Tag: ODICricket

  • 25 ಬೌಂಡರಿ, 15 ಸಿಕ್ಸರ್ – 277 ರನ್ ಸಿಡಿಸಿ ವಿಶ್ವದಾಖಲೆ ಬರೆದ ಜಗದೀಶನ್ – ಹಿಟ್‌ಮ್ಯಾನ್ ದಾಖಲೆಯೂ ಉಡೀಸ್

    25 ಬೌಂಡರಿ, 15 ಸಿಕ್ಸರ್ – 277 ರನ್ ಸಿಡಿಸಿ ವಿಶ್ವದಾಖಲೆ ಬರೆದ ಜಗದೀಶನ್ – ಹಿಟ್‌ಮ್ಯಾನ್ ದಾಖಲೆಯೂ ಉಡೀಸ್

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಬಾರಿಸಿದ ತಮಿಳುನಾಡು ಕ್ರಿಕೆಟಿಗ ಘಟಾನುಘಟಿಗಳ ದಾಖಲೆಗಳನ್ನ ಉಡೀಸ್ ಮಾಡಿ ಹೊಸ ವಿಶ್ವದಾಖಲೆ ಬರೆದಿದ್ದಾರೆ.

    ವಿಜಯ್ ಹಜಾರೆ ಟ್ರೋಫಿ 2022ರಲ್ಲಿ ತಮಿಳುನಾಡು ಬ್ಯಾಟ್ಸ್‌ಮ್ಯಾನ್‌ 26 ವರ್ಷದ ನಾರಾಯಣ್ ಜಗದೀಶನ್ 141 ಎಸೆತಗಳಲ್ಲಿ ಭರ್ಜರಿ 277 ರನ್ ಸಿಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದನ್ನೂ ಓದಿ: 3ನೇ T20 ಪಂದ್ಯದಿಂದ ವಿಲಿಯಮ್ಸನ್ ಔಟ್ – ಕಳೆದ ಪಂದ್ಯದ ಹ್ಯಾಟ್ರಿಕ್ ವೀರನಿಗೆ ನಾಯಕತ್ವದ ಪಟ್ಟ

    ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಉಭಯ ತಂಡಗಳ ಪರ ಟಾಸ್ ಸೋತು ಬ್ಯಾಟಿಂಗ್ ಮಾಡಿದ ತಮಿಳುನಾಡು 50 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 506 ರನ್ ಕಲೆಹಾಕಿತು. ಈ ಪಂದ್ಯದಲ್ಲಿ ಆರಂಭಿಕನಾಗಿದ್ದ ಸಾಯಿ ಸುದರ್ಶನ್ 102 ಎಸೆತಗಳಲ್ಲಿ 154 ರನ್ ಸಿಡಿಸಿ ಮಿಂಚಿದರು. ಮತ್ತೊಬ್ಬ ಆರಂಭಿಕನಾಗಿ ಕಣಕ್ಕಿಳಿದಿದ್ದ ವಿಕೆಟ್ ಕೀಪರ್ ಎನ್. ಜಗದೀಶನ್ ತನ್ನ ಅಮೋಘ ಫಾರ್ಮ್ ಮುಂದುವರಿಸಿ 141 ಎಸೆತಗಳಲ್ಲಿ 277 ರನ್ ಚಚ್ಚಿದರು. ಇದನ್ನೂ ಓದಿ: ಶತಕ ಸಿಡಿಸಿ ಮೆರೆದ ಸೂರ್ಯ – ಕೀವಿಸ್ ಕಿವಿ ಹಿಂಡಿದ ಭಾರತ

    196.45 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಜಗದೀಶನ್ ಇನ್ನಿಂಗ್ಸ್‌ನಲ್ಲಿ 25 ಬೌಂಡರಿ ಮತ್ತು 15 ಸಿಕ್ಸರ್ ಪೇರಿಸಿದರು. ಇವರಿಗೆ ಉತ್ತಮ ಸಾಥ್ ಕೊಟ್ಟ ಸಾಯಿ ಸುದರ್ಶನ್ 154 ರನ್ ಗಳಿಸಿದರು. ವಿಜಯ್ ಹಜಾರೆ ಟ್ರೋಫಿ 2022ರಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್‌ಮ್ಯಾನ್‌ಗಳ ಲಿಸ್ಟ್‌ನಲ್ಲಿ ಜಗದೀಶನ್ ಮೊದಲ ಸ್ಥಾನದಲ್ಲಿದ್ದಾರೆ. 5 ಇನ್ನಿಂಗ್ಸ್‌ಗಳಲ್ಲಿ 522 ರನ್ ಕಲೆಹಾಕಿರುವ ಜಗದೀಶನ್ ಒಟ್ಟಾರೆ 41 ಪಂದ್ಯಗಳಲ್ಲಿ 1,700ರನ್ ಕಲೆಹಾಕಿದ್ದಾರೆ. ಇದರಲ್ಲಿ 7 ಶತಕ ಹಾಗೂ ಅನೇಕ ಅರ್ಧಶತಕಗಳು ಒಳಗೊಂಡಿವೆ. ಇದನ್ನೂ ಓದಿ: ಸಿಕ್ಸರ್‌ ವೀರ ಸೂರ್ಯ Vs ಎಬಿಡಿ – ಇಬ್ಬರಲ್ಲಿ ಯಾರು ಬೆಸ್ಟ್‌? – ಟ್ವಿಟ್ಟರ್‌ನಲ್ಲಿ ಟ್ರೆಂಡ್‌

    ಇದುವರೆಗೆ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಸಿಡಿಸಿದ್ದ ತಂಡಗಳ ಪೈಕಿ ಇಂಗ್ಲೆಂಡ್ 498 ರನ್ ಗಳಿಸಿ ಅಗ್ರಸ್ಥಾನದಲ್ಲಿತ್ತು. ನೆದರ್‌ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ 4 ವಿಕೆಟ್ ನಷ್ಟಕ್ಕೆ 498 ರನ್ ಗಳಿಸಿತ್ತು. ಈ ದಾಖಲೆಯನ್ನು ಉಡೀಸ್ ಮಾಡಿರುವ ತಮಿಳುನಾಡು ತಂಡ 506 ರನ್‌ಗಳನ್ನು ಗಳಿಸುವ ಮೂಲಕ ಇಂಗ್ಲೆಂಡ್ ದಾಖಲೆಯನ್ನು ಮುರಿದಿದೆ. ಇದೀಗ ತಮಿಳುನಾಡು ಮೊದಲ ಸ್ಥಾನದಲ್ಲಿದ್ದರೆ, 498 ರನ್ ಗಳಿಸಿದ ಇಂಗ್ಲೆಂಡ್ 2 ಮತ್ತು 4ನೇ ಸ್ಥಾನವನ್ನು ಹಂಚಿಕೊಂಡಿದೆ. ಸರ್ರೆ 3ನೇ ಸ್ಥಾನ (496) ಹಾಗೂ 5ನೇ ಸ್ಥಾನದಲ್ಲಿ ಭಾರತ-ಎ ತಂಡ (458) ಇದೆ.

    ಅಗ್ರಸ್ಥಾನಕ್ಕೇರಿದ ನಾರಾಯಣ್: 277 ರನ್ ಬಾರಿಸಿ ಹೊಸ ದಾಖಲೆ ಬರೆದಿರುವ ನಾರಾಯಣ್ ಜಗದೀಶನ್ ಏಕದಿನ ಕ್ರಿಕೆಟ್ ನಲ್ಲೂ ಅತಿಹೆಚ್ಚು ರನ್‌ಗಳಿಸಿದವರ ಪೈಕಿ ಮೊದಲಿಗರಾಗಿದ್ದಾರೆ. 268 ರನ್ ಗಳಿಸಿದ ಅಲಿಸ್ಟೇರ್ ಬ್ರೌನ್ ಹಾಗೂ 264 ರನ್ ಚಚ್ಚಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕ್ರಮವಾಗಿ ಎರಡು ಮೂರನೇ ಸ್ಥಾನದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೇಯಸ್‌ ಅಯ್ಯರ್‌, ಇಶಾನ್‌ ಕಿಶನ್‌ ಭರ್ಜರಿ ಬ್ಯಾಟಿಂಗ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ

    ಶ್ರೇಯಸ್‌ ಅಯ್ಯರ್‌, ಇಶಾನ್‌ ಕಿಶನ್‌ ಭರ್ಜರಿ ಬ್ಯಾಟಿಂಗ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ

    ರಾಂಚಿ: ಶ್ರೇಯಸ್‌ ಅಯ್ಯರ್‌ (Shreyas Iyer), ಇಶಾನ್‌ ಕಿಶನ್‌ (Ishan Kishan) ಅವರ ಭರ್ಜರಿ ಬ್ಯಾಟಿಂಗ್‌ ಹಾಗೂ ಮೊಹಮ್ಮದ್‌ ಸಿರಾಜ್‌ ಬೌಲಿಂಗ್‌ ದಾಳಿ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ  7 ವಿಕೆಟ್‌ಗಳ ಜಯ ಸಾಧಿಸಿದೆ.

    ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಭಾರತ (Team India) ಮತ್ತು ದಕ್ಷಿಣ ಆಫ್ರಿಕಾ (SouthAfrica) ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ ಭಾರತದ ಪ್ರಬಲ ಬೌಲಿಂಗ್ ದಾಳಿಗೆ 300ರ ಗಡಿ ಮುಟ್ಟಲು ಸಾಧ್ಯವಾಗದೇ 7 ವಿಕೆಟ್ ನಷ್ಟಕ್ಕೆ 278ರನ್ ಕಲೆಹಾಕಿತು. 279 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಭಾರತ ನಿಗದಿತ 45.5 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 282 ರನ್‌ ಪೇರಿಸಿ ಗೆಲುವು ಸಾಧಿಸಿತು. ಈ ಮೂಲಕ 1-1 ಅಂತರದಲ್ಲಿ ಸರಣಿ ಸಮಬಲ ಸಾಧಿಸಿದೆ.

    279 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು. ಪವರ್‌ ಪ್ಲೇ ಮುಗಿಯುವಷ್ಟರಲ್ಲೇ ಆರಂಭಿಕರಾದ ಶುಭಮನ್‌ ಗಿಲ್‌ (Shubman Gill) ಹಾಗೂ ಶಿಖರ್‌ ಧವನ್‌ (Shikhar Dhawan) ಜೋಡಿ ವಿಕೆಟ್‌ ಒಪ್ಪಿಸಿತು. ಈ ವೇಳೆ ಶಿಖರ್‌ ಧವನ್‌ 20 ಎಸೆತಗಳಲ್ಲಿ ಕೇವಲ 13 ರನ್‌ಗಳಿಸಿದರೆ, ಗಿಲ್‌ 26 ಎಸೆತಗಳಲ್ಲಿ 5 ಬೌಂಡರಿಯೊಂದಿಗೆ 28 ರನ್‌ಗಳಿಸಿ ನಿರ್ಗಮಿಸಿದರು.

    ನಂತರ ಕಣಕ್ಕಿಳಿದ ಶ್ರೇಯಸ್‌ ಅಯ್ಯರ್‌ ಹಾಗೂ ಇಶಾನ್‌ ಕಿಶನ್‌ ಜೋಡಿ ಭರ್ಜರಿ ಬ್ಯಾಟಿಂಗ್‌ ಮಾಡಿದರು. 155 ಎಸೆತಗಳಲ್ಲಿ 161 ರನ್‌ಗಳ ಜೊತೆಯಾಟವಾಡಿದರು. ಸಿಕ್ಸರ್‌, ಬೌಂಡರಿಗಳ ಜೊತೆಯಾಟದಲ್ಲಿ ಎದುರಾಳಿ ಬೌಲರ್‌ಗಳ ಬೆವರಿಳಿಸಿದರು. ಈ ವೇಳೆ ಸ್ಫೋಟಕ ಬ್ಯಾಟಿಂಗ್‌ ನಡೆಸುತ್ತಿದ್ದ ಇಶಾನ್‌ ಕಿಶನ್‌ ಶತಕದ ಸನಿಹದಲ್ಲಿರುವಾಗಲೇ ಔಟಾದರು. ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ ಇಶಾನ್‌ ಕಿಶನ್‌ 84 ಎಸೆತಗಳಲ್ಲಿ 93 ರನ್‌ (7 ಸಿಕ್ಸರ್‌, 4 ಬೌಂಡರಿ) ಗಳಿಸಿ ಔಟಾದರು. ಆ ನಂತರವೂ ತಮ್ಮ ಅಬ್ಬರ ಮುಂದುವರಿಸಿದ ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಮಿಂಚಿದರು.

    ಮಿಂಚಿದ ಶ್ರೇಯಸ್‌ ಅಯ್ಯರ್‌:
    ದಕ್ಷಿಣಾ ಆಫ್ರಿಕಾ ಬೌಲರ್‌ಗಳ ಬೆವರಿಳಿಸಿದ ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ನೆರವಾದರು. 111 ಎಸೆತಗಳನ್ನು ಎದುರಿಸಿದ ಶ್ರೇಯಸ್‌ ಅಯ್ಯರ್‌ 113 ರನ್‌ (15 ಬೌಂಡರಿ) ಸಿಡಿಸಿ ಅಜೇಯರಾಗುಳಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬಂದ ಸಂಜು ಸ್ಯಾಮ್ಸನ್‌ (Sanju Samson) 36 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್‌ನೊಂದಿಗೆ 29 ರನ್‌ಗಳನ್ನು ಗಳಿಸಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು.

    ಟೆಂಬಾ ಬವುಮಾ ಅನುಪಸ್ಥಿತಿಯಲ್ಲಿ ತಂಡವನ್ನ ಮುನ್ನಡೆಸಿದ ಕೇಶವ್ ಮಹಾರಾಜ ಮೊದಲು ಬ್ಯಾಟಿಂಗ್ ಆಯ್ದುಕೊಂಡ ನಿರ್ಧಾರಕ್ಕೆ ಟಾಪ್ ಆರ್ಡರ್ ಬ್ಯಾಟರ್‌ಗಳು ನೀರಸ ಪ್ರತಿಕ್ರಿಯೆ ತೋರಿದರು. ಮೊದಲಿಗೆ ಇನ್‌ಫಾರ್ಮ್ ಬ್ಯಾಟರ್ ಕ್ವಿಂಟನ್ ಡಿಕಾಕ್ ಕೇವಲ 5 ರನ್‌ಗಳಿಸಿ ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ಆರಂಭಿಕ ಹಿನ್ನಡೆ ಅನುಭವಿಸಿದರು.

    ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಶಹಬಾಜ್ ಅಹಮದ್ 10 ಓವರ್ ಬೌಲಿಂಗ್‌ ಮಾಡಿ 54ರನ್ ನೀಡಿ 1 ಪ್ರಮುಖ ವಿಕೆಟ್ ಪಡೆದರು. ಓಪನಿಂಗ್ ಬ್ಯಾಟರ್ ಜನ್ನೆಮನ್ ಮಲನ್‌ರನ್ನ ಎಲ್‌ಬಿಡಬ್ಲ್ಯೂ ಬಲೆಗೆ ಕೆಡವಿದರು. ಅಂಪೈರ್ ತೀರ್ಪನ್ನು ನಾಟೌಟ್ ನೀಡಿದಾಗ, ರಿವ್ಯೂ ತೆಗೆದುಕೊಂಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

