Tag: Oath Program

  • ರಂಜನ್ ಗೊಗೋಯ್ ಪ್ರಮಾಣ ವಚನ: ದೇಶದ 46ನೇ ಸಿಜೆಐ ಬಗ್ಗೆ ಇಲ್ಲಿದೆ ಕಿರು ಮಾಹಿತಿ

    ರಂಜನ್ ಗೊಗೋಯ್ ಪ್ರಮಾಣ ವಚನ: ದೇಶದ 46ನೇ ಸಿಜೆಐ ಬಗ್ಗೆ ಇಲ್ಲಿದೆ ಕಿರು ಮಾಹಿತಿ

    ನವದೆಹಲಿ: ಸುಪ್ರೀಂ ಕೋರ್ಟ್ ನ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ರಂಜನ್ ಗೊಗೋಯ್‍ರವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು 46ನೇ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಗೊಂಡಿದ್ದ ಜಸ್ಟಿಸ್ ರಂಜನ್ ಗೊಗೋಯ್‍ರವರಿಗೆ ಪ್ರಮಾಣ ವಚನ ಬೋಧಿಸಿದರು.

    ಪ್ರಮಾಣವಚನ ಕಾರ್ಯಕ್ರಮಕ್ಕೆ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಸೇರಿದಂತೆ ಸುಪ್ರೀಂ ಕೋರ್ಟ್ ನ ಬಹುತೇಕ ನ್ಯಾಯಾಧೀಶರು ಹಾಗೂ ಕೇಂದ್ರ ಸರ್ಕಾರದ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

    ಹಾಲಿ ಸಿಜೆಐ ಆಗಿರುವ ದೀಪಕ್ ಮಿಶ್ರಾರವರ ಅಧಿಕಾರವಧಿ ಪೂರ್ಣಗೊಂಡು ನಿವೃತ್ತಿಯಾದ ಹಿನ್ನೆಲೆಯಲ್ಲಿ ಅವರ ಉತ್ತರಾಧಿಕಾರಿಯಾಗಿ ರಂಜನ್ ಗೊಗೋಯ್‍ರವರನ್ನು ಆಯ್ಕೆಮಾಡಲಾಗಿತ್ತು. 63 ವರ್ಷದ ರಂಜನ್ ಗೊಗೋಯ್ ಈ ಸ್ಥಾನವನ್ನು ಏರಿದ ಈಶಾನ್ಯ ಭಾರತದ ಪ್ರಥಮ ನ್ಯಾಯಾಧೀಶ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    1954 ರ ನವೆಂಬರ್ 18 ರಂದು ಜನಿಸಿದ್ದ ರಂಜನ್ ಗೊಗೋಯ್, 1978 ರಲ್ಲಿ ಬಾರ್ ಕೌನ್ಸಿಲ್‍ಗೆ ಸೇರಿ, ಗುವಾಹಟಿ ಹೈಕೋರ್ಟ್ ವಕೀಲರಾಗಿ ಕೆಲಸ ಮಾಡಿದ್ದರು. 2001 ರ ಫೆಬ್ರವರಿ 28 ರಂದು ಗುವಾಹಟಿ ಹೈ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಇದಾದ 9 ವರ್ಷಗಳ ಬಳಿಕ 2011 ರ ಫೆಬ್ರವರಿ 12 ರಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ವರ್ಗಾವಣೆಯಾದರು. 2012 ರ ಏಪ್ರಿಲ್ 23 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

    ರಂಜನ್ ಗೊಗೋಯ್ ಅತಿ ಕಡಿಮೆ ಅವಧಿಗಳ ಕಾಲ ಮುಖ್ಯ ನ್ಯಾಯಾಧೀಶರಾಗಿ ಕೆಲಸ ಮಾಡಲಿದ್ದಾರೆ. ಒಟ್ಟು 13 ತಿಂಗಳು ಕಾಲ ಸೇವೆ ಸಲ್ಲಿಸಲಿದ್ದು, 2019ರ ನವೆಂಬರ್ 17ರಂದು ನಿವೃತ್ತಿಯಾಗಲಿದ್ದಾರೆ. ರಂಜನ್ ಗೊಗೋಯ್ ಅವರ ತಂದೆ ಕೇಶಬ್ ಚಂದ್ರ ಗೊಗೋಯ್ ಕಾಂಗ್ರೆಸ್ ನಾಯಕರಾಗಿದ್ದು 1982 ರಲ್ಲಿ ಅಸ್ಸಾಂ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಮ್ರಾನ್ ಖಾನ್ ಆಮಂತ್ರಣವನ್ನು ಒಪ್ಪಿಕೊಂಡ ನವಜೋತ್ ಸಿಂಗ್ ಸಿದ್ದು

    ಇಮ್ರಾನ್ ಖಾನ್ ಆಮಂತ್ರಣವನ್ನು ಒಪ್ಪಿಕೊಂಡ ನವಜೋತ್ ಸಿಂಗ್ ಸಿದ್ದು

    ಚಂಡೀಗಡ: ಮಾಜಿ ಕ್ರಿಕೆಟ್ ಆಟಗಾರ ಹಾಗೂ ನೂತನ ಪ್ರಧಾನಿ ಇಮ್ರಾನ್ ಖಾನ್ ರವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ರಾಜಕಾರಣಿಯಾದ ನವಜೋತ್ ಸಿಂಗ್ ಸಿದ್ದು ಆಮಂತ್ರಣ ಸ್ವೀಕರಿಸಿದ್ದಾರೆ.

    ಇದೇ ಆಗಸ್ಟ್ 18 ರಂದು ಪಾಕಿಸ್ತಾನದ ಇಸ್ಲಾಮಬಾದ್ ನಲ್ಲಿ ನಡೆಯಲಿರುವ ನೂತನ ಪ್ರಧಾನಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಇಮ್ರಾನ್ ಖಾನ್ ರವರು ನವಜೋತ್ ಸಿಂಗ್ ಸಿದ್ದುರವರಿಗೆ ಆಮಂತ್ರಣವನ್ನು ನೀಡಿದ್ದರು. ಇವರ ಈ ಆಮಂತ್ರಣವನ್ನು ಒಪ್ಪಿಕೊಂಡಿರುವ ಅವರು ಕೇಂದ್ರ ಗೃಹ ಮಂಡಳಿ ಹಾಗೂ ಪಂಜಾಬ್ ಮುಖ್ಯಮಂತ್ರಿಗಳ ಕಾರ್ಯಲಯದ ಅನುಮತಿಗಾಗಿ ಕೋರಿದ್ದಾರೆ ಎಂದು ತಿಳಿದು ಬಂದಿದೆ.

    ಇಮ್ರಾನ್ ಖಾನ್ ರವರು ಪಾಕಿಸ್ತಾನದ ತೆಹ್ರಿಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಮುಖಂಡರಾಗಿದ್ದು, ಖುದ್ದು ದೂರವಾಣಿ ಮೂಲಕ ಸಿದ್ದುರವರನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

    ಆಹ್ವಾನಕ್ಕೂ ಮುನ್ನ ಸಿದ್ದು ಪಾಕಿಸ್ತಾನ ಮತ್ತು ಭಾರತದ ನಡುವಿನ ಸಂಬಂಧವು ಕ್ರಿಕೆಟ್ ಮೂಲಕವಾದರೂ ಬದಲಾವಣೆಯಾಗುತ್ತದೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews