Tag: officer

  • ಲಂಚ ಪಡೆಯುವಾಗ ತಗ್ಲಾಕೊಂಡ ಅಧಿಕಾರಿ – ಬನಿಯನ್, ಟವೆಲ್ ನಲ್ಲಿಯೇ ಕರ್ಕೊಂಡು ಬಂದ್ರು!

    ಲಂಚ ಪಡೆಯುವಾಗ ತಗ್ಲಾಕೊಂಡ ಅಧಿಕಾರಿ – ಬನಿಯನ್, ಟವೆಲ್ ನಲ್ಲಿಯೇ ಕರ್ಕೊಂಡು ಬಂದ್ರು!

    – ಮನೆಯಲ್ಲಿಯೇ ನಡೀತಾ ಇತ್ತು ಡೀಲ್

    ಲಕ್ನೋ: ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಯನ್ನು ಎಸಿಬಿ ಬೇಟೆಯಾಡಿದೆ. ಹಣ ಪಡೆಯುತ್ತಿರುವ ಸಮಯದಲ್ಲಿ ಎಂಟ್ರಿ ಕೊಟ್ಟ ಭ್ರಷ್ಟಾಚರ ನಿಗ್ರಹ ದಳ (ಎಸಿಬಿ) ತಂಡ ಟವೆಲ್, ಬನಿಯನ್ ಮೇಲೆಯೇ ಅಧಿಕಾರಿಯನ್ನು ಕಚೇರಿಗೆ ಕರೆ ತಂದಿದ್ದಾರೆ.

    ಉತ್ತರ ಪ್ರದೇಶದ ಸಂತ ಕಬೀರ್ ನಗರದ ರಾಮ್ ಮಿಲನ್ ಯಾದವ್ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿರುವಾಗ ತಗ್ಲಾಕೊಂಡ ದ್ವಿತೀಯ ದರ್ಜೆಯ ನೌಕರ. ಅಬ್ದುಲ್ ಖಾನ್ ಎಂಬವರ ವರದಿ ಸಿದ್ಧಪಡಿಸಲು ರಾಮ್ ಮಿಲನ್ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಮುಂದಿಟ್ಟಿದ್ದರಿಂದ ಎಸಿಬಿಗೆ ದೂರು ನೀಡಿದ್ದರು. ಇದನ್ನೂ ಓದಿ: ಸವಾಲುಗಳನ್ನು ಮೆಟ್ಟಿಲಾಗಿಸಿಕೊಂಡು ಕೆಲಸ ಮಾಡ್ತೇನೆ: ಸಿಎಂ ಬೊಮ್ಮಾಯಿ

    ಸದ್ಯ ಆರೋಪಿಯನ್ನು ಠಾಣೆಗೆ ಕರೆ ತಂದಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಎಸಿಬಿ ಅಧಿಕಾರಿ ರಾಮಧಾರಿ ಮಿಶ್ರಾ, ದೂರು ಸಲ್ಲಿಕೆಯಾಗಿದ್ದರಿಂದ ಲಂಚ ಪಡೆಯುವ ವೇಳೆ ನಮ್ಮ ತಂಡ ದಾಳಿ ನಡೆಸಿತ್ತು. ಸದ್ಯ ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಡ್ಡ ಬಿಟ್ಟಾಗ ಶಿವಾಜಿ, ಈಗ ಬಸವಣ್ಣ: ಶಾಸಕ ಯತ್ನಾಳ್

    ಉಪ ನಿರೀಕ್ಷಕರಾಗಿರುವ ರಾಮ್ ಯಾದವ್ ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದರು. ಜಮೀನು ವಿಷಯವಾಗಿ ವರದಿ ಸಿದ್ಧಪಡಿಸಲು 10 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದ್ರೆ ನನಗೆ ಹಣ ನೀಡಲು ಇಷ್ಟವಿರಲಿಲ್ಲ. ಹಾಗಾಗಿ ಎಸಿಬಿಗೆ ದೂರು ನೀಡಿದ್ದೆ ಎಂದು ಅಬ್ದುಲ್ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಒಬ್ಬನೊಂದಿಗೆ ತಾಯಿ-ಮಗಳ ಅಕ್ರಮ ಸಂಬಂಧ – ಗೂಢಚಾರಿಕೆ ನಡೆಸ್ತಿದ್ದವನನ್ನ ಕೊಂದೇ ಬಿಟ್ರು!

  • ಅಂಗನವಾಡಿ ಕೇಂದ್ರಕ್ಕೆ ಹಾವುಗಳ ಕಾಟ – ಅಧಿಕಾರಿಗಳ ವಿರುದ್ಧ ಆಕ್ರೋಶ

    ಅಂಗನವಾಡಿ ಕೇಂದ್ರಕ್ಕೆ ಹಾವುಗಳ ಕಾಟ – ಅಧಿಕಾರಿಗಳ ವಿರುದ್ಧ ಆಕ್ರೋಶ

    ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕ ಕಡಬೂರಿನ ಅಂಗನವಾಡಿ ಸಂಖ್ಯೆ 1 ಕ್ಕೆ ಹಾವುಗಳ ಕಾಟ ಹೆಚ್ಚಾಗಿದ್ದು, ಸಿಬ್ಬಂದಿ ಅಂಗನವಾಡಿಗೆ ಹೋಗಲು ಹೆದರುತ್ತಿದ್ದಾರೆ. ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟೆಗಳು ಹೆಚ್ಚಾಗಿ ಬೆಳೆದಿರುವುದರಿಂದ ಪ್ರತೀದಿನ ಹಾವುಗಳು ಪ್ರತ್ಯಕ್ಷವಾಗುತ್ತಿವೆ.

    ವಿಷಪೂರಿತ ಜಂತುಗಳು ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಸಹ ಆತಂಕಗೊಂಡಿದ್ದಾರೆ. ಇಂದು ಮಕ್ಕಳು ಹಾಗೂ ಗರ್ಭಿಣಿ, ಬಾಣಂತಿಯರಿಗೆ ವಿತರಿಸಬೇಕಿದ್ದ ಆಹಾರ ಸಾಮಗ್ರಿ ಇರಿಸಿದ್ದ ಸ್ಥಳದಲ್ಲೇ ಹಾವು ಪ್ರತ್ಯಕ್ಷವಾಗಿದೆ. ಆಹಾರ ಸಾಮಗ್ರಿಗಳನ್ನ ತೆಗದು ಗ್ರಾಮಸ್ಥರು ಹಾವನ್ನು ಕೊಂದಿದ್ದಾರೆ.

    ಅಂಗನವಾಡಿ ಕೇಂದ್ರದ ಸುತ್ತಲಿನ ವಾತಾವರಣ ಸರಿಯಿಲ್ಲದ ಕಾರಣ ಹಾವು, ಚೇಳು ಕಾಣಿಸಿಕೊಳ್ಳುತ್ತಲೇ ಇರುತ್ತವೆ. ವಿಷ ಜಂತುಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಗಸ್ಟ್‌ನಲ್ಲಿ ಪರೀಕ್ಷೆಗೆ ಅವಕಾಶ – ಕೊರಟಗೆರೆ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಭರವಸೆ

  • ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ -ಬಲೆಗೆ ಬಿದ್ದವರೆಲ್ಲ ಕೋಟಿ ಕೋಟಿ ಕುಳಗಳು

    ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ -ಬಲೆಗೆ ಬಿದ್ದವರೆಲ್ಲ ಕೋಟಿ ಕೋಟಿ ಕುಳಗಳು

    ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ 9 ಸರ್ಕಾರಿ ನೌಕರರಿಗೆ ಸೇರಿದ 43 ಸ್ಥಳಗಳಲ್ಲಿ ಒಟ್ಟು 310 ಎಸಿಬಿ ಅಧಿಕಾರಿಗಳಿಂದ 43 ತಂಡಗಳಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಭ್ರಷ್ಟ ಅಧಿಕಾರಿಗಳ ಕೋಟಿ ಕೋಟಿ ಆಸ್ತಿಯನ್ನು ಎಸಿಬಿ ತಂಡ ಪತ್ತೆ ಹಚ್ಚಿದೆ.

    ದಾಳಿ ವೇಳೆ ಒಬ್ಬರಿಗಿಂತ ಒಬ್ಬರ ಆಸ್ತಿ ಕಮ್ಮಿಯೇನೂ ಇಲ್ಲ. ಎಲ್ಲರೂ ಕೂಡ ಕೋಟಿ, ಕೋಟಿ ಆಸ್ತಿ ಮಾಡಿರೋರೆ. ಯಾರ್ಯಾರ ಮನೆ ಮೇಲೆ ದಾಳಿ ನಡೆಸಿತ್ತು, ಸಿಕ್ಕ ಆಸ್ತಿಪಾಸ್ತಿ ಎಷ್ಟು ಅಂತಾ ನೋಡೋದಾದ್ರೆ.

    1. ಜಿ ಶ್ರೀಧರ್- ಕಾರ್ಯ ಪಾಲಕ ಅಭಿಯಂತರ, ಜಿಲ್ಲಾ ನಗರಾಭಿವೃದ್ಧಿ ಕೋಶ, ಡಿಸಿ ಕಚೇರಿ ಮಂಗಳೂರು.
    ಮೈಸೂರಿನಲ್ಲಿ ಒಂದು ಮನೆ, ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ಮನೆ, ವಿವಿಧ ನಗರಗಳಲ್ಲಿ ನಾಲ್ಕು ಸೈಟ್ ಗಳು, ಬ್ಯಾಂಕ್ ಉಳಿತಾಯ ಖಾತೆ ಡೆಪಾಸಿಟ್ ಇನ್ಶೂರೆನ್ಸ್, ಡೆಪಾಸಿಟ್ ಬಾಂಡ್ ಗಳು, ಒಂದು ಕಾರು, ಎರಡು ದ್ವಿಚಕ್ರ ವಾಹನ, ಚಿನ್ನ, ಬೆಳ್ಳಿ ಆಭರಣಗಳು ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು ಪತ್ತೆಯಾಗಿವೆ.

    2.ಸುರೇಶ್- ಎಇ ಗ್ರಾಮೀಣ ನೀರು ಸರಬರಾಜು ಅಭಿವೃದ್ಧಿ ಉಪ ವಿಭಾಗ ಬಸವ ಕಲ್ಯಾಣ ಬೀದರ್ ಜಿಲ್ಲೆ
    ಬಸವ ಕಲ್ಯಾಣದಲ್ಲಿ ಒಂದು ಮನೆ, ಬೀದರ್ ಜಿಲ್ಲೆ ಬಾಲ್ಕಿಯಲ್ಲಿ ಒಂದು ಪೆಟ್ರೋಲ್ ಬಂಕ್, ನಾಲ್ಕು ನಿವೇಶನ, ವಿವಿಧ ಬ್ಯಾಂಕ್ ಗಳಲ್ಲಿ ಎಫ್ಡಿ ಡೆಪಾಸಿಟ್, ಬೆಲೆ ಬಾಳುವ ಚಿನ್ನಾ ಭರಣಗಳು, ಒಂದು ದ್ವಿಚಕ್ರ ವಾಹನ ಪತ್ತೆಯಾಗಿದೆ. ನಿವಾಸದಲ್ಲಿ 15 ಲಕ್ಷ ನಗದು, 750 ಗ್ರಾಂ ಚಿನ್ನ, 3 ನಿವೇಶನಗಳ ಆಸ್ತಿ ಪತ್ರ ಪತ್ತೆಯಾಗಿದೆ. ಜೊತೆಗೆ 10 ಲಕ್ಷ ಎಫ್‍ಡಿ ಹಾಗೂ 20 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರೋದು ದಾಳಿಯಲ್ಲಿ ಬೆಳಕಿಗೆ ಬಂದಿದೆ

    3.ಆರ್.ಪಿ ಕುಲಕರ್ಣಿ ಪ್ರಧಾನ ಇಂಜಿನಿಯರ್ ಮುಖ್ಯ ಯೋಜನಾಧಿಕಾರಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ, ಬೆಂಗಳೂರು
    ಬೆಂಗಳೂರಲ್ಲಿ ಒಂದು ಮನೆ, ನಾಲ್ಕು ಫ್ಲ್ಯಾಟ್, ವಿವಿಧ ಕಡೆ ಮೂರು ನಿವೇಶನ, ಎರಡು ಕಾರು, ಒಂದು ದ್ವಿಚಕ್ರ ವಾಹನ, ಚಿನ್ನ, ಬೆಳ್ಳಿ ಆಭರಣಗಳು. ಬ್ಯಾಂಕ್‍ ಖಾತೆಗಳಲ್ಲಿ ಠೇವಣಿಗಳು, ಬೆಲೆ ಬಾಳುಗ ಗೃಹಪಯೋಗಿ ವಸ್ತುಗಳು ಪತ್ತೆಯಾಗಿದೆ.

    4.ಎ. ಕೃಷ್ಣಮೂರ್ತಿ ಹಿರಿಯ ಮೋಟಾರು ವಾಹನ ನಿರೀಕ್ಷಕರು ಕೋರಮಂಗಲ ಆರ್‍ ಟಿಓ ಕಚೇರಿ ಬೆಂಗಳೂರು
    ಬೆಂಗಳೂರಿನ ಹಂಪಿ ನಗರದಲ್ಲಿ ಒಂದು ಮನೆ, ದೊಮ್ಮಲೂರಲ್ಲಿ ಒಂದುಮನೆ, ಬೆಂಗಳೂರಲ್ಲಿ ಒಂದು ಶಾಲಾ ಕಟ್ಟಡ, ತುಮಕೂರು ಕೊರಟಗೆರೆಯಲ್ಲಿ ಫಾರ್ಮ್ ಹೌಸ್ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ 30 ಸೈಟ್ ಗಳಿವೆ. ಚಿನ್ನ, ಬೆಳ್ಳಿ ಆಭರಣಗಳು, ವಿವಿಧ ಕಡೆಗಳಲ್ಲಿ 82 ಎಕರೆ ಕೃಷಿ ಜಮೀನು, ನಾಲ್ಕು ದ್ವಿಚಕ್ರ ವಾಹನ, ಮೂರು ಕಾರುಗಳು, ಒಂದು ಟೆಂಪೋ ಮ್ಯಾಕ್ಸ್ ಕ್ಯಾಬ್, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು.

    5.ಕೃಷ್ಟ ಎಸ್ ಹೆಬ್ಬೂರು- ಕಾರ್ಯ ನಿರ್ವಾಹಕ ಅಭಿಯಂತರ ಕೆಆರ್.ಐಡಿ.ಎಲ್ ಉಡುಪಿ ಜಿಲ್ಲೆ
    ಉಡುಪಿಯಲ್ಲಿ ಒಂದು ಮನೆ, ಬೆಂಗಳೂರು ನಗರ ಜಿಗಣಿಯಲ್ಲಿ ಒಂದು ಮನೆ, ಹುಬ್ಬಳ್ಳಿಯಲ್ಲಿ ಒಂದು ಮನೆ, ಉಡುಪಿ ಜಿಲ್ಲೆ ಶಿವಳ್ಳಿ ಗ್ರಾಮದಲ್ಲಿ 15.66 ಸೆಂಟ್ಸ್ ನಿವೇಶನ ಎರಡು ದ್ವಿಚಕ್ರ ವಾಹನ, ಒಂದು ಕಾರು, ಚಿನ್ನ, ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು,

    ಇದನ್ನೂ ಓದಿ: ಮಂಗಳೂರಿನಲ್ಲಿ ಯೂನಿಸೆಕ್ಸ್ ಸೆಲೂನ್‍ಗೆ ನುಗ್ಗಿ ಮಹಿಳೆಗೆ ಕಿರುಕುಳ

    6.ಟಿ. ವೆಂಕಟೇಶ್- ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಮಾಜಿಕ ಅರಣ್ಯ, ಮಂಡ್ಯ ಜಿಲ್ಲೆ
    ಮೈಸೂರು ನಗರದಲ್ಲಿ ಎರಡು ಮನೆ, ವಿವಿಧ ನಗರಗಳಲ್ಲಿ 9 ನಿವೇಶನ, 12 ಎಕರೆ ಕೃಷಿ ಜಮೀನು, ಒಂದು ಕಾರು, ಮೂರು ದ್ವಿಚಕ್ರ ವಾಹನ, ಚಿನ್ನ, ಬೆಳ್ಳಿ ಆಭರಣಗಳು, ನಗದು ಹಣ, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು.

    7.ಹೆಚ್.ಆರ್ ಕೃಷ್ಣಮೂರ್ತಿ- ಸಹಾಯಕ ನಿರ್ದೇಶಕರು ಮಾಲೂರು ಟೌನ್ ಪ್ಲ್ಯಾನಿಂಗ್ ಅಥಾರಿಟಿ ಮಾಲೂರು ಕೋಲಾರಜಿಲ್ಲೆ
    ಬೆಂಗಳೂರು ಶಿವಮೊಗ್ಗ, ದಾವಣಗೆರೆಯಲ್ಲಿ ತಲಾ ಒಂದೊಂದು ಮನೆ, ವಿವಿಧ ಪ್ರಮುಖ ನಗರಗಳಲ್ಲಿ ನಾಲ್ಕು ನಿವೇಶನ, ಚನ್ನಗಿರಿಯಲ್ಲಿ 15 ಎಕರೆ 15 ಗುಂಟೆ ಕೃಷಿ ಜಮೀನು, ಎರಡು ದ್ವಿಚಕ್ರ ವಾಹನ, ಒಂದು ಕಾರು, ಚಿನ್ನ, ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು

    ಇದನ್ನೂ ಓದಿ: ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ, ಕೋಮಾದಲ್ಲಿಯೂ ಇಲ್ಲ: ಗೋಪಾಲ್ ರಾಜ್

    8.ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಎಇಇ ಒನ್ 10 ಕೆವಿ ನೋಡೆಲ್ ಅಧಿಕಾರಿ ಕೆಪಿಟಿಸಿಎಲ್, ಪ್ರಭಾರಿ ಇಇ- ವಿಜಯಪುರ
    ವಿಜಯಪುರದಲ್ಲಿ ಮೂರು ವಾಸದ ಮನೆ, ವಿವಿಧ ಕಡೆಗಳಲ್ಲಿ ನಾಲ್ಕು ನಿವೇಶನ, 35 ಎಕರೆ ಕೃಷಿ ಜಮೀನು, ಒಂದು ಕಾರು ಎರಡು ದ್ವಿಚಕ್ರ ವಾಹನ, ಚಿನ್ನ ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು.

    9.ಎ.ಎನ್ ವಿಜಯ್ ಕುಮಾರ್- ಎಲೆಕ್ಟ್ರಿಕಲ್ ಇನ್ಸ್ ಪೆಕ್ಟರ್, ಜೆಸ್ಕಾಂ ಬಳ್ಳಾರಿ
    ಬೆಂಗಳೂರು, ಬಳ್ಳಾರಿಯಲ್ಲಿ ತಲಾ ಒಂದರಂತೆ ಒಂದೊಂದು ಮನೆ, ವಿವಿಧ ನಗರಗಳಲ್ಲಿ ಒಟ್ಟು ಎಂಟು ನಿವೇಶನ, ಎರಡು ಕಾರು, ಒಂದು ದ್ವಿಚಕ್ರ ವಾಹನ, ಚಿನ್ನ ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು ವಸ್ತುಗಳು ಪತ್ತೆಯಾಗಿವೆ.

  • ಸೋಯಾ ಬೀಜ ಸಿಗದಿದ್ದಕ್ಕೆ ಕೃಷಿ ಅಧಿಕಾರಿಯನ್ನು ಗೇಟಿಗೆ ಕಟ್ಟಿ ಹಾಕಿದ ರೈತರು

    ಸೋಯಾ ಬೀಜ ಸಿಗದಿದ್ದಕ್ಕೆ ಕೃಷಿ ಅಧಿಕಾರಿಯನ್ನು ಗೇಟಿಗೆ ಕಟ್ಟಿ ಹಾಕಿದ ರೈತರು

    ಬೀದರ್: ಸಚಿವ ಪ್ರಭು ಚವ್ಹಾಣ್ ಉಸ್ತುವಾರಿ ವಹಿಸಿಕೊಂಡಿರುವ ಬೀದರ್ ಜಿಲ್ಲೆಯಲ್ಲಿ ರೈತರು, ನಾಟಿ ಮಾಡಲು ಸೋಯಾ ಬೀಜ ಸಿಗದಿದ್ದಕ್ಕೆ ನೊಂದು ಕೃಷಿ ಅಧಿಕಾರಿಯನ್ನು ರೈತ ಸಂಪರ್ಕ ಕೇಂದ್ರದ ಗೇಟಿಗೆ ಕಟ್ಟಿ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

    ಬೀದರ್‍ನ ರೈತರು ನಾಟಿ ಮಾಡಲು ಬೀಜ ಸಿಗದೆ ನೊಂದು ಹೋಗಿದ್ದಾರೆ. ಕಳೆದ ಒಂದು ವಾರದಿಂದ ಔರಾದ್ ತಾಲೂಕಿನ ರೈತ ಸಂಪರ್ಕ ಕೇಂದ್ರಕ್ಕೆ ಬಿತ್ತನೆ ಬೀಜಕ್ಕಾಗಿ ಕುಗ್ರಾಮಗಳ ಹಾಗೂ ತಾಂಡಾದ ರೈತರು ಅಲೆದು ಅಲೆದು ಸುಸ್ತಾಗಿ ಹೋಗಿದ್ದಾರೆ. ಇದರಿಂದ ಆಕ್ರೋಶಗೊಂಡು ಇಂದು ಬೀಜ ಸಿಗದಿದಕ್ಕೆ ರೈತರು ಅಧಿಕಾರಿಯನ್ನು ಗೇಟಿಗೆ ಕಟ್ಟಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಅಪರೂಪದ ನೀಲ್‍ಗಾಯ್ ಪ್ರತ್ಯಕ್ಷ- ರೈತರಲ್ಲಿ ಆತಂಕ

    ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಭೀಮರಾವ್ ಶಿಂಧೆಯನ್ನು ಗೇಟಿಗೆ ಕಟ್ಟಿ ಹಾಕಿ ರೈತರು ಬೀತ್ತನೆ ಬೀಜಕ್ಕಾಗಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಮೊದಲೇ ಕೋವಿಡ್ ನಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು, ಕೃಷಿ ಅಧಿಕಾರಿಗಳ ಮಹಾ ನಿರ್ಲಕ್ಷ್ಯಕ್ಕೆ ಬೇಸತ್ತು ಹೋಗಿ ಅಧಿಕಾರಿಗಳ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

  • ಅಕ್ರಮ ಮರಳು ಅಡ್ಡೆ ಮೇಲೆ ದಾಳಿ – ಅಧಿಕಾರಿಗಳ ಮೇಲೆ ಕಲ್ಲು ತೂರಾಟ

    ಅಕ್ರಮ ಮರಳು ಅಡ್ಡೆ ಮೇಲೆ ದಾಳಿ – ಅಧಿಕಾರಿಗಳ ಮೇಲೆ ಕಲ್ಲು ತೂರಾಟ

    – ವಾಹನದ ಗಾಜು ಪುಡಿ ಪುಡಿ

    ಚಿಕ್ಕೋಡಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸುವಾಗ ಅಕ್ರಮ ದಂಧೆಕೋರರ ಗುಂಪು ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದರಿಂದ ವಾಹನದ ಗಾಜು ಪುಡಿ ಪುಡಿಯಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಲಭಾಂವಿ ಗ್ರಾಮದಲ್ಲಿ ನಡೆದಿದೆ.

    ಹುಕ್ಕೇರಿ ತಾಲೂಕಿನ ಹಿನ್ನೀರು ಪ್ರದೇಶದಲ್ಲಿ ಸಂಗ್ರಹವಾಗುವ ಮರಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಒಂದು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸಮೀಪದ ಮತ್ತೊಂದು ಅಡ್ಡೆಗೆ ದಾಳಿ ವೇಳೆ ಮರಳು ಸಂಗ್ರಹಿಸುತ್ತಿದ್ದ 20 ಜನರ ಗುಂಪು ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದೆ. ಬಳಿಕ ಜೀವಭಯದಿಂದ ಅಧಿಕಾರಿಗಳು ಅಲ್ಲಿಂದ ಹಿಂದಿರುಗಿದ್ದಾರೆ. ಇದನ್ನೂ ಓದಿ:ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಮೇಲಿನ ಹೆಲ್ಮೆಟ್ ನುಂಗಿದ ಆನೆ- ವೀಡಿಯೋ ವೈರಲ್

    ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಜಾಮೀನು ರಹಿತ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹುಕ್ಕೇರಿ ತಹಶೀಲ್ದಾರ್ ಡಾ.ಡಿ.ಎಚ್ ಹೂಗಾರ ತಿಳಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿ ಹಾಗೂ ಸರ್ಕಾರಿ ಆಸ್ತಿ ಹಾನಿ ಮಾಡಿದ ಹಿನ್ನೆಲೆಯಲ್ಲಿ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮನ್‍ಮುಲ್ ಹಗರಣ ಮತ್ತೆ ಇಬ್ಬರು ಮಹಿಳಾ ಅಧಿಕಾರಿಗಳ ಅಮಾನತು

    ಮನ್‍ಮುಲ್ ಹಗರಣ ಮತ್ತೆ ಇಬ್ಬರು ಮಹಿಳಾ ಅಧಿಕಾರಿಗಳ ಅಮಾನತು

    ಮಂಡ್ಯ: ಮನ್‍ಮುಲ್‍ಗೆ ನೀರು ಮಿಶ್ರಿತ ಹಾಲು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಅಮಾನತುಗೊಂಡ ಅಧಿಕಾರಿಗಳ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.

    ಈ ಪ್ರಕರಣ ಸಂಬಂಧಿಸಿದಂತೆ ಮನ್‍ಮುಲ್‍ನಲ್ಲಿ ಮೊದಲ ಹಂತದಲ್ಲಿ ನಾಲ್ವರು ಅಧಿಕಾರಿಗಳು, ಎರಡನೇ ಹಂತದಲ್ಲಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಮತ್ತೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ಹಾಲು ಮಹಾ ಮಂಡಳಿಯ ಜಂಟಿ ನಿರ್ದೇಶಕಿ ವಸಂತಲಾ ಹಾಗೂ ಮನ್‍ಮುಲ್‍ನ ಉಪ ವ್ಯವಸ್ಥಾಪಕಿ ಶೈಲಜಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಇದನ್ನೂ ಓದಿ: ನೀರು ಮಿಶ್ರಿತ ಹಾಲು ಕೇಸ್ – ಮನ್‍ಮುಲ್‍ನ 7 ಅಧಿಕಾರಿಗಳು ಅಮಾನತು

    ಕರ್ನಾಟ ಹಾಲು ಮಹಾ ಮಂಡಳಿಯ ಜಂಟಿ ನಿರ್ದೇಶಕಿ ವಸಂತಲಾ ಅವರು ಮನ್‍ಮುಲ್‍ಗೆ ಟ್ಯಾಂಕರ್‍ ಗಳ ಮೂಲಕ ಬರುತ್ತಿದ್ದ ಹಾಲಿನ ಗುಣಮಟ್ಟವನ್ನು ಪರಿಶೀಲನೆ ಮಾಡದ ಕಾರಣ ಕೆಎಂಎಫ್ ಎಂಡಿ ಸತೀಶ್ ಅವರು ಅಮಾನತು ಮಾಡಿದ್ದಾರೆ. ಮನ್‍ಮುಲ್‍ನ ಸಂಸ್ಕರಣಾ ವಿಭಾಗದ ಶೈಲಜಾ ಅವರು ಕರ್ತವ್ಯ ಲೋಪವೆಸಗಿದ ಕಾರಣ ಅವರು ಕೂಡ ಅಮಾನತಿಗೆ ಒಳಗಾಗಿದ್ದಾರೆ.ಇದನ್ನೂ ಓದಿ:  ಮಂಡ್ಯ ಎಎಸ್‍ಪಿಗೆ ಸಚಿವ ಸೋಮಶೇಖರ್ ಫುಲ್ ಕ್ಲಾಸ್

  • ಕಳ್ಳಬಟ್ಟಿ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ

    ಕಳ್ಳಬಟ್ಟಿ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ

    ಶಿವಮೊಗ್ಗ: ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮಲ್ಲಪ್ಪನಕಟ್ಟೆ ಬಳಿ ನಡೆದಿದೆ.

    ಮಲ್ಲಪ್ಪನಕಟ್ಟೆ ಬಳಿಯ ದಡದಲ್ಲಿ ಗುಂಪೊಂದು ಕಳ್ಳಬಟ್ಟಿ ತಯಾರಿಸುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. ಅಬಕಾರಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಕಳ್ಳಬಟ್ಟಿ ತಯಾರಿಸುತ್ತಿದ್ದ ತಂಡ ಸ್ಥಳದಿಂದ ಪರಾರಿಯಾಗಿದೆ. ಇದನ್ನು ಓದಿ: ರೈತರಿಂದ ಹಣ್ಣುಗಳನ್ನು ಖರೀದಿಸಿ ಸೋಂಕಿತರಿಗೆ ನೀಡಿದ ಉದ್ಯಮಿ

    ಕಳ್ಳಬಟ್ಟಿ ತಯಾರಿಸುತ್ತಿದ್ದವರಲ್ಲಿ ಮಳವಳ್ಳಿ ತಾಂಡಾದ ಬೀರನಾಯ್ಕ ಹಾಗೂ ಆತನ ತಾಯಿ ಲೋಕಿಬಾಯಿ ಎಂಬವರು ಪ್ರಮುಖರಾಗಿದ್ದು ಅವರು ಸಹ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿ ವೇಳೆ ಕಳ್ಳಬಟ್ಟಿ ತಯಾರಿಸಲು ಇಟ್ಟಿದ್ದ 135 ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ತಯಾರಿಸಿದ್ದ 9 ಲೀಟರ್ ಕಳ್ಳಬಟ್ಟಿಯನ್ನು ಜಪ್ತಿ ಮಾಡಿದ್ದಾರೆ. ದಾಳಿಯಲ್ಲಿ ಅಬಕಾರಿ ನಿರೀಕ್ಷಕ ಡಿ.ಎನ್.ಹನುಮಂತಪ್ಪ, ಉಪ ನಿರೀಕ್ಷಕ ಪಿ.ಜೆ.ಜಾನ್ ಸೇರಿದಂತೆ ಸಿಬ್ಬಂದಿ ಭಾಗಿಯಾಗಿದ್ದರು. ಇದನ್ನು ಓದಿ: ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಬೇಕಾದ ಎಲ್ಲಾ ಸಹಕಾರ ಸಿಗುತ್ತದೆ: ಅಶ್ವತ್ ನಾರಾಯಣ್

  • ಆದ್ಯತಾ ಗುಂಪಿನವರಿಗೆ ಲಸಿಕೆ – ಮೇ 31 ಕೊನೆಯ ದಿನ

    ಆದ್ಯತಾ ಗುಂಪಿನವರಿಗೆ ಲಸಿಕೆ – ಮೇ 31 ಕೊನೆಯ ದಿನ

    ಚಿಕ್ಕಬಳ್ಳಾಪುರ: ಆದ್ಯತಾ ಗುಂಪಿನವರಿಗೆ ಲಸಿಕಾಕರಣ ನಡೆಸಲು ಮೇ 31 ಕೊನೆ ದಿನಾಂಕ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್ ಕಬಾಡೆ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ 18 ರಿಂದ 44 ವರ್ಷದೊಳಗಿನ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ರಾಜ್ಯ ಸರ್ಕಾರ ಗುರುತಿಸಿ ಕೋವಿಡ್-19 ಲಸಿಕಾಕರಣವನ್ನು ನಡೆಸಲು ಸೂಚಿಸಿತ್ತು. ಅದರಂತೆ 18 ರಿಂದ 44 ವರ್ಷದ ಕೆಳಕಂಡ ಆದ್ಯತಾ ಗುಂಪಿನವರಿಗೆ ಕೋವಿಡ್ ಲಸಿಕಾಕರಣವನ್ನು ಮೇ 22 ರಿಂದ ಪ್ರಾರಂಭಿಸಲಾಗಿತ್ತು. ಸದ್ಯ ಮೇ 31ಕ್ಕೆ ಈ ಅಭಿಯಾನ ಅಂತ್ಯಗೊಳ್ಳಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹೇಳಿದ್ದಾರೆ.

    ಯಾರಿಗೆಲ್ಲ ಲಸಿಕೆ?
    ಅಂಗವೈಕಲ್ಯ ಹೊಂದಿರುವ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಒಬ್ಬ ಆರೈಕೆದಾರರು, ಖೈದಿಗಳು, ಚಿತಾಗಾರ/ಸ್ಮಶಾನ/ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು. ಆರೋಗ್ಯ ಕಾರ್ಯರ್ಕರ ನಿಕಟ ಕುಟುಂಬಸ್ಥರು, ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು, ಅಂಚೆ ಇಲಾಖೆ ಸಿಬ್ಬಂದಿಗಳು, ಬೀದಿ ಬದಿಯ ವ್ಯಾಪಾರ ಮಾಡುವವರು, ಭದ್ರತೆ ಮತ್ತು ಕಛೇರಿಗಳ ಹೌಸ್ಕೀ ಪಿಂಗ್ ಸಿಬ್ಬಂದಿಗಳು, ನ್ಯಾಯಾಂಗ ಅಧಿಕಾರಿಗಳು, ವಯೋವೃದ್ಧರು/ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು, ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಧ್ಯಮದವರು, ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ಮಾಡುವವರು (ಪೆಟ್ರೊಲ್ ಬಂಕ್, ಕರ್ಮಚಾರಿ ಒಳಗೊಂಡಂತೆ) ಔಷಧಿ ತಯಾರಿಸುವ ಕಂಪನಿಯ ಸಿಬ್ಬಂದಿಗಳು, ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿಗಳು, ಅಧಿಕೃತ ಗುರುತಿನ ಚೀಟಿ ಹೊಂದಿರುವ ಫಲಾನುಭವಿಗಳು(ಉದಾಹರಣೆ: ವೃದ್ದಾಶ್ರಮ ವಾಸಿಗಳು, ನಿರ್ಗತಿಕರು), ಭಾರತೀಯ ಆಹಾರ ನಿಗಮ ಸಿಬ್ಬಂದಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎ.ಪಿ.ಎಂ.ಸಿ) ಕೆಲಸಗಾರರು. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಸಿಬ್ಬಂದಿ, ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮತ್ತು ಬಿ ಇಎಲ್ ಸಿಬ್ಬಂದಿ ಮೇಲ್ಕಂಡ ಎಲ್ಲಾ ಆದ್ಯತಾ ಗುಂಪಿನ ಚಿಕ್ಕಬಳ್ಳಾಪುರ ಜಿಲ್ಲೆಯ ಫಲಾನುಭವಿಗಳು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಲಸಿಕಾ ಕೇಂದ್ರಗಳಲ್ಲಿ ಮೇ 31ರ ಒಳಗಾಗಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸದರಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

  • ಕೊಳಾಯಿ ತೆರೆದು ನೀರು ಕುಡಿದ ಚುರುಕು ಕಾಗೆ – ವೀಡಿಯೋ ವೈರಲ್

    ಕೊಳಾಯಿ ತೆರೆದು ನೀರು ಕುಡಿದ ಚುರುಕು ಕಾಗೆ – ವೀಡಿಯೋ ವೈರಲ್

    ಮಕ್ಕಳು ಚಿಕ್ಕವರಿದ್ದಾಗ ಕಾಗೆಯೊಂದು ತನ್ನ ದಣಿವನ್ನು ತೀರಿಸಿಕೊಳ್ಳಲು ಅರ್ಧ ನೀರು ತುಂಬಿರುವ ಬಿಂದಿಗಿಗೆಗೆ ಪುಟ್ಟಪುಟ್ಟ ಕಲ್ಲುಗಳನ್ನು ಹಾಕಿ ನೀರು ಮೇಲೆ ಬಂದ ನಂತರ ಕುಡಿದಿರುವ ಕಥೆಯನ್ನು ನಾವು ಕೇಳಿದ್ದೇವೆ. ಆದರೆ 21ನೇ ಶತಮಾನದ ಕಾಗೆಯೊಂದು ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳಲು ತನ್ನ ಬುದ್ಧಿವಂತಿಕೆ ಉಪಯೋಗಿಸಿಕೊಂಡಿದೆ.

    ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತಾ ನಂದಾ ಎಂಬವರು ಶುಕ್ರವಾರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ನುರಿತ ಕಾಗೆ’ ಎಂಬ ಕ್ಯಾಪ್ಷನ್ ಜೊತೆಗೆ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

    ಈ ವೀಡಿಯೋದಲ್ಲಿ ಕಾಗೆ ಹಾರಿಕೊಂಡು ಬಂದು ನೀರಿನ ಕೊಳಾಯಿ ಮೇಲೆ ಕುಳಿತುಕೊಂಡು, ತನ್ನ ಕೊಕ್ಕಿನ ಸಹಾಯದಿಂದ ಕೊಳಾಯಿಯನ್ನು ನಿಧಾನವಾಗಿ ಒತ್ತುವ ಮೂಲಕ ತೆರೆಯುತ್ತದೆ. ಬಳಿಕ ಆರಾಮವಾಗಿ ಕೊಳಾಯಿಂದ ಬರುವ ನೀರನ್ನು ಕುಡಿಯುತ್ತದೆ.

    ಸದ್ಯ ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಒಂದು ಗಂಟೆಯೊಳಗೆ ಸುಮಾರು ಸಾವಿರಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದ್ದು, ಹಲವಾರು ಕಮೆಂಟ್‍ಗಳು ಹರಿದು ಬರುತ್ತಿದೆ. ಕೆಲವರು ಕಾಗೆಯ ಬುದ್ಧಿವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಇನ್ನೂ ಕೆಲವರು ಕೊಳಾಯಿಯನ್ನು ಸರಿಯಾಗಿ ಮುಚ್ಚಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

  • ಮದ್ಯದ ಮತ್ತಿನಲ್ಲಿ ಮಾಸ್ಕ್ ಧರಿಸಲು ಮಹಿಳೆ ನಿರಾಕರಣೆ – ವಿಮಾನದಿಂದ ಹೊರ ಹಾಕಿದ ಅಧಿಕಾರಿ

    ಮದ್ಯದ ಮತ್ತಿನಲ್ಲಿ ಮಾಸ್ಕ್ ಧರಿಸಲು ಮಹಿಳೆ ನಿರಾಕರಣೆ – ವಿಮಾನದಿಂದ ಹೊರ ಹಾಕಿದ ಅಧಿಕಾರಿ

    – ವಿಮಾನ ಏರುವ ಮುನ್ನ ಮದ್ಯ ಸೇವನೆ
    – ಸೀಟ್ ಬೆಲ್ಟ್ ಹಾಕಲು ಒಪ್ಪದ ಮಹಿಳೆ

    ಲಂಡನ್: ಕೊರೊನಾ ಮಹಾಮಾರಿ ಇಡೀ ಜೀವನಶೈಲಿಯನ್ನೇ ಬದಲಾಯಿಸಿದೆ. ಹಲವು ಕುಟುಂಬ ಹಾಗೂ ಜೀವನವನ್ನು ನಾಶ ಮಾಡಿದೆ. ಆದರೂ ಕೊರೊನಾ ವಿಚಾರವಾಗಿ ಜನ ಎಚ್ಚರಿಕೆಗೊಳ್ಳುತ್ತಿಲ್ಲ. ಇತ್ತೀಚೆಗೆ ಕುಡಿದ ಮತ್ತಿನಲ್ಲಿ ಮಾಸ್ಕ್ ಧರಿಸಲು ನಿರಾಕರಿಸಿದ 34 ವರ್ಷದ ಮಹಿಳೆಯೊಬ್ಬಳನ್ನು ರಯಾನ್‍ಏರ್ ವಿಮಾನದಿಂದ ಹೊರಹಾಕಲಾಗಿದೆ.

    ಹೇಲಿ ಬಾಕ್ಸ್ ಎಂಬ ಮಹಿಳೆ ವೃತ್ತಿಯಲ್ಲಿ ಬ್ಯೂಟಿಷಿಯನ್ ಆಗಿದ್ದು, ಮೃತಪಟ್ಟ ಸ್ನೇಹಿತನ ಪ್ರೀತಿಪಾತ್ರರಿಗೆ ಸಾಂತ್ವನ ಹೇಳಲು ಇಬಿಜಾಗೆ ತೆರಳುತ್ತಿದ್ದಳು. ವಿಮಾನ ಹತ್ತುವ ಮೊದಲು ಹೇಲಿ ಬಾಕ್ಸ್ ಮ್ಯಾಂಚೆಸ್ಟರ್ ವಿಮಾನ ನಿಲ್ದಾಣದ ಕ್ಲೇಟನ್ ಹೋಟೆಲ್‍ನಲ್ಲಿ ಒಂದು ವೈನ್ ಬಾಟಲ್ ಪೂರ್ತಿ ಕುಡಿದು, ಒಂದು ಗಂಟೆ ಮಲಗಿದ್ದಳು. ಬಳಿಕ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಗ್ಲಾಸ್ ವೈನ್ ಕುಡಿದು ವಿಮಾನ ಏರಿದ್ದಾಳೆ. ತನ್ನ ಸೀಟ್ ಮೇಲೆ ಮಹಿಳೆ ಕುಳಿತ ನಂತರ ಫ್ಲೈಟ್ ಅಟೆಂಡರ್‍ಗಳು ಪದೇ ಪದೇ ಮಾಸ್ಕ್ ಹಾಕಿಕೊಳ್ಳಲು ತಿಳಿಸಿದ್ದಾರೆ.

    ಕೊನೆಗೆ ಕ್ಯಾಬಿನ್ ಮ್ಯಾನೆಜರ್ ಮಾಸ್ಕ್ ಧರಿಸದೇ ಇದ್ದರೆ ಪೊಲೀಸರ ಬಳಿ ಕರೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದರೆ ಹೇಲಿ ಬಾಕ್ಸ್ ಇದ್ಯಾವುದಕ್ಕೂ ಕಿವಿ ಕೊಡದೇ ಸೀಟ್ ಬೆಲ್ಟ್ ಧರಿಸಲು ಕೂಡ ನಿರಾಕರಿಸಿದ್ದಾಳೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ನಂತರ ಅದೇ ವಿಮಾನದಲ್ಲಿ ಹೇಗಾದರೂ ಪ್ರಯಾಣಿಸಲು ಹೇಲಿ ಬಾಕ್ಸ್‍ಪ್ರಯತ್ನಿಸಿದಳು. ಆದರೆ ಫ್ಲೈಟ್‍ನ ಅಧಿಕಾರಿಗಳು ಹಾಗೂ ಸಿಬ್ಬಂದಿ ಅವಳನ್ನು ವಿಮಾನದಿಂದ ಹೊರಹಾಕಿದ್ದಾರೆ.

    ಈ ಕುರಿತಂತೆ ಪ್ರಾಸಿಕ್ಯೂಟರ್ ರಾಚೆಲ್ ಡಿಕ್ಸನ್, ಮೊದಲಿಗೆ ಕ್ಯಾಬಿನೆಟ್ ಮ್ಯಾನೇಜರ್ ಸೂಚನೆಗಳನ್ನು ಪಾಲಿಸುವಂತೆ ಸಮಾಧಾನದಿಂದ ಕೇಳಿದ್ದಾರೆ. ಹೇಲಿ ಬಾಕ್ಸ್ ಪಾಸ್‍ಪೋರ್ಟ್ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದಾರೆ. ಆದರೆ ಇದ್ಯಾವುದಕ್ಕೂ ಮಹಿಳೆ ಕಿವಿಕೊಡಲಿಲ್ಲ. ಕೊನೆಗೆ ಕ್ಯಾಬಿನೆಟ್ ಮ್ಯಾನೇಜರ್ ಆಕೆಯನ್ನು ವಿಮಾನದಿಂದ ಹೊರಹಾಕಲು ನಿರ್ಧರಿಸಿದರು ಎಂದು ಸೋಮವಾರ ತಿಳಿಸಿದ್ದಾರೆ.

    ನಂತರ ಘಟನೆ ವಿಚಾರವಾಗಿ ಹೇಲಿ ಬಾಕ್ಸ್, ನನಗೆ ಯಾವುದು ಕೂಡ ನೆನಪಾಗುತ್ತಿಲ್ಲ. ನಿದ್ರೆಯ ಕೊರತೆಯಿಂದ ಹಾಗೂ ಆಹಾರವನ್ನು ಸೇವಿಸದೇ ಬೆಳಗ್ಗೆಯೇ ವೈನ್ ಸೇವಿಸಿದ್ದರಿಂದ ಘಟನೆ ನಡೆದಿದೆ ಎಂದು ಪ್ರತಿಕ್ರಿಯಿಸಿದ್ದಾಳೆ.