Tag: ODI Cricket

  • ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ಮುಂಬೈ: ನಿವೃತ್ತಿಯ ವದಂತಿ ನಡುವೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ತಮ್ಮ 38ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟ್ಸ್‌ ಮನ್ ಆಗಿ ಹೊರಹೊಮ್ಮಿದ್ದಾರೆ.

    ಇಂದು ಬಿಡುಗಡೆಯಾದ ನೂತನ ಏಕದಿನ ರ‍್ಯಾಂಕಿಗ್‌ ಪಟ್ಟಿಯಲ್ಲಿ (ICC ODI Rankings) ಟೀಂ ಇಂಡಿಯಾ ನಾಯಕ ಶುಭಮನ್‌ ಗಿಲ್‌ರನ್ನ (Shubman Gill) ಹಿಂದಿಕ್ಕಿ ಹಿಂದಿಕ್ಕಿ ವಿಶ್ವದ ನಂ.1 ಬ್ಯಾಟರ್‌ ಆಗಿ ಮಿಂಚಿದ್ದಾರೆ. ಆದ್ರೆ 5ನೇ ಸ್ಥಾನದಲ್ಲಿದ್ದ ಕೊಹ್ಲಿ 6ನೇ ಸ್ಥಾನಕ್ಕೆ ಕುಸಿದಿರೋದು ಅಭಿಮಾನಿಗಳಿಗೆ ಬೇಸರ ತರಿಸಿದೆ. ಇದನ್ನೂ ಓದಿ: ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ (Australia) ವಿರುದ್ಧದ ಏಕೆದಿನ ಸರಣಿಯಲ್ಲಿ ಹಿಟ್‌ ಮ್ಯಾನ್‌ ಗರಿಷ್ಠ ರನ್‌ ಗಳಿಸಿದ್ದರು. ಮೂರು ಪಂದ್ಯಗಳಲ್ಲಿ 1 ಶತಕ, 1 ಅರ್ಧಶತಕ ಸೇರಿ 202ರ ರನ್‌ಗಳಿಸಿ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ರು. ಇದನ್ನೂ ಓದಿ: 12 ವರ್ಷಗಳ ಬಳಿಕ ಆಸೀಸ್‌ ವಿರುದ್ಧ ಅಜೇಯ ಶತಕದ ಜೊತೆಯಾಟ; ಈಗಲೂ ಅದೇ ಜೋಶ್‌

    ಟಾಪ್‌-5ನಲ್ಲಿ ಇಬ್ಬರು ಇಂಡಿಯನ್ಸ್‌
    ನೂತನವಾಗಿ ಬಿಡುಗಡೆಯಾದ ಏಕದಿನ ರ‍್ಯಾಂಕಿಗ್‌ನಲ್ಲಿ 781 ಅಂಕಗಳೊಂದಿಗೆ ಹಿಟ್‌ಮ್ಯಾನ್ ಅಗ್ರಸ್ಥಾನದಲ್ಲಿದ್ದಾರೆ. ಅಫ್ಘಾನ್‌ನ ಇಬ್ರಾಹಿಂ ಜದ್ರಾನ್ 764, ಶುಭಮನ್‌ ಗಿಲ್‌ 745 ಅಂಕ, ಪಾಕ್‌ನ ಬಾಬರ್‌ ಆಜಂ 739 ಅಂಕ, ಕಿವೀಸ್‌ನ ಡೇರಿಲ್‌ ಮಿಚೆಲ್‌ 734 ಅಂಕಗಳೊಂದಿಗೆ ಕ್ರಮವಾಗಿ 2,3,4,5ನೇ ಸ್ಥಾನಗಳಲ್ಲಿದ್ದಾರೆ. ಇದನ್ನೂ ಓದಿ: Shreyas Iyer In ICU | ಪಕ್ಕೆಲುಬು ಗಾಯದಿಂದ ರಕ್ತಸ್ರಾವ – ಐಸಿಯುನಲ್ಲಿ ಶ್ರೇಯಸ್‌ ಅಯ್ಯರ್‌ಗೆ ಚಿಕಿತ್ಸೆ

    Rohit Kohli 4

    6ಕ್ಕೆ ಕುಸಿದ ಕೊಹ್ಲಿ
    ಆಸ್ಟ್ರೇಲಿಯಾ ವಿರುದ್ಧದ 3ನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್‌ಗೆ ಮರಳಿದ್ದರು. ಆಸಿಸ್‌ವಿರುದ್ಧ 237 ಚೇಸಿಂಗ್‌ನಲ್ಲಿ ಅಜೇಯ 74 ರನ್ ಗಳಿಸಿದರು. ಆದ್ರೆ ಮೊದಲ 2 ಪಂದ್ಯಗಳಲ್ಲಿ ಶೂನ್ಯ ಸುತ್ತಿದರು. ಇದರಿಂದ 725 ಅಂಕಗಳಷ್ಟೇ ಪಡೆದುಕೊಂಡು 5 ರಿಂದ 6ನೇ ಸ್ಥಾನಕ್ಕೆ ಕುಸಿದಿದ್ದಾರೆ.

  • 2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    ಭಾರತೀಯ ಕ್ರಿಕೆಟ್ ಲೋಕ ಎಂದೂ ನೆನಪಿಟ್ಟುಕೊಳ್ಳುವ ಸ್ಟಾರ್‌ ಆಟಗಾರ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ (Rohit Sharma). ಇನ್ನೂ ಕೆಲ ವರ್ಷಗಳವರೆಗೆ ಟಾಪ್-10 ಕ್ರಿಕೆಟಿಗರ ಪಟ್ಟಿಯಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುವ ಹೆಸರೆಂದರೇ ಅದು ರೋಹಿತ್ ಶರ್ಮಾ. ಅವರಿಗೆ ತಮ್ಮ ಕ್ರೆಕೆಟ್‌ ಬದುಕಿಗೆ ತೆರೆ ಎಳೆಯುವ ಸನಿಹಕ್ಕೆ ಬಂದಿದ್ದಾರೆ. ಅಲ್ಲದೇ ಕ್ರಿಕೆಟ್‌ ಲೋಕದ ಕಿಂಗ್‌ ಆಗಿ ಮೆರೆದಾಡಿದ ವಿರಾಟ್‌ ಕೊಹ್ಲಿ (Virat kohli) ಕೂಡ ಆಸ್ಟ್ರೇಲಿಯಾ ಏಕದಿನ ಸರಣಿ ಬಳಿಕ ಕ್ರಿಕೆಟ್‌ ವೃತ್ತಿ ಜೀವನಕ್ಕೆ ಗುಡ್‌ಬೈ ಹೇಳುವ ಸಾಧ್ಯತೆಗಳಿವೆ.

