Tag: Nottinghamshire

  • T20 Blast: ವಿಶ್ವಕಪ್‌ಗೂ ಮುನ್ನ ವಿಶ್ವದಾಖಲೆ ಬರೆದ ಅಫ್ರಿದಿ, ಭಾರತಕ್ಕೆ ಎಚ್ಚರಿಕೆ ಗಂಟೆ ಎಂದ ನೆಟ್ಟಿಗರು

    T20 Blast: ವಿಶ್ವಕಪ್‌ಗೂ ಮುನ್ನ ವಿಶ್ವದಾಖಲೆ ಬರೆದ ಅಫ್ರಿದಿ, ಭಾರತಕ್ಕೆ ಎಚ್ಚರಿಕೆ ಗಂಟೆ ಎಂದ ನೆಟ್ಟಿಗರು

    ಲಂಡನ್‌: ಪಾಕಿಸ್ತಾನ ಕ್ರಿಕೆಟ್‌ ತಂಡದ (Pakistan Cricket) ಯಾರ್ಕರ್‌ ಸ್ಪೆಷಲಿಸ್ಟ್‌ ಶಾಹೀನ್‌ ಅಫ್ರಿದಿ T20 ಬ್ಲಾಸ್ಟ್‌ (T20 Blast) ಟೂರ್ನಿಯಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್‌ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ದುರದೃಷ್ಟವಶಾತ್‌ ಅಫ್ರಿದಿ ಯಾರ್ಕರ್‌ ದಾಳಿಯ ಹೊರತಾಗಿಯೂ ಪಾಕ್‌ ತಂಡ 2 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ.

    ಹೌದು. ಟಿ20 ಬ್ಲಾಸ್ಟ್‌ ಕ್ರಿಕೆಟ್‌ ಟೂರ್ನಿಯ ಪಂದ್ಯದಲ್ಲಿ ನಾಟಿಂಗ್ಹ್ಯಾಮ್ ಶೈರ್ (Nottinghamshire) ಪರ ಪ್ರತಿನಿಧಿಸಿದ್ದ ಎಡಗೈ ಅಫ್ರಿದಿ, ಮೊದಲ ಓವರ್‌ನಲ್ಲೇ ಅಲೆಕ್ಸ್ ಡೇವಿಡ್ಸ್(0), ಕ್ರಿಸ್ ಬೆನ್ಜಮಿನ್‌(0), ಡ್ಯಾನ್ ಮೌಸ್ಲಿ(1) ಹಾಗೂ ಎಡ್ ಬೆರ್ನಾರ್ಡ್‌(0) ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಟಿ20‌ ಕ್ರಿಕೆಟ್‌ನಲ್ಲಿ ಧೂಳೆಬ್ಬಿಸಿದ್ದಾರೆ. ಇದರೊಂದಿಗೆ ಒಂದೇ ಓವರ್‌ನಲ್ಲಿ 4 ವಿಕೆಟ್‌ ಕಿತ್ತ ಮೊದಲ ವೇಗಿ ಎಂಬ ವಿಶ್ವದಾಖಲೆಯನ್ನೂ ಬರೆದಿದ್ದಾರೆ. ಇದನ್ನೂ ಓದಿ: Byju’sಗೆ ಗುಡ್‌ಬೈ – Dream11 ತೆಕ್ಕೆಗೆ ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಕತ್ವ

    ಬ್ಯಾಟಿಂಗ್‌ನಲ್ಲಿ ನೀರಸ ಪ್ರದರ್ಶನ ತೋರಿದರೂ ಬೌಲಿಂಗ್‌ನಲ್ಲಿ 4 ಓವರ್‌ಗಳಲ್ಲಿ 29 ರನ್‌ ನೀಡಿ 4 ವಿಕೆಟ್‌ ಕಿತ್ತರು. ಶಾಹೀನ್‌ ವಿಕೆಟ್‌ ಪಡೆದ ವೀಡಿಯೋ ತುಣುಕು ಇದೀಗ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ನಾಟಿಂಗ್ಹ್ಯಾಮ್ ಶೈರ್​ 20 ಓವರ್‌ಗಳಲ್ಲಿ 168ಕ್ಕೆ ಆಲೌಟ್​ ಆಯಿತು. 169 ರನ್‌ಗಳ ಗುರಿ ಬೆನ್ನಟ್ಟಿದ ಬರ್ಮಿಂಗ್‌ಹ್ಯಾಮ್‌ ಬೇರ್ಸ್‌ ತಂಡವು 19.1 ಓವರ್​ಗಳಲ್ಲೇ 8 ವಿಕೆಟ್​ಗೆ 172 ರನ್​ ಗಳಿಸಿ ಗೆಲುವು ಸಾಧಿಸಿತು. ಸೋಲು ಕಂಡ ನಾಟಿಂಗ್‌ಹ್ಯಾಮ್‌ಶೈರ್ ತಂಡವು ಕ್ವಾರ್ಟರ್ವ್‌ ಫೈನಲ್‌ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು. ಇದನ್ನೂ ಓದಿ: ಪಾಕಿಸ್ತಾನ ವಿಶ್ವಕಪ್‌ ಟೂರ್ನಿಗೆ ಬಾರದಿದ್ರೆ ICC ಬಳಿಯಿದೆ ಮಾಸ್ಟರ್‌ ಪ್ಲ್ಯಾನ್‌ – ಇದರಿಂದ ಯಾರಿಗೆ ನಷ್ಟ?

    ಟೀಂ ಇಂಡಿಯಾಕ್ಕೆ ಎಚ್ಚರಿಕೆ ಗಂಟೆ:
    ಅ.5 ರಿಂದ ನ.19ರ ವೆರೆಗೆ ಭಾರತದಲ್ಲಿ ಆಯೋಜನೆಗೊಂಡಿರುವ ವಿಶ್ವಕಪ್‌ ಟೂರ್ನಿಗೆ (ICC World Cup) ಪಾಕಿಸ್ತಾನ ಬರುವ ನೀರಿಕ್ಷೆಯಲ್ಲಿದೆ. ನಿಗದಿತ ವೇಳಾಪಟ್ಟಿಯಂತೆ ಭಾರತದ 5 ಪ್ರಮುಖ ನಗರಗಳಲ್ಲಿ ಪಾಕಿಸ್ತಾನ 9 ಪಂದ್ಯಗಳನ್ನಾಡಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್​ ಲೀಗ್​ ಪಂದ್ಯ ಅ. 15ರಂದು ಅಹಮದಾಬಾದ್​ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯಲಿದ್ದು, ಈ ಪಂದ್ಯವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

    ಇದೀಗ ಶಾಹೀನ್ ಅಫ್ರಿದಿ ಬೌಲರ್​ ಕಂಡ ಕೆಲವರು ಏಕದಿನ ವಿಶ್ವಕಪ್​ನಲ್ಲಿ ಇದು ಎಚ್ಚರಿಕೆ ಗಂಟೆಯಾಗಿದೆ ಎಂದು ಬಣ್ಣಿಸಿದ್ದಾರೆ. ಏಕೆಂದರೆ 2021ರ ಟಿ20 ವಿಶ್ವಕಪ್‌ ಟೂರ್ನಿಯಲ್ಲೂ‌ ಮೊದಲ ಓವರ್‌ನಲ್ಲೇ ಕೆ.ಎಲ್‌ ರಾಹುಲ್‌ ಹಾಗೂ ರೋಹಿತ್‌ ಶರ್ಮಾ ಅವರ ವಿಕೆಟ್‌ಗಳನ್ನ ಉರುಳಿಸಿ ಟೀಂ ಇಂಡಿಯಾ ಹೀನಾಯ ಸೋಲಿಗೆ ಕಾರಣವಾಗಿದ್ದರು.

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…

    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 60 ಕೆಜಿ ಕಲ್ಲು ಕಟ್ಟಿ ಬೆಲ್ಜಿಯಂ ಶೆಫರ್ಡ್ ನಾಯಿಯನ್ನು ನದಿಗೆ ಎಸೆದ ಪಾಪಿಗಳು

    60 ಕೆಜಿ ಕಲ್ಲು ಕಟ್ಟಿ ಬೆಲ್ಜಿಯಂ ಶೆಫರ್ಡ್ ನಾಯಿಯನ್ನು ನದಿಗೆ ಎಸೆದ ಪಾಪಿಗಳು

    – ನಾಯಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಮಹಿಳೆ

    ಲಂಡನ್: ಬೆಲ್ಜಿಯಂ ಶೆಫರ್ಡ್ ನಾಯಿಯೊಂದಕ್ಕೆ ಪಾಪಿಗಳು 60 ಕೆಜಿ ಕಲ್ಲು ಕಟ್ಟಿ ನದಿಗೆ ಎಸೆದ ಅಮಾನವೀಯ ಘಟನೆ ಇಂಗ್ಲೆಂಡ್‍ನಲ್ಲಿ ನಡೆದಿದೆ.

    ಪಾಪಿಗಳು ಇಂಗ್ಲೆಂಡ್‍ನ ಮೂರನೇ ಅತಿದೊಡ್ಡ ನದಿ ಟ್ರೆಂಟ್‍ಗೆ ನಾಯಿಯನ್ನು ಎಸೆದಿದ್ದರು. ಸಾವು ಬದುಕಿನ ಮಧ್ಯೆ ನಾಯಿ ಹೋರಾಟ ನಡೆಸಿತ್ತು. ಇದನ್ನು ನೋಡಿದ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಹಾಗೂ ಆಕೆಯ ಪತಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

    ನಾಯಿಯ ಕಾಲಿಗೆ ಪಾಪಿಗಳು 50ರಿಂದ 60 ಕೆಜಿ ತೂಕದ ಕಲ್ಲು ಕಟ್ಟಿದ್ದರು. ಹೀಗಾಗಿ ನಾಯಿಗೆ ನದಿಯಲ್ಲಿ ಈಜಿ ದಡ ಸೇರಲು ಸಾಧ್ಯವಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ನಾಯಿಯನ್ನು ರಕ್ಷಣೆ ಮಾಡಿದ ಜೇನ್ ಹಾರ್ಪರ್ ನೀಡಿದ ಪ್ರಕಾರ, ಅವರು ಸೋಮವಾರ ಬೆಳಗ್ಗೆ 8.45ಕ್ಕೆ ನಾಂಟಿಗ್‍ಹ್ಯಾಮ್‍ಶೈರ್ ನಲ್ಲಿ ವಾಕ್ ಮಾಡುತ್ತಿದ್ದರು. ಆಗ ವಿಚಿತ್ರ ಶಬ್ದ ಕೇಳಿಸಿಕೊಂಡ ಜೇನ್ ಸ್ನೇಹಿತ ಯಾರೋ ನದಿಯ ನೀರಿನಲ್ಲಿ ಮುಳುಗಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದರು. ತಕ್ಷಣವೇ ಜೇನ್ ನದಿಯ ಬಳಿ ಹೋಗಿ ನೋಡಿದಾಗ ನಾಯಿ ಎಂದು ಗೊತ್ತಾಯಿತು. ನೀರಿನಿಂದ ಹೊರಗೆ ತೆಗೆಯದಿದ್ದರೆ ಅದು ಸಾಯುತ್ತದೆ ಎಂದು ಅರಿತ ಜೇನ್ ಸ್ನೇಹಿತ ನೀರಿಗೆ ಹಾರಿ ನಾಯಿಯನ್ನು ಹೊರಗೆ ತರಲು ಪ್ರಯತ್ನಿಸಿದರು. ನಾಯಿಯನ್ನು ದಡಕ್ಕೆ ಎಳೆದ ಜೀನ್, ಅದರ ಕಾಲಿಗೆ ಕಟ್ಟಿದ ಕಲ್ಲನ್ನು ನೋಡಿದರು ಎಂದು ವರದಿಯಾಗಿದೆ.

    ರಕ್ಷಣೆ ಮಾಡಿದ ನಾಯಿಯನ್ನು ತಕ್ಷಣವೇ ಪಶುವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ನಾಯಿ ಚೇತರಿಸಿಕೊಳ್ಳುತ್ತಿದೆ. ಇತ್ತ ಪೊಲೀಸರು ನಾಯಿಯನ್ನು ನೀರಿಗೆ ಎಸೆದ ಪಾಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ನಾಂಟಿಗ್‍ಹ್ಯಾಮ್‍ಶೈರ್ ಪೊಲೀಸ್ ಅಧಿಕಾರಿ ಪಿಸಿ ಆಡಮ್ ಪೇಸ್, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ನಾಯಿಯನ್ನು ಸ್ನೇಹಿತರಿಬ್ಬರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ನಾಯಿಯ ಸ್ಥಿತಿ ಗಂಭೀರವಾಗಿದೆ. ಆದಾಗ್ಯೂ ಅದು ಸ್ವಲ್ಪ ಆಹಾರವನ್ನು ತಿನ್ನುವ ಮೂಲಕ ಬದುಕುತ್ತದೆ ಎನ್ನುವ ವಿಶ್ವಾಸವನ್ನು ತೋರಿಸಿದೆ ಎಂದು ತಿಳಿಸಿದ್ದಾರೆ.