Tag: officers

  • ಕಚೇರಿಯಲ್ಲಿಯೇ ಅಧಿಕಾರಿಗಳಿಂದ ಗುಂಡು, ತುಂಡು ಪಾರ್ಟಿ

    ಕಚೇರಿಯಲ್ಲಿಯೇ ಅಧಿಕಾರಿಗಳಿಂದ ಗುಂಡು, ತುಂಡು ಪಾರ್ಟಿ

    ಕೋಲಾರ: ಮೀನುಗಾರಿಕಾ ಕಚೇರಿಯಲ್ಲಿ ಅಧಿಕಾರಿಗಳು ಮದ್ಯಪಾನ ಪಾರ್ಟಿ ಮಾಡಿದ್ದು ಭಾರೀ ಟೀಕೆಗೆ ಗುರಿಯಾಗಿದೆ.

    ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಬೂದಿಕೋಟೆಯ ಮಾರ್ಕಂಡೇಯ ಅಚ್ಚುಕಟ್ಟು ಪ್ರದೇಶದಲ್ಲಿರುವ ಮಹಾರಾಜರ ಕಾಲದ ಮೀನುಮರಿ ಸಾಕಾಣಿಕಾ ಕೇಂದ್ರದಲ್ಲಿ ಅಧಿಕಾರಿಗಳು ಡ್ರಿಂಕ್ಸ್ ಪಾರ್ಟಿ ಮಾಡಿದ್ದಾರೆ.

    ಉಪನಿರ್ದೇಶಕ ಮಹೇಶ್ ಹಾಗೂ ಸಹಾಯಕ ನಿರ್ದೇಶಕ ಪೆದ್ದಣ್ಣ ಹಾಗೂ ಕೆಲಸ ಅಧಿಕಾರಿ ಸಿಬ್ಬಂದಿ ಕಚೇರಿಯಲ್ಲಿ, ಗುಂಡು ತುಂಡು ಪಾರ್ಟಿ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಉಪನಿರ್ದೇಶಕ ಮಹೇಶ್ ಇತ್ತೀಚೆಗೆ ಪದೇ ಪದೇ ಮೀನು ಮರಿ ಸಾಕಾಣಿಕಾ ಕೇಂದ್ರದಲ್ಲಿ ಕುಡಿದು ಅಲ್ಲಿನ ಸಿಬ್ಬಂದಿಯನ್ನು ವಿನಾಕಾರಣ ವೈಯಕ್ತಿಕ ಕೆಲಸಗಳಿಗೆ ಬಳಸಿಕೊಳ್ಳುವುದು ಹೆಚ್ಚಾಗಿದ್ದು, ಇದರಿಂದ ಬೇಸತ್ತಿರುವ ಸಿಬ್ಬಂದಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ಕಚೇರಿಯಲ್ಲಿ ಗುಂಡು ತುಂಡು ಪಾರ್ಟಿ ಮಾಡುವ ಮೂಲಕ ಸರ್ಕಾರಿ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

  • ನಿರ್ಮಿತಿ ಕೇಂದ್ರದಲ್ಲಿ ಭ್ರಷ್ಟಾಚಾರ – ಗುತ್ತಿಗೆದಾರರ ಬದಲು ಸಿಬ್ಬಂದಿಯ ಖಾತೆಗೆ ಹಣ ವರ್ಗಾವಣೆ

    ನಿರ್ಮಿತಿ ಕೇಂದ್ರದಲ್ಲಿ ಭ್ರಷ್ಟಾಚಾರ – ಗುತ್ತಿಗೆದಾರರ ಬದಲು ಸಿಬ್ಬಂದಿಯ ಖಾತೆಗೆ ಹಣ ವರ್ಗಾವಣೆ

    ಶಿವಮೊಗ್ಗ: ಇಲ್ಲಿನ ನಿರ್ಮಿತಿ ಕೇಂದ್ರದ ಬ್ಯಾಂಕ್ ಖಾತೆಯ ಹಣವನ್ನು ಸಿಬ್ಬಂದಿಯ ಖಾತೆಗೆ ವರ್ಗಾವಣೆ ಮಾಡಿ ಅವ್ಯವಹಾರ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ.

    ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿರುವ ನಿರ್ಮಿತಿ ಕೇಂದ್ರವು ವಾರ್ಷಿಕ ಸುಮಾರು 25-30 ಕೋಟಿ ರೂ. ಅನುದಾನದ ಕಾಮಗಾರಿಗಳನ್ನು ನಿರ್ವಹಣೆ ಮಾಡುತ್ತಿದೆ. ಇದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ಹಸುತ್ತಿದೆ. ಈ ಕೇಂದ್ರವು ಅಕ್ರಮಗಳ ಗೂಡಾಗಿದ್ದು, ಕಾಮಗಾರಿಗಳು ಹಾಗೂ ಅನುದಾನ ಬಳಕೆ ಬಗ್ಗೆ ಸಮಗ್ರ ತನಿಖೆ ಅಗತ್ಯವಿದೆ ಎಂಬ ಕೂಗು ಕೇಳಿ ಬಂದಿದೆ.

    ನಿರ್ಮಿತಿ ಕೇಂದ್ರದಲ್ಲಿ ಐದು ವರ್ಷ ಕೆಲಸ ಮಾಡಿದ್ದೇನೆ. ಆದರೆ ಅಲ್ಲಿನ ಭ್ರಷ್ಟಾಚಾರದಿಂದ ಬೇಸತ್ತು ಮೂರು ತಿಂಗಳಿಂದ ಕೆಲಸ ಬಿಟ್ಟು ಹೊರ ಬಂದೆ. ಈಗ ನನಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ನಿರ್ಮಿತಿ ಕೇಂದ್ರದ ಮಾಜಿ ಉದ್ಯೋಗಿ ಗುರುರಾಜ್ ಕಾರಂತ್ ಹೇಳಿದ್ದಾರೆ.

    ಶಿವಮೊಗ್ಗದ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಕೇವಲ ನನ್ನ ಬ್ಯಾಂಕ್ ಖಾತೆ ಅಷ್ಟೇ ಅಲ್ಲದೆ ಉಳಿದ ಸಿಬ್ಬಂದಿಗೂ ಹಣ ಜಮಾ ಮಾಡುತ್ತಿದ್ದರು. ಪ್ರತಿ ವರ್ಷವೂ ನನ್ನ ಖಾತೆಗೆ 57 ಲಕ್ಷ ರೂ. ಜಮೆ ಮಾಡುತ್ತಿದ್ದರು. ಮತ್ತೆ ಅದನ್ನು ಪಡೆಯುತ್ತಿದ್ದರು. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನ ವಿರುದ್ಧ ತಿರುಗಿಬಿದ್ದಿದ್ದಾರೆ. ಈಗಲೂ ಅಧಿಕಾರಿಗಳು ಇಂತಹ ಅವ್ಯವಹಾರ ಮುಂದುವರಿಸಿದ್ದಾರೆ ಎಂದು ದೂರಿದರು.

    ಯಾವುದೇ ಸರ್ಕಾರಿ ಕೆಲಸ ಮಾಡಿದರೆ ಅದು ಗುತ್ತಿಗೆದಾರನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕು. ಆದರೆ ಶಿವಮೊಗ್ಗದ ನಿರ್ಮಿತ ಕೇಂದ್ರದ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಹಣವನ್ನು ವರ್ಗಾವಣೆ ಮಾಡಿ, ಬಳಿಕ ಗುತ್ತಿಗೆದಾರರಿಗೆ ನೀಡಲಾಗುತ್ತಿದ್ದಾರೆ. ನಿರ್ಮಿತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಸುಮಾರು 17 ಜನರಲ್ಲಿ 14 ಜನರ ಖಾತೆಗೆ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಜಮೆಯಾಗುತ್ತಲೇ ಇರುತ್ತದೆ ಎಂದು ವಕೀಲ ಆರ್.ಟಿ.ಐ ಕಾರ್ಯಕರ್ತ ವಿನೋದ್ ಆರೋಪಿಸಿದ್ದಾರೆ.

    ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ನಾಗರಾಜ್ ಅವರು ಅಕ್ರಮ ನಡೆಸುತ್ತಿದ್ದಾರೆ. ಸಿಬ್ಬಂದಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವುದಷ್ಟೇ ಅಲ್ಲ, ಅಕ್ರಮ ಕಾಮಗಾರಿ, ಸುಳ್ಳು ದಾಖಲೆಗಳ ಸೃಷ್ಟಿ ಸೇರಿದಂತೆ ಅನೇಕ ಭ್ರಷ್ಟಾಚಾರ ನಡೆದಿವೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಆರಂಭಿಸಬೇಕಾಗುತ್ತದೆ ಎಂದು ವಿನೋದ್ ಒತ್ತಾಯಿಸಿದ್ದಾರೆ.

    ಈ ಬಗ್ಗೆ ಆರ್‍ಟಿಇನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ನಾಗರಾಜ್ ಅವರು, ನಮ್ಮ ಸಿಬ್ಬಂದಿ ಮೂಲಕವೇ ಕೆಲಸ ಮಾಡಿಸಿರುತ್ತೇವೆ. ಹೀಗಾಗಿ ಅವರ ಖಾತೆಗೆ ಹಣ ಹಾಕುತ್ತೇವೆ ಎಂದು ಹೇಳಿದ್ದಾರೆ. ಸಿಬ್ಬಂದಿ ಮೂಲಕವೇ ಕೆಲಸ ಮಾಡಿಸಲು ಅವಕಾಶ ಇದೇಯಾ? ಸಿಬ್ಬಂದಿ ಮೂಲಕವೇ ಮಾಡಿಸಿದರೆ ಟಿಡಿಎಸ್, ಜಿಎಸ್‍ಟಿ ಹಣವನ್ನು ಹೇಗೆ ಕಡಿತ ಮಾಡಿಸಲಾಗುತ್ತದೆ? ಈ ಎಲ್ಲಾ ಪ್ರಶ್ನೆಗಳಿಗೂ ನಿರ್ಮಿತಿ ಕೇಂದ್ರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಉತ್ತರ ನೀಡಬೇಕಿದೆ ಎಂದು ಆರ್.ಟಿ.ಐ ಕಾರ್ಯಕರ್ತ ವಿನೋದ್ ಆಗ್ರಹಿಸಿದ್ದಾರೆ.

  • ನಕ್ಸಲ್ ಪೀಡಿತ ಪ್ರದೇಶದಲ್ಲಿ ಎಎನ್‍ಎಫ್ ಅಧಿಕಾರಿಗಳಿಂದ ಹೆಲ್ತ್ ಕ್ಯಾಂಪ್

    ನಕ್ಸಲ್ ಪೀಡಿತ ಪ್ರದೇಶದಲ್ಲಿ ಎಎನ್‍ಎಫ್ ಅಧಿಕಾರಿಗಳಿಂದ ಹೆಲ್ತ್ ಕ್ಯಾಂಪ್

    ಉಡುಪಿ: ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಂದೂಕು ಹಿಡಿದು ಸದಾ ಗಸ್ತು ತಿರುಗೋದು ಎಎನ್‍ಎಫ್ ಕರ್ತವ್ಯ. ಆ್ಯಂಟಿ ನಕ್ಸಲ್ ಫೋರ್ಸ್ ಸಿಬ್ಬಂದಿ ಕರ್ತವ್ಯಕ್ಕೆ ಹೊರತಾಗಿ ಸಾರ್ವಜನಿಕರು ಮೆಚ್ಚುವ ಕಾರ್ಯ ಮಾಡಿದ್ದಾರೆ.

    ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ನಕ್ಸಲ್ ಪೀಡಿತ ಪ್ರದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿ ತೋರಿದ್ದಾರೆ. ನಕ್ಸಲ್ ಪೀಡಿತ ಪ್ರದೇಶ ಕಬ್ಬಿನಾಲೆಯಲ್ಲಿ ಹೆಲ್ತ್ ಕ್ಯಾಂಪ್ ಮಾಡಿ, ಹೆಬ್ರಿ ತಾಲೂಕಿಗೆ ಒಳಪಡುವ ನಕ್ಸಲ್ ಪೀಡಿತ ಎಲ್ಲಾ ಗ್ರಾಮಗಳ ಜನರನ್ನು ಕರೆಸಿ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ.

    ತೀರಾ ಗ್ರಾಮೀಣ ಪ್ರದೇಶದ ಜನರನ್ನು ಎಎನ್‍ಎಫ್ ಅಧಿಕಾರಿಗಳು ತಮ್ಮದೇ ಜೀಪಿನಲ್ಲಿ ಕರೆದುಕೊಂಡು ಬಂದು ತಪಾಸಣೆಗೆ ಒಳಪಡಿಸಿದ್ದಾರೆ. ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಗಳಿಗೆ ಅಲ್ಲೇ ಔಷಧಿ ಕೊಡಿಸಿದ್ದಾರೆ. ಮುಂಗಾರು ಮಳೆ ಆರಂಭದಲ್ಲಿ ಜ್ವರ, ಚರ್ಮರೋಗ ಗ್ರಾಮಸ್ಥರಿಗೆ ಆವರಿಸುವುದರಿಂದ ಈ ಹೆಲ್ತ್ ಕ್ಯಾಂಪ್ ಬಹಳ ಮಹತ್ವ ಪಡೆದಿದೆ. ಜನಕ್ಕೂ ಈ ಹೆಲ್ತ್ ಕ್ಯಾಂಪ್ ಬಹಳ ಉಪಯೋಗವಾಗಿದೆ.

  • ಅಕ್ರಮ ಸೀಮೆಎಣ್ಣೆ ಮಾರಾಟ- ಸತ್ತವರ ಮೇಲೆ ಕೇಸ್ ದಾಖಲು

    ಅಕ್ರಮ ಸೀಮೆಎಣ್ಣೆ ಮಾರಾಟ- ಸತ್ತವರ ಮೇಲೆ ಕೇಸ್ ದಾಖಲು

    – ಅಕ್ರಮ ಸಾಗಾಟ ಬಯಲಿಗೆಳೆದಿದ್ದ ಪಬ್ಲಿಕ್ ಟಿವಿ

    ಕೊಪ್ಪಳ: ಸತ್ತವರು ಎದ್ದು ಬರೋದನ್ನು ನಾವು ಅಗಾಗ ಕೇಳಿದ್ದೇವೆ, ನೋಡಿದ್ದೇವೆ. ಆದರೆ ಕಳೆದ ಹಲವು ವರ್ಷಗಳ ಹಿಂದೆ ಸತ್ತವರ ಮೇಲೂ ಕೇಸ್ ದಾಖಲಾಗೋದನ್ನು ನೀವು ಎಂದು ಕೇಳಿರಲಿಕ್ಕಿಲ್ಲ. ಆದರೆ ಗಂಗಾವತಿಯಲ್ಲಿ ಸತ್ತವರ ಮೇಲೂ ಕೇಸ್ ದಾಖಲಾಗಿದೆ. ಆಹಾರ ಅಧಿಕಾರಿಗಳ ನೀಡಿದ ವರದಿಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆಯ ನಂತರ ಸತ್ತ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.

    ಬರೋಬ್ಬರಿ 3 ತಿಂಗಳ ಹಿಂದೆ ಕೊಪ್ಪಳದ ಗಂಗಾವತಿಯಲ್ಲಿ ಒಂದು ಘಟನೆ ನಡೆದಿತ್ತು. ಪಬ್ಲಿಕ್ ಟಿವಿ ಅಕ್ರಮ ಸೀಮೆ ಎಣ್ಣೆ ಮಾರಾಟ ಬಗ್ಗೆ ರಿಯಾಲಿಟಿ ಚೆಕ್ ಮಾಡಿ, ಅಕ್ರಮ ನಡೆಸುತ್ತಿದ್ದವರ ಬಗ್ಗೆ ವರದಿ ಮಾಡಿತ್ತು. ರೇಷನ್ ಪಡೆಯುವ ಬಡವರ ಮನೆ ಸೇರಬೇಕಿದ್ದ ಸೀಮೆ ಎಣ್ಣೆಯನ್ನು ಕದ್ದು ರಾತ್ರೋರಾತ್ರಿ ಅಕ್ರಮ ಮಾರಟ ಮಾಡಲಾಗುತ್ತಿತ್ತು. ಇದನ್ನ ಬೆನ್ನಟ್ಟಿ ಅಕ್ರಮದ ಬಗ್ಗೆ ಆಹಾರ ಇಲಾಖೆ ಗಮನಕ್ಕೆ ಪಬ್ಲಿಕ್ ಟಿವಿ ಮಾಹಿತಿ ನೀಡಿತ್ತು.

    ಅಕ್ರಮ ವಾಸನೆ ಹಿಡಿದು ಬಂದ ಅಧಿಕಾರಿಗಳು ಕೊಪ್ಪಳದ ಗಂಗಾವತಿಯ ಅಂಗಡಿ ಸಂಗಣ್ಣನ ಕ್ಯಾಂಪ್ ಅಲ್ಲಿ ದಾಳಿ ನಡೆಸಿದರು. ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಲೀಟರ್ ಸೀಮೆಎಣ್ಣೆ ತುಂಬಿದ ಬ್ಯಾರಲ್‍ಗಳು ಸಿಕ್ಕಿದ್ದು, ಖಾಲಿ ಬ್ಯಾರಲ್‍ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದರು. ಆದರೆ ಇದರಲ್ಲಿ ಅಧಿಕಾರಿಗಳು ತಮ್ಮ ಜಾಣ್ಮೆ ಪ್ರದರ್ಶಿಸಿ ಅಕ್ರಮ ಮಾಡ್ತಿದ್ದವರನ್ನು ಬಿಟ್ಟು ಮನೆ ಬಾಡಿಗೆ ಕೊಟ್ಟಿದ್ದ ಅಮಾಯಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಂತರದ ದಾಳಿಯಲ್ಲಿ ಅಕ್ರಮ ಸೀಮೆಎಣ್ಣೆಯ ಕಿಂಗ್ ಪಿನ್ ಶೇಖ್‍ನಭಿ ಮೇಲೆ ಪ್ರಕರಣ ದಾಖಲಾಗಿಲ್ಲ. ಇದರ ಜೊತೆಗೆ 4 ವರ್ಷದ ಹಿಂದೆಯ ಸತ್ತಿದ್ದ ಒಬ್ಬ ಮಹಿಳೆಯ ಮೇಲೂ ಪ್ರಕರಣವನ್ನು ದಾಖಲಿಸಿ ಅಕ್ರಮಕ್ಕೆ ಅಧಿಕಾರಿಗಳು ಯಾವ ರೀತಿ ಬೆನ್ನೆಲುಬಾಗಿ ನಿಂತಿದ್ದಾರೆ ಎನ್ನುವುದು ಎತ್ತಿ ತೋರಿಸುತ್ತಿದೆ.

    ಸೀಮೆಎಣ್ಣೆಯ ಅಕ್ರಮದ ಕಿಂಗ್ ಪಿನ್ ಮಾಜಿ ಗಂಗಾವತಿ ನಗರ ಸಭೆಯ ಸದಸ್ಯ ಶೇಖ್‍ನಭಿ ಮತ್ತು ಸಹೋದರ ಮೊದಲು ಜೆಡಿಎಸ್ ಪಕ್ಷದಲ್ಲಿದ್ದರು. ಅಕ್ರಮ ಬಯಲಾಗುತ್ತಿದ್ದಂತೆ ಗಂಗಾವತಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಜೊತೆ ಕೈ ಜೊಡಿಸಿದ್ದಾರೆ. ಅಕ್ರಮದ ರೂವಾರಿಗಳನ್ನು ಇಕ್ಬಾಲ್ ಅನ್ಸಾರಿ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿ ಆರೋಪಿಗಳಿಗೆ ಬೆಂಗಾವಲಾಗಿ ನಿಂತಿದ್ದಾರೆ. ಬಡವರ ಬಗ್ಗೆ ಕಾಳಜಿ ತೋರಿಸಬೇಕಾಗಿದ್ದ ಒಬ್ಬ ಮಾಜಿ ಶಾಸಕರು ಆರೋಪಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಅಕ್ರಮಕ್ಕೆ ತಾವೇ ಬೆನ್ನೆಲುಬಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

    ಆಹಾರ ಇಲಾಖೆ ಅವರು ಸತ್ತವರ ಮೇಲೆ ಪ್ರಕರಣ ನೀಡಿದ್ದಾರೆ. ಇವರ ಮೇಲೆ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಕಮಿಷನ್ ಪಡೀತಿರಾ? ಡಿಕೆಶಿ ಪ್ರಶ್ನೆಗೆ ಹೌದು ಎಂದ ಅಧಿಕಾರಿ

    ಕಮಿಷನ್ ಪಡೀತಿರಾ? ಡಿಕೆಶಿ ಪ್ರಶ್ನೆಗೆ ಹೌದು ಎಂದ ಅಧಿಕಾರಿ

    – ಸಿ.ಎಸ್.ಶಿವಳ್ಳಿ, ಅವ್ರ ಪತ್ನಿ ಹಸು ಇದ್ದಂಗೆ, ನಾನು ಹಾಗಲ್ಲ
    – ಅಧಿಕಾರಿಗಳಿಗೆ ಸಚಿವರಿಂದ ಕ್ಲಾಸ್

    ಹುಬ್ಬಳ್ಳಿ: ಕಮಿಷನ್ ಪಡೀತಿರಾ ಎಂಬ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಅಧಿಕಾರಿಯೊಬ್ಬರು ಹೌದು ಎಂದು ಉತ್ತರಿಸಿದ ಪ್ರಸಂಗ ಇಂದು ಕುಂದಗೊಳದಲ್ಲಿ ನಡೆಯಿತು.

    ಕುಂದಗೋಳ ತಾಲೂಕಿನ ಸವಾಯಿ ಗಂಧರ್ವ ಭವನದಲ್ಲಿ ಇಂದು ಸಚಿವರು ಹಲವು ಇಲಾಖೆಗಳ ಅಧಿಕಾರಗಳ ಜೊತೆಗೆ ಸಭೆ ನಡೆಸಿದರು. ಈ ವೇಳೆ ಸೂಕ್ತ ಮಾಹಿತಿ ನೀಡದ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು.

    ವಿವಿಧ ಯೋಜನೆಗಳ ಅಡಿ ಸರ್ಕಾರದಿಂದ ಬಡವರಿಗೆ ಮನೆ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಮನೆ ನಿರ್ಮಾಣ ಮಾಡಿಕೊಡಲು ಅಧಿಕಾರಿಗಳು ಎಷ್ಟು ಕಮಿಷನ್ ಪಡೆಯುತ್ತಾರಾ ಎಂದು ಸಚಿವರು ಕುಂದಗೊಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ಮೇಟಿ ಅವರಿಗೆ ಪ್ರಶ್ನಿಸಿದರು. ಈ ವೇಳೆ ಅಧಿಕಾರಿ ಮೇಟಿ ಅವರು ಹೌದು ಎಂದು ಉತ್ತರಿಸಿದರು. ನೋಡಿ ನೀವು ಎಷ್ಟು ಹಣ ಪಡೆಯುತ್ತಿರಾ ಎಂಬ ಎಲ್ಲ ರೀತಿಯ ಮಾಹಿತಿಯೂ ನನ್ನ ಬಳಿಯಿದೆ. ಆಡಿಯೋ ಇದೆ, ಪ್ಲೇ ಮಾಡ್ಲಾ ಎಂದು ಸಚಿವರು ಕ್ಲಾಸ್ ತೆಗೆದುಕೊಂಡರು.

    ಜಿಲ್ಲಾ ಪ್ರಗತಿ ಬಗ್ಗೆ ವರದಿ ನೀಡುತ್ತಿದ್ದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೊರವರ್ ಅವರನ್ನು ತಡೆದ ಡಿ.ಕೆ.ಶಿವಕುಮಾರ್ ಅವರು, ನೋಡಪ್ಪಾ ನೀನು ಜಿಲ್ಲಾ ಮಟ್ಟದ ಅಧಿಕಾರಿ ಆಗಿರುವುದಕ್ಕೆ ನಾಲಾಯಕ್. ನಾನು ಇಲ್ಲಿಗೆ ಹೊಸಬ. ಹೀಗಾಗಿ ಎಷ್ಟು ಪಂಚಾಯತ್‍ಗಳಿವೆ. ಯೋಜನೆ ಯಾವುದು ಎಂಬ ಮಾಹಿತಿ ವರದಿ ವಾಚನ ಮಾಡಬೇಕು. ಅದನ್ನು ಬಿಟ್ಟು ಏಕಾಏಕಿ ಯೋಜನೆಗೆ ಖರ್ಚು ಮಾಡಿದ ಹಣದ ಮಾಹಿತಿ ನೀಡುವುದಲ್ಲ ಎಂದು ಗುಡುಗಿದರು.

    ಮಾಜಿ ಸಚಿವ ಸಿ.ಎಸ್.ಶಿವಳ್ಳಿ ಮತ್ತು ಶಾಸಕಿ ಕುಸುಮಾ ಶಿವಳ್ಳಿ ಅವರು ಹಸು ಇದ್ದಂಗೆ. ಆದರೆ ನಾನು ಹಾಗಲ್ಲ. ನನಗೆ ಎಲ್ಲ ರೀತಿ ಲೆಕ್ಕ ನೀಡಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಅಧಿಕಾರಿಗಳು ಸರಿಯಾದ ಮಾಹಿತಿ ಇಟ್ಟುಕೊಂಡು ಮಾತನಾಡಬೇಕು. ನಾನು ಜಿಲ್ಲಾ ಪಂಚಾಯಿತಿ ಸದಸ್ಯನಾಗಿಯೇ ಸಚಿವನಾಗಿದ್ದೇನೆ. ಎಲ್ಲಾ ಇಲಾಖೆ ಬಗ್ಗೆ ಗೊತ್ತು. ನೀವು ನೀಡುವ ಮಾಹಿತಿ ಕೊರತೆ ಇರಬಾರದು. ಅಧಿಕಾರಿಗಳು ಫಲಾನುಭವಿಗಳ ಅಂಕಿ ಸಂಖ್ಯೆ ಸಹಿತ ಮಾಹಿತಿ ಕೊಡಬೇಕು. ನಾನು ಇಲ್ಲಿ ಹಾರ ತುರಾಯಿ ಹಾರಿಸಿಕೊಂಡು ಜೈಕಾರ ಹಾಕಿಸಿಕೊಂಡು ಊಟ ಮಾಡಿ ಹೋಗುವುದಕ್ಕೆ ಬಂದಿಲ್ಲ. ಎಚ್ಚರಿಕೆಯಿಂದ ಮಾಹಿತಿ ಕೊಡಿ. ಮಾಧ್ಯಮದವರಿದ್ದಾರೆ ಎಂದು ಸಭೆ ಆರಂಭಕ್ಕೂ ಮುನ್ನವೇ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

    ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರಾದ ಯುಟಿ ಖಾದರ್, ಎಂಟಿಬಿ ನಾಗರಾಜ, ಜಯಮಾಲಾ, ಶಾಸಕಿ ಕುಸುಮಾ ಶಿವಳ್ಳಿ ಉಪಸ್ಥಿತರಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ- ಅಧಿಕಾರಿಗಳ ಕಾರ್ಯವೈಖರಿಗೆ ಜಿಟಿಡಿ ಗರಂ

    ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ- ಅಧಿಕಾರಿಗಳ ಕಾರ್ಯವೈಖರಿಗೆ ಜಿಟಿಡಿ ಗರಂ

    ಮೈಸೂರು: ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರು ಅಧಿಕಾರಿಗಳ ಕಾರ್ಯವೈಖರಿಗೆ ಗರಂ ಆಗಿದ್ದಾರೆ.  ಇದನ್ನೂ ಓದಿ: ಎಷ್ಟಾದರೂ ಖರ್ಚು ಮಾಡಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ- ಅಧಿಕಾರಿಗಳಿಗೆ ದೇಶಪಾಂಡೆ ಎಚ್ಚರಿಕೆ

    ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವ ಜಿಟಿಡಿ, ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಬೇರೆ ಎಲ್ಲಿಲ್ಲದ ರೋಗ ನಿಮಗೆ ನನ್ನ ಕ್ಷೇತ್ರದಲ್ಲೆ ಇದೆ ಸಭೆಯಲ್ಲಿಯೇ ತಲೆ ಚಚ್ಚಿಕೊಂಡಿದ್ದಾರೆ. ಅಲ್ಲದೆ ಇದೇ ವೇಳೆ ತಪ್ಪು ಮಾಹಿತಿ ಕೊಟ್ಟ ಅಧಿಕಾರಿಗೆ ಜಿಟಿಡಿ ಸಭೆಯಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ಮೇ ವರೆಗೆ ಟ್ಯಾಂಕರ್ ಬಿಲ್ ಆಗಿದ್ಯಾ? ಅದನ್ನು ನೀನು ನನಗೆ ತೋರಿಸಿದ್ದೀಯಾ?. ನೀನು ಬಿಲ್ ಕ್ಲಿಯರ್ ಮಾಡದಿದ್ರೆ ಸಸ್ಪೆಂಡ್ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

  • ರಾತ್ರೋರಾತ್ರಿ ಅಕ್ರಮವಾಗಿ ಮರಳು ಸಾಗಿಸ್ತಿದ್ದ ಲಾರಿಗಳು ವಶ

    ರಾತ್ರೋರಾತ್ರಿ ಅಕ್ರಮವಾಗಿ ಮರಳು ಸಾಗಿಸ್ತಿದ್ದ ಲಾರಿಗಳು ವಶ

    ಗದಗ: ಜಿಪಿಎಸ್ ಇಲ್ಲದೆ ಓವರ್ ಲೋಡ್ ಮೂಲಕ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 5 ಲಾರಿಗಳ ಅಧಿಕಾರಿಗಳು ವಶಪಡೆದಿರುವ ಘಟನೆ ಗದಗನಲ್ಲಿ ನಡೆದಿದೆ.

    ಮುಂಡರಗಿ ತುಂಗಭದ್ರಾ ನದಿಯಿಂದ ಗದಗ, ಹುಬ್ಬಳ್ಳಿ, ಧಾರವಾಡಕ್ಕೆ ರಾತ್ರೋರಾತ್ರಿ ಅಕ್ರಮವಾಗಿ ಮರಳು ಸಾಗುತ್ತಿರುವ ವಾಹನಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗದಗ್ ನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಸಂತೋಷ ಹಾಗೂ ಶಹರ ಪೊಲೀಸ್ ಠಾಣೆ ಸಿಬ್ಬಂದಿ ನೇತೃತ್ವದಲ್ಲಿ ರಿಂಗ್ ರೋಡ್ ಬಳಿ ದಾಳಿ ಮಾಡಲಾಗಿದೆ.

    ಅಕ್ರಮ ಮರಳು ಸಾಗಾಟ ಆರೋಪದ ಮೇಲೆ ವಿಚಾರಣೆಗೆ ಬಂದ ವೇಳೆ ವಾಹನಗಳ ಚಾಲಕರು ಹಾಗೂ ಮಾಲೀಕರು ಅಧಿಕಾರಿಗಳಿಗೆ ಅವಾಜ್ ಹಾಕಿದ್ದರು. ನಾವು ಜಿಪಿಎಸ್ ಡಿಸ್ ಕನೆಕ್ಟ್ ಮಾಡಿಲ್ಲ. ಎಲೆಕ್ಟ್ರಾನಿಕ್ ವಸ್ತುಗಳು ಹಾಳಾದರೆ ನಾವೇನು ಮಾಡಲು ಸಾಧ್ಯ. ನೀವು ಯಾವ ಉದ್ದೇಶಕ್ಕೆ ನಮ್ಮ ವಾಹನಗಳನ್ನ ಹಿಡಿದ್ರಿ? ಪಾಸ್ ಟೈಮಿಂಗ್ ಇದ್ದರೂ ಹೇಗೆ ಹಿಡಿದ್ರಿ? ನಿತ್ಯ ಎಲ್ಲಾ ವಾಹನಗಳನ್ನ ಹೀಗೆ ಹಿಡಿಯಬೇಕು. ಇಲ್ಲವಾದರೆ ಠಾಣೆ ಹೊರಗೆ ಹೋರಾಟ ಮಾಡುತ್ತೇವೆ ಎಂದು ಅವಾಜ್ ಹಾಕಿದ್ದಾರೆ.

    ವಾಹನಗಳ ಚಾಲಕರು ಹಾಗೂ ಮಾಲೀಕರು ಅವಾಜ್ ಗೆ ಬಗ್ಗದ ಅಧಿಕಾರಿಗಳು 5 ಮರಳು ಲಾರಿಗಳ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ – 12 ಉನ್ನತ ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

    ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ – 12 ಉನ್ನತ ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

    ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿರುವ ಮೋದಿ ಸರ್ಕಾರ 12 ಮಂದಿ ತೆರಿಗೆ ಅಧಿಕಾರಗಳಿಗೆ ಕಡ್ಡಾಯವಾಗಿ ನಿವೃತ್ತಿ ಪಡೆಯುವಂತೆ ಸೂಚಿಸಿದೆ.

    ಭಾರತೀಯ ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ, ಮುಖ್ಯ ಕಮೀಷನರ್ ಸ್ಥಾನದಲ್ಲಿರುವ ಹಿರಿಯ ಅಧಿಕಾರಗಳು, ಹಣಕಾಸು ಸಚಿವಾಲಯದ ಪ್ರಧಾನ ಆಯುಕ್ತರು ಮತ್ತು ಆದಾಯ ತೆರಿಗೆ ಇಲಾಖೆಯ ಕಮೀಷನರ್ ಸೇರಿ ಒಟ್ಟು 12 ಜನ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಪಡೆಯುವಂತೆ ಸೂಚಿಸಿದೆ.

    ಈ 12 ಅಧಿಕಾರಿಗಳ ಪೈಕಿ ಕೆಲವರ ಮೇಲೆ ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪವಿದೆ. ಕೆಲವರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಗಂಭೀರ ಸ್ವರೂಪದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆಯ 56 (ಜೆ) ನಿಯಮದ ಅಡಿ ನಿವೃತ್ತಿ ಹೊಂದಬೇಕು ಎಂದು ಹಣಕಾಸು ಸಚಿವಾಲಯ ನಿರ್ದೇಶನ ಮಾಡಿದೆ.

    ಈ 12 ಜನ ಅಧಿಕಾರಿಗಳ ಪಟ್ಟಿಯಲ್ಲಿ ಜಂಟಿ ಆಯುಕ್ತ ಶ್ರೇಣಿಯ ಅಧಿಕಾರಿ ಅಶೋಕ್ ಅಗರ್‍ವಾಲ್ ಇದ್ದಾರೆ. ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿಗೆ ಸಹಾಯ ಮಾಡಿ ಭ್ರಷ್ಟಾಚಾರ ಎಸಗಿದ್ದಾರೆ ಎನ್ನುವ ಆರೋಪ ಅಶೋಕ್ ಅಗರ್‍ವಾಲ್ ಮೇಲಿದೆ. ಇಬ್ಬರು ಮಹಿಳಾ ಐಆರ್‍ಎಸ್ ಅಧಿಕಾರಿಗಳಿಗೆ ಲೈಂಗಿಕ ಕಿರುಕುಳದ ನೀಡಿದ್ದಾರೆ ಎಂಬ ಆರೋಪ ಬಂದಿರುವ ಎಸ್.ಕೆ ಶ್ರೀವಾಸ್ತವ ಅವರಿಗೂ ನಿವೃತ್ತಿ ಪಡೆಯುವಂತೆ ಸೂಚಿಸಲಾಗಿದೆ.

    ತನ್ನ ಮತ್ತು ತನ್ನ ಕುಟುಂಬದ ಸದಸ್ಯರ ಹೆಸರಿನಲ್ಲಿ ಅಕ್ರಮವಾಗಿ 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ 1985 ಬ್ಯಾಚಿನ ಐಆರ್‍ಎಸ್‍ನ ಅಧಿಕಾರಿ ಹೋಮಿ ರಾಜ್ವಂಶ್ ಮತ್ತು ತಮಗೆ ಬೇಕಾದ ರೀತಿಯಲ್ಲಿ ಆದೇಶಗಳನ್ನು ನೀಡುತ್ತಿದ್ದ ಆರೋಪದ ಮೇಲೆ ಬಿ.ಬಿ ರಾಜೇಂದ್ರ ಪ್ರಸಾದ್ ಅವರನ್ನು ಕೊಡ ನಿವೃತ್ತರಾಗಬೇಕು ಎಂದು ಹಣಕಾಸು ಸಚಿವಾಲಯ ಸೂಚನೆ ನೀಡಿದೆ.

    ಇವರನ್ನು ಬಿಟ್ಟರೆ ಅಜಯ್ ಕುಮಾರ್ ಸಿಂಗ್, ಅಲೋಕ್ ಕುಮಾರ್ ಮಿತ್ರ, ಚಂದನ್ ಸೈನಿ ಭಾರ್ತಿ, ಅಂಡಸು ರವಿಂದರ್, ವಿವೇಕ್ ಬಾತ್ರಾ, ಸ್ವತಭ ಸುಮನ್ ಮತ್ತು ರಾಮ್ ಕುಮಾರ್ ಭಾರ್ಗವ ಅವರು ಕೂಡ ಪಟ್ಟಿಯಾಲ್ಲಿದ್ದಾರೆ ಎಂದು ವರದಿಯಾಗಿದೆ.

    ಹಣಕಾಸು ಇಲಾಖೆಯ 56 (ಜೆ) ನಿಯಮದ ಹಲವು ದಶಕಗಳಿಂದ ಅಸ್ವಿತ್ವದಲ್ಲಿದ್ದು ಇಲ್ಲಿಯವರೆಗೆ ಪರಿಣಾಮಕಾರಿಯಾಗಿ ಜಾರಿಯಾಗಿರಲಿಲ್ಲ. ಆದರೆ ಈಗ ಈ ನಿಯಮದ ಅಡಿ ನಿವೃತ್ತಿ ಪಡೆಯಲು ಸೂಚಿಸಿದ್ದು ಮಹತ್ವ ಎನಿಸಿಕೊಂಡಿದೆ.

  • ಕೆಲಸ ಮಾಡದಿದ್ರೆ ನಾಯಿ ಸಹ ಮೂಸಿ ನೋಡಲ್ಲ: ಭಗವಂತ್ ಖೂಬಾ

    ಕೆಲಸ ಮಾಡದಿದ್ರೆ ನಾಯಿ ಸಹ ಮೂಸಿ ನೋಡಲ್ಲ: ಭಗವಂತ್ ಖೂಬಾ

    ಬೀದರ್: ಸರಿಯಾಗಿ ಕೆಲಸ ಮಾಡದೇ ಇದ್ದರೆ ನಾಯಿಗಳು ಸಹ ಮೂಸಿ ನೋಡಲ್ಲ ಎಂದು ಬ್ರಿಮ್ಸ್ ಆಸ್ಪತ್ರೆಯ ವೈದ್ಯರನ್ನು ಮತ್ತು ಅಧಿಕಾರಿಗಳನ್ನು ಸಂಸದ ಭಗವಂತ್ ಖೂಬಾ ತರಾಟೆಗೆ ತೆಗೆದುಕೊಂಡಿದ್ದಾರೆ.

    ಬ್ರಿಮ್ಸ್ ಆಸ್ಪತ್ರೆಯ ಮೇಲ್ಛಾವಣಿ ಕುಸಿತ ಹಿನ್ನೆಲೆ ಇಂದು ಅಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಖೂಬಾ ಅವರು, ನೀವು ಸರಿಯಾಗಿ ಕೆಲಸ ಮಾಡದಿದ್ದರೆ ನಾಯಿ ಸಹ ಮೂಸಿ ನೋಡುವುದಿಲ್ಲ. 1 ವರ್ಷದ ಹಿಂದೆ 100 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಬ್ರಿಮ್ಸ್ ಆಸ್ಪತ್ರೆ ಮೇಲ್ಛಾವಣಿ ಮಳೆಯಿಂದಾಗಿ ಕುಸಿದಿತ್ತು. ಜಿಲ್ಲಾ ಆಸ್ಪತ್ರೆಯ ಕಳಪೆ ಕಾಮಗಾರಿ ನಡೆದಿದೆ ಎಂದು ಇಂದು ಖೂಬಾ ಅವರು ಭೇಟಿ ನೀಡಿ ಸಭೆ ನಡೆಸಿ ಬ್ರೀಮ್ಸ್ ನಿರ್ದೇಶಕ ಕ್ಷೀರ ಸಾಗರನ್ನು ಸೇರಿದಂತೆ ವೈದ್ಯರನ್ನು ತರಾಟೆಗೆ ತಗೆದುಕೊಂಡರು.

    ಕಾಮಗಾರಿಯಲ್ಲಿ ನಿರ್ಲಕ್ಷ್ಯ ತೋರಿದ್ದ ಸಿಬ್ಬಂದಿಗಳನ್ನು ಯಾಕೆ ಅಮಾನತು ಮಾಡಿಲ್ಲಾ.? ಆಸ್ಪತ್ರೆಯಲ್ಲಿ ಏನ್ ಕೆಲಸ ಮಾಡುತ್ತಿದ್ದೀರಾ. ನಿಮ್ಮ ಜೀವನಕ್ಕಾಗಿ ಕೆಲಸ ಮಾಡುತ್ತಿದ್ದೀರಾ ಇಲ್ಲಾ ಜನರಿಗಾಗಿ ಕೆಲಸ ಮಾಡುತ್ತಿದ್ದಿರಾ..? ನಿರ್ಲಕ್ಷ್ಯ ತೋರಿದವರನ್ನು ಅಮಾನತು ಮಾಡದೇ ಹೇಗೆ ತನಿಖೆ ನಡೆಸುತ್ತಿರಾ ಎಂದು ಪ್ರಶ್ನಿಸಿ ಅಧಿಕಾರಿಗಳ ಮೇಲೆ ಕೋಪಗೊಂಡರು.

  • ಹೆಸರಿಗೆ ಮಾತ್ರ ಬಯಲುಮುಕ್ತ ಗ್ರಾಮ- ಇಲ್ಲಿ ಶೌಚಾಲಯವೂ ಇಲ್ಲ, ಜನರ ಪರದಾಟವೂ ತಪ್ಪಿಲ್ಲ

    ಹೆಸರಿಗೆ ಮಾತ್ರ ಬಯಲುಮುಕ್ತ ಗ್ರಾಮ- ಇಲ್ಲಿ ಶೌಚಾಲಯವೂ ಇಲ್ಲ, ಜನರ ಪರದಾಟವೂ ತಪ್ಪಿಲ್ಲ

    ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯನ್ನು ಕಳೆದ ವರ್ಷ ಬಯಲುಮುಕ್ತ ಶೌಚಾಲಯ ಜಿಲ್ಲೆ ಎಂದು ಘೋಷಿಸಲಾಗಿದೆ. ಆದರೆ ಅದು ಅಧಿಕಾರಿಗಳ ಘೋಷಣೆಯಲ್ಲಷ್ಟೇ ಬಯಲು ಮುಕ್ತ ಶೌಚಾಲಯ ಜಿಲ್ಲೆಯಾಗಿದೆ.

    ಹೌದು. ರಾಮನಗರ ತಾಲೂಕಿನ ಕೂಟಗಲ್ ಸಮೀಪದ ತಿಗಳರದೊಡ್ಡಿ ಗ್ರಾಮಸ್ಥರು ಇಲ್ಲಿಯ ತನಕ ಗ್ರಾಮದಲ್ಲಿ ಒಂದು ಶೌಚಾಲಯವನ್ನೂ ಕಂಡಿಲ್ಲ. ಅಲ್ಲದೆ ಗುಡಿಸಲು ಮುಕ್ತ ರಾಜ್ಯದ ಕಲ್ಪನೆಯಲ್ಲೂ ಸಹ ಈ ಗ್ರಾಮಕ್ಕೆ ಯಾವುದೇ ಪ್ರಯೋಜನವಾಗದೆ ಗುಡಿಸಲುಗಳಲ್ಲೇ ಜನ ವಾಸವಾಗಿದ್ದಾರೆ. ಶೌಚಾಲಯಕ್ಕೆ ಬಯಲನ್ನೇ ಆಧಾರವಾಗಿಸಿಕೊಂಡಿದ್ದು ಪುರುಷರು ಹೇಗೋ ಕಾಲ ಕಳೆದರೆ. ಕತ್ತಲಾಗುವುದನ್ನು ಕಾಯ್ದುಕೊಂಡೇ ಮಹಿಳೆಯರು ಶೌಚಾಲಯಕ್ಕೆ ಹೋಗಬೇಕು. ಹೀಗಾಗಿ ರಾಮನಗರ ಹೆಸರಿಗೆ ಮಾತ್ರ ಬಯಲುಮುಕ್ತ ಜಿಲ್ಲೆಯಾಗಿದೆ.

    ಅಲ್ಲದೆ ಶೌಚಕ್ಕೆ ಜಮೀನುಗಳಿಗೆ ಹೋದರೆ ಅದರ ಮಾಲೀಕರು ಬೈಯುತ್ತಾರೆ. ಕತ್ತಲಾದ ಮೇಲೆ ಹೋಗಬೇಕಾದರೆ ಕಾಡು ಪ್ರಾಣಿಗಳು ಯಾವಾಗ ದಾಳಿ ಮಾಡುತ್ತವೋ ಎನ್ನುವ ಆತಂಕದಲ್ಲಿಯೇ ಬಯಲಿಗೆ ಹೋಗಬೇಕು. ಯಾರೇ ಬಂದರೂ ಅಷ್ಟೇ, ಕೇವಲ ಭರವಸೆಗಳನ್ನ ನೀಡಿ ಹೋಗುತ್ತಾರೆ. ಆದರೆ ಯಾರೂ ಕೂಡ ನಮಗೆ ನೆರವಾಗುತ್ತಿಲ್ಲ, ಗ್ರಾಮದ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಸ್ಥಳೀಯ ಮಹಿಳೆಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಇಷ್ಟೆಲ್ಲ ಸಮಸ್ಯೆಗಳು ಇದ್ದರೂ ತಿಗಳರದೊಡ್ಡಿ ಗ್ರಾಮವನ್ನು ಯಾವ ಆಧಾರದ ಮೇಲೆ ಬಯಲು ಮುಕ್ತ ಗ್ರಾಮವನ್ನಾಗಿ ಅಧಿಕಾರಿಗಳು ಘೋಷಿಸಿದ್ದಾರೋ ಗೊತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.