Tag: nsg

  • ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆ್ಯಂಟಿ- ಹೈಜಾಕ್‌ ಅಣುಕು ಪ್ರದರ್ಶನ

    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆ್ಯಂಟಿ- ಹೈಜಾಕ್‌ ಅಣುಕು ಪ್ರದರ್ಶನ

    ಬೆಂಗಳೂರು: ಭದ್ರತೆ ಮತ್ತು ತುರ್ತು ಪ್ರತಿಕ್ರಿಯೆಯ ಪ್ರೋಟೋಕಾಲ್‌ನ ಭಾಗವಾಗಿ ರಾಷ್ಟ್ರೀಯ ಭದ್ರತಾ ಪಡೆ (NSG) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಆ್ಯಂಟಿ-ಹೈಜಾಕ್ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು.

    ಜೂನ್ 24, ಸೋಮವಾರ ರಾತ್ರಿ 8 ಗಂಟೆಗೆ ಆರಂಭಗೊಂಡು, ಮಧ್ಯರಾತ್ರಿ ಮುಕ್ತಾಯಗೊಂಡ ಈ ಅಣುಕು ಪ್ರದರ್ಶನವು ನೈಜ-ಸಮಯದ ಸಂವಹನ ವ್ಯವಸ್ಥೆ, ಸುಧಾರಿತ ಕಣ್ಗಾವಲು ಉಪಕರಣಗಳು ಮತ್ತು ಅತ್ಯಾಧುನಿಕ ಭಯೋತ್ಪಾದನಾ-ವಿರೋಧಿ ಕ್ರಮಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವಲ್ಲಿ ಎನ್ಎಸ್‌ಜಿಯ ಸಮರ್ಪಣೆಯನ್ನು ಉದಾಹರಿಸುತ್ತದೆ.

    ಈ ಅಣುಕು ಪ್ರದರ್ಶನವು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ನಿರ್ಣಾಯಕ ನಿಲುವು ಹೊಂದಿರುತ್ತದೆ. ವಿಮಾನ ನಿಲ್ದಾಣದ ಯುದ್ಧತಂತ್ರದ ಸಿದ್ಧತೆಯನ್ನು ನಿರ್ಣಯಿಸಲು ಮತ್ತು ಸುಧಾರಿಸಲು ವಿನ್ಯಾಸಗೊಳಿಸಲಾದ ವಿವಿಧ ಸನ್ನಿವೇಶಗಳನ್ನು ಒಳಗೊಂಡಿತ್ತು.

    ಅಪಹರಿಸಿದ ವಿಮಾನ ಏರ್‌ಪೋರ್ಟ್‌ಗೆ ಬಂದು ಇಳಿದ ಕೃತಕ ಸನ್ನಿವೇಶವನ್ನು ನಿರ್ಮಾಣ ಮಾಡಲಾಗಿತ್ತು. ಇದು ಏರೋಡ್ರೋಮ್ ಎಮರ್ಜೆನ್ಸಿ ಮ್ಯಾನೇಜ್‌ಮೆಂಟ್ ಕಮಿಟಿ (ಎಇಎಂಸಿ) ಅನ್ನು ತಕ್ಷಣವೇ ಸಕ್ರಿಯಗೊಳಿಸಿತು. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಭಾರತ ಸರ್ಕಾರ, ಸಿಐಎಸ್‌ಎಫ್, ಗ್ರೌಂಡ್ ಹ್ಯಾಂಡ್ಲಿಂಗ್ ಏಜೆನ್ಸಿಗಳು, ಸಿಟಿ ಆಸ್ಪತ್ರೆಗಳು, ಭಾರತೀಯ ವಾಯುಪಡೆ (ಐಎಎಫ್), ಪೊಲೀಸ್, ಟ್ರಾಫಿಕ್ ಪೊಲೀಸ್, ಏರ್ ಟ್ರಾಫಿಕ್ ಸರ್ವೀಸಸ್ ಕಂಟ್ರೋಲ್ (ಎಟಿಸಿ), ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಸ್ಥಳೀಯ ಸಮುದಾಯಗಳು, ನಾಗರಿಕ ಸಂಘ ಸಂಸ್ಥೆಗಳು, ವಾಯುಯಾನ ಸಂಸ್ಥೆಗಳು ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳು ಸೇರಿದಂತೆ ಪ್ರಮುಖ ಪಾಲುದಾರರ ಸಹಯೋಗದಲ್ಲಿ ಈ ಅಣುಕು ಪ್ರದರ್ಶನವನ್ನು ಆಯೋಜಿಸಲಾಗಿತ್ತು.  ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

    ತರಬೇತಿ ಪಡೆದ ಸಮಾಲೋಚಕರು, ವಿಮಾನ ಆಗಮನದ ನಂತರ ಹೈಜಾಕರ್ಸ್‌ನೊಂದಿಗೆ ಸಂಧಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಹಿಸುವ ಗುರಿ ಹೊಂದಿರುತ್ತಾರೆ. ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ರಾಷ್ಟ್ರೀಯ ಭದ್ರತಾ ಪಡೆಯು (NSG) ಮಧ್ಯಪ್ರವೇಶಿಸಲು ಮುಂದಾಗುತ್ತದೆ. ಬೆದರಿಕೆಯ ಮುಂಜಾಗರುಕತೆ ಮತ್ತು ಪರಿಣಾಮಕಾರಿ ನಿಯಂತ್ರಣದಲ್ಲಿ ಕಡಿಮೆ ಹಾನಿ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಪ್ರಮುಖವಾಗಿ ಇರಿಸಲಾಗುತ್ತದೆ.

    ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಅವರು ಅಣುಕು ಪ್ರದರ್ಶನದ ಮಹತ್ವವನ್ನು ಉಲ್ಲೇಖಿಸುತ್ತಾ, “ಈ ನೈಜ-ಸಮಯದ ಸಿಮ್ಯುಲೇಟೆಡ್ ಆಂಟಿ-ಹೈಜಾಕ್ ಅಣುಕು ಪ್ರದರ್ಶನ ನಡೆಸುವುದು ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಇದು ನಮ್ಮ ಪ್ರತಿಕ್ರಿಯೆ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪರೀಕ್ಷಿಸಲು, ಅಂತರ್‌-ಇಲಾಖೆಯ ಸಮನ್ವಯವನ್ನು ಹೆಚ್ಚಿಸಲು ಮತ್ತು ನೈಜ-ಜೀವನದ ಸನ್ನಿವೇಶಗಳಿಗೆ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಅಣುಕು ಪ್ರದರ್ಶನವನ್ನು ಸಾಧ್ಯವಾಗಿಸಿದ ಎಲ್ಲಾ ಆಂತರಿಕ ಮತ್ತು ಬಾಹ್ಯ ವ್ಯಕ್ತಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಅವರ ಸಾಮೂಹಿಕ ಪ್ರಯತ್ನ ನಮ್ಮ ಸಾಮರ್ಥ್ಯ ಮತ್ತು ಕಾರ್ಯಾಚರಣೆಯನ್ನು ಮೌಲ್ಯೀಕರಿಸುತ್ತದೆ. ಈ ನಿರಂತರ ಸುಧಾರಣೆ ಮತ್ತು ಬಿಕ್ಕಟ್ಟಿನ ಸಿದ್ಧತೆಗೆ ನಮ್ಮ ಬದ್ಧತೆ ತೋರುತ್ತದೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಇಂತಹ ಪೂರ್ವಭಾವಿ ಉಪಕ್ರಮಗಳು ಅಗತ್ಯವಾಗಿದೆ ಎಂದರು.

    ಇಂಟರ್ನ್ಯಾಷನಲ್ ಸಿವಿಲ್ ಏವಿಯೇಷನ್ ಆರ್ಗನೈಸೇಶನ್ ಮತ್ತು ಡಿಜಿಸಿಎ ನಿಯಮಗಳಿಗೆ ಅನುಸಾರವಾಗಿ ಬೆಂಗಳೂರು ಏರ್‌ಪೋರ್ಟ್‌ನ ಭದ್ರತಾ ಕ್ರಮಗಳು ಮತ್ತು ತುರ್ತು ಪ್ರತಿಕ್ರಿಯೆ ಸಾಮರ್ಥ್ಯವನ್ನು ಹೆಚ್ಚಿಸಲು ನಡೆಯುತ್ತಿರುವ ಬದ್ಧತೆಯೊಂದಿಗೆ ಈ ಅಣುಕು ಪ್ರದರ್ಶನ ಹೊಂದಿಕೆಯಾಗುತ್ತಿದೆ. ಯಾವುದೇ ಪರಿಸ್ಥಿತಿ ಅಥವಾ ಸನ್ನಿವೇಶದಲ್ಲಿ ಎಲ್ಲಾ ವಿಮಾನ ನಿಲ್ದಾಣ ಬಳಕೆದಾರರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಸುರಕ್ಷಿತ ವಾತಾವರಣವನ್ನು ಒದಗಿಸುವ ಗುರಿಯನ್ನು ಹೊಂದಿದೆ.

     

  • ಪಾಕ್‌ ಉಗ್ರರನ್ನ ಹತ್ಯೆಗೈದ ಕಮಾಂಡೋಗಳಿಂದಲೇ ಭಾರತ-ಪಾಕ್ ಪಂದ್ಯಕ್ಕೆ ಭದ್ರತೆ – ಇಲ್ಲಿದೆ ಡಿಟೇಲ್ಸ್‌

    ಪಾಕ್‌ ಉಗ್ರರನ್ನ ಹತ್ಯೆಗೈದ ಕಮಾಂಡೋಗಳಿಂದಲೇ ಭಾರತ-ಪಾಕ್ ಪಂದ್ಯಕ್ಕೆ ಭದ್ರತೆ – ಇಲ್ಲಿದೆ ಡಿಟೇಲ್ಸ್‌

    ಅಹಮದಾಬಾದ್‌: ಏಕದಿನ ವಿಶ್ವಕಪ್‌ (World Cup 2023) ಟೂರ್ನಿ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಭಾರತ – ಪಾಕಿಸ್ತಾನ ಪಂದ್ಯಕ್ಕೆ (Ind vs Pak) ದಿನಗಣನೆ ಆರಂಭವಾಗಿದೆ. ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಟ್ವಿಟ್ಟರ್‌ನಲ್ಲೂ ಟ್ರೆಂಡ್ ಅಲೆ ಎದ್ದಿದೆ.

    ಹೌದು. ಇದೇ ಅಕ್ಟೋಬರ್‌ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium)  ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್‌ ಪಂದ್ಯ ನಡೆಯಲಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ. 2008ರ ನವೆಂಬರ್‌ 26ರಂದು ನಡೆದ ಮುಂಬೈ ದಾಳಿಯಲ್ಲಿ ಪಾಕ್‌ ಉಗ್ರರನ್ನು ಮಟ್ಟ ಹಾಕಿದ್ದ NSG ಕಮಾಂಡೋಗಳನ್ನು ಈ ಪಂದ್ಯಕ್ಕೆ ಭದ್ರತೆಗಾಗಿ ನಿಯೋಜಿಸಲಾಗಿದೆ.

    ಗುಜರಾತ್ ಪೊಲೀಸ್, ಎನ್​ಎಸ್​​ಜಿ, ರ‍್ಯಾಪಿಡ್‌ ಆಕ್ಷನ್‌ ಫೋರ್ಸ್‌ (RAF) ಮತ್ತು ಗೃಹರಕ್ಷರು ಸೇರಿದಂತೆ ವಿವಿಧ ಏಜೆನ್ಸಿಗಳ 11,000ಕ್ಕೂ ಹೆಚ್ಚು ಸಿಬ್ಬಂದಿಯನ್ನ ಭದ್ರತೆಗೆ ನಿಯೋಜಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಕಾಂಗ್ರೆಸ್‌ನವರು ಬೈದಿದ್ದಕ್ಕೆ ಪ್ರದೀಪ್ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿರೋದು: ಸುಧಾಕರ್  

    ಕಳೆದ 20 ವರ್ಷಗಳಲ್ಲಿ ಅಹಮದಾಬಾದ್ ನಗರದಲ್ಲಿ ಯಾವುದೇ ಕೋಮುಗಲಭೆಗಳು ನಡೆದಿಲ್ಲವಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಗುಜರಾತ್ ಸಿಎಂ ಭೂಪೇಂದ್ರಬಾಯ್‌ ಪಟೇಲ್ ಅವರು ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘವಿ, ರಾಜ್ಯ ಡಿಜಿಪಿ ವಿಕಾಸ್ ಸಹಾಯ್, ಜಿ.ಎಸ್ ಮಲಿಕ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗಾಂಧಿನಗರದಲ್ಲಿ ಸಭೆ ನಡೆಸಿ ಪೊಲೀಸರ ಪ್ಲ್ಯಾನ್‌ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಇಂಡೋ ಪಾಕ್‌ ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಕರಾವಳಿಗರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ: ನಳಿನ್ ಕುಮಾರ್ ಕಟೀಲ್

    ಮೋದಿ ಕ್ರೀಡಾಂಗಣದಲ್ಲಿ 1.32 ಲಕ್ಷ ಆಸನಗಳ ವ್ಯವಸ್ಥೆಯಿದ್ದು, ಪ್ರತಿಯೊಬ್ಬ ಪ್ರೇಕ್ಷಕರ ಚಲನವಲನಗಳ ಮೇಲೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೇ ಇತ್ತೀಚೆಗೆ ಮುಂಬೈ ಪೊಲೀಸರಿಗೆ ಬಂದಿದ್ದ ಇಮೇಲ್‌ ಬೆದರಿಕೆ ಸಂದೇಶಗಳನ್ನು ಗಮನದಲ್ಲಿಟ್ಟುಕೊಂಡು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನ‌ ನಿಯೋಜನೆ ಮಾಡಿರುವುದಾಗಿ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರರಿದ್ದ ಕಾರನ್ನು ಬೆನ್ನಟ್ಟಿ ಬೈಕ್‌ ಓಡಿಸುತ್ತಲೇ ಗುಂಡು ಹಾರಿಸಿದ ಇಸ್ರೇಲ್‌ ಪೊಲೀಸ್‌ – ರೋಚಕ ದೃಶ್ಯದ ವೀಡಿಯೋ ವೈರಲ್‌

    7,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯೊಂದಿಗೆ, ಕ್ರೀಡಾಂಗಣದ ಭದ್ರತೆಗಾಗಿ ಮತ್ತು ಪಂದ್ಯದ ಸಮಯದಲ್ಲಿ ನಗರದ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಸುಮಾರು 4,000 ಗೃಹರಕ್ಷಕರನ್ನು ನಿಯೋಜಿಸಲಾಗುವುದು. ಈ ಸಿಬ್ಬಂದಿಯ ಜೊತೆಗೆ ನಾವು ಮೂರು ‘ಹಿಟ್ ತಂಡಗಳು’ ಮತ್ತು ಎನ್ಎಸ್​ಜಿಯು ಒಂದು ಡ್ರೋನ್ ತಡೆ ತಂಡವನ್ನು ನಿಯೋಜಿಸುತ್ತೇವೆ. ನಮ್ಮ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ 9 ತಂಡಗಳನ್ನು ಸಹ ಬಳಸಿಕೊಳ್ಳಲಾಗುತ್ತದೆ. ಅಷ್ಟೇ ಅಲ್ಲದೇ ಇನ್ಸ್‌ಪೆಕ್ಟರ್‌ ಜನರಲ್ ಮತ್ತು ಡೆಪ್ಯೂಟಿ ಇನ್ಸ್‌ಪೆಕ್ಟರ್‌ ಜನರಲ್ ಶ್ರೇಣಿಯ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳು ಮತ್ತು 21 ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಶ್ರೇಣಿಯ ಅಧಿಕಾರಿಗಳು ಪಂದ್ಯದ ದಿನದಂದು ಸಿಬ್ಬಂದಿ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ನೀಡಲಿದ್ದಾರೆ ಎಂದೂ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

    “ರಾಜ್ಯ ಮೀಸಲು ಪೊಲೀಸ್ (SRP) ಯ 13 ತುಕಡಿಗಳಲ್ಲದೆ, ನಮ್ಮ ಭದ್ರತಾ ವ್ಯವಸ್ಥೆಯ ಭಾಗವಾಗಿ ನಾವು ಕ್ಷಿಪ್ರ ಕ್ರಿಯಾ ಪಡೆಯ ಮೂರು ತುಕಡಿಗಳನ್ನು ನಿಯೋಜಿಸುತ್ತೇವೆ. ಆರ್ ಎಎಫ್ ನಗರದ ಕೋಮು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಿದೆ. ಕಾಲ್ತುಳಿತದ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು, ನಾವು ಈಗಾಗಲೇ ಸ್ಥಳಾಂತರಿಸುವ ಯೋಜನೆಯನ್ನು ಸಿದ್ಧಪಡಿಸಿದ್ದೇವೆ ಮತ್ತು ಕ್ರೀಡಾಂಗಣದಲ್ಲಿ ಪೂರ್ವಾಭ್ಯಾಸವೂ ನಡೆಯುತ್ತಿದೆ ಎಂದು ಮಲಿಕ್ ಮಾಹಿತಿ ನೀಡಿದ್ದಾರೆ.

    ಇತ್ತೀಚೆಗಷ್ಟೇ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ನನ್ನ ಬಿಡುಗಡೆ ಮಾಡಬೇಕು, ಜೊತೆಗೆ 500 ಕೋಟಿ ರೂ. ನೀಡಬೇಕು. ಇಲ್ಲವಾದರೆ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಲಾಗುವುದು. ಅಷ್ಟೇ ಅಲ್ಲದೇ ಅಹಮದಾಬಾದ್‌ನ ಮೋದಿ ಕ್ರೀಡಾಂಗಣವನ್ನು ಸ್ಫೋಟಿಸಲಾಗುವುದು ಎಂದು ಮುಂಬೈ ಪೊಲೀಸರಿಗೆ ಇಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೈಕ್ ಅಪಘಾತದಲ್ಲಿ ಕಾಫಿನಾಡಿನ ಎನ್‌ಎಸ್‌ಜಿ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವು 

    ಬೈಕ್ ಅಪಘಾತದಲ್ಲಿ ಕಾಫಿನಾಡಿನ ಎನ್‌ಎಸ್‌ಜಿ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವು 

    ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ (Bike Accident) ಎನ್‌ಎಸ್‌ಜಿಯ (NSG) ಬ್ಲ್ಯಾಕ್ ಕ್ಯಾಟ್ ಕಮಾಂಡೋ (Black Cat Commando) ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಯಡಿಯೂರು ಸಮೀಪದ ಹೇಮಾವತಿ ಕ್ರಾಸ್ ಬಳಿ ನಡೆದಿದೆ.

    ಮೃತನನ್ನು 22 ವರ್ಷದ ದೀಪಕ್ ಎಂದು ಗುರುತಿಸಲಾಗಿದೆ. ಮೃತ ದೀಪಕ್ ಮೂಲತಃ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಹೋಬಳಿಯ ತಣಿಗೇಬೈಲು ಸಮೀಪದ ಜೈಪುರ ನಿವಾಸಿ. 2018ರಲ್ಲಿ ಇಂಡೋ ಟಿಬೆಟ್ ಬಾರ್ಡರ್ ಪೊಲೀಸ್ ಫೋರ್ಸ್ ಸೇರಿದ್ದ ದೀಪಕ್ ಇತ್ತೀಚೆಗೆ ಎನ್‌ಎಸ್‌ಜಿ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಆಗಿ ನೇಮಕವಾಗಿದ್ದರು.

    2020ರಲ್ಲಿ ಮದುವೆಯಾಗಿದ್ದ ದೀಪಕ್ ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಒಂದು ತಿಂಗಳ ಮೇಲೆ ರಜೆಗೆ ಊರಿಗೆ ಬಂದಿದ್ದ ದೀಪಕ್ ಇತ್ತೀಚೆಗೆ ತಾವು ಖರೀದಿಸಿದ್ದ ಹೊಸ ಬೈಕ್‌ನಲ್ಲಿ ರಜೆ ಮುಗಿಸಿ ಕೆಲಸಕ್ಕೆ ತೆರಳಲು ಬೆಂಗಳೂರಿಗೆ ಹೋಗುತ್ತಿದ್ದಾಗ ಯಡಿಯೂರಿನ ಹೇಮಾವತಿ ಕ್ರಾಸ್ ಬಳಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಾಣಿಯಲ್ಲಿ ಹಲ್ಲೆ ಪ್ರಕರಣ- ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಕಟೀಲ್

    ಜೈಪುರ ಗ್ರಾಮದ ಕೃಷ್ಣಮೂರ್ತಿಯವರ ಮಗನಾದ ದೀಪಕ್ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದು, ಓರ್ವ ಸಹೋದರಿ ಇದ್ದಾಳೆ. ದೀಪಕ್ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ದೀಪಕ್ ಸಾವಿಗೆ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಮಂತ್ರಿಗಿರಿ ಲಾಬಿಗೆ ಲೋಕಸಭೆ ದಾಳ – ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್‌

  • ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ(ಯುಎನ್‍ಎಸ್‍ಸಿ) ಭಾರತಕ್ಕೆ ಖಾಯಂ ಸದಸ್ಯತ್ವ ಕಲ್ಪಿಸಬೇಕು ಎಂಬ ಭಾರತದ ಬೇಡಿಕೆಗೆ ಈಗ ಮತ್ತಷ್ಟು ಬಲ ಬಂದಿದ್ದು ಅಮೆರಿಕ ಮತ್ತೆ ಬೆಂಬಲ ಘೋಷಿಸಿದೆ.

    ಆಗಸ್ಟ್‌ನಲ್ಲಿ ಯುಎನ್‍ಎಸ್‍ಸಿ ಅಧ್ಯಕ್ಷತೆ ವಹಿಸಿದ್ದ ಭಾರತ, ಅಫ್ಘಾನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಮರ್ಥವಾಗಿ ಕೆಲಸ ಮಾಡಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

    ನರೇಂದ್ರ ಮೋದಿಯವರೊಂದಿಗಿನ ಮೊದಲ ವೈಯಕ್ತಿಕ ದ್ವಿಪಕ್ಷೀಯ ಸಭೆಯ ಬಳಿಕ ಶ್ವೇತ ಭವನ ಹೇಳಿಕೆ ಬಿಡುಗಡೆ ಮಾಡಿದೆ. ಭಾರತದ ಬಲವಾದ ನಾಯಕತ್ವವನ್ನು ಶ್ಲಾಘಿಸಿದ ಬೈಡನ್ ಪರಮಾಣು ಪೂರೈಕೆದಾರರ ಗುಂಪಿಗೂ(ಎನ್‍ಎಸ್‍ಜಿ) ಸೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

    ಭದ್ರತಾ ಮಂಡಳಿಯ ತುರ್ತು ದೀರ್ಘಾವಧಿಯ ಬಾಕಿ ಇರುವ ಸುಧಾರಣೆಗೆ ಭಾರತ ಮೊದಲಿನಿಂದಲೂ ಆಗ್ರಹಿಸುತ್ತಿದೆ. ಪ್ರಸ್ತುತ ಈಗ ಅಮೆರಿಕ, ಚೀನಾ, ರಷ್ಯಾ, ಇಂಗ್ಲೆಂಡ್, ಫ್ರಾನ್ಸ್ ಸದಸ್ಯ ರಾಷ್ಟ್ರಗಳಾಗಿದ್ದು ವಿಶೇಷ ವಿಟೋ ಅಧಿಕಾರವನ್ನು ಹೊಂದಿದೆ. ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ 

    ಇಂದು ಜಗತ್ತು ಬದಲಾಗುತ್ತಿರುವ ಹಿನ್ನೆಲೆಯಲ್ಲಿ 5 ರಾಷ್ಟ್ರಗಳ ಜೊತೆ ಬಲಾಢ್ಯ ರಾಷ್ಟ್ರಗಳಿಗೂ ಸದಸ್ಯ ಸ್ಥಾನ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಭಾರತ ಅಲ್ಲದೇ ಜಪಾನ್, ಬ್ರೆಜೆಲ್, ಜರ್ಮನಿಯೂ ತಮಗೆ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದೆ.

  • ಬಾಗ್ದಾದಿ ಹತ್ಯೆಯಲ್ಲಿ ಪಾತ್ರ ವಹಿಸಿದ್ದ ಶ್ವಾನದ ವಿಶೇಷತೆ ಏನು? ಕಾರ್ಯಾಚರಣೆಗೆ ಈ ನಾಯಿಯನ್ನೇ ಬಳಸುತ್ತಾರೆ ಯಾಕೆ?

    ಬಾಗ್ದಾದಿ ಹತ್ಯೆಯಲ್ಲಿ ಪಾತ್ರ ವಹಿಸಿದ್ದ ಶ್ವಾನದ ವಿಶೇಷತೆ ಏನು? ಕಾರ್ಯಾಚರಣೆಗೆ ಈ ನಾಯಿಯನ್ನೇ ಬಳಸುತ್ತಾರೆ ಯಾಕೆ?

    ವಾಷಿಂಗ್ಟನ್: ಇಸ್ಲಾಮಿಕ್ ಸ್ಟೇಟ್ ಅಫ್ ಇರಾಕ್ ಆಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿಯನ್ನು ಹತ್ಯೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಬೆಲ್ಜಿಯನ್ ಮಾಲಿನೊಯ್ಸ್ ತಳಿಯ ಕಾನನ್ ಹೆಸರಿನ ಹೆಣ್ಣು ಶ್ವಾನ.

    ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ `ಶಹಬ್ಬಾಸ್’ ಎಂದು ಬೆನ್ನುತಟ್ಟಿ ಕಾನನ್ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಅನ್ನು 1.28 ಲಕ್ಷ ಮಂದಿ ರಿಟ್ವೀಟ್ ಮಾಡಿದ್ದರೆ, 5.54 ಲಕ್ಷ ಮಂದಿ ಲೈಕ್ ಮಾಡಿದ್ದು, ಕಾನನ್ ಫೋಟೋ ವಿಶ್ವದೆಲ್ಲೆಡೆ ವೈರಲ್ ಆಗಿದೆ.

    ಹೆಚ್ಚಾಗಿ ಮಿಲಿಟರಿ ಕಾರ್ಯಗಳಿಗೆ ಜರ್ಮನ್ ಅಥವಾ ಡಚ್ ಶೆಪರ್ಡ್ ನಾಯಿಗಳನ್ನು ಬಳಕೆ ಮಾಡಲಾಗುತ್ತದೆ. ಆದರೆ ವಿಶೇಷ ಮಿಲಿಟರಿ ಕಾರ್ಯಾಚರಣೆಗೆ ಮಾತ್ರ ಬೆಲ್ಜಿಯನ್ ಮಾಲಿನೊಯ್ಸ್ ನಾಯಿಗಳನ್ನು ಬಳಕೆ ಮಾಡಲಾಗುತ್ತದೆ. ಅಸಾಧಾರಣ ಬುದ್ಧಿವಂತಿಕೆ ಮತ್ತು ದೇಹ ಅಥ್ಲೆಟಿಕ್ ಸಾಮರ್ಥ್ಯಕ್ಕೆ ಅನುಗುಣವಾಗಿ ಇರುವ ಕಾರಣ ಈ ನಾಯಿಗಳಿಗೆ ವಿಶೇಷ ತರಬೇತಿ ನೀಡಿ ಕಾರ್ಯಾಚರಣೆಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಈ ಕಾರಣಕ್ಕಾಗಿ ಬಾಗ್ದಾದಿ ಹತ್ಯೆಗೆ ನಿಯೋಜನೆಗೊಂಡಿದ್ದ ಡೆಲ್ಟಾ ಪಡೆಯ ಸದಸ್ಯನಾಗಿದ್ದ ಕಾನನ್ ಗೆ ವಿಶೇಷ ತರಬೇತಿ ನೀಡಲಾಗಿತ್ತು.

    ಕಾನನ್ ಮಾಡಿದ್ದು ಏನು?
    ಶ್ವೇತ ಭವನದ ಮೂಲಗಳು ಮಾಧ್ಯಮಗಳಿಗೆ ತಿಳಿಸಿದಂತೆ ಅಮೆರಿಕದ ವಿಶೇಷ ಡೆಲ್ಟಾ ಪಡೆ ಅಕ್ಟೋಬರ್ 26 ರಂದು ಸಿರಿಯಾದ ವಾಯುವ್ಯ ಭಾಗದಲ್ಲಿ ಬಾಗ್ದಾದಿ ಅಡಗುತಾಣದ ಮೇಲೆ ಇಳಿದಿತ್ತು. ಈ ಸಂದರ್ಭದಲ್ಲಿ ಕಾನನ್ ಮತ್ತು ಆಕೆಯನ್ನು ನಿಯಂತ್ರಿಸುತ್ತಿದ್ದ ಸಿಬ್ಬಂದಿಯೂ ಹೆಲಿಕಾಪ್ಟರ್ ನಿಂದ ಇಳಿದಿದ್ದರು.

    ಅಮೆರಿಕ ಸೈನಿಕರ ದಾಳಿಗೆ ಹೆದರಿ ಬಾಗ್ದಾದಿ ಓಡಿಕೊಂಡು ಹೋಗುತ್ತಿದ್ದ. ಕೂಡಲೇ ಸೇನೆ ಕಾನನ್ ಬಿಟ್ಟಿತ್ತು. ಕ್ಯಾನನ್ ಬಾಗ್ದಾದಿಯನ್ನು ಬೆನ್ನಟ್ಟಲಾರಂಭಿಸಿತು. ಆತನನ್ನು ಬೆನ್ನಟ್ಟಿದ ಶ್ವಾನ ಸುರಂಗ ಕೊನೆಯಾಗುವವರೆಗೂ ಅಟ್ಟಿಸಿಕೊಂಡು ಹೋಯಿತು. ಕೊನೆಗೆ ಸುರಂಗ ಕೊನೆಯಾಯಿತು. ಅಮೆರಿಕ ಸೇನೆ ಬಂಧಿಸುತ್ತದೆ ಎಂಬ ಭಯಕ್ಕೆ ಬಾಗ್ದಾದಿ ದೇಹದಲ್ಲಿ ಕಟ್ಟಿಕೊಂಡಿದ್ದ ಬಾಂಬ್ ಸಿಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ.

    ಬಾಂಬ್ ಸಿಡಿತದಿಂದಾಗಿ ಸುರಂಗ ಧ್ವಂಸಗೊಂಡು ಕೆಳಕ್ಕೆ ಬಿದ್ದಿದೆ. ಪರಿಣಾಮ ಶ್ವಾನ ಕಾನನ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂಬ್ ಸಿಡಿತದಿಂದ ಬಾಗ್ದಾದಿಯನ್ನು ಅಟ್ಟಿಸಿಕೊಂಡು ಹೋದ ಶ್ವಾನಕ್ಕೂ ಗಂಭೀರವಾಗಿ ಗಾಯವಾಗಿತ್ತು. ಅದನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಈಗ ಚಿಕತ್ಸೆ ಕೊಡಿಸಿದ್ದೇವೆ, ಈಗ ಶ್ವಾನ ಆರೋಗ್ಯವಾಗಿದೆ ಎಂದು ಅಮೆರಿಕ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

    ಅಮೆರಿಕದ ಡೆಲ್ಟಾ ಪಡೆ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಮಹತ್ವದ ಪಾತ್ರ ವಹಿಸಿದ್ದ ಕಾನನ್ ಹೆಸರನ್ನು ಬಹಿರಂಗ ಪಡಿಸದೇ ಇರಲು ನಿರ್ಧರಿಸಿತ್ತು. ಬಹಿರಂಗ ಪಡಿಸಿದರೆ ನಮ್ಮ ಶತ್ರುಗಳಿಗೆ ಮಾಹಿತಿಯನ್ನು ನೀಡಿದಂತಾಗುತ್ತದೆ. ಅಷ್ಟೇ ಅಲ್ಲದೇ ನಾಯಿಗೂ ಅಪಾಯ ಎದುರಾಗಬಹುದು ಎಂದು ಹೇಳಿತ್ತು. ಆದರೆ ಡೊನಾಲ್ಡ್ ಟ್ರಂಪ್ ಕಾನನ್ ಸಾಹಸವನ್ನು ಬಣ್ಣಿಸಲೇಬೇಕೆಂದು ತೀರ್ಮಾನಿಸಿ ಟ್ವಿಟ್ಟರ್ ನಲ್ಲಿ ಫೋಟೋ ಅಪ್ಲೋಡ್ ಮಾಡಿ, ದಾಳಿ ಕಾರ್ಯಾಚರಣೆಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ್ದ ನಾಯಿಯ ಚಿತ್ರವನ್ನು ಪ್ರಕಟಿಸುತ್ತಿದ್ದೇವೆ(ನಾಯಿ ಹೆಸರು ತಿಳಿಸುವುದಿಲ್ಲ) ಐಸಿಸ್ ನಾಯಕ ಬಾಗ್ದಾದಿ ಹತ್ಯೆ ಕಾರ್ಯಾಚರಣೆಯಲ್ಲಿ ಈ ನಾಯಿಯ ಪಾತ್ರ ದೊಡ್ಡದು ಎಂದು ಬರೆದುಕೊಂಡಿದ್ದಾರೆ.

    ಬೆಲ್ಜಿಯನ್ ಮಾಲಿನೊಯ್ಸ್ ವಿಶೇಷತೆ ಏನು?
    ಅಸಾಧಾರಣ ಬುದ್ಧಿಶಕ್ತಿ, ಚುರುಕು, ಆಕ್ರಮಣಶೀಲ ಮನೋಭಾವ ಮತ್ತು ಅಥ್ಲೆಟಿಕ್ ದೇಹದ ಜೊತೆ ಬೆಲ್ಜಿಯನ್ ಮಾಲಿನೊಯ್ಸ್ ದೇಹದ ಗಾತ್ರವೂ ಸಣ್ಣದು. ಹೀಗಾಗಿ ಈ ನಾಯಿಗಳನ್ನು ಸುಲಭವಾಗಿ ಹೆಲಿಕಾಪ್ಟರ್ ನಿಂದ ಕೆಳಗಡೆ ಇಳಿಸಬಹುದಾಗಿದೆ. ಈ ಕಾರಣಕ್ಕಾಗಿ ವಿಶೇಷ ಪಡೆಯ ಫೇವರೇಟ್ ನಾಯಿ ಎಂದೇ ಪ್ರಖ್ಯಾತಿ ಪಡೆದಿದೆ. ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ಥಾನದಲ್ಲಿನ ವಾತಾವರಣ ಬಿಸಿ ಇರುವ ಕಾರಣ ಈ ನಾಯಿಯನ್ನೇ ಅಮೆರಿಕದ ಸೇನೆ ತನ್ನ ಕಾರ್ಯಾಚರಣೆಗೆ ಬಳಸಿಕೊಳ್ಳುತ್ತಿದೆ.   ಇದನ್ನೂ ಓದಿ:ಸುರಂಗದೊಳಗೆ ಅಳುತ್ತಾ ಓಡಿ ಸತ್ತ ಬಾಗ್ದಾದಿ: ನರಹಂತಕನ ಸಾವಿನ ರಹಸ್ಯ

    ವಿಶೇಷ ಏನೆಂದರೆ ಅಮೆರಿಕ ಯಾವುದೇ ಮಹತ್ವದ ಕಾರ್ಯಾಚರಣೆಗೆ ಈ ನಾಯಿಯನ್ನೇ ಬಳಸಿಕೊಳ್ಳುತ್ತಿದೆ. 2011ರ ಮೇ 2 ರಂದು ವಿಶ್ವ ವಾಣಿಜ್ಯ ಕೇಂದ್ರದ ದಾಳಿಯ ರೂವಾರಿ, ಆಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ತಂಗಿದ್ದ ಪಾಕಿಸ್ತಾನದ ಅಬೋಟಾಬಾದ್ ನಿವಾಸದ ಮೇಲೆ ಅಮೆರಿಕ ನೌಕಾಪಡೆಯ ಸೀಲ್ ಕಮಾಂಡೊಗಳು ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆಯಲ್ಲೂ ಅಮೆರಿಕ ಬೆಲ್ಜಿಯನ್ ಮಾಲಿನೊಯ್ಸ್ ನಾಯಿ ಸಹಾಯ ಮಾಡಿತ್ತು.

    ತನ್ನ ಕಾರ್ಯಾಚರಣೆಯಲ್ಲಿ ಧೈರ್ಯದಿಂದ ಪಾಲ್ಗೊಂಡು ಗಾಯಗೊಂಡಿರುವ ನಾಯಿಗೆ ಪರ್ಪಲ್ ಹಾರ್ಟ್ ಅಥವಾ ವೇಲೊರ್ ಮೆಡಲ್ (ಅಮೆರಿಕ ಸೇನೆಯ ಶೌರ್ಯ ಪ್ರಶಸ್ತಿ) ಸಿಗುವುದಿಲ್ಲ. ನಾಯಿಗಳಿಗೆ ಶೌರ್ಯ ಪುರಸ್ಕಾರ ನೀಡಿದರೆ ಸೈನಿಕರ ಸೇವೆಯನ್ನು ಕಡಿಮೆ ಮಾಡಿದಂತೆ ಆಗುತ್ತದೆ ಎಂಬ ಆಕ್ಷೇಪ ಕೇಳಿಬಂದ ಹಿನ್ನೆಲೆಯಲ್ಲಿ ಅಮೆರಿಕ ನಾಯಿಗಳನ್ನು ಪುರಸ್ಕರಿಸುವುದರಿಂದ ಹಿಂದೆ ಸರಿದಿದೆ. ಅಮೆರಿಕ ಸೇನೆ ಸೈನಿಕರಿಗೆ ಹೇಗೆ ರ್‍ಯಾಂಕ್ ನೀಡುತ್ತದೋ ಅದೇ ರೀತಿ ನಾಯಿಗಳಿಗೂ ರ್‍ಯಾಂಕ್ ನೀಡುತ್ತದೆ.

    ಭಾರತದ ಸಿಆರ್‍ಪಿಎಫ್, ಕೋಬ್ರಾ, ಐಟಿಬಿಪಿ(ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್) ಮತ್ತು ನಕ್ಸಲ್ ನಿಗ್ರಹ ದಳ ಬೆಲ್ಜಿಯನ್ ಮಾಲಿನೊಯ್ಸ್ ನಾಯಿಯನ್ನು ಬಳಸಿಕೊಳ್ಳುತ್ತದೆ. 2016ರ ಜನವರಿ 2 ರಂದು ಪಂಜಾಬಿನಲ್ಲಿರುವ ಪಠಾಣ್‍ಕೋಟ್ ವಾಯುನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದರು. ಎನ್‍ಎಸ್‍ಜಿ(ರಾಷ್ಟ್ರೀಯ ಭದ್ರತಾ ತಂಡ) 4 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆಯಲ್ಲೂ ಬೆಲ್ಜಿಯನ್ ಮಾಲಿನೊಯ್ಸ್ ನಾಯಿಯನ್ನು ಬಳಸಲಾಗಿತ್ತು.

  • ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

    ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

    ಬೆಂಗಳೂರು: ಕರುನಾಡ ಮಣ್ಣಿನ ವೀರ ಯೋಧ ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಸಮಾಧಿಯಲ್ಲೂ ರಾಜಕೀಯದಾಟ, ರಸ್ತೆಗೆ ಯೋಧನ ಹೆಸರಿಡಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರೇ ಅಡ್ಡ, ಬೆಂಗಳೂರಿನ ವೀರ ಯೋಧನಿಗೆ ಕನ್ನಡ ಮಣ್ಣಿನಲ್ಲೇ ಅವಮಾನ.

    ಹೌದು. ಪಂಜಾಬಿನಲ್ಲಿರುವ ವಾಯುನೆಲೆ ಪಠಾಣ್ ಕೋಟ್‍ನಲ್ಲಿ ಲೆಫ್ಟಿನೆಂಟ್ ನಿರಂಜನ್ ಎದೆಯುಬ್ಬಿಸಿ ಉಗ್ರರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ್ದರು. ಕನ್ನಡ ಮಣ್ಣಿನ ಯೋಧ, ನಮ್ಮ ಬೆಂಗಳೂರಿನ ಹೆಮ್ಮೆಯ ನಿರಂಜನ್ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟರು.

    ಆದರೆ ನಮ್ಮ ನೀಚ ರಾಜಕೀಯ ವ್ಯವಸ್ಥೆ ನಿರಂಜನ್ ಹೆಸರನ್ನು ರಸ್ತೆಗೆ ಇಡುವುದಕ್ಕೆ ರಾಜಕೀಯದಾಟ ಆಡುತ್ತಿದೆ. ದೊಡ್ಡ ಬೊಮ್ಮಸಂದ್ರ ಹೆಬ್ಬಾಗಿಲಿನಿಂದ ವಿದ್ಯಾರಣ್ಯಪುರದ ನಂಜಪ್ಪ ವೃತ್ತದವರೆಗಿನ ಮುಖ್ಯರಸ್ತೆಗೆ ನಿರಂಜನ್ ಹೆಸರು ಇಡೋದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ರು. ಅಂತಿಮ ತೀರ್ಮಾನವೂ ಆಗಿತ್ತು.

    ಈ ಮಧ್ಯೆ ಇದಕ್ಕಿದ್ದ ಹಾಗೆ ಕೃಷಿ ಸಚಿವ ಕೃಷ್ಣಬೈರೇಗೌಡರು ಯೋಧನ ಹೆಸರು ಬೇಡ, ಸ್ವಾತಂತ್ರ್ಯ ಹೋರಾಟಗಾರ ಪೇಟಾ ಸಿದ್ದಪ್ಪನ ಹೆಸರು ಇಡಿ ಎಂದು ಬಿಬಿಎಂಪಿಗೆ ಆದೇಶ ಕೊಟ್ಟು ಪತ್ರ ಬರೆದಿದ್ದಾರೆ. ಅಸಲಿಗೆ ಈ ಹೆಸರಿನ ಸ್ವಾತಂತ್ರ್ಯ ಹೋರಾಟಗಾರರು ಯಾರು ಇಲ್ಲ ಎಂದು ದೊರೆಸ್ವಾಮಿಯೇ ಹೇಳಿದ್ದಾರಂತೆ. ಆದ್ರೆ ಮಿನಿಸ್ಟರ್ ಮಾತನ್ನು ಪಾಲಿಸೋದಕ್ಕೆ ಮೇಯರ್ ಅವರು ಮುಂದಾಗುತ್ತಿದ್ದಾರೆ ಎಂದು ನಿರಂಜನ್ ಸ್ನೇಹಿತ ಶಶಾಂಕ್ ಹೇಳಿದ್ದಾರೆ.

    ಶೌರ್ಯ ಚಕ್ರ ಪ್ರಶಸ್ತಿ ವಾಪಾಸ್:
    ಹರ್ಯಾಣ ಸರ್ಕಾರ ನಿರಂಜನ್ ಅವರ ಹೆಸರಿನಲ್ಲಿ ಆಡಿಟೋರಿಯಂ ಸ್ಥಾಪನೆ ಮಾಡಿದೆ. ಆದರೆ ಇಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಚಿವರಿಗೆ ನಿಜಕ್ಕೂ ಮಾನ ಮರ್ಯಾದೆ ಇಲ್ಲ, ನಿರಂಜನ್ ಹೆತ್ತವರು ಈ ಬೆಳವಣಿಗೆ ನೋಡಿ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ನಿರಂಜನ್‍ಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಿದೆ. ಆದ್ರೇ ನಮ್ಗೆ ಈಗ ಬೇಸರವಾಗಿದೆ, ಇದನ್ನು ವಾಪಾಸ್ ಮಾಡುವ ಬಗ್ಗೆಯೂ ಯೋಚನೆ ಮಾಡುತ್ತೇವೆ ಅಂತಾ ಶಶಾಂಕ್ ಹೇಳಿದ್ದಾರೆ.

    ನಿರಂಜನ್ ಯಾರು?
    2016ರ ಜನವರಿ 1 ಮತ್ತು 2ರ ನಡುರಾತ್ರಿಯಲ್ಲಿ ಉಗ್ರರು ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ ನಡೆಸಿದಾಗ, ಎನ್‍ಎಸ್‍ಜಿ ಯೋಧರನ್ನು ಅಲ್ಲಿಗೆ ಕಳುಹಿಸಲಾಯಿತು. ಎನ್‍ಎಸ್‍ಜಿ ತಂಡದಲ್ಲಿ ಕರ್ನಾಟಕದ ನಿರಂಜನ್ ಅವರೂ ಇದ್ದರು. ದಾಳಿ ಎಸಗಿದ್ದ ಉಗ್ರನ ಬಳಿಯಿದ್ದ ಗ್ರೆನೇಡ್ ನಿಷ್ಕ್ರಿಯಗೊಳಿಸಲು ನಿರಂಜನ್ ಮುಂದಾಗಿದ್ದ ವೇಳೆ ಅದು ಸ್ಫೋಟಗೊಂಡಿತ್ತು. ಗ್ರೆನೇಡ್ ಸ್ಫೋಟದಿಂದಾಗಿ ಅವರ ಶ್ವಾಸಕೋಶಗಳು ಒಡೆದಿದ್ದವು. ಆಸ್ಪತ್ರೆಗೆ ಸಾಗಿಸುವ ಮುನ್ನವೇ ನಿರಂಜನ್ ಹುತಾತ್ಮರಾಗಿದ್ದರು. ನಿರಂಜನ್ ಅವರು ಅಮೆರಿಕದ ಎಫ್‍ಬಿಐನಿಂದ ತರಬೇತಿ ಪಡೆದಿದ್ದರು. ಪಾಲಕ್ಕಾಡ್ ಜಿಲ್ಲೆಯ ಮುನ್ನರಾರ್ ಕಾಡ್ ಮೂಲದ ನಿರಂಜನ್, ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲೇ. 40 ವರ್ಷದ ಹಿಂದೆಯೇ ಅವರ ಕುಟುಂಬವು ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿತ್ತು.