Tag: officer

  • ಬಿಜೆಪಿ ಶಾಸಕನಿಂದ ಗೂಂಡಾಗಿರಿ- ನಿಂದನೆಯಿಂದ ಬೇಸತ್ತು ಹುದ್ದೆಯೇ ಬೇಡ ಅಂತಿದ್ದಾರೆ ಅಧಿಕಾರಿ!

    ಬಿಜೆಪಿ ಶಾಸಕನಿಂದ ಗೂಂಡಾಗಿರಿ- ನಿಂದನೆಯಿಂದ ಬೇಸತ್ತು ಹುದ್ದೆಯೇ ಬೇಡ ಅಂತಿದ್ದಾರೆ ಅಧಿಕಾರಿ!

    ರಾಯಚೂರು: ಜಿಲ್ಲೆಯ ದೇವದುರ್ಗದಲ್ಲಿ ಬಿಜೆಪಿ ಶಾಸಕರೊಬ್ಬರು ಗೂಂಡಾಗಿರಿ ಮೆರೆದ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನ ದೇವದುರ್ಗದ ಬಿಜೆಪಿ ಶಾಸಕ, ಶಿವನಗೌಡ ನಾಯಕ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಆರ್.ನಾಗರಾಜ್‍ಗೆ ಹಿಗ್ಗಾಮುಗ್ಗಾ ನಿಂದಿಸಿದ್ದಾರೆ.

    ಅಂಗನವಾಡಿ ಮೊಟ್ಟೆ ಸರಬರಾಜು ಗುತ್ತಿಗೆ ತಮ್ಮವರಿಗೇ ನೀಡುವಂತೆ ಬಿಜೆಪಿ ಶಾಸಕ ಅಧಿಕಾರಿಗೆ ಧಮ್ಕಿ ಹಾಕಿದ್ದಾರೆ. ಸದ್ಯ ಶಾಸಕರ ನಿಂದನೆಯಿಂದ ಮನನೊಂದ ಅಧಿಕಾರಿ ತನಗೆ ಈ ಹುದ್ದೆಯೇ ಬೇಡ ಅಂತ ಹೇಳುತ್ತಿದ್ದಾರೆ.


    ಶಾಸಕರ ವಿರುದ್ಧ ಆರೋಪವೇನು?
    ಬಿಜೆಪಿ ಶಾಸಕರಿಂದ ಮನನೊಂದಿರುವ ಅಧಿಕಾರಿ ಆರ್.ನಾಗರಾಜ್ ಅವರು ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಶಿವನಗೌಡ ನಾಯಕ್ ಅವರು ಮೊಬೈಲ್ ಕರೆಯಲ್ಲಿ ಬೈದಿರುವ ಸಿಡಿಯನ್ನೂ ಜಿಲ್ಲಾ ಪಂಚಾಯ್ತಿ ಸಿಇಓ ಹಾಗೂ ಅಧ್ಯಕ್ಷರಿಗೆ ನೀಡಿದ್ದಾರೆ. ಅಲ್ಲದೇ ಇದರ ಜೊತೆಗೆ ತಮ್ಮ ಪ್ರಭಾರಿ ಉಪನಿರ್ದೇಶಕ ಹುದ್ದೆಯನ್ನ ಬೇರೆಯವರಿಗೆ ವಹಿಸಿಕೊಡುವಂತೆ ಮನವಿ ಮಾಡಿದ್ದಾರೆ.

    ರಾಯಚೂರಲ್ಲಿ ಅಪೌಷ್ಟಿಕತೆ ಇದೆ. ಹೀಗಾಗಿ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ನೀಡಲಾಗ್ತಿದೆ. ಈ ಮೊಟ್ಟೆ ಸರಬರಾಜಿನ ಮೇಲೆ ಶಾಸಕ ಶಿವನಗೌಡ ನಾಯಕ್ ಅವರು ಕಣ್ಣು ಹಾಕಿದ್ದಾರೆ. ಗುತ್ತಿಗೆ ತಮ್ಮವರಿಗೇ ಕೊಡಬೇಕು. ಅಕೌಂಟಿಗೆ ನೇರವಾಗಿ ಹಣ ಹಾಕಿ. ಜೊತೆಗೆ, ಬೇರೆ ಆಹಾರ ಪದಾರ್ಥಗಳ ಟ್ರಾನ್ಸ್ ಪೋರ್ಟೆಷನ್ ಹೊಣೆ ತಮ್ಮವರಿಗೆ ಕೊಡಿ ಅಂತ ಧಮ್ಕಿ ಹಾಕಿದ್ದಾರೆ.

    ಆದ್ರೆ, ಮೊಟ್ಟೆಗಳನ್ನ ಅಂಗನವಾಡಿ ಶಿಕ್ಷಕಿಯರೇ ನೇರವಾಗಿ ಖರೀದಿ ಮಾಡಬೇಕು. ಬಾಲ ವಿಕಾಸ ಸಮಿತಿ ಜಂಟಿ ಖಾತೆಗೆ ಹಣ ಹಾಕಬೇಕು ಅನ್ನೋದು ನಿಯಮ. ಪ್ರತಿ ತಿಂಗಳು ದೇವದುರ್ಗ ತಾಲೂಕೊಂದಕ್ಕೆ 25 ರಿಂದ 30 ಲಕ್ಷ ರೂಪಾಯಿ ಮೊಟ್ಟೆಗಾಗಿ, 70 ರಿಂದ 80 ಲಕ್ಷ ರೂಪಾಯಿ ಆಹಾರ ಪದಾರ್ಥಗಳಿಗಾಗಿ ಬರುತ್ತಿದೆ. ಈ ಸುಮಾರು 1 ಕೋಟಿ 10 ಲಕ್ಷ ರೂಪಾಯಿ ಹಣದ ಮೇಲೆ ಕಣ್ಣು ಹಾಕಿರುವ ಶಾಸಕ ಶಿವನಗೌಡ ನಾಯಕ್ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ ಅಂತ ಆರ್.ನಾಗರಾಜ್ ಆರೋಪಿಸಿದ್ದಾರೆ.

