Tag: nut plant

  • 60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

    60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

    ಹಾಸನ: ಅಡಿಕೆ ಗಿಡಗಳನ್ನು ಯಾರೋ ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ರೈತ ಮಹಿಳೆ ತಾಯಮ್ಮ ಅವರಿಗೆ ಸೇರಿದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ತಾಯಮ್ಮ ಕಳೆದ ಎರಡು ವರ್ಷದಿಂದ ತುಂಬಾ ಶ್ರಮವಹಿಸಿ ಅಡಿಕೆ ಗಿಡ ಬೆಳೆಸಿದ್ದರು. ಎಲ್ಲ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದರು. ಆದರೆ ಕಳೆದ ರಾತ್ರಿ ಸುಮಾರು 60ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ನಾಶ ಮಾಡಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದನ್ನು ಕಂಡು ತಾಯಮ್ಮ ಕಣ್ಣೀರಿಟ್ಟಿದ್ದಾರೆ.

    ಕಿಡಿಗೇಡಿಗಳ ಕೃತ್ಯದಿಂದ ರೈತ ಮಹಿಳೆಗೆ ಒಂದು ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ನನಗೆ ಆದ ಪರಿಸ್ಥಿತಿ ಬೇರೆ ಯಾವ ರೈತರಿಗೂ ಆಗಬಾರದು. ಈ ಕೆಲಸ ಮಾಡಿದವರಿಗೆ ರೈತರ ಕಷ್ಟದ ಅರಿವಿಲ್ಲ. ಕೂಡಲೇ ಅವರನ್ನು ಕಂಡು ಹಿಡಿದು ಶಿಕ್ಷೆ ನೀಡಬೇಕು ಎಂದು ರೈತಮಹಿಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:  ನಾನು ಲಾರ್ಡ್ ಶಿವ ಅಲ್ಲ, ನಾನು ನಿಮ್ಮ ಶಿವಣ್ಣ ಮಾತ್ರ: ಹ್ಯಾಟ್ರಿಕ್ ಹೀರೋ ಹೀಗಂದಿದ್ಯಾಕೆ..?

    ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಮಹಿಳೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

  • ರಾತ್ರೋರಾತ್ರಿ ಕಿಡಿಗೇಡಿಗಳಿಂದ 500ಕ್ಕೂ ಹೆಚ್ಚು ಅಡಿಕೆ ಗಿಡಗಳು ನಾಶ

    ರಾತ್ರೋರಾತ್ರಿ ಕಿಡಿಗೇಡಿಗಳಿಂದ 500ಕ್ಕೂ ಹೆಚ್ಚು ಅಡಿಕೆ ಗಿಡಗಳು ನಾಶ

    ದಾವಣಗೆರೆ: ರಾತ್ರೋರಾತ್ರಿ ಕಿಡಿಗೇಡಿಗಳು 500ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಮರುಳಸಿದ್ದಪ್ಪ ಎಂಬವರಿಗೆ ಸೇರಿದ ಅಡಿಕೆ ಮರಗಳಾಗಿದ್ದು, ಭಾನುವಾರ ಮರುಳ ಸಿದ್ದಪ್ಪ ಸಂಬಂಧಿಕರ ಮದುವೆಗೆಂದು ಹೋಗಿದ್ದರು. ಮದುವೆ ಮುಗಿಸಿ ಇಂದು ಬೆಳಗ್ಗೆ ಬಂದು ಅಡಿಕೆ ಮರಗಳನ್ನು ನೋಡಿ ಆಕಾಶವೇ ಕಳಚಿ ಬಿದ್ದಂತಾಗಿದೆ.

    ಕಳೆದ ನಾಲ್ಕೈದು ವರ್ಷಗಳಿಂದ ಕಷ್ಟ ಪಟ್ಟು ಸಾಕಿದ್ದ ಅಡಿಕೆ ಮರಗಳು ನೆಲಸಮವಾಗಿದೆ. ವೈಯಕ್ತಿಕ ದ್ವೇಷದಿಂದ ಅಡಿಕೆ ಮರಗಳನ್ನು ಕಡಿದಿದ್ದಾರೆ. ಇಂತಹ ಕೆಲಸ ಮಾಡಿದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಘಟನೆ ಸಾಗರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.