    ದಕ್ಷಿಣ ಆಫಿಕಾ ಆರಂಭದಲ್ಲೇ 40 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು. ಈ ವೇಳೆ ರೀಜಾ ಹೆಂಡ್ರಿಕ್ಸ್ ಮತ್ತು ಏಡೆನ್ ಮಕ್ರಾಮ್ ತಂಡಕ್ಕೆ ಆಸರೆಯಾದರು. 3ನೇ ವಿಕೆಟ್‌ಗೆ ಶತಕದ ಜೊತೆಯಾಟವಾಡಿದ ಈ ಜೋಡಿ ವೈಯಕ್ತಿಕ ಅರ್ಧಶತಕ ದಾಖಲಿಸಿ ತಂಡದ ರನ್‌ ಮೊತ್ತವನ್ನು 150ರ ಗಡಿ ದಾಟಿಸಿತು. ಈ ವೇಳೆ 76 ಎಸೆತಗಳಲ್ಲಿ 74 ರನ್‌ (1 ಸಿಕ್ಸರ್‌, 9 ಬೌಂಡರಿ) ಸಿಡಿಸಿ, ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದ್ದ ರೀಜಾ ಹೆಂಡ್ರಿಕ್ಸ್‌ ಅವರನ್ನು ಔಟ್‌ ಮಾಡಿಸಿದ ಮೊಹಮ್ಮದ್‌ ಸಿರಾಜ್‌ ಪೆವಿಲಿಯನ್‌ ದಾರಿ ತೋರಿದರು. ಈ ಮೂಲಕ ಆರಂಭಿಕ ವಿಕೆಟ್ ಪಡೆದಿದ್ದ ಸಿರಾಜ್ ಕಠಿಣವಾಗಿದ್ದ ಜೋಡಿಯನ್ನ ಬೇರ್ಪಡಿಸಿದರು.

    ಹೆಂಡ್ರಿಕ್ಸ್ ಔಟಾದ ಬಳಿಕ ಹೆನ್ರಿಚ್ ಕ್ಲಾಸ್ 30 ರನ್‌ ಗಳಿಸಿ ಉತ್ತಮವಾಗೇ ಆಡುತ್ತಿದ್ದ ವೇಳೆ ಕುಲ್‌ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದ್ರು. 89 ಎಸೆತಗಳಲ್ಲಿ 79ರನ್ ಕಲೆಹಾಕಿದ್ದ ಏಡೆನ್ ಮಕ್ರಾಮ್ ಇನ್ನಿಂಗ್ಸ್‌ಗೆ ವಾಷಿಂಗ್ಟನ್ ಸುಂದರ್ ತೆರೆ ಎಳೆದರು. ವೇಯ್ನೆ ಪರ್ನೆಲ್ 16ರನ್‌ಗಳಿಸಿ ಶಾರ್ದೂಲ್ ಠಾಕೂರ್ ಬೌಲಿಂಗ್‌ನಲ್ಲಿ ಔಟಾದರು. ಅಂತಿಮ ಓವರ್‌ನಲ್ಲಿ ಕೇವಲ 3 ರನ್ ನೀಡಿ ಕೇಶವ್ ಮಹಾರಾಜ್ ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ ಭಾರತದ ಪರ ಹೀರೋ ಆಗಿ ಮಿಂಚಿದರು.

    ಸಿರಾಜ್‌ ಬೊಂಬಾಟ್‌ ಬೌಲಿಂಗ್‌:
    ಟೀಂ ಇಂಡಿಯಾ ಪರ ಬೊಂಬಾಟ್ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ (Mohammed Siraj) 10 ಓವರ್‌ಗಳಲ್ಲಿ 1 ಮೇಡನ್ ಸಹಿತ 38ರನ್ ನೀಡಿ 3 ಪ್ರಮುಖ ವಿಕೆಟ್ ಪಡೆದರು. ಇನ್ನುಳಿದಂತೆ ಶಾರ್ದೂಲ್ ಠಾಕೂರ್, ಶಹಬಾಜ್ ಅಹಮದ್, ವಾಷಿಂಗ್ಟನ್ ಸುಂದರ್ ಮತ್ತು ಕುಲ್‌ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು. ದಕ್ಷಿಣ ಆಫ್ರಿಕಾ 7 ವಿಕೆಟ್‌ ನಷ್ಟಕ್ಕೆ 278ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿತು.

    Live Tv
    [brid partner=56869869 player=32851 video=960834 autoplay=true]

  • ಇಂದು ಏಕದಿನ ಸರಣಿ ಕೊನೆಯ ಪಂದ್ಯ, ಸರಣಿ ಗೆಲ್ಲುವ ತವಕದಲ್ಲಿ ಭಾರತ

    ಇಂದು ಏಕದಿನ ಸರಣಿ ಕೊನೆಯ ಪಂದ್ಯ, ಸರಣಿ ಗೆಲ್ಲುವ ತವಕದಲ್ಲಿ ಭಾರತ

    ಲಂಡನ್: ಏಕದಿನ ಸರಣಿಯಲ್ಲಿ 1-1 ಅಂತರದಲ್ಲಿ ಗೆಲುವು ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇಂದು ಸರಣಿ ಜಯಕ್ಕಾಗಿ ಸೆಣಸಲಿವೆ.

    ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ರ ವೇಳೆಗೆ ಪಂದ್ಯ ಆರಂಭವಾಗಲಿದ್ದು, 2ನೇ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ ಶಾಕ್‌ನಿಂದ ಕಂಗೆಟ್ಟಿರುವ ಭಾರತ ಅಂತಿಮ ಪಂದ್ಯದಲ್ಲಿ ತನ್ನ ಬ್ಯಾಟಿಂಗ್ ಪ್ಲಾನ್ ಬದಲಿಸಿಕೊಂಡು ಸರಣಿ ಜಯದ ಎದುರು ನೋಡುತ್ತಿದೆ. ಇದನ್ನೂ ಓದಿ: ಈ ಸಮಯ ಕಳೆದು ಹೋಗುತ್ತದೆ ಕೊಹ್ಲಿ ಬೆಂಬಲಕ್ಕೆ ನಿಂತ ಬಾಬರ್ ಅಜಮ್

    ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದ ಭಾರತ 2ನೇ ಪಂದ್ಯದಲ್ಲಿ ಸೋಲು ಕಂಡಿತು. 247 ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ರೋಹಿತ್ ಶರ್ಮಾ ಪಡೆ 100 ರನ್‌ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್ ಪಾಂಡ್ಯ, ಜಡೇಜಾ ಹೋರಾಡಿದರೂ ಅವರ ಬ್ಯಾಟಿಂಗ್ ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾಗಲಿಲ್ಲ. ಇದೀಗ ಅಂತಿಮ ಪಂದ್ಯದಲ್ಲಿ ಟಿ20 ಮಾದರಿಯಂತೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿ ಕೈವಶ ಮಾಡಿಕೊಳ್ಳಲು ಭಾರತ ಮುಂದಾಗಿದೆ.

    ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರೊಂದಿಗೆ ಉತ್ತಮ ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ 2ನೇ ಪಂದ್ಯದಲ್ಲಿ ನಿರೀಕ್ಷಿತ ಆಟವಾಡದೇ ಇರುವುದು ತಂಡಕ್ಕೆ ಹಿನ್ನಡೆ ಉಂಟು ಮಾಡಿತು. ಅಲ್ಲದೆ ವಿರಾಟ್ ಕೊಹ್ಲಿ ಸಹ ಅಲ್ಪಮೊತ್ತಕ್ಕೆ ನಿರ್ಗಮಿಸಿದ್ದರು. ಅಂತಿಮ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಿಂದ ಆಟಗಾರರಿಂದಲೂ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: 2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ

    ಜಸ್ಪ್ರಿತ್‌ ಬುಮ್ರಾ ನೇತೃತ್ವದ ಬೌಲಿಂಗ್ ಪಡೆ ಉತ್ತಮ ಲಯದಲ್ಲಿದೆಯಾದರೂ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಪರಿಣಾಮಕಾರಿಯಾಗುತ್ತಿಲ್ಲ. ಹೀಗಾಗಿ ಇನ್ನಿಂಗ್ಸ್ ಮಧ್ಯದಲ್ಲಿ ಜೊತೆಯಾಟಗಳನ್ನು ಮುರಿಯುವುದರಲ್ಲಿ ಭಾರತ ಹಿಂದೆ ಬೀಳುತ್ತಿದೆ.

    ಮತ್ತೊಂದೆಡೆ ಇಂಗ್ಲೆಂಡ್ ಅಂತಿಮ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ನೀಡಲು ಕಾಯುತ್ತಿದೆ. ಟಿ20 ನಲ್ಲಿ ಭಾರತದ ವಿರುದ್ಧ ಸೋಲು ಕಂಡ ಇಂಗ್ಲೆಂಡ್ ಇದೀಗ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತದ ವಿರುದ್ಧ ಸೇಡು ತೀರಿಕೊಳ್ಳಲು ಕಾತರವಾಗಿದೆ.

    Live Tv

    [brid partner=56869869 player=32851 video=960834 autoplay=true]