    ರೋಹಿತ್ ಶರ್ಮಾ ಅವರು ಈ ಮಟ್ಟಕ್ಕೆ ಬೆಳೆಯಲು ಕಠಿಣಶ್ರಮವೇ ಕಾರಣ. ಯಶಸ್ಸಿಗೆ ಮತ್ತೇನಾದ್ರೂ ಸೂತ್ರ ಇದೆಯಾ ಅಂತ ರೋಹಿತ್ ಅವರನ್ನೊಮ್ಮೆ ಕೇಳಿ ನೋಡಿದ್ರೆ ಅವರು ಕೊಡುವ ಆನ್ಸರ್, `ಹಾರ್ಡ್ ವರ್ಕ್.. ಹಾರ್ಡ್ ವರ್ಕ್.. ಓನ್ಲಿ ಹಾರ್ಡ್ ವರ್ಕ್’. ಬಾಲ್ಯದಿಂದಲೇ ರೋಹಿತ್‌ಗೆ ಕ್ರಿಕೆಟ್ (Cricket) ಅಂದರೆ ಪ್ರಾಣ. ಮುಂಬೈಗೆ ಬಂದ ಮೇಲೆ ಗಲ್ಲಿಗಲ್ಲಿಗಳಲ್ಲಿ ಕ್ರಿಕೆಟ್ ಆಡಿಕೊಂಡಿದ್ದರು. 2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹಿಟ್‌ಮ್ಯಾನ್‌ 2007ರ ಹೊತ್ತಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದುಕೊಂಡರು. 2007ರ ಜೂನ್‌ 23ರಂದು ಐರ್ಲೆಂಡ್‌ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಪದಾರ್ಪಣೆ ಮಾಡಿದರು. ಇದೀಗ ತಮ್ಮ 18 ವರ್ಷಗಳ ಕ್ರಿಕೆಟ್‌ ವೃತ್ತಿ ಜೀವನಕ್ಕೆ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಇದನ್ನೂ ಓದಿ: ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ರೋಹಿತ್‌ ಸಾಧನೆ
    ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 11 ಪಂದ್ಯಗಳ ಪೈಕಿ 10ರಲ್ಲಿ ಭಾರತ ವಿಜಯ ಸಾಧಿಸಿತ್ತು. ಈ ವೇಳೆ ರೋಹಿತ್‌ ಕ್ಯಾಪ್ಟನ್‌ ಆಗಿದ್ದರು. ಅಲ್ಲದೇ 2024ರಲ್ಲಿ ಭಾರತ ತಂಡಕ್ಕೆ ಟಿ20 ವಿಶ್ವಕಪ್‌, 2025ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಗೆದ್ದುಕೊಟ್ಟರು. ಸದ್ಯ ಟಿ20, ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್‌, ವಿರಾಟ್‌ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಯುವ ಆಟಾರ ಶುಭಮನ್‌ ಗಿಲ್ ಅವರಿಗೆ ನಾಯಕನ ಪಟ್ಟ ಕಟ್ಟಲಾಗಿದೆ. ಆದರೆ ರೋಹಿತ್‌ ಶರ್ಮಾ ಅವರಿಂದ ನಾಯಕತ್ವ ಕಸಿದುಕೊಂಡಿರುವ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಅವರ ಅಭಿಮಾನಿಗಳು ಕೆರಳಿದ್ದಾರೆ. ಈ ಮಧ್ಯೆ ಮಾಜಿ ಇಂಗ್ಲೆಂಡ್‌ ಆಟಗಾರ ಡೇವಿಡ್‌ ಗೋವರ್‌ ಅವರು, ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಅವರು 2027ರ ಏಕದಿನ ವಿಶ್ವಕಪ್‌ ಹೊತ್ತಿಗೆ ಭಾರತ ತಂಡದ ಭಾಗವಾಗಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.‌  

    ಡೇವಿಡ್‌ ಗೋವರ್‌ ಹೇಳಿದ್ದೇನು?
    ರೋ-ಕೊ (ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ) ಖ್ಯಾತಿಯ ಇಬ್ಬರು ಅನುಭವಿ ಆಟಗಾರರು 2027ರ ವಿಶ್ವಕಪ್‌ ಆಡುವುದಿಲ್ಲ. ಇದೇ ಕಾರಣಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ ನನ್ನ ಮಾತೃಭೂಮಿ, ಪಾಕಿಸ್ತಾನ ನನ್ನ ಜನ್ಮಭೂಮಿ – ಪಾಕ್‌ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

    ಅಜಿತ್‌ ಅಗರ್ಕರ್‌ ಸಮರ್ಥನೆ
    ಇನ್ನೂ ಏಕದಿನ ಕ್ರಿಕೆಟ್‌ ಕ್ಯಾಪ್ಟನ್‌ ಆಗಿ ಶುಭಮನ್‌ ಗಿಲ್‌ ಅಯ್ಕೆಯನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಸಮರ್ಥಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ 2027ರ ವಿಶ್ವಕಪ್ ಆಡುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಆಸೀಸ್‌ ಸರಣಿ ಬಳಿಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಅವರ ಒಂದು ಯುಗ ಅಂತ್ಯವಾಗಲಿದೆ ಎನ್ನೋದು ಕೋಟ್ಯಂತರ ಅಭಿಮಾನಿಗಳ ಬೇಸರ. ಇದನ್ನೂ ಓದಿ: ವಿಂಡೀಸ್‌ ವಿರುದ್ಧ ಇನ್ನಿಂಗ್ಸ್ & 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ

  • ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ಮುಂಬೈ: ಇದೇ ಅಕ್ಟೋಬರ್‌ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾದ ಬಲಿಷ್ಠ ತಂಡವನ್ನ ಪ್ರಕಟಿಸಿದೆ.

    ಟಿ20 ಸರಣಿಗೆ ನಿರೀಕ್ಷೆಯಂತೆ ಸೂರ್ಯಕುಮಾರ್‌ ಯಾದವ್‌ ನಾಯಕನಾಗಿದ್ದಾರೆ. ಆದ್ರೆ ರೋಹಿತ್‌, ಕೊಹ್ಲಿ ತಂಡದಲ್ಲಿದ್ದರೂ ಏಕದಿನ ಕ್ರಿಕೆಟ್‌ಗೆ ನೂತನ ನಾಯಕನಾಗಿ ಶುಭಮನ್‌ ಗಿಲ್‌ ಅವರನ್ನ ಆಯ್ಕೆ ಮಾಡಿದೆ. ಹೀಗಾಗಿ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರ ನಿವೃತ್ತಿಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

    ಸರಣಿ ಬಳಿಕ ನಿವೃತ್ತಿ ಹೇಳ್ತಾರಾ ರೊ-ಕೊ?
    ಈಗಾಗಲೇ ಟೆಸ್ಟ್‌‌ ಹಾಗೂ ಟಿ20 ಕ್ರಿಕೆಟ್‌ಗೆ (T20 Cricket) ನಿವೃತ್ತಿ ಘೋಷಿಸಿರುವ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದೀಗ ಏಕದಿನ ಕ್ರಿಕೆಟ್‌ ವೃತ್ತಿ ಜೀವನಕ್ಕೂ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಮೂಲಗಳ ಹೇಳುವಂತೆ, 2027ರ ಏಕದಿನ ವಿಶ್ವಕಪ್‌ ತಂಡದಲ್ಲಿ ಈ ಜೋಡಿ ಸ್ಥಾನ ಪಡೆಯುವುದು ಖಚಿತವಿಲ್ಲ. ಏಕೆಂದ್ರೆ ಈಗಾಗಲೇ ಇಬ್ಬರೂ ದಿಗ್ಗಜರು ಟೆಸ್ಟ್‌ ಹಾಗೂ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಕಾರಣ ಮುಂಬರುವ ವರ್ಷಗಳಲ್ಲಿ ಪಂದ್ಯದ ಸಮಯವೂ ಸೀಮಿತವಾಗಿರಲಿದೆ. ಹೀಗಾಗಿ ಭಾರತೀಯ ಕ್ರಿಕೆಟ್‌ (Indian Cricket) ನಿಯಂತ್ರಣ ಮಂಡಳಿ ಕೂಡ ಇವರಿಬ್ಬರ ಆಯ್ಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಈ ಅಕ್ಟೋಬರ್‌ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಅತ್ಯಂತ ನಿರ್ಣಾಯಕವಾಗಿದೆ.

    ರೋಹಿತ್‌ ಮತ್ತು ಕೊಹ್ಲಿ 2027ರ ಏಕದಿನ ವಿಶ್ವಕಪ್‌ (World Cup 2027) ರೇಸ್‌ನಲ್ಲಿ ಉಳಿಯಬೇಕಾದ್ರೆ ಈ ವರ್ಷ ಡಿಸೆಂಬರ್‌ನಲ್ಲಿ ಶುರುವಾಗಲಿರುವ ದೇಸಿ ಕ್ರಿಕೆಟ್‌ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಬೇಕಾಗುತ್ತೆ. ಇಲ್ಲದಿದ್ದರೆ, ಬಹುತೇಕ ಏಕದಿನ ಕ್ರಿಕೆಟ್‌ನಿಂದಲೂ ಔಟ್‌ ಆಗಲಿದ್ದಾರೆ. ಇದಕ್ಕೆ ವಯಸ್ಸಿನ ಮಿತಿಯೂ ಒಂದು ಕಾರಣವಾಗಿರಲಿದೆ.

    ಅಯ್ಯರ್‌ ಕಂಬ್ಯಾಕ್‌
    ಇನ್ನೂ ಏಷ್ಯಾಕಪ್‌ ಟೂರ್ನಿಯಿಂದ ಕಡೆಗಣಿಸಲ್ಪಟ್ಟಿದ್ದ ಶ್ರೇಯಸ್‌ ಅಯ್ಯರ್‌ಗೆ ಮುಂಬರುವ ಟೂರ್ನಿಗಳನ್ನ ಗಮನದಲ್ಲಿಟ್ಟಿಕೊಂಡು ಉಪನಾಯಕನ ಸ್ಥಾನ ನೀಡಲಾಗಿದೆ. ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಬಳಿಕ ಏಕದಿನ ಕ್ರಿಕೆಟ್‌ಗೆ ಕನ್ನಡಿಗ ಕೆ.ಎಲ್‌ ರಾಹುಲ್‌ ಕೂಡ ಕಂಬ್ಯಾಕ್‌ ಮಾಡಿದ್ದಾರೆ. ಇದರೊಂದಿಗೆ ಇದೇ ಮೊದಲಬಾರಿಗೆ ಏಕದಿನ ಕ್ರಿಕೆಟ್‌ಗೆ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಪದಾರ್ಪಣೆ ಮಾಡಲಿದ್ದಾರೆ. ಆದ್ರೆ ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್ಪ್ರೀತ್‌ ಬುಮ್ರಾ ಅವರನ್ನು ಏಕದಿನ ತಂಡದಿಂದ ಕೈಬಿಟ್ಟು, ಟಿ20 ತಂಡಕ್ಕೆ ಮಾತ್ರ ಆಯ್ಕೆ ಮಾಡಿರೋದು ಅಚ್ಚರಿ ಮೂಡಿಸಿದೆ. ಅಲ್ಲದೇ ಧ್ರುವ್‌ ಜುರೆಲ್‌, ನಿತೀಶ್‌ ಕುಮಾರ್‌ ರೆಡ್ಡಿ ಹೊಸ ಮುಖಗಳಿಗೆ ಬಿಸಿಸಿಐ ಮಣೆ ಹಾಕಿದೆ.

    ಭಾರತ ಏಕದಿನ ತಂಡ
    ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್‌ ಪಟೇಲ್, ಕೆ.ಎಲ್ ರಾಹುಲ್ (ವಿಕೆಟ್‌ ಕೀಪರ್‌), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್‌ ಕೃಷ್ಣ, ಧ್ರುವ್‌ ಜುರೆಲ್ (ವಿಕೆಟ್‌ ಕೀಪರ್‌), ಯಶಸ್ವಿ ಜೈಸ್ವಾಲ್‌.

    ಭಾರತ ಟಿ20 ತಂಡ
    ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ವರುಣ್ ಚಕ್ರವರ್ತಿ, ಜಸ್ಪ್ರೀತ್‌ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್‌ಸನ್ (ವಿಕೆಟ್‌ ಕೀಪರ್‌), ವಾಷಿಂಗ್ಟನ್‌ ಸುಂದರ್‌.

    ಅ.19ರಿಂದ ನವೆಂಬರ್‌ 8ರ ವರೆಗೆ ಮೂರು ಏಕದಿನ ಪಂದ್ಯಗಳು ಹಾಗೂ 5 ಟಿ20 ಪಂದ್ಯಗಳ ಸರಣಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಇದಕ್ಕಾಗಿ ಭಾರತ ತಂಡ ಶೀಘ್ರವೇ ಆಸ್ಟ್ರೇಲಿಯಾಕ್ಕೆ ಪ್ರವಾಸ ತೆರಳಲಿದ್ದು, ಅಭ್ಯಾಸ ಆರಂಭಿಸಲಿದೆ.

    ಗಿಲ್‌ ಮೇಲೆ ಹೆಚ್ಚಿದ ಭರವಸೆ
    ಕೆಲ ದಿನಗಳ ಹಿಂದೆ ಇಂಗ್ಲೆಂಡ್‌ನಲ್ಲಿ ನಡೆದ ʻಆಂಡರ್ಸನ್‌-ತೆಂಡೂಲ್ಕರ್‌ʼ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾದ ಯುವ ನಾಯಕನಾಗಿದ್ದ ಗಿಲ್‌ ಅವರ ಯಶಸ್ಸು ಆಯ್ಕೆ ಸಮಿತಿಗೆ ನಂಬಿಕೆ ತಂದುಕೊಟ್ಟಿದೆ. ಹೀಗಾಗಿ 2027ರ ವಿಶ್ವಕಪ್‌ಗೆ ಹೊಸ ಪ್ರತಿಭೆಗಳೊಂದಿಗೆ ಮುನ್ನಡೆಯಲು ಬಿಸಿಸಿಐ ನಿರ್ಧರಿಸಿದ್ದು, ಶುಭಮನ್‌ ಗಿಲ್‌ ಅವರನ್ನೇ ಟೀಂ ಇಂಡಿಯಾದ ದೀರ್ಘಾವಧಿ ನಾಯಕನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿದೆ. ಆದ್ದರಿಂದ ರೋಹಿತ್‌, ಕೊಹ್ಲಿ ಅಂತಹ ದಿಗ್ಗಜರು ಇರುವಾಗಲೇ ಗಿಲ್‌ಗೆ ನಾಯಕನ ಹೊಣೆ ನೀಡಲಾಗಿದೆ.

  • ಈ ವರ್ಷವೇ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳ್ತಾರಾ ರೋ-ಕೊ?

    ಈ ವರ್ಷವೇ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳ್ತಾರಾ ರೋ-ಕೊ?

    – ಅಕ್ಟೋಬರ್‌ನ ಆಸೀಸ್‌ ಸರಣಿ ಈ ಜೋಡಿಗೆ ನಿರ್ಣಾಯಕ

    ಮುಂಬೈ: ಭಾರತೀಯ ಕ್ರಿಕೆಟ್‌ನ ಐಕಾನ್‌ಗಳಾದ ರೋಹಿತ್‌ ಶರ್ಮಾ (Rohit Sharma) ಹಾಗೂ ವಿರಾಟ್‌ ಕೊಹ್ಲಿ (Virat Kohli) ಏಕದಿನ ಕ್ರಿಕೆಟ್‌ಗೆ ಈ ವರ್ಷದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಗಳಿವೆ ಎಂಬ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಹೌದು. ಟೆಸ್ಟ್‌‌ ಹಾಗೂ ಟಿ20 ಕ್ರಿಕೆಟ್‌ಗೆ (T20 Cricket) ಈಗಾಗಲೇ ನಿವೃತ್ತಿ ಘೋಷಿಸಿರುವ ರೋಹಿತ್‌, ವಿರಾಟ್‌ ಇದೀಗ ಏಕದಿನ ಕ್ರಿಕೆಟ್‌ ವೃತ್ತಿ ಜೀವನಕ್ಕೂ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಮೂಲಗಳ ಪ್ರಕಾರ, 2027ರ ಏಕದಿನ ವಿಶ್ವಕಪ್‌ ತಂಡದಲ್ಲಿ ಈ ಜೋಡಿ ಸ್ಥಾನ ಪಡೆಯುವುದು ಖಚಿತವಿಲ್ಲ. ಈಗಾಗಲೇ ಇಬ್ಬರೂ ದಿಗ್ಗಜರು ಟೆಸ್ಟ್‌ ಹಾಗೂ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಕಾರಣ ಮುಂಬರುವ ವರ್ಷಗಳಲ್ಲಿ ಪಂದ್ಯದ ಸಮಯವೂ ಸೀಮಿತವಾಗಿರಲಿದೆ. ಹೀಗಾಗಿ ಭಾರತೀಯ ಕ್ರಿಕೆಟ್‌ (Indian Cricket) ನಿಯಂತ್ರಣ ಮಂಡಳಿ ಕೂಡ ಇವರಿಬ್ಬರ ಆಯ್ಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಇದಕ್ಕೆ ಮುಂದಿನ ಅಕ್ಟೋಬರ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಅತ್ಯಂತ ನಿರ್ಣಾಯಕವಾಗಿದೆ. ಇದನ್ನೂ ಓದಿ: 1 ತಿಂಗಳ ಬಳಿಕ ಬಿಳಿ ಗಡ್ಡದಲ್ಲಿ ಕೊಹ್ಲಿ ಪ್ರತ್ಯಕ್ಷ – ಏಕದಿನ ನಿವೃತ್ತಿ ಲೋಡಿಂಗ್ ಅಂತ ಪರ-ವಿರೋಧ ಚರ್ಚೆ

