Tag: NPP

  • ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

    ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

    ಶಿಲ್ಲಾಂಗ್: ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ (Conrad Sangma) ಅವರು ಮಂಗಳವಾರ ಮೇಘಾಲಯದ ಮುಖ್ಯಮಂತ್ರಿಯಾಗಿ (Meghalaya CM) ಸತತ 2ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.

    ಫೆಬ್ರವರಿ 27 ರಂದು ನಡೆದ ಚುನಾವಣೆಯಲ್ಲಿ ಸಂಗ್ಮಾ ನೇತೃತ್ವದ ಎನ್‌ಪಿಪಿ 26 ಸ್ಥಾನಗಳನ್ನು ಗೆದ್ದಿತ್ತು. ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಇತರ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

    ಸಂಗ್ಮಾ ನೇತೃತ್ವದ ಮೇಘಾಲಯದ ಹೊಸ ಸರ್ಕಾರದಲ್ಲಿ ಅವರ ಪಕ್ಷದಿಂದ 8 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಮಿತ್ರಪಕ್ಷಗಳಿಂದ 4 ಸಚಿವ ಸ್ಥಾನಗಳಿವೆ. ಎನ್‌ಪಿಪಿಯ ಮಿತ್ರ ಪಕ್ಷ ಯುಡಿಪಿ ಇಬ್ಬರು ಸಚಿವರನ್ನು ಹೊಂದಿದ್ದರೆ, ಬಿಜೆಪಿ ಮತ್ತು ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (HSPDP) ತಲಾ ಒಬ್ಬೊಬ್ಬರು ಸಚಿವರು ಇದ್ದಾರೆ. ಇದನ್ನೂ ಓದಿ: ಹೋಳಿ ಬಣ್ಣ ತಾಗಬಾರದೆಂದು ಇಡೀ ಮಸೀದಿಯನ್ನೇ ಟಾರ್ಪಲ್‌ನಿಂದ ಮುಚ್ಚಿದ್ರು

    60 ಸದಸ್ಯ ಬಲದ ವಿಧಾನಸಭೆ ಇರುವ ಮೇಘಾಲಯದಲ್ಲಿ ಎನ್‌ಪಿಪಿಗೆ ಪ್ರಸ್ತುತ 45 ಶಾಸಕರ ಬೆಂಬಲವಿದೆ. ಇತ್ತೀಚೆಗೆ ನಡೆದ ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಎನ್‌ಪಿಪಿ 26 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿದೆ. ಯುಡಿಪಿ 11 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ, ಹೆಚ್‌ಎಸ್‌ಪಿಡಿಪಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ (PDF) ತಲಾ 2 ಸ್ಥಾನಗಳನ್ನು ಪಡೆದಿವೆ. ಇಬ್ಬರು ಪಕ್ಷೇತರ ಶಾಸಕರು ಕೂಡಾ ಸಂಗ್ಮಾಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು!

  • ಉಗ್ರರಿಂದ ಹಾಲಿ ಶಾಸಕ ಸೇರಿ 7 ಜನರ ಬರ್ಬರ ಹತ್ಯೆ

    ಉಗ್ರರಿಂದ ಹಾಲಿ ಶಾಸಕ ಸೇರಿ 7 ಜನರ ಬರ್ಬರ ಹತ್ಯೆ

    ಇಟಾನಗರ್: ಅರುಣಾಚಲ ಪ್ರದೇಶದ ಬೋಗಾಪನಿ ಎಂಬಲ್ಲಿ ಉಗ್ರರ ಗುಂಡಿನ ದಾಳಿಗೆ ಸ್ಥಳೀಯ ಎನ್‍ಪಿಪಿ ಶಾಸಕ ತಿರಾಂಗ್ ಅಬೋಹ್ ಸೇರಿದಂತೆ ಏಳು ಜನರು ಮೃತಪಟ್ಟಿದ್ದಾರೆ.

    ತಿರಾಂಗ್ ಅಬೋಹ್ ಅವರು ಕೋನ್ಸಾ ದಕ್ಷಿಣ ಕ್ಷೇತ್ರದಿಂದ ಎನ್‍ಪಿಪಿ ಪಕ್ಷದ ಶಾಸಕರಾಗಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರದಿಂದ ಸ್ಪರ್ಧಿಸಿದ್ದರು. ಫಲಿತಾಂಶಕ್ಕೆ ಎರಡು ದಿನ ಬಾಕಿ ಇರುವಾಗಲೇ ತಿರಾಂಗ್ ಅಬೋಹ್ ಅವರು ಉಗ್ರರು ಅಟ್ಟಹಾಸಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ.

    ಶಾಸಕ ತಿರಾಂಗ್ ಅಬೋಹ್ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಬೋಗಾಪನಿ ಎಂಬಲ್ಲಿ ಶಾಸಕರ ಕಾರನ್ನು ತಡೆದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ತಿರಾಂಗ್ ಅಬೋಹ್ ಸೇರಿದಂತೆ 7 ಜನರು ಮೃತಪಟ್ಟಿದ್ದಾರೆ.

    ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಲ್ಯಾಂಡ್ (ಎನ್‍ಎಸ್‍ಸಿಎನ್) ಸಂಘನೆಯ ಉಗ್ರರು ಈ ದಾಳಿ ನಡೆಸಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ತಿರಾಂಗ್ ಅಬೋಹ್ ಅವರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

    ಕೋನ್ಸಾ ದಕ್ಷಿಣ ಕ್ಷೇತ್ರದಲ್ಲಿ ನ್ಯಾಯಯುತ ಚುನಾವಣೆಯಾಗಿಲ್ಲ. ಹೀಗಾಗಿ ಮರು ಚುನಾವಣೆ ನಡೆಸಬೇಕು ಎಂದು ತಿರಾಂಗ್ ಅಬೋಹ್ ಅವರು, ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದರು. ಈ ಕಾರಣಕ್ಕೆ ಗುಂಡಿನ ದಾಳಿ ಮಾಡಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.

    ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಕೆ.ಸಂಗ್ಮಾ ಅವರು, ಶಾಸಕ ತಿರಾಂಗ್ ಅಬೋಹ್ ಅವರ ಸಾವಿನ ಸುದ್ದಿಯಿಂದ ಎದೆ ಭಾರವಾಗಿದೆ. ಶಾಸಕರ ಕುಟುಂಬದವರಿಗೆ ಹಾಗೂ ಸಂಬಂಧಿಕರಿಗೆ ನೋವು ತಡೆದುಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.