Tag: obc

  • ಮತಗಳಿಗೆ ಮಾತ್ರ ಸೀಮಿತವಾಗಿದ್ದೇವೆ, ನಮಗೂ ಅವಕಾಶ ಕೊಡಿ – BJPಗೆ ಒಬಿಸಿ ನಾಯಕರ ಮನವಿ

    ಮತಗಳಿಗೆ ಮಾತ್ರ ಸೀಮಿತವಾಗಿದ್ದೇವೆ, ನಮಗೂ ಅವಕಾಶ ಕೊಡಿ – BJPಗೆ ಒಬಿಸಿ ನಾಯಕರ ಮನವಿ

    ನವದೆಹಲಿ: ಮುಂಬರುವ ವಿಧಾನಸಭೆ (Assembly Election) ಮತ್ತು ಲೋಕಸಭೆ ಚುನಾವಣೆಯಲ್ಲಿ (Parliamentary Election) ಒಬಿಸಿಯಲ್ಲಿರುವ (OBC) ಸಮುದಾಯಗಳಿಗೆ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವಂತೆ 40ಕ್ಕೂ ಅಧಿಕ ಹಿಂದುಳಿದ ವರ್ಗಗಳ ನಾಯಕರ ನಿಯೋಗ ಬಿಜೆಪಿ (BJP) ಹೈಕಮಾಂಡ್ ನಾಯಕರನ್ನ ಮನವಿ ಮಾಡಿದೆ.

    ದೆಹಲಿಯಲ್ಲಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಸೇರಿ ಹಲವು ನಾಯಕರನ್ನು ಭೇಟಿ ಮಾಡಿದ ಒಬಿಸಿ ನಾಯಕರ ನಿಯೋಗ, ಸಣ್ಣ ಸಣ್ಣ ಸಮುದಾಯಗಳ ನಾಯಕರನ್ನ ಗುರುತಿಸಿ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂದು ಒಬಿಸಿ ನಾಯಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: `ಏಕರೂಪ ನಾಗರಿಕ ಸಂಹಿತೆ’ ಕುರಿತು ಚರ್ಚಿಸಲು ಫೆ.12ರಂದು ಮುಸ್ಲಿಮರ ಬೃಹತ್ ಸಮಾವೇಶ

    ಈ ಬಗ್ಗೆ ಮಾತನಾಡಿದ ಮರಾಠ ಸಂಘದ ರಾಜ್ಯಾಧ್ಯಕ್ಷ ಶಾಮಸುಂದರ್ ಗಾಯಕವಾಡ್, ಲೋಕಸಭೆ ವಿಧಾನಸಭೆ ಚುನಾವಣೆಯಲ್ಲಿ ಒಬಿಸಿ ಅಭ್ಯರ್ಥಿಗಳನ್ನ ಕಡೆಗಣಿಸಲಾಗುತ್ತಿದೆ. ರಾಜ್ಯದಲ್ಲಿ ಶೇ.35 ಒಬಿಸಿ, ಎಸ್ಸಿ – ಎಸ್ಟಿ ಮತಗಳು (SCST Community Vote) ಶೇ.23, ಲಿಂಗಾಯತ ಶೇ.16, ಒಕ್ಕಲಿಗ ಶೇ.11, ಬ್ರಾಹ್ಮಣರು ಶೇ.4 ರಷ್ಟಿದ್ದಾರೆ. ಈ ಪೈಕಿ ಒಬಿಸಿ ಶೇ.20ಕ್ಕೂ ಅಧಿಕ ಜನರು ಬಿಜೆಪಿಗೆ (BJP) ಮತ ಚಲಾಯಿಸುತ್ತಿದ್ದಾರೆ. ಎಸ್ಸಿ ಎಸ್ಟಿ ಶೇ.15, ಒಕ್ಕಲಿಗ ಮತ್ತು ಲಿಂಗಾಯತ ಸೇರಿ ಶೇ.17 ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಮತ ಪ್ರಮಾಣದಲ್ಲಿ ಒಬಿಸಿ ಜನರೇ ಹೆಚ್ಚು ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಅದಾಗ್ಯೂ ನಮ್ಮನ್ನ ನಿರ್ಲಕ್ಷಿಸಿ ಕೇವಲ ವೀರಶೈವ ಲಿಂಗಾಯತ, ಒಕ್ಕಲಿಗರು, ಬ್ರಾಹ್ಮಣರಿಗೆ ಹೆಚ್ಚಿನ ಮಣೆ ಹಾಕಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಹಿಂದುಳಿದ ವರ್ಗಗಳಲ್ಲಿರುವ ಸಮುದಾಯಗಳನ್ನ ಕೇವಲ ಮತಕ್ಕಾಗಿ ಸೀಮಿತಗೊಳಿಸಲಾಗಿದೆ. ನಮಗೆ ಹೆಚ್ಚಿನ ಸ್ಥಾನಮಾನ ಸಿಗುತ್ತಿಲ್ಲ ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ 15ರ ಬದಲು 75 ಕ್ಷೇತ್ರಗಳಲ್ಲಿ ಒಬಿಸಿಯಲ್ಲಿರುವ ಚಿಕ್ಕ ಪುಟ್ಟ ಸಮುದಾಯಗಳ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಅವರು ಒತ್ತಾಯಿಸಿದರು. ಇದನ್ನೂ ಓದಿ: Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

    ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಲ ರಾಜ್ಯಧ್ಯಕ್ಷ ಎಲ್. ನಾಗರಾಜ್ ಆಚಾರ್ ಮಾತನಾಡಿ, ಬಹಳಷ್ಟು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಪಕ್ಷಕ್ಕಾಗಿ ದುಡಿದ್ದೇವೆ, ಹಿಂದುಳಿದ ವರ್ಗದಲ್ಲಿರುವ ಬಹುತೇಕ ಸಮುದಾಯಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನ ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿವೆ. ಈ ಹಿನ್ನಲೆ ಆ ವರ್ಗಗಳಿಗೆ ಆದ್ಯತೆ ನೀಡಬೇಕು. ಬೇರೆ ಬೇರೆ ವಿಭಾಗಗಳಲ್ಲಿ ಆದ್ಯತೆ ನೀಡಬೇಕು ಎಂದು ಕೋರಿದರು.

    ವಿಶ್ವಕರ್ಮ ಮುಖಂಡ ಹಾಗೂ 2018ರ ಚುನಾವಣೆ ಮಂಡ್ಯ ಪರಾರ್ಜಿತ ಅಭ್ಯರ್ಥಿ ಡಿ.ವೆಂಕಟೇಶ ಮಾತನಾಡಿ, ನಮ್ಮ ಒಬಿಸಿಯಲ್ಲಿರುವ ಸಣ್ಣ ಸಣ್ಣ ಸಮುದಾಯಗಳು ಎಲ್ಲ ದೊಡ್ಡ ಪ್ರಮಾಣದಲ್ಲಿಲ್ಲ. ಯಾವ ಕ್ಷೇತ್ರದಲ್ಲೂ ನಿರ್ಣಾಯಕವಾಗಿಲ್ಲ. ಆದ್ದರಿಂದ ನಮ್ಮ ಸಮುದಾಯದ ನಾಯಕರಿಗೆ ಅವಕಾಶ ನಿರಾಕರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

    ನಿಯೋಗದಲ್ಲಿ ಮರಾಠ, ಗಾಣಿಗ, ಕುರುಬ, ಗೊಲ್ಲ, ವಿಶ್ವಕರ್ಮ, ಕಂಬಾರ, ಬಲಿಜ, ಈಡಿಗ, ನೇಕಾರ, ಸೇರಿ ಇನ್ನು ಹಲವು ಸಮುದಾಯದ ನಾಯಕರು ಇದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಬಿಜೆಪಿಯ ವಿಜಯಯಾತ್ರೆ ತಡೆಯಿರಿ – ಕಾಂಗ್ರೆಸ್‍ಗೆ ಬೊಮ್ಮಾಯಿ ಸವಾಲು

    ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಬಿಜೆಪಿಯ ವಿಜಯಯಾತ್ರೆ ತಡೆಯಿರಿ – ಕಾಂಗ್ರೆಸ್‍ಗೆ ಬೊಮ್ಮಾಯಿ ಸವಾಲು

    ಕಲಬುರಗಿ: ಜಿಲ್ಲೆಯಲ್ಲಿ ಬಿಜೆಪಿ ಆಯೋಜಿಸಿದ್ದ ವಿರಾಟ್ ಒಬಿಸಿ (OBC) ಸಮಾವೇಶದಲ್ಲಿ ಕಾಂಗ್ರೆಸ್ (Congress) ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತೆ ಗುಡುಗಿದ್ದಾರೆ. ಒಬಿಸಿಗಳು ನಿಮ್ಮ ಜೇಬಲ್ಲಿ ಇಲ್ಲ. ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಬಿಜೆಪಿಯ ವಿಜಯಯಾತ್ರೆ ತಡೆಯಿರಿ ಎಂದು ಸವಾಲು ಹಾಕಿದ್ದಾರೆ.

    ವೇದಿಕೆಯಲ್ಲಿ ಮಾತನಾಡಿದ ಅವರು, ನಾನು ನಿಮ್ಮ ಸೇವಕ. ನೀವು ನಮ್ಮ ಮಾಲೀಕರು. ನಮ್ಮನ್ನು ಮತ್ತೆ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ. ನೆರದಿದ್ದ ಜನರನ್ನ ನೋಡಿದ್ರೆ ಬಿಜೆಪಿ ಬಾವುಟ ವಿಧಾನಸೌಧ ಮೂರನೇ ಮಹಡಿ ಮೇಲೆ ಹಾರಾಡಲಿದೆ. ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್ ಮೋಸ ಮಾಡಿ ಮತ ಪಡೆದಿದೆ. ಸಿದ್ದರಾಮಯ್ಯನವರಿಗೆ (Siddaramaiah) ಬದಲಾವಣೆ ಕಾಲ ಬಂದಿದೆ. ಎಲ್ಲರನ್ನು ಎಲ್ಲ ಕಾಲಕ್ಕೂ ಮೋಸ ಮಾಡಲು ಆಗುವುದಿಲ್ಲ. ಕಾಗಿನೇಲೆ ಅಭಿವೃದ್ಧಿ ಮಾಡಿದ್ದು ನಮ್ಮ ನಾಯಕ ಯಡಿಯೂರಪ್ಪನವರು (B.S Yediyurappa). ಕುರುಬ ಸಮಾಜಕ್ಕೆ ಅನೇಕ ಕೊಡುಗೆ ನೀಡಿದ್ದು ನಮ್ಮ ಸರ್ಕಾರ. ಎಸ್‍ಸಿ (SC), ಎಸ್‍ಟಿ (ST) ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದ್ದೇನೆ. ಈ ವರ್ಗಗಳಿಗೆ ಹೆಚ್ಚು ನ್ಯಾಯ ನೀಡಿದ್ದು ನಮ್ಮ ಸರ್ಕಾರ ಎಂದಿದ್ದಾರೆ. ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ ಕೆ. ಶಿವನ್, ಸಿಹಿಕಹಿ ಚಂದ್ರು ಸೇರಿ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

    ಮೀಸಲಾತಿ ಹೆಚ್ಚಳ ವಿಚಾರದಲ್ಲಿ ನಮ್ಮ ಶ್ರಮವಿದೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪಕ್ಕದಲ್ಲಿ ಮನೆಯಲ್ಲಿ ಗಂಡು ಮಗು ಹುಟ್ಟಿದ್ರೆ ಇವರ ಮನೆಯಲ್ಲಿ ಸ್ವೀಟ್ ಹಂಚಿದ್ರು ಅನ್ನೊ ಹಾಗೆ ಸಿದ್ದರಾಮಯ್ಯ ಮಾಡ್ತಿದಾರೆ. ಕುರುಬ ಸಮಾಜಕ್ಕೆ ನ್ಯಾಯ ಕೊಡುವ ನೈತಿಕತೆನು ಇಲ್ಲವೇ ಸಿದ್ದರಾಮಯ್ಯನವರೇ? ಪ್ರಧಾನಿ ಮೋದಿಯವರು (Narendra Modi) ಹಿಂದುಳಿದ ವರ್ಗಗಳ ನೇತಾತರರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ದಾರಿಯಲ್ಲಿ ನಮ್ಮ ಸರ್ಕಾರ ಹೋಗುತ್ತಿದೆ. ತಳವಾರ/ಪರಿವಾರ ಎಸ್‍ಟಿಯಲ್ಲಿ ಬರಬೇಕೆಂದು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಅದಕ್ಕಾಗಿ ತಳವಾರ/ಪರಿವಾರ ಸಮಾಜವನ್ನು ಹಿಂದುಳಿದ ವರ್ಗದಿಂದ ತೆಗೆದು ಎಸ್‍ಟಿ ಪಟ್ಟಿಯಲ್ಲಿ ಸೇರಿಸಲಾಗಿದೆ. ಜನಗಳೇ ನಾನು ಕಲಬುರಗಿಗೆ ಖಾಲಿ ಕೈಯಿಂದ ಬಂದಿಲ್ಲ. ಸಮಾವೇಶದಲ್ಲಿ ತಳವಾರ್/ಪರಿವಾರವನ್ನು ಎಸ್‍ಟಿಗೆ ಸೇರಿಸಿದ ಆದೇಶ ಪ್ರತಿ ಪ್ರದರ್ಶಿಸಿದರು.

    ಸಿಎಂ ಆದೇಶ ಪ್ರತಿ ತೋರಿಸುತ್ತಿದ್ದಂತೆ ತಳವಾರ್/ಪರಿವಾರ ಸಮಾಜರಿಂದ ಜಯಘೋಷ ಸಮಾವೇಶದಲ್ಲಿ ಬೊಮ್ಮಾಯಿ ಪರ ಜನ ಘೋಷಣೆ ಕೂಗಿದರು. ಹಿಂದುಳಿದ ವರ್ಗಗಳ ಪರ ಕೆಲಸ ಮಾಡಲು 24 ಗಂಟೆ ಸಿದ್ಧನಿದ್ದೇನೆ. ನಿಮ್ಮನ್ನ ನೋಡಿ ನಮಗೆ ಆನೆ ಬಲ ಬಂದಂತಾಗಿದೆ. ಹಿಂದುಳಿದ ವರ್ಗಗಳು ನಮ್ಮ ಜೇಬಿನಲ್ಲಿದೆ ಅಂತಾ ಕಾಂಗ್ರೆಸ್‍ನವರು ಅಂದುಕೊಂಡಿದ್ದಾರೆ. ಹೀಗೆ ಅಂದುಕೊಂಡರೆ ನೀವು ಕಲಬುರಗಿಗೆ ಬಂದು ಒಬಿಸಿ ಸಮಾವೇಶದಲ್ಲಿನ ಜನ ನೋಡಿ. ತಾಕ್ಕತಿದ್ದರೆ, ಧಮ್ ಇದ್ರೆ ಈ ವಿಜಯಯಾತ್ರೆ ತಡೆಯಿರಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಮೋದಿ ಹೆಬ್ಬುಲಿ, ಅಮಿತ್ ಶಾ ಹುಲಿ, ಇವರೊಂದಿಗೆ ಹೆಜ್ಜೆ ಹಾಕೋ ಮತ್ತೊಂದು ಹುಲಿ ಪ್ರಹ್ಲಾದ್ ಜೋಶಿ: ಜಗ್ಗೇಶ್

    ಮಧ್ಯಪ್ರದೇಶ ಸಿಎಂ ಶಿವರಾಜ್‍ಸಿಂಗ್ ಚೌವ್ಹಾಣ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿ ಹಲವರಿದ್ದ ಈ ಸಮಾವೇಶದಲ್ಲಿ ಅಂದಾಜು 2 ಲಕ್ಷ ಕಾರ್ಯಕರ್ತರು ಪಾಲ್ಗೊಂಡಿದ್ರು.

    Live Tv
    [brid partner=56869869 player=32851 video=960834 autoplay=true]

  • BJPಯಂತೆ ಒಂದೊಂದು ಸಮಾಜಕ್ಕೆ ಒಂದೊಂದು ಸಮಾವೇಶ ಮಾಡಲ್ಲ – HDK

    BJPಯಂತೆ ಒಂದೊಂದು ಸಮಾಜಕ್ಕೆ ಒಂದೊಂದು ಸಮಾವೇಶ ಮಾಡಲ್ಲ – HDK

    ಬೆಂಗಳೂರು: ಬಿಜೆಪಿ (BJP) ರೀತಿ ನಾನು ಒಂದೊಂದು ಸಮಾಜಕ್ಕೆ (Community) ಒಂದೊಂದು ಸಮಾವೇಶ ಮಾಡೋದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಕಿಡಿ ಕಾರಿದ್ದಾರೆ.

    ನಗರದ ಜೆಪಿ ಭವನದಲ್ಲಿ ಬಿಜೆಪಿ (BJO) ಒಬಿಸಿ (OBC) ಸಮಾವೇಶದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಒಂದೊಂದು ಸಮಾಜಕ್ಕೆ ಒಂದೊಂದು ಸಮಾವೇಶ ಮಾಡೋದಿಲ್ಲ. ನಾಡಿನ ಸಮಸ್ಯೆ ಪರಿಹಾರಕ್ಕೆ ಕೆಲಸ ಮಾಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ಚಂದಮಾಮ ಪುಸ್ತಕದಲ್ಲಿ ‘ದಿನಕ್ಕೊಂದು ಕತೆ’ ಎಂದು ಬರ್ತಿತ್ತು – ಬಿಜೆಪಿ ಸರ್ಕಾರದಿಂದ ‘ದಿನಕ್ಕೊಂದು ಹಗರಣ’ ಬರುತ್ತಿದೆ: ಕಾಂಗ್ರೆಸ್

    ನಾಡಿನ ಅಭಿವೃದ್ಧಿ ದೃಷ್ಟಿಯಿಂದ ಪಂಚರತ್ನ ಯೋಜನೆ ಇದೆ. ಈ ಯೋಜನೆ ಎಲ್ಲ ಸಮುದಾಯಕ್ಕೂ ಇದೆ. ಬಿಜೆಪಿ ಅವರು ಜಾತಿ ಸಮಾವೇಶ ಮಾಡಿ ಏನ್ ಸಾಧನೆ ಮಾಡ್ತಾರೆ. ಜನ ಸೇರಿಸೋದು ಒಂದು ಕೆಲಸನಾ? ಆ ಸಮಾಜಕ್ಕೆ ಏನ್ ಕೊಟ್ಟಿದ್ದಾರೆ ಅಂತಾ ಬಿಜೆಪಿಯವರೇ ಹೇಳಲಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 8 ಗಂಡಂದಿರಿಂದ 11 ಮಕ್ಕಳು, ಇನ್ನೂ 19 ಮಕ್ಕಳಿaಗಾಗಿ ಪ್ಲ್ಯಾನಿಂಗ್‌ ಮಾಡಿದ್ದಾಳೆ ಈ ಮಹಿಳೆ

    ಇವತ್ತು ಉತ್ತರ ಕರ್ನಾಟಕ ಲಿಂಗಾಯತ ಮುಖಂಡರ ಸಭೆ ಇದೆ. ನಾಡಗೌಡರ ನೇತೃತ್ವದಲ್ಲಿ ಸಭೆ ಮಾಡ್ತಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆಯಲ್ಲಿ (Elections) ಜೆಡಿಎಸ್ (JDS) ಅಭ್ಯರ್ಥಿ ಗೆಲ್ಲಸಲು, ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡ್ತೀವಿ. ಚುನಾವಣೆ ಹಿನ್ನಲೆಯಲ್ಲಿ ಸಭೆ ಮಾಡ್ತಿದ್ದೇವೆ. ಚುನಾವಣೆ ಬಗ್ಗೆ ಎಲ್ಲರ ಸಲಹೆ ಪಡೆಯುತ್ತೇನೆ. ಅ ಭಾಗಕ್ಕೆ ಹೆಚ್ಚು ಟಿಕೆಟ್ ಕೊಡುವ ಬಗ್ಗೆ ನಿರ್ಧಾರ ಮಾಡ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಸ್ಟಿಗೆ ತಳವಾರ, ಪರಿವಾರ ಜಾತಿಗಳ ಸೇರ್ಪಡೆ – ಒಬಿಸಿ ಮೀಸಲಾತಿ ಪಟ್ಟಿಯಿಂದ ತೆಗೆದು ಸರ್ಕಾರ ಆದೇಶ

    ಎಸ್ಟಿಗೆ ತಳವಾರ, ಪರಿವಾರ ಜಾತಿಗಳ ಸೇರ್ಪಡೆ – ಒಬಿಸಿ ಮೀಸಲಾತಿ ಪಟ್ಟಿಯಿಂದ ತೆಗೆದು ಸರ್ಕಾರ ಆದೇಶ

    ಬೆಂಗಳೂರು: ತಳವಾರ (Talawara) ಮತ್ತು ಪರಿವಾರ ನಾಯಕ (Parivara Nayaka) ಜಾತಿಗಳನ್ನು ಹಿಂದುಳಿದ ವರ್ಗಗಳ (OBC) ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ.

    ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಿದ ಹಿನ್ನೆಲೆ, ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ಈ ಜಾತಿಗಳನ್ನು ರಾಜ್ಯ ಸರ್ಕಾರ ತೆಗೆದುಹಾಕಿದೆ. ಇದನ್ನೂ ಓದಿ: SSLC ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ – ಏಪ್ರಿಲ್‌ 1ರಿಂದ ಪರೀಕ್ಷೆ ಆರಂಭ

    ಈ ಜಾತಿಗಳನ್ನು ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕುವ ಸಂಬಂಧ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಹೀಗಾಗಿ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

    ಎಸ್ಟಿ ವರ್ಗಕ್ಕೆ ಪರಿವಾರ ಮತ್ತು ತಳವಾರ ಜಾತಿಗಳನ್ನು ಸೇರಿಸಿರುವ ಹಿನ್ನೆಲೆಯಲ್ಲಿ ಸದರಿ ಜಾತಿಗಳಿಗೆ ಸರ್ಕಾರವು ಪರಿಶಿಷ್ಟ ಪಂಗಡದ ಪ್ರಮಾಣಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ಇನ್ಸ್‌ಪೆಕ್ಟರ್‌ ನಂದೀಶ್ ತೆಗೆದುಕೊಂಡ ತೀರ್ಮಾನ ರಾಂಗ್ – ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಂಟಿಬಿ

    Live Tv
    [brid partner=56869869 player=32851 video=960834 autoplay=true]

  • ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಟಿ.ಬಿ ಜಯಚಂದ್ರ ಮನವಿ

    ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಟಿ.ಬಿ ಜಯಚಂದ್ರ ಮನವಿ

    ನವದೆಹಲಿ: ಕರ್ನಾಟಕದ ಕುಂಚಿಟಿಗ ಸಮುದಾಯಕ್ಕೆ (Kunchitiga community) ಒಬಿಸಿ (OBC) ಮೀಸಲಾತಿ ಕಲ್ಪಿಸುವಂತೆ ಮಾಜಿ ಸಚಿವ ಟಿ.ಬಿ ಜಯಚಂದ್ರ (TB Jayachandra) ಮನವಿ ಮಾಡಿದ್ದಾರೆ. ಕೇಂದ್ರ ಹಿಂದುಳಿದ ವರ್ಗಗಳ ಉಪ ಪಂಗಡಗಳ ‘ರೋಹಿಣಿ’ ನಿಯೋಗದ ಅಧ್ಯಕ್ಷೆ, ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಜಿ. ರೋಹಿಣಿ ಅವರನ್ನು ಭೇಟಿ ಮಾಡಿದ ಅವರು ಈ ಬಗ್ಗೆ ಚರ್ಚೆ ನಡೆಸಿದರು.

    ಭೇಟಿ ವೇಳೆ ಮನವಿಗೆ ಪೂರಕವಾಗಿ ಹಿಂದಿನಿಂದಲೂ ಕೇಂದ್ರ ಸರ್ಕಾರದ ಜೊತೆ ನಡೆದಿರುವ ಪತ್ರ ವ್ಯವಹಾರಗಳ ದಾಖಲೆ, ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸಲು ಅಗತ್ಯವಿರುವ ಹಲವಾರು ದಾಖಲೆಗಳನ್ನು ನೀಡಿ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಇದನ್ನೂ ಓದಿ: ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ: ಮುರುಗೇಶ್ ನಿರಾಣಿ

    ಮನವಿ ಬಳಿಕ ಮಾತನಾಡಿದ ಅವರು, ಇತ್ತೀಚೆಗೆ ತುಮಕೂರು, ಹಿರಿಯೂರು, ಶಿಕಾರಿಪುರ, ಚಿಕ್ಕಹುಲಿಕುಂಟೆಯಲ್ಲಿ ಕುಂಚಿಟಿಗರ ಸಮಾವೇಶ ನಡೆದಿತ್ತು. ಈ ಸಮುದಾಯದ ಬಹುದಿನಗಳ ಬೇಡಿಕೆಯಾದ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸಲು ಅಗತ್ಯವಿರುವ ಹೋರಾಟ ಮಾಡಲು ಒಮ್ಮತದಿಂದ ತಿರ್ಮಾನ ಮಾಡಿ ಈ ಕುರಿತು ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಕೋಟಿ ಕಂಠ ಗಾಯನದಲ್ಲಿ ಕನ್ನಡ ಹಾಡಿಗೆ ಹೆಜ್ಜೆ ಹಾಕಿದ ಪ್ರಹ್ಲಾದ್‌ ಜೋಶಿ

    ಸುಮಾರು 2 ದಶಕಗಳ ಕಾಲ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸಲು ಹೋರಾಟ ಮಾಡಲಾಗಿದೆ. ಈ ನಿಟ್ಟಿನಲ್ಲಿ ಇದ್ದಂತಹ ಅನೇಕ ಕಾನೂನು ತೊಡಕುಗಳನ್ನು ನಿವಾರಣೆ ಮಾಡಿ, ತಾವು ಕಾನೂನು ಸಚಿವರಾಗಿದ್ದ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನವಶಾಸ್ತ್ರ ಅಧ್ಯಯನ ವಿಭಾಗದ ಮೂಲಕ ಸಮುದಾಯದ ಕುಲಶಾಸ್ತ್ರ ಅಧ್ಯಯನ ಮಾಡಿಸಿದ್ದೇವೆ. ಈಗಾಗಲೇ 2019ರಲ್ಲಿ ಈ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆ ಅಂಗೀಕರಿಸಿ ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರದ ಮುಖೇನ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನು ಆಧರಿಸಿ ಕ್ರಮ ವಹಿಸಲು ಮನವಿ ಮಾಡಿದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳು ಕಣಿವೆ ಪ್ರದೇಶಕ್ಕೆ, ಅಲ್ಪಸಂಖ್ಯಾತರನ್ನು ಉಗ್ರಪೀಡಿತ ಕಾಶ್ಮೀರಕ್ಕೆ ಶಿಫ್ಟ್ ಮಾಡಲು ಕ್ರಮ

    ಹಿಂದೂಗಳು ಕಣಿವೆ ಪ್ರದೇಶಕ್ಕೆ, ಅಲ್ಪಸಂಖ್ಯಾತರನ್ನು ಉಗ್ರಪೀಡಿತ ಕಾಶ್ಮೀರಕ್ಕೆ ಶಿಫ್ಟ್ ಮಾಡಲು ಕ್ರಮ

    ಶ್ರೀನಗರ: ಹಿಂದೂ ಶಾಲೆಯ ಶಿಕ್ಷಕಿಯ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಬ್ಯಾಂಕ್ ವ್ಯವಸ್ಥಾಪಕನನ್ನೂ ಹತ್ಯೆ ಮಾಡಲಾಗಿದೆ. ಭಯೋತ್ಪಾದಕ ದಾಳಿಯ ನಂತರ ಕಾಶ್ಮೀರಿ ಪಂಡಿತರು ಸಾಮೂಹಿಕ ವಲಸೆಗೆ ಬೆದರಿಕೆ ಹಾಕಿದ್ದು, ಇದರಿಂದ ಜಿಲ್ಲಾಡಳಿತ ಅವರನ್ನು ಕಾಶ್ಮೀರಿ ಕಣಿವೆಯೋಳಗೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸಕ್ಕೆ ಮುಂದಾಗಿದೆ.

    ಪ್ರಧಾನ ಮಂತ್ರಿ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 6 ಸಾವಿರ ಹಿಂದೂ ಫಲಾನುಭವಿಗಳನ್ನು ಕಣಿವೆ ಪ್ರದೇಶಕ್ಕೆ ಮತ್ತು ಜಮ್ಮು ಮೂಲದ ಅಲ್ಪಸಂಖ್ಯಾತ ನೌಕರರನ್ನು ಉಗ್ರ ಪೀಡಿತ ಕಾಶ್ಮೀರಕ್ಕೆ ಕಳುಹಿಸಲು ಯೋಜನೆ ನಡೆಯುತ್ತಿದೆ. ಮುಂದಿನ ಸೋಮವಾರ ಸೋಮವಾರ ಅಂದರೆ ಜೂನ್ 6ರ ಒಳಗೆ ಅವರಿಗೆ ಕೆಲಸದ ಸ್ಥಳ ನಿಯೋಜನೆಯಾಗಲಿದೆ. ಇದರಿಂದ ಹಿಂದೂಗಳಿಗೆ ಭದ್ರತೆಯೂ ಸಿಗಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

    ಅಲ್ಲದೆ ಹಿಂದೂಗಳ ಮೇಲಿನ ದಾಳಿಯನ್ನು ತಪ್ಪಿಸಲು ಸಹಾಯವಾಣಿಯನ್ನು ಪ್ರಾರಂಭಿಸಿದೆ. ಕಾಶ್ಮೀರದಲ್ಲಿರುವ ಹಿಂದೂಗಳಿಗೆ ಉದ್ದೇಶಪೂರ್ವಕವಾಗಿ ತೊಂದರೆ ಕೊಡುತ್ತಿದ್ದರೆ ದೂ.ಸಂ.0194 – 2506111 ಮತ್ತು 0194 – 2506112ಗೆ ಕರೆ ಮಾಡಿ ಅಥವಾ jk.minoritycell@gmail.com ಗೆ ಇ-ಮೇಲ್ ಮಾಡಿ ದೂರು ದಾಖಲಿಸಬಹುದಾಗಿದೆ. ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಸಂಪರ್ಕ ಸಂಖ್ಯೆ ಲಭ್ಯವಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕಾಶ್ಮೀರಿ ಪಂಡಿತರು, ಹಿಂದೂ ಶಿಕ್ಷಕ, ಬ್ಯಾಂಕ್ ವ್ಯವಸ್ಥಾಪಕ ಹಾಗೂ ಮೂವರು ಪೊಲೀಸರು ಸೇರಿದಂತೆ ಕಳೆದ ತಿಂಗಳು 7 ಜನರ ಉದ್ದೇಶಿತ ಹತ್ಯೆಗಳ ಕುರಿತು ಚರ್ಚಿಸಲು ನಿನ್ನೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದರು.

    ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ, ಸದ್ಯದಲ್ಲಿ ಭಯೋತ್ಪಾದಕ ದಾಳಿಗಳು ಪುನರಾವರ್ತನೆಯಾಗುವ ಸಾಧ್ಯತೆ ಹೆಚ್ಚಿದೆ. ಕಣಿವೆಯಲ್ಲಿ ಪ್ರಧಾನಮಂತ್ರಿ ಉದ್ಯೋಗ ಖಾತ್ರಿ ಯೋಜನೆಯ ಕಾಶ್ಮೀರಿ ಪಂಡಿತ ಫಲಾನುಭವಿಗಳು ಮತ್ತು ಕಾಶ್ಮೀರದಲ್ಲಿ ನಿಯೋಜಿಸಲಾದ ಜಮ್ಮುವಿನ ಅಲ್ಪಸಂಖ್ಯಾತ ಸಮುದಾಯದ ಉದ್ಯೋಗಿಗಳು ವಿಶೇಷವಾಗಿ ಭಯೋತ್ಪಾದಕ ದಾಳಿಗೆ ಗುರಿಯಾಗುತ್ತಾರೆ. ಇದನ್ನೂ ಓದಿ: ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಬೇಸತ್ತಿದ್ದಾರೆ – ಎಚ್ಚರ ಡಿಕೆಶಿ ಎಚ್ಚರ: ಬಿಜೆಪಿ

    ಈ ಉದ್ಯೋಗಿಗಳನ್ನು ಜಿಲ್ಲಾ ಮತ್ತು ತಹಶೀಲ್ದಾರ್ ಪ್ರಧಾನ ಕಚೇರಿಗಳಲ್ಲಿ ನಿಯೋಜಿಸಲಾಗುವುದು, ಅಲ್ಲಿ ಭದ್ರತಾ ಉಪಕರಣವು ಸಾಮಾನ್ಯವಾಗಿ ಬಿಗಿಯಾಗಿರುತ್ತದೆ. ಅವರಿಗೆ ಸರ್ಕಾರಿ ವಸತಿ ಸೌಲಭ್ಯ ಸಿಗಲಿದೆ. ಅವರನ್ನು ಕಣಿವೆಯ ಸುರಕ್ಷಿತ ಸ್ಥಳಗಳಲ್ಲಿ ಕಳುಹಿಸುವ ಪ್ರಕ್ರಿಯೆಯು ಜೂನ್ 6ರ ಒಳಗೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

    ಭದ್ರತಾ ಪರಿಶೀಲನೆ: ಕಣಿವೆಯಲ್ಲಿ ಉದ್ದೇಶಿತ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ 15 ದಿನಗಳೊಳಗೆ 2ನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರ ಭದ್ರತೆಯ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಸಭೆ ಕರೆದಿದ್ದಾರೆ.

  • ರಾಜಕೀಯ ಅರ್ಥವಾಗದಿದ್ದರೆ ಮನೆಗೆ ಹೋಗಿ ಅಡುಗೆ ಮಾಡು – ಸುಪ್ರಿಯಾ ಸುಳೆ ವಿರುದ್ಧ ಬಿಜೆಪಿ ನಾಯಕ ಲೇವಡಿ

    ರಾಜಕೀಯ ಅರ್ಥವಾಗದಿದ್ದರೆ ಮನೆಗೆ ಹೋಗಿ ಅಡುಗೆ ಮಾಡು – ಸುಪ್ರಿಯಾ ಸುಳೆ ವಿರುದ್ಧ ಬಿಜೆಪಿ ನಾಯಕ ಲೇವಡಿ

    ಮುಂಬೈ: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್, ಸಂಸದೆ ಸುಪ್ರಿಯಾ ಸುಳೆ ವಿರುದ್ಧ `ರಾಜಕೀಯ ಅರ್ಥವಾಗದಿದ್ದರೆ, ಮನೆ ಹೋಗಿ ಅಡುಗೆ ಮಾಡು’ ಎಂಬ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದು ಭಾರೀ ಟೀಕೆಗೆ ಗುರಿಯಾಗಿದ್ದಾರೆ.

    ಈ ಕುರಿತು ಮಾತನಾಡಿರುವ ಚಂದ್ರಕಾಂತ್ ಪಾಟೀಲ್, ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕಾದರೂ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ವೆ ಎಂದು ಪ್ರಶ್ನಿಸಿ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

    Chandrakanth patil vs supriya

    ಇದರಿಂದ ಪಾಟೀಲ್ ವಿರುದ್ಧ ಮುಗಿಬಿದ್ದಿರುವ ಎನ್‌ಸಿಪಿ ನಾಯಕರು, ಮೊದಲು ನೀವು ಚಪಾತಿ ಒತ್ತುವುದನ್ನು ಕಲಿಯಿರಿ ಮತ್ತು ನಿಮ್ಮ ಪತ್ನಿಗೆ ಅಡುಗೆ ಮಾಡಲು ಸಹಾಯ ಮಾಡಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

    ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್, `ನನ್ನ ಸಹೋದರಿಯ ವಿರುದ್ಧ ಆ ರೀತಿ ಕೆಟ್ಟದಾಗಿ ಮಾತನಾಡುವ ಹಕ್ಕು ಅವರಿಗಿಲ್ಲ. ಅವರು ಹಾಗೆ ಮಾತನಾಡಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Supriya sule

    ಚಂದ್ರಕಾಂತ್ ಪಾಟೀಲ್ ಹೇಳಿಕೆ ವಿರುದ್ಧ ಕಿಡಿ ಕಾರಿರುವ ಸುಪ್ರಿಯಾ ಪತಿ ಸದಾನಂದ್ ಸುಳೆ, ಗೃಹಿಣಿ, ತಾಯಿ ಮತ್ತು ಯಶಸ್ವಿ ರಾಜಕಾರಣಿಯಾಗಿರುವ, ಭಾರತದ ಇತರ ಅನೇಕ ಕಠಿಣ ಪರಿಶ್ರಮಿ ಹಾಗೂ ಪ್ರತಿಭಾವಂತ ಮಹಿಳೆಯರಲ್ಲಿ ಒಬ್ಬರಾಗಿರುವ ನನ್ನ ಹೆಂಡತಿಯ ಬಗ್ಗೆ ನನಗೆ ಹೆಮ್ಮೆ ಇದೆ. ಆದರೆ ಬಿಜೆಪಿಯು ಸ್ತ್ರೀದ್ವೇಷಿ ಪಕ್ಷವಾಗಿದ್ದು, ಯಾವಾಗಲೂ ಮಹಿಳೆಯನ್ನು ಹೀಯಾಳಿಸುತ್ತದೆ. ಇದು ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಮೊದಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಅವರು ಸಭೆಯೊಂದರಲ್ಲಿ ಮಾತನಾಡುತ್ತಾ, ಬಿಜೆಪಿ ಆಡಳಿತದಲ್ಲಿರುವ ಮಧ್ಯಪ್ರದೇಶ ಸರ್ಕಾರವು ಸ್ಥಳೀಯ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ಪಡೆದುಕೊಂಡಿದ್ದ ಬಗ್ಗೆ ತಿಳಿಯಲು ಅಲ್ಲಿನ ಸಿಎಂ ಅನ್ನು ಭೇಟಿಯಾಗಲು ತೆರಳಿದ್ದೆವು. ಆದರೆ, ಅವರು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ವಂದೇ ಮಾತರಂಗೆ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಅಶ್ವಿನಿ ಉಪಾಧ್ಯಾಯ ವಿರುದ್ಧ ‘ಹೈ’ ಗರಂ

    ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದು ಕೆಲವರನ್ನು ಭೇಟಿ ಮಾಡಿದರು. ಅದಾದ ಎರಡೇ ದಿನಗಳಲ್ಲಿ ಸ್ಥಳೀಯ ಚುನಾವಣೆಗೆ ಅವರು ಒಬಿಸಿ ಮೀಸಲಾತಿ ಪಡೆದುಕೊಂಡರು. ಇದು ಹೇಗೆ ಸಾಧ್ಯವಾಯಿತೆಂದು ನನಗೆ ತಿಳಿದಿಲ್ಲ ಎಂದು ಸುಪ್ರಿಯಾ ಸುಳೆ ಕಳವಳ ವ್ಯಕ್ತಪಡಿಸಿದ್ದರು.

  • ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಎಲೆಕ್ಷನ್- ಒಬಿಸಿ ಕೋಟಾಕ್ಕೆ ಸುಪ್ರೀಂ ಸಮ್ಮತಿ

    ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಎಲೆಕ್ಷನ್- ಒಬಿಸಿ ಕೋಟಾಕ್ಕೆ ಸುಪ್ರೀಂ ಸಮ್ಮತಿ

    ಭೋಪಾಲ್: ಹಿಂದುಳಿದ ವರ್ಗ (OBC)ಗಳಿಗೆ ಮೀಸಲಾತಿಯೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಮಧ್ಯಪ್ರದೇಶಕ್ಕೆ ಅನುಮತಿ ನೀಡಿದೆ.

    ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸುವಂತೆಯೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗವು ತನ್ನ ವರದಿಯನ್ನು ಮಂಡಿಸಿದ್ದು, ಅದರಲ್ಲಿ ‘ತ್ರಿವಳಿ ಪರೀಕ್ಷೆ’ ಅನುಸರಿಸಲಾಗಿದೆ ಎಂದು ಹೇಳಿದೆ.

    ನಿಖರ ಅಂಕಿ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂದು ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಮೋದಿ ಎಂದಿಗೂ ನಾನೇ ನೀಡಿದ್ದು ಎಂದು ಹೇಳಿರಲಿಲ್ಲ: ಸಿದ್ದುಗೆ ಟಾಂಗ್ ನೀಡಿದ ಸಿಟಿ ರವಿ

    ಮಧ್ಯಪ್ರದೇಶದಲ್ಲಿ 2 ವರ್ಷಗಳಿಂದ 23,000 ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆ ಸ್ಥಾನಗಳು ಖಾಲಿ ಇದ್ದು ಚುನಾವಣೆಗಾಗಿ ಕಾಯುತ್ತಿವೆ.

  • ಒಬಿಸಿ ಪಟ್ಟಿಗೆ ಪಂಚಮಸಾಲಿ ಸೇರಿಸುವಂತೆ ಬ್ಲ್ಯಾಕ್ ಮೇಲ್ ಮಾಡಬಾರದು: ಪರಮೇಶ್ವರ್

    ಒಬಿಸಿ ಪಟ್ಟಿಗೆ ಪಂಚಮಸಾಲಿ ಸೇರಿಸುವಂತೆ ಬ್ಲ್ಯಾಕ್ ಮೇಲ್ ಮಾಡಬಾರದು: ಪರಮೇಶ್ವರ್

    ತುಮಕೂರು: ಪಂಚಮಸಾಲಿ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಬ್ಲ್ಯಾಕ್ ಮೇಲ್ ಮಾಡಬಾರದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

    ಒಬಿಸಿ ಪಟ್ಟಿ ಸಿದ್ಧತೆ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಟ್ಟಿರುವುದನ್ನು ಸ್ವಾಗತಿಸಿ ನಗರದಲ್ಲಿ ಮಾತನಾಡಿದ ಅವರು, ಪಂಚಮಸಾಲಿಗಳು ಸೆಪ್ಟೆಂಬರ್ ಒಳಗಡೆ ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಿ ಅನ್ನೋದು ಬ್ಲ್ಯಾಕ್ ಮೇಲ್ ಆಗುತ್ತದೆ. ಹಾಗೇ ಎಲ್ಲರೂ ಬ್ಲ್ಯಾಕ್ ಮೇಲ್ ಮಾಡಲು ಹೋದರೆ ಸಂವಿಧಾನಕ್ಕೆ ಬೆಲೆ ಇರುವುದಿಲ್ಲ. ಕಾನೂನಿಗೂ ಬೆಲೆ ಇರುವುದಿಲ್ಲ. ಅದೇ ರೀತಿ ಜನರ ಒತ್ತಾಯ ತಡೆದುಕೊಳ್ಳುವ ಶಕ್ತಿ ಸರ್ಕಾರಕ್ಕೆ ಇರಬೇಕು ಎಂದರು.

    ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಯ ಕೋಟ್ಯಂತರ ರೂ.ಗಳನ್ನು ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಕೊಡದೆ ಬಾಕಿ ಉಳಿಸಿಕೊಂಡಿದೆ. ಜನರಿಗೆ ಉಪಕಾರ ಮಾಡಲು ಹೋಗಿ ಖಾಸಗಿ ಆಸ್ಪತ್ರೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಕಳೆದ 7-8 ತಿಂಗಳಿಂದ ಆರೋಗ್ಯ ಕಾರ್ಡ್ ಹಣ ಸರ್ಕಾರ ಬಿಡುಗಡೆ ಮಾಡಿಲ್ಲ. ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಸರ್ಕಾರದಿಂದ 4.5 ಕೋಟಿ ರೂ. ಬಾಕಿ ಇದೆ ಎಂದು ವಾಗ್ದಾಳಿ ನಡೆಸಿದರು.

    ಸಿಎಂ ಬೊಮ್ಮಾಯಿ ದೇವೇಗೌಡರ ಮನೆಗೆ ಭೇಟಿ ಕೊಟ್ಟಿರೋದು ಸಹಜ, ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ದೇವೇಗೌಡರು ಹಲವು ಸಂದರ್ಭಗಳಲ್ಲಿ ಬೊಮ್ಮಾಯಿಯವರಿಗೆ ಮಾರ್ಗದರ್ಶನ ಮಾಡುತ್ತಾರೆ. ನಾವು ಉನ್ನತ ಹುದ್ದೆಗೆ ಹೋದಾಗ ಆ ಕ್ಷೇತ್ರದ ಹಿರಿಯರನ್ನು ಭೇಟಿ ಮಾಡೋದು ಒಂದು ಸಂಪ್ರದಾಯ ಎಂದರು.

  • ವೈದ್ಯಕೀಯ ಸೀಟ್‍ನಲ್ಲಿ OBC ಶೇ.27, EWSಗೆ ಶೇ.10 ಮೀಸಲಾತಿ

    ವೈದ್ಯಕೀಯ ಸೀಟ್‍ನಲ್ಲಿ OBC ಶೇ.27, EWSಗೆ ಶೇ.10 ಮೀಸಲಾತಿ

    ನವದೆಹಲಿ: ಒಬಿಸಿ, ಇಡಬ್ಲ್ಯೂಎಸ್ (ಆರ್ಥಿಕ ಹಿಂದುಳಿದ ವರ್ಗ) ವರ್ಗಗಳಿಗೆ ಮೆಡಿಕಲ್ ಮತ್ತು ಡೆಂಟಲ್ ಕಾಲೇಜ್‍ಗಳಲ್ಲೂ ಮೀಸಲಾತಿ ನೀಡೋದಾಗಿ ಕೇಂದ್ರ ಪ್ರಕಟಿಸಿದೆ. ಒಬಿಸಿಗೆ ಶೇ.27, ಇಬಿಸಿಗೆ ಶೇ.10ರಷ್ಟು ಮೀಸಲಾತಿ ಕೋಟಾ ಪ್ರಸ್ತುತ ವರ್ಷದಿಂದಲೇ ಜಾರಿಗೆ ಬರುತ್ತೆ. ಸಾವಿರಾರು ಯುವಜನತೆಗೆ ಅನುಕೂಲತೆಯೊಂದಿಗೆ ಸಾಮಾಜಿಕ ನ್ಯಾಯ ಸಿಗಲಿದೆ ಅಂತ ಮೋದಿ ಟ್ವೀಟ್ ಮಾಡಿದ್ದಾರೆ.

    ಪದವಿ ಪೂರ್ವ ಮತ್ತು ಸ್ನಾತಕೋತ್ತರ ಪದವಿಗಳಾದ ಎಂಬಿಬಿಎಸ್/ಎಂಡಿ/ಎಂಎಸ್/ಡಿಪ್ಲೋಮಾ/ಬಿಡಿಎಸ್/ಎಂಡಿಎಸ್ ಕೋರ್ಸ್ ಗೆ ಇದು ಅನ್ವಯ ಆಗಲಿದೆ. ಇದರಿಂದ 5,550 ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಅನುಕೂಲವಾಗಲಿದೆ ಅಂತ ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವೀಯ ಹೇಳಿದ್ದಾರೆ. ಎಂಬಿಬಿಎಸ್ ನಲ್ಲಿ 1,500 ಮತ್ತು ಸ್ನಾತಕೋತ್ತರ ಪದವಿಯಲ್ಲಿ 2,500 ಒಬಿಸಿ ವಿದ್ಯಾರ್ಥಿಗಳು ಸೀಟು ಪಡೆದುಕೊಳ್ಳಬಹುದಾಗಿದೆ. ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ನಲ್ಲಿ ಸುಮಾರು 550 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಸುಮಾರು 1,000 ಸೀಟುಗಳು ಲಭ್ಯವಾಗಲಿವೆ.

    ಈ ಮಧ್ಯೆ, ರಾಷ್ಟ್ರೀಯ ಶಿಕ್ಷಣ ನೀತಿಗೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ನೀತಿ ನಿರೂಪಕರು, ವಿದ್ಯಾರ್ಥಿಗಳು, ಶಿಕ್ಷಕರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ರು. ನವ ಭಾರತಕ್ಕೆ ಹೊಸ ಶಿಕ್ಷಣ ನೀತಿಯ ಅಗತ್ಯ ಇದೆ ಅಂತ ಹೇಳಿದದರು. ಇದನ್ನೂ ಓದಿ: 75 ವರ್ಷ, 75 ಗ್ರಾಮ, 75 ಗಂಟೆ – ಆಗಸ್ಟ್ 15ಕ್ಕೆ ಸಂಸದರಿಗೆ ಮೋದಿ ಟಾಸ್ಕ್

    ಇದೇ ವೇಳೆ ಶಿಕ್ಷಣ ನೀತಿಯ ಸಾಕ್ಷ್ಯಾಚಿತ್ರ ಬಿಡುಗಡೆ ಮಾಡಲಾಯಿತು. ಹೊಸ ಶಿಕ್ಷಣ ನೀತಿ ಜಾರಿಯಲ್ಲಿ ಇಲ್ಲಿಯವರೆಗೆ ಆಗಿರುವ ಪ್ರಗತಿ, ಮುಂದಿನ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯ್ತು. ಉನ್ನತ ಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ ಬಹು ಹಂತದ ಪ್ರವೇಶ ನಿರ್ಗಮನದ ಆಯ್ಕೆಗಳನ್ನು ಒದಗಿಸುವ ಅಕ್ಯಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್‍ಗೆ ಚಾಲನೆ ನೀಡಿದ್ರು. ಮೊದಲ ವರ್ಷದ ಪ್ರಾದೇಶಿಕ ಭಾಷೆಯ ಎಂಜಿನಿಯರಿಂಗ್ ಕಾರ್ಯಕ್ರಮಗಳು, ಉನ್ನತ ಶಿಕ್ಷಣದಲ್ಲಿ ಅಂತಾರಾಷ್ಟ್ರೀಯ ಕ್ಷೇತ್ರದ ಮಾರ್ಗಸೂಚಿಗಳನ್ನು ಕೂಡ ಪ್ರಕಟಿಸಲಾಯ್ತು. ಇದನ್ನೂ ಓದಿ: ಗಡ್ಡ ಬಿಟ್ಟಾಗ ಶಿವಾಜಿ, ಈಗ ಬಸವಣ್ಣ: ಶಾಸಕ ಯತ್ನಾಳ್