    ರೋಹಿತ್‌ ಮತ್ತು ಕೊಹ್ಲಿ 2027ರ ಏಕದಿನ ವಿಶ್ವಕಪ್‌ (World Cup 2027) ರೇಸ್‌ನಲ್ಲಿ ಉಳಿಯಬೇಕಾದ್ರೆ ಈ ವರ್ಷ ಡಿಸೆಂಬರ್‌ನಲ್ಲಿ ಶುರುವಾಗಲಿರುವ ದೇಸಿ ಕ್ರಿಕೆಟ್‌ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಬೇಕಾಗುತ್ತೆ. ಇಲ್ಲದಿದ್ದರೆ, ಬಹುತೇಕ ಏಕದಿನ ಕ್ರಿಕೆಟ್‌ನಿಂದಲೂ ಔಟ್‌ ಆಗಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: CSKಗೆ ಗುಡ್‌ಬೈ ಹೇಳಲು ಅಶ್ವಿನ್ ನಿರ್ಧಾರ – ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲು ಸಂಜು ಕಾತರ?

    ಶೀಘ್ರದಲ್ಲೇ ನಿವೃತ್ತಿ ಸಾಧ್ಯತೆ
    ಭಾರತದ ಮುಂದಿನ ಏಕದಿನ ಸರಣಿ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಈ ಸರಣಿ ಐಕಾನಿಕ್‌ ಜೋಡಿಗೆ ಅತ್ಯಂತ ನಿರ್ಣಾಯಕವಾಗಿದೆ. ಒಂದು ವೇಳೆ ಈ ಸರಣಿಯಲ್ಲಿ ರೋಹಿತ್‌ ಕೊಗ್ಲಿ ಆಡಿದ್ರೆ, ಮುಂದಿನ ಭವಿಷ್ಯದ ಬಗ್ಗೆ ನಿರ್ಧಾರವಾಗಲಿದೆ. ಆಯ್ಕೆ ಸಮಿತಿ ಈ ಸರಣಿಯಿಂದ ಕೈಬಿಟ್ಟರೆ, ಏಕದಿನ ಕ್ರಿಕೆಟ್‌ ವೃತ್ತಿ ಜೀವನಕ್ಕೂ ಈ ಜೋಡಿ ತೆರೆ ಎಳೆಯಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: CSKಗೆ ಗುಡ್‌ಬೈ ಹೇಳಲು ಅಶ್ವಿನ್ ನಿರ್ಧಾರ – ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲು ಸಂಜು ಕಾತರ?

    ಗಿಲ್‌ ಮೇಲೆ ಹೆಚ್ಚಿದ ಭರವಸೆ
    ಇತ್ತೀಚೆಗೆ ಇಂಗ್ಲೆಂಡ್‌ನಲ್ಲಿ ನಡೆದ ʻಆಂಡರ್ಸನ್‌-ತೆಂಡೂಲ್ಕರ್‌ʼ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾದ ಯುವ ನಾಯಕ ಗಿಲ್‌ ಅವರ ಯಶಸ್ಸು ಆಯ್ಕೆ ಸಮಿತಿಗೆ ನಂಬಿಕೆ ತಂದುಕೊಟ್ಟಿದೆ. ಹೀಗಾಗಿ 2027ರ ವಿಶ್ವಕಪ್‌ಗೆ ಹೊಸ ಪ್ರತಿಭೆಗಳೊಂದಿಗೆ ಮುನ್ನಡೆಯಲು ಬಿಸಿಸಿಐ ನಿರ್ಧರಿಸಿದ್ದು, ಶುಭಮನ್‌ ಗಿಲ್‌ ಅವರನ್ನೇ ಟೀಂ ಇಂಡಿಯಾದ ದೀರ್ಘಾವಧಿ ನಾಯಕನ್ನಾಗಿ ಆಯ್ಕೆ ಮಾಡಲು ಆಯ್ಕೆ ಸಮಿತಿ ಎದುರುನೋಡುತ್ತಿದೆ ಎಂದು ವರದಿಗಳು ತಿಳಿಸಿವೆ.

  • ಚಾಂಪಿಯನ್ಸ್‌ ಟ್ರೋಫಿ ಹೊತ್ತಲ್ಲೇ ಆಸೀಸ್‌ಗೆ ದೊಡ್ಡ ಆಘಾತ – ಏಕದಿನ ಕ್ರಿಕೆಟ್‌ಗೆ ಸ್ಟೋಯ್ನಿಸ್‌ ಗುಡ್‌ಬೈ

    ಚಾಂಪಿಯನ್ಸ್‌ ಟ್ರೋಫಿ ಹೊತ್ತಲ್ಲೇ ಆಸೀಸ್‌ಗೆ ದೊಡ್ಡ ಆಘಾತ – ಏಕದಿನ ಕ್ರಿಕೆಟ್‌ಗೆ ಸ್ಟೋಯ್ನಿಸ್‌ ಗುಡ್‌ಬೈ

    ಕ್ಯಾನ್ಬೆರಾ: 2025ರ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗೆ 13 ದಿನಗಳು ಬಾಕಿಯಿರುವಾಗಲೇ ಆಸೀಸ್‌ಗೆ ದೊಡ್ಡ ಆಘಾತ ಎದುರಾಗಿದೆ. ಆಸೀಸ್‌ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins), ವೇಗಿ ಜೋಶ್‌ ಹ್ಯಾಜಲ್‌ವುಡ್‌ ಈಗಾಗಲೇ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಮಿಚೆಲ್‌ ಮಾರ್ಷ್‌ ಸಹ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಈ ನಡುವೆ ಸ್ಟಾರ್‌ ಆಲ್‌ರೌಂಡರ್‌ ಮಾರ್ಕಸ್‌ ಸ್ಟೋಯ್ನಿಸ್‌ (Marcus Stoinis) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

    ಫೆ.19ರಿಂದ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗುತ್ತಿದ್ದು, ಸ್ಟಾರ್‌ ಆಲ್‌ರೌಂಡರ್‌ ಆಗಿ ಗುರುತಿಸಿಕೊಂಡಿದ್ದ ಸ್ಟೋಯ್ನಿಸ್‌ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಹೊಂದಿದ್ದರು. ಆದ್ರೆ ಏಕಾಏಕಿ ನಿವೃತ್ತಿ ಘೋಷಿಸಿರುವುದು ಕ್ರಿಕೆಟ್‌ ಲೋಕದಲ್ಲಿ ಚರ್ಚೆ ಹುಟ್ಟುಹಾಕಿದೆ. ಗಾಯದ ಸಮಸ್ಯೆಯಿಂದ ಹೊರಗುಳಿದಿರುವವರ ಪೈಕಿ ಹ್ಯಾಜಲ್‌ವುಡ್‌ ಸ್ವಲ್ಪ ಚೇತರಿಕೆ ಕಂಡಿದ್ದಾರೆ. ಆದ್ರೆ ಪ್ಯಾಟ್‌ ಕಮ್ಮಿನ್ಸ್‌ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆ ಅವರನ್ನು ತಂಡದಿಂದ ಕೈಬಿಡಲಾಗಿದೆ. ಹೀಗಿರುವಾಗಲೇ ಸ್ಟೋಯ್ನಿಸ್‌ ಶಾಕ್‌ ಕೊಟ್ಟಿದ್ದಾರೆ.

    ಏಕದಿನ ಕ್ರಿಕೆಟ್‌ನಲ್ಲಿ ಸ್ಟೋಯ್ನಿಸ್‌ ಸಾಧನೆ:
    2015ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಸ್ಟೋಯ್ನಿಸ್‌, ಈವರೆಗೂ 74 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ಅವಧಿಯಲ್ಲಿ 93.96 ಸ್ಟ್ರೈಕ್ ರೇಟ್‌ನಲ್ಲಿ 1,495 ರನ್ ಗಳಿಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್​ನಲ್ಲಿ ನ್ಯೂಜಿಲೆಂಡ್ ವಿರುದ್ಧದ ನಡೆದಿದ್ದ ಪಂದ್ಯದಲ್ಲಿ ಅಜೇಯ 146 ರನ್​ ಗಳಿಸಿದ್ದು ಏಕದಿನ ಸ್ವರೂಪದಲ್ಲಿ ಅತ್ಯಧಿಕ ಸ್ಕೋರ್​ ಆಗಿತ್ತು.

    ಜೊತೆಗೆ 74 ಪಂದ್ಯಗಳಲ್ಲಿ 43.12 ಸರಾಸರಿಯಲ್ಲಿ 48 ವಿಕೆಟ್‌ಗಳನ್ನು ಪಡೆದಿದ್ದಾರೆ. 2024ರ ನವೆಂಬರ್‌ 10ರಂದು ಪರ್ತ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ಕೊನೆಯ ಏಕದಿನ ಪಂದ್ಯವನ್ನಾಡಿದ್ದರು. 2019ರಲ್ಲಿ ಕ್ರಿಕೆಟ್​ ಆಸ್ಟ್ರೇಲಿಯಾ ನೀಡುವ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.

  • ಭಾರತ-ಲಂಕಾ ದ್ವಿಪಕ್ಷೀಯ ಸರಣಿ ವೇಳಾಪಟ್ಟಿ ಪ್ರಕಟ – ಕೋಚ್‌ ಆಗಿ ʻಗಂಭೀರ್‌ ಹೊಸ ಅಧ್ಯಾಯʼ ಶುರು!

    ಭಾರತ-ಲಂಕಾ ದ್ವಿಪಕ್ಷೀಯ ಸರಣಿ ವೇಳಾಪಟ್ಟಿ ಪ್ರಕಟ – ಕೋಚ್‌ ಆಗಿ ʻಗಂಭೀರ್‌ ಹೊಸ ಅಧ್ಯಾಯʼ ಶುರು!

    – ಯಾರಾಗ್ತಾರೆ ಭಾರತ ಟಿ20 ತಂಡದ ನಾಯಕ?

    ಕೊಲಂಬೊ: ಭಾರತ ಕ್ರಿಕೆಟ್‌ ತಂಡವು ಶ್ರೀಲಂಕಾ ಪ್ರವಾಸದ (India Tour Sri Lanka) ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ಇತ್ತೀಚೆಗೆ ನೂತನ ಮುಖ್ಯಕೋಚ್‌ ನೇಮಕಗೊಂಡ ಗೌತಮ್‌ ಗಂಭೀರ್‌ (Gautam Gambhir) ಅವರ ನೇತೃತ್ವದಲ್ಲಿ ಭಾರತ ಮೊದಲ ದ್ವಿಪಕ್ಷೀಯ ಸರಣಿಯನ್ನಾಡಲಿದೆ. ಈ ಸರಣಿಯೊಂದಿಗೆ ಗಂಭೀರ್‌ ತಮ್ಮ ಮುಖ್ಯಕೋಚ್‌ ಕೋಚ್‌ ಅಭಿಯಾನವನ್ನು ಶುರುಮಾಡಲಿದ್ದಾರೆ.

    ಪಂದ್ಯ ಎಲ್ಲಿ ಯಾವಾಗ?
    ಇದೇ ಜುಲೈ 26ರಿಂದ ಆಗಸ್ಟ್‌ 7ರ ವರೆಗೆ ಭಾರತ, ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಉಭಯ ತಂಡಗಳು ಮೂರು ಟಿ20 ಪಂದ್ಯಗಳು ಹಾಗೂ 3 ಏಕದಿನ ಪಂದ್ಯಗಳನ್ನಾಡಲಿವೆ. ಟಿ20 ಪಂದ್ಯಗಳು ಶ್ರೀಲಂಕಾದ ಪಲ್ಲೆಕೆಲೆ ಹಾಗೂ ಏಕದಿನ ಪಂದ್ಯಗಳು ರಾಜಧಾನಿ ಕೊಲಂಬೊ ಮೈದಾನದಲ್ಲಿ ನಡೆಯಲಿವೆ. ಟಿ20 ಪಂದ್ಯಗಳು ಸಂಜೆ 7 ಗಂಟೆಗೆ ಶುರುವಾದರೆ, ಏಕದಿನ ಪಂದ್ಯಗಳು ಮಧ್ಯಾಹ್ನ 2:30ರಿಂದ ಆರಂಭವಾಗಲಿದೆ.

    ಯಾವ ದಿನ ಪಂದ್ಯ?
    ಟಿ20 ಪಂದ್ಯಗಳು:
    ಮೊದಲ ಪಂದ್ಯ – ಜುಲೈ 26
    2ನೇ ಪಂದ್ಯ – ಜುಲೈ 27
    3ನೇ ಪಂದ್ಯ – ಜುಲೈ 29
    ಸ್ಥಳ: ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಪಲ್ಲೆಕೆಲೆ

    ಏಕದಿನ ಪಂದ್ಯಗಳು
    ಮೊದಲ ಪಂದ್ಯ – ಆಗಸ್ಟ್‌ 1
    2ನೇ ಪಂದ್ಯ – ಆಗಸ್ಟ್‌ 4
    3ನೇ ಪಂದ್ಯ – ಆಗಸ್ಟ್‌ 7
    ಸ್ಥಳ: ಆರ್. ಪ್ರೇಮದಾಸ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕೊಲಂಬೊ

    ಯಾರಾಗ್ತಾರೆ ಟಿ20 ತಂಡ ನಾಯಕ?
    2024ರ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ಟಿ20 ಕ್ರಿಕೆಟ್‌ಗೆ ದಿಗ್ಗಜ ಕ್ರಿಕೆಟಿಗರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಗುಡ್‌ಬೈ ಹೇಳಿದ್ದಾರೆ. ಹಾಗಾಗಿ ಮುಂದೆ ಟಿ20 ತಂಡಕ್ಕೆ ನಾಯಕ ಯಾರಾಗ್ತಾರೆ ಅನ್ನೋ ಬಗ್ಗೆ ಸಾಕಷ್ಟು ಕುತೂಹಲ ಕೆರಳಿಸಿದೆ. ಕೆಲವರು ಹಾರ್ದಿಕ್‌ ನಾಯಕನಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಏಕೆಂದರೆ 2023ರ ವರ್ಷಾರಂಭದಲ್ಲಿ ಪಾಂಡ್ಯ ನಾಯಕತ್ವದಲ್ಲೇ ಟೀಂ ಇಂಡಿಯಾ ನ್ಯೂಜಿಲೆಂಡ್‌ ಹಾಗೂ ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದಿತ್ತು. ಹಾಗಾಗಿ ಟಿ20 ತಂಡದ ನಾಯಕನಾಗಿ ಪಾಂಡ್ಯ ಅವರೇ ಮುಂದುವರಿಯುವ ಸಾಧ್ಯತೆ ಎದ್ದು ಕಾಣುತ್ತಿದೆ ಎಂದು ಹಿರಿಯ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

  • ಪಾಥುಮ್ ನಿಸ್ಸಾಂಕಾ ದ್ವಿಶತಕದ ಅಬ್ಬರ – 24 ವರ್ಷಗಳಿಂದ ಜಯಸೂರ್ಯ ಹೆಸರಲ್ಲಿದ್ದ ದಾಖಲೆ ನುಚ್ಚುನೂರು!

    ಪಾಥುಮ್ ನಿಸ್ಸಾಂಕಾ ದ್ವಿಶತಕದ ಅಬ್ಬರ – 24 ವರ್ಷಗಳಿಂದ ಜಯಸೂರ್ಯ ಹೆಸರಲ್ಲಿದ್ದ ದಾಖಲೆ ನುಚ್ಚುನೂರು!

    – ವಿಶ್ವದ ಟಾಪ್‌ -10 ದಿಗ್ಗಜರ ಪಟ್ಟಿಗೆ ನಿಸ್ಸಾಂಕ ಲಗ್ಗೆ
    – ದ್ವಿಶತಕ ಸಿಡಿಸಿದ ಶ್ರೀಲಂಕಾದ ಮೊದಲ ಬ್ಯಾಟರ್‌

    ಕೊಲಂಬೊ: ಶ್ರೀಲಂಕಾ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಪಾಥುಮ್‌ ನಿಸ್ಸಾಂಕಾ (Pathum Nissanka) ಏಕದಿನ ಕ್ರಿಕೆಟ್‌ನಲ್ಲಿ ಭರ್ಜರಿ ದ್ವಿಶತಕ (ODI Double Century) ಸಿಡಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

    ಶ್ರೀಲಂಕಾದ ಕ್ರಿಕೆಟ್‌ ಇತಿಹಾಸದಲ್ಲೇ ದ್ವಿಶತಕ ಸಿಡಿಸಿದ ಮೊದಲ ಬ್ಯಾಟರ್‌ ಎನಿಸಿಕೊಳ್ಳುವ ಜೊತೆಗೆ 24 ವರ್ಷಗಳಿಂದ‌ ಮಾಜಿ ಕ್ರಿಕೆಟಿಗ ಸನತ್‌ ಜಯಸೂರ್ಯ ಹೆಸರಿನಲ್ಲಿದ್ದ ಹಳೆಯ ದಾಖಲೆಯನ್ನ ನುಚ್ಚುನೂರು ಮಾಡಿದ್ದಾರೆ. ಜೊತೆಗೆ ದ್ವಿಶತಕ ಸಿಡಿಸಿದ ವಿಶ್ವದ ಟಾಪ್‌-10 ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. 2000ನೇ ಇಸವಿಯಲ್ಲಿ ಸನತ್‌ ಜಯಸೂರ್ಯ (Sanath Jayasuriya) ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ 189 ರನ್‌ ಗಳಿಸಿದ್ದರು. ಇದು ಶ್ರೀಲಂಕಾ ಬ್ಯಾಟರ್‌ಗಳ ಪೈಕಿ ಏಕದಿನ ಕ್ರಿಕೆಟ್‌ನಲ್ಲಿ ಆಟಗಾರರೊಬ್ಬರು ಗಳಿಸಿದ್ದ ಗರಿಷ್ಠ ಸ್ಕೋರ್‌ ಆಗಿತ್ತು. ಇದನ್ನೂ ಓದಿ: ಭಾರತದ ವಿರುದ್ಧ T20I ಸಮರಕ್ಕಿಳಿದ ಜಿಂಬಾಬ್ವೆ – ಜುಲೈ 6 ರಿಂದ 5 ಪಂದ್ಯಗಳ ಸರಣಿ

    ದ್ವಿಶತಕ ಸಿಡಿಸಿದ ಲಂಕಾದ ಮೊದಲ ಬ್ಯಾಟರ್‌:
    ಅಫ್ಘಾನಿಸ್ತಾನದ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲೇ ಶ್ರೀಲಂಕಾ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಕೇವಲ 3 ವಿಕೆಟ್‌ ನಷ್ಟಕ್ಕೆ 50 ಓವರ್‌ಗಳಲ್ಲಿ 381 ರನ್‌ ಗಳಿಸಿತು. ಪಲ್ಲೆಕೆಲೆಯಲ್ಲಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಲಂಕಾ ಪರ ಆರಂಭಿಕ ಆಟಗಾರ ಪಾಥುಮ್‌ ನಿಸ್ಸಾಂಕ ಅಜೇಯ ದ್ವಿಶತಕ ಸಿಡಿಸುವ ಮೂಲಕ ದಿಗ್ಗಜರ ಎಲೈಟ್‌ ಪಟ್ಟಿ ಸೇರಿಕೊಂಡರು. 136 ಎಸೆತಗಳಲ್ಲಿ 200 ರನ್‌ (19 ಬೌಂಡರಿ, 7 ಸಿಕ್ಸರ್‌) ಬಾರಿಸಿದ ನಿಸ್ಸಾಂಕ, ಒಟ್ಟಾರೆ ಎದುರಿಸಿದ 139 ಎಸೆತಗಳಲ್ಲಿ ಅಜೇಯ 210 ರನ್‌ ಬಾರಿಸಿ ವಿಶೇಷ ಸಾಧನೆ ಮಾಡಿದರು. ಇದರಲ್ಲಿ 20 ಬೌಂಡರಿಗಳು ಹಾಗೂ 8 ಸಿಕ್ಸರ್‌ಗಳೂ ಸೇರಿವೆ. ಇದನ್ನೂ ಓದಿ: U19 World Cup: ಮತ್ತೆ ವಿಶ್ವಕಪ್‌ನಲ್ಲಿ ಭಾರತಕ್ಕೆ ಆಸೀಸ್‌ ಎದುರಾಳಿ – ಫೆ.11ರಂದು ಫೈನಲ್‌

    ದಿಗ್ಗಜರ ಎಲೈಟ್‌ ಪಟ್ಟಿಗೆ ನಿಸ್ಸಾಂಕ ಲಗ್ಗೆ:
    ಇದುವರೆಗೆ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಆಟಗಾರರ ಪೈಕಿ ಟೀಂ ಇಂಡಿಯಾ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 264 ರನ್‌ ಗಳಿಸಿರುವ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) ಈವರೆಗೂ ಅಗ್ರಸ್ಥಾನದಲ್ಲಿದ್ದಾರೆ. ಇದರೊಂದಿಗೆ ಮಾರ್ಟಿನ್‌ ಗಪ್ಟಿಲ್‌ (237 ರನ್‌), ವೀರೇಂದ್ರ ಸೆಹ್ವಾಗ್‌ (219 ರನ್‌), ಕ್ರಿಸ್‌ಗೇಲ್‌ (215 ರನ್‌), ಫಖರ್‌ ಝಮಾನ್‌ (210 ರನ್‌) ಮೊದಲ ಐದು ಸ್ಥಾನಗಳಲ್ಲಿದ್ದರೆ, ಪಾಥುಮ್‌ ನಿಸ್ಸಾಂಕ ಅಜೇಯ 210 ರನ್‌ ಗಳಿಸುವ ಮೂಲಕ 6ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ನಂತರದಲ್ಲಿ ಇಶಾನ್‌ ಕಿಶನ್‌ (210 ರನ್‌), ರೋಹಿತ್‌ ಶರ್ಮಾ (209, ಮತ್ತೊಮ್ಮೆ 208 ರನ್‌), ಶುಭಮನ್‌ ಗಿಲ್‌ (208 ರನ್‌), ಗ್ಲೇನ್‌ ಮ್ಯಾಕ್ಸ್‌ವೆಲ್‌ (201 ರನ್‌), ಸಚಿನ್‌ ತೆಂಡೂಲ್ಕರ್‌ (200 ರನ್‌) ರನ್‌ ಗಳಿಸಿದ ಸಾಧಕರ ಪಟ್ಟಿಯಲ್ಲಿದ್ದಾರೆ. ಇದನ್ನೂ ಓದಿ: ರೋಹಿತ್‌ ಪತ್ನಿ ರಿತಿಕಾ ಅಸಮಾಧಾನ ಬೆನ್ನಲ್ಲೇ ಪಾಂಡ್ಯನಿಗೆ ಬಿಗ್‌ ವಾರ್ನಿಂಗ್‌!

  • ಇಂದಿನಿಂದ ಹರಿಣರ ವಿರುದ್ಧ ಏಕದಿನ ಸರಣಿ – ಹೊಸ ತಾರೆಗಳ ಉಗಮಕ್ಕೆ ರೈಟ್‌ ಟೈಂ, ರಾಹುಲ್‌ ನಾಯಕತ್ವಕ್ಕೂ ಸವಾಲ್‌

    ಇಂದಿನಿಂದ ಹರಿಣರ ವಿರುದ್ಧ ಏಕದಿನ ಸರಣಿ – ಹೊಸ ತಾರೆಗಳ ಉಗಮಕ್ಕೆ ರೈಟ್‌ ಟೈಂ, ರಾಹುಲ್‌ ನಾಯಕತ್ವಕ್ಕೂ ಸವಾಲ್‌

    ಜೋಹಾನ್ಸ್‌ ಬರ್ಗ್: ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಭಾನುವಾರ (ಇಂದು) ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೊಸ ತಲೆಮಾರಿನ ತಾರೆಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಾಲುಗಟ್ಟಿ ನಿಂತಿದ್ದು ಭಾರತದ ಏಕದಿನ ಭವಿಷ್ಯದ ಪ್ರಯಾಣಕ್ಕೆ ಇದು ಮೊದಲ ಹೆಜ್ಜೆಯಾಗುವ ನಿರೀಕ್ಷೆ ಇದೆ.

    ಅಷ್ಟೇ ಅಲ್ಲದೇ ಉಭಯ ತಂಡಗಳಿಗೆ ಈ ಮುಖಾಮುಖಿಯು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಮುಂಚಿತವಾಗಿ ಹೊಸ ಸ್ಟಾರ್‌ಗಳ ಆಗಮನವನ್ನು ಬಿಂಬಿಸುತ್ತದೆ. ಕಳೆದ ಒಂದೂವರೆ ದಶಕದಿಂದಲೂ ಏಕದಿನ ಸ್ವರೂಪದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ (Virat Kohli and Rohit Sharma) ಉತ್ತುಂಗದಲ್ಲಿದ್ದಾರೆ. ಆದರೀಗ ಅವರು ತಮ್ಮ ವೃತ್ತಿಜೀವನದ ಮುಸ್ಸಂಜೆಗೆ ಸರಿಯುತ್ತಿದ್ದಾರೆ. ಹೀಗಾಗಿ ಯುವ ಭಾರತೀಯರ ಹೆಸರು ತಮ್ಮ ಪರಂಪರೆ ಮುಂದುವರಿಸಬೇಕಾಗಿದೆ.

    ಮೂರು ಏಕದಿನ ಪಂದ್ಯಗಳ ಸರಣಿಯ ನಾಯಕತ್ವ ವಹಿಸಿರುವ ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಪಂದ್ಯದ ಕೇಂದ್ರ ಬಿಂದುವಾಗಿದ್ದಾರೆ. ವಿಕೆಟ್ ಕೀಪರ್-ಬ್ಯಾಟರ್ ರಾಹುಲ್ ಈ ಹಿಂದೆ ಭಾರತ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ವಿಶ್ವಕಪ್‌ಗೂ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನಯ 2-1 ಅಂತರದಲ್ಲಿ ಗೆಲ್ಲುವಲ್ಲಿ ರಾಹುಲ್‌ ಪ್ರಮುಖ ಪಾತ್ರ ವಹಿಸಿದ್ದರು. ಆದ್ರೆ ಇಲ್ಲಿನ ಯಶಸ್ವಿ ಫಲಿತಾಂಶವು ಕರುನಾಡ ಕುವರನಿಗೆ ದೀರ್ಘಕಾಲದವರೆಗೆ ಏಕದಿನ ನಾಯಕತ್ವ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಅಚ್ಚರಿ ಬೆಳವಣಿಗೆಯಲ್ಲಿ ಮುಂಬೈ ಸಾರಥಿಯಾದ ಪಾಂಡ್ಯ – ಹಿಟ್‌ಮ್ಯಾನ್‌ ಸ್ಥಾನ ಏನು?

    ಅನಾರೋಗ್ಯದಿಂದಾಗಿ ಟಿ20 ಸರಣಿ ಯಿಂದ ಹೊರಗುಳಿದಿದ್ದ ರಾಹುಲ್, ಋತುರಾಜ್ ಚೇತರಿಸಿಕೊಂಡಿದ್ದರೆ, ಶ್ರೇಯಸ್ ಅಯ್ಯರ್ ಸೇರಿದಂತೆ ಯುವ ಆಟಗಾರರು ತಂಡದಲ್ಲಿ ಕಾಯಂ ಸ್ಥಾನಕ್ಕಾಗಿ ಪೈಪೋಟಿ ನಡೆಸಲು ಉತ್ಸುಕರಾಗಿದ್ದಾರೆ. ಅಷ್ಟೇ ಅಲ್ಲದೇ ಫುಲ್‌ ಫಾರ್ಮ್‌ನಲ್ಲಿರುವ ರಿಂಕು ಸಿಂಗ್‌ ಸಹ ಏಕದಿನ ಸರಣಿಯಲ್ಲಿ ಸ್ಥಾನ ಪಡೆಯುವ ಅವಕಾಶವಿದೆ. ಇದನ್ನೂ ಓದಿ: ಪಾಂಡ್ಯ ನಾಯಕತ್ವ ವರವೋ ಶಾಪವೋ – ಕ್ಯಾಪ್ಟನ್‌ ಆದ ಒಂದೇ ಗಂಟೆಯಲ್ಲಿ 4 ಲಕ್ಷ ಫಾಲೋವರ್ಸ್‌ ಕಳೆದುಕೊಂಡ ಮುಂಬೈ

    ಇನ್ನೂ ವೇಗಿಗಳಾದ ಅವೇಶ್ ಖಾನ್, ಮುಖೇಶ್ ಕುಮಾರ್ ಮತ್ತು ಅರ್ಷ್‌ದೀಪ್‌ ಸಿಂಗ್‌ ಹಿರಿಯ ಬೌಲರ್‌ಗಳ ಅನುಪಸ್ಥಿತಿ ತುಂಬಬೇಕಾದ ಜವಾಬ್ದಾರಿ ಹೊತ್ತಿದ್ದಾರೆ. ಜೋಹಾನ್‌ಬರ್ಗ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಅವರು ಹೆಚ್ಚು ಸ್ಥಿರತೆ ತೋರಿಸಬೇಕಾಗಿದೆ. ಇದನ್ನೂ ಓದಿ: ಟೆಕ್ವಾಂಡೋ: ರಾಷ್ಟ್ರಮಟ್ಟಕ್ಕೆ ಕಾಸರಗೋಡಿನ ಗಣ್ಯ – ಕೇರಳದಲ್ಲಿ ಅಗ್ರʻಗಣ್ಯʼಚಿನ್ನದ ಪದಕ..!

