Tag: officer

  • ಎಂಜಿನಿಯರ್ ಮೇಲೆ ಕೆಸರು ಎರಚಿ ಕಾಂಗ್ರೆಸ್ ಶಾಸಕನಿಂದ ಹಲ್ಲೆ

    ಎಂಜಿನಿಯರ್ ಮೇಲೆ ಕೆಸರು ಎರಚಿ ಕಾಂಗ್ರೆಸ್ ಶಾಸಕನಿಂದ ಹಲ್ಲೆ

    ಮುಂಬೈ: ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಸಂಸದರ ಪುತ್ರ ಅಧಿಕಾರಿಯ ಮೇಲೆ ಬ್ಯಾಟ್‍ನಿಂದ ಹಲ್ಲೆ ನಡೆಸಿದ ಘಟನೆ ಮಾಸುವ  ಮುನ್ನವೇ ಇಂತಹದ್ದೇ ಮತ್ತೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

    ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ್ ರಾಣೆ ಅವರ ಪುತ್ರ ಕಾಂಗ್ರೆಸ್ ಪಕ್ಷದ ಶಾಸಕ ನಿತೇಶ್ ರಾಣೆ ಎಂಜಿನಿಯರ್ ಮೇಲೆ ಕಾರ್ಯಕರ್ತರೊಂದಿಗೆ ಕೆಸರು ಸುರಿದು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ ಬ್ರಿಡ್ಜ್ ಗೆ ಕಟ್ಟಿಹಾಕಿದ್ದಾರೆ.

    ಮಾಧ್ಯಮ ವರದಿಯ ಅನ್ವಯ ಶಾಸಕ ನಿತೇಶ್ ನಾರಾಯಣ್ ರಾಣೆ ಗುರುವಾರ ಮಹಾರಾಷ್ಟ್ರ, ಗೋವಾ ನಡುವಿನ ಕಂಕವ್ಲಿ ಹೆದ್ದಾರಿಯ ರಸ್ತೆ ವೀಕ್ಷಣೆ ಮಾಡಲು ತೆರಳಿದ್ದರು. ಆದರೆ ಈ ಸಂದರ್ಭದಲ್ಲಿ ರಸ್ತೆ ಗುಂಡಿಗಳನ್ನು ಕಂಡು ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯಾ ಅವರು ಪುರಸಭೆಯ ಅಧಿಕಾರಿ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಆ ಬಳಿಕ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಈ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದರು. ಅಲ್ಲದೇ ಯಾರ ಮಗನಾದರೂ ಅಂತಹವರನ್ನು ಪಕ್ಷದಿಂದ ಹೊರ ಹಾಕಬೇಕು ಎಂದು ಹೇಳಿದ್ದರು. ಇತ್ತ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಶಾಸಕರೇ ಅಧಿಕಾರಿಯ ಮೇಲೆ ಕಾರ್ಯಕರ್ತರೊಂದಿಗೆ ಹಲ್ಲೆ ನಡೆಸಿದ್ದಾರೆ.

  • 3,800 ರೂ.ಗೆ ಬಿಪಿಎಲ್ ಕಾರ್ಡ್ – ಅಕ್ರಮ ಕೇಳೋಕೆ ಹೋದ್ರೆ ಅಧಿಕಾರಿಗಳಿಗೆ ಅವಾಜ್

    ಶಿವಮೊಗ್ಗ: ಮೂರು ಸಾವಿರದ ಎಂಟು ನೂರು ರೂಪಾಯಿ ಕೊಡಿ ನಿಮಗೆ ಬಿಪಿಎಲ್ ಕಾರ್ಡ್ ಮಾಡಿ ಕೊಡುತ್ತೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಹಾಯಕ ನಿರ್ದೇಶಕರಿಗೆ ಆಫರ್ ಕೊಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಶಿವಮೊಗ್ಗದಲ್ಲಿ ಸಾರ್ವಜನಿಕರಿಗೆ ಬಿಪಿಎಲ್ ಕಾರ್ಡ್ ಸಿಗುವುದು ತಡವಾಗುತ್ತಿದೆ ಎಂಬ ದೂರು ಇದೆ. ಇದೇ ಅವಕಾಶವನ್ನು ಬಳಸಿಕೊಂಡು ಶಿವಮೊಗ್ಗದ ಎಲ್.ಎಲ್.ಆರ್ ರಸ್ತೆಯಲ್ಲಿರುವ ಖಾಸಗಿ ಸಂಸ್ಥೆಯೊಂದು 3,800 ರೂಪಾಯಿಗೆ ಬಿಪಿಎಲ್ ಕಾರ್ಡ್ ಹಾಗೂ 2,800 ರೂಪಾಯಿಗೆ ಎಪಿಎಲ್ ಕಾರ್ಡ್ ಕೊಡುತ್ತಿದೆ.

    ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಬಗ್ಗೆ ಪರಿಶೀಲನೆಗೆ ಹೋಗಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ರಮ್ಯಾ ಅವರಿಗೆ ಶಾಕ್ ಕಾದಿತ್ತು. ನೀವೂ 3,800 ರೂಪಾಯಿ ಕೊಡಿ, ನಿಮಗೂ ಬಿಪಿಎಲ್ ಕಾರ್ಡ್ ಮಾಡಿ ಕೊಡುತ್ತೇವೆ ಎಂದಿದ್ದಾರೆ. ಇದರ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ, ದುಡ್ಡು ಪಡೆದು, ಕಾರ್ಡ್ ಮಾಡಿ ಕೊಡುತ್ತಿವಿ, ನೀವು ಯಾರು ಕೇಳೋಕೆ ಎಂದು ಈ ಅಧಿಕಾರಿಗೆ ಅವಾಜ್ ಹಾಕಿದ್ದಾರೆ.

    ಈ ಮಳಿಗೆಗೆಯಲ್ಲಿ ರೇಷನ್ ಕಾರ್ಡ್ ಜೊತೆ ಜಾತಿ- ಆದಾಯ ಪ್ರಮಾಣ ಪತ್ರವೂ ಸಿಗುತ್ತದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಇದೂವರೆಗೂ ಈ ಸಂಸ್ಥೆಯವರು ಎಷ್ಟು ಕಾರ್ಡ್ ನೀಡಿದ್ದಾರೆ. ನೀಡಿರುವ ಕಾರ್ಡ್ ಗಳು ಅಸಲಿಯೋ? ನಕಲಿಯೋ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    ಇಲಾಖೆಯಲ್ಲಿ ಬಿಪಿಎಲ್ ಕಾರ್ಡ್ ಕೊಡುವಾಗ ನೀತಿ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ಈ ಕಾರಣದಿಂದ ಕಾರ್ಡ್ ನೀಡುವುದು ವಿಳಂಬ ಆಗುತ್ತಿದೆ. ಇದೇ ಅವಕಾಶವನ್ನು ಖಾಸಗಿಯವರು ಬಳಸಿಕೊಂಡು ದುಡ್ಡು ಮಾಡುತ್ತಿದ್ದಾರೆ.

  • ಯಾರ ಮಗ ಆಗಿದ್ದರೂ ಸರಿ ಪಕ್ಷದಿಂದ ಹೊರಗೆ ಹಾಕಿ: ಮೋದಿ ಕೆಂಡಾಮಂಡಲ

    ಯಾರ ಮಗ ಆಗಿದ್ದರೂ ಸರಿ ಪಕ್ಷದಿಂದ ಹೊರಗೆ ಹಾಕಿ: ಮೋದಿ ಕೆಂಡಾಮಂಡಲ

    ನವದೆಹಲಿ: ಇತ್ತೀಚೆಗೆ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಅವಮಾನಿಸಿದ್ದ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯ್‍ವರ್ಗಿಯಾ ಅವರ ಮಗ ಹಾಗೂ ಶಾಸಕ ಆಕಾಶ್ ವಿಜಯ್‍ವರ್ಗಿಯಾ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಯಾರ ಮಗ ಆಗಿದ್ದರೂ ಸರಿ, ಪಕ್ಷದಿಂದ ಹೊರ ಹಾಕಿ ಎಂದು ಕಿಡಿಕಾರಿದ್ದಾರೆ.

    ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಈ ವಿಷಯದ ಕುರಿತು ಕೆಂಡಾಮಂಡಲರಾಗಿದ್ದು, ಈ ರೀತಿ ದುರ್ವರ್ತನೆ ತೋರುವ ನಾಯಕರನ್ನು ಮುಲಾಜಿಲ್ಲದೆ, ಯಾವ ನಾಯಕರ ಮಗನೆಂದೂ ನೋಡದೆ ಪಕ್ಷದಿಂದ ಹೊರ ಹಾಕಿ ಎಂದು ಗುಡುಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅಷ್ಟಕ್ಕೆ ಸುಮ್ಮನಾಗದ ಪ್ರಧಾನಿ ಮೋದಿ, ಆಕಾಶ್ ವಿಜಯ್‍ವರ್ಗಿಯಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಅವರನ್ನು ಸ್ವಾಗತಿಸಿದವರನ್ನೂ ಪಕ್ಷದಿಂದ ಹೊರಗಡೆ ಹಾಕಿ ಎಂದು ಕಿಡಿ ಕಾರಿದ್ದಾರೆ.

    ಸಭೆಯ ಬಳಿಕ ರಾಜೀವ್ ಪ್ರತಾಪ್ ರೂಡಿಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ಅವರು ಈ ವಿಚಾರದಲ್ಲಿ ಅಸಮಾಧಾನಗೊಂಡಿದ್ದಾರೆ. ಪಕ್ಷದ ಹೆಸರನ್ನು ಹೇಳಿಕೊಂಡು ಅಸಭ್ಯ ವರ್ತನೆ ನಡೆಸಲು ಯಾರಿಗೂ ಅವಕಾಶವಿಲ್ಲ. ಈ ರೀತಿ ವರ್ತನೆ ತೋರಿದ ಯಾರನ್ನೂ ಸಹಿಸಲು ಸಾಧ್ಯವಿಲ್ಲ ಎಂದು ಕಠಿಣ ಪದಗಳಲ್ಲಿ ಹೇಳಿದ್ದಾರೆ ಎಂದು ತಿಳಿಸಿದರು.

    ಶಾಸಕ ಆಕಾಶ್ ವಿಜಯ್‍ವರ್ಗಿಯಾ ಕಳೆದ ವಾರ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಅವಮಾನಿಸಿದ್ದರು. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಶಾಸಕನನ್ನು ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರ ಬಂದ ಆಕಾಶ್ ವಿಜಯ್‍ವರ್ಗಿಯಾ ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲ ಎಂದು ಕ್ಷಮೆಯಾಚಿಸಿದ್ದರು. ಇಂದೋರ್‍ನಲ್ಲಿ ನಡೆದ ಈ ಘಟನೆಯ ವಿಡಿಯೊ ವೈರಲ್ ಆಗಿತ್ತು. ಅಲ್ಲದೆ, ವಿಪರೀತ ಚರ್ಚೆಗೆ ಗ್ರಾಸವಾಗಿತ್ತು. ಶಾಸಕ ಆಕಾಶ್ ಹಾಗೂ ಆತನ ಬೆಂಬಲಿಗರು ಪೊಲೀಸರು ಹಾಗೂ ಟಿವಿ ವಾಹಿನಿ ಸಿಬ್ಬಂದಿಯ ಎದುರೇ ಸರ್ಕಾರಿ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್ ಹಿಡಿದು ಬೆನ್ನಟ್ಟಿದ್ದರು. ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು.

    ಅಂದು ನಡೆದಿದ್ದು ಏನು?
    ಇಂದೋರ್ ನಗರದಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ ಕಟ್ಟಡಗಳನ್ನು ಇಂದು ಅಧಿಕಾರಿಗಳು ತೆರವುಗೊಳಿಸುತ್ತಿದ್ದರು. ಆದರೆ ಶಾಸಕರು ತಮ್ಮ ಬೆಂಬಲಿಗನ ಕಟ್ಟಡ ತೆರವುಗೊಳಿಸದಂತೆ ಸೂಚನೆ ನೀಡಿದ್ದರು. ಇದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಕಟ್ಟಡ ತೆರವುಗೊಳಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಅಧಿಕಾರಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದಿದ್ದರು. ಅಷ್ಟೇ ಅಲ್ಲದೆ ಶಾಸಕರ ಬೆಂಬಲಿಗರು ಅಧಿಕಾರಿಯ ಅಂಗಿ ಹಿಡಿದು ಎಳೆದಾಡಿದ್ದರು. ಘಟನೆಯಿಂದ ತಕ್ಷಣವೇ ಜಾಗೃತಗೊಂಡ ಪೊಲೀಸರು ಅಧಿಕಾರಿಯನ್ನು ರಕ್ಷಿಸಿದ್ದರು.

  • ಕ್ರಿಕೆಟ್ ಬ್ಯಾಟ್‍ನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಶಾಸಕ ಅರೆಸ್ಟ್

    ಕ್ರಿಕೆಟ್ ಬ್ಯಾಟ್‍ನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಶಾಸಕ ಅರೆಸ್ಟ್

    ಭೋಪಾಲ್: ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಕೈಲಾಶ್ ವಿಜಯ್ ವರ್ಗೀಯ ಅವರ ಪುತ್ರ, ಇಂದೋರ್-3 ಕ್ಷೇತ್ರದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಇಂದು ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಬೆಂಬಲಿಗನೊಬ್ಬನ ಕಟ್ಟಡ ತೆರುವುಗೊಳಿಸಿದ್ದಕ್ಕೆ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಾರೆ.

    ಆಗಿದ್ದೇನು?:
    ಇಂದೋರ್ ನಗರದಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ ಕಟ್ಟಡಗಳನ್ನು ಇಂದು ಅಧಿಕಾರಿಗಳ ತೆರವು ಗೊಳಿಸುತ್ತಿದ್ದರು. ಆದರೆ ಶಾಸಕರು ತಮ್ಮ ಬೆಂಬಲಿಗನ ಕಟ್ಟಡ ತೆರವುಗೊಳಿಸದಂತೆ ಸೂಚನೆ ನೀಡಿದ್ದರು. ಇದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಕಟ್ಟಡ ತೆರವುಗೊಳಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಅಧಿಕಾರಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದಿದ್ದಾರೆ. ಅಷ್ಟೇ ಅಲ್ಲದೆ ಶಾಸಕರ ಬೆಂಬಲಿಗರು ಅಧಿಕಾರಿಯ ಅಂಗಿ ಹಿಡಿದು ಎಳೆದಾಡಿದ್ದಾರೆ. ಘಟನೆಯಿಂದ ತಕ್ಷಣವೇ ಜಾಗೃತಗೊಂಡ ಪೊಲೀಸರು ಅಧಿಕಾರಿಯನ್ನು ರಕ್ಷಿಸಿದ್ದಾರೆ.

    ಮಾಧ್ಯಮಗಳ ಮುಂದೆ ಆಕಾಶ್ ವಿಜಯ್ ವರ್ಗೀಯ ಹಲ್ಲೆ ಮಾಡಿದ್ದು ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ವೈರಲ್ ಆಗಿದೆ. ಶಾಸಕರು ಮಾತ್ರ ತಪ್ಪಿಗೆ ಕ್ಷಮೆ ಕೇಳುವ ಬದಲು, ಆಡಳಿತ ಪಕ್ಷವರು ಈ ರೀತಿಯ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

  • ಐಪಿಎಸ್ ಪ್ರೊಬೆಷನರಿ ಅಧಿಕಾರಿ ಸೋಗಿನಲ್ಲಿ ಮಹಿಳೆಯಿಂದ ಯೋಧನಿಗೆ ವಂಚನೆ

    ಐಪಿಎಸ್ ಪ್ರೊಬೆಷನರಿ ಅಧಿಕಾರಿ ಸೋಗಿನಲ್ಲಿ ಮಹಿಳೆಯಿಂದ ಯೋಧನಿಗೆ ವಂಚನೆ

    ಮೈಸೂರು: ಜಿಲ್ಲೆಯಲ್ಲಿ ಐಪಿಎಸ್ ಪ್ರೊಬೆಷನರಿ ಅಧಿಕಾರಿಯ ಸೋಗಿನಲ್ಲಿ ಮಹಿಳೆಯೊಬ್ಬಳು ವಂಚಿಸಿದ್ದಾಳೆ. ಹೀಗೆ ವಂಚಿಸುತ್ತಿದ್ದ ಮಹಿಳೆಯನ್ನು ಹುಣಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಲಾವಣ್ಯ ಭಾನು ವಂಚನೆ ಮಾಡಿದ ಮಹಿಳೆ. ಲಾವಣ್ಯ ಹುಣಸೂರಿನ ಕಲ್ಕುಣಿಕೆ ನಿವಾಸಿಯಾಗಿದ್ದು, ಹೆಚ್.ಡಿ ಕೋಟೆ ತಾಲೂಕಿನ ಹೆಬ್ಬಲಕುಪ್ಪೆ ಗ್ರಾಮದ ಯೋಧ ಲೋಕೇಶ್ ಅವರನ್ನು ಮ್ಯಾಟ್ರಿಮೋನಿ ವೆಬ್‍ಸೈಟ್ ಮೂಲಕ ಪರಿಚಯ ಮಾಡಿಕೊಂಡಿದ್ದಳು.

    ಲಾವಣ್ಯ ತಾನು ಐಪಿಎಸ್ ಅಧಿಕಾರಿ ಎಂದು ಹೇಳಿ ಯೋಧ ಲೋಕೇಶ್ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿದ್ದಳು. ನಂತರ ಮದುವೆ ಖರ್ಚಿಗೆ 13 ಲಕ್ಷ ಹಣ ಕೊಡಬೇಕು. ಇಲ್ಲದಿದ್ದರೆ ನಿಮ್ಮ ಹಾಗೂ ಮನೆಯವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬ್ಲ್ಯಾಕ್‍ಮೇಲ್ ಮಾಡಿದ್ದಾಳೆ.

    ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ಯೋಧ ಲೋಕೇಶ್ ಹುಣಸೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ವಿಚಾರಣೆ ವೇಳೆ ಲಾವಣ್ಯ ನಕಲಿ ಐಪಿಎಸ್ ಎನ್ನುವ ಮಾಹಿತಿ ಬಹಿರಂಗವಾಗಿದೆ. ಆರೋಪಿ ಲಾವಣ್ಯ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

  • ಬೋಗಸ್ ಬಿಲ್ ಮಾಡಿ 8 ಕೋಟಿ ಲೂಟಿ – ಅದೇ ದುಡ್ಡಲ್ಲಿ ಲಿಕ್ಕರ್ ಪಾರ್ಟಿ

    ಬೋಗಸ್ ಬಿಲ್ ಮಾಡಿ 8 ಕೋಟಿ ಲೂಟಿ – ಅದೇ ದುಡ್ಡಲ್ಲಿ ಲಿಕ್ಕರ್ ಪಾರ್ಟಿ

    ಕಲಬುರಗಿ: ನೀತಿ ಸಂಹಿತೆ ಹಿನ್ನೆಲೆಯಲ್ಲಿ ಒಂದೆಡೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಚುನಾವಣೆಯಲ್ಲಿ ಬ್ಯುಸಿಯಾಗಿದ್ದರೆ, ಸಿಕ್ಕಿದ್ದೇ ಚಾನ್ಸ್ ಎಂದು ಪಿಡಬ್ಲ್ಯೂಡಿ ಅಧಿಕಾರಿಗಳು ಕೋಟಿ ಕೋಟಿ ಬೇಕಾಬಿಟ್ಟಿ ಬಿಲ್ ಮಾಡಿ ಹಣ ಲಪಟಾಯಿಸಿದ್ದಾರೆ. ಬಂದ ದುಡ್ಡಲ್ಲಿ ಕುಡಿದು ಕುಣಿದು ಕುಪ್ಪಳಿಸಿದ್ದಾರೆ. ಈ ಕುರಿತ ಒಂದು ಎಕ್ಸ್ ಕ್ಲೂಸಿವ್ ರಿಪೋರ್ಟ್ ಇಲ್ಲಿದೆ.

    ಹೌದು. ಪಿಡಬ್ಲ್ಯೂಡಿ ಅಧಿಕಾರಿಗಳು 2018-19ರ ಇಯರ್ ಎಂಡ್ ಬಿಲ್ ಮಾಡಿ ತಮಗೆ ಬೇಕಾದಂತೆ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ. ಮಾತ್ರವಲ್ಲ ವಂಚಿಸಿದ ಹಣದಲ್ಲಿ ಕಲಬುರಗಿಯ ಖಾಸಗಿ ಹೋಟೆಲ್‍ನಲ್ಲಿ ಕಾಕ್‍ಟೈಲ್ ಎಣ್ಣೆ ಪಾರ್ಟಿ ಮಾಡಿದ್ದು, ಆ ಪಾರ್ಟಿಯಲ್ಲಿ ಯಾರು ಎಷ್ಟು ಹಣ ಹೊಡೆದರು ಅನ್ನೋ ಲೆಕ್ಕವನ್ನು ಪರಸ್ಪರ ಹೇಳಿಕೊಂಡು ಸ್ಟೆಪ್ ಹಾಕಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಸಿದ್ದರಾಮಯ್ಯ ಹಿರೇಮಠ್ ಆರೋಪಿಸಿದ್ದಾರೆ.

    ಆರ್‌ಟಿಐ ಮಾಹಿತಿಯಡಿ ಭ್ರಷ್ಟ ಅಧಿಕಾರಿಗಳ ನಿಜ ಬಣ್ಣ ಬಯಲಾಗಿದ್ದು, 3 ಕೋಟಿಗೂ ಅಧಿಕ ಹಣದ ಬೋಗಸ್ ಬಿಲ್ ಮಾಡಿದ್ದಾರೆ.
    1. ಜಿಲ್ಲಾಧಿಕಾರಿಗಳ ವಸತಿಗೃಹದ ಬಾಗಿಲು, ಕಿಟಕಿಯ ಪರದೆ- 3 ಲಕ್ಷ ರೂ.
    2. ಜಿಲ್ಲಾಧಿಕಾರಿಗಳ ವಸತಿಗೃಹದ ಪಾರ್ಕ್ ನ ಫಿನಿಶಿಂಗ್- 2 ಲಕ್ಷ ರೂ.
    3. ಜೇವರ್ಗಿ ರಸ್ತೆಯ ವಸತಿ ಪ್ರದೇಶದ 5 ಚಿಕ್ಕ ಸೇಫ್ಟಿ ಟ್ಯಾಂಕ್ ಸ್ವಚ್ಛತೆ- 3.30 ಲಕ್ಷ ರೂ.
    4. ಐವಾನ್-ಏ-ಶಾಹಿ ವಸತಿಗೃಹದ ಸೊಳ್ಳೆ ಪರದೆ- 5 ಲಕ್ಷ ರೂ.
    5. ಐವಾನ್-ಏ-ಶಾಹಿ ವಸತಿಗೃಹದ ಮುಳ್ಳು ಕಂಟಿ ತೆಗೆಯಲು- 5 ಲಕ್ಷ ರೂ.
    6. ಐವಾನ್-ಏ-ಶಾಹಿ ವಸತಿಗೃಹದ ಸೋಫಾ ರಿಪೇರಿಗೆ- 3 ಲಕ್ಷ ರೂ.


    7. ಐವಾನ್-ಏ-ಶಾಹಿ ವಸತಿಗೃಹದ ಸ್ನಾನಗೃಹದ ನವೀಕರಣ- 4 ಲಕ್ಷ ರೂ
    8. ಐವಾನ್-ಏ-ಶಾಹಿ ವಸತಿಗೃಹದಲ್ಲಿ ಟವೆಲ್ & ನ್ಯಾಪ್‍ಕಿನ್ ಖರೀದಿ- 4 ಲಕ್ಷ ರೂ
    9. ಮೇಲ್ಛಾವಣಿಯ ಪೇಟಿಂಗ್- 2 ಲಕ್ಷ 35 ಸಾವಿರ ರೂ.
    10. ಪಿಡಬ್ಲ್ಯೂಡಿ ಕಚೇರಿಯ ಸಿಇ-ಎಸ್‍ಇ ಎರಡು ಕಚೇರಿಗಳ ಪಾರ್ಕ್ ನವೀಕರಣ- 10 ಲಕ್ಷ ರೂ.

    ಒಟ್ಟಿನಲ್ಲಿ ಒಂದೆಡೆ ಭೀಕರ ಬರ, ಮತ್ತೊಂದೆಡೆ ರೈತರ ಸಾಲಮನ್ನಾಕ್ಕೆ ಹಣ ಇಲ್ಲದೇ ಸರ್ಕಾರ ಪರದಾಡುತ್ತಿದೆ. ಆದರೆ ಇತ್ತ ಅಧಿಕಾರಿಗಳು ಕೋಟಿ ಕೋಟಿ ಹಣ ಲೂಟಿ ಮಾಡುತ್ತಿದ್ದಾರೆ. ಈಗಲಾದರೂ ಸಿಎಂ ಕುಮಾರಸ್ವಾಮಿ ಎಚ್ಚೆತ್ತು ಭ್ರಷ್ಟಾಚಾರದ ತನಿಖೆ ಮಾಡಿಸ್ತಾರಾ ಕಾದು ನೋಡಬೇಕಿದೆ.

  • ಖಡಕ್ IPS ಅಧಿಕಾರಿ ಅಣ್ಣಾಮಲೈ ರಾಜೀನಾಮೆ..!

    ಖಡಕ್ IPS ಅಧಿಕಾರಿ ಅಣ್ಣಾಮಲೈ ರಾಜೀನಾಮೆ..!

    ಬೆಂಗಳೂರು: ಕರ್ನಾಟಕದ ‘ಸಿಂಗಂ’ ಎಂದೇ ಖ್ಯಾತಿ ಪಡೆದಿರುವ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಬೆಂಗಳೂರು ದಕ್ಷಿಣ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಅವರು ರಾಜೀನಾಮೆ ನೀಡುವುದು ಖಚಿತ ಎನ್ನಲಾಗಿದ್ದು, ಜೂನ್ 4 ರಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಸಂಬಂಧ ಮೇ 28ರ ಮಂಗಳವಾರ ಸಿಎಂ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

    ಖಡಕ್ ಅಧಿಕಾರಿಯಾಗಿ ಯುವ ಜನಾಂಗಕ್ಕೆ ಪ್ರೇರಣೆ ಆಗಿರುವ ಅಣ್ಣಾಮಲೈ ನಿರ್ಧಾರ ಸಾಕಷ್ಟು ಅಚ್ಚರಿಗೆ ಕಾರಣವಾಗಿದ್ದು, ಪೊಲೀಸ್ ಅಧಿಕಾರಿ ಆಗಿರುವುದಕ್ಕಿಂತ ರಾಜಕೀಯ ಪ್ರವೇಶ ಮಾಡಿ ನೇರ ಜನರ ಸೇವೆ ಮಾಡುವ ಉದ್ದೇಶ ಹೊಂದಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ಜನ ಸೇವೆ ಮಾಡುವುದು ಕಷ್ಟಸಾಧ್ಯವಾಗಿದ್ದು, ಪರಿಣಾಮ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಅಣ್ಣಾಮಲೈ ದಿಢೀರ್ ರಾಜೀನಾಮೆ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೆ ರಾಜಕೀಯದಲ್ಲಿ ಯಾವ ಪಕ್ಷ ಸೇರಲಿದ್ದಾರೆ ಎಂಬುವುದು ಕೂಡ ಬಹುದೊಡ್ಡ ಪ್ರಶ್ನೆ ಆಗಿದೆ. ಸದ್ಯ ಲಭ್ಯವಾಗಿರುವ ಮಾಹಿತಿ ಅನ್ವಯ ಅಣ್ಣಾಮಲೈ ಅವರು ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾಕಷ್ಟು ತಿಂಗಳಿನಿಂದ ತಯಾರಿ ನಡೆಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ತಮಿಳುನಾಡಿನ ಕೊಯಮತ್ತೂರು ಅಣ್ಣಾಮಲೈ ಅವರ ತವರು ಜಿಲ್ಲೆಯಾಗಿದ್ದು, ಕುಪ್ಪೇಸ್ವಾಮಿ ಅಣ್ಣಾಮಲೈ 2011ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರು. 2013ರಲ್ಲಿ ಕಾರ್ಕಳ ಎಎಸ್‍ಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಅವರು, ಬಳಿಕ 2015ರಲ್ಲಿ ಉಡುಪಿ ಜಿಲ್ಲಾ ಎಸ್‍ಪಿ, ಚಿಕ್ಕಮಗಳೂರು ಎಸ್‍ಪಿಯಾಗಿ ದಕ್ಷ ಸೇವೆ ಮಾಡಿದ್ದಾರೆ. ಸದ್ಯ ಬೆಂಗಳೂರು ದಕ್ಷಿಣ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಅಣ್ಣಾಮಲೈ ಮೆಕ್ಯಾನಿಕಲ್ ಎಂಜಿನಿಯರ್ ಹಾಗೂ ಪ್ರತಿಷ್ಠಿತ ಲಖನೌ ಎಂಬಿಎ ಪದವೀಧರರಾಗಿದ್ದಾರೆ. ಐಪಿಎಸ್ ಅಧಿಕಾರಿ ಆಗುವ ಮೊದಲು ವಿದ್ಯಾರ್ಥಿಯಾಗಿ ಪಾಲಿಟಿಕ್ಸ್ ನಲ್ಲಿದ್ದರು. ಸದ್ಯ ಅಣ್ಣಾಮಲೈ ಅವರು ತಮಿಳುನಾಡಿನ ಡಿಎಂಕೆ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಡಿಎಂಕೆ ಅಧಿನಾಯಕ ಸ್ಟಾಲಿನ್, ಅಣ್ಣಾಮಲೈ ಅವರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 2021ಕ್ಕೆ ತಮಿಳುನಾಡು ವಿಧಾನಸಭೆಯಲ್ಲಿ ಅಣ್ಣಾಮಲೈ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು, ಕೊಯಮತ್ತೂರು ಕ್ಷೇತ್ರದಿಂದ ಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ.

  • ಮಗಳ ಮದುವೆಯಲ್ಲಿ ಹಾಡುತ್ತಲೇ ಕುಸಿದು ಬಿದ್ದು ಜೀವಬಿಟ್ಟ ತಂದೆ – ವಿಡಿಯೋ

    ಮಗಳ ಮದುವೆಯಲ್ಲಿ ಹಾಡುತ್ತಲೇ ಕುಸಿದು ಬಿದ್ದು ಜೀವಬಿಟ್ಟ ತಂದೆ – ವಿಡಿಯೋ

    ತಿರುವನಂತಪುರ: ಸಂಭ್ರಮದಿಂದ ಕೂಡಿದ್ದ ಮದುವೆ ಮನೆಯಲ್ಲಿ ಮಧುವಿನ ತಂದೆ ಹಾಡುತ್ತಲೇ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.

    ಪಿ ವಿಷ್ಣು ಪ್ರಸಾದ್ (55) ಸಾವನ್ನಪ್ಪಿದ್ದು, ಅವರು ತಿರುವನಂತಪುರಂನಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

    ವಿಷ್ಣು ಪ್ರಸಾದ್ ಅವರ ಕಿರಿಯ ಮಗಳ ವಿವಾಹ ಕಾರ್ಯಕ್ರಮ ಶನಿವಾರ ನಡೆಯುತಿತ್ತು. ಈ ವೇಳೆ ಸಂಭ್ರಮದಿಂದಲೇ ವೇದಿಕೆ ಮೇಲೆ ತೆರಳಿದ್ದ ಪ್ರಸಾದ್ ಅವರು ಹಾಡು ಹಾಡುತ್ತಿದ್ದರು. ಆದರೆ ಕ್ಷಣಮಾತ್ರದಲ್ಲಿ ಇದಕ್ಕಿದ್ದಂತೆ ವೇದಿಕೆ ಮೇಲೆ ಕುಸಿದು ಬಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡುವ ಪ್ರಯತ್ನ ವಿಫಲವಾಗಿತ್ತು.

    ಕೊಲ್ಲಂನಲ್ಲಿ ಶನಿವಾರ ಮದುವೆ ಕಾರ್ಯಕ್ರಮದ ವೇಳೆ ಘಟನೆ ನಡೆದಿದ್ದು, ಮದುವೆಯಲ್ಲಿ ಮಗಳಿಗಾಗಿಯೇ ಮಲೆಯಾಳಂ ಹಾಡೊಂದನ್ನು ಆರ್ಪಿಸಿ ಹಾಡುತ್ತಿದ್ದರು. ಪೊಲೀಸರು ನೀಡಿರುವ ಮಾಹಿತಿ ಅನ್ವಯ ಪ್ರಸಾದ್ ಅವರು ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿದ್ದರು.

    ತಂದೆಯ ಸಾವಿನ ಸುದ್ದಿಯನ್ನ ಮಗಳಿಗೆ ತಿಳಿಸಿದರೆ ಮದುವೆ ಕಾರ್ಯಕ್ರಮ ಎಲ್ಲಿ ನಿಂತು ಹೋಗುತ್ತದೆ ಎಂದು ಭಯಪಟ್ಟ ಕುಟುಂಬಸ್ಥರು ಮಗಳಿಗೆ ತಿಳಿಸದೆಯೇ ಮದುವೆ ಕಾರ್ಯಕ್ರಮ ನಡೆಸಿದ್ದಾರೆ. ಮಗಳು ತಂದೆಯ ಆರೋಗ್ಯ ಬಗ್ಗೆ ವಿಚಾರಿಸಿದ್ದು, ಈ ವೇಳೆ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರವೇ ಮದುವೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿ ಹೇಳಿದ್ದಾರೆ. ಆ ಮೂಲಕ ವಿಷ್ಣುಪ್ರಸಾದ್ ಅವರ ಆಸೆಯನ್ನ ಪೂರ್ತಿಗೊಳಿಸಿದ್ದಾರೆ.

    ತಂದೆಯ ಹೆಸರು ಹೊಂದಿರುವ ವರನನ್ನೇ ವಿಷ್ಣು ಪ್ರಸಾದ್ ಅವರ ಪುತ್ರಿ ವಿವಾಹವಾಗಿದ್ದು, ಭಾನುವಾರ ಮದುವೆ ಕಾರ್ಯಕ್ರಮ ನಡೆದ ಬಳಿಕ ಸೋಮವಾರ ವಿಷ್ಣುಪ್ರಸಾದ್ ಅವರ ಅಂತಿಮ ಸಂಸ್ಕಾರ ನಡೆಸಲಾಗಿದೆ. ವಿಷ್ಣು ಪ್ರಸಾದ್ ಅವರು ತಿರುವನಂತಪುರಂನ ಕರಮನ ಪೊಲೀಸ್ ಠಾಣೆಯಲ್ಲಿ ಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ನಿವೃತ್ತಿಗೆ ಒಂದು ವರ್ಷ ಮಾತ್ರ ಬಾಕಿ ಇತ್ತು ಎಂಬ ಮಾಹಿತಿ ಲಭಿಸಿದೆ. ಪೊಲೀಸ್ ಅಧಿಕಾರಿಯ ಸಾವಿಗೆ ಕೇರಳ ಸಿಎಂ ಪಿಣಾರಾಯಿ ವಿಜಯನ್ ಅವರು ಕೂಡ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

  • ಲಂಚ ಪಡೆದು ಕೆಲಸ ಮಾಡಿಕೊಡದಿದ್ದನ್ನ ಪ್ರಶ್ನಿಸಿದ್ದಕ್ಕೆ ಮಹಿಳಾ ಅಧಿಕಾರಿಯಿಂದ ಧಮ್ಕಿ!

    ಲಂಚ ಪಡೆದು ಕೆಲಸ ಮಾಡಿಕೊಡದಿದ್ದನ್ನ ಪ್ರಶ್ನಿಸಿದ್ದಕ್ಕೆ ಮಹಿಳಾ ಅಧಿಕಾರಿಯಿಂದ ಧಮ್ಕಿ!

    ಚಿಕ್ಕಬಳ್ಳಾರ: ಲಂಚ ಪಡೆದು ಕೆಲಸ ಮಾಡಿಕೊಡದಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಅಧಿಕಾರಿಯೊಬ್ಬರು ಧಮ್ಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ದೇವನಹಳ್ಳಿಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿಸ್ತರಣಾಧಿಕಾರಿ ಸರೋಜಾದೇವಿ ಧಮ್ಕಿ ಹಾಕಿದವರು. ಹೊಸಕೋಟೆ ತಾಲೂಕಿನ ನಂದಗುಡಿ ನಿವಾಸಿ ಮಂಜುನಾಥ್ ಅವರಿಗೆ ಸರೋಜಾದೇವಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಸರೋಜಾದೇವಿ ಪರಿಶಿಷ್ಟ ಜಾತಿಯ ಯುವಕರಿಗೆ ಟ್ಯಾಕ್ಸಿ ಹಾಗೂ ರೈತರ ಹೊಲದಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿ ಬೋರ್ವೆಲ್ ಕೊರೆಸಿಕೊಡುವುದಾಗಿ ಹೇಳಿ ಲಂಚ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಲಂಚ ಪಡೆದ ಅವರು ಕೆಲಸ ಮಾಡಿಕೊಡದೇ ಹೊಸಕೋಟೆಯಿಂದ ದೇವನಹಳ್ಳಿಗೆ ವರ್ಗಾವಣೆಯಾಗಿದ್ದಾರೆ. ಸಾಲ ಮಾಡಿ ಹಣ ಕೊಟ್ಟಿದ್ದ ರೈತರು ಮತ್ತು ಯುವಕರು ಕೊಟ್ಟ ಹಣವನ್ನು ಮರಳಿ ಕೊಡುವಂತೆ ಕೇಳಿದ್ದಾರೆ. ಇದಕ್ಕೆ ಕೋಪಗೊಂಡ ಸರೋಜಾದೇವಿ ಅಸಭ್ಯವಾಗಿ ಮಾತನಾಡಿದ್ದಾರೆ.

    ಪರಿಶಿಷ್ಟ ಜಾತಿಯ ಕೋಟಾದಲ್ಲಿ ಟ್ಯಾಕ್ಸಿ ಕೊಡಿಸುವುದಾಗಿ ಹೇಳಿ ಸರೋಜಾದೇವಿ ನನ್ನ ಬಳಿ ಹಣ ಪಡೆದಿದ್ದಾರೆ. ಆದರೆ ಇಲ್ಲಿಯವರೆಗೂ ನನ್ನ ಕೆಲಸ ಮಾಡಿಕೊಟ್ಟಿಲ್ಲ. ಈ ಸಂಬಂಧ ವಿಚಾರಿಸಲು ಕರೆ ಮಾಡಿದ್ದಾಗ ಬಾಯಿಗೆ ಬಂದಂತೆ ಬೈದಿದ್ದಾರೆ. ನನಗೆ ಹಣ ವಾಪಸ್ ಕೊಡು ಅಂತ ಕೇಳುತ್ತಿಯಾ? ಮತ್ತೊಮ್ಮೆ ಹಣ ವಾಪಸ್ ಕೊಡು ಎಂದು ಕೇಳಿದರೆ ಊರಿಗೆ ಬಂದು ಹೊಡೆಯುತ್ತೇನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಸರೋಜಾದೇವಿ ನನ್ನ ಮನೆಗೆ ಕೆಲ ಸಹಚರರನ್ನು ಕಳುಹಿಸಿ ಬೆದರಿಕೆ ಹಾಕಿಸುತ್ತಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಮಂಜುನಾಥ್ ಅಳಲು ತೊಡಿಕೊಂಡಿದ್ದಾರೆ.

    ವಿಸ್ತರಣಾಧಿಕಾರಿ ಸರೋಜಾದೇವಿ ಪಡೆದಿರುವ ಲಂಚದ ವಿಡಿಯೋ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿರುವ ಆಡಿಯೋವನ್ನ ಮಂಜುನಾಥ್ ಬಿಡುಗಡೆಗೊಳಿಸಿದ್ದಾರೆ.

  • ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಭೂ ಮಾಪನ ಅಧಿಕಾರಿ

    ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಭೂ ಮಾಪನ ಅಧಿಕಾರಿ

    ಚಿಕ್ಕಬಳ್ಳಾಪುರ: ಜಮೀನು ಸರ್ವೆ ಮಾಡಲು 15 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ ಭೂ ಮಾಪನ ಅಧಿಕಾರಿ ಎಸಿಬಿ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ನಡೆದಿದೆ.

    ಎಡಿಎಲ್‍ಆರ್ ಕಚೇರಿಯ ಲಕ್ಷ್ಮಣ್ ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಸರ್ಕಾರಿ ಭೂ ಮಾಪನ ಅಧಿಕಾರಿ. ದೇವನಹಳ್ಳಿ ತಾಲೂಕಿನ ಸೋಲೂರು ಗ್ರಾಮದ ಸರ್ವೇ ನಂ 5 ಗೋಮಾಳದ ಜಮೀನನ ಪೈಕಿ 2 ಎಕರೆ ಜಮೀನನನ್ನು ನಾರಾಯಣಪ್ಪ ಎಂಬವರು ಅಕ್ರಮವಾಗಿ ಪೋಡಿ ಮಾಡಿಸಿಕೊಂಡಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದರು. ಈ ಸಂಬಂಧ ನಾರಾಯಣಪ್ಪ ಅವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು.

    ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಕೋರ್ಟ್, ಜಮೀನು ಸರ್ವೇ ಮಾಡುವಂತೆ ಎಡಿಎಲ್‍ಆರ್ ಭೂ ಮಾಪನ ಲಕ್ಷ್ಮಣ್ ಅವರಿಗೆ ಸೂಚನೆ ನೀಡಿತ್ತು. ಆದರೆ ಸರ್ವೇ ಮಾಡಲು ಹೋದ ಲಕ್ಷ್ಮಣ್ 15 ಸಾವಿರ ರೂ. ಲಂಚ ನೀಡುವಂತೆ ಗ್ರಾಮಸ್ಥರಿಗೆ ಕೇಳಿದ್ದರು. ಲಂಚ ಕೇಳಿದಕ್ಕೆ ಕೋಪಗೊಂಡ ಗ್ರಾಮಸ್ಥರು, ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

    ಲಕ್ಷ್ಮಣ್ ಅವರು ಗ್ರಾಮಸ್ಥರಿಂದ ತಾಲೂಕು ಕಚೇರಿಯ ಹೊರಗಡೆ ಇರುವ ಟೀ ಅಂಗಡಿ ಬಳಿ ಇಂದು 15 ಸಾವಿರ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಲಕ್ಷ್ಮಣ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಕೊಂಡಿದ್ದಾರೆ.