Tag: Offender

  • ಒಂದೂವರೆ ವರ್ಷದ ಕಂದಮ್ಮನನ್ನು ಕೊಂದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ

    ಒಂದೂವರೆ ವರ್ಷದ ಕಂದಮ್ಮನನ್ನು ಕೊಂದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ

    ಗದಗ: ಒಂದೂವರೆ ವರ್ಷದ ಕಂದಮ್ಮನನ್ನು ಕೊಂದಿದ್ದ ಪಾಪಿ ತಂದೆಗೆ ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ.

    ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ.ವಿ.ಪಾಟೀಲ್ ಅವರು ಆದೇಶ ಪ್ರಕಟಿಸಿದ್ದಾರೆ. ರೋಣ ತಾಲೂಕಿನ ಹುಲ್ಲೂರ ಗ್ರಾಮದ ಅಪರಾಧಿ ಪ್ರಶಾಂತಗೌಡ ಪಾಟೀಲ್ ಗೆ ಮರಣ ದಂಡನೆ ಶಿಕ್ಷೆ ನೀಡಲಾಗಿದೆ. ಅಪರಾಧಿ ಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಲೆ ಮಾಡಿದ್ದಾನೆ.

    ಅಪರಾಧಿ 2013 ರಲ್ಲಿ ಓರ್ವ ಮುಸ್ಲಿಂ ಮಹಿಳೆ ಪ್ರೀತಿಸಿ ಮದುವೆಯಾಗಿದ್ದ, ಕೆಲವು ತಿಂಗಳ ನಂತರ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಚಿತ್ರಹಿಂಸೆ ನೀಡಿ ದೋಖಾ ಮಾಡಿದ್ದ. ನಿತ್ಯ ಕಿರುಕುಳದಿಂದ ನೊಂದ ಪತ್ನಿ ಮಹಿಳಾ ಸಾಂತ್ವನ ಕೇಂದ್ರ ಮೊರೆ ಹೋಗಿದ್ದಳು. ಈ ವೇಳೆ ಒಂದು ಹೆಣ್ಣು ಮಗು ಸಹ ಜನನವಾಗಿತ್ತು. ನಂತರ ಪತ್ನಿ ಕರೆಸಿ ಬುದ್ಧಿ ಹೇಳಿದ ಬಳಿಕ ಚೆನ್ನಾಗಿ ಜೀವನ ಮಾಡುವುದಾಗಿ ತಪ್ಪೊಪ್ಪಿಕೊಂಡಿದ್ದ.

    ತಪ್ಪಿನ ಅರಿವಾದ ನಂತರ ರೋಣ ಪಟ್ಟಣದ ಸಿದ್ಧಾರೂಢ ಮಠದ ಬಳಿ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಕೆಲವು ತಿಂಗಳ ನಂತರ ಸಾಂತ್ವನ ಕೇಂದ್ರ ಕೇಸ್ ಹಿಂಪಡೆಯುವಂತೆ ಆಗಾಗ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಆಗ ನೊಂದ ಪತ್ನಿ ಮಗುವಿಗೆ ಜೀವನಾಂಶ ಬೇಡಿ ಕೋರ್ಟ್ ಮೊರೆ ಹೋಗಿದ್ದಳು. ಆಗ ಒಂದೂವರೆ ವರ್ಷದ ಮಗುವನ್ನು ಏಪ್ರಿಲ್ 6, 2015 ರಂದು ಕಿಡ್ನ್ಯಾಪ್ ಮಾಡಿ, ಗಜೇಂದ್ರಗಡದ ಕಾಲಕಾಲೇಶ್ವರ ಬೆಟ್ಟದಲ್ಲಿ ಕತ್ತುಹಿಸುಕಿ ಕೊಂದು ಸುಟ್ಟುಹಾಕಿ ಸಾಕ್ಷಿಗಳನ್ನು ಸಹ ನಾಶಮಾಡಿ ವಿಕೃತಿ ಮೆರೆದಿದ್ದ.

    ನೊಂದ ಮಹಿಳೆ, ಗಂಡನ ಮೇಲೆ ಅನುಮಾನಗೊಂಡು ರೋಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ರೋಣ ಪೊಲೀಸರು ಪ್ರಕರಣ ಬೇಧಿಸಿದ ವೇಳೆ ಅಪರಾಧಿ ಪ್ರಶಾಂತಗೌಡ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಕೃತ್ಯ ಎಸಗಿರುವುದನ್ನು ಬಾಯ್ಬಿಟ್ಟಿದ್ದ. ಈ ಕುರಿತು ರೋಣ ಹಾಗೂ ಗಜೇಂದ್ರಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಂತರ ಅಪರಾಧ ಪ್ರಕರಣ ಸಾಬೀತಾದ ಹಿನ್ನೆಲೆ ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರು ಅಪರಾಧಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. ಅಪರಾಧ ಎಸಗುವ ವ್ಯಕ್ತಿಗಳಿಗೆ ಇದು ಎಚ್ಚರಿಕೆ ಸಂದೇಶ ಎಂದು ಗದಗ ನ್ಯಾಯಾಲಯದ ಸರ್ಕಾರಿ ಅಭಿಯೋಜಕರು ಅಭಿಪ್ರಾಯಪಟ್ಟಿದ್ದಾರೆ.

  • 6ರ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗೆ ಮರಣದಂಡನೆ

    6ರ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗೆ ಮರಣದಂಡನೆ

    ಭುವನೇಶ್ವರ: 6 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ ಆರೋಪಿಗೆ ಒಡಿಶಾ ವಿಶೇಷ ಪೋಸ್ಕೋ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.

    ಕಳೆದ ವರ್ಷ ಅಪರಾಧಿ ಮುಸ್ತಾಕ್ ಒಡಿಶಾದ ಸಲಿಪುರ ಗ್ರಾಮದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕಲ್ಲಿನಿಂದ ಜಜ್ಜಿ ಬಾಲಕಿಯನ್ನು ಕೊಲೆ ಮಾಡಿದ್ದನು. ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ, ಆಕೆಯನ್ನು ಶಾಲೆಯ ಆವರಣಕ್ಕೆ ಕರೆದೊಯ್ದು ಮುಸ್ತಾಕ್ ಅತ್ಯಾಚಾರ ಮಾಡಿದ್ದನು. ಬಳಿಕ ಈ ಬಗ್ಗೆ ಬಾಲಕಿ ಯಾರಿಗಾದರೂ ಹೇಳುತ್ತಾಳೆ ಎಂಬ ಭಯದಿಂದ ಬಾಲಕಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದನು.

    ಮಗಳು ಮನೆಯಲ್ಲಿ ಕಾಣದಿದ್ದಾಗ ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದಾಗ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿ ಮುಸ್ತಾಕ್ ಎಂಬುದು ತಿಳಿದುಬಂದು, ಆತನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬಗ್ಗೆ ಒಡಿಶಾದ ವಿಶೇಷ ಪೋಸ್ಕೋ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಗುರುವಾರ ಆರೋಪ ಪ್ರಕರಣ ಸಾಬೀತಾಗಿದ್ದು ನ್ಯಾಯಾಧೀಶರು ಅಪರಾಧಿಗೆ ಮರಣದಂಡನೆ ವಿಧಿಸಿದ್ದಾರೆ.

    ಈ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ಮಾತನಾಡಿ, ನನ್ನ ಮಗಳ ಸಾವಿಗೆ ಕಾರಣವಾದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ನೀಡಿರುವುದು ಖುಷಿಯಾಗಿದೆ. ಇದರಿಂದ ನನ್ನ ಮಗಳ ಸಾವಿಗೆ ನ್ಯಾಯ ಸಿಕ್ಕಿದೆ, ನ್ಯಾಯಾಲಯಕ್ಕೆ ಧನ್ಯವಾದ. ಈ ತೀರ್ಪು ಅತ್ಯಾಚಾರಿಗಳಿಗೆ ಪಾಠವಾಗಲಿದೆ ಎಂದು ಹೇಳಿದ್ದಾರೆ.

    ಪೋಸ್ಕೋ ಕಾಯ್ದೆ ಅನ್ವಯ 12 ವರ್ಷದ ಒಳಗಿನ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದರೆ ಅಪರಾಧಿಗೆ ಮರಣದಂಡನೆ ಶಿಕ್ಷೆ ನೀಡಲಾಗುತ್ತದೆ. ಐಪಿಸಿ ಸೆಕ್ಷನ್ 302(ಕೊಲೆ), 363(ಅಪಹರಣ), 376ಬಿ (12 ವರ್ಷದ ಒಳಗಡೆ ಇರುವ 12 ವರ್ಷದೊಳಗಿನ ಬಾಲಕಿ ಮೇಲೆ ಅತ್ಯಾಚಾರ) ಅಡಿಯಲ್ಲಿ ಮುಸ್ತಾಕ್ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ವಾದ, ಪ್ರತಿವಾದ ಹಾಗೂ ಸಾಕ್ಷಿಯ ಆಧಾರದ ಮೇಲೆ ನ್ಯಾಯಾಲಯವು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ ಮರಣದಂಡನೆ ವಿಧಿಸಿದೆ.

  • ವಿಧವೆ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದಿದ್ದ ಅಪರಾಧಿಗೆ ಗಲ್ಲು ಶಿಕ್ಷೆ

    ವಿಧವೆ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದಿದ್ದ ಅಪರಾಧಿಗೆ ಗಲ್ಲು ಶಿಕ್ಷೆ

    ಬೆಳಗಾವಿ: ವಿಧವೆ ಮೇಲೆ ಅತ್ಯಾಚಾರ ಎಸಗಿ ನಂತರ ಹತ್ಯೆ ಮಾಡಿದ್ದ ಅಪರಾಧಿಗೆ ಬುಧವಾರ ಬೆಳಗಾವಿಯ ಎಂಟನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದ ರಮೇಶ್ ಜಾಧವ್ (31) ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿ. ಖಡಕಲಾಟ ಗ್ರಾಮದಲ್ಲಿ 2016ರಲ್ಲಿ ಘಟನೆ ನಡೆದಿತ್ತು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಇಂದು ತೀರ್ಪು ನೀಡಿದೆ.

    ಅಪರಾಧಿ ರಮೇಶ್ ಪರಿಚಿತ ಮಹಿಳೆಗೆ ಜನತಾ ಮನೆ ಕೊಡಿಸುವುದಾಗಿ ನಂಬಿಸಿದ್ದ. ಈ ನಿಟ್ಟಿನಲ್ಲಿ 2016 ಅಕ್ಟೋಬರ್ 21ರಂದು ರಾತ್ರಿ ಮಹಿಳೆಯ ಮನೆಗೆ ಹೋಗಿ ಫೋಟೋ ತೆಗೆಸುವುದಿದೆ ಎಂದು ಫೋಟೋ ಸ್ಟೂಡಿಯೋಗೆ ಕರೆದುಕೊಂಡು ಹೋಗಿದ್ದ. ಬಳಿಕ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಹೋಗಿ ಸಹಿ ಮಾಡಿ ಬರಬೇಕೆಂದು ಹೇಳಿ ಖಡಕಲಾಟ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ಕಿರುಚುತ್ತಿದ್ದಂತೆ ತನ್ನ ಕೃತ್ಯ ಜನರಿಗೆ ತಿಳಿಯುತ್ತದೆ ಎಂದು ಅರಿತ ರಮೇಶ್, ಕಲ್ಲಿನಿಂದ ಮಹಿಳೆಯ ತಲೆಗೆ ಜಜ್ಜಿ ಬರ್ಬರವಾಗಿ ಕೊಲೆ ಮಾಡಿ, ಘಟನಾ ಸ್ಥಳದಿಂದ ಪರಾರಿಯಾಗಿದ್ದ.

    ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು ರಮೇಶ್ ಕೃತ್ಯವನ್ನು ಬಯಲಿಗೆ ಎಳೆದಿದ್ದರು. ನಿಪ್ಪಾಣಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಕಿಶೋರ್ ಭರಣಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿ.ಬಿ.ಸೂರ್ಯವಂಶಿ ಅವರು, ಅಪರಾಧಿಗೆ ಒಂದು ಲಕ್ಷ ರೂ. ದಂಡ ಹಾಗೂ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಕಿರಣ ಪಾಟೀಲ್ ವಾದ ಮಂಡಿಸಿದರು.