  • World Cup 2023: ಸಿಕ್ಸ್ ಹೊಡಿಯೋದ್ರಲ್ಲೂ ಟೀಂ ಇಂಡಿಯಾ ದಾಖಲೆ!

    World Cup 2023: ಸಿಕ್ಸ್ ಹೊಡಿಯೋದ್ರಲ್ಲೂ ಟೀಂ ಇಂಡಿಯಾ ದಾಖಲೆ!

    ಬೆಂಗಳೂರು: ಸಿಕ್ಸ್ ಹೊಡಿಯೋದ್ರಲ್ಲೂ ಟೀಂ ಇಂಡಿಯಾ (Team India) ದಾಖಲೆ ಮಾಡಿದೆ. ಒಂದೇ ವರ್ಷ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆಯನ್ನು ಟೀಂ ಇಂಡಿಯಾ ತನ್ನ ಹೆಸರಿಗೆ ಬರೆದುಕೊಂಡಿದೆ.

    2023ರಲ್ಲಿ ಇದುವರೆಗೆ ನಡೆದ 30 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ 215 ಸಿಕ್ಸ್ ಬಾರಿಸಿದೆ. ಈ ಹಿಂದೆ ಈ ದಾಖಲೆ ವೆಸ್ಟ್ ಇಂಡೀಸ್ (West Indies) ತಂಡದ ಹೆಸರಲ್ಲಿತ್ತು. 2019ನೇ ವರ್ಷದಲ್ಲಿ ವೆಸ್ಟ್ ಇಂಡೀಸ್ 209 ಸಿಕ್ಸರ್ ಗಳೇ ಇದುವರೆಗಿನ ಒಂದು ವರ್ಷದ ಅತ್ಯಧಿಕ ಸಿಕ್ಸರ್ ದಾಖಲೆಯಾಗಿತ್ತು. ಇದನ್ನೂ ಓದಿ: ಶ್ರೇಯಸ್‌, ರಾಹುಲ್‌ ಶತಕಗಳ ಬೊಂಬಾಟ್‌ ಬ್ಯಾಟಿಂಗ್‌ – ಡಚ್ಚರಿಗೆ 411 ರನ್‌ಗಳ ಕಠಿಣ ಗುರಿ

    ಭಾರತ ತಂಡ 2023ನೇ ವರ್ಷದ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ (South Africa) 2ನೇ ಸ್ಥಾನದಲ್ಲಿದೆ. ಈ ವರ್ಷ 21 ಪಂದ್ಯವನ್ನಾಡಿರುವ ದಕ್ಷಿಣ ಆಫ್ರಿಕಾ ಈವರೆಗೆ 203 ಸಿಕ್ಸ್ ಬಾರಿಸಿದೆ. ಇದನ್ನೂ ಓದಿ: ವೇಗದ ಶತಕ ಸಿಡಿಸಿ ಹಿಟ್‌ಮ್ಯಾನ್‌ ದಾಖಲೆ ಮುರಿದ ಕನ್ನಡಿಗ; ಟಾಪ್‌-10 ದಿಗ್ಗಜರ ಪಟ್ಟಿ ಸೇರಿದ ರಾಹುಲ್‌

    3ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದ್ದು, 20 ಪಂದ್ಯಗಳಲ್ಲಿ 165 ಸಿಕ್ಸರ್ ಬಾರಿಸಿದೆ. ಇದನ್ನೂ ಓದಿ: ಪಾಕ್ ಕೆಲವು ಬದಲಾವಣೆ ಮಾಡಿಕೊಂಡರೆ ಟೀಂ ಇಂಡಿಯಾದಂತೆ ಬಲಿಷ್ಠವಾಗುತ್ತೆ: ಗಂಗೂಲಿ

  • Ind Vs Pak: ಪಾಕ್‌ ತಂಡಕ್ಕೆ ಅಗೌರವ ತೋರಬೇಡಿ – ಟೀಂ ಇಂಡಿಯಾ ಫ್ಯಾನ್ಸ್‌ಗೆ ಗಂಭೀರ್‌ ಮತ್ತೆ ಕ್ಲಾಸ್‌

    Ind Vs Pak: ಪಾಕ್‌ ತಂಡಕ್ಕೆ ಅಗೌರವ ತೋರಬೇಡಿ – ಟೀಂ ಇಂಡಿಯಾ ಫ್ಯಾನ್ಸ್‌ಗೆ ಗಂಭೀರ್‌ ಮತ್ತೆ ಕ್ಲಾಸ್‌

    ಅಹಮದಾಬಾದ್‌: ವಿಶ್ವಕಪ್‌ (World Cup 2023) ಟೂರ್ನಿಯ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಆರಂಭವಾಗಿದೆ. ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದಾರೆ.

    1.32 ಲಕ್ಷ ಸಾಮರ್ಥ್ಯ ಆಸನಗಳ ವ್ಯವಸ್ಥೆಯುಳ್ಳ ಮೋದಿ ಕ್ರೀಡಾಂಗಣಕ್ಕೆ ಜನಸಾಗರವೇ ಹರಿದುಬಂದಿದ್ದು, ಕ್ರೀಡಾಂಗಣದ ಹೊರಗೂ ಸಾವಿರಾರು ಅಭಿಮಾನಿಗಳು ಟೀಂ ಇಂಡಿಯಾವನ್ನು (Team India Fans) ಹುರಿದುಂಬಿಸುತ್ತಿದ್ದಾರೆ. ಈ ನಡುವೆ ಎದುರಾಳಿ ತಂಡದ ಆಟಗಾರರನ್ನೂ ವ್ಯಂಗ್ಯಮಾಡುವ ಪ್ರಸಂಗಗಳೂ ಕಂಡುಬಂದಿದ್ದು, ಅಂತಹ ಅಭಿಮಾನಿಗಳಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.

    ಟಾಸ್‌ ಬಳಿಕ ಈ ಕುರಿತು ಮಾತನಾಡಿರುವ ಗೌತಮ್‌ ಗಂಭೀರ್‌ (Gautam Gambhir), ವಿಶ್ವಕಪ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ಪಾಕಿಸ್ತಾನ ತಂಡಕ್ಕೆ ಅಗೌರವ ತೋರಬೇಡಿ. ನಿಮ್ಮ ತಂಡವನ್ನು ಬೆಂಬಲಿಸಿ, ಆದ್ರೆ ನಿಮ್ಮ ಸಂದರ್ಶಕರೊಂದಿಗೆ ಮತ್ತು ಅತಿಥಿಗಳಾಗಿ ಬಂದವರೊಡನೆ ಅನುಚಿತವಾಗಿ ವರ್ತಿಸಬೇಡಿ. ಅವರು ಇಲ್ಲಿಗೆ ವಿಶ್ವಕಪ್‌ ಆಡಲು ಬಂದಿದ್ದಾರೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

    ಟೀಂ ಇಂಡಿಯಾ ಪ್ಲೇಯಿಂಗ್‌-11: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಇದನ್ನೂ ಓದಿ: Ind vs Pak ರೋಚಕ ಸಮರಕ್ಕೆ ಕ್ಷಣಗಣನೆ – ಮೋದಿ ಕ್ರೀಡಾಂಗಣದಲ್ಲಿ ಜನಸಾಗರ, ಭಾರತದ ಗೆಲುವಿಗೆ ಹೋಮ ಹವನ

    ಪಾಕಿಸ್ತಾನ ಪ್ಲೇಯಿಂಗ್‌-11: ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕಾರ್‌ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಶಾ ಆಫ್ರಿದಿ, ಹ್ಯಾರಿಸ್ ರೌಫ್. ಇದನ್ನೂ ಓದಿ: ಇಂಡೋ-ಪಾಕ್‌ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]