    ಶಾಸಕರು ಹೇಳಿದ್ದೇನು?:
    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬಿಜೆಪಿ ಶಾಸಕ, ಕಳೆದ 6 ತಿಂಗಳಿಂದ ಇಲ್ಲಿ ಅಪೌಷ್ಠಿಕತೆ ಇಲ್ಲ ಅನ್ನೋ ಆಧಾರದ ಮೇಲೆ ಸರ್ಕಾರ ಹಣ ಕೊಡುತ್ತಾ ಇದೆ. ಹೀಗಾಗಿ ಮೊಟ್ಟೆ ಹಾಗೂ ಆಹಾರ ಯಾಕೆ ಸರಿಯಾಗಿ ಸರಬರಾಜು ಮಾಡುತ್ತಿಲ್ಲ ಅಂತ 6 ತಿಂಗಳಿನಿಂದ ಕೇಳುತ್ತಾ ಇದ್ದೇನೆ. ಒಬ್ಬ ಶಾಸಕರನ ಕರ್ತವ್ಯ ಅಂದ್ರೆ, ಇವರುಗಳು ಏನೆಲ್ಲಾ ಮಾಡಿದ್ದಾರೆ ಅನ್ನೋದನ್ನು ನೋಡಿಕೊಂಡು ಕೈ ಕಟ್ಟಿ ಕುಳಿತುಕೊಳ್ಳಬೇಕಾ ಅಂತ ಪ್ರಶ್ನಿಸುವ ಮೂಲಕ ಸಮಜಾಯಿಷಿ ನೀಡಿದ್ದಾರೆ.

    ಆದ್ರೆ ಈ ಬಗ್ಗೆ ಮಾತನಾಡಿದ ಪ್ರಭಾರಿ ಉಪನಿರ್ದೇಶಕ, ಈ ಬಗ್ಗೆ ನಾನು ತಪ್ಪು ಮಾಡಿದ್ದಲ್ಲಿ ನನ್ನ ವಿರುದ್ಧ ಕ್ರಮ ಕೈಗೊಳ್ಳಲಿ. ಅದು ಬಿಟ್ಟು ಅವಾಚ್ಯವಾಗಿ ನಿಂದಿಸೋದು ಬೇಡ. ಅಲ್ಲದೇ ಎಲ್ಲಾ ಅಂಗನವಾಡಿಗಳಿಗೆ ಭೇಟಿ ನಿಡಿ ಒಂದು ಬಾರಿ ಪರಿಶೀಲನೆ ನಡೆಸಲಿ ಅಂತ ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಾಮಗಾರಿ ವಿಳಂಬ: ಫೋನಿನಲ್ಲೇ ಅಧಿಕಾರಿಗೆ ತರಾಟೆ ತೆಗೆದುಕೊಂದ ಪ್ರಕಾಶ್ ಹುಕ್ಕೇರಿ

    ಕಾಮಗಾರಿ ವಿಳಂಬ: ಫೋನಿನಲ್ಲೇ ಅಧಿಕಾರಿಗೆ ತರಾಟೆ ತೆಗೆದುಕೊಂದ ಪ್ರಕಾಶ್ ಹುಕ್ಕೇರಿ

    ಚಿಕ್ಕೋಡಿ: ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿ ವಿಳಂಬ ಆಗುತ್ತಿರುವ ಕಾರಣ ಕೆಆರ್‌ಡಿಸಿಎಲ್‌ (ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಮಗಮದ) ಎಂಡಿ ಅವರನ್ನು ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ದೂರವಾಣಿ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರ ಬಳಿ ನಿರ್ಮಾಣ ಮಾಡುತ್ತಿರುವ ಚಂದೂರ- ಸೈನಿಕ ಟಾಕಳಿ ಸಂಪರ್ಕ ಸೇತುವೆ ಕಾಮಗಾರಿ ನಡೆಯುತ್ತಿದ್ದು. ಇದರ ಪರಶೀಲನೆಗಾಗಿ ಸಂಸದ ಪ್ರಕಾಶ್ ಹುಕ್ಕೇರಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಅವರು ವಿಳಂಬವಾಗಿದ್ದು ಕಂಡು ಬಂದಿದ್ದು, ತಕ್ಷಣವೇ ಎಂಡಿ ಅವರಿಗೆ ದೂರವಾಣಿ ಕರೆ ಮಾಡಿ ಸಂಸದರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಕೆಆರ್‌ಡಿಸಿಎಲ್‌ ದಿಂದ ನಿರ್ಮಾಣ ಮಾಡುತ್ತಿರುವ ಅಂತರಾಜ್ಯ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಮುಂಬರುವ ಮಾರ್ಚ್ ಒಳಗಾಗಿ ಸೇತುವೆ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದರು. ಒಂದು ವೇಳೆ ನಿಗದಿತ ಸಮಯದಲ್ಲಿ ಸೇತುವೆ ನಿರ್ಮಾಣ ಮಾಡದೆ ಹೋದರೆ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. 19 ಕೋಟಿ ರೂ. ವೆಚ್ಚದಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರ ಸೇತುವೆ ನಿರ್ಮಾಣ ಮಾಡಲು ವಿಳಂಬ ಮಾಡುತ್ತಿರುವದು ಏಕೆ ಎಂದು ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತಾಲೂಕು ಹಿರಿಯ ಆರೋಗ್ಯ ಸಹಾಯಕ ಅಧಿಕಾರಿಯಿಂದ ನೌಕರನ ಮೇಲೆ ಹಲ್ಲೆ!

    ತಾಲೂಕು ಹಿರಿಯ ಆರೋಗ್ಯ ಸಹಾಯಕ ಅಧಿಕಾರಿಯಿಂದ ನೌಕರನ ಮೇಲೆ ಹಲ್ಲೆ!

    ಕೊಪ್ಪಳ: ತಾಲೂಕು ಹಿರಿಯ ಆರೋಗ್ಯ ಸಹಾಯ ಅಧಿಕಾರಿಯೊಬ್ಬ ಸರ್ವಾಧಿಕಾರಿಯಂತೆ ವರ್ತಿಸಿ ಖಾಯಂ ನೌಕರನೊರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.

    ಗಂಗಾವತಿ ತಾಲೂಕಿನ ಟಿಎಚ್‍ಓ ಕಚೇರಿಯಲ್ಲಿ ಸಹಾಯಕ ಹಿರಿಯ ಅಧಿಕಾರಿಯಾದ ವಿಜಯ್ ಪ್ರಸಾದ್ ನೌಕರನಾದ ಶಿವಶಂಕರ್ ಮೇಲೆ ಹಲ್ಲೆ ನಡೆಸಿದ್ದಾರೆ. ನೌಕರನ ಮೇಲೆ ಹಲ್ಲೆ ನಡೆಸಿರುವ ದೃಶ್ಯಾವಳಿಗಳು ಕಚೇರಿಯ ಒಳಗಡೆ ಇರುವ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಘಟನೆ ಅಕ್ಟೋಬರ್ 12 ರಂದು ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.

