Tag: Nursing College

  • ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ

    ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ

    – ಹೆಂಡತಿ ಮಡಿಲಲ್ಲೇ ಪ್ರಾಣ ಬಿಟ್ಟ ಗಂಡ

    ಪಾಟ್ನಾ: ಅಂತರ್ಜಾತಿ ವಿವಾಹ (Intercaste Marriage) ಆಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ದರ್ಭಾಂಗಾದಲ್ಲಿರುವ (Darbhanga) ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

    ರಾಹುಲ್ ಕುಮಾ‌ರ್ (25) ಹತ್ಯೆಯಾದ ವ್ಯಕ್ತಿ. ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (Medical College Hospital) 2ನೇ ವರ್ಷದ ಬಿಎಸ್ಸಿ ನರ್ಗಿಂಗ್‌ ವ್ಯಾಸಂಗ ಮಾಡುತ್ತಿದ್ದ. 4 ತಿಂಗಳ ಹಿಂದಷ್ಟೇ ಅದೇ ಕಾಲೇಜಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ತನ್ನು ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ. ರಾಹುಲ್‌ ಅಂತರ್ಜಾತಿ ಅನ್ನೋ ಕಾರಣಕ್ಕೆ ಕುಟುಂಬದವರಿಂದ ಭಾರೀ ವಿರೋಧ ಇತ್ತು ಅಂತ ತಿಳಿದುಬಂದಿದೆ.

    ಇನ್ನೂ ಗುಂಡಿಕ್ಕಿ ಹತ್ಯೆಗೈದ ಬೆನ್ನಲ್ಲೇ ರಾಹುಲ್‌ನ ಸ್ನೇಹಿತರು ತನ್ನುವಿನ ತಂದೆ ಆರೋಪಿ ಪ್ರೇಮ್‌ಶಂಕ‌ರ್‌ ಝಾಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

    ಹೆಂಡತಿ ಮಡಿಲಲ್ಲೇ ಪ್ರಾಣಬಿಟ್ಟ ಗಂಡ
    ಮಂಗಳವಾರ (ಆ.5) ಸಂಜೆ ಹೂಡಿ (ಪುಲೋವರ್‌ ಮಾದರಿಯ ಜೆರ್ಸಿ) ಧರಿಸಿದ್ದ ವ್ಯಕ್ತಿಯೊಬ್ಬ ರಾಹುಲ್‌ನ ಬಳಿಗೆ ಬಂದಿದ್ದ. ಹತ್ತಿರ ಬಂದಾಗ ಅದು ನನ್ನ ತಂದೆ ಅನ್ನೋದು ಗೊತ್ತಾಯ್ತ. ಅವರ ಕೈಯಲ್ಲಿ ಬಂದೂಕು ಇತ್ತು. ನನ್ನ ಕಣ್ಮುಂದೆಯೇ ನನ್ನ ಗಂಡನ ಎದೆಗೆ ಗುಂಡು ಹಾರಿಸಿದ್ರು. ನನ್ನ ಗಂಡ ನನ್ನ ಮಡಿಲಲ್ಲಿ ಪ್ರಾಣ ಬಿಟ್ಟರು ಅಂತ ತನ್ನು ಕಣ್ಣೀರಿಟ್ಟಿದ್ದಾಳೆ. ಇದನ್ನೂ ಓದಿ: ಟ್ರಂಪ್‌ ಬೆದರಿಕೆಗೆ ಡೋಂಟ್‌ ಕೇರ್‌ – ಸಂಬಂಧ ಬಲಪಡಿಸಲು ರಷ್ಯಾಗೆ ಅಜಿತ್ ದೋವಲ್ ಭೇಟಿ

    ನನ್ನ ಇಡೀ ಕುಟುಂಬ ಈ ಸಂಚಿನಲ್ಲಿ ಭಾಗಿಯಾಗಿದೆ. ನನ್ನ ಸಹೋದರ ಮತ್ತು ತಂದೆಯಿಂದ ನಮ್ಮ ಜೀವಕ್ಕೆ ಬೆದರಿಕೆಯಿದೆ ಎಂದು ದೂರು ನೀಡಿ ನ್ಯಾಯಾಲಯಕ್ಕೂ ಹೋಗಿದ್ದೆವು ಎಂದು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಮರ್ಯಾದೆಗೇಡು ಹತ್ಯೆ ಎಂದು ತಿಳಿದುಬಂದಿದೆ ಎಂದು ವದರಿಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

  • ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

    ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

    ತಿರುವನಂತಪುರಂ: ಕೇರಳದ ಕೊಟ್ಟಾಯಂ (Kottayam) ನರ್ಸಿಂಗ್‌ ಕಾಲೇಜಿನಲ್ಲಿ ಭಯಾನಕ ರ‍್ಯಾಗಿಂಗ್ (Ragging) ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಬಂಧಿಸಿದ ಬೆನ್ನಲ್ಲೇ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ಹೊರಬಿದ್ದಿದೆ.

    ಐವರು ಹಿರಿಯ ವಿದ್ಯಾರ್ಥಿಗಳು ತಮ್ಮ ಮೂವರು ಜೂನಿಯರ್‌ ವಿದ್ಯಾರ್ಥಿಗಳಿಗೆ ಎಷ್ಟರಮಟ್ಟಿಗೆ ಚಿತ್ರಹಿಂಸೆ ನೀಡಿದ್ದಾರೆ? ಅನ್ನೋದನ್ನ ಈ ವೀಡಿಯೋ ಬಹಿರಂಗಪಡಿಸಿದೆ. ಕಿರಿಯ ವಿದ್ಯಾರ್ಥಿಯನ್ನ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್ ಮಾಡೋದಕ್ಕೂ ಮುನ್ನವೇ ಇನ್ನೂ ಬೇರೆ ರೀತಿಯಲ್ಲಿ ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ನಾಲ್ಕು ಗಿನ್ನಿಸ್ ದಾಖಲೆಗೆ ತಯಾರಿ

    ಹೌದು. ಮೊದಲು ಮೂವರು ಕಿರಿಯರಲ್ಲಿ ಓರ್ವನನ್ನ ಹಾಸಿಗೆ ಮೇಲೆ ಮಲಗಿಸಿದ್ದಾರೆ. ಕೈಕಾಲುಗಳನ್ನ ಹಾಸಿಗೆ ತುದಿಗೆ ಕಟ್ಟಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಆತನ ತೊಡೆಯ ಭಾಗಕ್ಕೆ ಕಂಪಾಸ್‌ನಿಂದ ಚುಚ್ಚಿದ್ದಾನೆ. ಸಂತ್ರಸ್ತ ವಿದ್ಯಾರ್ಥಿ (Medical Student) ಚೀರಾಡಿದರೂ ಬಿಡದೇ ಅತನ ಮೈಮೇಲೆ ಬಿಳಿ ಲೋಷನ್‌ ಸುರಿದಿದ್ದಾರೆ. ಬಳಿಕ ಮರ್ಮಾಂಗಕ್ಕೆ ಡಂಬಲ್ಸ್‌ಗಳನ್ನ ನೇತುಹಾಕಿ, ಎದೆಯ ಭಾಗಕ್ಕೆ ಬಟ್ಟೆ ಕ್ಲಿಪ್‌ಗಳನ್ನ ಕಚ್ಚಿಸಿದ್ದಾರೆ. ಬಳಿಕ ಕ್ಲಿಪ್‌ ಹಿಡಿದು ಎಳೆದಾಡಿದ್ದಾರೆ. ವಿದ್ಯಾರ್ಥಿ ಕೂಗಿಕೊಂಡರೂ ಬಿಡದೇ ಆತನನ್ನ ಟಾರ್ಚರ್‌ ಮಾಡಿ, ಕೇಕೆ ಹಾಕಿದ್ದಾರೆ.  ಇದನ್ನೂ ಓದಿ: ಫೆ.15ರಂದು ಅಶ್ವಿನಿ ವೈಷ್ಣವ್ ರಾಜ್ಯ ಭೇಟಿ – ಕೇಂದ್ರ ಬಜೆಟ್ ಕುರಿತು ಸಂವಾದ

    ಈ ಸಂಬಂಧ ಅದೇ ಕಾಲೇಜಿನ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿದ ಪೊಲೀಸರು ಹಿರಿಯ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ರಾಹುಲ್ ರಾಜ್ (22), ಜೀವಾ (18), ರಿಜಿಲ್ ಜಿತ್ (20) ಮತ್ತು ವಿವೇಕ್ (21)ರನ್ನ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನ ಅಮಾನತುಗೊಳಿಸಿದೆ.

    ಈ ನಡುವೆ ಮದ್ಯ ಖರೀದಿಸಲು ಕಿರಿಯ ವಿದ್ಯಾರ್ಥಿಗಳಿಂದ ಹಣ ಕೇಳಿದ್ದಾರೆ, ಅವರು ನಿರಾಕರಿಸಿದ್ದಕ್ಕಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ಮತ್ತೊಬ್ಬ ವಿದ್ಯಾರ್ಥಿ ತನ್ನ ತಂದೆಯೊಂದಿಗೆ ಹೇಳಿಕೊಂಡ ನಂತರ ವಿಷಯ ಗೊತ್ತಾಗಿದೆ. ಬಳಿಕ ದೂರು ದಾಖಲಿಸಲು ಮಗನಿಗೆ ಪ್ರೋತ್ಸಾಹ ನೀಡಿದ್ದಾರೆ. ಇದನ್ನೂ ಓದಿ: ಏಡ್ಸ್‌ ಸೋಂಕಿಗೆ ಒಳಗಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಬಡ್ತಿ ನಿರಾಕರಣೆ – ತಾರತಮ್ಯದ ಸ್ಪಷ್ಟ ನಿದರ್ಶನ ಎಂದ ಹೈಕೋರ್ಟ್‌

  • ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್: ಕೇರಳದಲ್ಲಿ ಭಯಾನಕ ರ‍್ಯಾಗಿಂಗ್

    ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್: ಕೇರಳದಲ್ಲಿ ಭಯಾನಕ ರ‍್ಯಾಗಿಂಗ್

    ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ (Kottayam) ಕಂಡು ಕೇಳರಿಯದಂತಹ ಭಯಾನಕ ರ‍್ಯಾಗಿಂಗ್ (Ragging) ನಡೆದಿದೆ.

    ಇಲ್ಲಿನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ (Government Nursing College) ವ್ಯಾಸಂಗ ಮಾಡುತ್ತಿದ್ದ ಮೂವರು ಕಿರಿಯ ವಿದ್ಯಾರ್ಥಿಗಳನ್ನು ಮೂರನೇ ವರ್ಷದ ಸೀನಿಯರ್‌ ವಿದ್ಯಾರ್ಥಿಗಳು ಬೆತ್ತಲೆ ಮಾಡಿ, ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್ ನೀಡಿದ್ದಾರೆ.

    ಕಂಪಾಸ್‌ನಿಂದ ಇರಿದು ಕ್ರೂರವಾಗಿ ಥಳಿಸಿ ಬಾಯಿಗೆ ಲೋಷನ್ ತುಂಬಿ ಅಮಾನುಷವಾಗಿ ವರ್ತಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆ ಪಾಲಾಗಿದ್ದಾರೆ. ಇದನ್ನೂ ಓದಿ: ಉಚಿತ ಯೋಜನೆಗಳಿಂದ ಜನ ಕಷ್ಟಪಟ್ಟು ಕೆಲಸ ಮಾಡ್ತಿಲ್ಲ – ಸುಪ್ರೀಂ ಅಸಮಾಧಾನ

    ನವೆಂಬರ್‌ನಿಂದ ನಿರಂತರವಾಗಿ ನಮ್ಮ ಮೇಲೆ ರ‍್ಯಾಗಿಂಗ್ ನಡೆಯುತ್ತಿದೆ. ಮದ್ಯಪಾನಕ್ಕಾಗಿ ಹಣ ಕಸಿಯುತ್ತಿದ್ದರು. ಹಣ ನೀಡದ್ದಕ್ಕೆ ಹೊಡೆಯಲು ಆರಂಭಿಸಿದ್ದರು ಎಂದು ಸಂತ್ರಸ್ತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ರ‍್ಯಾಗಿಂಗ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಪೊಲೀಸರು ಆರೋಪಿ ವಿದ್ಯಾರ್ಥಿಗಳಾದ ಸ್ಯಾಮುಯೆಲ್ ಜಾನ್ಸನ್, ಎನ್ ಎಸ್ ಜೀವಾ, ಕೆಪಿ ರಾಹುಲ್ ರಾಜ್, ರಿಜಿಲ್ ಜಿತ್, ವಿವೇಕ್‌ನನ್ನು ಬಂಧಿಸಿದ್ದಾರೆ.

     

  • ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಮಂಗಳೂರು: ನರ್ಸಿಂಗ್‌ ಕಾಲೇಜಿನ (Nursing College) ಹಾಸ್ಟೆಲ್‌ನ 137ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್‌ ಪಾಯಿಸನ್‌ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ (City Hospital) ನರ್ಸಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಮಗು ಅಪಹರಣಕ್ಕೆ ಮುಸುಕುದಾರಿಗಳು ಯತ್ನ

    ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್‌ ಆಯುಕ್ತ ಶಶಿಕುಮಾರ್‌ ಭೇಟಿ ನೀಡಿದ್ದಾರೆ.

    ಫುಡ್ ಪಾಯಿಸನ್ ಆದ ಕಾರಣ ಅವರನ್ನು ದಾಖಲು ಮಾಡಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಹಾಸ್ಟೆಲ್‌ಗೆ ಭೇಟಿ ನೀಡಿ ವಾರ್ಡನ್ ಜತೆ ಸಂವಾದ ನಡೆಸಿ ಎಲ್ಲವನ್ನೂ ತಿಳಿದುಕೊಳ್ಳುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್‌ ತಿಳಿಸಿದ್ದಾರೆ. ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ

    ಮಧ್ಯರಾತ್ರಿ 2 ಗಂಟೆಯಿಂದ ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ – ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಸೋಂಕು

    ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ – ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಸೋಂಕು

    – ನರ್ಸಿಂಗ್ ಕಾಲೇಜ್, ಆಸ್ಪತ್ರೆ ಸೀಲ್ ಡೌನ್

    ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ತಿಂಗಳಿನಿಂದ ಕೊರೊನಾ ಸೋಂಕು ಮಂದಗತಿಯಲ್ಲಿತ್ತು. ಆದರೆ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸ್ಫೋಟ ಉಂಟಾಗಿದೆ. ಕೇರಳದಿಂದ ಶಿವಮೊಗ್ಗಕ್ಕೆ ಬಂದವರಿಂದಾಗಿ ಮಲೆನಾಡಿನ ಜನರಿಗೆ ಇದೀಗ ಮತ್ತೆ ಆತಂಕ ಎದುರಾಗಿದೆ.

    ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜ್ ಹಾಗೂ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ನಮ್ಮ ಪಕ್ಷ 300 ಸೀಟ್ ಗಳನ್ನು ಗೆಲ್ಲುವುದಿಲ್ಲ: ಗುಲಾಮ್ ನಬಿ ಆಜಾದ್

    ಶಿವಮೊಗ್ಗ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅನ್ಯರಾಜ್ಯದವರೇ ಹೆಚ್ಚಿದ್ದಾರೆ. ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಕೇರಳದಿಂದ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಹೀಗೆ ಕೇರಳಕ್ಕೆ ಹೋಗಿ ಬಂದ ವಿದ್ಯಾರ್ಥಿಗಳಲ್ಲಿ ಆರಂಭದಲ್ಲಿ ಶೀತ ಹಾಗೂ ಜ್ವರ ಕಾಣಿಸಿಕೊಂಡಿತ್ತು.

    ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಆಗ ಕೆಲ ವಿದ್ಯಾರ್ಥಿಗಳಲ್ಲಿ ಕೋವಿಡ್ ಇರುವುದು ದೃಢಪಟ್ಟಿತ್ತು. ನಂತರ ಎಚ್ಚೆತ್ತ ಜಿಲ್ಲಾಡಳಿತ ನರ್ಸಿಂಗ್ ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಿದಾಗ ಬರೋಬ್ಬರಿ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

    ಯಾವಾಗ ನಂಜಪ್ಪ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಯಿತೋ, ಮುಂಜಾಗ್ರತಾ ಕ್ರಮವಾಗಿ ನರ್ಸಿಂಗ್ ಕಾಲೇಜು ಹಾಗೂ ಕಾಲೇಜು ಆವರಣದಲ್ಲೇ ಇರುವ ನಂಜಪ್ಪ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ 700ಕ್ಕೂ ಅಧಿಕ ಸಿಬ್ಬಂದಿಗೆ ಕೋವಿಡ್ ರ್ಯಾಂಡಮ್ ಟೆಸ್ಟ್ ಮಾಡಿದೆ. ಇದನ್ನೂ ಓದಿ: ನಾಡಗೀತೆ ಪೂರ್ಣವಾಗುವವರೆಗೆ ಕದಲದ ದನ

    ಈಗಾಗಲೇ 300ಕ್ಕೂ ಅಧಿಕ ಜನರಿಗೆ ನೆಗೆಟಿವ್ ವರದಿ ಬಂದಿದ್ದು, ಉಳಿದವರ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಇನ್ನು ನರ್ಸಿಂಗ್ ವಿದ್ಯಾರ್ಥಿಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ನರ್ಸಿಂಗ್ ಕಾಲೇಜಿನ ಜೊತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಹೀಗಾಗಿ ಆಸ್ಪತ್ರೆಯ ಓಪಿಡಿ ಸಂಪೂರ್ಣವಾಗಿ ಬಂದ್ ಆಗಿದೆ. ಜೊತೆಗೆ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಸಂಬಂಧಿಕರಿಗೂ ಪ್ರವೇಶ ನಿರ್ಬಂಧಿಸಲಾಗಿದೆ.

    ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ ಶಿವಮೊಗ್ಗದ ನರ್ಸಿಂಗ್ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಮಾಡಿಸಿದ್ದರಾ, ಇಲ್ಲವೇ ಎಂಬುದು ಇದುವರೆಗೂ ನಿಗೂಢವಾಗಿದೆ. ಈ ವಿದ್ಯಾರ್ಥಿಗಳಿಂದ ಇನ್ನೆಷ್ಟು ಜನರಿಗೆ ಕೋವಿಡ್ ಸೋಂಕು ಹರಡಿದೆಯೋ ಎಂಬುದು ಮಲೆನಾಡಿಗರ ಆತಂಕಕ್ಕೆ ಕಾರಣವಾಗಿದೆ.

  • ಕೇರಳದಿಂದ ಬಂದಿದ್ದ ಒಂದೇ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

    ಕೇರಳದಿಂದ ಬಂದಿದ್ದ ಒಂದೇ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

    – ಹಾಸನ ನರ್ಸಿಂಗ್ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳು

    ಹಾಸನ: ರಾಜ್ಯಾದ್ಯಂತ ಹಲವು ತಿಂಗಳು ಬಳಿಕ ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಈ ವೇಳೆ ಜಿಲ್ಲೆಗೆ ಕೇರಳದಿಂದ ಪರೀಕ್ಷೆ ಗೆ ಹಾಜರಾಗಲು ಬಂದಿದ್ದ ಒಂದೇ ಕಾಲೇಜಿನ 21 ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

    15 ದಿನದ ಹಿಂದೆ ಹಾಸನ ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ಕೇರಳ ಮೂಲದ 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ವರದಿಯಾಗಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಖಚಿತಪಡಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಕೆಆರ್ ಪುರಂನಲ್ಲಿ ಇರುವಂತಹ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ವಿದ್ಯಾರ್ಥಿನಿಯರನ್ನು ಈಗಾಗಲೇ ಖಾಸಗಿ ವಸತಿಗೃಹದಲ್ಲಿ ಕ್ವಾರಂಟೈನಲ್ಲಿ ಇಡಲಾಗಿದ್ದು ಇವರನ್ನು ಕೂಡ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬಂದಿದ್ದ 21 ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿ ಇರುವಂತಹ ಸಿಬ್ಬಂದಿ, ವಿದ್ಯಾರ್ಥಿಗಳಿಗೂ ಕೊರೊನಾ ಪರೀಕ್ಷೆ ಮಾಡಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಲಾಗುತ್ತಿದೆ ಎಂದು ಸತೀಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ 3ನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಮಕಾರಿಯಲ್ಲ-ಅಧ್ಯಯನ ವರದಿ!

    ಹಾಸನ ನಗರದಲ್ಲಿ ದಿನನಿತ್ಯ ಕೊರೊನಾ ಪಾಸಿಟಿವ್ ಪ್ರಕರಣದ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇರಳ ಮೂಲದ 21 ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಮತ್ತಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ರಾಜ್ಯದಲ್ಲಿ ಈಗಾಗಲೇ ಮೂರನೇ ಅಲೆ ಭೀತಿ ಎದುರಾಗಿದ್ದು ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹರಡುತ್ತಿರುವುದು ಹೆಚ್ಚು ಅಪಾಯಕಾರಿ ಬೆಳವಣಿಗೆಯಾಗಿದೆ.

  • ವಿದ್ಯಾರ್ಥಿಗಳ ರ‍್ಯಾಗಿಂಗ್- ಆರು ಮಂದಿ ಬಂಧನ

    ವಿದ್ಯಾರ್ಥಿಗಳ ರ‍್ಯಾಗಿಂಗ್- ಆರು ಮಂದಿ ಬಂಧನ

    ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ‍್ಯಾಗಿಂಗ್ ಮಾಡಿರುವ ಕೇರಳ ಮೂಲದ ಆರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಶ್ರೀಲಾಲ್, ಶಾಹಿದ್,ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಜೂನಿಯರ್ಸ್ ವಾಸವಿದ್ದ ಅಪಾರ್ಟ್ಮೆಂಟ್ಗೆ ನುಗ್ಗಿ ರ‍್ಯಾಗಿಂಗ್ ಮಾಡಿದ್ದಾರೆ. ನಗರದ ಇಂದಿರಾ ನರ್ಸಿಂಗ್ ಕಾಲೇಜಿನ ಆರು ಜನ ಕೇರಳ ಮೂಲದ ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

    ಕಡಲನಗರಿ ಮಂಗಳೂರು ಶಿಕ್ಷಣಕಾಶಿ ಅಂತಾನು ಕರೆಸಿಕೊಂಡಿದೆ. ಇಲ್ಲಿ ಉನ್ನತ ಶಿಕ್ಷಣಕ್ಕಾಗಿ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊರ ಜಿಲ್ಲೆ, ರಾಜ್ಯ, ವಿದೇಶದಿಂದ ಬಂದವರಿದ್ದಾರೆ. ಕೇವಲ ಆರು ತಿಂಗಳಲ್ಲೇ ಮೂರು ರ‍್ಯಾಗಿಂಗ್ ಪ್ರಕರಣ ದಾಖಲಾಗಿದ್ದು, ಇದೀಗ ಮತ್ತೊಂದು ರ‍್ಯಾಗಿಂಗ್ ಕೇಸ್ ದಾಖಲಾಗಿದ್ದು, ಆರು ಜನ ವಿದ್ಯಾರ್ಥಿಗಳು ಅಂದರ್ ಆಗಿದ್ದಾರೆ.

    ಕೇರಳ ಮೂಲದ ದ್ವಿತೀಯ ವರ್ಷದ ವಿದಾರ್ಥಿ ಮ್ಯಾನುಯಲ್ ಬಾಬು ಹಾಗೂ ಆತನ ಸಹಪಾಠಿ ವಿದ್ಯಾರ್ಥಿಗಳಿಗೆ ಈ ಆರೋಪಿಗಳು ರ‍್ಯಾಗಿಂಗ್ ಮಾಡಿದ್ದಾರೆ. ನಾವು ಸೀನಿಯರ್ಸ್ ನಾವು ಬರೋವಾಗ ಎದ್ದು ನಿಂತು ರೆಸ್ಪೆಕ್ಟ್ ಕೊಡ್ಬೇಕು ಎಂದು ಹೋಟೆಲ್ ಒಂದರಲ್ಲಿ ರ್ಯಾಗಿಂಗ್ ನಡೆಸಿದ್ದರು. ಇಷ್ಟು ಮಾತ್ರವಲ್ಲದೇ ವಿದ್ಯಾರ್ಥಿಗಳು ವಾಸವಿದ್ದ ಅಪಾಟ್ಮೆರ್ಂಟ್‍ನ ರೂಮ್‍ಗೆ ಎಂಟ್ರಿ ಕೊಟ್ಟು ಒಳ ಚಡ್ಡಿಯಲ್ಲಿ ನಿಲ್ಲಿಸಿ ಹಲ್ಲೆ ಮಾಡಿದ್ದಾರೆ. ನಾವು ಬರೋವಾಗ ನೀವು ತಲೆ ತಗ್ಗಿಸಿ ಕುಳಿತುಕೊಳ್ಳಬೇಕು, ನಾವು ಹೇಳಿದಂತೆ ಕೇಳಬೇಕು, ಕಾಲೇಜಿಗೆ ಬರುವಾಗಲು ನಮ್ಮ ಎದುರು ಅಡಿಗೆ ತಲೆ ಹಾಕಿಕೊಂಡು ಹೋಗಬೇಕು ಇಲ್ಲದಿದ್ದರೆ ಕೊಲೆ ಮಾಡುತ್ತೇವೆ ಎಂದು ಜೀವ ಬೆದರಿಕೆ ಒಡ್ಡಿದ್ದರು. ಹೀಗಾಗಿ ಮ್ಯಾನುಯಲ್ ಬಾಬು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ರ‍್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

    ರ‍್ಯಾಗಿಂಗ್ ತಡೆಯುವುದಕ್ಕಾಗಿ ಪೊಲೀಸ್ ಸೂಚನೆಯಂತೆ ಕಾಲೇಜುಗಳಲ್ಲಿ ಆ್ಯಂಟಿ ರ‍್ಯಾಗಿಂಗ್ ಕಮಿಟಿ ಮಾಡಲಾಗಿದೆ. ಈಗಾಗಲೇ ಈ ಹಿಂದಿನ ಮೂರು ಪ್ರಕರಣದಲ್ಲಿ 18ಕ್ಕೂ ಹೆಚ್ಚು ಜನ ವಿದ್ಯಾರ್ಥಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ರ‍್ಯಾಗಿಂಗ್ ಪ್ರಕರಣದ ವಿದ್ಯಾರ್ಥಿಗಳಿಗೆ ಯಾವುದೇ ಎಕ್ಸ್‍ಕ್ಯೂಝ್ ನೀಡಲ್ಲ ಎಂದು ಕಮೀಷನರ್ ಎಚ್ಚರಿಕೆ ನೀಡಿದ್ದಾರೆ.

  • ಬೆಂಗಳೂರಿಗೆ ಮತ್ತೆ ಕೊರೊನಾ ಬಾಂಬ್ ಆತಂಕ- ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಪಾಸಿಟಿವ್

    ಬೆಂಗಳೂರಿಗೆ ಮತ್ತೆ ಕೊರೊನಾ ಬಾಂಬ್ ಆತಂಕ- ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಪಾಸಿಟಿವ್

    – ಶಾಲೆ, ವಿದ್ಯಾಗಮ ಆರಂಭಕ್ಕೆ ತಜ್ಞರ ಹಿಂದೇಟು
    – ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಬೆಂಗಳೂರು: ಬೆಂಗಳೂರಿಗೆ ಮತ್ತೆ ಕೊರೊನಾ ಬಾಂಬ್ ಆತಂಕ ಎದುರಾಗಿದ್ದು, ಮಂಜು ಶ್ರೀ ನರ್ಸಿಂಗ್ ಕಾಲೇಜಿನಲ್ಲಿ 40 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಆರೋಗ್ಯಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಅಲ್ಲದೆ ಶಾಲೆ ಆರಂಭಕ್ಕೆ ಸಹ ತಜ್ಞರು ಹಿಂದೇಟು ಹಾಕಿದ್ದಾರೆ.

    ಬೆಂಗಳೂರಿಗೆ ಕೇರಳ ಶಾಕ್ ಎದುರಾಗಿದ್ದು, ಈಗಾಗಲೇ ಮಂಜುಶ್ರೀ ನರ್ಸಿಂಗ್ ಕಾಲೇಜ್ ನ ಕೇರಳ ವಿದ್ಯಾರ್ಥಿಗಳಲ್ಲಿ 40 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರ ಸಂಪರ್ಕಿತರು ಒಟ್ಟು 200 ಜನರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಕೇರಳ ಕೊರೊನಾ ಶಾಕ್ ನಿಂದಾಗಿ ಬಿಬಿಎಂಪಿ ಹೊಸ ರೂಲ್ಸ್ ಮಾಡಿದೆ. ಕೇರಳದ ಭರ್ಜರಿ ಶಾಕ್ ಗೆ ಬಿಬಿಎಂಪಿ ಥಂಡಾ ಹೊಡೆದಿದ್ದು, ಈಗ ಕೇರಳ ಗಡಿ ಬಂದ್ ಮಾಡಲು ಸಾಧ್ಯವಿಲ್ಲದ ಕಾರಣ ಟಫ್ ರೂಲ್ಸ್ ಜಾರಿ ಮಾಡಿದೆ.

    ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಕಂಪನಿಗಳ ಸಿಬ್ಬಂದಿ ಯಾರೇ ಬಂದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ ಗೊಳಿಸಿದೆ. ರಾಜ್ಯಕ್ಕೆ ಪ್ರವೇಶ ಪಡೆಯುವ 72 ಗಂಟೆಯ ಮೊದಲು ಕೊರೊನಾ ಟೆಸ್ಟ್ ಮಾಡಿಸಿರುವ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿದೆ.

    ಎರಡನೇ ಅಲೆಯ ಆತಂಕ
    ಈಗಾಗಲೇ ಬೆಂಗಳೂರಿನ ಅಪಾರ್ಟ್‍ಮೆಂಟ್ ನಲ್ಲಿ ಪಾರ್ಟಿ ಮಾಡಿದ 28 ಜನರಿಗೆ ಹೈ ಸ್ಪೀಡ್ ನಲ್ಲಿ ಕೊರೋನಾ ಹಬ್ಬಿದೆ. ಹೀಗಾಗಿ ಈ ಕ್ಲಸ್ಟರ್ ಆತಂಕ ಮೂಡಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಗುಪ್ತಗಾಮಿನಿ ಕೊರೊನಾ ಆತಂಕ ಎದುರಾಗಿದೆ. ಅಲ್ಲದೆ ಕೊರೊನಾ ಆತಂಕದ ಹಿನ್ನೆಲೆ 1-5ನೇ ತರಗತಿ ಆರಂಭ ಹಾಗೂ ವಿದ್ಯಾಗಮ ಆರಂಭಕ್ಕೂ ತಜ್ಞ ರಿಂದ ಬೇಡ ಎನ್ನುವ ಉತ್ತರ ಬಂದಿದೆ.

    ಶಾಲೆ ಆರಂಭಕ್ಕೆ ಹಿಂದೇಟು
    ಕೇರಳ ಸೋಂಕಿತರಿಂದ ತಜ್ಞರ ತಂಡ ಬೆಚ್ಚಿ ಬಿದ್ದಿದ್ದು, ಕೇರಳದಿಂದ ಬಂದವರಲ್ಲೇ ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದೆ. ಹೀಗಾಗಿ ಶಾಲೆಗಳ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿಲ್ಲ. 6, 7ನೇ ತರಗತಿ ಪ್ರಾರಂಭಕ್ಕೆ ತಜ್ಞರ ತಂಡ ಒಪ್ಪಿಗೆ ಸೂಚಿಸಿಲ್ಲ. ಬೆಂಗಳೂರು ಮತ್ತು ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ಕೇವಲ 8ನೇ ತರಗತಿ ಆರಂಭಕ್ಕೆ ತಜ್ಞರ ತಂಡ ಒಪ್ಪಿಗೆ ಸೂಚಿಸಿದೆ.

    ವಿದ್ಯಾಗಮ ಸಹ ಬಂದ್
    ಕೊರೊನಾ ಆತಂಕದ ಹಿನ್ನೆಲೆ ವಿದ್ಯಾಗಮಕ್ಕೂ ತಜ್ಞರ ತಂಡ ರೆಡ್ ಸಿಗ್ನಲ್ ನೀಡಿದೆ. ಶಿಕ್ಷಣ ಇಲಾಖೆ 1-5ನೇ ತರಗತಿ ವಿದ್ಯಾಗಮ ಪ್ರಾರಂಭಕ್ಕೆ ಸಿದ್ಧವಾಗಿತ್ತು. ಕೇರಳದಿಂದ ಬಂದವರಲ್ಲಿ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಇದೀಗ ವಿದ್ಯಾಗಮಕ್ಕೂ ಬ್ರೇಕ್ ಹಾಕಲಾಗಿದೆ. ಫೆಬ್ರವರಿ 24 ಅಥವಾ 25 ರಂದು ಮತ್ತೆ ಸಭೆ ಸೇರಿ ವಿದ್ಯಾಗಮ ಪ್ರಾರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.