Tag: oil

  • ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ವಾಷಿಂಗ್ಟನ್‌: ಭಾರತವು (India) ರಷ್ಯಾದಿಂದ (Russia) ತೈಲ (Oil) ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಪುನರುಚ್ಚರಿಸಿದ್ದಾರೆ.

    ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರೊಂದಿಗೆ ಟ್ರಂಪ್ ಮಾತನಾಡಿದ್ದಾರೆ. ಈ ವೇಳೆ, ಭಾರತವು ತನ್ನ ರಷ್ಯಾದ ತೈಲ ಖರೀದಿಯನ್ನು ಕಡಿತಗೊಳಿಸುತ್ತಿದೆ. ಚೀನಾ ರಷ್ಯಾದ ತೈಲ ಖರೀದಿಯನ್ನು ಗಣನೀಯವಾಗಿ ಕಡಿತಗೊಳಿಸುತ್ತಿದೆ ಎಂದಿದ್ದಾರೆ. ಇದೇ ವೇಳೆ ರಷ್ಯಾದ ತೈಲ ಕಂಪನಿಗಳಾದ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲಿನ ಹೊಸ ನಿರ್ಬಂಧಗಳನ್ನು ಅವರು ಉಲ್ಲೇಖಿಸಿ ಮಾತನಾಡಿದ್ದಾರೆ. ಇದನ್ನೂ ಓದಿ: ವ್ಯಾಪಾರ ಬೆದರಿಕೆ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ: ಟ್ರಂಪ್‌

    ವ್ಯಾಪಾರ, ತಂತ್ರಜ್ಞಾನ ಮತ್ತು ಕಚ್ಚಾ ವಸ್ತುಗಳ ಪ್ರವೇಶದ ಕುರಿತು ವಾಷಿಂಗ್ಟನ್ ಮತ್ತು ಚೀನಾ ನಡುವೆ ಘರ್ಷಣೆ ನಡೆಯುತ್ತಿದೆ. ಇದರ ನಡುವೆ ಏಷ್ಯಾ ಪ್ರವಾಸದ ಭಾಗವಾಗಿ ದಕ್ಷಿಣ ಕೊರಿಯಾದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಟ್ರಂಪ್ ಭೇಟಿಯಾಗಲಿದ್ದಾರೆ. ಅವರ ನಿಗದಿತ ಭೇಟಿಗೂ ಮನ್ನವೇ ಟ್ರಂಪ್‌ ಈ ಹೇಳಿಕೆ ನೀಡಿದ್ದಾರೆ.

    ಇತ್ತೀಚೆಗೆ ಟ್ರಂಪ್‌ ವರದಿಗಾರರೊಂದಿಗೆ ಮಾತನಾಡುತ್ತಾ, ವರ್ಷಾಂತ್ಯದ ವೇಳೆಗೆ ರಷ್ಯಾದೀಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭಾರತ ಭರವಸೆ ನೀಡಿದೆ. ಈ ಪ್ರಕ್ರಿಯೆಗೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದಿದ್ದರು.

    ಇದರ ನಡುವೆ ಟ್ರಂಪ್ ಹೇಳಿಕೆಗಳನ್ನು ಭಾರತ ನಿರಂತರವಾಗಿ ತಿರಸ್ಕರಿಸುತ್ತಾ ಬಂದಿದೆ. ಅಲ್ಲದೇ ನಮ್ಮ ಇಂಧನ ನೀತಿಯು ಸ್ವತಂತ್ರವಾಗಿ ಉಳಿದಿದೆ. ಕಚ್ಚಾ ತೈಲ ಆಮದಿನ ಬಗ್ಗೆ ನಿರ್ಧಾರಗಳನ್ನು ರಾಷ್ಟ್ರೀಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಒತ್ತಿ ಹೇಳಿದೆ. ಇದನ್ನೂ ಓದಿ: ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

  • ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್‌ ಜೋಶಿ

    ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್‌ ಜೋಶಿ

    – 2011ರ VOPPA ಆದೇಶಕ್ಕೆ ಪ್ರಮುಖ ತಿದ್ದುಪಡಿ
    – ಆದೇಶ ಪಾಲಿಸದಿದ್ರೆ ಕಠಿಣ ಕ್ರಮ; ಸಚಿವರ ಎಚ್ಚರಿಕೆ

    ನವದೆಹಲಿ: ಖಾದ್ಯ ತೈಲ ವಲಯದಲ್ಲಿ ಹೆಚ್ಚಿನ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆಗಾಗಿ ಕೇಂದ್ರ ಸರ್ಕಾರ 2011ರ VOPPA ಆದೇಶಕ್ಕೆ ತಿದ್ದುಪಡಿ ತಂದಿದ್ದು, ಪಾಲಿಸದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ತರಕಾರಿ ತೈಲ ಉತ್ಪನ್ನಗಳು, ಉತ್ಪಾದನೆ ಮತ್ತು ಲಭ್ಯತೆ (ನಿಯಂತ್ರಣ) ಆದೇಶ-2011 (VOPPA ಆದೇಶ)ಕ್ಕೆ ಪ್ರಮುಖ ತಿದ್ದುಪಡಿಗೆ ಸೂಚಿಸಿದೆ. ತಿದ್ದುಪಡಿ ಮಾಡಲಾದ VOPPA ಆದೇಶ-2025 ಭಾರತದಲ್ಲಿ ಖಾದ್ಯ ತೈಲ ವಲಯದಾದ್ಯಂತ ನಿಯಂತ್ರಕ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆ ಗುರಿ ಹೊಂದಿದೆ ಎಂದಿದ್ದಾರೆ. ಇದನ್ನೂ ಓದಿ: Bihar Election| ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ

    ನೋಂದಣಿ ಕಡ್ಡಾಯ: ತಿದ್ದುಪಡಿ ಆದೇಶದಂತೆ ಖಾದ್ಯ ತೈಲ ಪೂರೈಕೆಯಲ್ಲಿ ಭಾಗಿಯಾಗಿರುವ ಎಲ್ಲಾ ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು, ಮಿಶ್ರಣಕಾರರು, ಮರು-ಪ್ಯಾಕರ್‌ಗಳು ಮತ್ತಿತರ ಪಾಲುದಾರರ ನೋಂದಣಿ ಕಡ್ಡಾಯವಾಗಿದೆ. ಅಲ್ಲದೇ, ಆನ್‌ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ರಿಟರ್ನ್‌ ಸಲ್ಲಿಕೆ ಸಹ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

    ಎಲ್ಲಾ ಖಾದ್ಯ ತೈಲ ಸಂಬಂಧಿತ ಘಟಕಗಳು https://www.nsws.gov.in ನಲ್ಲಿ ರಾಷ್ಟ್ರೀಯ ಏಕ ವಿಂಡೋ ವ್ಯವಸ್ಥೆ ಮೂಲಕ ನೋಂದಾಯಿಸಿಕೊಳ್ಳಬೇಕು. ನಂತರ ಘಟಕಗಳು ಮಾಸಿಕ ಉತ್ಪಾದನೆ, ಸ್ಟಾಕ್ ಮತ್ತು ಲಭ್ಯತೆಯ ರಿಟರ್ನ್‌ಗಳನ್ನು https://www.edibleoilindia.in ಮೂಲಕ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಆಸೆಗೆ ತಣ್ಣೀರು – ಮಲೇಷ್ಯಾಗೆ ಬರಲ್ಲ ಎಂದ ಮೋದಿ

    ಖಾದ್ಯ ತೈಲ ವಲಯದಲ್ಲಿ ನಿಖರ ದತ್ತಾಂಶ ಸಂಗ್ರಹಣೆ, ನೈಜ-ಸಮಯದ ಮೇಲ್ವಿಚಾರಣೆ ಮತ್ತು ನೀತಿಗಳ ಸುಧಾರಣೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಣಾಯಕ ಹೆಜ್ಜೆಯಿರಿಸಿದೆ. ತಪಾಸಣೆ ಮತ್ತು ಕ್ಷೇತ್ರ ಪರಿಶೀಲನೆಗೆ ಯೋಜಿಸಿದ್ದು, ಎಣ್ಣೆ ಉತ್ಪನ್ನಗಳು, ಉತ್ಪಾದನೆ ಮತ್ತು ಲಭ್ಯತೆ ಬಗೆಗಿನ ಕ್ರಮವನ್ನು ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

    ಆದೇಶ ಉಲ್ಲಂಘಿಸಿದರೆ ಕ್ರಮ: ಈ ತಿದ್ದುಪಡಿ VOPPA ಆದೇಶ-2025 ಅನ್ನು ಪಾಲಿಸದಿದ್ದರೆ, ನೋಂದಣಿ, ರಿಟರ್ನ್‌ ಸಲ್ಲಿಸಲು ವಿಫಲವಾದ ತೈಲ ಘಟಕಗಳ ವಿರುದ್ಧ ದಂಡ ವಿಧಿಸುವ ಜತೆಗೆ VOPPA ಆದೇಶ ಉಲ್ಲಂಘನೆ ಎಂದು ಪರಿಗಣಿಸಿ ಕಾಯ್ದೆ 2008ರ ನಿಬಂಧನೆಯಡಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಎಚ್ಚರಿಸಿದ್ದಾರೆ.

    VOPPA ತಿದ್ದುಪಡಿ ಆದೇಶದ ಅನುಸರಣೆ ಕೇವಲ ನಿಯಂತ್ರಕ ಅವಶ್ಯಕತೆಯಲ್ಲ. ಇದು ಭಾರತದ ಆಹಾರ ಭದ್ರತಾ ಮೂಲಸೌಕರ್ಯಕ್ಕೆ ನಿರ್ಣಾಯಕ ಕೊಡುಗೆಯಾಗಿದೆ. ಖಾದ್ಯ ತೈಲ ವಲಯದಲ್ಲಿ ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕತೆಯನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.

  • ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    – ಡೊನಾಲ್ಡ್‌ ಟ್ರಂಪ್‌ ವ್ಯಾಪಾರ ಸಲಹೆಗಾರ ಪೀಟರ್ ನವರೊ ಹೇಳಿಕೆ
    – ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ ಎಂದಿದ್ದ ನವರೊ

    ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ (Modis War) ಎಂದು ಕರೆದಿದ್ದ ಡೊನಾಲ್ಡ್‌ ಟ್ರಂಪ್‌ (Donald Trump) ವ್ಯಾಪಾರ ಸಲಹೆಗಾರ ಪೀಟರ್ ನವರೊ (Peter Navarro) ಈಗ ಭಾರತದವರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.

    ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು (Brahmins) ಭಾರತೀಯ ಜನರ ವೆಚ್ಚದಲ್ಲಿ ಶ್ರೀಮಂತರಾಗುತ್ತಿದ್ದಾರೆ ಎಂದು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ (SCO Summit) ಮೋದಿ, ಪುಟಿನ್‌, ಕ್ಸಿ ಜಿನ್‌ಪಿಂಗ್‌ ಮಾತುಕತೆ ನಡೆಸುತ್ತಿರುವ ಮಹತ್ವದ ಸಮಯದಲ್ಲೇ ಈ ಹೇಳಿಕೆ ಬಂದಿರುವುದು ವಿಶೇಷ.

    ಟಿವಿ ವಾಹಿನಿಯ ಜೊತೆ ಮಾತನಾಡಿದ ಪೀಟರ್ ನವರೊ, ಮೋದಿ ಒಬ್ಬ ಮಹಾನ್ ನಾಯಕ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ ಅವರು ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಜೊತೆ ಯಾಕೆ ಮಾತನಾಡುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ. ನಾನು ಭಾರತೀಯ ಜನರಿಗೆ ಹೇಳುತ್ತೇನೆ, ದಯವಿಟ್ಟು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸಿ ಶ್ರೀಮಂತರಾಗುತ್ತಿದ್ದಾರೆ. ಇದನ್ನು ನಾವು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

    ತನ್ನ ಒತ್ತಡಕ್ಕೆ ಭಾರತ (India) ಬಗ್ಗದೇ ಸೆಡ್ಡು ಹೊಡೆದ ಬೆನ್ನಲ್ಲೇ ಹತಾಶೆಗೊಂಡಿರುವ ಟ್ರಂಪ್‌ (Donald Trump) ಸರ್ಕಾರದ ಅಧಿಕಾರಿಗಳು ಈಗ ನರೇಂದ್ರ ಮೋದಿ (Narendra Modi) ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ 50% ತೆರಿಗೆ ಹಾಕಿ ಯುರೋಪ್‌ಗೆ ಅಮೆರಿಕ ಮನವಿ

    ಹಿಂದೆ ಪೀಟರ್ ನವರೊ ಹೇಳಿದ್ದೇನು?
    ರಷ್ಯಾದ ಇಂಧನವನ್ನು ಭಾರತ ನಿರಂತರವಾಗಿ ಖರೀದಿಸುತ್ತಿರುವುದರಿಂದ ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ನಡೆಸುತ್ತಿದೆ. ಮಾಸ್ಕೋದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸಿದರೆ ಅಮೆರಿಕ ಭಾರತದ ಮೇಲೆ ವಿಧಿಸಿದ 25% ಸುಂಕ ಕಡಿತ ಕಾಣಬಹುದು.

    ರಷ್ಯಾದಿಂದ ಭಾರತ ರಿಯಾಯಿತಿ ದರದಲ್ಲಿ ತೈಲವನ್ನು ಖರೀದಿಸುತ್ತದೆ. ಖರೀದಿಸಿದ ಕಚ್ಚಾತೈಲವನ್ನು ರಿಫೈನರಿಯಲ್ಲಿ ಸಂಸ್ಕರಿಸಿ ಬೇರೆ ದೇಶಗಳಿಗೆ ಮಾರಾಟ ಮಾಡುವ ಮೂಲಕ ಲಾಭ ಮಾಡುತ್ತಿದೆ. ಈ ನಿರ್ಧಾರದಿಂದ ಭಾರತ ರಷ್ಯಾಕ್ಕೆ ಸಹಾಯ ಮಾಡಿದರೆ ಅಮೆರಿಕಕ್ಕೆ ಹಾನಿ ಮಾಡುತ್ತಿದೆ. ಇದನ್ನೂ ಓದಿಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

    ಭಾರತ ಮಾಡುತ್ತಿರುವ ಕೆಲಸದಿಂದಾಗಿ ಅಮೆರಿಕದಲ್ಲಿ ಪ್ರತಿಯೊಬ್ಬರೂ ನಷ್ಟ ಅನುಭವಿಸುತ್ತಾರೆ. ಭಾರತದ ಹೆಚ್ಚಿನ ಸುಂಕಗಳು ನಮ್ಮ ಉದ್ಯೋಗಗಳು, ಕಾರ್ಖಾನೆಗಳನ್ನು ಕಸಿದುಕೊಳ್ಳುತ್ತಿದೆ. ಅಮೆರಿಕನ್ನರು ಆರ್ಥಿಕವಾಗಿ ಬಳಲುತ್ತಿರುವಾಗ ಉಕ್ರೇನ್‌ ಯುದ್ಧಕ್ಕೆ ರಷ್ಯಾಕ್ಕೆ ಹಣಕಾಸಿನ ಸಹಾಯ ಮಾಡುತ್ತಿದೆ. ಇನ್ನೊಂದು ಕಡೆ ಉಕ್ರೇನ್‌ ನೆರವು ನೀಡುವಂತೆ ಅಮೆರಿಕ ಮತ್ತು ಯುರೋಪ್‌ ದೇಶವನ್ನು ಕೇಳಿಕೊಳ್ಳುತ್ತಿದೆ.

    ಭಾರತಕ್ಕೆ ಈಗ ಅಹಂಕಾರ ಬಂದಿದೆ. ನಮಗೆ ಹೆಚ್ಚಿನ ಸುಂಕಗಳು ಇಲ್ಲ. ನಮ್ಮದು ಸಾರ್ವಭೌಮ ಹೊಂದಿದ ದೇಶ. ನಾವು ಯಾರಿಂದ ಬೇಕಾದರೂ ತೈಲ ಖರೀದಿಸಬಹುದು ಎಂಬಂತೆ ಭಾರತ ವರ್ತಿಸುತ್ತಿದೆ. ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ ಹೌದು. ಆದರೆ ಅಮೆರಿಕದ ವಿಶ್ವದ ದೊಡ್ಡ ಆರ್ಥಿಕತೆತಯನ್ನು ಹೊಂದಿದ ದೇಶವಾಗಿದೆ. ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿರುವ ಪ್ರತಿಯೊಬ್ಬರೂ ನಷ್ಟ ಅನುಭವಿಸುತ್ತಿದ್ದಾರೆ ಎಂದರು.

  • ಅಯೋಧ್ಯೆಯಲ್ಲಿ ದೀಪದಿಂದ ಎಣ್ಣೆ ಕದ್ದ ಮಕ್ಕಳು; ವೀಡಿಯೋ ಹಂಚಿಕೊಂಡ ಅಖಿಲೇಶ್‌ ಯಾದವ್‌

    ಅಯೋಧ್ಯೆಯಲ್ಲಿ ದೀಪದಿಂದ ಎಣ್ಣೆ ಕದ್ದ ಮಕ್ಕಳು; ವೀಡಿಯೋ ಹಂಚಿಕೊಂಡ ಅಖಿಲೇಶ್‌ ಯಾದವ್‌

    ಲಕ್ನೋ: ಅಯೋಧ್ಯೆಯ (Ayodhya) ಸರಯು ನದಿಯ ತಟದಲ್ಲಿ 22 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಬರೆಯಲಾಗಿದೆ. ಈ ಸ್ಮರಣೀಯ ಸಂದರ್ಭದ ಮರುದಿನವೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ.

    ದೀಪೋತ್ಸವದ (Deepotsava) ದಿನ ಕೆಲವು ಮಕ್ಕಳು ಘಾಟ್‌ನಲ್ಲಿ ದೀಪದಿಂದ ಎಣ್ಣೆಯನ್ನು ತೆಗೆದುಕೊಂಡು ಪಾತ್ರೆಗಳಲ್ಲಿ ತುಂಬುತ್ತಿರುವ ದೃಶ್ಯದ ವೀಡಿಯೋವನ್ನು ಅಖಿಲೇಶ್‌ ಯಾದವ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Ayodhya Deepotsav: ಶ್ರೀರಾಮ ಜನ್ಮಭೂಮಿಯಲ್ಲಿ ದೀಪೋತ್ಸವ – ಅಯೋಧ್ಯೆ ಬೆಳಗಿದ 24 ಲಕ್ಷ ಹಣತೆಗಳು

    ದೈವಿಕತೆಯ ನಡುವೆ ಬಡತನ… ಬಡತನವು ದೀಪಗಳಿಂದ ಎಣ್ಣೆಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರೆ, ಆಚರಣೆಯ ಬೆಳಕು ಮಂದವಾಗುತ್ತದೆ. ಘಟ್ಟ ಮಾತ್ರವಲ್ಲದೆ ಪ್ರತಿಯೊಬ್ಬ ಬಡವರ ಮನೆಯೂ ಬೆಳಗುವ ಇಂತಹ ಹಬ್ಬ ಬರಲಿ ಎಂಬುದು ನಮ್ಮ ಹಾರೈಕೆ ಎಂದು ಎಸ್‌ಪಿ ಮುಖ್ಯಸ್ಥ ಬರೆದುಕೊಂಡಿದ್ದಾರೆ.

    7ನೇ ಆವೃತ್ತಿಯ ದೀಪೋತ್ಸವದಂದು ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಿ ವಿಶ್ವ ದಾಖಲೆ ಬರೆಯಲಾಯಿತು. ಒಟ್ಟು 22.23 ಲಕ್ಷ ಮಣ್ಣಿನ ದೀಪಗಳು ಅಯೋಧ್ಯೆಯನ್ನು ಬೆಳಗಿದವು. ಕಳೆದ ವರ್ಷಕ್ಕಿಂತ 6.47 ಲಕ್ಷ ಹೆಚ್ಚು ಹಣತೆಗಳನ್ನು ಈ ಬಾರಿ ಹಚ್ಚಲಾಗಿತ್ತು. 25,000 ಸ್ವಯಂಸೇವಕರು ನದಿಯ ಉದ್ದಕ್ಕೂ ರಾಮ್ ಕಿ ಪೈಡಿಯ 51 ಘಾಟ್‌ಗಳಲ್ಲಿ ಬೆಳಗಿದರು. ಇದನ್ನೂ ಓದಿ: ಇಂದು ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ – ಏಕಕಾಲದಲ್ಲಿ ಬೆಳಗಲಿದೆ 24 ಲಕ್ಷ ಹಣತೆ

    ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನ ಪ್ರತಿನಿಧಿಗಳು ಡ್ರೋನ್‌ಗಳನ್ನು ಬಳಸಿ ದೀಪಗಳನ್ನು ಎಣಿಸಿ ಅದನ್ನು ವಿಶ್ವ ದಾಖಲೆಯಾಗಿ ನೋಂದಾಯಿಸಿದ ನಂತರ ಅಯೋಧ್ಯೆ ‘ಜೈ ಶ್ರೀರಾಮ್’ ಘೋಷಣೆಗಳೊಂದಿಗೆ ಪ್ರತಿಧ್ವನಿಸಿತು.

  • ಚೀನಾದಿಂದ ತೈಲಕ್ಕೆ ಭಾರೀ ಬೇಡಿಕೆ – ಆದ್ರೂ ರಷ್ಯಾಗೆ ಭಾರತದ ಕಡೆ ಒಲವೇಕೆ?

    ಚೀನಾದಿಂದ ತೈಲಕ್ಕೆ ಭಾರೀ ಬೇಡಿಕೆ – ಆದ್ರೂ ರಷ್ಯಾಗೆ ಭಾರತದ ಕಡೆ ಒಲವೇಕೆ?

    ನವದೆಹಲಿ: ಚೀನಾದಿಂದ (China) ಭಾರೀ ಬೇಡಿಕೆಯಿದ್ದರೂ, ಭಾರತಕ್ಕೆ (India) ತೈಲವನ್ನು ಮಾರಾಟ ಮಾಡಲು ರಷ್ಯಾ (Russia) ಒಲವು ತೋರುತ್ತಿದೆ. ಹೀಗಾಗಿ ಎಷ್ಟು ಸಾಧ್ಯವೋ ಅಷ್ಟು ತೈಲವನ್ನು (Crude Oil) ಭಾರತಕ್ಕೆ ಮಾರಾಟ ಮಾಡುತ್ತಿದೆ.

    ಭಾರತವು ವರ್ಷದ ಹಿಂದೆ ರಷ್ಯಾದ ತೈಲವನ್ನು ಖರೀದಿಸಿರಲಿಲ್ಲ. ಆದರೆ ಯುಎಸ್ ಮತ್ತು ಯುರೋಪಿಯನ್ ಒಕ್ಕೂಟವು ಮಾಸ್ಕೋ ಮೇಲೆ ನಿರ್ಬಂಧಗಳನ್ನು ವಿಧಿಸಿದ ನಂತರ ಭಾರತಕ್ಕೆ ನಿರ್ಣಾಯಕ ಮಾರುಕಟ್ಟೆಯಾಗಿದೆ. ಫೆಬ್ರವರಿಯಲ್ಲಿ ಭಾರತವು ರಷ್ಯಾದಿಂದ ದಿನಕ್ಕೆ ಸುಮಾರು 18 ಲಕ್ಷ ಬ್ಯಾರಲ್‌ ತೈಲವನ್ನು ಆಮದು ಮಾಡಿಕೊಂಡಿದೆ. ಇದನ್ನೂ ಓದಿ: ಬದಲಾಯಿತು ಲುಕ್ – ತಲೆ ಕೂದಲು, ಗಡ್ಡ ಟ್ರೀಮ್ ಮಾಡಿದ ರಾಹುಲ್ ಗಾಂಧಿ

    ಅಂತೆಯೇ ಚೀನಾ ಕೂಡ ರಷ್ಯಾದಿಂದ ತೈಲ ಖರೀದಿಸುತ್ತಿದೆ. ಕೋವಿಡ್ ಶೂನ್ಯ ನೀತಿಗಳನ್ನು ಕೈಬಿಟ್ಟ ಚೀನಾ ಈಗ ಹೆಚ್ಚಿನ ಪ್ರಮಾಣದಲ್ಲಿ ರಷ್ಯಾದ ತೈಲವನ್ನು ಖರೀದಿಸಬಹುದು. ಆದರೂ ರಷ್ಯಾಗೆ ಭಾರತೀಯ ಮಾರುಕಟ್ಟೆ ಮೇಲೆ ಹೆಚ್ಚಿನ ಒಲವು ಇದೆ.

    ಕಳೆದ ತಿಂಗಳು, ಚೀನಾಕ್ಕೆ ರಷ್ಯಾ ದಿನಕ್ಕೆ 23 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ರಫ್ತು ಮಾಡಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಧಿಸಲಾಗಿದ್ದ ಪ್ರಯಾಣ ನಿರ್ಬಂಧಗಳು ತೆರವಾಗಿದೆ. ಹೀಗಾಗಿ ಏಷ್ಯಾದ ದೈತ್ಯ (ಚೀನಾ) ತೈಲ ಬೇಡಿಕೆಯು ಈ ವರ್ಷದಲ್ಲಿ ದಿನಕ್ಕೆ ಸುಮಾರು 9,00,000 ಬ್ಯಾರೆಲ್‌ಗಳಷ್ಟು ಹೆಚ್ಚಾಗಬಹುದು. ಇದನ್ನೂ ಓದಿ: ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

    ಭಾರತದ ಮಾರುಕಟ್ಟೆ ಮೇಲೆ ರಷ್ಯಾಗೆ ಒಲವೇಕೆ?
    ಭಾರತಕ್ಕೆ ತೈಲ ರಫ್ತು ರಷ್ಯಾಗೆ ಹೆಚ್ಚು ಲಾಭದಾಯಕವಾಗಿದೆ. ರಷ್ಯಾದ ಪಶ್ಚಿಮ ಬಂದರುಗಳಿಂದ ಭಾರತವನ್ನು ತಲುಪಲು ಟ್ಯಾಂಕರ್ ಸರಾಸರಿ 35 ದಿನಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಚೀನಾಕ್ಕೆ 40 ರಿಂದ 45 ದಿನಗಳು ಬೇಕಾಗುತ್ತದೆ ಹೀಗಾಗಿ ಚೀನಾದ ಬೇಡಿಕೆಯಲ್ಲಿ ಹೆಚ್ಚಳ ಕಂಡರೂ ಭಾರತಕ್ಕೆ ರಷ್ಯಾ ಎಷ್ಟು ಸಾಧ್ಯವೋ ಅಷ್ಟು ತೈಲ ಮಾರಾಟವನ್ನು ಮುಂದುವರಿಸಲಿದೆ.

    ಚೀನಾ ತಮ್ಮದೇ ಆದ ಶಿಪ್ಪಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಚೀನಾ ರಿಫೈನರಿಗಳು ರಷ್ಯಾದಿಂದ ತೈಲ ಆಮದು ಮಾಡಿಕೊಂಡು, ಸಂಸ್ಕರಿಸಿ ಮಾರಾಟ ಮಾಡುತ್ತದೆ. ಇದರಿಂದ ರಷ್ಯಾ ಹೆಚ್ಚಿನ ಆದಾಯ ಗಳಿಸಲು ಸಾಧ್ಯವಾಗುವುದಿಲ್ಲ. ಆದರೆ ಭಾರತದಲ್ಲಿ ತೈಲ ಸಂಸ್ಕರಣಾ ಕಂಪನಿಗಳು ಖಾಸಗಿಯದ್ದಾಗಿವೆ. ರಷ್ಯಾ ಹೆಚ್ಚಿನ ಆದಾಯ ಗಳಿಸಲು ಭಾರತದ ಮಾರುಕಟ್ಟೆ ಸಹಕಾರಿಯಾಗಿದೆ.

  • ಷರತ್ತು ವಿಧಿಸಿ ಭಾರತಕ್ಕೆ ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ತೈಲ ನೀಡಲು ಮುಂದಾದ ರಷ್ಯಾ

    ಷರತ್ತು ವಿಧಿಸಿ ಭಾರತಕ್ಕೆ ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ತೈಲ ನೀಡಲು ಮುಂದಾದ ರಷ್ಯಾ

    ನವದೆಹಲಿ: ಒಂದು ಷರತ್ತನ್ನು ವಿಧಿಸಿದ ಭಾರತಕ್ಕೆ ಇನ್ನಷ್ಟು ರಿಯಾಯಿತಿ ದರದಲ್ಲಿ ತೈಲವನ್ನು(Crude Oil) ನೀಡಲು ನಾನು ಸಿದ್ಧ ಎಂದು ರಷ್ಯಾ(Russia) ಹೇಳಿದೆ.

    ರಷ್ಯಾ ಭಾರೀ ರಿಯಾಯಿತಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಭಾರತಕ್ಕೆ(India) ನೀಡಲು ಮುಂದಾಗಿದೆ. ಆದರೆ ಇದಕ್ಕೆ ಪ್ರತಿಯಾಗಿ ಭಾರತ ಜಿ7(G7) ರಾಷ್ಟ್ರದ ಪ್ರಸ್ತಾಪಗಳನ್ನು ಬೆಂಬಲಿಸಬಾರದು ಎಂದು ರಷ್ಯಾ ಷರತ್ತು ವಿಧಿಸಿದೆ.

    ಉಕ್ರೇನ್ ಮೇಲೆ ಯುದ್ಧ ಸಾರಿದ ಬಳಿಕ ರಷ್ಯಾದ ಮೇಲೆ ಯುರೋಪ್ ಮತ್ತು ಅಮೆರಿಕ ಹಲವು ಆರ್ಥಿಕ ನಿರ್ಬಂಧ ವಿಧಿಸಿದೆ. ಆರ್ಥಿಕ ನಿರ್ಬಂಧ ವಿಧಿಸಿದರೂ ರಷ್ಯಾ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರದ ಪರಿಣಾಮ ಜಿ7 ರಾಷ್ಟ್ರಗಳು ಮತ್ತೊಂದು ಆರ್ಥಿಕ ಸಮರಕ್ಕೆ ಮುಂದಾಗಿವೆ. ರಷ್ಯಾದ ತೈಲ ಆಮದಿನ ಮೆಲೆ ಬೆಲೆ ಮಿತಿಯನ್ನು ಜಾರಿಗೊಳಿಸಲು ಜಿ7 ರಾಷ್ಟ್ರಗಳಾದ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಬ್ರಿಟನ್ ಮತ್ತು ಅಮೆರಿಕ ಮುಂದಾಗಿದೆ.

    ಯುದ್ಧ ಸಾರಿದ ಬಳಿಕ ಭಾರತ ಮತ್ತು ಚೀನಾ ಹೆಚ್ಚಿನ ಪ್ರಮಾಣದಲ್ಲಿ ತೈಲವನ್ನು ರಷ್ಯಾದಿಂದ ಆಮದು ಮಾಡುತ್ತಿದೆ. ಈ ಕಾರಣಕ್ಕೆ ಜಿ7 ರಾಷ್ಟ್ರಗಳು ಒತ್ತಡಕ್ಕೆ ಭಾರತ ಮಣಿಯದೇ ಇದ್ದರೆ ಮತ್ತಷ್ಟು ಅಗ್ಗದ ದರದಲ್ಲಿ ತೈಲ ಪೂರೈಸುವುದಾಗಿ ರಷ್ಯಾ ಹೇಳಿದೆ. ಈ ಬಗ್ಗೆ ಭಾರತ ಇಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಾತುಕತೆ ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಈ ಸಮಯ ಕಳೆದು ಹೋಗುತ್ತದೆ ಎಂದಿದ್ದ ಬಾಬರ್‌ಗೆ ಟಾಂಗ್ – ಈ ಸಮಯ ಕಳೆದು ಹೋಗಲ್ಲ ಎಂದ ಫ್ಯಾನ್ಸ್

    ಎಷ್ಟು ಅಗ್ಗದಲ್ಲಿ ಸಿಕ್ಕಿತ್ತು?
    ರಷ್ಯಾ ಭಾರತಕ್ಕೆ ಮೇ ತಿಂಗಳಿನಲ್ಲಿ ಸರಾಸರಿ ತೈಲ ಬೆಲೆ 110 ಡಾಲರ್(8,751 ರೂ.) ಇದ್ದಾಗ 16 ಡಾಲರ್‌ನಷ್ಟು(1,272 ರೂ.) ರಿಯಾಯಿತಿ ದರದಲ್ಲಿ ತೈಲವನ್ನು ಪೂರೈಸಿತ್ತು. ಬಳಿಕ ಜೂನ್ ತಿಂಗಳಿನಲ್ಲೂ ಸರಾಸರಿ ತೈಲ ಬೆಲೆ 116 ಡಾಲರ್(9,226 ರೂ.) ಇದ್ದಾಗ 14 ಡಾಲರ್(1,193 ರೂ.) ವರೆಗಿನ ರಿಯಾಯಿತಿಯನ್ನು ನೀಡಿತ್ತು. ಇದೀಗ ರಷ್ಯಾ ಭಾರತಕ್ಕೆ ಮತ್ತೆ ಶೇ.27 ರಷ್ಟು ರಿಯಾಯಿತಿ ದರದಲ್ಲಿ ತೈಲ ನೀಡಲು ಮುಂದಾಗಿದೆ.

    ಭಾರತದ ತೈಲ ಅಗತ್ಯದಲ್ಲಿ ರಷ್ಯಾ ಶೇ.18.2 ರಷ್ಟು ತೈಲವನ್ನು ಪೂರೈಕೆ ಮಾಡುತ್ತದೆ. ಈ ಮೂಲಕ ಭಾರತಕ್ಕೆ ಅತಿ ಹೆಚ್ಚು ತೈಲ ಪೂರೈಕೆ ಮಾಡುವ ದೇಶಗಳ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಶೇ.20.8 ರಷ್ಟು ತೈಲ ಪೂರೈಕೆ ಮಾಡಿದರೆ, ಇರಾಕ್ ಶೇ.20.6 ರಷ್ಟು ನೀಡುತ್ತದೆ. ಈ ಮೂಲಕ ಈ ಎರಡು ರಾಷ್ಟ್ರಗಳು ಭಾರತಕ್ಕೆ ಅತಿ ಹೆಚ್ಚು ತೈಲ ಪೂರೈಕೆ ಮಾಡುವ ದೇಶಗಳ ಪಟ್ಟಿಯಲ್ಲಿ ಮೊದಲ ಹಾಗೂ 2ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆ – ಭೇದಭಾವದ ಪ್ರಶ್ನೆಯೇ ಇಲ್ಲವೆಂದ ಸಿಎಂ

    Live Tv
    [brid partner=56869869 player=32851 video=960834 autoplay=true]

  • ಆಫರ್‌ ಬೆನ್ನಲ್ಲೇ ದಾಖಲೆ ಪ್ರಮಾಣದಲ್ಲಿ ರಷ್ಯಾದಿಂದ ತೈಲ ಖರೀದಿಸಿದ ಭಾರತ

    ಆಫರ್‌ ಬೆನ್ನಲ್ಲೇ ದಾಖಲೆ ಪ್ರಮಾಣದಲ್ಲಿ ರಷ್ಯಾದಿಂದ ತೈಲ ಖರೀದಿಸಿದ ಭಾರತ

    ನವದೆಹಲಿ: ರಷ್ಯಾದಿಂದ ಈಗ ದಾಖಲೆ ಪ್ರಮಾಣದಲ್ಲಿ ಭಾರತ ತೈಲವನ್ನು ಆಮದು ಮಾಡುತ್ತಿದ್ದು, ಜೂನ್‌ ತಿಂಗಳಿನಲ್ಲಿ ಪ್ರತಿ ದಿನ 9,50,000 ಬ್ಯಾರೆಲ್‌ ತೈಲವನ್ನು ಆಮದು ಮಾಡಿದೆ ಎಂದು ಮೂಲಗಳು ತಿಳಿಸಿವೆ.

    ಭಾರತಕ್ಕೆ ಕಡಿಮೆ ದರದಲ್ಲಿ ತೈಲವನ್ನು ನೀಡುತ್ತೇವೆ ಎಂದು ರಷ್ಯಾ ಆಫರ್‌ ಹೇಳಿದ ಬೆನ್ನಲ್ಲೇ ದೇಶದ ತೈಲ ಕಂಪನಿಗಳು ಭಾರೀ ಪ್ರಮಾಣದಲ್ಲಿ ತೈಲವನ್ನು ಆಮದು ಮಾಡಲು ಆರಂಭಿಸಿವೆ.

    OIL 2

    ಜೂನ್‌ ತಿಂಗಳಿನಲ್ಲಿ 4.8 ದಶಲಕ್ಷ ಬಿಪಿಡಿ(ಬ್ಯಾರೆಲ್ಸ್‌ ಪರ್‌ ಡೇ) ತೈಲವನ್ನು ಭಾರತ ವಿದೇಶದಿಂದ ಆಮದು ಮಾಡಿಕೊಂಡಿದೆ. ಮೇ ತಿಂಗಳಿಗೆ ಹೋಲಿಸಿದರೆ ಶೇ.3.8 ರಷ್ಟು ಕಡಿಮೆಯಾದರೂ ಕಳೆದ ವರ್ಷದ ಜೂನ್‌ ತಿಂಗಳಿಗೆ ಹೋಲಿಸಿದರೆ ಶೇ.23 ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಕೋವಿಡ್‌ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕಡಿಮೆ ಪ್ರಮಾಣದಲ್ಲಿ ತೈಲ ಆಮದಾಗಿತ್ತು.

    ಮೇ ತಿಂಗಳಿಗೆ ಹೋಲಿಸಿದರೆ ರಷ್ಯಾದಿಂದ ತೈಲ ಆಮದು ಮಾಡುವ ಪ್ರಮಾಣ ಶೇ.15 ರಷ್ಟು ಹೆಚ್ಚಾಗಿದೆ. ಸೌದಿ ಅರೇಬಿಯಾ ಮತ್ತು ಇರಾಕ್‌ನಿಂದ ಆಮದಾಗುವ ಪ್ರಮಾಣ ಕ್ರಮವಾಗಿ ಶೇ.10.5 ಮತ್ತು ಶೇ.13.5 ರಷ್ಟು ಇಳಿಕೆಯಾಗಿದೆ. ಮಧ್ಯಪ್ರಾಚ್ಯ ದೇಶದಿಂದ ಖರೀದಿಸುತ್ತಿರುವ ತೈಲ ಪ್ರಮಾಣ ಶೇ.59.3 ರಿಂದ ಶೇ.56.3ಕ್ಕೆ ಕುಸಿದಿದೆ. ಇದನ್ನೂ ಓದಿ: ರಷ್ಯಾ ತೈಲ ಖರೀದಿ ಯಾಕೆ – ವಿದೇಶಿ ಮಾಧ್ಯಮಕ್ಕೆ ಪಾಠ ಮಾಡಿ ಉತ್ತರ ಕೊಟ್ಟ ಜೈಶಂಕರ್

    ಇಲ್ಲಿಯವರೆಗೆ ಭಾರತ ಇರಾಕ್‌ನಿಂದ ಹೆಚ್ಚಿನ ತೈಲ ಆಮದು ಮಾಡಿಕೊಂಡರೆ ಸೌದಿ ಅರೇಬಿಯಾ ಎರಡನೇ ಸ್ಥಾನದಲ್ಲಿತ್ತು. ಆದರೆ ಕಳೆದ ಎರಡು ತಿಂಗಳಿನಿಂದ ರಷ್ಯಾ ಎರಡನೇ ಸ್ಥಾನ ಪಡೆದರೆ ಸೌದಿ ಅರೇಬಿಯಾ ಮೂರನೇ ಸ್ಥಾನ ಕುಸಿದಿದೆ.

    ರಷ್ಯಾದಿಂದ ಕಡಿಮೆ ದರದಲ್ಲಿ ಕಚ್ಚಾ ತೈಲ ಪಡೆಯುತ್ತಿರುವ ಭಾರತ ಕಂಪನಿಗಳಾದ ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಮತ್ತು ನಾಯರಾ ಎನರ್ಜಿ ಆ ತೈಲವನ್ನು ಸಂಸ್ಕರಿಸಿ ವಿದೇಶಗಳಿಗೆ ಮಾರಾಟ ಮಾಡಿ ಲಾಭ ಮಾಡಿಕೊಳ್ಳುತ್ತಿವೆ.

    ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ರಷ್ಯಾದಿಂದ ಭಾರತ 22,500 ಬಿಪಿಡಿ ತೈಲವನ್ನು ಆಮದು ಮಾಡಿದ್ದರೆ ಈ ವರ್ಷ ಏಪ್ರಿಲ್‌ ಜೂನ್‌ ಅವಧಿಯಲ್ಲಿ ಅವಧಿಯಲ್ಲಿ 6,82,200 ಬಿಪಿಡಿ ತೈಲವನ್ನು ಆಮದು ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಯುರೋಪಿಯನ್ ಒಕ್ಕೂಟದ ಒಂದು ನಿರ್ಧಾರದಿಂದ ತೈಲ ಬೆಲೆ ಭಾರೀ ಏರಿಕೆ

    ಯುರೋಪಿಯನ್ ಒಕ್ಕೂಟದ ಒಂದು ನಿರ್ಧಾರದಿಂದ ತೈಲ ಬೆಲೆ ಭಾರೀ ಏರಿಕೆ

    ಲಂಡನ್: ಯುರೋಪಿಯನ್ ಒಕ್ಕೂಟ(ಇಯು) ಈ ವರ್ಷದ ಅಂತ್ಯದ ವೇಳೆಗೆ ರಷ್ಯಾದಿಂದ ಆಮದಾಗುವ ತೈಲವನ್ನು ಶೇ.90 ರಷ್ಟು ಕಡಿತಗೊಳಿಸಲು ಒಪ್ಪಿಕೊಂಡಿದೆ. ಇಯು ನಿರ್ಧಾರದ ಬೆನ್ನಲ್ಲೇ ಮಂಗಳವಾರ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗಿದೆ.

    ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಈ ಬಗ್ಗೆ ತಮ್ಮ ಟ್ವಿಟ್ಟರ್‌ನಲ್ಲಿ, ರಷ್ಯಾದಿಂದ ಆಮದಾಗುವ ತೈಲದ ನಿರ್ಬಂಧದ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ. ಇದು ಈ ವರ್ಷದ ಅಂತ್ಯದ ವೇಳೆ ರಷ್ಯಾದಿಂದ ಸುಮಾರು ಶೇ.90 ರಷ್ಟು ಆಮದನ್ನು ಕಡಿತಗೊಳಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್ ಬಂಧನ ರಾಜಕೀಯ ಪ್ರೇರಿತ, ನಮ್ಮದು ಪ್ರಾಮಾಣಿಕ ಸರ್ಕಾರ: ಕೇಜ್ರಿವಾಲ್

    ಈ ನಿರ್ಧಾರದಿಂದ ಕಚ್ಚಾ ತೈಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪರಿಣಾಮ ಬೀರಲಿದೆ. ಆದರೆ ಹಂಗೇರಿ, ಸ್ಲೋವಾಕಿಯಾ ಹಾಗೂ ಜೆಕ್ ರಿಪಬ್ಲಿಕ್‌ಗಳಲ್ಲಿ ರಷ್ಯಾದ ಆಮದನ್ನು ಕಡಿತಗೊಳಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದೆ. ಇದಕ್ಕಾಗಿ ಸದ್ಯ ಪೈಪ್‌ಲೈನ್ ಮುಖಾಂತರ ರಷ್ಯಾದಿಂದ ಬರುವ ತೈಲಕ್ಕೆ ತಾತ್ಕಾಲಿಕ ವಿನಾಯಿತಿ ಇರಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: 130 ಕೋಟಿ ಜನರಿಗೆ ನಾನು ಸೇವಕನಷ್ಟೇ: ನರೇಂದ್ರ ಮೋದಿ

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ಗೆ 117.93 ಡಾಲರ್(9,162 ರೂ.) ಇದ್ದ ಕಚ್ಚಾ ತೈಲದ ಬೆಲೆ ಈಗ 122 ಡಾಲರ್‌ಗೆ(9,478 ರೂ.) ಏರಿಕೆಯಾಗಿದೆ.

    ಜಾಗತಿಕವಾಗಿ ತೈಲಬೆಲೆ ಹೆಚ್ಚಾಗಿದ್ದರೂ ಭಾರತದಲ್ಲಿ ಕಳೆದ 9 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್‌ನ ಬೆಲೆ ತಟಸ್ಥವಾಗಿದೆ. ಮೇ 22 ರಂದು ಕೆಂದ್ರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಪೆಟ್ರೋಲ್‌ಗೆ 8 ರೂ. ಹಾಗೂ ಲೀಟರ್ ಡೀಸೆಲ್‌ಗೆ 6 ರೂ. ಕಡಿತಗೊಳಿಸಿದೆ.

  • ಮತ್ತಷ್ಟು ಕಡಿಮೆ ಬೆಲೆಯಲ್ಲಿ ತೈಲ ನೀಡಿ – ರಷ್ಯಾ ಜೊತೆ ಭಾರತ ಚೌಕಾಶಿ

    ಮತ್ತಷ್ಟು ಕಡಿಮೆ ಬೆಲೆಯಲ್ಲಿ ತೈಲ ನೀಡಿ – ರಷ್ಯಾ ಜೊತೆ ಭಾರತ ಚೌಕಾಶಿ

    ನವದೆಹಲಿ: ಕಡಿಮೆ ದರದಲ್ಲಿ ತೈಲ ನೀಡುತ್ತಿರುವ ರಷ್ಯಾ ಜೊತೆ ಭಾರತ ಈಗ ಚೌಕಾಶಿ ಮಾಡುತ್ತಿದೆ ಎಂದು ವರದಿಯಾಗಿದೆ.

    ಅಂತಾರಾಷ್ಟ್ರೀಯ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಯಾದ 70 ಡಾಲರ್‌ಗೆ(5,300 ರೂ.)ಕಚ್ಚಾ ತೈಲ ನೀಡುವುದಾಗಿ ರಷ್ಯಾ ಈಗಾಗಲೇ ಪ್ರಕಟಿಸಿದೆ. ಆದರೆ ಭಾರತ ಅದಕ್ಕಿಂತಲೂ ಕಡಿಮೆ ದರದಲ್ಲಿ ತೈಲವನ್ನು ಪೊರೈಸುವಂತೆ ಚೌಕಾಶಿ ಮಾಡುತ್ತಿದೆ.

    ಉಕ್ರೇನ್‌ ಮೇಲೆ ಯುದ್ಧ ಸಾರಿದ ಬಳಿಕ ರಷ್ಯಾದಿಂದ ತೈಲ ಖರೀದಿಸದಂತೆ ಅಮೆರಿಕ, ಯುರೋಪಿಯನ್‌ ಒಕ್ಕೂಟ ಭಾರತಕ್ಕೆ ಮನವಿ ಮಾಡುತ್ತಿದೆ. ಇದನ್ನೂ ಓದಿ: ಮೋದಿ ಗಿಫ್ಟ್‌ಗೆ ವಿಶೇಷ ಸ್ಥಾನಕೊಟ್ಟ ಡೆನ್ಮಾರ್ಕ್ ಪ್ರಧಾನಿ

    ಒಪೆಕ್‌ ರಾಷ್ಟ್ರಗಳು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖರೀದಿಗೆ ವಿರೋಧವಿದ್ದರೂ ನಾವು ನಿಮ್ಮ ಜೊತೆ ತೈಲ ಖರೀದಿಸುತ್ತಿದ್ದೇವೆ. ಹೀಗಾಗಿ ದರವನ್ನು ಮತ್ತಷ್ಟು ಇಳಿಸಿ ಎಂದು ರಷ್ಯಾದ ತೈಲ ಕಂಪನಿಗಳ ಜೊತೆ ಭಾರತ ಚೌಕಾಶಿ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಭಾರತ ಈಗ ರಷ್ಯಾದಿಂದ 70 ಡಾಲರ್‌ಗೆ ಒಂದು ಬ್ಯಾರೆಲ್‌ ತೈಲವನ್ನು ಖರೀದಿಸುತ್ತಿದೆ. ಸದ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ ತೈಲಕ್ಕೆ 105 ಡಾಲರ್‌ ಇದೆ. ಇದನ್ನೂ ಓದಿ: ಫಿನ್‍ಲ್ಯಾಂಡ್ ಪ್ರಧಾನಿಯನ್ನು ಭೇಟಿ ಮಾಡಿದ ಮೋದಿ – ಕಾರಣವೇನು?

    ಫೆಬ್ರವರಿ 24 ರಂದು ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ಬಳಿಕ ಭಾರತದ ಕಂಪನಿಗಳು ರಷ್ಯಾದಿಂದ ರಿಯಾಯಿತಿ ದರದಲ್ಲಿ 40 ದಶಲಕ್ಷ ಬ್ಯಾರೆಲ್‌ ಕಚ್ಚಾ ತೈಲವನ್ನು ಖರೀದಿ ಮಾಡಿದೆ.

    ಕಳೆದ ವಾರ ಭಾರತದ ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೊರೇಶನ್(ಒನ್‌ಜಿಸಿ) ವಿಮೆ ಮತ್ತು ಇತರ ಸಮಸ್ಯೆಗಳಿಂದ 7 ಲಕ್ಷ ಬ್ಯಾರೆಲ್‌ ತೈಲವನ್ನು ರಷ್ಯಾದ ಪೂರ್ವ ಬಂದರಿನಿಂದ ಭಾರತಕ್ಕೆ ಸಾಗಿಸಲು ಬಹಳ ಶ್ರಮಪಟ್ಟಿತ್ತು ಎಂದು ವರದಿಯಾಗಿದೆ.

  • ನೈಜಿರಿಯಾ ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ-100ಕ್ಕೂ ಅಧಿಕ ಜನ ಸಾವು

    ನೈಜಿರಿಯಾ ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ-100ಕ್ಕೂ ಅಧಿಕ ಜನ ಸಾವು

    ಪೋರ್ಟ್ ಹಾರ್ಕೋಟ್: ನೈಜಿರಿಯಾ ತೈಲ ಸಂಸ್ಕರಣಾಗಾರದಲ್ಲಿ ಸಂಭವಿಸಿದ ಭಾರೀ ಸ್ಫೋಟ 100ಕ್ಕೂ ಅಧಿಕ ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ದಕ್ಷಿಣ ನೈಜಿರಿಯಾದ ಇಮೋ ರಾಜ್ಯದ ನಡುವಿನ ಗಡಿಯಲ್ಲಿ ಘಟನೆ ಸಂಭವಿಸಿದೆ. ಸ್ಫೋಟದಲ್ಲಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಇದು ಆಫ್ರಿಕಾದ ಅತಿದೊಡ್ಡ ಕಚ್ಚಾ ತೈಲ ಉತ್ಪಾದಕವಾಗಿದೆ. ನೈಜಿರಿಯಾದಲ್ಲಿ ಇತ್ತೀಚಿಗೆ ನಡೆದ ಅತಿದೊಡ್ಡ ಸ್ಫೋಟವಾಗಿದೆ.

    ಅಕ್ರಮ ಸಂಸ್ಕರಣಾಗಾರದ ಸ್ಥಳದಲ್ಲಿ ನಿರ್ವಾಹಕರು ಮತ್ತು ಪೋಷಕರು ವ್ಯಾಪಾರಕ್ಕಾಗಿ ಒಟ್ಟುಗೂಡಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಅಭಿಯಾನ

    ಅಕ್ರಮ ಕಚ್ಚಾ ತೈಲ ಸಂಸ್ಕರಣೆಯು ದಕ್ಷಿಣ ನೈಜಿರಿಯಾದ ತೈಲ ಪ್ರದೇಶದಲ್ಲಿ ಸಾಮಾನ್ಯವಾಗಿದೆ. ಅಲ್ಲಿ ತೈಲ ಕಳ್ಳರು ಕಚ್ಚಾ ತೈಲವನ್ನು ಕದಿಯಲು ಪೈಪ್‍ಲೈನ್‍ಗಳನ್ನು ಹಾಳುಮಾಡುತ್ತಾರೆ. ಅದನ್ನು ಅವರು ಬ್ಲಾಕ್ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಂಸ್ಕರಿಸುತ್ತಾರೆ.ಈ ಕಳ್ಳ ಸಾಗಣಿಕೆಯನ್ನು ತಡೆಯಲು ಸರ್ಕಾರ ಮಿಲಿಟರಿ ಪಡೆಯನ್ನು ನೇಮಿಸಿದೆ. ಆದರೂ ಯಾವುದೇ ಪ್ರಯೋಜವಾಗುತ್ತಿಲ್ಲ. ಇದನ್ನೂ ಓದಿ: ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್