Tag: NR Santosh

  • ಶಿವಲಿಂಗೇಗೌಡರಿಂದ ಗೂಂಡಾಗಿರಿ: ಎನ್.ಆರ್.ಸಂತೋಷ್

    ಶಿವಲಿಂಗೇಗೌಡರಿಂದ ಗೂಂಡಾಗಿರಿ: ಎನ್.ಆರ್.ಸಂತೋಷ್

    ಹಾಸನ: ಅರಸೀಕೆರೆಯಲ್ಲಿ ಮತ್ತೆ ಶಾಸಕ ಶಿವಲಿಂಗೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ನಡುವಿನ ಜಗಳ ತಾರಕಕ್ಕೇರುತ್ತಿದ್ದು, ಇಬ್ಬರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಶಾಸಕರು ತಮ್ಮ ಬೆಂಬಲಿಗರ ಮೂಲಕ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಸಂತೋಷ್ ಆರೋಪಿಸಿದ್ದಾರೆ

    ಅರಸೀಕೆರೆಯ ಬೈರಗೊಂಡನಹಳ್ಳಿ ಬೋವಿ ಕಾಲೋನಿಯಲ್ಲಿ ಆನಂದ್ ಮತ್ತು ಉಮೇಶ್ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಉಮೇಶ್ ಜಯಶಾಲಿಯಾಗಿದ್ದರು. ನಂತರ ಜೆಡಿಎಸ್ ಮತ್ತು ಬಿಜೆಪಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಬೆಂಬಲಿಗರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಆಗಮಿಸಿದ ಎನ್.ಆರ್.ಸಂತೋಷ್, ಶಾಸಕ ಶಿವಲಿಂಗೇಗೌಡ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಫಲಿತಾಂಶ ಬಂದ ನಂತರ ಬಿಜೆಪಿ ಬೆಂಬಲಿಗರ ಮೇಲೆ ಶಾಸಕರು ಗೂಂಡಾಗಿರಿ ಮಾಡುವ ಕೆಲಸ ಮಾಡಿದ್ದಾರೆ. ನಮ್ಮ ಬೆಂಬಲಿಗರ ಕೈ ಮೂಳೆ ಮುರಿದು, ತಲೆ ಒಡೆದಿದ್ದಾರೆ. ವೈದ್ಯಕೀಯ ಸಿಬ್ಬಂದಿ ಮಾತ್ರ ಡಿಸ್ಚಾರ್ಜ್ ಮಾಡಿ ಏನೂ ಆಗಿಲ್ಲ ಅಂತಿದ್ದಾರೆ. ಅವರಿಗೆ ಸರಿಯಾದ ಆಹಾರ ಒದಗಿಸುತ್ತಿಲ್ಲ. ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ನಾವು ಆಸ್ಪತ್ರೆಗೆ ಬಂದ ನಂತರ ನಮ್ಮ ಮೇಲೂ ಗಲಾಟೆ ಮಾಡುವ ಉದ್ದೇಶದಿಂದ ಶಾಸಕರು ಆಸ್ಪತ್ರೆಗೆ ಬಂದಿದ್ದಾರೆ ಎಂದರು. ನಮ್ಮ ಕಾರ್ಯಕರ್ತರ ಮೇಲೆ ಮತ್ತೆ ಹಲ್ಲೆ ಆದರೆ ಶಾಸಕರ ಮನೆಮುಂದೆ ಧರಣಿ ಕೂರುತ್ತೇನೆ ಎಂದರು.

    ಇತ್ತ ಸಂತೋಷ್ ಆರೋಪಕ್ಕೆ ಶಾಸಕ ಶಿವಲಿಂಗೇಗೌಡ ಬೆಂಬಲಿಗರು ತಿರುಗೇಟು ನೀಡಿದ್ದು, ಗಲಾಟೆ ಮಾಡಿಕೊಂಡವರನ್ನು ಸಮಾಧಾನ ಮಾಡಲು ಶಾಸಕರು ಮುಂದಾಗಿದ್ದರು. ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಿದಾಗ ಅದೇ ಸಂದರ್ಭದಲ್ಲಿ ಸಂತೋಷ್ ಬಂದು ದೌರ್ಜನ್ಯ ಮಾಡಿದ್ದಾರೆ. ಏಕಾಏಕಿ ಏಕವಚನದಲ್ಲಿ ನಮ್ಮವರನ್ನೆಲ್ಲ ಬೈದಿದ್ದಾರೆ. ಶಾಸಕರು ನಾವು ಆಚೆ ಬರದಂತೆ ಆಸ್ಪತ್ರೆಯ ಗೇಟ್ ಹಾಕಿ ನಿಂದನೆ ಮಾಡಿದ್ದಾರೆ. ನಮ್ಮ ಕಾರ್ ಅಡ್ಡಹಾಕಿ ಎಂದು ಬೆಂಬಲಿಗರಿಗೆ ಹೇಳಿದ್ದಾರೆ. ಮಾತ್ರೆ ನುಂಗಿದ ನಂತರ ಇವರ ತಲೆಯಲ್ಲಿ ಏನೂ ಇಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

  • ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ನೇಮಕ

    ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ನೇಮಕ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ಅವರನ್ನು ನೇಮಕ ಮಾಡಲಿದೆ.

    ಈ ಸಂಬಂಧ ರಾಜ್ಯ ಸರ್ಕಾರದದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಎನ್.ಆರ್.ಸಂತೋಷ್ ಸಿಎಂ ಯಡಿಯೂರಪ್ಪ ಅವರ ಆಪ್ತರಾಗಿದ್ದಾರೆ. ಅದರಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬಿಳಿಸುವಲ್ಲಿ ಸಂತೋಷ್ ಪ್ರಮುಖ ಪಾತ್ರವಹಿಸಿದ್ದರು.

    ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿನ ಅತೃಪ್ತ ಶಾಸಕರನ್ನು ಸಂಪರ್ಕಿಸಿದ್ದ ಬಿಜೆಪಿಯ ನಾಯಕರು, 16 ಅತೃಪ್ತ ಶಾಸಕರನ್ನು ಸೆಳೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸುವಲ್ಲಿ ಸಫಲರಾಗಿದ್ದರು. ಬಳಿಕ ಅವರನ್ನು ಬಿಜೆಪಿ ಹೈಕಮಾಂಡ್ ಸಲಹೆಯಂತೆ ಎನ್.ಆರ್. ಸಂತೋಷ್ ರಾಜ್ಯದಿಂದ ಕರೆದುಕೊಂಡು ಹೋಗಿದ್ದರು. ಆಗ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಸಂತೋಷ್ ಅವರ ವಿರುದ್ಧ ಹರಿಹಾಯ್ದು ಹೇಳಿಕೆಯನ್ನೂ ಕೊಟ್ಟಿದ್ದರು.

    ಕಷ್ಟಕಾಲದಲ್ಲಿ ನೆರವಾದ ಹಾಗೂ ತಾವು ಮತ್ತೆ ಮುಖ್ಯಮಂತ್ರಿಯಾಗಲು ಶ್ರಮಿಸಿದ ಎನ್.ಆರ್. ಸಂತೋಷ್ ಅವರಿಗೆ ಸಿಎಂ ಯಡಿಯೂರಪ್ಪ ಅವರು ಉಡುಗೊರೆ ನೀಡಿದ್ದಾರೆ. ಈಗಾಗಲೇ ಮೂವರು ಸಿಎಂ ಅವರಿಗೆ  ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಇದೀಗ ಯಡಿಯೂರಪ್ಪ ಅವರಿಗೆ 4ನೇ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ಅವರು ನೇಮಕವಾಗಿದ್ದಾರೆ.

    ಈಗಾಗಲೇ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕರಾದ ಎಸ್.ಆರ್.ವಿಶ್ವನಾಥ್, ಎಂ.ಪಿ. ರೇಣುಕಾಚಾರ್ಯ ಮತ್ತು ಶಂಕರ ಗೌಡ ಪಾಟೀಲ್ ಅವರು ನೇಮಕವಾಗಿದ್ದಾರೆ. ಅವರೊಂದಿಗೆ ಇದೀಗ ಎನ್. ಆರ್.ಸಂತೋಷ್ ಕೂಡ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂದಿದ್ದಾರೆ.