Tag: NS Boseraju

  • ಕ್ವಾಂಟಮ್‌ ಸಿಟಿ ಅಭಿವೃದ್ಧಿ, ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್‌ ಕಂಪನಿ, ಸಂಶೋಧನಾ ಸಂಸ್ಥೆಗಳ ಒಲವು: ಸಚಿವ ಬೋಸರಾಜು

    ಕ್ವಾಂಟಮ್‌ ಸಿಟಿ ಅಭಿವೃದ್ಧಿ, ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್‌ ಕಂಪನಿ, ಸಂಶೋಧನಾ ಸಂಸ್ಥೆಗಳ ಒಲವು: ಸಚಿವ ಬೋಸರಾಜು

    ಬೆಂಗಳೂರು: ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವಂತಹ ಕ್ವಾಂಟಮ್‌ ಸಿಟಿಯಲ್ಲಿ (Quantum City) ಸಹಭಾಗಿತ್ವಕ್ಕೆ, ಸ್ವಿಟ್ಜರ್ಲೆಂಡ್‌ ಕಂಪನಿಗಳು ಹಾಗೂ ಕ್ವಾಂಟಮ್‌ ಕ್ಷೇತ್ರದ ಸಂಶೋಧನೆಯಲ್ಲಿ ಪ್ರಮುಖವಾಗಿರುವಂತಹ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಣ್ಣ ನೀರಾವರಿ,ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಬೋಸರಾಜು (NS Boseraju) ತಿಳಿಸಿದ್ದಾರೆ.

    ವಿಕಾಸಸೌಧದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಸ್ವಿಟ್ಜರ್ಲೆಂಡ್‌ ಪ್ರವಾಸದ ಬಗ್ಗೆ ಮಾಹಿತಿ ಹಂಚಿಕೊಂಡರು. ಕರ್ನಾಟಕ ರಾಜ್ಯ ಸರ್ಕಾರ ಬೆಂಗಳೂರು ನಗರವನ್ನ ವಿಶ್ವದ ಕ್ವಾಂಟಮ್‌ ಕ್ಷೇತ್ರದ ಕೇಂದ್ರಬಿಂದುವನ್ನಾಗಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ನಡೆದ ದೇಶದ ಮೊದಲ ಕ್ವಾಂಟಮ್‌ ಸಮಾವೇಶದಲ್ಲಿ ಘೋಷಿಸಿದ್ದಂತೆ ಈಗಾಗಲೇ ಕ್ವಾಂಟಮ್‌ ಸಿಟಿಗೆ ಭೂಮಿಯನ್ನ ರಾಜ್ಯ ಸರ್ಕಾರ ಮಂಜೂರು ಮಾಡಿದೆ.

    ಈ ಸಿಟಿಯ ಅಭಿವೃದ್ಧಿಗಾಗಿ ಕ್ವಾಂಟಮ್‌ ಸಂಶೋಧನೆಯಲ್ಲಿ ( ತೊಡಗಿಕೊಂಡಿರುವ ವಿಶ್ವದ ಪ್ರಮುಖ ಸಂಸ್ಥೆಗಳಾದ ಇಟಿಹೆಚ್‌ ಜ್ಯೂರಿಚ್‌, ಸೆರಿ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯದಲ್ಲಿ ಕ್ವಾಂಟಮ್‌ ಪರಿಣಿತ ಮಾನವ ಸಂಪನ್ಮೂಲ ಅಭಿವೃದ್ದಿಗಾಗಿ ಐಐಎಸ್‌ಸಿ ಜೊತೆಗೂಡಿ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ. ನಮ್ಮ ರಾಜ್ಯದಲ್ಲಿ ಪರಿಣಿತ ಮಾನವ ಸಂಪನ್ಮೂಲ ಲಭ್ಯವಿದ್ದು, ಹೊಸ ಸಂಶೋಧನೆಗಳನ್ನ ಕೈಗೊಳ್ಳಲು ಉತ್ತಮ ಪರಿಸರವಿದೆ. ಈ ಹಿನ್ನಲೆಯಲ್ಲಿ ಸಂಶೋಧನಾ ಯೋಜನೆಗಳಲ್ಲಿ ಸಹಕರಿಸುವಂತೆ ನಮ್ಮ ಮನವಿಗೆ ಇಟಿಎಚ್ ಜ್ಯೂರಿಕ್ (ETH Zurich) ಮಂಡಳಿಯ ಅಧ್ಯಕ್ಷರಾದ ಡಾ. ಮೈಕೇಲ್ ಹೆಂಗಾರ್ಟ್ನರ್ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಹೇಳಿದರು.

    ಸ್ವಿಸ್‌ನೆಕ್ಸ್‌ ಕ್ವಾಂಟಮ್‌ ಸಮಾವೇಶದಲ್ಲಿ ಪಾಲ್ಗೊಂಡು, ನಮ್ಮ ರಾಜ್ಯದಲ್ಲಿ ಹೂಡಿಕೆಗೆ ಇರುವಂತಹ ಅವಕಾಶಗಳ ಬಗ್ಗೆ ವಿಶ್ವದ ಪ್ರಮುಖ ಕ್ವಾಂಟಮ್‌ ಕ್ಷೇತ್ರದ ಕಂಪನಿಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಯಿತು. ಕ್ವಾಂಟಮ್‌ ಸಿಟಿಯ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು. ನಮ್ಮ ರಾಜ್ಯ ಅದರಲ್ಲೂ ಬೆಂಗಳೂರು ನಗರದ ತಾಂತ್ರಿಕ ಅವಕಾಶಗಳು, ಮಾನವ ಸಂಪನ್ಮೂಲ ಲಭ್ಯತೆ, ಹೂಡಿಕೆಗೆ ಉತ್ತಮ ಪರಿಸರ, ರಾಜ್ಯ ಸರ್ಕಾರದಿಂದ ಸಿಗುತ್ತಿರುವ ಉತ್ತಮ ಸಹಕಾರದ ಬಗ್ಗೆ ಮಾಹಿತಿ ನೀಡಲಾಯಿತು. ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡುವಂತೆಯೂ ಆಹ್ವಾನ ನೀಡಲಾಯಿತು ಎಂದು ಸಚಿವರು ತಿಳಿಸಿದರು.

    ಕ್ವಾಂಟಮ್ ಬೇಸೆಲ್ ಸಂಸ್ಥೆಗಳಿಗೆ ಭೇಟಿ
    ಐನ್‌ಸ್ಟೀನ್‌ ಅವರು ಸಂಶೋಧನೆಯಲ್ಲಿ ತೊಡಗಿಕೊಂಡಿದ್ದ ETH Zurich ಸಂಸ್ಥೆಗೆ ಭೇಟಿ ನೀಡಿ, ಸೂಪರ್‌ಕಂಡಕ್ಟಿಂಗ್ ಕ್ಯೂಬಿಟ್ ಮತ್ತು ಟ್ರಾಪ್ಡ್ ಐಯಾನ್ ಸಿಸ್ಟಮ್ಸ್‌ಗಳ ಕುರಿತ ಸಂಶೋಧನೆಯಲ್ಲಿ 20 ವರ್ಷಗಳಿಂದ ಪಯೋನಿಯರ್‌ಗಳಾಗಿ ಗುರುತಿಸಿಕೊಂಡಿರುವಂತಹ, ETH Zurich ಕ್ವಾಂಟಮ್ ಸೆಂಟರ್‌ ನ ನಿರ್ದೇಶಕರುಗಳಾದ ವಿಶ್ವವಿಖ್ಯಾತ ಪ್ರೊ.ಆಂಡ್ರಿಯಾಸ್ ವಾಲ್ರಾಫ್ ಹಾಗೂ ಪ್ರೊ. ಜೊನಥನ್ ಹೋಮ್ ಮತ್ತು ಪ್ರೊ. ಕ್ಲಾಸ್ ಎನ್ಸ್‌ಸ್ಲಿನ್ ಅವರನ್ನ ಮುಂದಿನ ಕ್ವಾಂಟಮ್‌ ಇಂಡಿಯಾ ಸಮ್ಮೇಳನದಲ್ಲಿ ಭಾಗವಹಿಸುವಂತೆ ಅಹ್ವಾನ ನೀಡಿದ್ದೇವೆ.

    ETH ಜ್ಯೂರಿಚ್‌ ವಿಶ್ವವಿದ್ಯಾಲಯದ ಪ್ರಯೋಗಾಲಯಗಳಲ್ಲಿ ಸಂಶೋಧಿಸಲಾದ ಹಲವಾರು ಸಂಶೋಧನೆಗಳು ಸ್ಟಾರ್ಟಪ್‌ಗಳಾಗಿ ಬೆಳೆದಿವೆ. ಇಂತಹ ಪರಿಸರವನ್ನು ಕ್ವಾಂಟಮ್‌ ಸಿಟಿಯಲ್ಲಿ ಅಳವಡಿಸುವ ನಿಟ್ಟಿನಲ್ಲಿ ಹಾಗೂ ಸಹಭಾಗಿತ್ವದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಸಚಿವರು ತಿಳಿಸಿದರು. Zurich Instruments ಸಂಸ್ಥೆಗೆ ಭೇಟಿ ನೀಡುವ ಮೂಲಕ ಕ್ವಾಂಟಮ್‌ ಕಂಪ್ಯೂಟಿಂಗ್‌ ಅಭಿವೃದಿಗೆ ಅಗತ್ಯವಿರುವಂತಹ ಉಪಕರಣಗಳ ತಯಾರಿಕೆಯ ಬಗ್ಗೆ ಮಾಹಿತಿ ನೀಡಲಾಯಿತು. ಇದೇ ಸಂಧರ್ಭದಲ್ಲಿ ಕರ್ನಾಟಕ ರಾಜ್ಯದ ಸಂಶೋಧನಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಈ ಸಂಸ್ಥೆ ಮುಂದಾಗಿದೆ ಎನ್ನುವುದನ್ನು ಸಚಿವರು ತಿಳಿಸಿದರು.

    ಜಿನೆವಾದ ಸೈನ್ಸ್‌ ಅಂಡ್‌ ಡಿಪ್ಲೋಮಸಿ ಆಂಟಿಸಿಪೇಟರ್‌ ಸಮಾವೇಶದಲ್ಲಿ ಭಾಗಿಯಾದ ಸಂಧರ್ಭದಲ್ಲಿ ಭಾರತ ಸರ್ಕಾರದ ಮುಖ್ಯ ವೈಜ್ಞಾನಿಕ ಸಲಹೆಗಾರರಾದ ಪ್ರೊ. ಅಜಯ್ ಸೂದ್ ಅವರನ್ನು ಸಮಾವೇಶದಲ್ಲಿ ಭೇಟಿಯಾದ ಸಚಿವರು, ರಾಜ್ಯದ ಕ್ವಾಂಟಮ್‌ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಅಗತ್ಯವಿರುವಂತಹ ಸಲಹೆ ಹಾಗೂ ಸಹಕಾರ ನೀಡುವ ನಿಟ್ಟಿನಲ್ಲಿ ಚರ್ಚಿಸಿದರು. ಅಲ್ಲದೇ, ವಿಶ್ವದ ಇತರೆ ದೇಶಗಳ ಪ್ರಮುಖ ಸಂಶೋಧನಾ ಸಂಸ್ಥೆಗಳ ಜೊತೆಯಲ್ಲಿ ನಡೆಸುತ್ತಿರುವ ಸಭೆಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.

  • ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

    ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

    – ಸ್ವಪಕ್ಷದವರ ವಿರುದ್ಧ ಸಚಿವ ಬೋಸರಾಜು ಕಿಡಿ

    ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ (Cabinet Reshuffle) ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೇರೆ ಯಾರು ಈ ಬಗ್ಗೆ ಮಾತಾಡದೇ ಬಾಯಿ ಮುಚ್ಚಿಕೊಂಡು ಸುಮ್ಮನೆ ಇರಬೇಕು ಎಂದು ಸ್ವಪಕ್ಷದವರ ವಿರುದ್ಧವೇ ಸಚಿವ ಬೋಸರಾಜು (NS Boseraju) ಆಕ್ರೋಶ ಹೊರಹಾಕಿದ್ದಾರೆ.

    ನಾಯಕತ್ವ ಬದಲಾಣೆ ಮತ್ತು ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಏನೇ ಹೇಳಿದ್ರು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು 25 ವರ್ಷ ಕಾಂಗ್ರೆಸ್‌ನಲ್ಲಿ (Congress) ವಿವಿಧ ಹುದ್ದೆಯಲ್ಲಿ ಕೆಲಸ ಮಾಡಿದ್ದೇನೆ. ಯಾವತ್ತು ನಾನು ಅಧಿಕಾರ ಕೇಳಿಲ್ಲ. ಅಧಿಕಾರ ಬೇಕು ಅಂತ ಬಯೋಡಾಟಾ ರೆಡಿ ಮಾಡಿಲ್ಲ. ಮಂತ್ರಿ ಆಗಬೇಕು ಅಂತ ನಾನು ಶಾಸಕ, ಎಂಎಲ್‌ಸಿ ಆಗಲಿಲ್ಲ. ಫೋನ್ ಮಾಡಿದ್ರು ಬಂದು ಮಂತ್ರಿಯಾದೆ. ಒಂದು ಪಕ್ಷ ಶಿಸ್ತಿನ ರೀತಿ ಇರಬೇಕು. 100 ವರ್ಷದ ಇತಿಹಾಸದ ಪಕ್ಷ. ನಾವು ಮಾತಾಡಿದ ಕೂಡಲೇ ಮಾಧ್ಯಮಗಳು ಕೇಳುತ್ತಾರೆ. ಪರಮೇಶ್ವರ್, ಮುನಿಯಪ್ಪ ಯಾರಿಗೆ ಪ್ರಶ್ನೆ ಕೇಳಿದ್ರು ಒಂದೊಂದು ಹೇಳಿಕೆ ಮಾಧ್ಯಮಗಳಿಗೆ ಹೇಳಿದ್ದಾರೆ. ಸಿಎಂ ಅವರು ಹೈಕಮಾಂಡ್ ಹೇಳಿದಂತೆ ಕೇಳ್ತೀನಿ ಅಂತ ಹೇಳಿದ್ದಾರೆ. ಡಿಸಿಎಂ ಅವರು ಸಿಎಂ ಹೇಳಿದ ಮೇಲೆ ಮುಗೀತು ಅಂದಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಎಲ್ಲರೂ ಬಾಯಿಮುಚ್ಚಿಕೊಂಡು ಇರಬೇಕು ಎಂದು ಸ್ವಪಕ್ಷದವರಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

    ಹೈಕಮಾಂಡ್ ಇದೆ ಎಲ್ಲವನ್ನು ನೋಡಿಕೊಳ್ಳುತ್ತದೆ. ಎಲ್ಲರು ಮಾತಾಡೋದು ಸರಿಯಲ್ಲ. ಶಾಸಕರಾಗಿ ಶಾಸಕರ ಕೆಲಸ, ಮಂತ್ರಿಯಾಗಿ ಮಂತ್ರಿ ಕೆಲಸ ಮಾಡಬೇಕು. ಇಲ್ಲದೆ ಹೋದರೆ ಬಿಜೆಪಿ ತರಹ ಕಾಂಗ್ರೆಸ್ ಕೂಡಾ 4 ಬಾಗಿಲು ಆಗುತ್ತದೆ. ಅಶೋಕ್, ವಿಜಯೇಂದ್ರ, ಜೋಷಿ ಬಣ ಆದ ಹಾಗೆ ಕಾಂಗ್ರೆಸ್‌ನಲ್ಲೂ ಆಗಬೇಕಾ? ಹೈಕಮಾಂಡ್, ಸಿಎಂ, ಡಿಸಿಎಂ ಹೇಳಿದಾಗೆ ಕೇಳಬೇಕು. ಬಾಯಿ ಮುಚ್ಚಿಕೊಂಡು ಸುಮ್ಮನೆ ಇರಬೇಕು. ಜನರು ನಮಗೆ ಅಧಿಕಾರ ಕೊಟ್ಟಿರೋದು ಜನ ಸೇವೆ ಮಾಡಲು. ಹೈಕಮಾಂಡ್ ಎಲ್ಲವನ್ನು ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಸಮಯ ಬಂದಾಗ ಹೇಳುತ್ತಾರೆ. ಹೈಕಮಾಂಡ್ ಈಗಾಗಲೇ ಮಾಡಿ ತೋರಿಸಿದೆ. ಅದೇ ರೀತಿ ಕಾದು ಕಾದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

    ಯಾವುದೇ ನಾಯಕರು ಮಾತಾಡೋದು ಸರಿಯಲ್ಲ. ನಾವೆಲ್ಲರು ಬಾಯಿ ಮುಚ್ಚಿಕೊಂಡು ಇರಬೇಕು. ಯಾವುದೇ ಆದರು ಹೈಕಮಾಂಡ್ ಸಮಯ ಬಂದಾಗ ಏನು ಮಾಡಬೇಕೋ ಮಾಡುತ್ತಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮಾಡಲು ಆಗಿಲ್ಲ. ಮೋದಿ, ಅಮಿತ್ ಶಾ ಇದ್ದರು ಮಾಡಲು ಆಗಿಲ್ಲ. ಇಲ್ಲ ವಿಜಯೇಂದ್ರ ಮುಂದುವರೆತ್ತಾರೆ ಅಂತ ಹೇಳೋರು ಇಲ್ಲ. ಯತ್ನಾಳ್, ಈಶ್ವರಪ್ಪ ಒಂದೊಂದು ಮಾತನಾಡುತ್ತಾರೆ. ಅವರು ನಮ್ಮ ಪಕ್ಷದ ಬಗ್ಗೆ ಮಾತಾಡೋದು ಬೇಡ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾರಿಲ್ಲ ಅಂದ್ರೆ ಹೆಣ್ಣು ಕೊಡಲ್ಲ ಅಂತ ಟನಲ್ ರಸ್ತೆ ಮಾಡೋಕೆ ಡಿಕೆಶಿ ಹೊರಟಿದ್ದಾರೆ: ತೇಜಸ್ವಿ ಸೂರ್ಯ ವಾಗ್ದಾಳಿ

    ಡಿಕೆಶಿ ಸಿಎಂ ಆದರೆ ಕೆಪಿಸಿಸಿ ಕಚೇರಿ ಬಾಗಿಲು ಹಾಕಬೇಕು ಎಂದ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ವೈಯಕ್ತಿಕ ಅಭಿಪ್ರಾಯ ಹೇಳೋಕೆ ಎಲ್ಲರಿಗೂ ಅವಕಾಶ ಇದೆ. ಮೋದಿ, ಅಮಿತ್ ಶಾ ಬಗ್ಗೆಯೂ ಅವರ ಪಕ್ಷದಲ್ಲಿ ಮಾತಾಡಿದ್ದಾರೆ ತೊರಿಸಲಾ? ಹಾಗೆ ನಮ್ಮಲ್ಲು ಮಾತನಾಡುತ್ತಾರೆ. ಪರಮೇಶ್ವರ್ ಹೇಳಿಕೆ ಕೂಡಾ ಅವರ ಅಭಿಪ್ರಾಯವೇ ಎಂದರು. ಇದನ್ನೂ ಓದಿ: ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

    ಹೈಕಮಾಂಡ್ ಹೇಳಿದ್ರೆ ಇವತ್ತೆ ನಾವು ಸಚಿವ ಸ್ಥಾನ ಬಿಟ್ಟು ಕೊಡೋಕೆ ನಾವೆಲ್ಲರು ತಯಾರಿದ್ದೇವೆ. ನಾವು ಯಾರು ವಿಸ್ತರಣೆ ಬಗ್ಗೆ ಮಾತನಾಡುತ್ತಿಲ್ಲ. ಆದ್ರು ಪೇಪರ್, ಚಾನಲ್‌ನಲ್ಲಿ ಬರೋದೆ ಭಯ ಆಗುತ್ತಿದೆ. ನಾವು ಅಭಿವೃದ್ಧಿ ಕೆಲಸ ಮಾಡುತ್ತಿದ್ದರೂ ನಮ್ಮನ್ನ ಹರಾಜು ಹಾಕಿದ್ರೆ ಹೇಗೆ? ಪರಮೇಶ್ವರ್ ಅಭಿಪ್ರಾಯ ಅವರದ್ದು. ನಮ್ಮದು ಹೈಕಮಾಂಡ್ ತೀರ್ಮಾನ ಅಂತಿಮ. ಹೈಕಮಾಂಡ್ ಮಾತು ಕೇಳಿದವರು ಮಾತ್ರ ಈ ಪಕ್ಷದಲ್ಲಿ ಇರಬೇಕು. 2.5 ವರ್ಷ ಆಗಿದೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್‌ಗೆ ಹೇಳ್ತೀನಿ, ಹೈಕಮಾಂಡ್ ಹೇಳಿದಂತೆ ಕೇಳ್ತೀನಿ ಅಂತ ಸಿಎಂ ಹೇಳಿದ್ದಾರೆ ಅದು ಸರಿ ಇದೆ. ಅದು ಬಿಟ್ಟು ಎಲ್ಲರು ಒಂದೊಂದು ಮಾತಾಡೋದು ಸರಿಯಲ್ಲ. ಬಾಯಿಮುಚ್ಚಿಕೊಂಡು ಇರಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್

  • ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಬೋಸರಾಜು ಆಹ್ವಾನ

    ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಬೋಸರಾಜು ಆಹ್ವಾನ

    ಬರ್ನ್: 2035ರ ವೇಳೆಗೆ ರಾಜ್ಯವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿಪಡಿಸಲು ದಿಟ್ಟ ಹೆಜ್ಜೆಗಳನ್ನು ಕರ್ನಾಟಕ ಸರ್ಕಾರ ಇಟ್ಟಿದೆ. ಬೆಂಗಳೂರು ನಗರದಲ್ಲಿ ಕ್ಯೂ-ಸಿಟಿ (Q- ಕ್ವಾಂಟಮ್‌ ಸಿಟಿ) ಸ್ಥಾಪಿಸಲು ಅಗತ್ಯ ಭೂಮಿಯನ್ನು ನಿಗದಿಪಡಿಸಲಾಗಿದೆ. ಕ್ವಾಂಟಮ್ (Quantum) ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ವಿಫುಲ ಅವಕಾಶಗಳಿದ್ದು, ಸಹಭಾಗಿತ್ವದ ಸಂಶೋಧನೆಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಜೊತೆ ಕೈಜೋಡಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ಎಸ್ ಬೋಸರಾಜು (NS Boseraju) ಕರೆ ನೀಡಿದರು.

    ಇಂದು ಸ್ವಿಟ್ಜರ್ಲೆಂಡ್‌ನ ಜಿನೆವಾದ ಬಯೋಟೆಕ್ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದ್ದ ‘ಸ್ವಿಸ್‌ನೆಕ್ಸ್ ಕ್ವಾಂಟಮ್ ಸಮಿಟ್ 2025’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಯಲ್ಲಿ ರಾಜ್ಯ ಸರ್ಕಾರ ಇಟ್ಟಿರುವಂತಹ ದಿಟ್ಟ ಹೆಜ್ಜೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಭಾರತ ಸರ್ಕಾರವು ಸುಮಾರು 6,000 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಕ್ವಾಂಟಮ್ ಮಿಷನ್ (NQM) ಆರಂಭಿಸಿದೆ. ಈ ಮಿಷನ್ ನಾವೀನ್ಯತೆ, ಕೌಶಲ್ಯ ಮತ್ತು ಸ್ಟಾರ್ಟ್-ಅಪ್ ಬೆಂಬಲದ ಮೂಲಕ 50ರಿಂದ 1000ಕ್ಯೂ ಬಿಟ್ ಕ್ವಾಂಟಮ್ ಕಂಪ್ಯೂಟರ್‌ಗಳನ್ನು ಅಭಿವೃದ್ಧಿಪಡಿಸುವುದು, ಸುರಕ್ಷಿತ ಕ್ವಾಂಟಮ್ ಸಂವಹನ ಜಾಲಗಳನ್ನು ನಿರ್ಮಿಸುವುದು ಮತ್ತು ಕಂಪ್ಯೂಟಿಂಗ್, ಸಂವಹನ, ಸಂವೇದನೆ ಮತ್ತು ಸಾಮಗ್ರಿಗಳಿಗಾಗಿ ರಾಷ್ಟ್ರೀಯ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಕರ್ನಾಟಕ ರಾಜ್ಯವು ಈ ರಾಷ್ಟ್ರೀಯ ದೃಷ್ಟಿಕೋನವನ್ನು ಅಳವಡಿಸಿಕೊಂಡಿರುವ ಪ್ರಮುಖ ರಾಜ್ಯವಾಗಿ ಹೊರಹೊಮ್ಮಿದೆ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಅನ್ಯಕೋಮಿನ ವ್ಯಕ್ತಿಯಿಂದ ಪದವೀಧರೆ ಮೇಲೆ ರೇಪ್‌ – ಸಂತ್ರಸ್ತೆ ನೆರವಿಗೆ ಧಾವಿಸಿದ ಮಹಿಳೆ ಹೇಳಿದ್ದೇನು?

    ವಿಶ್ವವಿಖ್ಯಾತ ಸಂಶೋಧನಾ ಸಂಸ್ಥೆಯಾಗಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (IISc) ಈಗಾಗಲೇ ಕ್ವಾಂಟಮ್ ರಿಸರ್ಚ್ ಪಾರ್ಕನ್ನು ಸ್ಥಾಪಿಸಿದ್ದು, ಕರ್ನಾಟಕ ಸರ್ಕಾರ ಅಗತ್ಯ ಅನುದಾನ ನೀಡಿದೆ. ಈ ಮೂಲಕ ತಂತ್ರಜ್ಞಾನಕ್ಕೆ ಈಗಾಗಲೇ ಮಹತ್ವದ ಬದ್ಧತೆಯನ್ನು ತೋರಿದೆ. ಈ ಸೌಲಭ್ಯವು 55ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳು ಮತ್ತು 13 ಸ್ಟಾರ್ಟ್ಅಪ್‌ಗಳನ್ನು ಬೆಂಬಲಿಸಿದೆ. ವಾರ್ಷಿಕ 1,000ಕ್ಕೂ ಹೆಚ್ಚು ಕ್ವಾಂಟಮ್ ತಜ್ಞರಿಗೆ ತರಬೇತಿ ನೀಡುತ್ತಿದೆ. ದೀರ್ಘಾವಧಿಯಲ್ಲಿ ಇದನ್ನು ಮುಂದುವರಿಸಲು ನಮ್ಮ ಸರ್ಕಾರವು 48 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಕ್ಕೆ ನೈತಿಕತೆ ಇದ್ದರೆ ಪ್ರಿಯಾಂಕ್ ಮೇಲೆ ಕೇಸ್ ದಾಖಲಿಸಲಿ: ಅಶ್ವಥ್ ನಾರಾಯಣ್

    ಜುಲೈ 31 ಹಾಗೂ ಆಗಸ್ಟ್ 1, 2025ರಂದು ಎರಡು ದಿನಗಳ ಕಾಲ ಭಾರತ ದೇಶದ ಮೊದಲ ಕ್ವಾಂಟಮ್ ಇಂಡಿಯಾ ಶೃಂಗಸಭೆಯನ್ನು ಬೆಂಗಳೂರು ನಗರದಲ್ಲಿ ಆಯೋಜಿಸಲಾಯಿತು. ಕ್ವಾಂಟಮ್ ಇಂಡಿಯಾ ಸಮಿಟ್, ಇಬ್ಬರು ನೋಬೆಲ್ ಪ್ರಶಸ್ತಿ ಪುರಸ್ಕೃರು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಸಂಶೋಧಕರು, ಹಾಗೂ ಕ್ವಾಂಟಮ್ ಕ್ಷೇತ್ರದ ಉದ್ಯಮಿಗಳನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿತ್ತು. ಆ ಸಮ್ಮೇಳನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಕ್ವಾಂಟಮ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಮೀಸಲಿರಿಸುವ ಘೋಷಣೆಯನ್ನು ಮಾಡಿದ್ದಾರೆ. ಸಮಾವೇಶದಲ್ಲಿ ನೀಡಿದ್ದ ಭರವಸೆಯಂತೆ ಕ್ಯೂ-ಸಿಟಿ ನಿರ್ಮಾಣಕ್ಕೆ ಅಗತ್ಯವಿರುವಂತಹ ಭೂಮಿಯನ್ನು ಮಂಜೂರು ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನೀವು ಪಿತೂರಿಯಲ್ಲಿ ತೊಡಗಿದ್ದೀರಿ – ರೈಲ್ವೇ ಹಗರಣದಲ್ಲಿ ಲಾಲು, ರಾಬ್ಡಿ, ತೇಜಸ್ವಿ ವಿರುದ್ಧ ದೋಷಾರೋಪ ನಿಗದಿ

    ಪ್ರತಿವರ್ಷ ಸುಮಾರು 90 ಸಾವಿರಕ್ಕೂ ಹೆಚ್ಚು ಕ್ವಾಂಟಮ್ ಎಂಜಿನಿಯರ್‌ಗಳನ್ನು ತಯಾರಿಸುವ ಮೂಲಕ ವಿಶ್ವದಲ್ಲೇ ಅತ್ಯತ್ತಮ ಮಾನವ ಸಂಪನ್ಮೂಲ ಹೊಂದಿರುವ ದೇಶವಾಗಿದೆ. ಸಂಶೋಧನೆ ಹಾಗೂ ಆವಿಷ್ಕಾರದಲ್ಲಿ ಭಾರತ ದೇಶ ವಿಶ್ವ ಭೂಫಟದಲ್ಲಿ ತನ್ನದೇ ಆದ ವಿಶೇಷ ಸ್ಥಾನಮಾನ ಹೊಂದಿದೆ. ಕರ್ನಾಟಕ ರಾಜ್ಯ ಕ್ವಾಂಟಮ್ ಕ್ಷೇತ್ರದ ಅಭಿವೃದ್ಧಿಗೆ ರೂಟ್ ಮ್ಯಾಪ್ ಸಿದ್ಧಪಡಿಸಿಕೊಂಡಿದೆ. ಸಿಲಿಕಾನ್ ವ್ಯಾಲಿ ಎಂದೇ ಹೆಸರುವಾಸಿಯಾಗಿರುವ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ವಿಫುಲ ಅವಕಾಶಗಳನ್ನು ಹೊಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಈ ಕ್ಷೇತ್ರಗಳಲ್ಲಿ ಕೈಜೋಡಿಸಲು ಮುಂದಾಗುವರಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಕರೆ ನೀಡಿದರು. ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಸಲಿಲ್ಲ ಅಂದ್ರೆ ಮುಖಕ್ಕೆ ಹೊಡೆಯುತ್ತೇನೆ – ಅಧಿಕಾರಿಗಳಿಗೆ ಶಾಸಕ ಬಾಲಕೃಷ್ಣ ತರಾಟೆ

    ಶೃಂಗಸಭೆಯ ಸಂದರ್ಭದಲ್ಲಿ, ಸಚಿವ ಎನ್.ಎಸ್. ಬೋಸರಾಜು ಅವರು ʼಕ್ಯೂ-ಸಿಟಿ – ಫೇಸ್ ಒನ್ʼ ಪರಿಕಲ್ಪನೆಯ ವೀಡಿಯೋವನ್ನು ಅನಾವರಣಗೊಳಿಸಿದರು. ಇದು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಾಂಟಮ್ ತಂತ್ರಜ್ಞಾನ ಕ್ಯಾಂಪಸ್‌ನ ಮೊದಲ ನೋಟವನ್ನು ನೀಡುತ್ತದೆ. ಪ್ರಸ್ತಾವಿತ ಕ್ಯೂ-ಸಿಟಿ ಹಾರ್ಡ್ವೇರ್ ಉತ್ಪಾದನಾ ಘಟಕಗಳು, ಸುಧಾರಿತ ಸಂಶೋಧನೆ ಮತ್ತು ಅಭಿವೃದ್ಧಿ ಸೌಲಭ್ಯಗಳು, ಇನ್‌ಕ್ಯುಬೇಶನ್ ಕೇಂದ್ರಗಳು ಮತ್ತು ಪ್ರಯೋಗಾಲಯದಿಂದ ಮಾರುಕಟ್ಟೆಗೆ ಕ್ವಾಂಟಮ್ ನಾವೀನ್ಯತೆಯನ್ನು ಅಭಿವೃದ್ಧಿಗೊಳಿಸಲು ವಿನ್ಯಾಸಗೊಳಿಸಲಾದ ಸಹಯೋಗದ ಕಾರ್ಯಕ್ಷೇತ್ರಗಳನ್ನು ಸಂಯೋಜಿಸುತ್ತದೆ. ಇದನ್ನೂ ಓದಿ: RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಪ್ರಿಯಾಂಕ್‌ಗೆ ಆಗುತ್ತಾ? – ಯತ್ನಾಳ್ ಕಿಡಿ

    ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು, ಐಎಎಸ್, ಭಾರತೀಯ ವಿಜ್ಞಾನ ಸಂಸ್ಥೆ (IISc) ಕ್ವಾಂಟಮ್ ರಿಸರ್ಚ್ ಪಾರ್ಕನ ಅಧ್ಯಕ್ಷರಾದ ಪ್ರೊ. ಅರಿಂದಮ್ ಘೋಷ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರ ಹಂಚಿನಾಳ್ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಸಮಾವೇಶದಲ್ಲಿ ಭಾಗವಹಿಸಿದೆ. ಇದನ್ನೂ ಓದಿ: ಕೊಡಗು | ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ

  • ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    – ನಮ್ಮ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ

    ಬೆಂಗಳೂರು: ಬಿಜೆಪಿ (BJP) ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ (Delhi) ಹೋಗಿ ಬೊಗಳಲಿ ಎಂದು ಸಚಿವ ಎನ್‌ಎಸ್ ಬೋಸರಾಜು (NS Boseraju) ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಾತಿಗಣತಿಗೆ ದಸರಾ ರಜೆ ವಿಸ್ತರಣೆ ಮಾಡಿರೋದಕ್ಕೆ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಕಾಂಪಿಟೇಷನ್ ಮೇಲೆ ಟೀಕೆ ಮಾಡುತ್ತಿದ್ದಾರೆ. ಜನರು ಸಂತೋಷದಿಂದ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿಯವರು ಮಾತ್ರ ಸಮೀಕ್ಷೆ ವಿರೋಧಿಸುತ್ತಿದ್ದಾರೆ. ರಾಜ್ಯದಲ್ಲಿ ನೆರೆ ಬಂದಿದೆ. ಕೇಂದ್ರ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ. ಸಿಎಂ ವೈಮಾನಿಕ ಸಮೀಕ್ಷೆ ಮಾಡಿದ್ರೂ ವಿರೋಧ ಮಾಡುತ್ತಾರೆ. ಪ್ರವಾಹ ಬಂದಾಗ ರಸ್ತೆ ಮೂಲಕ ಸಮೀಕ್ಷೆ ಮಾಡಲು ಆಗುತ್ತಾ? ಮೋದಿ ಏನು ರಸ್ತೆ ಮೂಲಕ ನೆರೆ ಸಮೀಕ್ಷೆ ಮಾಡ್ತಾನಾ? ಅಂತ ಮೋದಿ ವಿರುದ್ಧ ಏಕವಚನದಲ್ಲಿ ಹರಿಹಾಯ್ದರು. ಇದನ್ನೂ ಓದಿ: ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್

    ಬಿಜೆಪಿಯವರು ಇಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಬೇಕು. ಇವರಿಗೆ ಏನಾದ್ರೂ ನೀತಿ ನಿಯಮ ಇದೆಯಾ? ಬಿಜೆಪಿಯವರು ಬರೀ ಡ್ರಾಮ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 6 ಮಂದಿ ಸಜೀವ ದಹನ

    ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲಾ ಸೃಷ್ಟಿ ಮಾಡುವವರು ಬಿಜೆಪಿಯವರು. ಸತೀಶ್ ಜಾರಕಿಹೊಳಿಯವರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಯತ್ನಾಳ್ ಅವರು ವಿಜಯೇಂದ್ರ ಕಳ್ಳ ಎಂದು ಹೇಳಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ಏನು ಹೇಳುತ್ತೋ ಅದೇ ಆಗುತ್ತೆ. ಸಿಎಂ, ಡಿಸಿಎಂ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಅಂತಾ ನೂರು ಸಾರಿ ಬಿಜೆಪಿಯವರು ಬೊಗಳುತ್ತಾರೆ. ಡೇಟ್ ಮೇಲೆ ಡೇಟ್ ಕೊಟ್ಟು ಬಿಜೆಪಿಯವರೇ ಹೇಳುತ್ತಿದ್ದಾರೆ. ದಸರಾ ಉದ್ಘಾಟನೆ ಮಾಡಲ್ಲ ಅಂತಾ ಬಿಜೆಪಿಯವರೇ ಹೇಳಿದ್ರು. ಬಿಜೆಪಿಯವರಿಗೇನು ನೀತಿನಿಯಮ ಇದೆಯಾ ಎಂದು ಕಿಡಿಕಾರಿದರು. ಇದನ್ನೂ ಓದಿ: ದಾವಣಗೆರೆ | ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ

    ವಿಜಯೇಂದ್ರ ಲೂಟಿ ಮಾಡಿ ಸಾವಿರ ಕೋಟಿ ಇಟ್ಕೊಂಡು ಸರ್ಕಾರ ಬೀಳಿಸ್ತಾನೆ ಅಂತಾ ಯತ್ನಾಳ್ ಹೇಳಿದ್ದಾರೆ. ಮೊದಲು ಬಿಜೆಪಿಯವರು ಅವರ ಮನೆ ಸರಿಪಡಿಸಿಕೊಳ್ಳಲಿ. ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ನಡೆಯುತ್ತಿದೆ. ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕವಿದೆ ಎಂದು ಗುಡುಗಿದರು. ಇದನ್ನೂ ಓದಿ: Bengaluru| ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಮಿನಿ ಟ್ರಕ್

  • ರಾಜ್ಯದ 15 ಜಿಲ್ಲೆಗಳ 252 ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ; ನಟ ವಸಿಷ್ಠ ಸಿಂಹ ರಾಯಭಾರಿ

    ರಾಜ್ಯದ 15 ಜಿಲ್ಲೆಗಳ 252 ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ; ನಟ ವಸಿಷ್ಠ ಸಿಂಹ ರಾಯಭಾರಿ

    – ನಾಳೆ ಸಿಎಂ, ಡಿಸಿಎಂ ರಿಂದ ಚಾಲನೆ: ಸಚಿವ ಬೋಸರಾಜು

    ಬೆಂಗಳೂರು: ರಾಜ್ಯದ 15 ಜಿಲ್ಲೆ, 27 ತಾಲ್ಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು (NS Boseraju) ತಿಳಿಸಿದರು.

    ವಿಕಾಸಸೌಧ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ ʻನೀರಿದ್ದರೆ ನಾಳೆʼ ಎನ್ನುವ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ನೀರಿನ ಮಹತ್ವ ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನ ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು.

    ಸಾಂದರ್ಭಿಕ ಚಿತ್ರ

    ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ (Groundwater) ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ ಎಂದರು.

    ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಸಿಷ್ಠ ಸಿಂಹ (Vasishta Simha) ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. ನಾಳೆ ವಿಧಾನಸೌಧದ ಬ್ವಾಂಕ್ವೆಟ್‌ ಹಾಲ್‌ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಜ್ಯದಲ್ಲಿ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿಗಳಾದ ಬಿ.ಕೆ ಪವಿತ್ರ ಅವರು ಉಪಸ್ಥಿತರಿದ್ದರು.

  • ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಡಿಕೇರಿ ದಸರಾಕ್ಕೆ ಚಾಲನೆ

    ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಡಿಕೇರಿ ದಸರಾಕ್ಕೆ ಚಾಲನೆ

    – ಪ್ರಮುಖ ಬೀದಿಗಳಲ್ಲಿ ಶಕ್ತಿ ದೇವತೆಗಳ ಮೆರವಣಿಗೆ; ಕರಗ ವೈಭವ
    – ಸಂಗೀತ ಕಾರ್ಯಕ್ರಮಕ್ಕೆ ರಘು ದೀಕ್ಷಿತ್‌ಗೆ ಆಹ್ವಾನ; ಮಂತರ್ ಗೌಡ

    ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ (Madikeri Dasara) ಇಂದಿನಿಂದ ಚಾಲನೆ ಸಿಕ್ಕಿದೆ. 9 ದಿನಗಳ ದಸರಾ ಉತ್ಸವ ಇಂದು ಕರಗ ಹೊರುವ ಮೂಲಕ ಪ್ರಾರಂಭಗೊಂಡಿದೆ. ನಗರದ ನಾಲ್ಕು ಶಕ್ತಿ ದೇವತೆಗಳಿಗೆ ಪೂಜೆ ನೆರವೇರಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ 1 ವಾರ ನಗರದಲ್ಲಿ ವೈವಿದ್ಯಮಯ ಕಾರ್ಯಕ್ರಮಗಳು ಜನರನ್ನು ರಂಜಿಸಲಿವೆ.

    ಎಲ್ಲೆಡೆ ಈಗ ನಾಡ ಹಬ್ಬ ದಸರಾ ಸಂಭ್ರಮ ಶುರುವಾಗಿದೆ, ಜಗತ್‌ಪ್ರಸಿದ್ಧ ಮೈಸೂರು ದಸರಾ ಜೊತೆಗೆ ಮಡಿಕೇರಿ ದಸರಾಕ್ಕೂ ವಿದ್ಯುಕ್ತ ಚಾಲನೆ ಸಿಕ್ಕಿದೆ. 300 ವರ್ಷಗಳ ಇತಿಹಾಸ ಹೊಂದಿರೋ ಮಂಜಿನ ನಗರಿ ಮಡಿಕೇರಿ ದಸರಾ ಇಂದು ನಗರದ ನಾಲ್ಕು ಶಕ್ತಿದೇವತೆಗಳ ಕರಗಾಕ್ಕೆ ಪೂಜೆ ಸಲ್ಲಿಸೋ ಮೂಲಕ ಚಾಲನೆ ಲಭಿಸಿದೆ. ನಗರದ ಪಂಪಿನ ಕೆರೆಬಳಿಯಲ್ಲಿ ನಾಲ್ಕೂ ಕರಗಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಕೊಡಗು ಉಸ್ತುವಾರಿ ಸಚಿವ ಬೋಸರಾಜು, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಕರಗ ಹೊರೋ ಮೂಲಕ ದಸರಾ ಪ್ರಾರಂಭಗೊಂಡಿದ್ದು ನಾಳೆಯಿಂದ ವೈವಿದ್ಯಮಯ ಕಾರ್ಯಕ್ರಮಗಳು ಕಲಾಸಕ್ತರ ಮನತಣಿಸಲು ರೆಡಿಯಾಗಿವೆ.

    ಇಂದು ಸಂಜೆ ಕರಗಗಳಿಗೆ ಪೂಜೆಸಲ್ಲಿಸಿದ ದಸರಾ ಸಮಿತಿ ಸದಸ್ಯರು ದಸರಾ ಯಶಸ್ಸಿಗೆ ದೇವರಿಗೆ ಮೊರೆಯಿಟ್ಟಿದ್ದಾರೆ. ನಗರದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿಮ್ಮ ದೇವಾಲಯಗಳ ಕರಗಗಳನ್ನು ಹೊತ್ತ ವೃತದಾರಿಗಳು ನವರಾತ್ರಿಯ ಒಂಬತ್ತು ದಿನಗಳು ನಗರದ ಬೀದಿ ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಶತಮಾನಗಳ ಹಿಂದೆ ಬರಗಾಲದಿಂದ ಮಡಿಕೇರಿಯಲ್ಲಿ ಬೀಕರ ಕಾಲರಾ, ಆವರಿಸಿದ್ದ ಸಂದರ್ಭ ನಗರದ ದೇವತೆಗಳನ್ನು ಕರಗದ ಮೂಲಕ ನಗರದ ಪ್ರದಕ್ಷಿಣೆ ಮಾಡಿ ಪೂಜೆಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ವರ್ಷಕ್ಕೆ ಒಂದು ಬಾರಿ ದಸರಾ ಸಂದರ್ಭದಲ್ಲಿ ಕರಗ ಉತ್ಸವ ನಡೆಸಲಾಗುತ್ತೆ. ಮಡಿಕೇರಿಯ ಶಕ್ತಿದೇವತೆಗಳೆಂದು ಕರೆಸಿಕೊಳ್ಳೋ ನಾಲ್ಕೂ ದೇವಿಯರನ್ನು ಆರಾಧಿಸಿ ಜನರು ಪೂಜಿಸುತ್ತಾರೆ. ನಗರದಲ್ಲಿ ಕರಗ ಸಂಚರಿಸೋ ವೇಳೆ ಪ್ರತಿ ಮನೆಮುಂದೆಯೂ ಬಣ್ಣ ಬಣ್ಣದ ಚಿತ್ತಾರದ ರಂಗೋಲಿಬಿಡಿಸಿ ದೇವರನ್ನ ಸ್ವಾಗತಿಸಲಾಗುತ್ತೆ, ನಾಡಿಗೆ ಶುಭವಾಗಲಿ ಎಂದು ಹಾರೈಸಿ ಪೂಜೆ ಸಲ್ಲಿಸಲಾಗುತ್ತೆ.

    ಸಚಿವ ಭೋಸರಾಜು ಹೇಳಿದ್ದೇನು?
    ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ, ನಗರದ ಶಕ್ತಿ ದೇವತೆಗಳಿಗೆ ವಿಶೇಷ ಪ್ರಾರ್ಥನೆಯೊಂದಿಗೆ ದಸರಾಕ್ಕೆ ಚಾಲನೆ ನೀಡಲಾಗಿದೆ. ಭಕ್ತಿಭಾವದಿಂದ ಕರಗ ಉತ್ಸವದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ಸಚಿವರು ತಿಳಿಸಿದರು.

    ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಸರ್ಕಾರ ಮಡಿಕೇರಿ ದಸರಾ ಉತ್ಸವಕ್ಕೆ 1.50 ಕೋಟಿ ರೂ. ಬಿಡುಗಡೆಗೆ ಆದೇಶ ಮಾಡಿದ್ದು, ಈ ಬಾರಿ ಸಂಗೀತ ಕಾರ್ಯಕ್ರಮಕ್ಕೆ ರಘು ದೀಕ್ಷಿತ್ ಅವರನ್ನು ಆಹ್ವಾನಿಸಲಾಗುವುದು ಎಂದರು.

    ನಗರಸಭೆ ಅಧ್ಯಕ್ಷ ಪಿ.ಕಲಾವತಿ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಉಪ ವಿಭಾಗೀಯ ಅಧಿಕಾರಿ ನಿತಿನ್ ಚಕ್ಕಿ, ಡಿವೈಎಸ್ಪಿ ಸೂರಜ್, ಪೌರಾಯುಕ್ತರಾದ ಎಚ್.ಆರ್ ರಮೇಶ್, ತಹಶೀಲ್ದಾ‌ರ್‌ ಶ್ರೀಧರ, ನಗರ ದಸರಾ ಸಮಿತಿ ಅಧ್ಯಕ್ಷ ಬಿ.ಕೆ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ವಿವಿಧ ಉಪ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಭಕ್ತರ ಜಯಘೋಷದೊಂದಿಗೆ ಶಕ್ತಿದೇವತೆಗಳ ಮೆರವಣಿಗೆ
    ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದಂತೆ ಶಕ್ತಿ ದೇವತೆಗಳಾದ ಶ್ರೀ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ, ಶ್ರೀ ದಂಡಿನ ಮರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳ ಕರಗಗಳಿಗೆ ಪುಷ್ಪಾಲಂಕೃತವಾಗಿ ಭಕ್ತರ ಜಯಘೋಷದೊಂದಿಗೆ ಮರೆವಣಿಗೆ ಆರಂಭಿಸಿದವು. ಪೂಜೆ ಸಲ್ಲಿಕೆ ಬಳಿಕ ನಾಲ್ಕು ಶಕ್ತಿ ದೇವತೆಗಳ ಕರಗಗಳು ಮೆರವಣಿಗೆ ಹೊರಟವು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತಿದ್ದಂತೆ ಜನರು ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು.

  • ವೀರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ: ಬೋಸರಾಜು

    ವೀರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ: ಬೋಸರಾಜು

    ರಾಯಚೂರು: ವೀರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ. ನ್ಯಾಯಯುತವಾಗಿ ಏನು ನಡೆಯಬೇಕೋ ಅದು ನಡೆಯುತ್ತದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

    ರಾಯಚೂರಿನಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಇಡಿ ಬಂಧನ ವಿಚಾರವಾಗಿ ಮಾತನಾಡಿದ ಅವರು, ಗ್ಯಾಂಬ್ಲಿಂಗ್ ಮಾಡ್ತಾರೋ ಅಥವಾ ಮತ್ತೊಂದೋ. ಯಾರೇ ಏನೇ ಮಾಡಿರಲಿ, ಕಾನೂನುಬಾಹಿರ ಚಟುವಟಿಕೆಗಳಿಗೆ ಸರ್ಕಾರ ಎಂದೂ ಅವಕಾಶ ಕೊಡುವುದಿಲ್ಲ. ಅವರು ಯಾರೇ ಇರಲಿ ಅವರ ಮೇಲೆ ಕ್ರಮ ತಗೆದುಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ನನ್ನ ಮಗಳನ್ನು ಕೊಂದ ಪಾಪಿಯನ್ನು ಎನ್‌ಕೌಂಟರ್ ಮಾಡಿ: ನಿಕ್ಕಿ ತಂದೆ ಕಣ್ಣೀರು

    ಇನ್ನೂ ಧರ್ಮಸ್ಥಳದ ಪ್ರಕರಣವು ಈಗಾಗಲೇ ಒಂದು ಹಂತಕ್ಕೆ ಬಂದಿದೆ. ಎಸ್‌ಐಟಿ ರಚನೆ ಮಾಡಿ ತನಿಖೆ ನಡೆದಿರುವುಕ್ಕೆ ಹೆಗ್ಗಡೆಯವರು ಸ್ವಾಗತ ಮಾಡಿದ್ದಾರೆ. ತನಿಖೆಯಿಂದ ಸತ್ಯ ಹೊರಬರಲಿ, ಕಾಂಗ್ರೆಸ್ ಒಳ್ಳೆಯ ಕೆಲಸ ಮಾಡಿದೆ ಅಂತ ಹೆಗ್ಗಡೆಯವರು ಹೇಳಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಈಗಾಗಲೇ ಎಫ್‌ಐಆರ್ ಮಾಡಿ, ಬಂಧನವೂ ಆಗಿದೆ. ಯಾವುದೇ ಸರ್ಕಾರ ಇರಲಿ ದೂರು ಬಂದರೆ ತನಿಖೆ ಮಾಡುವ ಜವಾಬ್ದಾರಿ ಇರುತ್ತದೆ. ಹಾಗಾಗಿ ಸರ್ಕಾರ ತನ್ನ ಕರ್ತವ್ಯ ನಿರ್ವಹಿಸಿದೆ. ಈಗ ಸತ್ಯ ಹೊರ ಬರುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ – ವೋಟರ್‌ ಲಿಸ್ಟ್‌ನಲ್ಲಿ ಇಬ್ಬರು ಪಾಕಿಸ್ತಾನಿ ಮಹಿಳೆಯರು ಪತ್ತೆ!

    ಬಿಜೆಪಿಯವರಿಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ. ಎಸ್‌ಐಟಿ ಮಾಡಿ ಒಂದುವರೆ ತಿಂಗಳ ಬಳಿಕ ಎಲ್ಲಿಯೂ ಏನೂ ಸಿಕ್ಕಿಲ್ಲ ಅಂತ ಈಗ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ರಾಜ್ಯದ ಅಭಿವೃದ್ಧಿಗಿಂತ ರಾಜಕೀಯ ಮುಖ್ಯ. ಶಾಂತಿ ನೆಮ್ಮದಿ ಅವರಿಗೆ ಬೇಕಿಲ್ಲ. ಧರ್ಮದ ಆಧಾರದ ಮೇಲೆ ಗಲಾಟೆ ಮಾಡಿಸುವುದು ಮೊದಲಿನಿಂದ ಬಂದಿದೆ. ಬಿಜೆಪಿ ಸರ್ಕಾರ ಇದ್ದಾಗಲೂ ಮಂಗಳೂರು, ಉಡುಪಿಯಲ್ಲಿ ಗಲಭೆಗಳಾಗಿವೆ ಎಂದು ಟಾಂಗ್ ಕೊಟ್ಟಿದ್ದಾರೆ.

  • ಉಕ್ಕಿ ಹರಿದ ಕಾವೇರಿ – ಕೃಷಿ ಗದ್ದೆಗಳು ಜಲವೃತ

    ಉಕ್ಕಿ ಹರಿದ ಕಾವೇರಿ – ಕೃಷಿ ಗದ್ದೆಗಳು ಜಲವೃತ

    – ನಿನ್ನೆ ಮಳೆ ಹಾನಿ‌ ಪ್ರದೇಶಕ್ಕೆ ಸಚಿವ ಬೋಸರಾಜು ಭೇಟಿ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಕೊಂಚಮಟ್ಟಿಗೆ ಮಳೆ ತಗ್ಗಿದ್ರೂ ಮಳೆ ಅವಾಂತರಗಳು ಮಾತ್ರ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ‌. ಮಡಿಕೇರಿ (Madikeri_ ತಾಲೂಕಿನ ನಾಪೋಕ್ಲು ಬೋಳಿಬಾಣ್ಣೆ ಭಾಗದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮದಿಂದ ಕೃಷಿ ಗದ್ದೆಗಳು ಸಂಪೂರ್ಣವಾಗಿ ಜಲಾವೃತವಾಗಿದೆ.

    ಅಲ್ಲದೇ ಕಾಫಿ, ಅಡಿಕೆ ತೋಟಗಳಿಗೂ ಕಾವೇರಿ ನದಿ (Cauvery River) ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ ರೈತರು ಕಂಗಾಲಾಗಿದ್ದಾರೆ. ಅಲ್ಲದೇ ರಸ್ತೆಯ ಮೇಲೂ 2-3 ಅಡಿಯಷ್ಟು ನೀರು ಹರಿಯುತ್ತಿರುವುದರಿಂದ ನಾಪೋಕ್ಲು ಮೂರ್ನಾಡು ರಸ್ತೆ ಸಂಪರ್ಕ ಕಡಿತಗೊಂಡಿದು. ಗ್ರಾಮೀಣ ಭಾಗದ ಜನರು ಸುತ್ತಿಬಳಸಿಕೊಂಡು ತಮ್ಮ ಊರಿನತ್ತ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಬಿಜೆಪಿ ಕುರುಬ ಸಮುದಾಯದ ನಾಯಕರ ಸಭೆ; ವಿಜಯೇಂದ್ರ‌ ಪರ ಬ್ಯಾಟಿಂಗ್ – ಈಶ್ವರಪ್ಪ ಘರ್ ವಾಪ್ಸಿ ಬಗ್ಗೆ ಚರ್ಚೆ

    ಮಳೆ ಹಾನಿ‌ ಪ್ರದೇಶಕ್ಕೆ ಸಚಿವ ಬೋಸರಾಜು ಭೇಟಿ
    ಇನ್ನೂ ಕೊಡಗು ಜಿಲ್ಲೆಯ ನಾಪೋಕ್ಲು ವ್ಯಾಪ್ತಿಯ ಚೆರಿಯಪರಂಬು ಭಾಗದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ವಿರಾಜಪೇಟೆ ಶಾಸಕ ಎಸ್ ಪೊನ್ನಣ್ಣ ಶನಿವಾರ (ನಿನ್ನೆ) ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಪ್ರತಿ ವರ್ಷ ಮಳೆಗಾಲದಲ್ಲಿ ಉಕ್ಕಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಹಾಗೂ ಸುತ್ತಮುತ್ತಲಿನ ಪರಿಸರದ ವೀಕ್ಷಿಸಿದ ಮಾಡಿದ ಶಾಸಕರು, ಅಧಿಕಾರಿಗಳೊಂದಿಗೆ ಸುರಕ್ಷತೆ ಕ್ರಮದ ಬಗ್ಗೆ ಚರ್ಚಿಸಿ ಸಲಹೆ ನೀಡಿದರು. ‌‌‌ಮುಂದಿನ ದಿನಗಳಲ್ಲಿ ಪ್ರವಾಹದಿಂದ ಸಂಪರ್ಕ ಕಡಿತಗೊಳ್ಳುವ ಈ ಸೇತುವೆಯ ಆಸುಪಾಸಿನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚಿಸಿದರು. ಪ್ರವಾಹ ಪೀಡಿತ ಸ್ಥಳಗಳಿಗೆ ಜೀಪ್‌ನಲ್ಲಿ ತೆರಳಿ ಸಚಿವರು ಹಾಗೂ ಶಾಸಕರು ಜನರ ಸಮಸ್ಯೆ ಆಲಿಸಿದರು. ಇದನ್ನೂ ಓದಿ: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

  • ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ದತಿ ಜಾರಿ ಮಾಡ್ತೀವಿ, ಸಮಯ ನಿಗದಿ ಮಾಡಲು ಆಗಲ್ಲ: ಬೋಸರಾಜು

    ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ದತಿ ಜಾರಿ ಮಾಡ್ತೀವಿ, ಸಮಯ ನಿಗದಿ ಮಾಡಲು ಆಗಲ್ಲ: ಬೋಸರಾಜು

    ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಇರುವ ಸರ್ಕಾರಿ ನೌಕರಿಗೆ ಓಪಿಎಸ್ ಜಾರಿ ಮಾಡುತ್ತೇವೆ. ಯಾವಾಗ ಮಾಡುತ್ತೇವೆ ಎಂದು ಸಮಯ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ವಿಧಾನ ಪರಿಷತ್‌ನಲ್ಲಿ ಸಭಾ ನಾಯಕ ಬೋಸರಾಜು (NS Boseraju) ಉತ್ತರ ನೀಡಿದ್ದಾರೆ.

    ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡೇ ಪ್ರಶ್ನೆ ಕೇಳಿದರು. ಸರ್ಕಾರಿ ಎನ್‌ಪಿಎಸ್ ನೌಕರರಿಗೆ ಓಪಿಎಸ್ ಯೋಜನೆ ಜಾರಿ ಮಾಡಬೇಕು. ಓಪಿಎಸ್ ಕೊಡೋದಾಗಿ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲೂ ಸೇರಿಸಲಾಗಿತ್ತು. ನಮ್ಮ ಸರ್ಕಾರ ಬಂದಾಗ ಓಪಿಎಸ್ ಜಾರಿ ಮಾಡೋದಾಗಿ ಹೇಳಿದ್ದೆವು. ಸರ್ಕಾರ ಬಂದು 1.5 ವರ್ಷ ಆದರೂ ಯಾವುದೇ ನಿರ್ಧಾರ ಆಗಿಲ್ಲ. ಇದು ಸರಿಯಲ್ಲ. ಸರ್ಕಾರ ಸಮಿತಿ ಮಾಡಿದೆ. ಸಮಿತಿಯಿಂದ ನಮಗೇನು ಲಾಭವಿಲ್ಲ. ಓಪಿಎಸ್‌ಗಾಗಿ ಹೋರಾಟ ನಡೆಯುತ್ತಿದೆ. ಕೂಡಲೇ ಓಪಿಎಸ್ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

    ಸಿಎಂ ಸಿದ್ದರಾಮಯ್ಯ ಪರವಾಗಿ ಸಚಿವ ಬೋಸರಾಜು ಉತ್ತರ ನೀಡಿ, ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿ 2,86,445. ಸರ್ಕಾರಿ ನೌಕರರು ಒಳಪಟ್ಟಿದ್ದಾರೆ. ಓಪಿಎಸ್ ಜಾರಿ ಮಾಡುವ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ಸಮಿತಿ ಎರಡು ಸಭೆ ಮಾಡಲಾಗಿದೆ. ಸಮಿತಿ ವರದಿ ಕೊಟ್ಟ ಬಳಿಕ ಪರಿಶೀಲನೆ ಮಾಡಿ ಓಪಿಎಸ್ ಜಾರಿ ಮಾಡೋ ಬಗ್ಗೆ ನಿರ್ಧಾರ ಮಾಡುತ್ತೇವೆ. ಓಪಿಎಸ್ ಕಾಲಮಿತಿ ನೀಡಲು ಆಗಲ್ಲ. ಇಷ್ಟೇ ಸಮಯ ಒಳಗೆ ಕೊಡುತ್ತೇವೆ ಎಂದು ಹೇಳಲು ಆಗಲ್ಲ. ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ರನ್ಯಾಗೆ ಮಾತ್ರ ಸಿನಿಮಾ ನಂಟಿಲ್ಲ – ಆರೋಪಿ ತರುಣ್‌ಗೆ ಇದೆ ಟಾಲಿವುಡ್ ನಂಟು!

    ಸಚಿವ ಪರಮೇಶ್ವರ್ ಮಾತಾಡಿ, ಪ್ರಣಾಳಿಕೆ ಬರೆಯೋವಾಗ ಚರ್ಚೆ ಮಾಡಿ ಇದನ್ನ ಸೇರಿಸಿದ್ದೇವೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿಲ್ಲ.ನಾವು ಕಮಿಟ್ ಆಗಿದ್ದೇವೆ. ನಾವು ಕೊಟ್ಟ ಭರವಸೆ ಈಡೇರಿಸುತ್ತೇವೆ. ಇಂದು ಆಗಬಹುದು, ನಾಳೆ ಆಗಬಹುದು. ಇದಕ್ಕೆ ಕೋಟ್ಯಂತರ ರುಪಾಯಿ ಖರ್ಚು ಆಗುತ್ತದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಮಾನಿಟರ್‌ಗೆ ಪ್ರತಿ ಠಾಣೆಯಲ್ಲಿ ವಿಶೇಷ ವಿಭಾಗ ಸ್ಥಾಪನೆ: ಪರಮೇಶ್ವರ್

  • ಸಿಎಂ ವಿರುದ್ದದ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಎನ್‌ ಎಸ್‌ ಭೋಸರಾಜು

    ಸಿಎಂ ವಿರುದ್ದದ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಎನ್‌ ಎಸ್‌ ಭೋಸರಾಜು

    ಬೆಂಗಳೂರು: ಮೂಡಾ (MUDA Case) ಎಂಬ ಸುಳ್ಳು ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ (CM Siddaramaiah) ಹೆಸರಿಗೆ ಮಸಿ ಬಳಿಯುವ ಹಾಗೂ ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲಾಗಿದೆ. ಲೋಕಾಯುಕ್ತ ಸಂಸ್ಥೆ ಕಾನೂನು ಬದ್ದವಾಗಿ ತನಿಖೆ ನಡೆಸಲಿದ್ದು ಸದ್ಯದಲ್ಲೇ ಸತ್ಯ ಹೊರಬೀಳಲಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು (NS Boseraju) ಪ್ರತಿಕ್ರಿಯಿಸಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆಯನ್ನು ನೀಡಿರುವ ಅವರು ಇಂದು ಹೈಕೋರ್ಟ್‌ (High Court) ನೀಡಿರುವ ತೀರ್ಪು ಬಹಳ ಮಹತ್ವದ್ದಾಗಿದೆ.

    ಸಿಬಿಐ ಹಾಗೂ ಇಡಿ ಯಂತಹ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ರಾಜಕೀಯ ಎದುರಾಳಿಗಳನ್ನು ಹಣಿಯಬಹುದು ಎಂಬ ಬಿಜೆಪಿ (BJP) ಲೆಕ್ಕಾಚಾರಕ್ಕೆ ಹೈಕೋರ್ಟ್‌ನ (High Court) ಈ ತೀರ್ಪು ಎಚ್ಚರಿಕೆಯಾಗಿದೆ. ತಡವಾದರೂ ಸತ್ಯಕ್ಕೆ ಜಯ ಸಿಗುತ್ತದೆ ಎಂಬುದು ರುಜುವಾತಾಗಿದೆ.  ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾಗ ಅಸಾಧ್ಯವೆಂದು ಅಣಕವಾಡಿದ್ದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ಈಗ ಸಿದ್ದರಾಮಯ್ಯನವರು ನುಡಿದಂತೆ ನಡೆಯುತ್ತಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಬಡವರು ಹಾಗೂ ಮಧ್ಯಮ ವರ್ಗದ ಪಾಲಿಗೆ ಉತ್ತಮ ಆಡಳಿತ ನೀಡುತ್ತಿರುವುದನ್ನು ನೋಡಲು ಸಾಧ್ಯವಾಗುತ್ತಿಲ್ಲ. ಹೇಗಾದರೂ ಮಾಡಿ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯಬೇಕು, ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಆ ಪ್ರಯತ್ನಗಳ ಪೈಕಿ ಮುಡಾ ಪ್ರಕರಣ ಕೂಡ ಒಂದಾಗಿದೆ. ಇದನ್ನೂ ಓದಿ: POCSO Case: ಬಂಧನ ಭೀತಿಯಿಂದ ಬಚಾವ್, ಬಿಎಸ್‌ವೈಗೆ ಜಾಮೀನು- ಕೋರ್ಟ್‌ ಹೇಳಿದ್ದೇನು?

    2021ರಲ್ಲಿ ಸಿದ್ದರಾಮಯ್ಯನವರ ಕುಟುಂಬಕ್ಕೆ 14 ಸೈಟ್‌ ಕೊಟ್ಟ ಬಸವರಾಜ ಬೊಮ್ಮಾಯಿ ಅವರಿಗೆ ಇಡಿ ನೋಟಿಸ್‌ ನೀಡಬೇಕಿತ್ತು. ಮುಡಾಗೆ ಸಂಬಂಧಿಸಿ ಜಮೀನಿನ ನೋಂದಣಿ, 50:50 ನೀಡಿಕೆ ರೂಲ್ಸ್‌, ಸೈಟ್‌ ನೀಡಿದ್ದು ಎಲ್ಲವೂ ಬಿಜೆಪಿ ಸರ್ಕಾರದ ಅವಧಿಯಲ್ಲೇ ನಡೆದಿರುವಾಗ ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡಿರುವುದು ರಾಜಕೀಯ ದುರುದ್ದೇಶವಲ್ಲದೆ ಮತ್ತೇನು ಎಂದು ಪ್ರಶ್ನಿಸಿದ್ದಾರೆ.

    ರಾಜ್ಯ ಬಿಜೆಪಿಯ ಸ್ಥಿತಿ ಮನೆಯೊಂದು ನೂರು ಬಾಗಿಲು ಎಂಬಂತಾಗಿದೆ. ಬಿಜೆಪಿ ಆಂತರಿಕ ಕಲಹವನ್ನು ಮುಚ್ಚಿಹಾಕಲು ಮುಡಾ ವಿಚಾರವನ್ನು ಮುಂದಿಟ್ಟು ಸುಖಾಸುಮ್ಮನೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿ ವಿರೋಧ ಪಕ್ಷಗಳು ಸಫಲರಾಗುವುದಿಲ್ಲ ಎಂದಿದ್ದಾರೆ.