Tag: Oil Prices

  • ಇಸ್ರೇಲ್‌-ಹಮಾಸ್ ಉಗ್ರರ ನಡುವೆ ವಾರ್‌; ತೈಲ ಬೆಲೆ ಏರಿಕೆ

    ಇಸ್ರೇಲ್‌-ಹಮಾಸ್ ಉಗ್ರರ ನಡುವೆ ವಾರ್‌; ತೈಲ ಬೆಲೆ ಏರಿಕೆ

    ಟೆಲ್‌ ಅವಿವ್‌: ಹಮಾಸ್ (Hamas) ಬಂಡುಕೋರರು ಮತ್ತು ಇಸ್ರೇಲ್‌ (Israel) ನಡುವಿನ ಮಿಲಿಟರಿ ಘರ್ಷಣೆಗಳು ಮಧ್ಯಪ್ರಾಚ್ಯದಾದ್ಯಂತ ರಾಜಕೀಯ ಅನಿಶ್ಚಿತತೆ ಸೃಷ್ಟಿಸಿದೆ. ಉತ್ಪನ್ನಗಳ ಸರಬರಾಜಿನಲ್ಲಿ ಸಮಸ್ಯೆ ಎದುರಾಗಿದ್ದು, ತೈಲ ಬೆಲೆಯಲ್ಲಿ (Oil Price) ಹೆಚ್ಚಳವಾಗಿದೆ.

    ಇಸ್ರೇಲ್ ಮತ್ತು ಗಾಜಾದಲ್ಲಿನ ಪರಿಸ್ಥಿತಿಯು ಮಧ್ಯಪ್ರಾಚ್ಯದ ಉತ್ಪಾದನೆಗಳಿಗೆ ಅಡ್ಡಿಪಡಿಸಿದೆ. ಹೀಗಾಗಿ ತೈಲ ಬೆಲೆಗಳು ಸೋಮವಾರ 4% ರಷ್ಟು ಜಿಗಿತ ಕಂಡಿದೆ. ತೈಲ ಬೆಲೆಯು ಬ್ಯಾರಲ್‌ಗೆ 249.67 ರೂ. ಏರಿಕೆಯಾಗಿದೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ಭೀಕರ ಸಂಘರ್ಷ – 1,100 ಸಾವು, ಸಂಗೀತ ಉತ್ಸವದಲ್ಲಿ 260 ಶವ ಪತ್ತೆ

    US ತೈಲದ ಮಾನದಂಡವಾದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI), ಒಂದು ಬ್ಯಾರೆಲ್‌ಗೆ 86 ಡಾಲರ್‌ ಅಂದರೆ 7,157 ರೂ. ಗಿಂತ ಹೆಚ್ಚಾಗಿದೆ. ಏಷ್ಯಾದ ಆರಂಭಿಕ ವಹಿವಾಟಿನಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಕೂಡ ಏರಿತು.

    ಇಸ್ರೇಲ್ ಮತ್ತು ಪ್ಯಾಲೇಸ್ಟಿನಿಯನ್ ಪ್ರದೇಶಗಳು ತೈಲ ಉತ್ಪಾದಕರಲ್ಲ. ಆದರೆ ಮಧ್ಯಪ್ರಾಚ್ಯ ಪ್ರದೇಶವು ಜಾಗತಿಕ ಪೂರೈಕೆಯ ಸುಮಾರು ಮೂರನೇ ಒಂದು ಭಾಗವನ್ನು ಹೊಂದಿದೆ. ಇರಾನ್ ಮತ್ತು ಸೌದಿ ಅರೇಬಿಯಾದಂತಹ ಹತ್ತಿರದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಿಗೆ ಯುದ್ಧದ ಪರಿಣಾಮ ತಟ್ಟಲಿದ್ದು, ತೈಲದ ಮೇಲಿನ ದರ ಹೆಚ್ಚಾಗಿದೆ. ಇದನ್ನೂ ಓದಿ: ಇಸ್ರೇಲ್ ಮೇಲೆ ದಾಳಿ – ಹಮಾಸ್ ಉಗ್ರರ ಅಟ್ಟಹಾಸಕ್ಕೆ 1 ಸಾವಿರ ಮಂದಿ ಬಲಿ

    ಗಲ್ಫ್ ಪ್ರದೇಶದಲ್ಲಿನ ಪ್ರಮುಖ ತೈಲ ರಫ್ತುದಾರರಿಗೆ ಹಾರ್ಮುಜ್ ಜಲಸಂಧಿಯು ನಿರ್ಣಾಯಕವಾಗಿದೆ. ಅವರ ಆರ್ಥಿಕತೆಯು ತೈಲ ಮತ್ತು ಅನಿಲ ಉತ್ಪಾದನೆ ಕೇಂದ್ರೀಕರಿಸಲ್ಪಟ್ಟಿದೆ. ರಷ್ಯಾ-ಉಕ್ರೇನ್‌ ಯುದ್ಧದಲ್ಲೂ ತೈಲ ಬೆಲೆ ಏರಿಕೆಯಾಗಿತ್ತು. 2022 ರ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾ ಆಕ್ರಮಣದ ನಂತರ ತೈಲ ಬೆಲೆಗಳು ಗಗನಕ್ಕೇರಿತ್ತು. ಕಳೆದ ವರ್ಷ ಜೂನ್‌ನಲ್ಲಿ ಬ್ಯಾರೆಲ್‌ಗೆ 9,988 ರೂ.ಗೆ ತಲುಪಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಕ್ರೇನ್ ಮೇಲೆ ರಷ್ಯಾ ಯುದ್ಧ; ಗಗನಕ್ಕೇರಿದ ತೈಲ, ಚಿನ್ನದ ಬೆಲೆ – ಭಾರತದ ಶೇರು ಮಾರುಕಟ್ಟೆಯಲ್ಲಿ ತಲ್ಲಣ

    ಉಕ್ರೇನ್ ಮೇಲೆ ರಷ್ಯಾ ಯುದ್ಧ; ಗಗನಕ್ಕೇರಿದ ತೈಲ, ಚಿನ್ನದ ಬೆಲೆ – ಭಾರತದ ಶೇರು ಮಾರುಕಟ್ಟೆಯಲ್ಲಿ ತಲ್ಲಣ

    ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ಯುದ್ಧದ ಘೋಷಣೆ ಬೆನ್ನಲ್ಲೇ ಭಾರತೀಯ ಶೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದೆ. ಜಾಗತಿಕ ಮಟ್ಟದಲ್ಲಿ ಪೆಟ್ರೋಲ್, ಚಿನ್ನ, ಬೆಳ್ಳಿಯ ಬೆಲೆಗಳು ಗಗನಕ್ಕೆ ಏರಿವೆ.

    2,000ಕ್ಕೂ ಅಧಿಕ ಪಾಯಿಂಟ್ಸ್ ಸೆನ್ಸೆಕ್ಸ್ ಕುಸಿತ ಕಂಡರೆ ನಿಫ್ಟಿ 600 ಪಾಯಿಂಟ್ಸ್ ಕುಸಿದಿದೆ. ಯುದ್ಧ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದು, ಪ್ರತಿ ಬ್ಯಾರಲ್ ಬೆಲೆ 100 ಡಾಲರ್ ಮೀರಿದೆ. ಈ ಹಿಂದೆ ಪ್ರತಿ ಬ್ಯಾರಲ್ ಬೆಲೆಯೂ 60-70 ಡಾಲರ್ ಆಸುಪಾಲಿನಲ್ಲಿತ್ತು. ನವೆಂಬರ್ 4ರಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿತ್ತು. ಜಾಗತಿಕ ಮಟ್ಟದಲ್ಲಿ ತೈಲಬೆಲೆ ಏರಿಕೆಯಾಗಿರುವುದರಿಂದ ಭಾರತದಲ್ಲೂ ಬೆಲೆ ಏರಿಸುವುದು ಅನಿವಾರ್ಯವಾಗಿದೆ.

    ಚಿನ್ನದ ಬೆಲೆಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇಂದು 24 ಕ್ಯಾರೆಟ್‍ನ 10 ಗ್ರಾಂ ಚಿನ್ನಕ್ಕೆ 5,320ರೂ. ಹಾಗೂ 22 ಕ್ಯಾರೆಟ್‍ನ 10 ಗ್ರಾಂ ಬಂಗಾರಕ್ಕೆ 4,750 ರೂಪಾಯಿಯಾಗಿದೆ. ನಿನ್ನೆಗಿಂತ ಇಂದು ಒಂದು ಗ್ರಾಂಗೆ 150 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನಕ್ಕೆ 1,500 ರೂ. ಹೆಚ್ಚಳವಾಗಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

    ಜೊತೆಗೆ ಒಂದು ಕೆಜಿ ಬೆಳ್ಳಿಗೆ 68,400 ರೂಪಾಯಿ ಹೆಚ್ಚಳವಾಗಿದೆ. ನಿನ್ನೆಗಿಂತ ಇಂದು ಬೆಳ್ಳಿ ಬೆಲೆಯಲ್ಲಿ 2,200 ರೂ ಏರಿಕೆಯಾಗಿದೆ. ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರೋ ಯುದ್ಧದಿಂದಾಗಿ ಚಿನ್ನ ಹಾಗೂ ಬೆಳ್ಳಿ ಏರಿಕೆಯಾಗಿದೆ. ಇದನ್ನೂ ಓದಿ: ಉಕ್ರೇನ್ ದೇಶವನ್ನೇ ಮೂರು ಭಾಗ ಮಾಡಿದ ರಷ್ಯಾ

    ಯುದ್ಧದ ಭೀತಿಯಿಂದಾಗಿ ಈಗಾಗಲೇ ಉಕ್ರೇನ್‍ನಿಂದ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳು ವಾಪಸ್ಸಾಗಿದ್ದಾರೆ. ವಿಶೇಷ ವಿಮಾನದ ಮೂಲಕ ಭಾರತೀಯರನ್ನು ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಂಡಿದೆ. ಭಾರತೀಯ ಪ್ರಜೆಗಳು ದೆಹಲಿಯ ಅಂತರಾಷ್ಟ್ರೀಯ ವಿಮಾನಯಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

  • 100 ಡಾಲರ್ ಗಡಿಯಲ್ಲಿ ಕಚ್ಚಾ ತೈಲ – ಭಾರೀ ಬೆಲೆ ಏರಿಕೆ ಸಾಧ್ಯತೆ

    100 ಡಾಲರ್ ಗಡಿಯಲ್ಲಿ ಕಚ್ಚಾ ತೈಲ – ಭಾರೀ ಬೆಲೆ ಏರಿಕೆ ಸಾಧ್ಯತೆ

    ನವದೆಹಲಿ: ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಉಕ್ರೇನ್‍ಗೆ ಪತ್ರ ಕಳುಹಿಸಿದ ಬಳಿಕ ಮಂಗಳವಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆಯಾಗಿದ್ದು 100 ಡಾಲರ್(7,459 ರೂ.) ಹತ್ತಿರ ಬಂದಿದೆ. ಭಾರತದಲ್ಲಿ ಸದ್ಯ ತೈಲಬೆಲೆ ಏರಿಕೆಯಾಗಿಲ್ಲವಾದರೂ ಶೀಘ್ರವೇ ಏರಿಕೆಯಾಗುವ ಸಾಧ್ಯತೆ ಇದೆ.

    ಏಪ್ರಿಲ್‍ನಲ್ಲಿ ಮಾರಾಟವಾಗುವ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.4.18 ರಷ್ಟು ಏರಿಕೆಯಾಗಿದ್ದು ಬೆಲೆ 99.38 ಡಾಲರ್(7,415 ರೂ.)ಗೆ ತಲುಪಿದೆ. ಈಗ ಪಂಚರಾಜ್ಯ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಹೀಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲಬೆಲೆ ಏರಿಕೆಯಾಗಿದ್ದರೂ ಭಾರತದಲ್ಲಿ ಏರಿಕೆ ಕಂಡಿಲ್ಲ. ಪಂಚರಾಜ್ಯ ಚುನಾವಣೆ ಅಂತ್ಯವಾದ ಬಳಿಕ ತೈಲಬೆಲೆ ಭಾರತದಲ್ಲೂ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬಿಯರ್ ಪ್ರಿಯರಿಗೆ ಕಹಿ ಸುದ್ದಿ

    ನವೆಂಬರ್ 4 ರಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿತ್ತು. ಜಾಗತಿಕ ಮಟ್ಟದಲ್ಲಿ ತೈಲಬೆಲೆ ಏರಿಕೆಯಾಗಿರುವುದರಿಂದ ಭಾರತದಲ್ಲೂ ಬೆಲೆ ಏರಿಸುವುದು ಅನಿವಾರ್ಯ. ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

    ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ನಡೆಸುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಕಚ್ಚಾತೈಲ ಪೂರೈಕೆಗೆ ಅಡ್ಡಿಯಾಗುವ ಸಾಧ್ಯತೆಯೂ ಇದೆ. 2014ರ ಬಳಿಕ ಇಲ್ಲಿಯವರೆಗೆ ತೈಲ ಬೆಲೆ 100ರ ಗಡಿ ದಾಟಿಲ್ಲ. ಈಗ ಯುದ್ಧ ಭೀತಿ ನಿರ್ಮಾಣಗೊಂಡಿದ್ದು ಭಾರತದಲ್ಲೂ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

  • ಉಚಿತ ಕೊರೊನಾ ಲಸಿಕೆ ನೀಡಿದ್ದಕ್ಕೆ ಪೆಟ್ರೋಲ್ ಬೆಲೆ ಹೆಚ್ಚಳ: ಸಚಿವ ತೇಲಿ

    ಉಚಿತ ಕೊರೊನಾ ಲಸಿಕೆ ನೀಡಿದ್ದಕ್ಕೆ ಪೆಟ್ರೋಲ್ ಬೆಲೆ ಹೆಚ್ಚಳ: ಸಚಿವ ತೇಲಿ

    ದಿಸ್ಪುರ: ಉಚಿತವಾಗಿ ಕೊರೊನಾ ಲಸಿಕೆ ನೀಡುತ್ತಿರುವ ಕಾರಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ ಎಂದು ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ದುಬಾರಿಯಲ್ಲ. ಕೇಂದ್ರ ಮತ್ತು ರಾಜ್ಯಗಳು ವಿಧಿಸುತ್ತಿರುವ ತೆರಿಗೆಯಿಂದಾಗಿ ದುಬಾರಿಯಾಗುತ್ತಿದೆ. ನೀವೆಲ್ಲರೂ ಉಚಿತವಾಗಿ ಕೊರೊನಾ ಲಸಿಕೆ ಪಡೆದಿದ್ದೀರಿ. ಅದನ್ನು ಪೂರೈಸಲು ಹಣ ಎಲ್ಲಿಂದ ಬಂದಿತ್ತು? ದೇಶದ 130 ಕೋಟಿ ಜನರಿಗೆ ಉಚಿತವಾಗಿ 2 ಡೋಸ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಡೋಸ್ ಲಸಿಕೆಗೆ 1,200 ರೂ. ವೆಚ್ಚವಾಗುತ್ತದೆ. ಇದು ಸರ್ಕಾರಕ್ಕೆ ಹೊರೆಯಾಗಲಿದೆ. ಲಸಿಕೆ ಹಣವನ್ನು ಪೆಟ್ರೋಲ್ ತೆರಿಗೆ ಮೂಲಕವಾಗಿ ಪಡೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ?

    ಪೆಟ್ರೋಲ್ ಬೆಲೆಯನ್ನು ನಮ್ಮ ಸಚಿವಾಲಯ ನಿರ್ಧರಿಸುವುದಿಲ್ಲ. ಕಚ್ಚಾತೈಲದ ಬೆಲೆಯಲ್ಲಿ ಬದಲಾವಣೆ ಉಂಟಾದರೆ ಪೆಟ್ರೋಲ್ ಡೀಸೆಲ್ ಬೆಲೆಯಲ್ಲೂ ಬದಲಾವಣೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಿಂದ ಮಳೆ ನೀರು ಹೊರ ಹಾಕುವ ವೇಳೆ ಕರೆಂಟ್ ಶಾಕ್ – ವ್ಯಕ್ತಿ ದುರ್ಮರಣ

  • ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

    ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

    ಬೆಂಗಳೂರು:ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಆಸ್ಪತೆಯಲ್ಲಿ ಹಾಸಿಗೆ, ಚಿಕಿತ್ಸೆ, ಆಕ್ಸಿಜನ್, ಔಷಧಿ, ಕೊನೆಗೆ ಶವ ಸಂಸ್ಕಾರ ಸೇರಿ ಎಲ್ಲದಕ್ಕೂ ಜನ ಕ್ಯೂ ನಿಲ್ಲುವಂತೆ ಮಾಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

    ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ಹಾಗೂ ಆರ್ಥಿಕ ನೆರವು ವಿತರಣೆ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು:

    ದೇಶದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಪ್ರತಿಯೊಂದು ವಿಚಾರಕ್ಕೂ ನಿಮ್ಮನ್ನೆಲ್ಲ ಕ್ಯೂ ನಿಲ್ಲಿಸಿದರಲ್ಲಾ ಅಂತಾ ಸಂಕಟವಾಗುತ್ತಿದೆ. ನೋಟು ರದ್ದು ಮಾಡಿ, ನಿಮ್ಮ ದುಡ್ಡು ನೀವು ತೆಗೆದುಕೊಳ್ಳಲು ಕ್ಯೂ ನಿಲ್ಲಿಸಿ ಸಾಯಿಸಿದರು. ನಂತರ ಆಧಾರ್ ಜೋಡಣೆ ವಿಚಾರವಾಗಿ ಮತ್ತೆ ಬ್ಯಾಂಕ್ ಮುಂದೆ ಕ್ಯೂ ನಿಲ್ಲಿಸಿದರು. ದೇಶಕ್ಕೆ ಮಹಾಮಾರಿ ಕರೆತಂದು, ಆಸ್ಪತ್ರೆ ಮುಂದೆ ಕ್ಯೂ, ಆಂಬುಲೆನ್ಸ್ ಗೂ ಕ್ಯೂ, ಔಷಧಿಗೂ ಕ್ಯೂ, ಆಕ್ಸಿಜನ್ ಗೂ ಕ್ಯೂ, ಕೊನೆಗೆ ಶವ ಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು.

    ಈಗ ಆಹಾರ ಕಿಟ್ ಕೊಡಲು ನಾವು ನಿಮ್ಮನ್ನು ಕ್ಯೂ ನಿಲ್ಲಿಸಿದ್ದೇವೆ. ಇದು ಸರ್ಕಾರದ ಆಹಾರ ಕಿಟ್ ಅಲ್ಲ, ಕಾಂಗ್ರೆಸ್ ನಾಯಕರು ತಮ್ಮ ಶ್ರಮದಿಂದ ಸಂಪಾದಿಸಿದ ಸ್ವಂತ ಹಣದಲ್ಲಿ ನೀಡುತ್ತಿರುವ ಕಿಟ್. ಬೆಂಗಳೂರಿನಿಂದ ದಿಲ್ಲಿವರೆಗೆ ದೇಶದಲ್ಲಿ ನೀವು ಬದಲಾವಣೆ ತರಬೇಕು. ಇದನ್ನೂ ಓದಿ: ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ

    ಚುನಾವಣೆ ಕಾರಣಕ್ಕೆ ನಾವು ಇಲ್ಲಿಗೆ ಬಂದು ಈ ಕಾರ್ಯಕ್ರಮ ಮಾಡುತ್ತಿಲ್ಲ. ದೇಶದೆಲ್ಲೆಡೆ ಜನ ಸಂಕಟದಲ್ಲಿದ್ದು, ಅವರಿಗೆ ಸಹಾಯ ಮಾಡಲು ನಾವು ಈ ಇಲ್ಲಿಗೆ ಬಂದಿದ್ದೇವೆ. ನಾವು ಮಾಡುವ ಸಹಾಯದಿಂದ ನಿಮ್ಮ ಜೀವನ ಉದ್ಧಾರವಾಗುತ್ತದೆ ಎಂದು ಹೇಳುತ್ತಿಲ್ಲ. ಆದರೆ ಕಷ್ಟದಲ್ಲಿರುವ ಜನರ ಭಾರವನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ.

    ಬಡವರು, ಮಧ್ಯಮ ವರ್ಗದವರು ತಮ್ಮ ಬಳಿ ಇದ್ದ ಅಲ್ಪಸ್ವಲ್ಪ ಚಿನ್ನ ಅಡವಿಟ್ಟು ಜೀವನ ಮಾಡಲು ಮುಂದಾಗಿದ್ದಾರೆ. ಅನೇಕರು ಉದ್ಯೋಗ ಕಳೆದುಕೊಂಡರು. ಉದ್ಯೋಗ ಕೊಡುತ್ತೇವೆ ಎಂದವರು ವಿದ್ಯಾವಂತರಿಗೆ ಪಕೋಡಾ ಮಾರಲು ಹೇಳಿದರು. ಪಕೋಡಾ ಮಾಡುವ ಅಡುಗೆ ಎಣ್ಣೆ ಬೆಲೆಯನ್ನು ರೂ.200ಕ್ಕೆ ಹೆಚ್ಚಿಸಿದ್ದಾರೆ. ಇಡೀ ದೇಶದ ಜನರನ್ನು ಬಡತನಕ್ಕೆ ನೂಕಿದ್ದಾರೆ.

    ದೇಶದಲ್ಲಿ ಪೆಟ್ರೋಲ್ ಮೂಲಬೆಲೆ 35 ರೂ., ಅದಕ್ಕೆ ತೆರಿಗೆ 65 ರೂ. ನೆರೆ ರಾಷ್ಟ್ರಗಳಲ್ಲಿ ಅರ್ಧದಷ್ಟಿದ್ದರೂ ನಮ್ಮಲ್ಲಿ ಮಾತ್ರ ಬೆಲೆ ಹೆಚ್ಚುತ್ತಲೇ ಇದೆ. ಈ ಸರ್ಕಾರ ದಿನಾ ಜನರ ಜೇಬು ಪಿಕ್ ಪಾಕೆಟ್ ಮಾಡುತ್ತಿದೆ. ಇದನ್ನೂ ಓದಿ: ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

    ಆರ್ಥಿಕ ನೆರವು:
    ನಮ್ಮ ನಾಯಕರು ತಮ್ಮ ಸ್ವಂತ ಹಣದಲ್ಲಿ ನಿಮಗೆ ಸಹಾಯ ಮಾಡಲು ಮುಂದಾಗಿದ್ದಾರೆ. ನಮ್ಮ ನಾಯಕರೆಲ್ಲರೂ ಹಣ ಸೇರಿಸಿ ಈ ಕ್ಷೇತ್ರದ ಬಡ ಕುಟುಂಬಗಳಿಗೆ ತಲಾ 1 ಸಾವಿರ ರೂ. ನೀಡುತ್ತಿದ್ದಾರೆ. ಅವರಿಗೆ ಶಕ್ತಿ ತುಂಬಲು ನಾನಿಲ್ಲಿಗೆ ಬಂದಿದ್ದೇನೆ. ಈ ಹಣ ನಿಮ್ಮ ಎಲ್ಲಾ ಸಮಸ್ಯೆ ಬಗೆಹರಿಸದೆ ಇರಬಹುದು. ಆದರೆ ಕಷ್ಟಕಾಲದಲ್ಲಿ ನಿಮ್ಮ ಜತೆ ನಿಲ್ಲಲು ನಮ್ಮ ನಾಯಕರು ಮುಂದೆ ಬಂದಿದ್ದಾರೆ. ಅನೇಕರಿಗೆ ಊಟಕ್ಕೆ, ಔಷಧಿಗೆ ಹಣವಿರುವುದಿಲ್ಲ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸಲು ಈ ಹೆಜ್ಜೆ ಇಟ್ಟಿದ್ದಾರೆ. ಆ ಮೂಲಕ ನಿಮ್ಮ ಋಣ ತೀರಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದಾರೆ.

    ಕಳೆದ ಬಾರಿ ಹಾಲು ಕೇಳಿದವರಿಗೆ ಐಪಿಸಿ ಸೆಕ್ಷನ್ 307 ರ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ಬಿಜೆಪಿ ನಾಯಕರು ಪೊಲೀಸರನ್ನು ಬಳಸಿಕೊಂಡು ಮೂರ್ನಾಲ್ಕು ಕೇಸ್ ಹಾಕಿಸಿದ್ದಾರೆ ಎಂದು ಒಬ್ಬರು ಹೆಣ್ಣು ಮಗಳು ಹೇಳುತ್ತಿದ್ದರು. ಆ ರೀತಿ ನಿಮಗೆ ಯಾರಾದರೂ ಯಾವುದೇ ತೊಂದರೆ ಕೊಟ್ಟರೆ ನಮ್ಮನ್ನು ಭೇಟಿ ಮಾಡಿ. ನಿಮ್ಮ ರಕ್ಷಣೆಗೆ ಕಾಂಗ್ರೆಸ್ ಸದಾ ನಿಲ್ಲಲಿದೆ. ಮುಂದಿನ ದಿನಗಳಲ್ಲಿ ಕಾರ್ಪೊರೇಷನ್ ಚುನಾವಣೆ ಬರುತ್ತಿದೆ, ವಿಧಾನಸಭೆ ಚುನಾವಣೆಯೂ ಬರಲಿದೆ. ನೀವು ಬಿಜೆಪಿಯವರಿಗೆ ಬುದ್ದಿ ಕಲಿಸಬೇಕು. ನಾವು ನಿಮ್ಮ ಜತೆ ಇರುತ್ತೇವೆ.

  • ಭಾರತದಲ್ಲಿ ಕೊರೊನಾ ಸ್ಫೋಟ – ಜಾಗತಿಕ ಮಾರುಕಟ್ಟೆ ಮೇಲೆ ಎಫೆಕ್ಟ್

    ಭಾರತದಲ್ಲಿ ಕೊರೊನಾ ಸ್ಫೋಟ – ಜಾಗತಿಕ ಮಾರುಕಟ್ಟೆ ಮೇಲೆ ಎಫೆಕ್ಟ್

    ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ಹರಡುವಿಕೆ ಬಿಡುವು ಸಹ ಪಡೆಯದೇ ಸುನಾಮಿಯಂತೆ ಪಸರಿಸುತ್ತಿದೆ. ದೇಶದ 10ಕ್ಕೂ ಅಧಿಕ ರಾಜ್ಯಗಳು ಕೊರೊಮಾ ಕಪಿಮುಷ್ಟಿಯಲ್ಲಿ ಸಿಲುಕಿದ್ದು, ಆರೋಗ್ಯ ವ್ಯವಸ್ಥೆ ಐಸಿಯು ಸೇರಿದೆ. ಕೆಲ ರಾಜ್ಯಗಳು ಲಾಕ್‍ಡೌನ್ ಮಾದರಿಯ ಕಟ್ಟು ನಿಟ್ಟಿನ ಕ್ರಮಗಳನ್ನ ತಂದ ಪರಿಣಾಮ ಭಾರತ ಭಾಗಶಃ ಸ್ತಬ್ಧವಾಗಿದೆ. ಕೊರೊನಾದಿಂದ ಆರ್ಥಿಕ ಚುಟುವಟಿಕೆಗಳು ಸ್ಥಗಿತಗೊಂಡಿವೆ. ಭಾರತದಲ್ಲಿ ಕೊರೊನಾ ಸ್ಫೋಟ ಇಡೀ ಜಾಗತಿಕ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.

    ಇಂಧನ ಬೆಲೆ ಮೇಲೆ ಎಫೆಕ್ಟ್:
    ಭಾರತದಲ್ಲಿ ಕೊರೊನಾ ಸ್ಫೋಟದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ 1 ಡಾಲರ್ ಇಳಿಕೆಯಾಗಿದೆ. ವಿಶ್ವದಲ್ಲಿ ಭಾರತ ಇಂಧನ ಆಮದು ಮಾಡಿಕೊಳ್ಳುವ ಮೂರನೇ ಅತಿ ದೊಡ್ಡ ರಾಷ್ಟ್ರ. ಒಂದು ವೇಳೆ ಭಾರತ ಕೊರೊನಾದಿಂದಾಗಿ ಲಾಕ್‍ಡೌನ್ ಮಾಡಿಕೊಂಡ್ರೆ ವಾಹನಗಳ ಸಂಚಾರ ಕಡಿಮೆಯಾಗಲಿದೆ. ಇದರಿಂದ ಭಾರತ ತನ್ನ ಆಮದು ಪ್ರಮಾಣವನ್ನ ಕಡಿಮೆ ಮಾಡಬಹುದು. ಹೀಗಾಗಿ ಒಪೆಕ್ ರಾಷ್ಟ್ರಗಳು ತೈಲ ಬೆಲೆ ಇಳಿಕೆಗೆ ಮುಂದಾಗಿವೆ. ತೈಲ ಬೆಲೆ ಇಳಿಕೆಯಿಂದಾಗಿ ಪೂರೈಕೆಯನ್ನ ಹೆಚ್ಚಿಸಿಕೊಳ್ಳಲು ಒಪೆಕ್ ರಾಷ್ಟ್ರಗಳು ಮುಂದಾಗುತ್ತಿವೆ ಎಂದು ವರದಿಯಾಗಿದೆ.

    ಶೇ.1.4ರಷ್ಟು ಇಳಿಕೆ:
    ಒಪೆಕ್ ರಾಷ್ಟ್ರಗಳ ಈ ನಿರ್ಧಾರದಿಂದ ಸೋಮವರ ಭಾರತದಲ್ಲಿ ಕಚ್ಚಾ ತೈಲದ ಬೆಲೆ ಶೇ.1.4ರಷ್ಟು ಅಂದ್ರೆ ಪ್ರತಿ ಬ್ಯಾರೆಲ್ ಗೆ 65.22 ಡಾಲರ್ ರಷ್ಟು ಇಳಿಕೆಯಾಗಿದೆ. ಅದೇ ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ ಮೀಡಿಯೇಟ್ (ಡಬ್ಲ್ಯೂಟಿಐ) ನಲ್ಲಿ ಕಚ್ಚಾ ತೈಲದ ಬೆಲೆ ಶೇ.1.4ರಷ್ಟು ಕುಸಿತ ಕಂಡಿದೆ. ಇದರ ಮೌಲ್ಯ ಪ್ರತಿ ಬ್ಯಾರಲ್ ಗೆ 61.27ರಷ್ಟು ಡಾಲರ್ ಆಗಿದೆ. ಕಳೆದ ಒಂದು ವರದಲ್ಲಿ ಎರಡೂ ಬೆಂಚ್ ಮಾರ್ಕ್ ನಡುವೆ ಪ್ರತಿಶತ 1ರಷ್ಟು ಇಳಿಕೆಯಾಗಿದೆ.

    ತೈಲ ಬೆಲೆ ಇಳಿಕೆ ಆಗ್ತಿರೋದ್ಯಾಕೆ?
    ಭಾರತ ಮತ್ತು ಜಪಾನ್ ದೇಶಗಳು ಕೊರೊನಾ ಹೊಡೆತಕ್ಕೆ ಸಿಲುಕಿವೆ. ಇಲ್ಲಿ ಹೊಸ ಕೊರೊನಾ ಅಲೆ ವೇಗದಿಂದ ಹರಡಿಕೊಳ್ಳುತ್ತಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಗಳು ಜನರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿವೆ. ತೈಲ ಆಮದು ಮಾಡಿಕೊಳ್ಳುವ ರಾಷ್ಟ್ರಗಳ ಪೈಕಿ ಭಾರತ, ಜಪಾನ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಕೊರೊನಾದಿಂದಾಗಿ ಭಾರತ ತನ್ನ ಆಮದು ಪ್ರಮಾಣವನ್ನ ನಿಧಾನವಾಗಿ ಕಡಿಮೆಗೊಳಿಸುತ್ತಿದೆ. ಇದೆಲ್ಲ ಪರಿಣಾಮ ತೈಲ ಬೆಲೆ ಇಳಿಕೆಯಾಗುತ್ತಿದೆ ಎಂದು ಕಾಮರ್ಸ್ ಬ್ಯಾಂಕ್ ವಿಶ್ಲೇಷಕ ಯುಜೆನ್ ಬೆನ್‍ಬರ್ಗ್ ಹೇಳುತ್ತಾರೆ.

    ಬೇಡಿಕೆಯಲ್ಲಿ ಭಾರೀ ಇಳಿಕೆ:
    ಏಪ್ರಿಲ್ ನಲ್ಲಿ ಭಾರತ 1,00,000 ಬ್ಯಾರೆಲ್ ಗಳಷ್ಟು ತೈಲ ಬೇಡಿಕೆಯನ್ನ ಕಡಿತಗೊಳಿಸುವ ಸಾಧ್ಯತೆಗಳಿವೆ. ಇದು ಮೇ ನಲ್ಲಿ 1,70,000 ಬ್ಯಾರಲ್ ನಷ್ಟು ಹೆಚ್ಚಾಗುವ ನಿರೀಕ್ಷೆಗಳಿವೆ. ಭಾರತ ಮಾರ್ಚ್ ನಲ್ಲಿ ಪೆಟ್ರೋಲ್ ಸೇರಿದಂತೆ ಅಂದಾಜು 7,47,000 ಬ್ಯಾರೆಲ್ ತೈಲವನ್ನ ಆಮದು ಮಾಡಿಕೊಂಡಿತ್ತು. ಪೆಟ್ರೋಲ್ ಜೊತೆಯಲ್ಲಿ ಡೀಸೆಲ್ ಬೇಡಿಕೆ ಸಹ ಇಳಿಕೆಯಾಗಲಿದೆ. ಏಪ್ರಿಲ್ ನಲ್ಲಿ ಡೀಸೆಲ್ ಬೇಡಿಕೆ 2,20,000 ಬ್ಯಾರಲ್, ಮೇನಲ್ಲಿ 4,00,000 ಬ್ಯಾರಲ್ ಇಳಿಕೆ ಆಗಬಹುದು ಎಂದು ಕನ್ಸಲಟನ್ಸಿ ಎಫ್‍ಜಿಐ ಅಂದಾಜಿಸಿದೆ.

  • ಪ್ರಧಾನಿ ಮೋದಿ ಆಡಳಿತ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ: ಗುಂಡೂರಾವ್

    ಪ್ರಧಾನಿ ಮೋದಿ ಆಡಳಿತ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ: ಗುಂಡೂರಾವ್

    – ಚೌಕಿದಾರ ಅಲ್ಲ ಜನರ ಪಾಲಿನ ಕೆಟ್ಟ ಗ್ರಹಚಾರ

    ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಬಳಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್, ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ ಎಂದು ವ್ಯಂಗ್ಯ ಮಾಡಿದ್ದಾರೆ.

    ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಚೇಳಿಗೆ ಯಜಮಾನಿಕೆ ನೀಡಿ ಮನೆಯವರೆಲ್ಲಾ ಕುಟುಕಿಸಿಕೊಳ್ಳುವಂತಾಗಿದೆ ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ. ಸ್ವಘೋಷಿತ ‘ಚೌಕಿದಾರ’ ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ. ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ವಾಗಿದ್ದಾರೆ. ಮೋದಿಯವರ ಅಚ್ಚೇದಿನ್‍ನ ಸತ್ಯ ಜನರಿಗೆ ಈಗ ಅರಿವಾಗುತ್ತಿದೆ. ಬೆಲೆಯೇರಿಸಿ ಜನರ ಜೇಬು ಖಾಲಿ ಮಾಡುವುದೇ ಕೇಂದ್ರ ಸರ್ಕಾರದ ಒಂದಂಶದ ಕಾರ್ಯಕ್ರಮವಿದ್ದಂತೆ ಭಾಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

    ಒಂದೇ ತಿಂಗಳ ಅವಧಿಯಲ್ಲಿ 4 ಬಾರಿ ಎಲ್‍ಪಿಜಿ ಬೆಲೆಯೇರಿಕೆಯಾಗಿದೆ. ಒಂದೊಂದು ರೂಪಾಯಿಗೂ ಪರಿತಪಿಸುತ್ತಿರುವ ಬಡಜನತೆ ಈ ಬೆಲೆಯೇರಿಕೆ ತಾಪ ಸಹಿಸಿಕೊಳ್ಳಲು ಹೇಗೆ ಸಾಧ್ಯ? ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತಾದರೂ ಸಂವೇದನೆ ಬೇಡವೆ ಎಂದು ಪ್ರಶ್ನಿಸಿದ್ದಾರೆ.

    ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ. ಬೆಲೆಯೇರಿಕೆಯಿಂದ ದುಡಿದ ಹಣ ಉಳಿಸುವುದಿರಲಿ,ತಿಂಗಳ ಸಂಸಾರ ನಡೆಸುವುದೂ ಕಷ್ಟವಾಗಿದೆ. ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ. ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

    ಫೆಬ್ರವರಿಯಲ್ಲಿ 3 ಬಾರಿ ಏರಿಕೆ ಕಂಡಿದ್ದ ಅಡುಗೆ ಅನಿಲ ಸೋಮವಾರ ಕೂಡ 25 ರೂಪಾಯಿ ಏರಿಕೆ ಕಂಡಿದೆ. 14.2 ಕೆಜಿ ಸಿಲಿಂಡರ್ ಬೆಲೆ 822 ರೂಪಾಯಿ ಆಗಿದ್ದರೆ, 19 ಕೆಜಿಯ ವಾಣಿಜ್ಯ ಉದ್ದೇಶಿತ ಗ್ಯಾಸ್ ಸಿಲಿಂಡರ್ ದರ 1,666 ರೂಪಾಯಿ ಆಗಿಲ್ಲ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 7 ಪೈಸೆ ಇಳಿದಿದ್ದು ಲೀಟರ್‍ಗೆ 94.22 ರೂ ಇದೆ. ಡೀಸೆಲ್ ದರ 5 ಪೈಸೆ ಕಡಿಮೆಯೊಂದಿಗೆ 86.37 ರೂಪಾಯಿ ಆಗಿದೆ.

    ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಒತ್ತಾಯ: ತೈಲ ದರ ಹಾಗೂ ಹಾಗೂ ಗ್ಯಾಸ್ ದರ ಏರಿಕೆಗೆ ಆಟೋ ಚಾಲಕರು ತತ್ತರಿಸಿದ್ದು ಆಟೋ ಪ್ರಯಾಣದರ ಏರಿಕೆಗೆ ಚಾಲಕರು ಪಟ್ಟು ಹಿಡಿದಿದ್ದಾರೆ. ಸದ್ಯ ಬೆಂಗಳೂರಲ್ಲಿ 2 ಲಕ್ಷ ಆಟೋಗಳು ಸಂಚರಿಸುತ್ತಿದ್ದು, ಪ್ರಸ್ತುತ ಇರುವ ಪ್ರಯಾಣದರ 25ರೂ.ನಿಂದ 36 ರೂ.ಗೆ ಏರಿಕೆ ಮಾಡುವಂತೆ ಮನವಿ ಮಾಡಿದ್ದಾರೆ. 2013ರಲ್ಲಿ 1.9 ಕಿ.ಮೀಗೆ ಕನಿಷ್ಠ ದರ 20ರಿಂದ 25ರೂ.ಗೆ ಹೆಚ್ಚಿಸಲಾಗಿತ್ತು. ಬಳಿಕ 2019ರಲ್ಲೂ ಪ್ರಯಾಣದರ ಹೆಚ್ಚಳಕ್ಕೆ ಮನವಿ ಮಾಡಲಾಗಿತ್ತು. ಆದ್ರೆ ಸರ್ಕಾರ ಅನುಮತಿ ನೀಡಿರಲಿಲ್ಲ, ಆದ್ರೀಗ ತೈಲ ಮತ್ತು ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಿಗೆ ದರ ಪರಿಷ್ಕರಣೆಗೆ ಮನವಿ ಮಾಡಿದ್ದಾರೆ.

  • ನಿಮ್ಮ ಜೇಬು ಖಾಲಿಗೊಳಿಸಿ, ಸರ್ಕಾರದಿಂದ ‘ಮಿತ್ರ’ರಿಗೆ ನೀಡುವ ಮಹತ್ವದ ಕಾರ್ಯ: ರಾಹುಲ್ ಗಾಂಧಿ

    ನಿಮ್ಮ ಜೇಬು ಖಾಲಿಗೊಳಿಸಿ, ಸರ್ಕಾರದಿಂದ ‘ಮಿತ್ರ’ರಿಗೆ ನೀಡುವ ಮಹತ್ವದ ಕಾರ್ಯ: ರಾಹುಲ್ ಗಾಂಧಿ

    ನವದೆಹಲಿ: ಇಂಧನ ಬೆಲೆ ಏರಿಕೆ ವಿರುದ್ಧ ಎನ್‍ಡಿಎ ಸರ್ಕಾರದ ವಿರುದ್ಧ ಗುಡುಗಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ, ನಿಮ್ಮ ಜೇಬನ್ನ ಖಾಲಿಗೊಳಿಸಿ, ಮಿತ್ರರಿಗೆ ನೀಡುವ ಮಹಾನ್ ಕೆಲಸವನ್ನ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

    ರಾಹುಲ್ ಗಾಂಧಿ ಟ್ವೀಟ್: ಪೆಟ್ರೋಲ್ ಪಂಪ್ ನಲ್ಲಿ ಇಂಧನ ಹಾಕಿಸಿಕೊಳ್ಳುವಾಗ ನಿಮ್ಮ ದೃಷ್ಟಿ ಏರುತ್ತಿರುವ ಮೀಟರ್ ಮೇಲೆ ಬಿದ್ದಾಗ ಕಚ್ಚಾ ತೈಲದ ಬೆಲೆ ಇಳಿಕೆ ಆಗುತ್ತಿರೋದನ್ನ ನೆನಪಿನಲ್ಲಿಟ್ಟಿಕೊಳ್ಳಿ. ಲೀಟರ್ ಪೆಟ್ರೋಲ್ ನೂರು ರೂಪಾಯಿಗೆ ತಲುಪಿದೆ. ಜನ ಸಾಮಾನ್ಯರ ಜೇಬನ್ನು ಖಾಲಿಗೊಳಿಸಿ, ತಮ್ಮ ಮಿತ್ರರಿಗೆ ನೀಡುವ ಮಹತ್ವದ ಕೆಲಸವನ್ನು ಸರ್ಕಾರ ಉಚಿತವಾಗಿ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ಇತ್ತ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಸೈಕಲ್ ಸವಾರಿ ಮಾಡುವ ಮೂಲಕ ಇಂಧನ ಬೆಲೆ ಏರಿಕೆಯನ್ನ ವಿರೋಧಿಸಿದ್ದಾರೆ. ಪ್ರಧಾನಿಗಳು ಹೊರ ಬಂದು ಸಾಮಾನ್ಯ ಜನರ ಸಮಸ್ಯೆಯನ್ನ ಆಲಿಸಬೇಕಿದೆ. ಕೇವಲ ಹಿಂದಿನ ಸರ್ಕಾರಗಳ ಆರೋಪ ಮಾಡೋದನ್ನ ಸದ್ಯದ ಸರ್ಕಾರ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ರಾಬರ್ಟ್ ವಾದ್ರಾ ತಿರುಗೇಟು ನೀಡಿದರು. ಇದನ್ನೂ ಓದಿ: ನಾವಿಬ್ಬರು, ನಮಗಿಬ್ಬರು- ನಾಲ್ವರಿಂದ ದೇಶದ ಆಡಳಿತ: ಕೇಂದ್ರದ ವಿರುದ್ಧ ರಾಹುಲ್ ಕಟು ಟೀಕೆ

    ಪ್ರಧಾನಿ ಹೇಳಿದ್ದೇನು?: ಒಂದು ವೇಳೆ ಹಿಂದಿನ ಸರ್ಕಾರಗಳು ತೈಲ ಆಮದು ಅವಲಂಬನೆಗೆ ಕಡಿವಾಣ ಹಾಕಿದ್ದರೆ ಇಂದು ಮಧ್ಯಮ ವರ್ಗಕ್ಕೆ ಸಮಸ್ಯೆ ಆಗುತ್ತಿರಲಿಲ್ಲ. ನಮ್ಮ ಸರ್ಕಾರ ತೈಲ ಆಮದು ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈಗಿನ ತೈಲ ದರ ಏರಿಕೆಗೆ ಹಿಂದಿನ ಸರ್ಕಾರದ ನೀತಿಯೇ ಕಾರಣ ಎಂದು ಮೋದಿ ಅವರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಇದನ್ನೂ ಓದಿ: ಬೆಲೆ ಏರಿಕೆ ನಿಯಂತ್ರಣ ಸರ್ಕಾರದಿಂದ ಸಾಧ್ಯವಿಲ್ಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

    2019-20ನೇ ಆರ್ಥಿಕ ವರ್ಷದಲ್ಲಿ ಶೇ. 85ರಷ್ಟು ಇಂಧನವನ್ನು ವಿದೇಶಗಳಿಂದಲೇ ಆಮದು ಮಾಡಲಾಗಿದೆ. ಶೇ.53ರಷ್ಟು ಎಲ್‍ಪಿಜಿಯನ್ನು ಆಮದು ಮಾಡಿಕೊಳ್ಳಲಾಗಿದೆ. ಅಗತ್ಯ ಇಂಧನಗಳ ಬೆಲೆ ಹೆಚ್ಚಳ ನಿಜಕ್ಕೂ ತೀವ್ರ ಕಳವಳಕಾರಿಯಾಗಿದೆ. ಒಂದು ವೇಳೆ ಹಿಂದಿನ ಸರ್ಕಾರಗಳು ಈ ವಿಚಾರದ ಬಗ್ಗೆ ಆಗಲೇ ಗಮನ ಹರಿಸಿದ್ದರೆ ಜನ ಸಾಮಾನ್ಯರಿಗೆ ಇಂದು ಸಮಸ್ಯೆ ಆಗುತ್ತಿರಲಿಲ್ಲ ಎಂದು ಮೋದಿ ಹೇಳಿದ್ದರು.

  • ರೌಂಡಪ್ 2018- ಭಾರತ ಸಾಧಿಸಿದ್ದೇನು? ಏನೆಲ್ಲ ದುರಂತ ಸಂಭವಿಸಿದೆ? ಆರ್ಥಿಕ ವಲಯದಲ್ಲಿ ಏನಾಯ್ತು?

    ರೌಂಡಪ್ 2018- ಭಾರತ ಸಾಧಿಸಿದ್ದೇನು? ಏನೆಲ್ಲ ದುರಂತ ಸಂಭವಿಸಿದೆ? ಆರ್ಥಿಕ ವಲಯದಲ್ಲಿ ಏನಾಯ್ತು?

    ಇಸ್ರೋ ಈ ವರ್ಷ ವಿಶೇಷ ಸಾಧನೆ ನಿರ್ಮಿಸಿದ್ದರೆ, ರಾಜಕೀಯದಲ್ಲಿ ಈ ವರ್ಷ ಪ್ರಧಾನಿ ಮೋದಿಗೆ ಮಿಶ್ರಫಲ ಸಿಕ್ಕಿದೆ. ತೈಲ ದರ ಏರಿಕೆ, ಇಳಿಕೆ ಕಾಣುತ್ತಿದ್ದರೆ ವರ್ಷದ ಕೊನೆಗೆ ಆರ್‍ಬಿಐ ಮತ್ತು ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಹೆಚ್ಚು ಸದ್ದು ಮಾಡಿದೆ. ಹೀಗಾಗಿ ಇಲ್ಲಿ ಈ ವರ್ಷ ಹೆಚ್ಚು ಸುದ್ದಿಯಾದ ಟಾಪ್ ಘಟನೆಗಳ ಕಿರು ಮಾಹಿತಿಯನ್ನು ನೀಡಲಾಗಿದೆ.

    ಕೇರಳ ಜಲಪ್ರಳಯ:
    ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಆಗಸ್ಟ್ ತಿಂಗಳ ಕಾಣಿಕೊಂಡ ಭಾರೀ ಮಳೆಯಿಂದಾಗಿ ಕೇರಳದ ಡ್ಯಾಂಗಳು ಅಪಾಯದ ಮಟ್ಟ ಮೀರಿದ್ದವು. ಅನಾಹುತ ತಪ್ಪಿಸುವ ಉದ್ದೇಶದಿಂದ ಆಗಸ್ಟ್ 9ರಂದು ಇಡುಕ್ಕಿ ಡ್ಯಾಂ ತೆರೆಯಲಾಗಿತ್ತು. 26 ವರ್ಷಗಳ ಇತಿಹಾಸದಲ್ಲಿ ಮೊದಲಬಾರಿಗೆ 54 ಡ್ಯಾಂಗಳನ್ನು ಒಟ್ಟಿಗೆ ತೆರೆಯಲಾಗಿತ್ತು. ಹೀಗಾಗಿ ಕೋಜಿಕೋಡು, ವಯನಾಡ್, ಪಲಕ್ಕಾಡ್, ಇಡುಕ್ಕಿ, ಮಲಪ್ಪುರಂ ಹಾಗೂ ಕೊಲ್ಲಂ ಜಿಲ್ಲೆಗಳ ಕೆಲವು ಪ್ರದೇಶಗಳು ಜಲಾವೃತವಾಗಿದ್ದವು. ಈ ಜಲಪ್ರಳಯದಿಂದಾಗಿ 483 ಜನ ಮೃತಪಟ್ಟಿದ್ದರೆ, 14 ಜನ ನಾಪತ್ತೆಯಾಗಿದ್ದಾರೆ. ಒಟ್ಟು 19,512 ಕೋಟಿ ರೂ. ಮೌಲ್ಯದ ಹಾನಿಯನ್ನು ಕೇರಳ ಅನುಭವಿಸಿದೆ ಎಂದು ಅಂದಾಜು ಮಾಡಲಾಗಿದೆ.

    ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿ, ವೈಮಾನಿಕ ವೀಕ್ಷಣೆ ನಡೆಸಿದ್ದರು. ಮಳೆ ಮತ್ತು ಪ್ರವಾಹ ಶಾಂತವಾದ ಬಳಿಕ ಜನರು ತಮ್ಮ ನಿವಾಸಕ್ಕೆ ತೆರಳಿದರು. ಆಗ ಮನೆಯಲ್ಲಿ ಹಾವು, ಮೊಸಳೆಗಳು ಪತ್ತೆಯಾಗಿ ಜನರನ್ನು ಆತಂಕಕ್ಕೆ ಗುರಿ ಮಾಡಿತ್ತು. ಈ ಮಹಾ ಜಲಪ್ರಳಯಕ್ಕೆ `ಸೋಮಾಲಿ ಜೆಟ್’ ಚಂಡಮಾರುತವೇ ಕಾರಣವೆಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

    ಪಂಜಾಬ್ ರೈಲು ದುರಂತ:
    ಅಮೃತಸರದ ಜೋದಾ ಪಾಟ್ಕರ್ ನಲ್ಲಿ ಅಕ್ಟೋಬರ್ 19ರಂದು ಈ ದುರ್ಘಟನೆ ನಡೆದಿತ್ತು. ವಿಜಯದಶಮಿಯ ನಿಮಿತ್ತ ನಡೆದಿದ್ದ ರಾವಣ ಸಂಹಾರದ ಕಾರ್ಯಕ್ರಮವನ್ನು ಸಾವಿರಾರು ಜನ ಹಳಿ ಮೇಲೆ ನಿಂತು ನೋಡುತ್ತಿದ್ದರು. ಈ ವೇಳೆ ರೈಲು ನುಗ್ಗಿದ ಪರಿಣಾಮ 61 ಮಂದಿ ಮೃತಪಟ್ಟಿದ್ದರೆ 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದೇ ದುರಂತದಲ್ಲಿ ರಾವಣನ ವೇಷಧಾರಿಯಾಗಿದ್ದ ದಲ್ಬೀರ್ ಸಿಂಗ್ (24) ರೈಲು ಹಳಿಯ ಮೇಲೆ ನಿಂತಿದ್ದ ಜನರನ್ನು ದೂಡಿ ತನ್ನ ಪ್ರಾಣ ತ್ಯಾಗ ಮಾಡಿ 8 ಜನರು ಜೀವವನ್ನು ಉಳಿಸಿದ್ದರು.

    ಏಕತಾ ಪ್ರತಿಮೆ:
    ದೇಶದ ಏಕತೆಗೆ ಶ್ರಮಿಸಿದ, ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಉದ್ದದ ಉಕ್ಕಿನ ಪ್ರತಿಮೆ ಅಕ್ಟೋಬರ್ 31ರಂದು ಅನಾವರಣಗೊಂಡಿತು. ಈ ಮೂಲಕ ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಟೇಲರ `ಏಕತಾ ಪ್ರತಿಮೆ’ ಪಾತ್ರವಾಗಿದೆ. ಈ ಪ್ರತಿಮೆ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟಿನ ಬಳಿ ನಿರ್ಮಾಣವಾಗಿದೆ. ನರ್ಮದಾ ಜಿಲ್ಲೆಯ ನರ್ಮದಾ ಡ್ಯಾಮ್‍ನಿಂದ 3.2 ಕಿ.ಮೀ ದೂರದಲ್ಲಿರುವ `ಸಾಧು ಬೆಟ್’ ದ್ವೀಪದಲ್ಲಿ ಯೋಜನಾ ಸ್ಥಳವಿದೆ. ಅಕ್ಟೋಬರ್ 31ರಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನ. ಹೀಗಾಗಿ ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ ಮಾಡಿದ್ದಾರೆ.

    ಇಸ್ರೋ ಮೈಲಿಗಲ್ಲು:
    ಭಾರತದ ಇಂಟರ್ ನೆಟ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಬಲ್ಲ 5,854 ಕೆ.ಜಿ. ತೂಕದ ಜಿಸ್ಯಾಟ್-11 ಹಾಗೂ ಮೂರು ಬಾರಿ ಏಕಕಾಲದಲ್ಲಿ 31 ಉಪಗ್ರಹಗಳ ಉಡಾವಣೆ ಮಾಡುವ ಮೂಲಕ 2018ರಲ್ಲಿ ಇಸ್ರೋ ಹೊಸ ಮೈಲುಗಲ್ಲುಗಳನ್ನು ನೆಟ್ಟಿದೆ. ಫ್ರೆಂಚ್ ಗಯಾನಾದಿಂದ ಏರಿಯಾನ್ 5 ರಾಕೆಟ್ ಮೂಲಕ ಭಾರೀ ತೂಕದ ಜಿಸ್ಯಾಟ್-11 ಉಪಗ್ರಹವನ್ನು ಡಿಸೆಂಬರ್ 5ರಂದು ಉಡಾವಣೆ ಮಾಡಲಾಗಿದೆ.