    ಶಿವಶಂಕರ್ ಸಮುದಾಯ ಆರೋಗ್ಯ ಕೇಂದ್ರದ ಕನಕಗಿರಿಯ ಖಾಯಂ ನೌಕರನಾಗಿದ್ದು, ಕಚೇರಿ ಕೆಲಸದ ನಿಮಿತ್ತ ತಾಲೂಕು ಕೇಂದ್ರಕ್ಕೆ ಆಗಮಿಸಿದ್ದಾರೆ. ಈ ವೇಳೆ ಅಲ್ಲಿನ ಸಹಾಯಕ ಹಿರಿಯ ಅಧಿಕಾರಿಯಾದ ವಿಜಯ್ ಪ್ರಸಾದ್ ಮತ್ತು ಶಿವಶಂಕರ್ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ವಿಜಯ್ ಪ್ರಸಾದ್ ಒಮ್ಮಿಂದೊಮ್ಮಲೆ ಶಿವಶಂಕರ್ ಮೇಲೆ ಚಪ್ಪಲಿನಿಂದ ಹೊಡೆಯಲು ಮುಂದಾಗಿದ್ದಾರೆ.

    ವಿಜಯ ಪ್ರಸಾದ್ ಮಾಡಿರುವ ಹಲ್ಲೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಅದನ್ನ ಗಮನಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗಂಗಾವತಿ ನಗರ ಠಾಣೆಯಲ್ಲಿ ಶಿವಶಂಕರ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಯ್ಯಪ್ಪ ಸ್ವಾಮಿಯ ಅನುಗ್ರಹದಿಂದ ನನಗೆ ವರ್ಗಾವಣೆ ಸಿಕ್ತು: ರೆಹನಾ ಫಾತಿಮಾ

    ಅಯ್ಯಪ್ಪ ಸ್ವಾಮಿಯ ಅನುಗ್ರಹದಿಂದ ನನಗೆ ವರ್ಗಾವಣೆ ಸಿಕ್ತು: ರೆಹನಾ ಫಾತಿಮಾ

    ತಿರುವನಂತಪುರಂ: ಮಣಿಕಂಠನ ದರ್ಶನದಿಂದ ನನಗೆ ವರ್ಗಾವಣೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಹಾಗೂ ಬಿಎಸ್‍ಎನ್‍ಎಸ್ ಉದ್ಯೋಗಿ ರೆಹನಾ ಫಾತಿಮಾ ಹೇಳಿಕೊಂಡಿದ್ದಾರೆ.

    ಶಬರಿಮಲೆ ದೇವಾಲಯವನ್ನು ಪ್ರವೇಶಿಸಲು ಹೋಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ರೆಹನಾ ಈ ಹಿಂದೆ ಬಿಎಸ್‍ಎನ್‍ಎಲ್ ಕೊಚ್ಚಿ ಬೋಟಿ ಜೆಟ್ಟಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಈಗ ಅವರನ್ನು ರವಿಪುರಂ ಶಾಖೆಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ರೆಹನಾ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಖುಷಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಯತ್ನ: ರೆಹನಾ ಫಾತಿಮಾ ಇಸ್ಲಾಂನಿಂದ ಉಚ್ಚಾಟನೆ!

    ಪೋಸ್ಟ್‌ನಲ್ಲಿ ಏನಿದೆ?:
    ಸ್ವಾಮಿ ಶರಣಂ, ನನ್ನ ಮನೆಯ ಪಕ್ಕದಲ್ಲಿರುವ ಶಾಖೆಗೆ ವರ್ಗಾವಣೆ ಮಾಡಿ ಅಂತಾ ಅಧಿಕಾರಿಗಳಿಗೆ 5 ವರ್ಷಗಳ ಹಿಂದೆಯೇ ಮನವಿ ಸಲ್ಲಿಸಿದ್ದೆ. ಆದರೆ ಅದು ಸಾಧ್ಯವಾಗಿರಲಿಲ್ಲ. ಶಬರಿಮಲೆ ಹತ್ತಿದ ನಂತರ ಆ ಕಾರ್ಯ ಸಿದ್ಧಿಯಾಯಿತು. ಇದ್ದೆಲ್ಲವೂ ಅಯ್ಯಪ್ಪ ಸ್ವಾಮಿಯ ಅನುಗ್ರಹ. ಟ್ರಾಫಿಕ್ ಜಾಮ್ ಸಮಸ್ಯೆ ನಡುವೆಯೇ 6 ಕಿ.ಮೀ. ವಾಹನ ಚಾಲನೆ ಮಾಡಿಕೊಂಡು ಕಚೇರಿಗೆ ಹೋಗಿ ಬರಬೇಕಿತ್ತು. ಆದರೆ ಇನ್ನು ಮುಂದೆ 2 ನಿಮಿಷದಲ್ಲಿ ಮನೆಯಿಂದ ಕಚೇರಿಗೆ ನಡೆದುಕೊಂಡೇ ಹೋಗಬಹುದು. ನನಗೆ ವರ್ಗಾವಣೆಗೆ ಶ್ರಮಿಸಿದ ಅಧಿಕಾರಿಗಳಿಗೆ ಒಳ್ಳೆಯದಾಗಲಿ ಎಂದು ರೆಹನಾ ಫಾತಿಮಾ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಪ್ರವೇಶಿಸಿದ್ರೆ ಶಬರಿಮಲೆ ಗರ್ಭಗುಡಿ ಬಂದ್: ಅರ್ಚಕರ ಪ್ರತಿಭಟನೆಗೆ ಮಣಿದು ಪ್ರವೇಶದಿಂದ ಹಿಂದಕ್ಕೆ ಸರಿದ ಮಹಿಳೆಯರು

    https://www.facebook.com/rehanafathima.pathoos/posts/2190505624494620

    ಈ ಹಿಂದೆ ಆಗಿದ್ದೇನು?:
    ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರ ವಿರೋಧ ನಡುವೆಯೂ, ಮಹಿಳಾ ಕಾರ್ಯಕರ್ತೆ ರೆಹನಾ ಫಾತಿಮಾ ಹಾಗೂ ಆಂಧ್ರಪ್ರದೇಶದ ಪತ್ರಕರ್ತೆ ಕವಿತಾ ಜಕ್ಕಾಲ್ ಶುಕ್ರವಾರ ಅಯ್ಯಪ್ಪ ದೇವಾಲಯದ ಪ್ರವೇಶಕ್ಕೆ ಮುಂದಾಗಿದ್ದರು. 180 ಪೊಲೀಸರ ಬಿಗಿ ಭದ್ರತೆಯಲ್ಲಿ ದೇವಾಲಯಕ್ಕೆ ಪ್ರವೇಶಕ್ಕೆ 500 ಮೀಟರ್ ದೂರ ಇರುವಾಗ ತಂತ್ರಿಗಳು ಒಂದು ವೇಳೆ ಮಹಿಳೆಯರು ದೇವಾಲಯದ ಪ್ರವೇಶಕ್ಕೆ ಮುಂದಾದರೆ, ದೇವಾಲಯದ ಗರ್ಭಗುಡಿಯನ್ನು ಮುಚ್ಚಿ, ರಾಜಮನೆತನದ ಸುಪರ್ದಿಗೆ ನೀಡುತ್ತೇವೆ ಎಂದು ಎಚ್ಚರಿಸಿದ್ದರು. ಅಯ್ಯಪ್ಪ ಮಾಲಾಧಾರಿಗಳು ಮೆಟ್ಟಿಲಿನಲ್ಲೇ ಪ್ರತಿಭಟನೆ ಮಾಡಿ ಮಹಿಳೆಯರ ಪ್ರವೇಶವನ್ನು ವಿರೋಧಿಸಿದ್ದರು. ಮಹಿಳೆಯರು ಪ್ರವೇಶಿಸಿದರೆ ಪರಿಸ್ಥಿತಿ ಕೈ ಮೀರಬಹುದು ಎನ್ನುವುದನ್ನು ಅರಿತ ಪೊಲೀಸರು ಇಬ್ಬರ ಜೊತೆ ಸಂಧಾನ ಮಾಡಿ ದೇವಾಲಯ ತೆರಳದಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅರಣ್ಯಾಧಿಕಾರಿಗಳಿಂದಲೇ ಬರದ ನಾಡನ್ನು ಹಸಿರಾಗಿಸಬೇಕಿದ್ದ ಸಸಿಗಳ ಮಾರಣಹೋಮ!

    ಅರಣ್ಯಾಧಿಕಾರಿಗಳಿಂದಲೇ ಬರದ ನಾಡನ್ನು ಹಸಿರಾಗಿಸಬೇಕಿದ್ದ ಸಸಿಗಳ ಮಾರಣಹೋಮ!

    – ಅಧಿಕಾರಿಗಳ ವಿರುದ್ಧ ಪರಿಸರವಾದಿಗಳಿಂದ ಭ್ರಷ್ಟಾಚಾರದ ಆರೋಪ
    – ಎಡವಟ್ಟು ಮುಚ್ಚಲು ಸಸಿಗಳ ಮಾರಣಹೋಮ

    ಚಿತ್ರದುರ್ಗ: ಬರದ ನಾಡನ್ನು ಹಚ್ಚ ಹಸಿರಾಗಿ ಕಂಗೊಳಿಸುವಂತೆ ಮಾಡಬೇಕಿದ್ದ ಅರಣ್ಯಧಿಕಾರಿಗಳೇ ಸಸಿಗಳ ಮಾರಣ ಹೋಮ ಮಾಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಐನಳ್ಳಿ ನರ್ಸರಿಯಲ್ಲಿ ಬೆಳಕಿಗೆ ಬಂದಿದೆ.

    ಕಳೆದ ವರ್ಷ ಸಾಮಾಜಿಕ ವಲಯದ ವ್ಯಾಪ್ತಿಗೆ ಬರುವ ರಸ್ತೆಗಳು, ಸಾರ್ವಜನಿಕ ಉದ್ಯಾನವನಗಳಲ್ಲಿ ನೆಡಲೆಂದು ನರ್ಸರಿಯಲ್ಲಿ 5 ಸಾವಿರ ಗಿಡಗಳಿಗೆ ನೀರು, ಗೊಬ್ಬರ ಹಾಕಿ ಪೋಷಿಸಿದ್ದರು. ಆದರೆ ಚಿತ್ರದುರ್ಗ ವಲಯ ಅಧಿಕಾರಿ ಅಕ್ಷತಾ, ಈ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದು, ತಮ್ಮ ವ್ಯಾಪ್ತಿಯೊಳಗೆ ಬಂದಿದ್ದ ವಿವಿಧ ಬಗೆಯ ಸುಮಾರು 5 ಸಾವಿರ ಸಸಿಗಳನ್ನು ನಾಶ ಪಡಿಸಿದ್ದಾರೆ. ಅಲ್ಲದೇ ಉತ್ತಮವಾಗಿ ಪೋಷಿಸಿದ್ದ ಸಸಿಗಳನ್ನು ಅಗತ್ಯವಿರುವ ಕಡೆ ನೆಡುವುದು ಇರಲಿ ಸಾರ್ವಜನಿಕರಿಗೂ ಸಹ ನೀಡದೇ ಆ ಸಸಿಗಳನ್ನು ನಾಶಗೊಳಿಸಿದ್ದಾರೆ. ಸದ್ಯ ಅರಣ್ಯ ಇಲಾಖೆಯ ಅಧಿಕಾರಿಗಳ ನಡೆಗೆ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಸಿ ಮಾರಣಹೋಮ ಮಾಡಿದ್ದೇಕೆ?
    ಸದ್ಯ ನರ್ಸರಿಯಲ್ಲಿ ಸಸಿಗಳ ಸಂಗ್ರವಾಗಿದ್ದರೂ ಕೂಡ ಮತ್ತೆ ಈ ವರ್ಷದ ಮಳೆಗಾಲಕ್ಕೆ ಹೊಸ ಸಸಿಗಳ ಅಗತ್ಯವಿದೆಯೆಂದು ಇಲಾಖೆಗೆ ಮನವಿ ಸಲ್ಲಿಸಿದೆ. ಹೊಸ ಸಸಿಗಳನ್ನು ಪೂರೈಕೆ ಮಾಡಲು ಮೇಲಾಧಿಕಾರಿಗಳು ಸ್ಥಳ ಪರಿಶೀಲನೆ ಬರುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳ ಕಣ್ಣಿಗೆ ತಮ್ಮ ಎಡವಟ್ಟು ಕಾಣಿಸದಂತೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿ ವಲಯ ಅರಣ್ಯಾಧಿಕಾರಿಗಳು ಹೀಗೆ ಸಸಿಗಳ ಮಾರಣಹೋಮ ಮಾಡಿದ್ದರೆಂಬ ಆರೋಪ ಕೇಳಿಬಂದಿದೆ.

