Tag: NRI

  • ಕಾರು ಡಿಕ್ಕಿಯಾಗಿ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಸಾವು – NRI ಅರೆಸ್ಟ್, ಕಾರು ಸೀಜ್

    ಕಾರು ಡಿಕ್ಕಿಯಾಗಿ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಸಾವು – NRI ಅರೆಸ್ಟ್, ಕಾರು ಸೀಜ್

    ಚಂಡೀಗಢ: ಕಾರು ಡಿಕ್ಕಿ ಹೊಡೆದು ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ (Fauja Singh) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ ಆರೋಪಿ ಅನಿವಾಸಿ ಭಾರತೀಯ (NRI) ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

    ಅಮೃತ್‌ಪಾಲ್ ಸಿಂಗ್ ಧಿಲ್ಲೋನ್ ಬಂಧಿತ ಅನಿವಾಸಿ ಭಾರತೀಯ. ‘ಟರ್ಬನ್ಡ್ ಟೊರ್ನಾಡೊ’ ಎಂದು ಜನಪ್ರಿಯವಾಗಿರುವ 114 ವರ್ಷದ ಫೌಜಾ ಸಿಂಗ್ ಜಲಂಧರ್‌ನಲ್ಲಿರುವ ತಮ್ಮ ಮನೆಯ ಬಳಿ ಸಂಜೆ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿಂಗ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: 36 ರೂ. ಸಾಕಾಗಲ್ಲ, 40 ರೂ.ಗೆ ದರ ಏರಿಸಬೇಕು – ಜಿಲ್ಲಾಧಿಕಾರಿಗೆ ಆಟೋ ಅಸೋಸಿಯೇಶನ್ ಪತ್ರ

    ಜಲಂಧರ್‌ನ ಕರ್ತಾರ್‌ಪುರದ ಅಮೃತ್‌ಪಾಲ್ ಸಿಂಗ್ ಧಿಲ್ಲೋನ್ ಕೆನಡಾದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದು, ಒಂದು ವಾರದ ಹಿಂದಷ್ಟೇ ಭಾರತಕ್ಕೆ ಬಂದಿದ್ದ. ಸಿಸಿಟಿವಿ ದೃಶ್ಯಗಳನ್ನು ಬಳಸಿಕೊಂಡು ಧಿಲ್ಲೋನ್‌ನ ಕಾರನ್ನು ಗುರುತಿಸಿದ ನಂತರ ಪೊಲೀಸರ ಹಲವಾರು ತಂಡ ಆರೋಪಿಗಾಗಿ ಶೋಧ ನಡೆಸಿತು. ಅಪಘಾತ ಮಾಡಿದ ಫಾರ್ಚೂನರ್ ಕಾರು (Fortuner Car) ಕಪುರ್ತಲಾ ನಿವಾಸಿ ವರೀಂದರ್ ಸಿಂಗ್ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿತ್ತು. ಈ ಹಿನ್ನೆಲೆ ಅವರನ್ನು ವಿಚಾರಿಸಿದಾಗ ಕಾರನ್ನು ಅಮೃತ್‌ಪಾಲ್‌ಗೆ ಮಾರಾಟ ಮಾಡಿರುವುದಾಗಿ ವರೀಂದರ್ ಸಿಂಗ್ ತಿಳಿಸಿದ್ದಾರೆ. ತನಿಖೆ ಬಳಿಕ ಆರೋಪಿ ಅಮೃತ್‌ಪಾಲ್‌ನನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಹಣ ಸಂಗ್ರಹಿಸಿ 3 ಕಿ.ಮೀ. ರಾಜ್ಯ ಹೆದ್ದಾರಿಯ ಗುಂಡಿ ಮುಚ್ಚಿದ ಬೀದರ್‌ ಗ್ರಾಮಸ್ಥರು!

    2000ರಲ್ಲಿ ಮ್ಯಾರಥಾನ್ ಪ್ರಯಾಣ ಆರಂಭಿಸಿದ್ದ ಫೌಜಾ ಸಿಂಗ್, 8 ಮ್ಯಾರಾಥಾನ್‌ಗಳಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತ್ಯಂತ ಹಿರಿಯ ಮ್ಯಾರಾಥಾನ್ ಓಟಗಾರ ಎಂದು ಪ್ರಸಿದ್ಧಿ ಪಡೆದಿದ್ದರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿ ಲಕ್ಷ ಲಕ್ಷ ವಸೂಲಿ – ಡೆತ್‌ನೋಟ್ ಬರೆದಿಟ್ಟು ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ

  • ಕಮಲಾಗೆ ಶಾಕ್‌ – ಟ್ರಂಪ್‌ ಪರ ಅನಿವಾಸಿ ಭಾರತೀಯರ ಒಲವು ಏರಿಕೆ

    ಕಮಲಾಗೆ ಶಾಕ್‌ – ಟ್ರಂಪ್‌ ಪರ ಅನಿವಾಸಿ ಭಾರತೀಯರ ಒಲವು ಏರಿಕೆ

    ವಾಷಿಂಗ್ಟನ್: ಅಮೆರಿಕ ಚುನಾವಣೆಗೆ (USA Election) ದಿನಗಣನೆ ಆರಂಭವಾಗುತ್ತಿದ್ದಂತೆ ಕಮಲಾ ಹ್ಯಾರಿಸ್‌ಗೆ (Kamala Harris) ಅನಿವಾಸಿ ಭಾರತೀಯರು (NRI) ಶಾಕ್‌ ನೀಡುವ ಸಾಧ್ಯತೆ ಹೆಚ್ಚಿದೆ.

    ಹೌದು. ಅನಿವಾಸಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಡೆಮಾಕ್ರಟಿಕ್ (Democratic) ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಅನಿವಾಸಿ ಭಾರತೀಯರ ಒಲವು ರಿಪಬ್ಲಿಕನ್‌ (Republican) ಪಕ್ಷದ ಕಡೆಗೆ ವಾಲಿದೆ. ಹೀಗಿದ್ದರೂ ಒಟ್ಟಾರೆ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್‌ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ.

    ಭಾರತೀಯ ಅಮೆರಿಕರನ್ನು ಗುರಿಯಾಗಿಸಿ ಕಾರ್ನೆಗೀ ಎಂಡೋಮೆಂಟ್‌ ಫಾರ್‌ ಇಂಟರ್‌ನ್ಯಾಷನಲ್ ಪೀಸ್‌’ ಸಂಸ್ಥೆ ನಡೆಸಿದ ಅನ್‌ಲೈನ್ ಸಮೀಕ್ಷೆಯಲ್ಲಿ 61%ರಷ್ಟು ಮಂದಿ ಡೆಮಾಕ್ರಟಿಕ್ ಪಕ್ಷಕ್ಕೆ ಬೆಂಬಲ ನೀಡಿದರೆ 32% ಜನರು ರಿಪಬ್ಲಿಕನ್ ಪಕ್ಷದ ಪರ ಒಲವು ತೋರಿದ್ದಾರೆ.

    2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳ ಕಡೆಗೆ ಭಾರತೀಯರು ಚಲಾಯಿಸಿದ್ದ ಮತಗಳನ್ನು ಲೆಕ್ಕ ಹಾಕಿದಾಗ ಈ ಬಾರಿ ಕಮಲಾ ಹ್ಯಾರಿಸ್ ಪಕ್ಷದ ಪರ ಒಲವು ಸ್ವಲ್ಪ ಇಳಿದಿದ್ದು, ಟ್ರಂಪ್ (Donald Trump) ಪರ ಹೆಚ್ಚು ಮತಗಳು ಬೀಳಬಹುದು ಎಂದು ಸಮೀಕ್ಷೆ ತಿಳಿಸಿದೆ.

    ಸೆಪ್ಟೆಂಬರ್‌ 18ರಿಂದ ಅಕ್ಟೋಬರ್‌ 15ರ ನಡುವೆ 714  ಅನಿವಾಸಿ ಭಾರತೀಯರು ಆನ್‌ಲೈನ್‌ ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು.

    ಅಮೆರಿಕದಲ್ಲಿ ಭಾರತ ಮೂಲದ 52 ಲಕ್ಷ ಜನ ವಾಸವಾಗಿದ್ದು, ಈ ಪೈಕಿ 39 ಲಕ್ಷ ಜನರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಅನಿವಾಸಿ ಭಾರತೀಯರು ಅಮೆರಿಕದಲ್ಲಿ ನೆಲೆಸಿರುವ ಎರಡನೇ ಅತಿ ದೊಡ್ಡ ವಲಸಿಗರ ಗುಂಪಿಗೆ ಸೇರಿದ್ದಾರೆ.

    ನವೆಂಬರ್‌ 5 ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ 96% ರಷ್ಟು ಅನಿವಾಸಿ ಭಾರತೀಯರು ಮತ ಚಲಾಯಿಸುವುದಾಗಿ ತಿಳಿಸಿದ್ದಾರೆ.

     

  • ಒಸಿಐ ಕಾರ್ಡ್ ಹೊಂದಿರುವ ಸಾಗರೋತ್ತರ ಭಾರತೀಯ ನಾಗರಿಕರು ವಿದೇಶಿಗರೇ? ಕೇಂದ್ರ ಸರ್ಕಾರ ಹೇಳೋದೇನು?

    ಒಸಿಐ ಕಾರ್ಡ್ ಹೊಂದಿರುವ ಸಾಗರೋತ್ತರ ಭಾರತೀಯ ನಾಗರಿಕರು ವಿದೇಶಿಗರೇ? ಕೇಂದ್ರ ಸರ್ಕಾರ ಹೇಳೋದೇನು?

    – ಯಾರೀ ಸಾಗರೋತ್ತರ ಭಾರತೀಯ ಸಮುದಾಯ?
    – ಒಸಿಐ ಕಾರ್ಡ್ ಇದ್ರೆ ಭಾರತದಲ್ಲಿ ಸಿಗುವ ಸೌಲಭ್ಯಗಳೇನು?

    ದೇಶದಲ್ಲಿ ಸಾಗರೋತ್ತರ ಭಾರತೀಯ ನಾಗರಿಕರ (OCI) ವಿಚಾರ ಚರ್ಚೆಯಲ್ಲಿದೆ. ಒಸಿಐ ಕಾರ್ಡ್‌ಗಳನ್ನು ಹೊಂದಿರುವವರನ್ನು ವಿದೇಶಿಗರು ಎಂದು ಪರಿಗಣಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ವದಂತಿ ದೇಶದೆಲ್ಲೆಡೆ ಚರ್ಚೆ ಹುಟ್ಟುಹಾಕಿತು. ವದಂತಿ ಹರಡಿದ ಬೆನ್ನಲ್ಲೇ ಸಾಗರೋತ್ತರ ಭಾರತೀಯ ಸಮುದಾಯವು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು. ವದಂತಿಗಳನ್ನು ವಿದೇಶಾಂಗ ಇಲಾಖೆ ಅಲ್ಲಗಳೆಯಿತು. ಅಂತಹ ಯಾವುದೇ ಚಿಂತನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿತು.

    ಅಷ್ಟಕ್ಕೂ ಒಸಿಐ ಕಾರ್ಡ್ ಎಂದರೇನು? ಈ ಕಾರ್ಡ್‌ಗಳ ಅನುಕೂಲತೆಗಳೇನು? ಒಸಿಐಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ನಿಯಮಗಳೇನು? ಇದು ಒಸಿಐ ನಿಯಮಗಳಿಗೆ ಮಾಡಿದ ಮೊದಲ ಬದಲಾವಣೆಯೇ?

    ಏನಿದು ಒಸಿಐ ಕಾರ್ಡ್?
    2005 ರ ಆಗಸ್ಟ್‌ನಲ್ಲಿ ಇದನ್ನು ಪರಿಚಯಿಸಲಾಯಿತು. ಈ ಕಾರ್ಡ್‌ಗಳನ್ನು ಸಾಗರೋತ್ತರ ಭಾರತೀಯ ಸಮುದಾಯದವರಿಗೆ ನೀಡಲಾಗುತ್ತದೆ. ಭಾರತೀಯ ಮೂಲದವರಾಗಿದ್ದು, ವಿದೇಶಗಳಲ್ಲಿ ನೆಲೆಸಿರುವವರಿಗೆ ದ್ವಿಪೌರತ್ವ ಕಲ್ಪಿಸುವುದೇ ಈ ಕಾರ್ಡ್‌ಗಳ ಮುಖ್ಯ ಉದ್ದೇಶವಾಗಿದೆ. 1950ರ ಜನವರಿ 26 ರಂದು ಭಾರತದ ಪ್ರಜೆಗಳಾಗಿದ್ದ ಅಥವಾ ಆ ದಿನಾಂಕದಂದು ಭಾರತದ ಪ್ರಜೆಗಳಾಗಲು ಅರ್ಹರಾಗಿದ್ದ ಭಾರತೀಯ ಮೂಲದ ಎಲ್ಲಾ ವ್ಯಕ್ತಿಗಳಿಗೆ ಒಸಿಐ ಯೋಜನೆಯು ನೋಂದಣಿಗೆ ಅವಕಾಶ ಕಲ್ಪಿಸಿತ್ತು. 2005ರ ಸಂದರ್ಭದಲ್ಲಿ ಸಂಸತ್ ಅಧಿವೇಶನದಲ್ಲಿ ಎಲ್.ಕೆ.ಅಡ್ವಾಣಿ ಶಾಸನ ಮಂಡಿಸಿದ್ದರು. ಈ ವೇಳೆ ಮಾತನಾಡಿದ ಅವರು, ಭಾರತೀಯ ವಲಸೆಗಾರರಿಗೆ ದ್ವಿಪೌರತ್ವ ಪರಿಚಯಿಸುವುದೇ ಮಸೂದೆಯ ಮುಖ್ಯ ಉದ್ದೇಶ ಎಂದಿದ್ದರು.

    ಒಸಿಐ ಕಾರ್ಡ್ ಹೊಂದಿರುವವರು, ಮೂಲಭೂತವಾಗಿ ವಿದೇಶಿ ಪಾಸ್‌ಪೋರ್ಟ್ ಹೊಂದಿರುವವರು ಭಾರತಕ್ಕೆ ಭೇಟಿ ನೀಡಲು ಬಹು ಉದ್ದೇಶದ ಜೀವಿತಾವಧಿಯ ವೀಸಾವನ್ನು ಪಡೆಯುತ್ತಾರೆ. ದೇಶದಲ್ಲಿ ಯಾವುದೇ ಅವಧಿಯವರೆಗೆ ಸ್ಥಳೀಯ ಪೊಲೀಸ್ ಪ್ರಾಧಿಕಾರದಲ್ಲಿ ನೋಂದಣಿಯಿಂದ ವಿನಾಯಿತಿ ಪಡೆದಿರುತ್ತಾರೆ. ಆರಂಭದಲ್ಲಿ ಒಸಿಐ ಕಾರ್ಡ್ ಹೊಂದಿರುವವರು ಕೃಷಿ ಅಥವಾ ತೋಟದ ಆಸ್ತಿಗಳ ಸ್ವಾಧೀನಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ, ಆರ್ಥಿಕ, ಹಣಕಾಸು ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಸಂಬಂಧ ಅನಿವಾಸಿ ಭಾರತೀಯರೊಂದಿಗೆ (ಎನ್‌ಆರ್‌ಐ) ಸಾಮಾನ್ಯ ಸಮಾನತೆಗೆ ಅರ್ಹರಾಗಿದ್ದರು. ಎನ್‌ಆರ್‌ಐಗಳು ವಿದೇಶಿ ರಾಜ್ಯದ ಖಾಯಂ ನಿವಾಸಿಗಳಾಗಿರುವ ಭಾರತೀಯ ನಾಗರಿಕರು.

    ಕಾರ್ಡ್‌ನಿಂದ ಸಿಗುವ ಅನುಕೂಲಗಳೇನು?
    ಒಸಿಐ ಕಾರ್ಡ್‌ಗಳನ್ನು ಹೊಂದಿರುವವರಿಗೆ, ಅದರಲ್ಲೂ ಮುಖ್ಯವಾಗಿ ವಿದೇಶಿಗಳ ಪಾಸ್‌ಪೋರ್ಟ್ ಹೊಂದಿರುವವರಿಗೆ ಭಾರತಕ್ಕೆ ಹಲವು ಬಾರಿ ಬಂದು ಹೋಗಲು ವೀಸಾ ಸಿಗುತ್ತದೆ. ಆಜೀವ ಪರ್ಯಂತ ಈ ಸೌಲಭ್ಯ ಅವರಿಗೆ ಸಿಗುತ್ತದೆ. ಇಲ್ಲದಿದ್ದರೆ, ಭಾರತದಲ್ಲಿ ವೀಸಾ ಅವಧಿ ಮೀರಿದ ಬಳಿಕ ತುಂಬಾ ದಿನ ಉಳಿದಿದ್ದರೆ ಪೊಲೀಸ್ ಠಾಣೆ ಮೆಟ್ಟಿಲೇರಬೇಕಾಗುತ್ತದೆ. ತಾವು ಯಾವ ಕಾರಣಕ್ಕಾಗಿ ಉಳಿದಿದ್ದೇವೆ, ಎಷ್ಟು ದಿನ ಉಳಿದುಕೊಳ್ಳುತ್ತೇವೆ ಎಂಬ ವಿಚಾರವಾಗಿ ಘೋಷಣಾ ಪತ್ರ ಸಲ್ಲಿಸಬೇಕಾಗುತ್ತದೆ. ಒಸಿಐ ಕಾರ್ಡ್ ಇದ್ದರೆ ಈ ಯಾವ ಪ್ರಮೇಯವೂ ಬರುವುದಿಲ್ಲ.

    ಒಸಿಐಗಳಿಗೆ ಸಂಬಂಧಿಸಿದ ಈಚಿನ ನಿಯಮಗಳೇನು?
    2021ರ ಮಾರ್ಚ್ 4 ರಂದು ಗೃಹ ವ್ಯವಹಾರಗಳ ಸಚಿವಾಲಯವು ಒಸಿಐ ಕಾರ್ಡ್ ಹೊಂದಿರುವವರಿಗೆ ಸಂಬಂಧಿಸಿದ ನಿಯಮಗಳನ್ನು ತಿದ್ದುಪಡಿ ಮಾಡುವ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತು. ಈ ನಿಯಮಗಳು ಒಸಿಐ ಕಾರ್ಡ್ ಹೊಂದಿರುವವರು ಭಾರತದಲ್ಲಿನ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡಲು ಅನುಮತಿಯನ್ನು ಪಡೆಯಬೇಕು. ಜಮ್ಮು ಮತ್ತು ಕಾಶ್ಮೀರ, ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ವಿದೇಶಿ ಪ್ರಜೆಗಳಿಗೂ ಇದೇ ನಿರ್ಬಂಧಗಳು ಅನ್ವಯಿಸುತ್ತವೆ. ಯಾವುದೇ ಸಂಶೋಧನೆ ಕೈಗೊಳ್ಳಲು, ಯಾವುದೇ ಮಿಷನರಿ ಅಥವಾ ತಬ್ಲಿಘಿ ಅಥವಾ ಪತ್ರಿಕೋದ್ಯಮ ಕಾರಣಕ್ಕಾಗಿ ಭಾರತದ ಯಾವುದೇ ಪ್ರದೇಶಕ್ಕೆ ಭೇಟಿ ನೀಡಲು ಒಸಿಐಗಳಿಗೆ ವಿಶೇಷ ಪರವಾನಗಿಯನ್ನು ಪಡೆಯುವ ಅವಶ್ಯಕತೆ ಸೇರಿದಂತೆ ಹೊಸ ನಿರ್ಬಂಧಗಳ ಸರಣಿಯನ್ನು ಪರಿಚಯಿಸಲಾಯಿತು.

    ಇದು ಒಸಿಐ ನಿಯಮಗಳಿಗೆ ಮಾಡಿದ ಮೊದಲ ಬದಲಾವಣೆಯೇ?
    ಇಲ್ಲ, 2021 ರ ಅಧಿಸೂಚನೆಯು 2005ರ ಏಪ್ರಿಲ್ 11, 2007ರ ಜನವರಿ 5 ಮತ್ತು 2009ರ ಜನವರಿ 5 ರಂದು ನೀಡಲಾದ ಮೂರು ಹಿಂದಿನ ಅಧಿಸೂಚನೆಗಳನ್ನು ರದ್ದುಗೊಳಿಸಿತು. ಇದು ಒಸಿಐಗಳ ಹಕ್ಕುಗಳನ್ನು ನಿಗದಿಪಡಿಸಿತು. 2005ರ ಏಪ್ರಿಲ್ 11 ರಂದು ಹೊರಡಿಸಲಾದ ಆದೇಶವು ಒಸಿಐಗಳಿಗೆ ಜೀವಿತಾವಧಿಯ ವೀಸಾಗಳನ್ನು ಸಕ್ರಿಯಗೊಳಿಸಿತು. ಯಾವುದೇ ಅವಧಿಯ ವಾಸ್ತವ್ಯಕ್ಕಾಗಿ ಎಫ್‌ಆರ್‌ಆರ್‌ಒ ನೋಂದಣಿಯಿಂದ ವಿನಾಯಿತಿ ನೀಡಲಾಯಿತು.

    2009ರ ಜನವರಿಯಲ್ಲಿ ಒಂದಷ್ಟು ತಿದ್ದುಪಡಿ ಮಾಡಲಾಯಿತು. ಸ್ಮಾರಕಗಳು, ಐತಿಹಾಸಿಕ ಸ್ಥಳಗಳು, ವಸ್ತುಸಂಗ್ರಹಾಲಯಗಳಲ್ಲಿ ಪ್ರವೇಶ ಶುಲ್ಕ ಮತ್ತು ವೈದ್ಯರು, ಸಿಎಗಳು, ವಕೀಲರು ಹಾಗೂ ವಾಸ್ತುಶಿಲ್ಪಿಗಳಂತಹ ವೃತ್ತಿಗಳಿಗೆ ಸಂಬಂಧಿಸಿದಂತೆ ಎನ್‌ಆರ್‌ಐಗಳಂತೆಯೇ ಒಸಿಐಗಳಿಗೂ ಸಮಾನ ಅವಕಾಶ ಕಲ್ಪಿಸಲು ತಿದ್ದುಪಡಿ ಮಾಡಲಾಯಿತು.

    ಯಾರು ಒಸಿಐ ಆಗಲು ಸಾಧ್ಯವಿಲ್ಲ?
    ಅರ್ಜಿದಾರನು ಅವನ/ಅವಳ ಪೋಷಕರು ಅಥವಾ ಅಜ್ಜ/ಅಜ್ಜಿಯರು ಪಾಕಿಸ್ತಾನ ಅಥವಾ ಬಾಂಗ್ಲಾದೇಶದ ಪ್ರಜೆಯಾಗಿದ್ದರೆ ಒಸಿಐ ಕಾರ್ಡ್ ಪಡೆಯಲು ಅರ್ಹರಾಗಿರುವುದಿಲ್ಲ. ಸೇವೆಯಲ್ಲಿರುವ ಅಥವಾ ನಿವೃತ್ತರಾಗಿರುವ ವಿದೇಶಿ ಸೇನಾ ಸಿಬ್ಬಂದಿಯೂ ಒಸಿಐ ಕಾರ್ಡ್‌ಗೆ ಅರ್ಹರಾಗಿರುವುದಿಲ್ಲ. ಆದರೆ, ಭಾರತದ ಪ್ರಜೆಯ ವಿದೇಶಿ ಮೂಲದ ಸಂಗಾತಿ ಅಥವಾ ಒಸಿಐ ಕಾರ್ಡ್ ಇರುವವರ ವಿದೇಶಿ ಮೂಲದ ಸಂಗಾತಿಯು ಮದುವೆಯನ್ನು ನೋಂದಾಯಿಸಿ, ಎರಡು ವರ್ಷ ದಾಟಿದ್ದರೆ ಒಸಿಐ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

    ಒಸಿಐ ಕಾರ್ಡ್ ಹೊಂದಿರುವವರಿಗೆ ಯಾವ ಹಕ್ಕಿರಲ್ಲ?
    ಒಸಿಐ ಕಾರ್ಡ್ ಹೊಂದಿರುವವರು ಮತ ಚಲಾಯಿಸಲು ಅರ್ಹರಾಗಿರುವುದಿಲ್ಲ. ವಿಧಾನಸಭೆ, ವಿಧಾನ ಪರಿಷತ್ ಅಥವಾ ಸಂಸತ್ತಿನ ಸದಸ್ಯರಾಗಲು, ರಾಷ್ಟ್ರಪತಿ, ಉಪಾಧ್ಯಕ್ಷ, ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ನ ನ್ಯಾಯಾಧೀಶರಂತಹ ಭಾರತೀಯ ಸಾಂವಿಧಾನಿಕ ಹುದ್ದೆಗಳನ್ನು ಹೊಂದಲು ಅವಕಾಶ ಇರಲ್ಲ. ಸಾಮಾನ್ಯವಾಗಿ ಸರ್ಕಾರಿ ಉದ್ಯೋಗವನ್ನು ಹೊಂದಲು ಕೂಡ ಸಾಧ್ಯವಿಲ್ಲ.

    ಸರ್ಕಾರಿ ದಾಖಲೆಗಳು ಏನು ಹೇಳುತ್ತವೆ?
    ಕೇಂದ್ರ ಸರ್ಕಾರದ ಮಾಹಿತಿಯ ಪ್ರಕಾರ, 2023ರ ಹೊತ್ತಿಗೆ ಭಾರತ ಸರ್ಕಾರದಿಂದ 129 ದೇಶಗಳಲ್ಲಿರುವ 45 ಲಕ್ಷ ಸಾಗರೋತ್ತರ ಭಾರತೀಯ ನಾಗರಿಕರು ಒಸಿಐ ಕಾರ್ಡ್‌ಗಳನ್ನು ನೀಡಲಾಗಿದೆ. ಈ ಕಾರ್ಡ್‌ಗಳನ್ನು ಹೆಚ್ಚಾಗಿ ಪಡೆದಿರುವುದು ಅಮೆರಿಕದಲ್ಲಿರುವ ಭಾರತೀಯರು. ಅಲ್ಲಿರುವ 16.8 ಲಕ್ಷ ಭಾರತೀಯರಿಗೆ ಒಸಿಐ ಕಾರ್ಡ್‌ಗಳನ್ನು ನೀಡಲಾಗಿದೆ. ಆನಂತರದ ಸ್ಥಾನಗಳಲ್ಲಿ ಯುಕೆಯಲ್ಲಿರುವ ಭಾರತೀಯರು (4.94) ಹಾಗೂ ಕೆನಡಾ (4.18 ಲಕ್ಷ) ಮಂದಿ ಈ ಕಾರ್ಡ್‌ಗಳನ್ನು ಪಡೆದಿದ್ದಾರೆ.

  • ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?

    ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?

    – 7,000 ಕೋಟಿ ಮೌಲ್ಯದ ಸ್ಥಿರ ಠೇವಣಿ ಹೊಂದಿರುವ ಗ್ರಾಮಸ್ಥರು

    ಗಾಂಧಿನಗರ: ಗುಜರಾತ್‌ನ (Gujarat) ಕಛ್‌ನಲ್ಲಿರುವ ಮಾಧಾಪರ್ (Madhapar) ಗ್ರಾಮವು ‘ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಗಳು ಹೇಳಿವೆ.

    ಗುಜರಾತ್ ಪ್ರಮುಖ ವ್ಯಾಪಾರ ತಾಣಗಳಲ್ಲಿ ಒಂದಾಗಿದೆ. ಇಲ್ಲಿನ ಭುಜ್‌ನ ಹೊರವಲಯದಲ್ಲಿರುವ ಮಾಧಾಪರ್ ಗ್ರಾಮದ ನಿವಾಸಿಗಳು 7,000 ಕೋಟಿ ಮೌಲ್ಯದ ಸ್ಥಿರ ಠೇವಣಿಯನ್ನು ಹೊಂದಿದ್ದಾರೆ. ಮಾಧಾಪರ್‌ನಲ್ಲಿ ‘ಪಟೇಲ್’ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಈ ಗ್ರಾಮದ ಜನಸಂಖ್ಯೆಯು ಸುಮಾರು 32,000 ಎಂದು ಅಂದಾಜಿಸಲಾಗಿದೆ. 2011ರಲ್ಲಿ ಈ ಗ್ರಾಮದ ಜನಸಂಖ್ಯೆ 17,000 ಆಗಿತ್ತು. ಇದನ್ನೂ ಓದಿ: ಡೆಮಾಕ್ರಟಿಕ್ ಪಕ್ಷದ ಸಭೆಯಲ್ಲಿ ವೇದಮಂತ್ರಗಳ ಸದ್ದು – ಅಮೆರಿಕದಲ್ಲಿ ಬೆಂಗಳೂರು ಅರ್ಚಕರಿಂದ ವಿಶೇಷ ಪ್ರಾರ್ಥನೆ!

    ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸ್‌ಬಿಐ, ಪಿಎನ್‌ಬಿ, ಆ್ಯಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಮುಂತಾದ ಪ್ರಮುಖ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳನ್ನು ಒಳಗೊಂಡಂತೆ ಒಟ್ಟು 17 ಬ್ಯಾಂಕ್‌ಗಳು ಈ ಒಂದೇ ಗ್ರಾಮದಲ್ಲಿದೆ. ಇಷ್ಟು ಮಾತ್ರವಲ್ಲದೇ ಇನ್ನೂ ಹೆಚ್ಚಿನ ಬ್ಯಾಂಕ್‌ಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಆಸಕ್ತಿ ಹೊಂದಿವೆ. ಇದನ್ನೂ ಓದಿ: ನಾಡದೇವಿ ಭುವನೇಶ್ವರಿ ಪ್ರತಿಮೆ ಸಿದ್ಧಗೊಳ್ಳುತ್ತಿರುವ ಸ್ಥಳಕ್ಕೆ ಸಚಿವ ತಂಗಡಗಿ ಭೇಟಿ, ಪರಿಶೀಲನೆ

    ಈ ಬೆಳವಣಿಗೆಗೆ ಕಾರಣ ವಿದೇಶದಲ್ಲಿರುವ ಅನಿವಾಸಿ ಭಾರತೀಯರು. ಈ ಗ್ರಾಮದ ಅನೇಕರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿವರ್ಷ ಕೋಟಿಗಟ್ಟಲೆ ಹಣವನ್ನು ತಮ್ಮ ಗ್ರಾಮದ ಬ್ಯಾಂಕ್‌ಗಳಲ್ಲಿ ಠೇವಣಿ ಇಡುತ್ತಾರೆ. ಗ್ರಾಮವು ಸುಮಾರು 20,000 ಮನೆಗಳನ್ನು ಹೊಂದಿದೆ. ಅದರಲ್ಲಿ 1,200 ಕುಟುಂಬಗಳು ವಿದೇಶದಲ್ಲಿ ವಾಸಿಸುತ್ತಿವೆ. ಈ ಪೈಕಿ ಆಫ್ರಿಕನ್ ದೇಶಗಳಲ್ಲಿ ಕೆಲಸ ಮಾಡುತ್ತಿರುವವರೇ ಹೆಚ್ಚು. ಇನ್ನೂ ಅನೇಕರು ಯುಕೆ, ಆಸ್ಟ್ರೇಲಿಯಾ, ಅಮೇರಿಕಾ ಮತ್ತು ನ್ಯೂಜಿಲೆಂಡ್‌ನಲ್ಲಿಯೂ ನೆಲೆಸಿದ್ದಾರೆ. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

    ಅನೇಕ ಗ್ರಾಮಸ್ಥರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸಿಸುತ್ತಿದ್ದರೂ ತಮ್ಮ ಗ್ರಾಮದ ನಂಟನ್ನು ಕಳೆದುಕೊಂಡಿಲ್ಲ. ಇನ್ನು ಅಲ್ಲಿ ವಾಸಿಸುತ್ತಿರುವ ಅನಿವಾಸಿ ಭಾರತೀಯರು ವಿದೇಶಕ್ಕಿಂತ ಹೆಚ್ಚಾಗಿ ತಮ್ಮ ಹಣವನ್ನು ಇಲ್ಲಿನ ಬ್ಯಾಂಕ್‌ಗಳಲ್ಲಿ ಇಡಲು ಬಯಸುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಾರುಲ್ಬೆನ್ ಕಾರ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 12,690 ಕೋಟಿ ರೂ. ವೆಚ್ಚದ ಸುರಂಗ ರಸ್ತೆ ಯೋಜನೆಗೆ ಸಂಪುಟ ಸಭೆ ಅಸ್ತು

    ಅಪಾರ ಠೇವಣಿ ಇಡುವುದರಿಂದ ಈ ಗ್ರಾಮ ಸಮೃದ್ಧಿಯಾಗಿದೆ. ನೀರು, ನೈರ್ಮಲ್ಯ ಮತ್ತು ರಸ್ತೆಯಂತಹ ಎಲ್ಲಾ ಮೂಲಭೂತ ಸೌಕರ್ಯಗಳನಮೀ ಗ್ರಾಮ ಹೊಂದಿದೆ. ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು, ಕೆರೆಗಳು ಮತ್ತು ದೇವಾಲಯಗಳು ಹಾಗೂ ಬಂಗಲೆಗಳು ಕೂಡ ಇಲ್ಲಿವೆ ಎಂದು ರಾಷ್ಟ್ರೀಕೃತ ಬ್ಯಾಂಕ್‌ನ ಸ್ಥಳೀಯ ಶಾಖಾ ವ್ಯವಸ್ಥಾಪಕರು ಹೇಳಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ

  • NRIಗಳ ನಡುವಿನ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು: ಕಾನೂನು ಆಯೋಗ ಶಿಫಾರಸು

    NRIಗಳ ನಡುವಿನ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು: ಕಾನೂನು ಆಯೋಗ ಶಿಫಾರಸು

    ನವದೆಹಲಿ: ಸುಳ್ಳು ಆಶ್ವಾಸನೆಗಳು, ತಪ್ಪು ನಿರೂಪಣೆ ಮತ್ತು ವಿಚ್ಛೇದನದಂತಹ ಅಭ್ಯಾಸಗಳನ್ನು ತಡೆಯಲು ಎನ್‌ಆರ್‌ಐಗಳು (NRI) ಮತ್ತು ಭಾರತೀಯ ನಾಗರಿಕರ ನಡುವಿನ ಎಲ್ಲಾ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು ಎಂದು ಕಾನೂನು ಆಯೋಗವು (Law Commission) ಶುಕ್ರವಾರ ಶಿಫಾರಸು ಮಾಡಿದೆ.

    ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ, ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ಕಾನೂನು ಆಯೋಗವು, ಅನಿವಾಸಿ ಭಾರತೀಯರು ಮದುವೆಯಾಗುವ ಮೋಸದ ವಿವಾಹಗಳು ಹೆಚ್ಚುತ್ತಿರುವ ಘಟನೆಯು ಆತಂಕಕಾರಿ ಪ್ರವೃತ್ತಿಯಾಗಿದೆ. ಈ ನಡುವೆ ವಿವಾಹಗಳು ಮೋಸಗೊಳಿಸುವಂತಿವೆ, ಭಾರತೀಯ ಸಂಗಾತಿಗಳನ್ನು ವಿಶೇಷವಾಗಿ ಮಹಿಳೆಯರನ್ನು ಅನಿಶ್ಚಿತ ಪರಿಸ್ಥಿತಿಗಳಲ್ಲಿ ಇರಿಸುತ್ತಿವೆ ಎಂದಿದೆ. ಇಂತಹ ಪರಿಸ್ಥಿತಿಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ಅನಿವಾಸಿ ಭಾರತೀಯರು/ಒಸಿಐಗಳು ಮತ್ತು ಭಾರತೀಯ ನಾಗರಿಕರ ನಡುವಿನ ಎಲ್ಲಾ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕೆಂದು ಆಯೋಗವು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು

    ಹೊಸ ಕಾನೂನು ವಿಚ್ಛೇದನ, ಸಂಗಾತಿಯ ನಿರ್ವಹಣೆ, ಮಕ್ಕಳ ಪಾಲನೆ ಮತ್ತು ಪೋಷಣೆ, ಎನ್‌ಆರ್‌ಐಗಳು ಮತ್ತು ಒಸಿಐಗಳ ಮೇಲೆ ಸಮನ್ಸ್, ವಾರಂಟ್‌ಗಳು ಅಥವಾ ನ್ಯಾಯಾಂಗ ದಾಖಲೆಗಳನ್ನು ಪೂರೈಸುವ ನಿಬಂಧನೆಗಳನ್ನು ಒಳಗೊಂಡಿರಬೇಕು. ವೈವಾಹಿಕ ಸ್ಥಿತಿಯನ್ನು ಘೋಷಿಸುವುದು, ಸಂಗಾತಿಯ ಪಾಸ್‌ಪೋರ್ಟ್ ಅನ್ನು ಇನ್ನೊಂದಕ್ಕೆ ಲಿಂಕ್ ಮಾಡುವುದು ಮತ್ತು ಇಬ್ಬರ ಪಾಸ್‌ಪೋರ್ಟ್ಗಳಲ್ಲಿ ವಿವಾಹ ನೋಂದಣಿ ಸಂಖ್ಯೆಯನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಲು ಪಾಸ್‌ಪೋರ್ಟ್ ಕಾಯ್ದೆ, 1967ರಲ್ಲಿ ಅಗತ್ಯ ತಿದ್ದುಪಡಿಗಳನ್ನು ಪರಿಚಯಿಸುವ ಅಗತ್ಯವಿದೆ ಎಂದು ಕಾನೂನು ಸಮಿತಿ ಶಿಫಾರಸು ಮಾಡಿದೆ. ಇದನ್ನೂ ಓದಿ: ಪ್ರತಿಭಟನಾ ನಿರತರ ಮೇಲೆ ಮತ್ತೆ ಅಶ್ರುವಾಯು ದಾಳಿ – ಹೃದಯಾಘಾತದಿಂದ ರೈತ ಸಾವು!

    ಅದೇ ರೀತಿ ಮದುವೆಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ದೇಶೀಯ ನ್ಯಾಯಾಲಯಗಳು ನ್ಯಾಯವ್ಯಾಪ್ತಿಯನ್ನು ಹೊಂದಿರಬೇಕು. ವಿವಾಹಗಳಲ್ಲಿ ಉದ್ಭವಿಸುವ ವಿವಾದಗಳು ಸಾಮಾನ್ಯವಾಗಿ ವಿವಾದಗಳ ನ್ಯಾಯಯುತ ಮತ್ತು ನ್ಯಾಯಯುತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಕಾನೂನು ವ್ಯವಸ್ಥೆಯ ಮಧ್ಯಪ್ರವೇಶದ ಅಗತ್ಯವಿರುತ್ತದೆ ಎಂದು ಸಮಿತಿಯ ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಚುನಾವಣಾ ಬಾಂಡ್ ರದ್ದು; ಮೋದಿ ಭ್ರಷ್ಟ ನೀತಿಗಳಿಗೆ ಮತ್ತೊಂದು ಉದಾಹರಣೆ ಎಂದ ರಾಹುಲ್ ಗಾಂಧಿ

  • ಸಿಡ್ನಿಯ ಅನಿವಾಸಿ ಭಾರತೀಯರ ಸಮ್ಮೇಳನದಲ್ಲಿ ಮಂಗಳೂರು ಬೆಡಗಿಯ ನೃತ್ಯ

    ಸಿಡ್ನಿಯ ಅನಿವಾಸಿ ಭಾರತೀಯರ ಸಮ್ಮೇಳನದಲ್ಲಿ ಮಂಗಳೂರು ಬೆಡಗಿಯ ನೃತ್ಯ

    ಕ್ಯಾನ್ಬೆರಾ: ಮಂಗಳವಾರ ಆಸ್ಟ್ರೇಲಿಯಾದಲ್ಲಿ (Australia) ನಡೆದ ಅನಿವಾಸಿ ಭಾರತೀಯರ ಸಮ್ಮೇಳನದಲ್ಲಿ ಮೋದಿಯ ಭಾಷಣ ಎಲ್ಲರನ್ನೂ ಮೋಡಿ ಮಾಡಿತ್ತು. ಅದರಲ್ಲೂ ಅಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದಿತ್ತು. ಅಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ತುಳುನಾಡಿಗೂ ಅವಿನಾಭಾವ ಸಂಬಂಧವಿದೆ. ಅದೇನೆಂದರೆ ಕಾರ್ಯಕ್ರಮದಲ್ಲಿ ಮಂಗಳೂರು (Mangaluru) ಮೂಲದ ಯುವತಿ ಹಾಗೂ ಆಕೆಯ ತಂಡ ಕಾಂತಾರ (Kantara) ಸಿನಿಮಾದ ‘ವರಾಹ ರೂಪಂ’ ಹಾಗೂ ತುಳುವಿನ ‘ವಾ ಪೊರ್ಲುಯಾ’ ಹಾಡಿಗೆ ಹೆಜ್ಜೆ ಹಾಕಿದ್ದು ಎಲ್ಲರ ಮೆಚ್ಚುಗೆ ಗಳಿಸಿದೆ.

    ಸಿಡ್ನಿಯ (Sydney) ಫುಟ್ಬಾಲ್ ಆಟದ ಮೈದಾನದಲ್ಲಿ ನಡೆದ ಅನಿವಾಸಿ ಭಾರತೀಯರ ಸಮ್ಮೇಳನಕ್ಕೆ ಪ್ರಧಾನಿ ಮೋದಿಯವರನ್ನು ವಿಶೇಷವಾಗಿ ಸ್ವಾಗತಿಸಲಾಯಿತು. ಅಲ್ಲದೇ ಸಭೆಗೂ ಮೊದಲು ವಿವಿಧ ಭಾರತೀಯ ಶೈಲಿಗಳಲ್ಲಿ ನೃತ್ಯ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ಮಂಗಳೂರು ಮೂಲದ ಯುವತಿಯೋರ್ವಳು ತನ್ನ ತಂಡದೊಂದಿಗೆ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಗೂ ತುಳುನಾಡಿನ ‘ವಾ ಪೊರ್ಲುಯಾ’ ಹಾಡಿಗೆ ಹೆಜ್ಜೆ ಹಾಕಿ ಕರ್ನಾಟಕ ಹಾಗೂ ತುಳುನಾಡಿನ ಗರಿಮೆಯನ್ನು ಎತ್ತಿ ಹಿಡಿದಿದ್ದಾಳೆ. ಇದನ್ನೂ ಓದಿ: ಸಾಂಪ್ರದಾಯಿಕ ಸ್ವಾಗತ ಕೊಟ್ಟು ಮೋದಿಯನ್ನು ʻಬಾಸ್‌ʼ ಎಂದು ಕರೆದ ಆಸ್ಟ್ರೇಲಿಯಾ ಪ್ರಧಾನಿ

    ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದ ಆ ಕಾರ್ಯಕ್ರಮದಲ್ಲಿ, ಮಂಗಳೂರಿನ ಬಿಜೈ ಕಾಪಿಕಾಡ್ ಮೂಲದ ಅನಿಷಾ ಪೂಜಾರಿ (Anisha Poojari) ಹಾಗೂ ಆಕೆಯ ತಂಡ ಹೆಜ್ಜೆ ಹಾಕಿದ್ದಾರೆ. ಉಡುಪಿ ಕುಂದಾಪುರ ಮೂಲದ ನಾಟ್ಯ ವಿದುಷಿ ಪಲ್ಲವಿ ಭಾಗವತ್ ಈಕೆಯ ಗುರುವಾಗಿದ್ದು, ತಮ್ಮ ನೃತ್ಯ ಸಂಸ್ಥೆಯ ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ ಕರ್ನಾಟಕದ ಹಳ್ಳಿ ಸೊಬಗನ್ನು ತೋರಿಸುವ ಜಾನಪದ ಹಾಗೂ ಯಕ್ಷಗಾನ ಶೈಲಿಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ. ಇದನ್ನೂ ಓದಿ: ಶಿಷ್ಟಾಚಾರಕ್ಕೆ ಗುಡ್‌ಬೈ – ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತ ಕೋರಿದ ಪಪುವಾ ನ್ಯೂ ಗಿನಿಯಾ ಪ್ರಧಾನಿ

    ಅನಿಷಾ ತಮ್ಮ ನಾಲ್ಕನೇ ವಯಸ್ಸಿನಲ್ಲಿ ಭರತನಾಟ್ಯ ಕಲಿಕೆಯನ್ನು ಆರಂಭಿಸಿದ್ದು, ವಿದ್ವಾನ್ ಪ್ರೇಮನಾಥ ಮಾಸ್ಟರ್ ಬಳಿ ಹೆಚ್ಚಿನ ಶಿಕ್ಷಣವನ್ನು ಪಡೆದುಕೊಂಡರು. ಅಲ್ಲದೇ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ವಿವಾಹದ ಬಳಿಕ ಪತಿ ಹಾಗೂ ಮಗುವಿನೊಂದಿಗೆ ಸಿಡ್ನಿಯಲ್ಲಿ ನೆಲೆಸಿದ್ದ ಅವರು ಅಲ್ಲಿಯೂ ಸಹ ಭರತನಾಟ್ಯ ಕಲಿಕೆಯನ್ನು ಮುಂದುವರಿಸಿದ್ದಾರೆ. ನಾಟ್ಯ ವಿದುಷಿ ಪಲ್ಲವಿ ಭಾಗವತ್ ಅವರ ಬಳಿ ಕಲಿಕೆ ಮುಂದುವರಿಸಿದ ಅವರು ಇಂದು ಪ್ರಧಾನಿ ಮೋದಿಯ (Narendra Modi) ಮುಂದೆ ಹೆಜ್ಜೆ ಹಾಕಿದ್ದು ಸಂತೋಷದ ವಿಷಯವೇ ಸರಿ. ಇದನ್ನೂ ಓದಿ: ರಷ್ಯಾ ಯುದ್ಧ ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ಭೇಟಿಯಾದ ಮೋದಿ

    ಈ ಕುರಿತು ಅನಿಷಾ ತಂದೆ ಮಾತನಾಡಿ, ಅನಿಷಾ 6 ವರ್ಷಗಳಿಂದ ಕುಟುಂಬ ಸಮೇತ ಸಿಡ್ನಿಯಲ್ಲಿ ನೆಲೆಸುತ್ತಿದ್ದಾಳೆ. ಚಿಕ್ಕಂದಿನಿಂದಲೂ ಡ್ಯಾನ್ಸ್‌ನಲ್ಲಿ ಅಪಾರ ಆಸಕ್ತಿ ಹೊಂದಿದ್ದ ಈಕೆ, ಮೋದಿ ಮುಂದೆ ಹೆಜ್ಜೆ ಹಾಕಿರುವುದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?

  • ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್

    ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್

    ಚಂಡೀಗಢ: ಎನ್‍ಆರ್‍ಐಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ರಾಜ್ಯ ಸರ್ಕಾರ ಹೊಸ ನೀತಿಯನ್ನು ಹೊರತರಲಿದೆ ಎಂದು ಪಂಜಾಬ್ ಕ್ಯಾಬಿನೆಟ್ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ.

    ಧಲಿವಾಲ್ ಅವರು ಎನ್‍ಆರ್‌ಐ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದು, ಹೊಸ ಅನಿವಾಸಿ ಭಾರತೀಯ(ಎನ್‍ಆರ್‌ಐ) ನೀತಿಯ ಕರಡನ್ನು ಅವರೊಂದಿಗೆ ಮತ್ತು ಪಂಜಾಬ್‍ನ ಎನ್‍ಆರ್‌ಐ ಆಯೋಗದ ಸದಸ್ಯರೊಂದಿಗೆ ಚರ್ಚಿಸಿ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

    ಚರ್ಚೆಯಲ್ಲಿ ಆಗಿದ್ದೇನು?
    ಎನ್‍ಆರ್‌ಐ ಪಂಜಾಬಿ ಯುವಕರನ್ನು ಅವರ ಮೂಲವನ್ನು ಸಂಪರ್ಕಿಸಲು ಪಂಜಾಬ್ ಸರ್ಕಾರ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಎನ್‍ಆರ್‌ಐ ಪಂಜಾಬಿ ವೃದ್ಧರಿಗೆ ರಾಜ್ಯದ ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಉಚಿತ ಪ್ರಯಾಣವನ್ನು ಒದಗಿಸುವ ಸಲುವಾಗಿ ಸರ್ಕಾರವು ಕಾರ್ಯಕ್ರಮವನ್ನು ಪ್ರಾರಂಭಿಸುತ್ತದೆ. ಇದನ್ನೂ ಓದಿ: ನಾಳೆಯಿಂದ ಲಾಲ್‌ಬಾಗ್‌ನಲ್ಲಿ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ

    ಎನ್‍ಆರ್‌ಐ ವ್ಯವಹಾರಗಳ ಸಚಿವರು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ನಾಗರಿಕ ಲೋಕ ಅದಾಲತ್‍ಗಳ ಮಾದರಿಯಲ್ಲಿ ಎನ್‍ಆರ್‍ಐ ಲೋಕ ಅದಾಲತ್‍ಗಳನ್ನು ಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ, ವಿಶೇಷವಾಗಿ ಭೂಮಿ ಮತ್ತು ವಿವಾಹದ ವಿವಾದಗಳನ್ನು ಪರಸ್ಪರ ಒಪ್ಪಿಗೆಯಿಂದ ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗುವುದು. ಅದಕ್ಕೆ ಕಾನೂನಿನ ಮಾನ್ಯತೆ ಇರುತ್ತದೆ.

    ಸಭೆಯಲ್ಲಿ ತೆಗೆದುಕೊಳ್ಳಲಾದ ಮತ್ತೊಂದು ಪ್ರಮುಖ ನಿರ್ಧಾರವೆಂದರೆ ಎನ್‍ಆರ್‌ಐಗಳ ಸಮಸ್ಯೆಗಳಿಗೆ ತ್ವರಿತ ವಿಚಾರಣೆಗೆ ಪ್ರತಿ ಜಿಲ್ಲೆಗೆ ಪಂಜಾಬ್ ನಾಗರಿಕ ಸೇವೆಗಳ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲು ಸಿಎಂ ಭಗವಂತ್ ಮಾನ್ ಅವರಿಗೆ ಮನವಿ ಮಾಡಲಾಗುವುದು. ಇದನ್ನೂ ಓದಿ: ಯಾರಿಗೆ ಬೇಕು ‘ಚಿಕನ್ ಕಥಿ ರೋಲ್’ – ಮನೆಯಲ್ಲಿ ಟ್ರೈ ಮಾಡಿ

    ಸಾಮಾನ್ಯವಾಗಿ ಅನಿವಾಸಿ ಭಾರತೀಯರ ಜಮೀನು ಅತಿಕ್ರಮಣ ಪ್ರಕರಣಗಳು ಹೆಚ್ಚಾಗಿದೆ. ಅನಿವಾಸಿ ಭಾರತೀಯರಿಗೆ ಪರಿಹಾರ ನೀಡಲು ಅನಿವಾಸಿ ಭಾರತೀಯರ ಒಪ್ಪಿಗೆಯಿಲ್ಲದೆ ಗಿರದಾರಿ ಬದಲಾವಣೆಯನ್ನು ತಡೆಯಲು ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಇನ್ಮುಂದೆ ನಿರ್ಬಂಧ ಇಲ್ಲದೇ ಎನ್‌ಆರ್‌ಐಗಳು 10 ಲಕ್ಷ ಕಳುಹಿಸಬಹುದು: ಮೊದಲು FCRA ನಿಯಮ ಏನಿತ್ತು? ಏನು ಬದಲಾವಣೆಯಾಗಿದೆ?

    ಇನ್ಮುಂದೆ ನಿರ್ಬಂಧ ಇಲ್ಲದೇ ಎನ್‌ಆರ್‌ಐಗಳು 10 ಲಕ್ಷ ಕಳುಹಿಸಬಹುದು: ಮೊದಲು FCRA ನಿಯಮ ಏನಿತ್ತು? ಏನು ಬದಲಾವಣೆಯಾಗಿದೆ?

    ನವದೆಹಲಿ: ಇನ್ಮುಂದೆ ನಿರ್ಬಂಧ ಇಲ್ಲದೇ  ಅನಿವಾಸಿ ಭಾರತೀಯರು(ಎನ್‌ಆರ್‌ಐ) ವಾರ್ಷಿಕವಾಗಿ 10 ಲಕ್ಷ ರೂ. ಕಳುಹಿಸಬಹುದು.

    ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯ (FCRA) ಕೆಲವು ನಿಯಮಗಳಿಗೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿಗಳನ್ನು ಮಾಡಿದೆ. ದೇಣಿಗೆ ಮೊತ್ತ ಹೆಚ್ಚಳ ಮತ್ತು ಸ್ವೀಕಾರದ ಮಾಹಿತಿ ಸಲ್ಲಿಸುವ ಅವಧಿಯನ್ನು ಹೆಚ್ಚಿಸಲಾಗಿದೆ. ಈ ತಿದ್ದುಪಡಿಯಿಂದ ಸಂಬಂಧಿಕರಿಂದ ವಿದೇಶಿ ದೇಣಿಗೆ ಪಡೆಯುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳಿಗೆ ಅನುಕೂಲವಾಗಲಿದೆ.

    ತಿದ್ದುಪಡಿ ಏನು?
    ಕೇಂದ್ರ ಗೃಹ ಸಚಿವಾಲಯ ಶುಕ್ರವಾರವೇ ಗೆಜೆಟ್‌ ಅಧಿಸೂಚನೆ ಪ್ರಕಟಿಸಿ 2022ರ ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ನಿಯಮಗಳನ್ನು ಜಾರಿಗೆ ತಂದಿದೆ. 2011ರ ವಿದೇಶಿ ದೇಣಿಗೆ ನಿಯಂತ್ರಣ ನಿಯಮಗಳ ಪ್ರಕಾರ ‘1 ಲಕ್ಷ ರೂಪಾಯಿ‘ ಪದವನ್ನು ‘10 ಲಕ್ಷ ರೂಪಾಯಿ‘ ಮತ್ತು ‘30 ದಿನಗಳು’ ಪದವನ್ನು ‘3 ತಿಂಗಳು‘ ಎಂದು ತಿದ್ದುಪಡಿ ಮಾಡಲಾಗಿದೆ.

    ಈ ಮೊದಲು ಹಣಕಾಸು ವರ್ಷವೊಂದರಲ್ಲಿ ಯಾವುದೇ ವ್ಯಕ್ತಿಯು 1 ಲಕ್ಷ ರೂ. ಅಥವಾ ಅದಕ್ಕಿಂತಲೂ ಹೆಚ್ಚಿನ ಮೊತ್ತದ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದಲ್ಲಿ ದೇಣಿಗೆ ಪಡೆದ ದಿನದಿಂದ 30 ದಿನದ ಒಳಗೆ ಕೇಂದ್ರ ಸರಕಾರಕ್ಕೆ ಪೂರ್ಣ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಾಗಿತ್ತು. ತಿದ್ದುಪಡಿಯಾದ ಬಳಿಕ ವಿದೇಶದಲ್ಲಿರುವ ಸಂಬಂಧಿಕರು ತಮ್ಮ ಕುಟುಂಬಸ್ಥರು ಅಥವಾ ಬೇರೆಯವರಿಗೆ ಕೇಂದ್ರದ ಗಮನಕ್ಕೆ ತರದೇ ಗರಿಷ್ಟ 10 ಲಕ್ಷ ರೂ.ವರೆಗೆ ದೇಣಿಗೆ ಕಳುಹಿಸಲು ಅನುಮತಿ ನೀಡಲಾಗಿದೆ. 10 ಲಕ್ಷ ರೂ.ಗಿಂತ ಹೆಚ್ಚಿನ ದೇಣಿಗೆ ಕಳಹಿಸಿದ್ದಲ್ಲಿ ದೇಣಿಗೆ ಸ್ವೀಕಾರದ ದಿನಾಂಕದಿಂದ 30 ದಿನಗಳ ಬದಲಿಗೆ 3 ತಿಂಗಳೊಳಗಾಗಿ ಕೇಂದ್ರಕ್ಕೆ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.

    ದೇಣಿಗೆ ಸ್ವೀಕರಿಸಲು ‘ನೋಂದಣಿ’ ಮಾಹಿತಿ ಅಥವಾ ‘ಪೂರ್ವ ಅನುಮತಿ’ಗೆ ಸಂಬಂಧಿಸಿದಂತೆ ನಿಯಮ 9ಕ್ಕೆ ಕೂಡ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಇಲ್ಲಿಯವರೆಗೆ ದೇಣಿಗೆ ಪಡೆದ ಹಣದ ವಹಿವಾಟಿಗೆ ಬಳಸಲಾಗುವ ಬ್ಯಾಂಕ್‌ ಅಕೌಂಟ್‌ ಕುರಿತು 30 ದಿನದೊಳಗೆ ಕೇಂದ್ರಕ್ಕೆ ವಿವರ ಸಲ್ಲಿಸಬೇಕಿತ್ತು. ಈ ನಿಯಮವನ್ನು ಸಡಿಲಗೊಳಿಸಿದ್ದು, 45 ದಿನಗಳವರೆಗೆ ಹೆಚ್ಚಿಸಲಾಗಿದೆ.  ಇದನ್ನು ಓದಿ: 12 ಸಾವಿರ NGOಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಗೆ ರದ್ದು

    ಹೊಸ ನಿಯಮಗಳಲ್ಲಿ ವಿದೇಶಿ ದೇಣಿಗೆ ಸ್ವೀಕರಿಸುವ ಸಂಸ್ಥೆಗಳು ಆ ಮೊತ್ತದಲ್ಲಿ ಶೇ. 20ಕ್ಕಿಂತಲೂ ಹೆಚ್ಚಿನ ಹಣವನ್ನು ಆಡಳಿತಾತ್ಮಕ ಕೆಲಸಗಳಿಗೆ ಬಳಸುವಂತಿಲ್ಲ ಎಂಬ ಷರತ್ತನ್ನು ಸೇರಿಸಲಾಗಿದೆ. ಈ ಮೊದಲು ಇದರ ಮಿತಿ ಶೇ. 50 ರಷ್ಟಿತ್ತು.

    ವಿದೇಶದಿಂದ ನೆರವು ಪಡೆದು ದೇಶದ ಒಳಗಡೆ ಉಗ್ರ ಚಟುವಟಿಕೆ, ರೈತರ ಪ್ರತಿಟಭನೆ, ಬಂದ್‌ ಇತ್ಯಾದಿ ಚಟುವಟಿಕೆಗಳಿಗೆ ಎನ್‍ಜಿಒಗಳ ಹಣ ಬಳಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ FCRA ಗೆ ತಿದ್ದುಪಡಿ ತಂದಿತ್ತು. ಎನ್‌ಜಿಒಗಳು ಯಾವುದೇ ರಾಜಕೀಯ ಪಕ್ಷಗಳ ಜೊತೆ ನೇರವಾದ ನಂಟು ಹೊಂದಿರಬಾರದು ಎಂದು ಸೂಚಿಸಲಾಗಿದೆ.

    ವಿದೇಶದಿಂದ ಹಣ ಪಡೆಯುವ ಎನ್‍ಜಿಒಗಳು ದೆಹಲಿಯ ಎಸ್‍ಬಿಐ ಕಚೇರಿಯಲ್ಲಿ ಖಾತೆ ತೆರೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಹಣದ ಲೆಕ್ಕಪತ್ರ ಸಂಬಂಧ ಹಲವು ಬಿಗಿ ನಿಯಮಗಳನ್ನು ಪಾಲನೆ ಮಾಡಬೇಕೆಂದು ಎನ್‍ಜಿಒಗಳಿಗೆ ಗೃಹ ಇಲಾಖೆ ಸೂಚಿಸಿದೆ.

    Live Tv

  • ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಹೋಗುವವರು ಅಪರಾಧಿಗಳಾಗಲ್ಲ: ಹೈಕೋರ್ಟ್

    ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಹೋಗುವವರು ಅಪರಾಧಿಗಳಾಗಲ್ಲ: ಹೈಕೋರ್ಟ್

    ಕೋಲ್ಕತ್ತಾ: ಲೈಂಗಿಕ ಸುಖಕ್ಕಾಗಿ ವೇಶ್ಯಾವಾಟಿಕೆ ಗೃಹಕ್ಕೆ ಭೇಟಿ ನೀಡುವ ಗ್ರಾಹಕರನ್ನು ಅನೈತಿಕ ಸಂಚಾರ ಎಂದು ಅನೈತಿಕ ಸಂಚಾರ (ಪಿಐಟಿಎ) ಕಾಯ್ದೆ ಅಡಿಯಲ್ಲಿ ಅಪರಾಧಗಳನ್ನಾಗಿ ಹೊಣೆ ಮಾಡಲಾಗುವುದಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.

    ಇತ್ತೀಚೆಗೆ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜೋಯ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠವು ಈ ತೀರ್ಪು ನೀಡಿದೆ. ಅಲ್ಲದೆ ಗ್ರಾಹಕರಾಗಿ ಲೈಂಗಿಕ ಕಾರ್ಯಕರ್ತೆಯರ ಮನೆಗೆ ಭೇಟಿ ನೀಡುವುದು ಲೈಂಗಿಕ ಸುಖಕ್ಕಾಗಿಯೇ ಅಲ್ಲ. ಯಾವುದೋ ಸಂದರ್ಭದಲ್ಲಿ ಅವರು ಭೇಟಿ ನೀಡಿರುತ್ತಾರೆ ಎಂಬ ಅಂಶವನ್ನೂ ನ್ಯಾಯಾಲಯ ಉಲ್ಲೇಖಿಸಿದೆ. ಇದನ್ನೂ ಓದಿ: ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ? 

    2019ರ ಜನವರಿ 4 ರಂದು ಪೊಲೀಸ್ ದಾಳಿ ವೇಳೆ ಬಂಧಿಸಲ್ಪಟ್ಟ ಎನ್‌ಆರ್‌ಐ ಉದ್ಯಮಿ ಸುರೇಶ್ ಬಾಬು ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿದೆ.

    ಬಾಬು ಅವರನ್ನು ಸ್ಥಳೀಯ ದೇಹದ ಮಸಾಜ್ ಸೆಂಟರ್‌ನಿಂದ 8 ಮಹಿಳೆಯರು ಮತ್ತು ಒಬ್ಬ ಪುರುಷನೊಂದಿಗೆ ಬಂಧಿಸಿ ಕರೆದೊಯ್ಯಲಾಯಿತು. ಅವರಲ್ಲಿ ಲೈಂಗಿಕ ಕಾರ್ಯಕರ್ತೆಯರು ಹಾಗೂ ಪಿಂಪ್ ಸಹ ಇದ್ದನು. ಮತ್ತೊಬ್ಬ ಮಸಾಜ್ ಸೆಂಟರ್ ನಡೆಸುವ ನೆಪದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದನು. ಅವರೆಲ್ಲರನ್ನು ಪೊಲೀಸರು ಬಂಧಿಸಿ ಪಿಐಟಿಎ ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಇದನ್ನೂ ಓದಿ: ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್

    karnataka highcourt

    ಪಿಐಟಿಎ ಅಡಿಯಲ್ಲಿನ ನಿಬಂಧನೆಗಳು ವಾಣಿಜ್ಯ ಉದ್ದೇಶಕ್ಕಾಗಿ ವ್ಯಕ್ತಿಯ ಲೈಂಗಿಕ ಶೋಷಣೆ ಅಥವಾ ನಿಂದನೆಯನ್ನು ಶಿಕ್ಷಿಸುತ್ತವೆ. ಆದರೆ ಅರ್ಜಿದಾರರ ವಿರುದ್ಧ ಅದು ಅಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಆದ್ದರಿಂದ ನ್ಯಾಯಾಲಯವು ಅರ್ಜಿದಾರರ ವಿರುದ್ಧ ಪ್ರಾರಂಭಿಸಲಾದ ಆರೋಪಪಟ್ಟಿ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದೆ.

    ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ಕೂಡ ವೇಶ್ಯಾಗೃಹದಲ್ಲಿ ಪತ್ತೆಯಾದ ಗ್ರಾಹಕನನ್ನು ಅನೈತಿಕ ಕಳ್ಳಸಾಗಾಣಿಕೆ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ತೀರ್ಪು ನೀಡಿತ್ತು. ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿಯಲ್ಲಿ ಸಿಕ್ಕಿಬೀಳುವ ಗ್ರಾಹಕರನ್ನು ಬಂಧಿಸುವಂತಿಲ್ಲ: ಹೈಕೋರ್ಟ್‌ 

    ಅರ್ಜಿದಾರರ ಪರ ವಕೀಲರಾದ ತುಷರ್ ಮುಖರ್ಜಿ ಮತ್ತು ಅಬು ಅಬ್ಬಾಸ್ ಉದ್ದೀನ್ ವಾದ ಮಂಡಿಸಿದರು.

    Live Tv

  • ವಿದೇಶಕ್ಕೆ ತೆರಳುವ ಎನ್‍ಆರ್‍ಐ ಪ್ರಯಾಣಿಕರಿಗೆ ಆದ್ಯತೆ ಮೇರೆಗೆ ಲಸಿಕೆ- ವೇದವ್ಯಾಸ ಕಾಮತ್ ಪರಿಶೀಲನೆ

    ವಿದೇಶಕ್ಕೆ ತೆರಳುವ ಎನ್‍ಆರ್‍ಐ ಪ್ರಯಾಣಿಕರಿಗೆ ಆದ್ಯತೆ ಮೇರೆಗೆ ಲಸಿಕೆ- ವೇದವ್ಯಾಸ ಕಾಮತ್ ಪರಿಶೀಲನೆ

    ಮಂಗಳೂರು: ಉದ್ಯೋಗ, ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವವರಿಗೆ ಲಸಿಕೆ ವಿತರಣೆಯು ಡೊಂಗರಕೇರಿ ಕೆನರಾ ಗಲ್ರ್ಸ್ ಹೈಸ್ಕೂಲಿನಲ್ಲಿ ನಡೆಯುತಿದ್ದು, ಶಾಸಕ ವೇದವ್ಯಾಸ್ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ವೇಳೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಉದ್ಯೋಗಕ್ಕಾಗಿ, ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಕೈಗೊಳ್ಳುವವರಿಗೆ ವಾರಾಂತ್ಯದ ದಿನಗಳಲ್ಲಿ ಲಸಿಕೆ ವಿತರಿಸಲಾಗುತ್ತಿದ್ದು, ಇಂದು ಡೊಂಗರಕೇರಿ ಕೆನರಾ ಗಲ್ರ್ಸ್ ಹೈಸ್ಕೂಲ್ ನಲ್ಲಿ ನಡೆಯುವ ಲಸಿಕಾ ಶಿಬಿರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದೆ. ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ನಮ್ಮ ಸರ್ಕಾರ, ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈಗಾಗಲೇ ಜಿಲ್ಲಾಡಳಿತ, ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳ ಸಹಕಾರದೊಂದಿಗೆ ಅಶಕ್ತರಿಗಾಗಿ ಸಂಚಾರಿ ವಾಹನವನ್ನು ಕೂಡ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಮರ್ಥವಾಗಿ ಕಾರ್ಯ ನಿರ್ವಹಿಸುತಿದ್ದು, ಜಿಲ್ಲೆಯ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

    ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷ ಶಾಂತರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ್ ಶರ್ಮ, ರೋಟರಿ ಸಂಸ್ಥೆಯ ಪ್ರಮುಖರಾದ ಯತೀಶ್ ಬೈಕಾಂಪಾಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.