    ಮೂರು ಬಾರಿ ಪಿಎಸ್‍ಎಲ್‍ವಿ-ಸಿ ರಾಕೆಟ್‍ಗಳ ಮೂಲಕ ಏಕಕಾಲದಲ್ಲಿ 31 ಉಪಗ್ರಹಗಳನ್ನು ಕಕ್ಷೆಗೆ ತಲುಪಿಸುವ ಸಾಧನೆಯನ್ನು ಇಸ್ರೋ ಮಾಡಿದೆ. ಜನವರಿ 12ರಂದು 31 ಉಪಗ್ರಹ ಹೊತ್ತ ಪಿಎಸ್‍ಎಲ್‍ವಿ-ಸಿ 40 ರಾಕೆಟ್ ನಭಕ್ಕೆ ಚಿಮ್ಮಿತ್ತು. ಈ ಮೂಲಕ ಮೊದಲ ಉಡಾವಣೆಯಲ್ಲಿ ಇಸ್ರೋ ಯಶಸ್ವಿಯಾಗಿತ್ತು. ಇದರ ಬೆನ್ನಲ್ಲೆ ಜೂನ್ 23ರಂದು ಪಿಎಸ್‍ಎಲ್‍ವಿ-ಸಿ 38 ರಾಕೆಟ್ ಹಾಗೂ ನವೆಂಬರ್ 29ರಂದು 31 ಪಿಎಸ್‍ಎಲ್‍ವಿ-ಸಿ 43 ರಾಕೆಟ್‍ಗಳು 31 ಉಪಗ್ರಹ ಹೊತ್ತು ಬಾಹ್ಯಾಕಾಶಕ್ಕೆ ಹಾರಿ ಉಪಗ್ರಹಗಳನ್ನು ಕಕ್ಷೆಗೆ ತಲುಪಿಸಿದ್ದವು.

    ವಿಧಾನಸಭೆ ಚುನಾವಣೆ:
    ದೇಶದಲ್ಲಿ ಈ ಬಾರಿ 9 ರಾಜ್ಯಗಳ ವಿಧಾನಸಭಾ ಚುನಾವಣೆ ನಡೆದಿದ್ದು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಗೆ ಮಿಶ್ರಫಲ ಸಿಕ್ಕಿದೆ. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸಿ ಕಾಂಗ್ರೆಸ್‍ಗೆ ಭಾರೀ ಶಾಕ್ ನೀಡುತ್ತ ಮುನ್ನುಗ್ಗಿತ್ತು. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಕಾಂಗ್ರೆಸ್‍ಗೆ ಲಕ್ಕಿ ಕೀ ಸಿಕ್ಕಿದ್ದರಿಂದ ವರ್ಷದ ಕೊನೆಯಲ್ಲಿ ನಡೆದ ಚುನಾವಣೆಗಳಲ್ಲಿ ಭರ್ಜರಿ ಜಯ ಸಾಧಿಸಿತ್ತು.

    ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ ಫೆಬ್ರವರಿಯಲ್ಲಿ ನಡೆದವು. ಈ ವೇಳೆ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿ, ನಾಗಾಲ್ಯಾಂಡ್‍ನಲ್ಲಿ ಎನ್‍ಡಿಪಿಪಿ ಜೊತೆಗೆ ಮೈತ್ರಿ ಸರ್ಕಾರ ರಚಿಸಿಕೊಂಡಿದೆ. ಮೇಘಾಲಯದಲ್ಲಿ ಎನ್‍ಡಿಪಿ ಹಾಗೂ ಯುಡಿಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

    ಕಾಂಗ್ರೆಸ್ ಲಕ್ ಆರಂಭವಾಗಿದ್ದು ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ ಮೂಲಕ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಷ್ಟ್ರದ ವಿವಿಧ ಪ್ರಾದೇಶಿಕ ಪಕ್ಷಗಳ ನಾಯಕರು ಭಾಗವಹಿಸಿ ಮಹಾಘಟ್‍ಬಂಧನ್ ಮುನ್ನುಡಿ ಬರೆದಿದ್ದರು. ಈ ವೇಳೆ ಬಿಜೆಪಿ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ರಣತಂತ್ರ ಹೆಣೆಯಲು ನಿರ್ಧಾರ ಕೈಗೊಂಡಿದ್ದರು. ಇದಾದ ಬಳಿಕ ಪಂಚರಾಜ್ಯ ಚುನಾವಣೆಯನ್ನು ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದಲೇ ಕರೆಯಲಾಗಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಛತ್ತೀಸಗಡ್, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿತು. ಉಳಿದಂತೆ ತೆಲಂಗಾಣದಲ್ಲಿ ಟಿಆರ್ ಎಸ್ ಮತ್ತು ಮಿಜೋರಾಂನಲ್ಲಿ ಎಂಎನ್‍ಎಫ್ ಗೆದ್ದು ಬೀಗಿದವು. ಪಂಚರಾಜ್ಯ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಭಾರೀ ಹಿನ್ನಡೆಯಾಗಿತ್ತು.

    ಬುರಾರಿ ಸಾಮೂಹಿಕ ಆತ್ಮಹತ್ಯೆ:
    ನವದೆಹಲಿಯ ಬುರಾರಿ ಮನೆಯೊಂದರಲ್ಲಿ ಒಂದೇ ಕುಟುಂಬದ 11 ಜನರು ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಾರಂಭದಲ್ಲಿ ಮೂಢನಂಬಿಕೆಗೆ ಒಳಗಾಗಿ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿತ್ತು. ಈ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದರು. ಇಂತಹದ್ದೇ ಘಟನೆ ರಾಂಚಿಯಲ್ಲಿ ನಡೆದಿದ್ದು, ವ್ಯಾಪಾರದಲ್ಲಿ ನಷ್ಟವಾ ಗಿದೆ ಎಂದು ಪತ್ರ ಪರೆದು ಇಟ್ಟಿದ್ದ ವ್ಯಕ್ತಿ ಸೇರಿದಂತೆ ಕುಟುಂಬ ಆರು ಜನರು ಆತ್ಮಹತ್ಯೆ ಶರಣಾಗಿದ್ದರು.

    ನಿಪಾ ವೈರಸ್:
    ಕೇರಳದಲ್ಲಿ ಮೇ ತಿಂಗಳು ಕಾಣಿಸಿಕೊಂಡ ನಿಪಾ ವೈರಸ್ 17 ಜನರನ್ನು ಬಲಿಪಡೆದಿತ್ತು. ಕೇರಳ ನೆರೆಯ ರಾಜ್ಯಗಳಿಗೂ ತಟ್ಟುತ್ತದೆ ಎನ್ನುವ ಆತಂಕ ಸೃಷ್ಟಿಸಲಾಗಿತ್ತು. ಈ ಕುರಿತು ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ವೈರಸ್ ಪತ್ತೆ ಹಚ್ಚಿತ್ತು. ಆರಂಭದಲ್ಲಿ ಇದು ಬಾವಲಿಗಳಿಂದ ಹರಡುತ್ತದೆ ಎನ್ನಲಾಗಿತ್ತು. ಇದರಿಂದಾಗಿ ಅನೇಕ ಪ್ರದೇಶಗಳಲ್ಲಿ ಬಾವಲಿಗಳ ಮಾರಣಹೋಮವೇ ನಡೆಯಿತು. ಮೇ ಅಂತ್ಯದ ವೇಳೆ ನಿಪಾ ಪ್ರಕರಣಗಳು ನಿಯಂತ್ರಣಕ್ಕೆ ಬಂದವು. ನಿಪಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಲಿನಿ ಅವರು ಪತಿಗೆ ಬರೆದಿದ್ದ ಭಾವನಾತ್ಮಕ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಬೋಗಿಬೀಲ್ ಸೇತುವೆ ಉದ್ಘಾಟನೆ:
    ದೇಶದ ಅತ್ಯಂತ ಉದ್ದವಾದ ರಸ್ತೆ ಹಾಗೂ ರೈಲು ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 25ರಂದು ಉದ್ಘಾಟಿಸಿದರು. ಈ ಬೋಗಿಬೀಲ್ ಸೇತುವೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶಂಕುಸ್ಥಾಪನೆ ನೆರವೇರಿಸಿದ್ದರೆ, ಅಟಲ್ ಬಿಹಾರಿ ವಾಜಪೇಯಿ ಅವರು ಕಾಮಗಾರಿಗೆ ಚಾಲನೆ ನೀಡಿದ್ದರು. ಅಸ್ಸಾಂನ ದಿಬ್ರೂಗಡದ ಬಳಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಭಾರತೀಯ ರೈಲ್ವೇ ಇಲಾಖೆ ನಿರ್ಮಿಸಿದ್ದು, ಏಷ್ಯಾದ 2ನೇ ಅತ್ಯಂತ ಉದ್ದದ ಸೇತುವೆ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಅಸ್ಸಾಂನ ದಿಬ್ರೂಗಡದಿಂದ ಅರುಣಾಚಲ ಪ್ರದೇಶದ ಪಾಸಿಘಾಟ್ ನಡುವೆ ಈ ಸೇತುವೆ ನಿರ್ಮಾಣವಾಗಿದ್ದು, ಒಟ್ಟು 4.94 ಕಿಮೀ ಉದ್ದವಿದೆ.

    ಆರ್ಥಿಕ ವಲಯಲ್ಲಿ ಏನಾಯಿತು?
    ಬ್ಯಾಂಕ್ ವಿಲೀನ:
    ರಾಷ್ಟ್ರೀಕೃತ ಬ್ಯಾಂಕ್‍ಗಳಾದ ವಿಜಯ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಹಾಗೂ ದೇನಾ ಬ್ಯಾಂಕ್‍ಗಳನ್ನು ವಿಲೀನಗೊಳಿಸಿ ದೇಶದ ಮೂರನೇ ದೊಡ್ಡ ಬ್ಯಾಂಕ್ ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಬ್ಯಾಂಕ್ ಒಕ್ಕೂಟವು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತ್ತು.

    ಆರ್‌ಬಿಐ- ಕೇಂದ್ರ ಜಟಾಪಟಿ:
    ಬಡ್ಡಿ ದರ ನಿಗದಿ, ಆರ್‌ಬಿಐ ಮೀಸಲು ನಿಧಿಯ ಬಳಕೆ, ಸ್ವಾಯತ್ತತೆ ಇತ್ಯಾದಿ ವಿಚಾರವಾಗಿ ಗವರ್ನರ್ ಉರ್ಜಿತ್ ಪಟೇಲ್ ಹಾಗೂ ಕೇಂದ್ರ ಸರ್ಕಾರದ ನಡುವೆ ಜಟಾಪಟಿ ನಡೆದಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ವೈಯಕ್ತಿಕ ಕಾರಣ ನೀಡಿ ಉರ್ಜಿತ್ ಪಟೇಲ್ ಆರ್‌ಬಿಐ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಶಕ್ತಿಕಾಂತ ದಾಸ್ ಅವರನ್ನು 24 ಗಂಟೆಗಳಲ್ಲಿ ಕೇಂದ್ರ ಸರ್ಕಾರ ನೇಮಿಸಿ ಆದೇಶ ಹೊರಡಿಸಿತ್ತು.

    ಜಿಡಿಪಿಯಲ್ಲಿ ಏರಿಕೆ:
    ಪ್ರತಿ ವರ್ಷದಂತೆ ವಿಶ್ವಸಂಸ್ಥೆಯ 22018ರ ಜುಲೈನಲ್ಲಿ ಪ್ರಕಟಿಸಿ ವರದಿಯ ಪ್ರಕಾರ, ಫ್ರಾನ್ಸ್ ಅನ್ನು ಹಿಂದಿಕ್ಕಿ ಭಾರತ 6ನೇ ಬೃಹತ್ ಆರ್ಥಿಕತೆ ದೇಶ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವರದಿಯ ಪ್ರಕಾರ ಭಾರತದ ಜಿಡಿಪಿ ಮೌಲ್ಯವು 2.59 ಲಕ್ಷ ಕೋಟಿ ಡಾಲರ್ ಏರಿಕೆ ಕಂಡಿದೆ.

    ವಿದೇಶಕ್ಕೆ ಪರಾರಿಯಾದವರು:
    ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಹಾಗೂ ಚಿಕ್ಕಪ್ಪ ಮೆಹಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 14,356 ಕೋಟಿ ರೂ. ವಂಚಿಸಿದ್ದ ಪ್ರಕರಣ 2018ರಲ್ಲಿ ದೇಶಕ್ಕೆ ಶಾಕ್ ಕೊಟ್ಟಿತ್ತು. ಈ ಇಬ್ಬರ ವಿರುದ್ಧ ಜಾರಿ ನಿರ್ದೇಶನಾಲಯವು (ಇಡಿ) ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಆದರೂ ಭಾರತಕ್ಕೆ ಬಾರದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇದರಿಂದಾಗಿ ನೀರವ್ ಒಡೆತನದ ದೇಶ ಹಾಗೂ ವಿದೇಶದಲ್ಲಿರುವ ಆಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    ಭಾತರದ ವಿವಿಧ ಬ್ಯಾಂಕ್‍ಗಳಿಗೆ ವಂಚಿಸಿ 2016ರಿಂದ ಮದ್ಯದ ದೊರೆ ವಿಜಯ್ ಮಲ್ಯ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಭಾರತಕ್ಕೆ ಕರೆತಲು ಇಡಿ ಅಧಿಕಾರಿಗಳು ಸಾಹಸ ಪಡುತ್ತಿದ್ದಾರೆ. ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ವೆಸ್ಟ್ ಮಿನಿಸ್ಟರ್ ಕೋರ್ಟ್ ಅನುಮತಿ ನೀಡಿದೆ. ಇದಕ್ಕೂ ಮುನ್ನ ಎಚ್ಚೆತ್ತುಕೊಂಡಿದ್ದ ಮಲ್ಯ, ನಾನು ಪಡೆದ ಸಾಲದ ಸಂಪೂರ್ಣ ಹಣವನ್ನು ಪಾವತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ನೀರವ್ ಮೋದಿ, ಮೆಹಲ್ ಚೋಕ್ಸಿ ಹಾಗೂ ವಿಜಯ್ ಮಲ್ಯ ಸೇರಿದಂತೆ ಒಟ್ಟು 58 ವಿತ್ತ ಅಪರಾಧಿಗಳನ್ನು ಗಡಿಪಾರು ಮಾಡುವಂತೆ ಕೇಂದ್ರವು, ಯುಎಇ, ಅಮೆರಿಕ, ಈಜಿಪ್ತ್, ಅಂಟಿಗುವಾ ಒಳಗೊಂಡಂತೆ ವಿವಿಧ ದೇಶಗಳಿಗೆ ಮನವಿ ಸಲ್ಲಿಸಿದೆ.

    ಹಾವು ಏಣಿಯಾಟವಾಡಿದ ತೈಲ ದರ:
    ಡಾಲರ್ ಮುಂದೆ ರೂಪಾಯಿ ಮೌಲ್ಯ ಭಾರೀ ಕುಸಿತ ಕಂಡಿತ್ತು. ಇದರ ಪರಿಣಾಮ ತೈಲ ಬೆಲೆಯ ಮೇಲು ಬೀರಿತು. ತೈಲ ಬೆಲೆ ಏರು ಪೇರು ಆಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರಿನ ಜನರು ಜನವರಿಯಲ್ಲಿ 71.06 ರೂ. ನೀಡಿ ಪಡೆಯುತ್ತಿದ್ದ ಒಂದು ಲೀಟರ್ ಪೆಟ್ರೋಲ್ ದರ ಸೆಪ್ಟೆಂಬರ್ ನಲ್ಲಿ 85 ರೂ. ಜಂಪ್ ಆಗಿತ್ತು. ಈ ದರ ಡಿಸೆಂಬರ್ ವೇಳೆಗೆ 71 ರೂ. ಆಸುಪಾಸು ಬಂದು ಗ್ರಾಹಕರ ಹೊರೆಯನ್ನು ತಗ್ಗಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಿಹಿ ಸುದ್ದಿ ನೀಡಿದ ಕುಮಾರಣ್ಣ-ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ. ಇಳಿಕೆ

    ಸಿಹಿ ಸುದ್ದಿ ನೀಡಿದ ಕುಮಾರಣ್ಣ-ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ. ಇಳಿಕೆ

    ಕಲಬುರಗಿ: ದಿನನಿತ್ಯ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ದರ ಏರಿಕೆಯಾಗುತ್ತಿದೆ. ಸಾರ್ವಜನಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ರೇಟ್ ಮೇಲಿನ ದರ ಕಡಿತಗೊಳಿಸುತ್ತಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಕಲಬುರಗಿಯಲ್ಲಿ ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆ ಬಳಿಕ 40 ಸಾವಿರ ಕೋಟಿ ರೂ. ಮೊತ್ತದಷ್ಟು ರೈತರ ಸಾಲ ಮನ್ನಾ ಘೋಷಿಸಿದ್ದ ಎಚ್‍ಡಿಕೆ, ಅದಕ್ಕಾಗಿ ಹಣ ಹೊಂದಿಸಲು ಸೆಸ್ ಹೆಚ್ಚಿಸಿದ್ದರು. ಬಜೆಟ್ ನಲ್ಲಿ ಕುಮಾರಸ್ವಾಮಿ ಪೆಟ್ರೋಲ್ ಮೇಲಿನ ಸುಂಕವನ್ನು ಶೇ.30 ರಿಂದ ಶೇ.32ಕ್ಕೆ ಹೆಚ್ಚಿಸಿದ್ದರೆ ಡೀಸೆಲ್ ಮೇಲಿನ ಸುಂಕವನ್ನು ಶೇ.19 ರಿಂದ ಶೇ.21ಕ್ಕೆ ಏರಿಸಿದ್ದರು. ಆದರೆ ಬಂದ್ ದಿನವೇ ಸೆಸ್ ಇಳಿಸುವ ಸುಳಿವನ್ನು ನೀಡಿದ್ದರು. ಇದರಂತೆ ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ ಇಳಿಕೆಯಾಗಲಿದೆ.

    ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸರ್ಕಾರ ವಿಧಿಸುವ ಸೆಸ್ ಕಡಿಮೆಯಾದರೂ ತೈಲಬೆಲೆ ಹೆಚ್ಚಳದಿಂದ ಜನಸಾಮಾನ್ಯರಿಗೆ ಹೊರೆಯಾಗಿರುವ ಕಾರಣ ಸೆಸ್ ಕಡಿಮೆ ಮಾಡಲು ಸಿಎಂ ತೀರ್ಮಾನಿಸಿದ್ದಾರೆ. ಇತ್ತ ತೈಲ ಬೆಲೆ ನಿತ್ಯ ಹೆಚ್ಚಾಗುತ್ತಿದ್ದು ಇಂದು ಕೂಡ ಲೀಟರ್ ಪೆಟ್ರೋಲ್‍ಗೆ 15 ಪೈಸೆ, ಡೀಸೆಲ್ 6 ಪೈಸೆಯಷ್ಟು ಹೆಚ್ಚಳವಾಗಿದೆ.

    ರಾಜಸ್ಥಾನ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಅನುಸರಿಸಿದ್ದು ರಾಜ್ಯದಲ್ಲೂ ಪೆಟ್ರೋಲ್ ಡೀಸೆಲ್ ದರ ಇಳಿಕೆ ಮಾಡಿದೆ. ಅಧಿಕೃತವಾಗಿ ಮಂಗಳವಾರ ಬೆಳಗ್ಗೆಯಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv