ರಾಮನಗರ: ಜಿಲ್ಲಾ ಪಂಚಾಯತ್ನ ಮುಂಭಾಗದ ಪಿಲ್ಲರ್ ಬಳಿ ಮೂರಡಿ ಉದ್ದದ ನಾಗರಹಾವು ಪ್ರತ್ಯೇಕ್ಷವಾಗಿ ಅಧಿಕಾರಿಗಳು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದರು. ಅಲ್ಲದೇ ಕಚೇರಿಗೆ ಪ್ರವೇಶ ಮಾಡಲು ಹೆದರಿ ಮತ್ತೊಂದು ಗೇಟ್ ಮೂಲಕ ಪ್ರವೇಶಿಸುವಂತಹ ವಾತಾವರಣ ಜಿಲ್ಲೆಯಲ್ಲಿ ಸೃಷ್ಟಿಯಾಗಿತ್ತು.
ಪಂಚಾಯತ್ ಕಟ್ಟಡದ ಕಚೇರಿಯೊಳಗೆ ಹೋಗುತ್ತಿದ್ದ ಸಾರ್ವಜನಿಕರ ಕಣ್ಣಿಗೆ ನಾಗರ ಹಾವು ಕಾಡಿಸಿಕೊಂಡಿದೆ. ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸಹ ಭಯಬೀತರಾಗಿದ್ದರು. ದಿನನಿತ್ಯ ಇಲ್ಲೇ ಓಡಾಡುತ್ತಿದ್ದೇವೆ ಈ ದಿನ ಎಲ್ಲಿಂದ ಬಂತು, ನಾನು ಇಲ್ಲೇ ಆಗಲೇ ಕಚೇರಿ ಒಳಗೆ ಹೋದ ಕಚ್ಚಿದ್ದರೆ ಅಷ್ಟೇ ಎಂದು ತಮ್ಮ ಸಹೋದ್ಯೋಗಿಗಳ ಬಳಿ ಆತಂಕ ವ್ಯಕ್ತಪಡಿಸಿದ್ದರು.

ಕಚೇರಿಯ ಮುಂಭಾಗ ಹಾವು ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಹೋಗಿದ್ದು, ಉರಗ ತಜ್ಞರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಯುವಕ ಹಾವನ್ನ ರಕ್ಷಿಸಿ ಗೋಣಿಚೀಲದಲ್ಲಿ ಹಾಕಿಕೊಂಡು ಹೋಗಿದ್ದಾನೆ. ಬಳಿಕ ನಾಗರ ಹಾವನ್ನ ಸುರಕ್ಷಿತ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಬಿಡಲಾಗಿದೆ.


ಮಲಗುತ್ತಾರೆ. ಪ್ರಯಾಣಿಕರ ಟಿಕೆಟ್ ದುಡ್ಡಿಗೆ ಸುರಕ್ಷತೆಯಿಲ್ಲ. ಕುಡಿಯಲು ನೀರು, ಸ್ನಾನಕ್ಕೆ ಕೋಣೆ, ಶೌಚಾಲಯವೂ ಸರಿಯಾಗಿಲ್ಲ ಎನ್ನುವುದರ ಕುರಿತು ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿನ ರಾತ್ರಿ ವಸತಿಯ ದುಸ್ಥಿತಿ ಬಗ್ಗೆ ವಿವರಿಸಲಾಗಿತ್ತು. ಇದಕ್ಕೆ ಸ್ಪಷ್ಟಿಕರಣ ನೀಡಿರುವ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಾರಿಗೆ ಸಿಬ್ಬಂದಿ ಘಟಕಕ್ಕೆ ತೆರಳಿ ಸೌಲಭ್ಯವನ್ನು ಉಪಯೋಗಿಸಿಕೊಳ್ಳದೇ ಬಸ್ ನಿಲ್ದಾಣದಲ್ಲಿ ವಸತಿ ಮಾಡುತ್ತಿದ್ದಾರೆ ಹಾಗೂ ಕೆಲವೊಂದು ಸಿಬ್ಬಂದಿ ಬಸ್ ನಿಲ್ದಾಣದ ಮತ್ತು ಘಟಕಗಳು ಸಮೀಪವಿಲ್ಲದ ಕಾರಣದಿಂದ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಬಸ್ ನಿಲ್ದಾಣದಲ್ಲಿ ಸಿಬ್ಬಂದಿಗೆ ರೆಸ್ಟ್ ರೂಂ ಹಾಗೂ ಇತರೆ ಸೌಲಭ್ಯಗಳು ಇಲ್ಲದೇ ಇರುವುದನ್ನು ಒಪ್ಪಿಕೊಂಡಿದ್ದಾರೆ.
