    ಭ್ರಷ್ಟಚಾರದ ವಾಸನೆ?
    ಸಸಿಗಳನ್ನು ಮಾರಣ ಹೋಮ ನಡೆಸಿರುವುದರ ಹಿಂದೆ ದೊಡ್ಡ ಭ್ರಷ್ಟಾಚಾರದ ವಾಸನೆ ಕೇಳಿಬಂದಿದ್ದು, ಅರಣ್ಯ ಇಲಾಖೆಗೆ ಸುಮಾರು 2ಲಕ್ಷ ರೂ. ನಷ್ಟವುಂಟಾಗಿದೆ. ಪ್ರತಿವರ್ಷವೂ ಹೀಗೆಯೇ ಸಸಿಗಳ ಮಾರಣಹೋಮ ನಡೆಸಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

    ತನಿಖೆ ಅಗತ್ಯ: ಸಾವಿರಾರು ಸಸಿಗಳನ್ನು ಹೀಗೆ ನಾಶ ಮಾಡಿರುವ ಅರಣ್ಯ ಇಲಾಖೆ ಇದೂವರೆಗೂ ಸಾಮಾಜಿಕ ವಲಯದಲ್ಲಿ ನೆಟ್ಟಿರುವ ಸಸಿಗಳ ಪೋಷಣೆ ಕುರಿತು ಸೂಕ್ತ ತನಿಖೆಯಾಗಬೇಕು. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟಕ್ಕೆ ಬ್ರೇಕ್ ಹಾಕಬೇಕು. ಜೊತೆಗೆ ಸಸಿಗಳು ಚಿಗುರುವ ಮುನ್ನವೇ ನಾಶ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಿಸರವಾದಿಗಳು ಬೇಡಿಕೆ ಇಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಕ್ಕಳ ದಸರಾ ಕಾರ್ಯಕ್ರಮದ ಉದ್ಘಾಟನಾ ವೇದಿಕೆಯಿಂದಲೇ ಹೊರನಡೆದ ಸಚಿವರು!

    ಮಕ್ಕಳ ದಸರಾ ಕಾರ್ಯಕ್ರಮದ ಉದ್ಘಾಟನಾ ವೇದಿಕೆಯಿಂದಲೇ ಹೊರನಡೆದ ಸಚಿವರು!

    ಮೈಸೂರು: ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಕೈ ಮಂತ್ರಿಗಳ ಹೆಸರನ್ನು ಪ್ರಸ್ತಾಪ ಮಾಡದಕ್ಕೆ ಸಮ್ಮಿಶ್ರ ಸರ್ಕಾರದ ಮೂವರು ಮಂತ್ರಿಗಳು ವೇದಿಕೆಯಿಂದಲೇ ಹೊರಡನಡೆದ ಪ್ರಸಂಗ ಇಂದು ನಡೆಯಿತು.

    ಮಕ್ಕಳ ದಸರಾ ಕಾರ್ಯಕ್ರಮ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಸಚಿವರಾದ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ ಹಾಗೂ ಶಿವಶಂಕರ್ ರೆಡ್ಡಿ ಭಾಗವಹಿಸಿದ್ದರು. ಈ ವೇಳೆ ಅಧಿಕಾರಿಗಳು ಸಚಿವ ಶಿವಶಂಕರ್ ಅವರ ಹೆಸರನ್ನು ಪ್ರಸ್ತಾಪಿಸಿರಲಿಲ್ಲ. ಇದರಿಂದ ಸಿಡಿಮಿಡಿಕೊಂಡ ಸಾ.ರಾ.ಮಹೇಶ್ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು. ಅಷ್ಟೇ ಅಲ್ಲದೇ ಉದ್ಘಾಟನೆ ನೆರವೇರುತ್ತಿದ್ದಂತೆ ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ.

    ಉದ್ಘಾಟನೆ ನೆರವೇರಿಸಿ, ನೀವೇ ಈ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಸಾರಾ ಮಹೇಶ್, ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ತಕ್ಷಣವೇ ಕಾರ್ಯಕ್ರಮದಿಂದ ಮೂವರು ಸಚಿವರು ಹೊರ ನಡೆದು. ಸಚಿವರ ದಿಢೀರ್ ನಿರ್ಧಾರದಿಂದ ಕಾರ್ಯಕ್ರಮದಲ್ಲಿ ಕೆಲ ಹೊತ್ತು ಭಾರೀ ಗೊಂದಲ ಉಂಟಾಯಿತು. ಕ್ಷಣಾರ್ಧದಲ್ಲಿಯೇ ಉದ್ಘಾಟನೆ ಕಾರ್ಯಕ್ರಮ ಮುಕ್ತಾಯಗೊಂಡಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • Exclusive: PWDಯಲ್ಲಿ ದುಡ್ಡು ಕೊಟ್ರೆ ಮಾತ್ರ ಕೆಲಸ- ಪತ್ರ ಬರೆದು ದೂರು ಕೊಟ್ಟ ಮಹಿಳಾ ಅಧಿಕಾರಿ

    Exclusive: PWDಯಲ್ಲಿ ದುಡ್ಡು ಕೊಟ್ರೆ ಮಾತ್ರ ಕೆಲಸ- ಪತ್ರ ಬರೆದು ದೂರು ಕೊಟ್ಟ ಮಹಿಳಾ ಅಧಿಕಾರಿ

    ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ದುಡ್ಡು ನೀಡಿದರೆ ಮಾತ್ರ ಕೆಲಸ ಮಾಡಲಾಗುತ್ತಿದೆ ಎಂದು ಉಲ್ಲೇಖಿಸಿ ಐಎಎಸ್ ಅಧಿಕಾರಿಯೊಬ್ಬರು ಪಿಡಬ್ಲ್ಯುಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಲೋಕೊಪಯೋಗಿ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಿಚ್ಚಿಟ್ಟಿದ್ದಾರೆ.

    ಐಎಎಸ್ ಅಧಿಕಾರಿ ಪಲ್ಲವಿ ಅಕುರಾತಿ ಈ ಕುರಿತು ಪತ್ರ ಬರೆದಿದ್ದು, ನಗರದಲ್ಲಿ ತಾವು ವಾಸವಿರುವ ಕೆಪಿಡಬ್ಲ್ಯುಡಿ ವಸತಿ ಗೃಹ ರಿಪೇರಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನ ಆಗಿಲ್ಲ. ಈ ಕುರಿತು ಪಿಡಬ್ಲ್ಯುಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದರೂ ಕೆಲಸವೇ ಆಗಿಲ್ಲ. ಅಲ್ಲದೇ ಅಸಿಸ್ಟೆಂಟ್ ಎಂಜಿನಿಯರ್ ಗಿರೀಶ್‍ಗೆ ಸೂಚಿಸಿದ್ದರೂ ಕೆಲಸ ಮಾಡಿಲ್ಲ. ಇಲಾಖೆಯಲ್ಲಿ ದುಡ್ಡು ಕೊಡದಿದ್ದರೆ ಇಲ್ಲಿ ಕೆಲಸವೇ ಆಗಲ್ಲ. ಹಣ ನೀಡಿದರೆ ಮಾತ್ರ ಕೆಲಸ ಆಗುತ್ತೆ ಎಂದು ಪತ್ರ ಬರೆದಿದ್ದಾರೆ.

    ತಾವು ವಾಸಿಸುವ ಜೀವನ್ ಭೀಮಾ ನಗರದಲ್ಲಿ ಕುರಿತ ಅವ್ಯವಸ್ಥೆಯ ಬಗ್ಗೆ ನಿಮ್ಮ ಗಮನಕ್ಕೆ ತಂದಿದ್ದು, ನೀವು ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ನಿಮ್ಮ ಸೂಚನೆ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಇಲಾಖೆಯ ಎಇ, ಎಇಇ ಅಧಿಕಾರಿಗಳು ಬಳಿಕ ಯಾವುದೇ ಕೆಲಸ ಮಾಡದೇ ಸುಮ್ಮನಾಗಿದ್ದಾರೆ. ಈ ಕುರಿತು ಅವರನ್ನು ಸಂಪರ್ಕಿಸಲು ಎಷ್ಟು ಸಾರಿ ಯತ್ನಿಸಿದರೂ ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಇಲ್ಲಿನ ಅವ್ಯವಸ್ಥೆಯಿಂದ ಕಾನೂನು ಬಾಹಿರ ಚಟುವಟಿಕೆಗಳು ಕೂಡ ಹೆಚ್ಚಾಗಿದೆ ಎಂದು ವಿವರಿಸಿದ್ದಾರೆ.

    ಪತ್ರದಲ್ಲಿ ಮತ್ತೊಂದು ಮುಖ್ಯ ಅಂಶವನ್ನು ನಮೂದಿಸಿದ್ದು, ತಾವು ವಾಸಿಸುವ ಪಕ್ಕದ ಪ್ರದೇಶ ನಿವಾಸಿಗಳು ಹಣ ನೀಡಿದಕ್ಕೆ ಮಾತ್ರ ಕೆಲಸ ಮಾಡಿದ್ದಾರೆ. ನಾನು ಹಣ ನೀಡಿಲ್ಲ ಎಂಬ ಕಾರಣಕ್ಕೆ ಕೆಲಸ ಮಾಡಿಲ್ಲ. ಈ ಪ್ರದೇಶದ ಎಇ ಅಧಿಕಾರಿಗಳಿಗೆ ಪತ್ರ ಬರೆದು ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಆರೋಪಿಸಿದ್ದಾರೆ.

    2009ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಪಲ್ಲವಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಡಿಪಿಎಆರ್) ಜಾಗೃತ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 2018ರ ಜುಲೈ 18ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಅವರು, ಪ್ರಸ್ತುತ ಹೆರಿಗೆ ರಜೆಯಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಮ್ಮನ ಕಾಲಿಗೆ ಬಿದ್ದು ನಮಸ್ಕರಿಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್- ಫೋಟೋ ವೈರಲ್

    ಅಮ್ಮನ ಕಾಲಿಗೆ ಬಿದ್ದು ನಮಸ್ಕರಿಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್- ಫೋಟೋ ವೈರಲ್

    ಬೆಂಗಳೂರು: ಯಾವುದೇ ಒಬ್ಬ ವ್ಯಕ್ತಿಯ ಯಶಸ್ಸಿನ ಹಿಂದೆ ತಂದೆ-ತಾಯಿ ಮಾಡಿದ ತ್ಯಾಗ ಇರುತ್ತದೆ. ಇದಕ್ಕೆ ಎಲ್ಲರೂ ತಲೆಬಾಗ್ಲೇ ಬೇಕಾಗುತ್ತದೆ. ಇದಕ್ಕೆ ತಾಜಾ ಉದಾಹಣೆ ಎಂಬಂತೆ ಪೊಲೀಸ್ ಅಧಿಕಾರಿಯಾಗಿ ಯಶಸ್ವಿಯಾಗಿ ತರಬೇತಿ ಮುಗಿಸಿದ ಯುವಕ ನೇರ ತಾಯಿಯ ಬಳಿ ತೆರಳಿ ತನ್ನ ಸಾಧನೆಗೆ ಕಾರಣರಾದ ಅಮ್ಮನ ಕಾಲಿಗೆ ಬಿದ್ದ ನಮಸ್ಕರಿಸಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಶಂಸೆಗೆ ಕಾರಣವಾಗಿದೆ.

    ಕರ್ನಾಟಕದ ರಿಸರ್ವ್ ಪೊಲೀಸ್ ಎಡಿಜಿಪಿ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಈ ಫೋಟೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಮಹತ್ವ ಸಮಯದಲ್ಲಿ ಈ ಫೋಟೋ ಕ್ಲಿಕ್ ಮಾಡಿದ್ದು, ಯಶಸ್ವಿಯಾಗಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ತರಬೇತಿ ಪೂರ್ಣಗೊಳಿಸಿದ ಯುವಕ ಅಮ್ಮನ ಕಾಲಿಗೆ ನಮಸ್ಕಾರ ಮಾಡುತ್ತಿದ್ದಾರೆ ಎಂದು ತಮ್ಮ ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಪೊಲೀಸ್ ಅಧಿಕಾರಿಯಾಗಿ ತರಬೇತಿ ಪೂರ್ಣಗೊಳಿಸಿದ ಯುವಕ ತನ್ನ ಸಾಧನೆ ನೋಡಲು ಪದವಿ ಪ್ರದಾನ ಸಮಾರಂಭಕ್ಕೆ ಬರಲು ಅಮ್ಮನಿಗೆ ಸಾಧ್ಯವಾಗದ ಕಾರಣ ಸಮವಸ್ತ್ರದಲ್ಲೇ ನೇರ ತನ್ನೂರಿಗೆ ತೆರಳಿದ್ದು, ಈ ವೇಳೆ ಅಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದನ್ನು ಕಂಡು ಅಲ್ಲಿಯೇ ಕಾಲಿಗೆ ನಮಸ್ಕಾರಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಇದುವರೆಗೂ 17 ಸಾವಿರ ಮಂದಿ ಲೈಕ್ ಮಾಡಿದ್ದಾರೆ. 3 ಸಾವಿರ ಮಂದಿ ರೀಟ್ವೀಟ್ ಮಾಡಿದ್ದಾರೆ. ಇದು ತಾಯಿಗೆ ಹೆಮ್ಮೆಯ ಸಮಯವಾಗಿದ್ದು, ಮಕ್ಕಳು ಸಾಧನೆ ಮಾಡಲು ಪೋಷಕರು ತಮ್ಮ ಸರ್ವಸ್ವವವನ್ನು ತ್ಯಾಗ ಮಾಡುತ್ತಾರೆ ಎಂದು ಟ್ವಿಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

    https://twitter.com/NewIndiaSpeaks/status/1044833586803867648?

    ಗಂಡನನ್ನು ಕಳೆದುಕೊಂಡ ತಾಯಿ ಮಗನನ್ನು ಬೆಳೆಸಲು ಎಲ್ಲಾ ಜವಾಬ್ದಾರಿಯನ್ನು ಒಬ್ಬರೇ ನಿರ್ವಹಿಸಿದ್ದು, ಸದ್ಯ ಅವರ ಮಗ ಉತ್ತಮ ಸಾಧನೆ ಮಾಡಿದ್ದಾರೆ. ಇಂತಹ ಮೌಲ್ಯಗಳು ಸಮಾಜದಲ್ಲಿ ಇಂದಿಗೂ ಇರುವುದರಿಂದ ನಾವು ಜೀವಿಸಲು ಸಾಧ್ಯವಾಗುತ್ತಿದೆ ಎಂದು ಜಯರಾಮ್ ಎಂಬವರು ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

    ಆದರೆ ಫೋಟೋದಲ್ಲಿರುವ ಅಧಿಕಾರಿ ಯಾರು ಎಂಬುದು ಮಾತ್ರ ರಿವೀಲ್ ಆಗಿಲ್ಲ. ಆ ಅಧಿಕಾರಿ ಯಾರು ಎಂಬ ಮಾಹಿತಿ ಇದೆಯಾ ಎಂದು ಟ್ವಿಟ್ಟಿಗರು ಭಾಸ್ಕರ್ ರಾವ್ ಅವರನ್ನು ಕೋರಿದ್ದು, ಈ ಕುರಿತು ಮಾಹಿತಿ ಕಲೆ ಹಾಕುತ್ತಿರುವುದಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://twitter.com/Shirina777/status/1044236229896593408?

  • ಹೇಳಿದ್ದು 520, ವಿತರಣೆಯಾಗಿದ್ದು 257 – ಉಳಿದ ಸೀರೆ ಎಲ್ಲಿ ಹೋಯ್ತು: ಅಧಿಕಾರಿಗಳಿಗೆ ಮಹಿಳೆಯರಿಂದ ತರಾಟೆ

    ಹೇಳಿದ್ದು 520, ವಿತರಣೆಯಾಗಿದ್ದು 257 – ಉಳಿದ ಸೀರೆ ಎಲ್ಲಿ ಹೋಯ್ತು: ಅಧಿಕಾರಿಗಳಿಗೆ ಮಹಿಳೆಯರಿಂದ ತರಾಟೆ

    ದಾವಣಗೆರೆ: ರೇಷ್ಮೆ ಸೀರೆ ಅಂದರೆ ಯಾವ ಮಹಿಳೆಯರಿಗೆ ಇಷ್ಟವಾಗಲ್ಲ ಹೇಳಿ. ಅದರಲ್ಲೂ 15 ಸಾವಿರ ರೂ. ಮೌಲ್ಯದ ಸೀರೆ ಡಿಸ್ಕೌಂಟ್ ಬೆಲೆಯಲ್ಲಿ ಸಿಗುತ್ತೆ ಅಂದರೆ ನಾರಿಮಣಿಯರು ಸುಮ್ಮನಿರುತ್ತರಾ? ನಾ ಮುಂದು ತಾ ಮುಂದೆ ಅಂತ ಸೀರೆಗಾಗಿ ಮುಗಿ ಬೀಳುತ್ತಾರೆ. ಆದರೆ ಇಂದು ದಾವಣಗೆರೆಯಲ್ಲಿ ಡಿಸ್ಕೌಂಟ್ ಸೀರೆಗೆ ಮುಗಿಬಿದ್ದಿದ್ದ ಮಹಿಳೆಯರಿಗೆ ಸಿಕ್ಕಿದ್ದು ಮಾತ್ರ ನಿರಾಸೆ.

    ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್‍ಐಸಿ) ವತಿಯಿಂದ ವರಮಹಾಲಕ್ಷ್ಮಿ ಹಬ್ಬಕ್ಕೆ ಕಡಿಮೆ ಬೆಲೆಗೆ ಸೀರೆ ವಿತರಣೆ ಮಾಡಲಾಗುತಿತ್ತು. ದಾವಣಗೆರೆ ನಗರದ ರೋಟರಿ ಬಾಲ ಭವನದಲ್ಲಿ ರೇಷ್ಮೆ ಸೀರೆ ವಿತರಣೆ ಸಿದ್ಧತೆ ನಡೆಸಲಾಗಿತ್ತು. ಹೀಗಾಗಿ ನೂರಾರು ಮಂದಿ ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರು. ಆದರೆ ಸರತಿ ಸಾಲಿನಲ್ಲಿ ನಿಂತರೂ ಸೀರೆ ಸಿಗದ ವೇಳೆ ಮಹಿಳೆಯರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಮಹಿಳೆಯರನ್ನು ನಿಯಂತ್ರಿಸಲು ಹರ ಸಾಹಸ ಪಟ್ಟಿದ್ದಾರೆ.

    ನಗರದಲ್ಲಿ 520 ಸೀರೆ ವಿತರಣೆ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದರು. ಆದರೆ ಇದರಲ್ಲಿ ಕೇವಲ 257 ಸೀರೆ ಮಾತ್ರ ನೀಡಲಾಗಿದೆ. ಉಳಿದ ಸೀರೆಗಳು ಏನಾದವು ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಸಅಧಿಕಾರಿಗಳು ಅವುಗಳನ್ನು ಮಾರಾಟ ಮಾಡಿದ್ದಾರೆ ಎಂದು ಮಹಿಳೆಯರು ಆರೋಪ ಮಾಡಿದ್ದಾರೆ.

    ಸೀರೆ ಪಡೆಯಲು ಆಧಾರ್ ಕಾರ್ಡ್ ನೀಡಿ ನೋಂದಣಿ ಮಾಡಿಸಿಕೊಂಡವರಿಗೆ ಸೀರೆ ವಿತರಣೆಗೆ ಸಿದ್ಧತೆ ಮಾಡಲಾಗಿತ್ತು. ಜೊತೆಗೆ ನೋಂದಣಿ ಮಾಡಿದ ಮಹಿಳೆಯರಿಗೆ ಟೋಕನ್ ನೀಡಿ ಸೀರೆ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಸೀರೆ ವಿತರಣೆಯಲ್ಲಿ ಲೋಪ ಮಾಡಲಾಗಿದೆ ಎಂಬ ಮಹಿಳೆಯರ ಆರೋಪ ಸುಳ್ಳು. ಅಧಿಕಾರಿಗಳು ನಮಗೆ ಕೇವಲ 257 ಸೀರೆಗಳನ್ನು ಮಾತ್ರ ವಿತರಣೆ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ ನಾವು ನೀಡಿದ್ದೇವೆ ಎಂದು ಕೆಎಸ್‍ಐಸಿ ವ್ಯವಸ್ಥಾಪಕ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗಳನ್ನು ಆಫೀಸರ್ ಮಾಡಲು ದರೋಡೆಗೆ ಇಳಿದ ತಂದೆ

    ಮಗಳನ್ನು ಆಫೀಸರ್ ಮಾಡಲು ದರೋಡೆಗೆ ಇಳಿದ ತಂದೆ

    -ದರೋಡೆಗೆ ಧಾರಾವಾಹಿಯೇ ಸ್ಫೂರ್ತಿಯಂತೆ!

    ಪಾಟ್ನಾ: ತಂದೆಯೊಬ್ಬ ಮಗಳನ್ನು ಆಫೀಸರ್ ಮಾಡುವುದಕ್ಕಾಗಿ ದರೋಡೆ ಮಾಡಲು ಪ್ರಾರಂಭಿಸಿದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.

    ರಾಮ್ ಕಿಶೋರ್ ಸಿಂಗ್ ಅಲಿಯಾಸ್ ಬಾಬಾ ಎಂಬತಾನೇ ದರೋಡೆಗೆ ಇಳಿದ ತಂದೆ. ಶನಿವಾರ ಪೊಲೀಸರು ಬಂಧಿಸಿದ್ದ ನಾಲ್ವರು ದರೋಡೆಕೋರರಲ್ಲಿ ಈತನು ಒಬ್ಬನಾಗಿದ್ದು, ಆರೋಪಿಗಳೆಲ್ಲಾ ಪಾಟ್ನಾದ ನಿವಾಸಿಗಳಾಗಿದ್ದಾರೆ. ಕಿಶೋರ್ ಆರು ತಿಂಗಳ ಹಿಂದೆ ಈ ಗ್ಯಾಂಗ್ ಅನ್ನು ಸೇರಿದ್ದೇನೆಂದು ಪೊಲೀಸರಿಗೆ ತಿಳಿಸಿದ್ದಾನೆ. ನನ್ನ 12 ವರ್ಷದ ಮಗಳ ಶಾಲಾ ಶುಲ್ಕ ಹಾಗೂ ಟ್ಯೂಷನ್ ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಳ್ಳತನ ಮಾಡಲು ಶುರುಮಾಡಿದೆ ಎಂದು ಹೇಳಿದ್ದಾನೆ.

    ಕಿಶೋರ್ ಸಿಂಗ್ ಮೂಲತಃ ಪಾಟ್ನಾದ ದೇವಿ ಕಾಲೋನಿ ನಿವಾಸಿಯಾಗಿದ್ದು, ಮಗಳನ್ನು ಆಫೀಸರ್ ಮಾಡುವುದಕ್ಕೆ ದೂರದರ್ಶನದಲ್ಲಿ ಬರುವ ‘ಅಫ್ಸಾರ್ ಬಿಟಿಯಾ’ ಧಾರಾವಾಹಿ ನನ್ನ ಸ್ಫೂರ್ತಿ ಎಂಬುದು ತನಿಖೆಯ ವೇಳೆ ತಿಳಿದಿದೆ. ಕಿಶೋರ್ ಈ ಹಿಂದೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, 6,000 ರೂ. ವೇತನ ಬರುತ್ತಿತ್ತು. ಆ ಕೆಲಸವನ್ನು ಬಿಟ್ಟು ಗ್ಯಾಂಗ್ ಸೇರಿದ್ದಾನೆ. ಮಗಳು ವೈಶಾಲಿ ಜಿಲ್ಲೆಯಿಂದ 15 ಕಿ.ಮೀ ದೂರವಿರುವ ಪ್ರಾಥಮಿಕ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಓದುತ್ತಿದ್ದಾಳೆ.

    ನಾನು ನನ್ನ ಮಗಳ ವಿದ್ಯಾಭ್ಯಾಸಕ್ಕಾಗಿ ಈ ಕೆಲಸವನ್ನು ಮಾಡಿದೆ. ನನನ್ನು ಕ್ಷಮಿಸಿ ನಾನು ಅಪರಾಧ ಮಾಡಿದ್ದೇನೆ ಎಂದು ಕ್ಷಮೆ ಕೇಳಿದ್ದಾನೆ ಎಂದು ವೈಶಾಲಿಯ ಪೊಲೀಸ್ ಅಧಿಕಾರಿ ಎಂ.ಎಸ್ ಧಿಲ್ಲನ್ ಸಿಂಗ್ ಹೇಳಿದರು.

    ಬಿಹಾರದ ಇತರ ಜಿಲ್ಲೆಗಳಲ್ಲಿ ದರೋಡೆಕೋರರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಪೊಲೀಸ್ ಕಾರ್ಯಾಚರಣೆ ಮಾಡುವಾಗ ರಾಜ್ ಕಿಶೋರ್ ಸಿಂಗ್, ಕೃಷ್ಣಕುಮಾರ್, ಮುನ್ನಾ ಯಾದವ್ ಮತ್ತು ರೋಶನ್ ಕುಮಾರ್ ಎಂಬವರನ್ನು ಶನಿವಾರ ಬಂಧಿಸಲಾಗಿತ್ತು.

    ಬಂಧಿಸಲಾಗಿದ್ದ ಆರೋಪಿಗಳಿಂದ 20 ಲಕ್ಷ ರೂ. ಮೌಲ್ಯದ ಆಭರಣಗಳು, ಇಬ್ಬರ ಬಳಿ ಬಂದೂಕುಗಳು ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 10 ಲಕ್ಷ ರೂ. ನಗದು ಬಹುಮಾನ ಮತ್ತು ಯುಎಸ್ ಡಾಲರ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಪೊಲೀಸರು ವಿದೇಶಿ ಕರೆನ್ಸಿಗಳ ಮೌಲ್ಯವನ್ನು ಬಹಿರಂಗಪಡಿಸಿಲ್ಲ. ಅಷ್ಟೇ ಅಲ್ಲದೇ ಕದ್ದ ಹಣದಿಂದ ಬಂಧಿತ ಆರೋಪಿಗಳು ಆಸ್ತಿಗಳನ್ನು ಖರೀದಿಸಿದ್ದಾರೆ. ಕೃಷ್ಣ ಯಾದವ್ ಇತ್ತೀಚೆಗೆ ದಾನಾಪುರದಲ್ಲಿ 15 ಲಕ್ಷ ರೂ. ಮೌಲ್ಯದ ಭೂಮಿಯನ್ನು ಖರೀದಿಸಿದ್ದು, ರೌಶನ್ ಕುಮಾರ್ ಎಂಬವನು ಸ್ಯಾಮಾಪಚ್ಚಕ್ ನಲ್ಲಿ ಅದೇ ಬೆಲೆಯಲ್ಲಿ ಖರೀದಿಸಿದ್ದಾನೆ. ಇದೀಗ ಆಸ್ತಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv