೂ ಹೆಚ್ಚು ಜನರಿಗೆ ಮೊಂಬತ್ತಿ ಬೆಳಗಿ ನಮನ ಸಲ್ಲಿಸಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ ಅಂತಾ ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ನೋಟ್ ಬ್ಯಾನ್‍ಗೆ ಆಯ್ತು 365 ದಿನ: ಪಬ್ಲಿಕ್ ಪರೀಕ್ಷೆಯಲ್ಲಿ ಮೋದಿ ಗೆದ್ರಾ? ಸೋತ್ರಾ?

    ಇನ್ನು ನೋಟ್ ಬ್ಯಾನ್ ವರ್ಷಾಚರಣೆ ಹಿನ್ನೆಲೆ ದೆಹಲಿ ಪ್ರದೇಶ ಕಾಂಗ್ರೆಸ್ ಮತ್ತು ಎಐಸಿಸಿ ನೇತೃತ್ವದಲ್ಲಿ ಹಲವೆಡೆ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಬೃಹತ್ ಜಾಥಾ ಹಮ್ಮಿಕೊಂಡಿದ್ದು ಸರೋಜಿನಿ ಮಾರುಕಟ್ಟೆಯಿಂದ ಪ್ರಧಾನ ಮಂತ್ರಿ ಕಚೇರಿವರೆಗೂ ಜಾಥಾ ನಡೆಸಲಿದ್ದಾರೆ.

    ಜೊತೆಗೆ ದೆಹಲಿ ಪ್ರದೇಶ ಕಾಂಗ್ರೆಸ್ ವತಿಯಿಂದ ಆರ್‍ಬಿಐ ಮುಂಭಾಗ ಪ್ರತಿಭಟನೆ ಹಾಗೂ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ನೋಟ್ ಬ್ಯಾನ್ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಈ ವೇಳೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬೀ ಅಜಾದ್ ಸೇರಿದಂತೆ ದೆಹಲಿಯ ಪ್ರಮುಖ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

    https://www.youtube.com/watch?v=p9IUJ0n3kc0

    https://www.youtube.com/watch?v=vBwvhMHsHMY

  • ಆನೇಕಲ್ ಬಳಿ 500, 2000 ರೂ. ಖೋಟಾ ನೋಟು ಮುದ್ರಿಸ್ತಿದ್ದವರನ್ನ ಬಂಧಿಸಿದ ಕೇರಳ ಪೊಲೀಸರು

    ಆನೇಕಲ್ ಬಳಿ 500, 2000 ರೂ. ಖೋಟಾ ನೋಟು ಮುದ್ರಿಸ್ತಿದ್ದವರನ್ನ ಬಂಧಿಸಿದ ಕೇರಳ ಪೊಲೀಸರು

    ಬೆಂಗಳೂರು: ನೋಟ್‍ಬ್ಯಾನ್ ಆಗಿ ಬುಧವಾರ ಒಂದು ವರ್ಷ ಪೂರೈಸುತ್ತಿರೋ ಹೊತ್ತಲ್ಲೇ ಆನೇಕಲ್ ಬಳಿ ಖೋಟಾನೋಟು ದಂಧೆ ನಡೆಸುತ್ತಿದ್ದ ವಿಚಾರ ಬಯಲಾಗಿದೆ. ಖೋಟಾ ನೋಟು ಮುದ್ರಿಸುತ್ತಿದ್ದ 3 ಆರೋಪಿಗಳನ್ನ ಕೇರಳ ಪೊಲೀಸರು ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ರಾಮಸಾಗರದಲ್ಲಿ ಬಂಧಿಸಿದ್ದಾರೆ.

    ಓಲ್ಡ್ ಜೋಸೆಫ್(30)ಖೋಟಾ ನೋಟು ಪ್ರಿಂಟ್ ಮಾಡುತಿದ್ದ. ಬಂಧಿತ ಆರೋಪಿಗಳು ಕೇರಳ ಮೂಲದವರಾಗಿದ್ದಾರೆ. ರಾಮಸಾಗರದ ನಾರಾಯಣ ರೆಡ್ಡಿ ಎಂಬವರ ಮನೆಯಲ್ಲಿ ಬಾಡಿಗೆಗೆ ಇದ್ದರು. ಸೀರೆ ವ್ಯಾಪಾರ ಮಾಡುವುದಾಗಿ ಮನೆ ಬಾಡಿಗೆ ಪಡೆದಿದ್ದರು ಎಂದು ತಿಳಿದುಬಂದಿದೆ.

    ಬಂಧಿತರು ಹೊಸ 2000 ಸಾವಿರ ರೂ. ಹಾಗು 500 ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸುತ್ತಿದ್ದರು. ಸದ್ಯ ಕೇರಳ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದು, ಸುಮಾರು 50 ಲಕ್ಷ ರೂ. ಖೋಟಾ ನೋಟು ಹಾಗು ಪ್ರಿಂಟಿಂಗ್ ಮಿಷೀನ್ ವಶಕ್ಕೆ ಪಡೆದಿದ್ದಾರೆ.

    ಆನೇಕಲ್ ತಾಲೂಕಿನ ಸೂರ್ಯ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಸಿದ್ದರಾಮಯ್ಯ ಹೃದಯದಲ್ಲಿ ಬಡವರು ಮಾತ್ರ ಇದ್ದಾರೆ-ಕೆ.ಸಿ ವೇಣುಗೋಪಾಲ್

    ಸಿದ್ದರಾಮಯ್ಯ ಹೃದಯದಲ್ಲಿ ಬಡವರು ಮಾತ್ರ ಇದ್ದಾರೆ-ಕೆ.ಸಿ ವೇಣುಗೋಪಾಲ್

    ಉಡುಪಿ: ಸಿದ್ದರಾಮಯ್ಯ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಸಿಎಂ ಹೃದಯದಲ್ಲಿ ಬಡವರು ಮಾತ್ರ ಇದ್ದಾರೆ. ಇದು ರಾಜ್ಯದ ಜನಕ್ಕೆ ಅರ್ಥವಾಗಬೇಕು. ಅರ್ಥ ಮಾಡಿಸುವ ಕೆಲಸವನ್ನು ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಮಾಡಬೇಕು ಅಂತ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

    ಮನೆ ಮನೆ ಕಾಂಗ್ರೆಸ್ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಹಣಿಯಲು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಸಚಿವ ಎಂ.ಬಿ ಪಾಟೀಲ್ ಫೋನ್ ಕದ್ದಾಲಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದರು. ಗುಜರಾತ್‍ನಲ್ಲೂ ಇಂತಹ ಆರೋಪ ಕೇಳಿಬಂದಿದೆ. ಫೋನ್ ಟ್ಯಾಪಿಂಗ್ ಮಾಡಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಸಿಬಿಐ, ಇಡಿ, ಎನ್‍ಐಎ ಎಲ್ಲಾ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಗುಡುಗಿದರು.

    ಕೇಂದ್ರ ಸರ್ಕಾರ ಈ ರೀತಿಯ ನಡವಳಿಕೆಯನ್ನು ನಿಲ್ಲಿಸಬೇಕು. ಪರಿವರ್ತನಾ ಯಾತ್ರೆ ಬಗ್ಗೆ ಕಾಂಗ್ರೆಸ್ ತಲೆಕೆಡಿಕೊಳ್ಳುವುದಿಲ್ಲ. ಅವರು ಯಾತ್ರೆ ಮಾಡುತ್ತಿರಲಿ. ಏನೇ ಮಾಡಿದ್ರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ನೋಟ್ ಬ್ಯಾನ್ ಬಗ್ಗೆ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂದೇ ತನ್ನ ದೃಷ್ಟಿಕೋನವನ್ನು ತಿಳಿಸಿದ್ದರು. ಅದು ಇಂದು ಸತ್ಯವಾಗುತ್ತಿದೆ ಎಂದು ಹೇಳಿದರು.

    ನೋಟ್ ಬ್ಯಾನ್ ಒಂದು ಅನ್ಯಾಯದ ಮತ್ತು ವ್ಯವಸ್ಥಿತವಾದ ಲೂಟಿ. ನಗದು ಅಪಮೌಲೀಕರಣದಿಂದ ಯುವಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಕಳಪೆ ನಡೆಯಿಟ್ಟಿದೆ ಎಂದು ವಾಗ್ದಾಳಿ ನಡೆಸಿದರು. ಚುನಾವಣೆಗೆ ಇನ್ನು ನಾಲ್ಕೇ ತಿಂಗಳು ಇದೆ. ಅಧಿಕಾರದ ಅಮಲಿನಲ್ಲಿ ಇರದೆ ಮುಂದಿನ ಚುನಾವಣೆಯ ಬಗ್ಗೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಕಾಂಗ್ರೆಸ್ ಹತ್ತಾರು ಯೋಜನೆಗಳನ್ನು ಕೊಟ್ಟಿದೆ. ಅದನ್ನು ಮನೆ ಮನೆಗೆ ಮುಟ್ಟಿಸಬೇಕು ಎಂದರು.

  • ನೋಟ್ ಬ್ಯಾನ್ ನಂತರ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಕಡಿಮೆಯಾಗಿದೆ: ಅರುಣ್ ಜೇಟ್ಲಿ

    ನೋಟ್ ಬ್ಯಾನ್ ನಂತರ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಕಡಿಮೆಯಾಗಿದೆ: ಅರುಣ್ ಜೇಟ್ಲಿ

    ಕ್ಯಾಲಿಫೋರ್ನಿಯಾ: ನೋಟ್ ಬ್ಯಾನ್ ಆದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟದ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

    ಶನಿವಾರ ಬರ್ಕೇಲಿಯಾದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ಸ್ವಚ್ಛ ಭಾರತ್, ಜಿಎಸ್‍ಟಿ ಮತ್ತು ನೋಟ್‍ಬ್ಯಾನ್ ಅಂತಹ ಕ್ರಮಗಳಿಂದ ದೇಶದಲ್ಲಿ ಯಾವುದೇ ಪರಿವರ್ತನೆ ಆಗಿಲ್ಲ ಎನ್ನುವ ಮಾತನ್ನು ನಾನು ನಿರಾಕರಿಸುತ್ತೇನೆ ಎಂದರು.

    ಭಯೋತ್ಪಾದಕರು ನೀಡುತ್ತಿದ್ದ ಹಣಕ್ಕಾಗಿ ಬಂಡಾಯಕಾರರು ಕಲ್ಲು ಎಸೆದಾಡುವಂತಹ ಚಟುವಟಿಕೆಗಳು ಕಳೆದ 7-8 ತಿಂಗಳಿನಿಂದ ಬಹಳಷ್ಟು ಕಡಿಮೆಯಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದರು.

    ನೋಟ್ ಬ್ಯಾನ್ ಆದ ಬಳಿಕ ಜಮ್ಮು ಮತ್ತು ಕಾಶ್ಮೀರ ಹಾಗೂ ಛತ್ತೀಸ್‍ಗಢ ದಂತಹ ರಾಜ್ಯಗಳಲ್ಲಿ ಬಂಡಾಯಗಾರರು ಮತ್ತು ಭಯೋತ್ಪಾದಕ ಚಟುವಟಿಕೆಗಳು ಕಳೆದ 7-8 ತಿಂಗಳಿಂದ ಏಕೆ ಹೆಚ್ಚು ಸಂಭವಿಸುತಿಲ್ಲ ಎಂದು ಇದೇ ವೇಳೆ ಸಂದರ್ಭದಲ್ಲಿ ಪ್ರಶ್ನಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನವೆಂಬರ್ 8 ರಂದು 1000 ಮತ್ತು 500 ಮುಖ ಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದ್ದರು. ದೇಶದಲ್ಲಿ ಕಪ್ಪು ಹಣ, ನಕಲಿ ನೋಟು, ಭಯೋತ್ಪಾದನೆ ಹಣ ಹಾಗೂ ಭ್ರಷ್ಟಾಚಾರ ಇವುಗಳೆಲ್ಲವನ್ನು ನಿಯಂತ್ರಿಸುವ ಸಲುವಾಗಿ ನೋಟ್ ಬ್ಯಾನ್ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭಾಷಣದಲ್ಲಿ ತಿಳಿಸಿದ್ದರು.

  • 1 ಸಾವಿರ ರೂ. ನೋಟು ಮತ್ತೆ ಪರಿಚಯಿಸೋ ಬಗ್ಗೆ ಪ್ರಸ್ತಾಪ ಇಲ್ಲ: ಸರ್ಕಾರ

    1 ಸಾವಿರ ರೂ. ನೋಟು ಮತ್ತೆ ಪರಿಚಯಿಸೋ ಬಗ್ಗೆ ಪ್ರಸ್ತಾಪ ಇಲ್ಲ: ಸರ್ಕಾರ

    ನವದೆಹಲಿ: ಹೊಸದಾಗಿ 1 ಸಾವಿರ ರೂ. ನೋಟುಗಳನ್ನು ಪರಿಚಯಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಶ್ ಗರ್ಗ್ ತಿಳಿಸಿದ್ದಾರೆ.

    500, 1 ಸಾವಿರ ರೂ. ನೋಟುಗಳು ಬ್ಯಾನ್ ಆದ ಬಳಿಕ ಹೊಸದಾಗಿ 2 ಸಾವಿರ, 500 ರೂ., 200 ರೂ., 50 ರೂ.ಗಳನ್ನು ಬಿಡುಗಡೆ ಮಾಡಿರುವ ಆರ್‍ಬಿಐ 1 ಸಾವಿರ ರೂ. ನೋಟು ಚಲಾವಣೆಗೆ ತರಲು ಮುಂದಾಗುತ್ತಿದೆ ಎನ್ನುವ ಸುದ್ದಿ ಸೋಮವಾರ ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.

    ಈ ಸುದ್ದಿಗಳಿಗೆ ಸುಭಾಶ್ ಗರ್ಗ್, 1 ಸಾವಿರ ರೂ. ನೋಟುಗಳನ್ನು ಮತ್ತೆ ಪರಿಚಯಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಟ್ವೀಟ್ ಮಾಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

    ಆರ್‍ಬಿಐ ಶೀಘ್ರದಲ್ಲೇ 1 ಸಾವಿರ ರೂ. ನೋಟುಗಳನ್ನು ಮುದ್ರಿಸಲಿದೆ. ಡಿಸೆಂಬರ್ ನಲ್ಲಿ ಚಲಾವಣೆಗೆ ಬರಲಿದ್ದು, ಮೈಸೂರು ಮತ್ತು ಸಾಲ್ಬೋನಿಯಲ್ಲಿ ಹೊಸ ನೋಟುಗಳು ವಿಶೇಷ ಭದ್ರತಾ ವೈಶಿಷ್ಟ್ಯಗಳೊಂದಿಗೆ ಮುದ್ರಣವಾಗಲಿದೆ ಎಂದು ವರದಿ ತಿಳಿಸಿತ್ತು.

    ಕಪ್ಪುಹಣವನ್ನು ತಡೆಗಟ್ಟಲು ನವೆಂಬರ್ 8 ರಂದು 500 ಮತ್ತು 1 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿ ತಿಳಿಸಿದ್ದರು. ಮೈಸೂರಿನ ಮೇಟಗಳ್ಳಿ, ಮಹಾರಾಷ್ಟ್ರದ ನಾಸಿಕ್, ಮಧ್ಯಪ್ರದೇಶದ ದೇವಾಸ್, ಪಶ್ಚಿಮ ಬಂಗಾಳದ ಸಾಲ್ಬೋನಿಯಲ್ಲಿ ಆರ್‍ಬಿಐ ಮುದ್ರಣ ಘಟಕವನ್ನು ಹೊಂದಿದೆ.