Tag: Number

  • ಸಂಚಾರ ಉಲ್ಲಂಘನೆ, ರತನ್‌ ಟಾಟಾಗೆ ಬಂತು ಚಲನ್‌ – ತನಿಖೆಗೆ ಇಳಿದಾಗ ಸ್ಫೋಟಕ ಸತ್ಯ ಬಯಲು

    ಸಂಚಾರ ಉಲ್ಲಂಘನೆ, ರತನ್‌ ಟಾಟಾಗೆ ಬಂತು ಚಲನ್‌ – ತನಿಖೆಗೆ ಇಳಿದಾಗ ಸ್ಫೋಟಕ ಸತ್ಯ ಬಯಲು

    – ಮಹಿಳೆಯಿಂದ ಟ್ರಾಫಿಕ್ ರೂಲ್ಸ್ ಬ್ರೇಕ್, ದಂಡದ ಚಲನ್ ಟಾಟಾಗೆ ರವಾನೆ

    ಮುಂಬೈ: ರತನ್ ಟಾಟಾ ಕಾರ್ ನಂಬರ್ ನಕಲಿ ಮಾಡಿಸಿ ಮಹಿಳೆಯೊಬ್ಬಳು ತನ್ನ ವಾಹನಕ್ಕೆ ಹಾಕಿಸಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

    ಮಹಾರಾಷ್ಟ್ರದ ಮುಂಬೈನಲ್ಲಿ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ಕಾರ್ ರಿಜಿಸ್ಟ್ರೇಶನ್ ನಂಬರ್ ನ್ನೇ ನಕಲಿ ಮಾಡಿದ್ದಾಳೆ. ಅದೂ ಸಹ ಟಾಟಾ ಕಂಪನಿ ಮಾಲೀಕ ರತನ್ ಟಾಟಾ ಅವರ ಕಾರ್ ನಂಬರ್ ನ್ನು ನಕಲಿ ಮಾಡಿದ್ದಾಳೆ. ಸಂಖ್ಯಾಶಾಸ್ತ್ರದ ಕಾರಣದಿಂದ ನಂಬರ್ ಬದಲಿಸಿರುವುದಾಗಿ ಹೇಳಿದ್ದಾಳೆ. ನಕಲಿ ನಂಬರ್ ಪ್ಲೇಟ್ ಹಾಕಿದ್ದ ಬಿಎಂಡಬ್ಲ್ಯೂ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ.

    ಇನ್ನೂ ಆಘಾತಕಾರಿ ವಿಷಯವೆಂದರೆ ಮಹಿಳೆ ತನ್ನ ಐಶಾರಾಮಿ ಬಿಎಂಡಬ್ಲ್ಯೂ ಕಾರ್ ಮೂಲಕ ಹಲವು ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದು, ಇದರ ಚಲನ್ ರತನ್ ಟಾಟಾ ಅವರಿಗೆ ಹೋಗಿವೆ. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ನಕಲಿ ನಂಬರ್ ಕುರಿತು ಬೆಳಕಿಗೆ ಬಂದಿದೆ.

    ಮಾತುಂಗಾ ಪೊಲೀಸರು ಕಾರ್ ಒಡತಿ ಮಹಿಳೆಯನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 420 ಹಾಗೂ 465 ಮೋಸ ಹಾಗೂ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಬಳಿಕ ಪೊಲೀಸರು ಈ ಕಾರು ಎಂ.ಎಸ್ ನರೇಂದ್ರ ಫಾರ್‍ವಾಡ್ರ್ಸ್ ಪ್ರೈ.ಲಿ.ಗೆ ಸೇರಿದೆ ಎಂದು ಪತ್ತೆ ಹಚ್ಚಿದ್ದಾರೆ. ಬಳಿಕ ಮಹಿಳೆಯನ್ನು ವಿಚಾರಣೆ ನಡೆಸಲಾಗಿದ್ದು, ಸಂಖ್ಯಾಶಾಸ್ತ್ರದ ಕಾರಣದಿಂದಾಗಿ ಈ ನಂಬರ್ ಪಡೆದಿರುವುದಾಗಿ ಹೇಳಿದ್ದಾಳೆ. ಅಲ್ಲದೆ ಇದು ರತನ್ ಟಾಟಾ ಅವರ ಕಾರ್ ನಂಬರ್ ಎಂದು ನನಗೆ ತಿಳಿದಿರಲಿಲ್ಲ ಎಂದು ಮಹಿಳೆ ತಿಳಿಸಿದ್ದಾರೆ.

  • ಯಾತ್ರಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತ – ಕಾವೇರಿ ಜಾತ್ರೆಯ ಮೇಲೆ ಪ್ರಾಕೃತಿಕ ವಿಕೋಪದ ಛಾಯೆ

    ಯಾತ್ರಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತ – ಕಾವೇರಿ ಜಾತ್ರೆಯ ಮೇಲೆ ಪ್ರಾಕೃತಿಕ ವಿಕೋಪದ ಛಾಯೆ

    ಮಡಿಕೇರಿ: ಪ್ರಮುಖ ಯಾತ್ರಾಸ್ಥಳ, ಪವಿತ್ರ ಕ್ಷೇತ್ರ ಕೊಡಗಿನ ತಲಕಾವೇರಿಯ ಕಾವೇರಿ ಜಾತ್ರೆಗೂ ಪ್ರಾಕೃತಿಕ ವಿಕೋಪದ ಕರಾಳ ಛಾಯೆ ಆವರಿಸಿದೆ. ಹೊರ ಭಾಗದ ಯಾತ್ರಿಗಳಿಂದ ತುಂಬಿರಬೇಕಾಗಿದ್ದ ಕ್ಷೇತ್ರ ಈ ಬಾರಿ ಜಿಲ್ಲೆಯ ಯಾತ್ರಿಗಳಿಗೆ ಮಾತ್ರ ಸೀಮಿತವಾಗಿದೆ.

    ತುಲಾಮಾಸದಲ್ಲಿ ಕಾವೇರಿ ದರ್ಶನ ಮಾಡಿ ಪವಿತ್ರ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಎನ್ನುವುದು ಕೋಟ್ಯಂತರ ಕಾವೇರಿ ಭಕ್ತರ ನಂಬಿಕೆ. ಈ ಹಿನ್ನೆಲೆಯಲ್ಲಿ ತುಲಾಮಾಸದಲ್ಲಿ ತಲಕಾವೇರಿ ಭಾಗಮಂಡಲ ಕ್ಷೇತ್ರದಲ್ಲಿ ಒಂದು ತಿಂಗಳ ಕಾಲ ಕಾವೇರಿ ಜಾತ್ರೆ ನಡೆಯುತ್ತದೆ. ಜಾತ್ರೆಗೆ ಪ್ರತೀ ವರ್ಷವೂ ಸಾವಿರಾರು ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಬರುತ್ತಿದ್ದರು. ಆದರೆ ಈ ವರ್ಷದ ತುಲಾಮಾಸದ ಕಾವೇರಿ ಜಾತ್ರೆಯ ಮೇಲೆ ಪ್ರಾಕೃತಿಕ ವಿಕೋಪ ಹೊಡೆತ ನೀಡಿದ್ದು, ಜಾತ್ರೆಗೆ ಆಗಮಿಸುವ ಯಾತ್ರಾರ್ಥಿಗಳ ಸಂಖ್ಯೆ ಗಣನೀಯವಾಗಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.

    ಈ ಹಿಂದೆ ಜಾತ್ರಾ ಸಮಯದಲ್ಲಿ ಪ್ರತಿದಿನ 50 ರಿಂದ 60 ಸಾವಿರಕ್ಕೂ ಹೆಚ್ಚು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದರು. ಆದರೆ ಈಗ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ 10 ಸಾವಿರವನ್ನೂ ದಾಟುತ್ತಿಲ್ಲ. ತೀರ್ಥೋದ್ಭವದ ದಿನ ಕೂಡಾ ಇದಕ್ಕೆ ಸಾಕ್ಷಿಯಾಗಿದ್ದು, ಹೆಚ್ಚಿನ ಭಕ್ತರು ಭೇಟಿ ನೀಡಿರಲಿಲ್ಲ. ಈಗಲೂ ಅದು ಮುಂದುವರಿದಿದ್ದು, ಭಕ್ತರ ಸಂಖ್ಯೆ ಇಳಿಮುಖವಾಗಿರುವುದರಿಂದ ಕ್ಷೇತ್ರ ಭಕ್ತರಿಲ್ಲದೇ ಬಿಕೋ ಎನ್ನುತ್ತಿದೆ ಎಂದು ದೇವಾಲಯದ ಮುಖ್ಯಸ್ಥರಾದ ಮೋಟ್ಟಯ್ಯ ಅವರು ತಿಳಿಸಿದ್ದಾರೆ.

    ಎರಡೂವರೆ ತಿಂಗಳ ಹಿಂದೆ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಹಿನ್ನೆಲೆ ಹೊರಭಾಗದ ಭಕ್ತರು ಜಿಲ್ಲೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರ ಎಫೆಕ್ಟ್ ಎಂಬಂತೆ ಯಾತ್ರಾಸ್ಥಳ ತಲಕಾವೇರಿ ಭಾಗಮಂಡಲದಲ್ಲಿ ಭಕ್ತರ ಸಂಖ್ಯೆ ಕುಸಿದಿದೆ. ಕೊಡಗಿನ ಭಕ್ತರು ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವುದದನ್ನ ಹೊರತುಪಡಿಸಿದರೆ ಇನ್ಯಾವ ಕಡೆಯಿಂದಲೂ ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬರುತ್ತಿಲ್ಲ. ಕೇಶಮುಂಡನ ಹಾಗೂ ಪಿಂಡ ಪ್ರಧಾನ ಮೊದಲಾದ ಕಾರ್ಯಗಳಿಗೂ ಹೆಚ್ಚಿನವರು ಬರುತ್ತಿಲ್ಲ.

    ಭಕ್ತರ ಸಂಖ್ಯೆ ಕುಸಿದಿದ್ದು ಇದರ ನೇರ ಪರಿಣಾಮ ವರ್ತಕರ ಮೇಲೆ ತಟ್ಟಿದ್ದು, ಗ್ರಾಹಕರಿಲ್ಲದೆ ಅಂಗಡಿ ಮಳಿಗೆಗಳು ಬಿಕೋ ಎನ್ನುತ್ತಿವೆ. ಕೆಲವರಂತೂ ಅಂಗಡಿಗೆ ಬೀಗ ಹಾಕಿ ಹೋಗಿದ್ದಾರೆ. ಪ್ರಾಕೃತಿಕ ವಿಕೋಪ ತಲಕಾವೇರಿ, ಭಾಗಮಂಡಲದಲ್ಲಿ ಸಂಭವಿಸದೇ ಇದ್ದರೂ ಅದರ ಪರಿಣಾಮವನ್ನು ಎದುರಿಸಬೇಕಾದ ಅನಿವಾರ್ಯ ಕ್ಷೇತ್ರಕ್ಕೆ ಬಂದಿರುವುದು ಸತ್ಯ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಮ್ಯಾಗೆ ಮತ್ತೆ ಸಿಕ್ತು 420 ಸಂಖ್ಯೆ

    ರಮ್ಯಾಗೆ ಮತ್ತೆ ಸಿಕ್ತು 420 ಸಂಖ್ಯೆ

    ಮಂಡ್ಯ: ಮತದಾರರ ಪಟ್ಟಿಯಲ್ಲಿ ಮಾಜಿ ಸಂಸದೆ ರಮ್ಯಾಗೆ ಮತ್ತೆ 420 ಸಂಖ್ಯೆ ಸಿಕ್ಕಿದೆ.

    ಮತದಾರರ ಪಟ್ಟಿಯಲ್ಲಿ ರಮ್ಯಾ ಹೆಸರು ದಿವ್ಯಸ್ಪಂದನ ಆಗಿದೆ. ರಮ್ಯಾ ಕಳೆದ ವಿಧಾನಸಭಾ ಚುನಾವಣೆಯಲ್ಲೂ 420 ಸಂಖ್ಯೆ ಹೊಂದಿದ್ದರು. ಆದರೆ ನಗರಸಭೆ ಚುನಾವಣೆಯ ಮತದಾರರ ಪಟ್ಟಿಯಲ್ಲಿ ರಮ್ಯಾ ಸಂಖ್ಯೆ 671ಕ್ಕೆ ಬದಲಾಗಿತ್ತು.

    ನಾಳೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಇದೀಗ ಮತ್ತೆ ಮತದಾರರ ಪಟ್ಟಿಯಲ್ಲಿ ರಮ್ಯಾಗೆ 420 ಸಂಖ್ಯೆ ದೊರಕಿದೆ.

    ಸದ್ಯ ರಮ್ಯಾ ನಾಳೆ ನಡೆಯುವ ಚುನಾವಣೆಯಲಾದರೂ ಮತದಾನ ಮಾಡುತ್ತಾರಾ ಎಂಬ ಚರ್ಚೆ ಮಂಡ್ಯ ಜನರಲ್ಲಿ ಮತ್ತೆ ಆರಂಭವಾಗಿದೆ. ಈ ಹಿಂದೆ ರಮ್ಯಾ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಯಲ್ಲಿ ಮತದಾನಕ್ಕೆ ಬರಲಿಲ್ಲ. ಮಾಜಿ ಸಂಸದೆ ಜೊತೆಗೆ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆಯಾಗಿದ್ದುಕೊಂಡು ಮತದಾನದ ಹಕ್ಕು ಚಲಾಯಿಸದ್ದಕ್ಕೆ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಭಿಮಾನಿಗಳಿಗೆ ಕಾಜೋಲ್ ವಾಟ್ಸಪ್ ನಂಬರ್ ಕೊಟ್ಟ ಅಜಯ್ ದೇವಗನ್!

    ಅಭಿಮಾನಿಗಳಿಗೆ ಕಾಜೋಲ್ ವಾಟ್ಸಪ್ ನಂಬರ್ ಕೊಟ್ಟ ಅಜಯ್ ದೇವಗನ್!

    ನವದೆಹಲಿ: ಬಾಲಿವುಡ್ ನಟ ಅಜಯ್ ದೇವಗನ್ ಅಭಿಮಾನಿಗಳ ಕಾಳೆಯಲು ಹೋಗಿ ಪತ್ನಿ ಕಾಜೋಲ್ ಅವರ ವಾಟ್ಸಪ್ ನಂಬರ್ ಅನ್ನು ಟ್ವಿಟ್ಟರ್‌ನಲ್ಲಿ ಹರಿಬಿಟ್ಟಿದ್ದಾರೆ.

    ಅಭಿಮಾನಿಗಳ ಜೊತೆಗಿನ ಚರ್ಚೆಯ ವೇಳೆ ಅಜಯ್, ಕಾಜೋಲ್ ಈಗ ದೇಶದಲ್ಲಿ ಇಲ್ಲ. ಅವರನ್ನು ಸಂಪರ್ಕಿಸಲು ಈ ನಂಬರ್ ಬಳಸಿ ಎಂದು ವಾಟ್ಸಪ್ ನಂಬರ್ ಟೈಪ್ ಮಾಡಿ ಎಂದು  ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದರು.

    ಅಭಿಮಾನಿಗಳು ಕಾಜೋಲ್ ನಂಬರ್ ಸಿಕ್ಕಿದ್ದೇ ತಡ ಟ್ವೀಟ್ ಮಾಡಿದ್ದನ್ನು ಸ್ಕ್ರೀನ್‍ಶಾರ್ಟ್ ಮಾಡಿಕೊಂಡು ಕಾಜೋಲ್ ಅವರಿಗೆ ನಿಮ್ಮ ಪತಿ ನಂಬರ್ ನೀಡಿದ್ದಾರೆ ಎಂದು ಫೋಟೋವನ್ನು ಸೆಂಡ್ ಮಾಡಿದ್ದಾರೆ.

    ಸಿನಿಮಾ ಸೆಟ್‍ನಲ್ಲಿ ತಮಾಷೆಗಳು ಮಾಡಿ ಸಾಕಾಗಿತ್ತು. ಹೀಗಾಗಿ ಅಭಿಮಾನಿಗಳ ಮೂಲಕ ಕಾಲೆಳೆಯಲು ಪತ್ನಿಯ ನಂಬರ್ ಹಾಕಿದ್ದೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಕಾಜೋಲ್ ಪ್ರತಿಕ್ರಿಯಿಸಿ, ನಿಮ್ಮ ಚೇಷ್ಟೆಗಳು ಸಿನಿಮಾ ಸೆಟ್‍ನಿಂದ ಹೊರಗೆ ಬಂದಂತೆ ಕಾಣುತ್ತಿದೆ. ಈ ರೀತಿಯ ಚೇಷ್ಟೆಗಳಿಗೆ ಮನೆಯಲ್ಲಿ ಪ್ರವೇಶವಿಲ್ಲ ಎಂದು ಬರೆದು ಕೊನೆಯಲ್ಲಿ ಕೋಪದ ಎಮೋಜಿಯನ್ನು ಹಾಕಿದ್ದಾರೆ.

    ಸದ್ಯ ಅಜಯ್ ದೇವಗಾನ್ ಅವರು ‘ತಾನಾಜೀ’ ಎಂಬ ಹೊಸ ಸಿನಿಮಾ ಚಿತ್ರಿಕರಣದಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಕಾಜೋಲ್ ಅವರು ಕೂಡಾ ಬಹಳ ದಿನಗಳ ನಂತರ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಷ್ಟವಾದ ವಾಹನ ನೋಂದಣಿ ಸಂಖ್ಯೆಗೆ ಇನ್ಮುಂದೆ ತಿಂಗಳುಗಟ್ಟಲೆ ಕಾಯಬೇಕಿಲ್ಲ- ಬರ್ತಿದೆ `ವಾಹನ್ 4′ ವೆಬ್‍ಸೈಟ್

    ಇಷ್ಟವಾದ ವಾಹನ ನೋಂದಣಿ ಸಂಖ್ಯೆಗೆ ಇನ್ಮುಂದೆ ತಿಂಗಳುಗಟ್ಟಲೆ ಕಾಯಬೇಕಿಲ್ಲ- ಬರ್ತಿದೆ `ವಾಹನ್ 4′ ವೆಬ್‍ಸೈಟ್

    ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಸಂತಸದ ಸಂಗತಿಯೊಂದನ್ನು ಹೊತ್ತು ತಂದಿದೆ. ಇಷ್ಟು ದಿನ ವಾಹನಗಳಿಗೆ ಇಷ್ಟವಾದ ನೋಂದಣಿ ಸಂಖ್ಯೆ ಅಥವಾ ತಮ್ಮ ಜನ್ಮದಿನಾಂಕದ ನಂಬರ್ ಪಡೆಯಲು ಜನರು ತಿಂಗಳಿನಿಂದ ಹಿಡಿದು ವರ್ಷಾನುಗಟ್ಟಲೆ ಕಾಯುತ್ತಿದ್ದರು. ಈಗ ತಕ್ಷಣ ಪಡೆಯವಂತಹ ಹೊಸ ಸಾಫ್ಟ್ ವೇರ್ ವೊಂದನ್ನ ಸಾರಿಗೆ ಇಲಾಖೆ ಲಾಂಚ್ ಮಾಡುತ್ತಿದೆ.

    ಇಷ್ಟು ದಿನ ತಮಗೆ ಇಷ್ಟವಾದ ನಂಬರ್ ಪಡೆಯಲು ಜನರು ವರ್ಷಾನುಗಟ್ಟಲೆ ಕಾದು, ಆ ನಂಬರಿನ ಸೀರೀಸ್ ಬರುವ ತನಕ ವಾಹನಗಳನ್ನೇ ಖರೀದಿ ಮಾಡುತ್ತಿರಲಿಲ್ಲ. ಕೆಲವೊಮ್ಮೆ ಇಂತಹ ನಂಬರ್ ಪಡೆಯಲು ಹಣವನ್ನು ಸಹ ನೀಡಬೇಕಿತ್ತು. ಆದರೆ ಇದಕ್ಕೆಲ್ಲ ಕಡಿವಾಣ ಹಾಕೋದಕ್ಕೆ ಅಂತಾನೆ ಸಾರಿಗೆ ಇಲಾಖೆ ಇನ್ನು ಕೆಲವೇ ದಿನಗಳಲ್ಲಿ ‘ವಾಹನ್ 4’ ಎಂಬ ವಿನೂತನ ವೆಬ್‍ಸೈಟ್ ಹೊರತರುತ್ತಿದೆ. ಇದರಲ್ಲಿ ಸಾರಿಗೆ ಇಲಾಖೆಯ ಜೊತೆ ವ್ಯವಹಾರ ಮಾಡುವವರು ಸಂಪೂರ್ಣವಾಗಿ ಆನ್‍ಲೈನ್ ಮುಖಾಂತರವೇ ವ್ಯವಹಾರ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲದೆ ತಮಗೆ ಇಷ್ಟವಾದ ನಂಬರನ್ನು ಸಹ ವೆಬ್‍ಸೈಟ್ ಮೂಲಕ ಲಾಕ್ ಮಾಡಿಸಿ 24 ಗಂಟೆಗಳ ಒಳಗೆ ಖರೀದಿ ಮಾಡಬಹುದು.

    ವೆಬ್‍ಸೈಟ್‍ನ ಪ್ರಯೋಜನ

    * ಎಲ್ಲಾ ವಾಹನಗಳ ನೋಂದಣಿ ಸೇವೆಗಳಿಗೆ ಆನ್‍ಲೈನ್ ಅರ್ಜಿ ಸಲ್ಲಿಕೆ.
    * ಆನ್‍ಲೈನ್‍ನಲ್ಲೇ ಶುಲ್ಕ ಪಾವತಿ.
    * ಅರ್ಜಿದಾರರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ.
    * ರ‍್ಯಾಂಡಮ್‌ ಪದ್ಧತಿಯಲ್ಲಿ ವಾಹನ ನೊಂದಣಿ ಸಂಖ್ಯೆ ಹಂಚಿಕೆ.
    * ವಾಹನದ ಎನ್‍ಓಸಿ ಶೀಘ್ರವಾಗಿ ನೀಡುವಿಕೆ.
    * ವಾಹನಗಳ ನೊಂದಣಿಗಳ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ಪಡಯಬುದು ಎಂದು ಸಾರಿಗೆ ಇಲಾಖೆಯ ಕಮಿಷನರ್ ದಯಾನಂದ್ ತಿಳಿಸಿದ್ದಾರೆ.

  • ಜನವರಿ 1 ರಿಂದ OTP ಮೂಲಕವೇ ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡಿ

    ಜನವರಿ 1 ರಿಂದ OTP ಮೂಲಕವೇ ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡಿ

    ನವದೆಹಲಿ: ಮೊಬೈಲ್ ನಂಬರ್ ಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದೆ ಇರುವವರು ಜನವರಿ 1 ನಂತರ ತಮ್ಮ ಮೊಬೈಲ್ ನಲ್ಲಿ ಒನ್ ಟೈಮ್ ಪಾಸವಾರ್ಡ್ (OTP) ವಿಧಾನ ಮೂಲಕ ಆಧಾರ್ ಲಿಂಕ್ ಮಾಡುವ ಹೊಸ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.

    ವಾಯ್ಸ್-ಗೈಡೆನ್ಸ್ ಮೂಲಕ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದ್ದು, ಈ ವ್ಯವಸ್ಥೆಯನ್ನು ಒಂದು ತಿಂಗಳ ಹಿಂದೆಯೇ ಗ್ರಾಹಕರ ಬಳಕೆಗೆ ನೀಡಬೇಕಾಗಿತ್ತು. ಆದರೆ ಟೆಲಿಕಾಂ ಕಂಪನಿಗಳು ಹಾಗೂ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (UIDAI) ನಡುವಿನ ಗೊಂದಲಗಳ ಹಿನ್ನೆಲೆಯಲ್ಲಿ ತಡವಾಗಿ ಜಾರಿಗೆ ಬರುತ್ತಿದೆ. ಇನ್ನು ದೇಶದಲ್ಲಿ ಸುಮಾರು 50 ಕೋಟಿ ಗ್ರಾಹಕರು ತಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ನಂಬರ್ ಲಿಂಕ್ ಮಾಡಬೇಕಿದೆ.

    ಸರ್ಕಾರವು ಸಾರ್ವಜನಿಕರ ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು, ಆದರೆ ಎಲ್ಲರಿಗೂ ಟೆಲಿಕಾಂ ಸಂಸ್ಥೆಗಳ ಕಚೇರಿಗೆ ಆಧಾರ್ ಲಿಂಕ್ ಮಾಡುವುದು ಕಷ್ಟ ಸಾಧ್ಯ ಎಂದು ಹಲವರು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಇದು ಬೃಹತ್ ಪ್ರಕ್ರಿಯೆಯಾಗಿದ್ದು, ಟೆಲಿಕಾಂ ಸಂಸ್ಥೆಗಳ ಕಚೇರಿಗೆ ತೆರಳಿ ಆಧಾರ್ ಲಿಂಕ್ ಮಾಡುವುದು ಕಷ್ಟ ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

    ಮೊಬೈಲ್ ಗ್ರಾಹಕರಿಗೆ ಫೆಬ್ರವರಿ ಮೊದಲ ವಾರದ ವರೆಗೂ ಆಧಾರ್ ಲಿಂಕ್ ಮಾಡುವ ಅವಕಾಶ ನೀಡಲಾಗಿದೆ. ನಂತರದಲ್ಲಿ ಆಧಾರ್ ಲಿಂಕ್ ಹೊಂದಿರದ ಮೊಬೈಲ್ ಸಂಖ್ಯೆಗಳನ್ನು ರದ್ದು ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

    OTP ವಿಧಾನ ಬಳಕೆ ಹೇಗೆ?
    ಮೊಬೈಲ್ ಬಳಕೆದಾರರು ತಮ್ಮ ಮೊಬೈಲ್ ನಿಂದ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ವ್ಯವಸ್ಥೆಗೆ ಕರೆ ಮಾಡಿ, ಅಲ್ಲಿನ ಸೂಚನೆಗಳನ್ನು ಪೂರ್ಣಗೊಳಿಸಿ ಆಧಾರ್ ಲಿಂಕ್ ಮಾಡಬಹುದು. ವಾಯ್ಸ್ ಕರೆಯ ನಂತರ ಮೊಬೈಲ್ ಸಂಖ್ಯೆಗೆ OTP ಸಂಖ್ಯೆ ಕಳುಹಿಸಿ ಕೊಡಲಾಗುತ್ತದೆ. ಈ ಸಂಖ್ಯೆಯನ್ನು ದಾಖಲಿಸಿದರೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಈ ಸೇವೆಯು ಇಂಗ್ಲಿಷ್, ಹಿಂದಿ ಹಾಗೂ ಕೆಲವು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಿರಲಿದೆ.