Tag: NTA

  • NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

    NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

    – ರಾಜಸ್ಥಾನದ ಅಭ್ಯರ್ಥಿ ಮಹೇಶ್‌ಗೆ ಮೊದಲ ರ‍್ಯಾಂಕ್‌

    ನವದೆಹಲಿ: ನೀಟ್‌-ಯುಜಿ 2025 ಪರೀಕ್ಷೆಯ (NEET UG) ಫಲಿತಾಂಶವನ್ನು ಶನಿವಾರ ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ (NTA) ಪ್ರಕಟಿಸಿದೆ.

    ಪರೀಕ್ಷೆಯಲ್ಲಿ ರಾಜಸ್ಥಾನದ ಮಹೇಶ್‌ ಕುಮಾರ್‌ ಮೊದಲ ರ‍್ಯಾಂಕ್‌ ಬಂದಿದ್ದಾರೆ. ಕರ್ನಾಟಕದ ನಿಖಿಲ್‌ ಸೊನ್ನಾಡ್‌ ದೇಶದಲ್ಲೇ 17ನೇ ರ‍್ಯಾಂಕ್‌ ಹಾಗೂ ರುಚಿರ್‌ ಗುಪ್ತಾ 22ನೇ ರ‍್ಯಾಂಕ್‌ ಪಡೆದಿದ್ದಾರೆ. ತೇಜಸ್ ಶೈಲೇಶ್ ಘಾಟ್ಗಾಲ್ಕರ್ 38ನೇ ರ‍್ಯಾಂಕ್‌ ಗಳಿಸಿದ್ದಾರೆ.

    ಮೊದಲ ರ‍್ಯಾಂಕ್‌ ಪಡೆದ ಅಭ್ಯರ್ಥಿ 99.9999547% ಪಡೆದುಕೊಂಡಿದ್ದಾರೆ. ಅಭ್ಯರ್ಥಿಗಳು ತಮ್ಮ ಅಧಿಕೃತ ಫಲಿತಾಂಶವನ್ನು neet.nta.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

    ದೇಶಾದ್ಯಂತ ಒಟ್ಟು 22,76,069 ಅಭ್ಯರ್ಥಿಗಳು ಪರೀಕ್ಷೆಗೆ ರಿಜಿಸ್ಟರ್ ಮಾಡಿಕೊಂಡಿದ್ದರು. ಅವರ ಪೈಕಿ 22,09,318 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟಾರೆ 12,36,531 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

    ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಎಕ್ಸಾಂಗೆ ರಿಜಿಸ್ಟರ್ ಆಗಿದ್ದರು. ಈ ಪೈಕಿ 1,42,369 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 83,582 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.

  • NEET-UG ಕೇಂದ್ರವಾರು ಫಲಿತಾಂಶ ಪ್ರಕಟ

    NEET-UG ಕೇಂದ್ರವಾರು ಫಲಿತಾಂಶ ಪ್ರಕಟ

    ನವದೆಹಲಿ: ನೀಟ್‌-ಯುಜಿ 2024 ಪರೀಕ್ಷೆ (NEET-UG) ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಇಂದು ಪ್ರಕಟಿಸಿದೆ. ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ನಗರ ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸಿದೆ.

    ಪರೀಕ್ಷೆ ಬರೆದ ಅಭ್ಯರ್ಥಿಗಳು ಎನ್‌ಟಿಎ NEET ನ ಅಧಿಕೃತ ವೆಬ್‌ಸೈಟ್‌ exams.nta.ac.in/NEET/ ಮತ್ತು neet.ntaonline.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಇದನ್ನೂ ಓದಿ: ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

    ನೀಟ್‌ ಯುಜಿ ಫಲಿತಾಂಶವನ್ನು ಜು.20 ರಂದು ಮಧ್ಯಾಹ್ನ ಒಳಗೆ ಪ್ರಕಟಿಸಬೇಕು ಎಂದು ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ಗುರುವಾರ ನಿರ್ದೇಶನ ನೀಡಿತ್ತು. ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ. ಆದರೆ ವಿದ್ಯಾರ್ಥಿಗಳ ಹೆಸರನ್ನು ಬಹಿರಂಗಪಡಿಸಬಾರದು ಎಂದು ನ್ಯಾಯಾಲಯ ಆದೇಶಿಸಿತ್ತು.

    ಸಿಜೆಐ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಶನಿವಾರದ ಮಧ್ಯಾಹ್ನದೊಳಗೆ ನಗರ ಮತ್ತು ಕೇಂದ್ರವಾರು ಪ್ರತ್ಯೇಕವಾಗಿ ಫಲಿತಾಂಶಗಳನ್ನು ಪ್ರಕಟಿಸಲು ಆದೇಶಿಸಿತ್ತು. ಇದನ್ನೂ ಓದಿ: NEET: ಪರೀಕ್ಷಾ ಮಂಡಳಿ ಟ್ರಂಕ್‌ನಿಂದ ಪ್ರಶ್ನೆಪತ್ರಿಕೆ ಕದ್ದಿದ್ದ ಎಂಜಿನಿಯರ್‌ ಬಂಧನ

    ಮೇ 5 ರಂದು 14 ವಿದೇಶಿ ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ ನೀಟ್‌-ಯುಜಿ ಪರೀಕ್ಷೆ ನಡೆಸಲಾಗಿತ್ತು. 23.33 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸುಮಾರು 1,563 ಅಭ್ಯರ್ಥಿಗಳು ಮರು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂತು. ಇದರ ವಿರುದ್ಧ ದೇಶಾದ್ಯಂತ ಅಭ್ಯರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

  • ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

    ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

    ನವದೆಹಲಿ: 2024ನೇ ಸಾಲಿನ ನೀಟ್‌-ಯುಜಿ (NEET-UG) ಪರೀಕ್ಷಾ ಫಲಿತಾಂಶವನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಸುಪ್ರೀಂ ಕೋರ್ಟ್‌ ಆದೇಶಿಸಿದೆ.

    ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಯಾವುದೇ ಕಾರಣಕ್ಕೂ ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸದೇ ನಗರವಾರು ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸುವಂತೆ ಎನ್‌ಟಿಎಗೆ ಆದೇಶಿಸಿದೆ. ಇದನ್ನೂ ಓದಿ: Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ

    ನೀಟ್-ಯುಜಿ (NEET-UG) ಮರುಪರೀಕ್ಷೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಗುರುವಾರ ನಡೆಸಿತು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ನಡೆಯದಿದ್ದರೇ ಮಾತ್ರ ಮರುಪರೀಕ್ಷೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ:  NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್

    ವಿಚಾರಣೆ ವೇಳೆ ಕೋರ್ಟ್‌ ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಬಿಹಾರ ಪೊಲೀಸರಿಂದ ವರದಿ ಕೇಳಿತ್ತು. ಬಿಹಾರ ಪೊಲೀಸರು ಈ ಕೇಸ್‌ನಲ್ಲಿ ಮೊದಲ ಪ್ರಕರಣ ದಾಖಲಿಸಿದ್ದರು. ನಂತರ ಇದು ಜಾರ್ಖಂಡ್, ಗುಜರಾತ್, ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಸಕ್ರಿಯವಾಗಿರುವ ರಾಷ್ಟ್ರೀಯ ʻಸಾಲ್ವರ್ ಗ್ಯಾಂಗ್ʼ ನೊಂದಿಗೆ ಸಂಪರ್ಕ ಹೊಂದಿದೆ ಎಂಬುದು ಬೆಳಕಿಗೆ ಬಂದಿತ್ತು. ಇದನ್ನೂ ಓದಿ:

    ನಗರ ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸಬೇಕೆಂಬ ಆದೇಶವನ್ನು ಎನ್‌ಟಿಎ ವಿರೋಧಿಸಿತ್ತು. ಪರೀಕ್ಷಾ ಏಜೆನ್ಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪರೀಕ್ಷಾ ಫಲಿತಾಂಶಗಳು ವಿದ್ಯಾರ್ಥಿಗಳ ಖಾಸಗಿ ಆಸ್ತಿ ಎಂಬ ಕಾರಣಕ್ಕಾಗಿ ವಿನಂತಿ ವಿರೋಧಿಸಿದರು. ಇಡೀ ಫಲಿತಾಂಶ ಎಂದಿಗೂ ಪ್ರಕಟಿಸಲಾಗದು, ಅವು ವಿದ್ಯಾರ್ಥಿಗಳ ಆಸ್ತಿ ಎಂದು ವಾದಿಸಿದ್ದರು. ಇದನ್ನೂ ಓದಿ: ತಿರುಪತಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿ – ವೆಂಕಟರಮಣನಿಗೆ ವಿಶೇಷ ಪೂಜೆ

    ಏಜೆನ್ಸಿಯ ಪರ ವಾದವನ್ನು ಕೋರ್ಟ್‌ ತಳ್ಳಿಹಾಕಿತ್ತು. ವಾಸ್ತವವೆಂದರೆ ಬಿಹಾರದ ಪಾಟ್ನಾದಲ್ಲಿ, ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದು ಆ ಕೇಂದ್ರಗಳಿಗೆ ಮಾತ್ರವೇ ಸೀಮಿತವಾಗಿಯೇ ಎಂಬುದನ್ನು ಪತ್ತೆಹಚ್ಚಲು ನಾವು ಬಯಸುತ್ತೇವೆ. ಆದ್ರೆ, ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶ ತಿಳಿಯದೇ ಕಂಗಾಲಾಗಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ನಗರವಾರು ಫಲಿತಾಂಶ ಪ್ರಕಟಿಸಿ, ವಿದ್ಯಾರ್ಥಿಗಳ ಗುರುತನ್ನು ಮರೆಮಾಚಲು ನಾವು ಬಯಸುತ್ತೇವೆ. ಇದರಿಂದ ಕೇಂದ್ರವಾರು ಮಾರ್ಕ್‌ ಪ್ಯಾಟರ್ನ್‌ ಏನೆಂಬುದೂ ತಿಳಿಯುತ್ತದೆ ಎಂದು ಕೋರ್ಟ್‌ ವಿವರಿಸಿತು.

  • NEET-UG ಮರು ಪರೀಕ್ಷೆ ನಮ್ಮ ಕೊನೆಯ ಆಯ್ಕೆ, ಪೇಪರ್‌ ಸೋರಿಕೆ ಬಗ್ಗೆ ತನಿಖೆ ನಡೆಸಬೇಕು: ಸುಪ್ರೀಂ

    ನವದೆಹಲಿ: ಮರು ಪರೀಕ್ಷೆ ನಡೆಸುವುದು ನಮ್ಮ ಕೊನೆಯ ಆಯ್ಕೆ. ಮರು ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ 23 ಲಕ್ಷ ವಿದ್ಯಾರ್ಥಿಗಳೊಂದಿಗೆ ನಾವು ವ್ಯವಹರಿಸುತ್ತಿರುವ ಕಾರಣ ಸೋರಿಕೆಯ ವ್ಯಾಪ್ತಿಯ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (CJI DY Chandrachud) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    NEET-UG ಪ್ರಶ್ನೆ ಪತ್ರಿಕೆ ಸೋರಿಕೆ, ಮರು ಪರೀಕ್ಷೆ ಕೋರಿ ಸಲ್ಲಿಕೆಯಾಗಿದ್ದ 30ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ಸಿಜೆಐ ಚಂದ್ರ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ, ಸಿಬಿಐ ಮತ್ತು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ (NTA) ಮುಂದಿಟ್ಟಿದೆ.‌  ಇದನ್ನೂ ಓದಿ: ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?

    ವಕೀಲರ ವಾದ ಆಲಿಸಿದ ಬಳಿಕ ಮಧ್ಯಂತರ ಆದೇಶ ನೀಡಿದ ಪೀಠ, ವಕೀಲರು ಮಂಡಿಸಿದ ವಾದದಲ್ಲಿ 2020 ರಲ್ಲಿ ಒಬ್ಬ ವಿದ್ಯಾರ್ಥಿ, 2021 ರಲ್ಲಿ 3 ಮತ್ತು 2022 ರಲ್ಲಿ 1, 2023 ರಲ್ಲಿ 2 ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ. 2024 ರಲ್ಲಿ 720 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ಫಲಿತಾಂಶದಲ್ಲಿ ಆಮೂಲಾಗ್ರ ಹೆಚ್ಚಳ ಕಂಡು ಬಂದಿದೆ. ಪ್ರಸ್ತುತ ಹಂತದಲ್ಲಿ ಪಾಟ್ನಾ, ದೆಹಲಿ, ಗುಜರಾತ್, ಜಾರ್ಖಂಡ್ ಮತ್ತು ರಾಜಸ್ಥಾನದಲ್ಲಿ ಎಫ್‌ಐಆರ್ ದಾಖಲಾಗಿರುವುದನ್ನು ನ್ಯಾಯಾಲಯವು ಅನುಮೋದಿಸಿದೆ.

    ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಎಫ್‌ಐಆರ್‌ಗಳು ಕೇವಲ ಪಾಟ್ನಾಕ್ಕೆ ಸೀಮಿತವಾಗಿದೆಯೇ ವಿವರಕ್ಕೆ ಕಾಯಬೇಕಾಗಿದೆ. ಪರೀಕ್ಷೆಯನ್ನು ಸುಮಾರು 23 ಲಕ್ಷ ವಿದ್ಯಾರ್ಥಿಗಳನ್ನು ಒಳಗೊಂಡ ವ್ಯಾಪಕ ಶ್ರೇಣಿಯಲ್ಲಿ ನಡೆಸಲಾಗಿದೆ. ಪೇಪರ್ ಲೀಕ್ ವ್ಯವಸ್ಥಿತ ಮಟ್ಟದಲ್ಲಿ ನಡೆದಿದೆಯೇ?, ಅಕ್ರಮ ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಿದೆಯೇ?, ವಂಚನೆಯ ಫಲಾನುಭವಿಗಳನ್ನು ಕಳಂಕರಹಿತ ವಿದ್ಯಾರ್ಥಿಗಳಿಂದ ಪ್ರತ್ಯೇಕಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕಾಗಿದೆ. ವಂಚನೆಯ ಫಲಾನುಭವಿಗಳನ್ನು ಇತರರಿಂದ ಪ್ರತ್ಯೇಕಿಸಲು ಸಾಧ್ಯವಾಗದಿದ್ದಲ್ಲಿ ಮರು-ಪರೀಕ್ಷೆಯನ್ನು ಮಾಡುವುದು ಅಗತ್ಯವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಇದನ್ನೂ ಓದಿ: ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡೋದು ಸರ್ಕಾರದ ನೀತಿಯ ವಿಷಯ- ವಿಚಾರಣೆ ನಡೆಸಲು ಸುಪ್ರೀಂ ನಕಾರ

    ಪ್ರಶ್ನೆ ಪತ್ರಿಕೆ ಸೋರಿಕೆಯ ಸ್ವರೂಪ, ಪ್ರಶ್ನೆ ಪತ್ರಿಕೆ‌ ಸೋರಿಕೆಯಾದ ಸ್ಥಳಗಳು, ಸೋರಿಕೆ ಮತ್ತು ಪರೀಕ್ಷೆಯ ನಡವಳಿಕೆಯ ನಡುವಿನ ಸಮಯದ ವಿಳಂಬ ಈ ಅಂಶದ ಮೇಲೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖಾಧಿಕಾರಿ ತನಿಖೆಯ ಪ್ರಸ್ತುತ ಸ್ಥಿತಿಗತಿಯ ವರದಿಯನ್ನು ಸಲ್ಲಿಸಬೇಕು ಎಂದು ಸಿಬಿಐಗೆ ಸೂಚಿಸಿತು.

    ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳನ್ನು ಗುರುತಿಸಲು ತೆಗೆದುಕೊಂಡ ಕ್ರಮಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು, ಸೋರಿಕೆಯಾದ ಕೇಂದ್ರಗಳು/ನಗರಗಳನ್ನು ಗುರುತಿಸಲು NTA ತೆಗೆದುಕೊಂಡ ಕ್ರಮಗಳು, ಸೋರಿಕೆಯ ಫಲಾನುಭವಿಗಳನ್ನು ಗುರುತಿಸಲು ಅನುಸರಿಸಿದ ವಿಧಾನಗಳು, ಸೋರಿಕೆಯನ್ನು ಹೇಗೆ ಪ್ರಸಾರ ಮಾಡಲಾಯಿತು ಎಲ್ಲಾ ಮಾಹಿತಿಯನ್ನು ಒದಗಿಸುವಂತೆ ಕೋರ್ಟ್ ಎನ್‌ಟಿಎ, ಕೇಂದ್ರ ಸರಕಾರ ಮತ್ತು ಸಿಬಿಐ ಸೂಚಿಸಿದೆ. ಬುಧವಾರ ಸಂಜೆ 5 ಗಂಟೆ ಒಳಗೆ ಅಫಿಡವಿಟ್ ಸಲ್ಲಿಸಬೇಕು ಎಂದು ಸೂಚಿಸಿ ಜುಲೈ 11ಕ್ಕೆ ವಿಚಾರಣೆಯನ್ನು ಮುಂದೂಡಿತು.

     

  • ನೀಟ್‌ ಚರ್ಚೆಗೆ ಅವಕಾಶ ಮಾಡಿಕೊಡಿ – ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ಪತ್ರ!

    ನೀಟ್‌ ಚರ್ಚೆಗೆ ಅವಕಾಶ ಮಾಡಿಕೊಡಿ – ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ಪತ್ರ!

    ನವದೆಹಲಿ: ʻನೀಟ್‌ʼ ಪರೀಕ್ಷಾ ಅಕ್ರಮದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಅವಕಾಶ ಮಾಡಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಖುದ್ದು ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

    ಜುಲೈ 1ರಂದು ರಾಷ್ಟ್ರಪತಿಗಳ (President Of India) ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದ ರಾಹುಲ್‌ ಗಾಂಧಿ ನೀಟ್‌ ಕುರಿತು ಚರ್ಚೆಗೆ (NEET Debate) ಅವಕಾಶ ಕೋರಿದ್ದರು. ಆದರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸದನದ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲೇಖಿಸಿ ಚರ್ಚೆಗೆ ಅವಕಾಶ ನಿರಾಕರಿಸಿದ್ದರು. ಇದಾದ ಮರುದಿನವೇ ರಾಹುಲ್‌ ಗಾಂಧಿ ಅವರು ಪತ್ರ ಬರೆದಿದ್ದಾರೆ.

    ರಾಹುಲ್‌ ಗಾಂಧಿ ಬರೆದ ಪತ್ರದಲ್ಲಿ ಏನಿದೆ?
    ಈ ಪತ್ರವು ನಿಮ್ಮನ್ನು ಚೆನ್ನಾಗಿ ಕಂಡುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. NEET ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಮನವಿ ಮಾಡುವಂತೆ ಕೋರಿ ಪತ್ರ ಬರೆಯುತ್ತಿದ್ದೇನೆ. ಜೂನ್‌ 28ರಂದು ಸಂಸತ್ತಿನ ಉಭಯ ಸದನಗಳಲ್ಲಿ ನೋಟ್‌ ಕುರಿತು ಚರ್ಚೆ ನಡೆಸಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ನಿರಾಕರಿಸಲಾಯಿತು. ಜೂನ್‌ 30 ರಂದು ಸಹ ವಿಪಕ್ಷಗಳು ಮತ್ತೊಮೆ ಚರ್ಚೆಗೆ ಮನವಿ ಮಾಡಿದೆ. ಆದ್ರೆ ಲೋಕಸಭೆಯ ಗೌರವಾನ್ವಿತ ಸ್ಪೀಕರ್‌ ಅವರು ಈ ಬಗ್ಗೆ ಸರ್ಕಾರದ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದ್ದರು. ಆದ್ದರಿಂದ ಮುಂದಿನ ದಾರಿ ಕಂಡುಕೊಳ್ಳಲು ರಚನಾತ್ಮಕವಾಗಿ ತೊಡಗಿಸಿಕೊಳ್ಳುವುದು ನಮ್ಮ ಗುರಿಯಾಗಿದೆ.

    ಈ ಕ್ಷಣದಲ್ಲಿ ದೇಶಾದ್ಯಂತ ಸುಮಾರು 24 ಲಕ್ಷ ನೀಟ್‌ ಆಕಾಂಕ್ಷಿಗಳ ರಕ್ಷಣೆ ಮಾಡುವುದು ಮಾತ್ರ ನಮ್ಮ ಕಾಳಜಿಯಾಗಿದೆ. ಲಕ್ಷಾಂತರ ಕುಟುಂಬಗಳು ತಮ್ಮ ಮಕ್ಕಳಿಗಳಿಗೆ ಅನೇಕ ತ್ಯಾಗ ಮಾಡಿದ್ದಾರೆ. ಆದ್ರೆ ಪ್ರಶ್ನೆ ಪತ್ರಿಕೆ ಸೋರಿಕೆ ಎಷ್ಟೋ ಜನರ ಜೀವನದ ಕನಸನ್ನೇ ನುಚ್ಚುನೂರು ಮಾಡಿದೆ. ಈ ನಿಟ್ಟಿನಲ್ಲಿ ನೊಂದ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬದವರು ಜನಪ್ರತಿನಿಧಿಗಳಾದ ನಮ್ಮ ಮೇಲೆ ನಂಬಿಕೆಯಿಟ್ಟಿದ್ದಾರೆ. ನಾವು ಏನು ಕ್ರಮ ಕೈಗೊಳ್ಳುತ್ತೇವೆ ಎಂಬುದನ್ನು ಎದುರು ನೋಡುತ್ತಿದ್ದಾರೆ.

    ನೀಟ್‌ ಪರೀಕ್ಷಾ ಅಕ್ರಮವು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿನ ಹುಳುಕನ್ನು ಬಹಿರಂಗಪಡಿಸಿದ್ದು, ತಕ್ಷಣದ ಚರ್ಚೆಗೆ ಅರ್ಹವಾದ ವಿಚಾರವಾಗಿದೆ. ಕಳೆದ 7 ವರ್ಷಗಳಲ್ಲಿ 70ಕ್ಕೂ ಹೆಚ್ಚು ಪೇಪರ್‌ ಸೋರಿಕೆಯಾಗಿದ್ದು, 2 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಆದ್ರೆ ಇತರ ಪರೀಕ್ಷೆಗಳನ್ನು ಮುಂದೂಡುವುದು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕರನ್ನು ಬದಲಾಯಿಸುವ ಸರ್ಕಾರದ ಕ್ರಮ ಕೇವಲ ಕ್ರಮವನ್ನು ಮುಚ್ಚಿಹಾಕುವ ಪ್ರಯತ್ನದ ಭಾಗವಾಗಿದೆ.

    ನಮ್ಮ ವಿದ್ಯಾರ್ಥಿಗಳು ಈ ಸಮಸ್ಯೆಗಳಿಗೆ ಸರ್ಕಾರದಿಂದ ಸೂಕ್ತ ಉತ್ತರ ಕಂಡುಕೊಳ್ಳಲು ಅರ್ಹರಾಗಿದ್ದಾರೆ. ಸಂಸತ್ತಿನ ಚರ್ಚೆಯು ಅವರ ನಂಬಿಕೆಯನ್ನು ಮರುಸ್ಥಾಪಿಸಲು ಮೊದಲ ಹೆಜ್ಜೆಯಾಗಿದೆ. ಆದ್ದರಿಂದ ನೀಟ್‌ ವಿಚಾರವನ್ನು ತುರ್ತು ವಿಷಯವನ್ನಾಗಿ ಪರಿಗಣಿಸಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀವು ಈ ಚರ್ಚೆಯನ್ನು ಮುನ್ನಡೆಸಿದರೆ ಅದು ಸೂಕ್ತವಾಗಿರುತ್ತದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

  • UGC-NET 2024: ಹೊಸ ದಿನಾಂಕ ಪ್ರಕಟಿಸಿದ ಎನ್‌ಟಿಎ

    UGC-NET 2024: ಹೊಸ ದಿನಾಂಕ ಪ್ರಕಟಿಸಿದ ಎನ್‌ಟಿಎ

    ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಯುಜಿಸಿ-ನೆಟ್‌, ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌, ಎನ್‌ಸಿಇಟಿ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹೊಸ ದಿನಾಂಕಗಳನ್ನು ಪ್ರಕಟಿಸಿದೆ.

    UGC NET ಜೂನ್ 2024 ಪರೀಕ್ಷೆಗಳನ್ನು ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ನಡೆಸಲಾಗುವುದು. ಜಂಟಿ CSIR UGC NET ಅನ್ನು ಜುಲೈ 25 ರಿಂದ ಜುಲೈ 27 ರವರೆಗೆ ಮತ್ತು NCET ಪರೀಕ್ಷೆಗಳನ್ನು ಜುಲೈ 10 ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿಯನ್ನು ನಾವು ನಿರ್ಮಿಸಿಲ್ಲ, 2009 ರಲ್ಲಿ ಬೇರೊಂದು ಕಂಪನಿ ನಿರ್ಮಿಸಿದೆ: L&T ಸ್ಪಷ್ಟನೆ

    ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ (AIAPGET) 2024 ಈಗಾಗಲೇ ನಿಗದಿಪಡಿಸಿದಂತೆ ಜುಲೈ 6ರಂದು ನಡೆಯಲಿದೆ. ಯುಜಿಸಿ-ನೆಟ್ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳು ಕಂಪ್ಯೂಟರ್ ಆಧಾರಿತವಾಗಿರುತ್ತವೆ. ಈ ಹಿಂದೆ, ಯುಜಿಸಿ ನೆಟ್ ಜೂನ್ 2024 ಪರೀಕ್ಷೆ ಆಫ್‌ಲೈನ್‌ನಲ್ಲಿ ನಡೆದಿತ್ತು.

    ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೆಹಲಿಯ ಜಂತರ್‌ಮಂತರ್‌ನಲ್ಲಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮುಂಬರುವ ಬಜೆಟ್‍ನಲ್ಲಿ ಹೆಜ್ಜಾಲ -ಚಾಮರಾಜನಗರ ರೈಲ್ವೆ ಮಾರ್ಗ ಯೋಜನೆ ಸೇರ್ಪಡೆ: ಅಶ್ವಿನಿ ವೈಷ್ಣವ್

  • NEET-UG ಮರು ಪರೀಕ್ಷೆ – 1,563 ಪೈಕಿ 750 ಗೈರು, 63 ವಿದ್ಯಾರ್ಥಿಗಳು ಡಿಬಾರ್‌

    NEET-UG ಮರು ಪರೀಕ್ಷೆ – 1,563 ಪೈಕಿ 750 ಗೈರು, 63 ವಿದ್ಯಾರ್ಥಿಗಳು ಡಿಬಾರ್‌

    ನವದೆಹಲಿ: ದೇಶದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ NEET-UG ಪರೀಕ್ಷೆಯಲ್ಲಿ ಗ್ರೇಸ್‌ ಅಂಕ ಪಡೆದಿದ್ದ 1,563 ವಿದ್ಯಾರ್ಥಿಗಳ ಪೈಕಿ 813 ಮಂದಿ ಮರು ಪರೀಕ್ಷೆಗೆ (Re Exam) ಹಾಜರಾಗಿದ್ದು 750 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ತಿಳಿಸಿದೆ.

    ಇಂದು ಒಟ್ಟು ಛತ್ತೀಸ್‌ಗಢ, ಗುಜರಾತ್‌, ಹರ್ಯಾಣ, ಮೇಘಾಲಯ, ಚಂಡೀಗಢ ಪರೀಕ್ಷಾ ಕೇಂದ್ರಗಳಲ್ಲಿ ಮರು ಪರೀಕ್ಷೆ ನಡೆಸಲಾಯಿತು.

    ಎಲ್ಲಿ ಎಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ?
    ಚಂಡೀಗಢ – ಇಬ್ಬರು ಹಾಜರಾಗಬೇಕಿತ್ತು, ಇಬ್ಬರು ಗೈರಾಗಿದ್ದಾರೆ.
    ಛತ್ತೀಸ್‌ಗಢ – 602 ವಿದ್ಯಾರ್ಥಿಗಳ ಪೈಕಿ 311 ಮಂದಿ ಗೈರಾಗಿದ್ದರೆ 291 ಮಂದಿ ಪರೀಕ್ಷೆ ಬರೆದಿದ್ದಾರೆ.
    ಗುಜರಾತ್‌ –  ಓರ್ವ ವಿದ್ಯಾರ್ಥಿ ಹಾಜರಾಗಬೇಕಿತ್ತು, ವಿದ್ಯಾರ್ಥಿ ಹಾಜರಾಗಿದ್ದಾನೆ.
    ಮೇಘಾಲಯ – 464 ವಿದ್ಯಾರ್ಥಿಗಳ ಪೈಕಿ 230 ಮಂದಿ ಗೈರಾಗಿದ್ದರೆ, 234 ಮಂದಿ ಹಾಜರಾಗಿದ್ದಾರೆ.

    NEET-UG ಪರೀಕ್ಷೆ ವೇಳೆ ಅಕ್ರಮ ಎಸಗಿದ ಆರೋಪದ ಮೇಲೆ ಮೇಲೆ ದೇಶಾದ್ಯಂತ  63 ಅಭ್ಯರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು NTA ಹೇಳಿದೆ. ಅವರಲ್ಲಿ ಬಿಹಾರದಿಂದ 17 ಮತ್ತು ಗೋದ್ರಾದ 30 ಮಂದಿ ಸೇರಿದ್ದಾರೆ. ಇದನ್ನೂ ಓದಿ: ರೇವಣ್ಣ ಕುಟುಂಬಕ್ಕೆ ಕಾನೂನು ಸಂಕಷ್ಟ – ಯಾರ ವಿರುದ್ಧ ಏನೇನು ಪ್ರಕರಣ?

     

    ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ ಪ್ರಶ್ನೆ ಪತ್ರಿಕೆ ತಡವಾಗಿ ಸಿಕ್ಕಿದ್ದ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

    ಗ್ರೇಸ್ ಅಂಕದ ವಿವಾದ ದೇಶಾದ್ಯಂತ ಹರಡುತ್ತಿದ್ದಂತೆ ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಇಂದು ಪರೀಕ್ಷೆ ನಡೆಸಿದ್ದು, ಜೂನ್‌ 30ರೊಳಗೆ ಫಲಿತಾಂಶ ಪ್ರಕಟಿಸಲಿದೆ.

     

  • NEET ಪರೀಕ್ಷಾ ಅಕ್ರಮ ಕೇಸ್:‌ ʻಸಾಲ್ವರ್‌ ಗ್ಯಾಂಗ್‌ʼ ಕೆಲಸ ಏನಾಗಿತ್ತು? ಮಾಸ್ಟರ್‌ ಮೈಂಡ್‌ ಮಾಫಿಯಾಗೆ ಸಿಲುಕಿದ್ದು ಹೇಗೆ?

    NEET ಪರೀಕ್ಷಾ ಅಕ್ರಮ ಕೇಸ್:‌ ʻಸಾಲ್ವರ್‌ ಗ್ಯಾಂಗ್‌ʼ ಕೆಲಸ ಏನಾಗಿತ್ತು? ಮಾಸ್ಟರ್‌ ಮೈಂಡ್‌ ಮಾಫಿಯಾಗೆ ಸಿಲುಕಿದ್ದು ಹೇಗೆ?

    ಪಾಟ್ನಾ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಮತ್ತು ಪರೀಕ್ಷೆಗೆ ಕುಳಿತುಕೊಳ್ಳುವ ಅಭ್ಯರ್ಥಿಗಳಿಗೆ ಪ್ರಾಕ್ಸಿ ಒದಗಿಸುವ ಸಾಲ್ವರ್ ಗ್ಯಾಂಗ್ (Solver Gang) ಮುಖ್ಯಸ್ಥ ರವಿ ಅತ್ರಿ ಎಂಬಾತನನ್ನ ಬಿಹಾರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

    ಸದ್ಯ ಆರೋಪಿಯ ವಿಚಾರಣೆ ನಡೆಸುತ್ತಿರುವ ಪೊಲೀಸರು (Bihar Police) ಸ್ಫೋಟಕ ಸಂಗತಿಗಳನ್ನ ಬಯಲಿಗೆಳೆದಿದ್ದಾರೆ. ಅಷ್ಟಕ್ಕೂ ನೀಟ್‌ ಅಕ್ರಮದಲ್ಲಿ ಸಾಲ್ವರ್‌‌ ಗ್ಯಾಂಗ್‌ ಕೆಲಸ ಏನಾಗಿತ್ತು? ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದದ್ದು ಹೇಗೆ ಅನ್ನೋ ಕುತೂಹಲಕಾರಿ ಸಂಗತಿಗಳನ್ನು ತಿಳಿಯಲು ಮುಂದೆ ಓದಿ.. ಇದನ್ನೂ ಓದಿ: ಮಹಿಳಾ ಸಹೋದ್ಯೋಗಿಯೊಂದಿಗೆ ಸರಸ – ಹೋಟೆಲ್‌ನಲ್ಲಿ ಸಿಕ್ಕಿಬಿದ್ದ DSPಗೆ ಕಾನ್‌ಸ್ಟೆಬಲ್ ಆಗಿ ಹಿಂಬಡ್ತಿ!

    ಸಾಲ್ವರ್‌ ಗ್ಯಾಂಗ್‌ ಕೆಲಸ ಏನಾಗಿತ್ತು?
    ರಾಷ್ಟ್ರವ್ಯಾಪಿಯಾಗಿ ಹುಟ್ಟಿಕೊಂಡಿದ್ದ ಈ ಗ್ಯಾಂಗ್‌ ಪ್ರಶ್ನೆ ಪತ್ರಿಕೆಯ ಮಾಸ್ಟರ್‌ ಮೈಂಡ್‌ ಆಗಿ ಕೆಲಸ ಮಾಡುತ್ತಿತ್ತು. ಟೆಲಿಗ್ರಾಂ, ವಾಟ್ಸಪ್‌ ಗಳಂತಹ ಮೆಸೆಂಜಿಂಗ್‌ ಅಪ್ಲಿಕೇಷನ್‌ಗಳ ಮೂಲಕ ಗುಂಪು ರಚಿಸಿ, ಅಗತ್ಯ ಅಭ್ಯರ್ಥಿಗಳಿಗಷ್ಟೇ ಪ್ರಶ್ನೆ ಪತ್ರಿಕೆಗಳನ್ನ ವಿತರಣೆ ಮಾಡುತ್ತಿತ್ತು. ಅದರಲ್ಲೂ ಎಷ್ಟು ಬೇಕಾದರೂ ಹಣ ಕೊಡಲು ಸಿದ್ಧರಾಗಿರುತ್ತಿದ್ದ ಶ್ರೀಮಂತ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿತ್ತು. ಇದು ಕೇವಲ ಬಿಹಾರಕ್ಕೆ ಮಾತ್ರ ಸೀಮಿತವಾಗಿರದೇ ದೇಶದ ಹಲವು ರಾಜ್ಯಗಳಲ್ಲಿ ತನ್ನ ಜಾಲವನ್ನು ವಿಸ್ತರಿಸಿಕೊಂಡಿತ್ತು. ಪರೀಕ್ಷೆಗೆ ಮುನ್ನಾದಿನ ಹಣ ಪಾವತಿಸಿದ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಲಭ್ಯವಾಗುವಂತೆ ನೋಡಿಕೊಳ್ಳುತ್ತಿತ್ತು ಎಂಬ ಸ್ಫೋಟಕ ರಹಸ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

    ʻಪ್ರಾಕ್ಸಿʼ ಪೂರೈಕೆ:
    ಇಷ್ಟಕ್ಕೆ ಸುಮ್ಮನಾಗದ ಸಾಲ್ವರ್‌ ಗ್ಯಾಂಗ್‌ ಅಗತ್ಯ ಅಭ್ಯರ್ಥಿಗಳ ಬದಲಿಕೆ ಪ್ರಾಕ್ಸಿ ಪೂರೈಸುವ ಕೆಲಸವನ್ನೂ ಮಾಡುತ್ತಿತ್ತು. ಉದಾಹರಣೆಗೆ ಪರೀಕ್ಷಾ ಅಭ್ಯರ್ಥಿಯ ಹೆಸರಿನಲ್ಲಿ ಮತ್ತೊಬ್ಬ ಬುದ್ಧಿವಂತನನ್ನು ಪರೀಕ್ಷೆ ಬರೆಯಲು ಕಳುಹಿಸಿಕೊಡಲಾಗುತ್ತಿತ್ತು. ಬಹುತೇಕ ನೀಟ್‌ ಅಭ್ಯರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಭಾನುವಾರ ನಡೆಯಬೇಕಿದ್ದ ನೀಟ್-ಪಿ.ಜಿ ಪರೀಕ್ಷೆ ಮುಂದೂಡಿಕೆ

    ಮಾಸ್ಟರ್‌ ಮೈಂಡ್‌ ಈ ಮಾಫಿಯಾಗೆ ಸಿಲುಕಿದ್ದು ಹೇಗೆ?
    ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್‌ ಮೈಂಡ್‌ ರವಿ ಅತ್ರಿಯನ್ನ 2007 ರಲ್ಲಿ, ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ಪೋಷಕರು ರಾಜಸ್ಥಾನದ ಕೋಟಾಗೆ ಕಳುಹಿಸಿದ್ದರು. ಕೆಲ ವರ್ಷಗಳ ಕಾಲ ತಯಾರಿ ನಡೆಸಿದ ಬಳಿಕ ರವಿ‌ 2012ರಲ್ಲಿ ಉತ್ತೀರ್ಣನಾದ. ನಂತರ ಹರಿಯಾಣದ ರೋಹ್ಟಕ್‌ನಲ್ಲಿ PGIಗೆ (ಪಂಡಿತ್ ಭಾಗವತ್ ದಯಾಳ್ ಶರ್ಮಾ ಪಿಜಿ ಸಂಸ್ಥೆ) ಪ್ರವೇಶ ಪಡೆದುಕೊಂಡಿದ್ದ. ಆದ್ರೆ ಪಿಜಿ ಪೂರ್ಣಗೊಳಿಸದೇ 4ನೇ ವರ್ಷದಲ್ಲೇ ವಿದ್ಯಾಭ್ಯಾಸ ತೊರೆದಿದ್ದ. ಆ ಬಳಿಕ ಬೇರೆ ಅಭ್ಯರ್ಥಿಗಳಿಗೆ ಪ್ರಾಕ್ಸಿಯಾಗಿ ಪರೀಕ್ಷೆ ಬರೆಯಲು ಶುರು ಮಾಡಿದ್ದ. ಬಳಿಕ ತನ್ನದೇ ಗ್ಯಾಂಗ್‌ ಕಟ್ಟಿಕೊಂಡು ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾಗೆ ಸಿಲುಕಿದ ಎಂದು ಪೊಲೀಸರು ತನಿಖೆ ನಂತರ ತಿಳಿಸಿದ್ದಾರೆ.

    ಎನ್‌ಟಿಎ ಮುಖ್ಯಸ್ಥರ ಬದಲಾವಣೆ
    ಈ ನಡುವೆ ನೀಟ್‌-ಯುಜಿಯಲ್ಲಿನ ಅಕ್ರಮಗಳು ಮತ್ತು ಯುಜಿಸಿ ರದ್ದತಿ ವಿವಾದದ ಮಧ್ಯೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ಮುಖ್ಯಸ್ಥರನ್ನು ಸರ್ಕಾರ ಬದಲಾಯಿಸಿದೆ. ಶನಿವಾರ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಸಿಬ್ಬಂದಿ ಸಚಿವಾಲಯವು ಎನ್‌ಟಿಎಯ ಮಹಾನಿರ್ದೇಶಕರಾಗಿದ್ದ ಸುಬೋಧ್ ಕುಮಾರ್ ಸಿಂಗ್ ಅವರ ಜಾಗಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.

  • ಪರೀಕ್ಷೆ ನಡೆದ ಮರುದಿನವೇ UGC-NET ಎಕ್ಸಾಂ ರದ್ದು

    ಪರೀಕ್ಷೆ ನಡೆದ ಮರುದಿನವೇ UGC-NET ಎಕ್ಸಾಂ ರದ್ದು

    ನವದೆಹಲಿ: UGC-NET (ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ನಡೆಸಿದ ಮರುದಿನವೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಲು ನಿರ್ಧರಿಸಿದೆ.

    ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ದೂರು ಬಂದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ 18ರ ಮಂಗಳವಾರದಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

    ಮಂಗಳವಾರ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ.

    ಪರೀಕ್ಷೆಯನ್ನು ಹೊಸದಾಗಿ ನಡೆಸಲಾಗುವುದು. ಅದರ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುತ್ತದೆ. ಅಲ್ಲದೆ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂಬುದಾಗಿ NTA ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಯ ಫಲವನ್ನು ಆರ್ಥಿಕ ಸ್ಥಿತಿವಂತರು ಬಿಡಬೇಕು :ಸಚಿವ ಮಂಕಾಳು ವೈದ್ಯ

    ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು/ಅಥವಾ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಹುದ್ದೆಗೆ ಅರ್ಹತೆಯನ್ನು ನಿರ್ಧರಿಸಲು UGC-NET ಅನ್ನು ನಡೆಸಲಾಗುತ್ತದೆ.