Tag: oil

  • ಟ್ಯಾಂಕರ್ ಪಲ್ಟಿ- ಆಸ್ಪತ್ರೆಗೆ ತೆರಳದೇ ಎಣ್ಣೆ ತುಂಬೋದ್ರಲ್ಲಿ ಅಂಬ್ಯುಲೆನ್ಸ್ ಸಿಬ್ಬಂದಿ ಬ್ಯುಸಿ

    ಟ್ಯಾಂಕರ್ ಪಲ್ಟಿ- ಆಸ್ಪತ್ರೆಗೆ ತೆರಳದೇ ಎಣ್ಣೆ ತುಂಬೋದ್ರಲ್ಲಿ ಅಂಬ್ಯುಲೆನ್ಸ್ ಸಿಬ್ಬಂದಿ ಬ್ಯುಸಿ

    ಹಾವೇರಿ: ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿಯಾಗಿ ಗಾಯಾಳುಗಳು ನರಳುತ್ತಿದ್ದರೂ ಅಂಬ್ಯುಲೆನ್ಸ್ ನಲ್ಲೇ ಬಿಟ್ಟು ಸಿಬ್ಬಂದಿ ಅಡುಗೆ ಎಣ್ಣೆ ತುಂಬಲು ನಿಲ್ಲುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ.

    ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಆ್ಯಂಬುಲೆನ್ಸ್ ಗೆ ಕರೆಮಾಡಿದ್ದಾರೆ. ಸ್ಥಳಕ್ಕೆ ಆ್ಯಂಬುಲೆನ್ಸ್ ಆಗಮಿಸಿದರೂ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯದೆ, ಸಿಬ್ಬಂದಿಯೂ ಎಣ್ಣೆ ತುಂಬಿಕೊಳ್ಳುವುದರಲ್ಲಿ ನಿರತರಾಗಿದ್ದರು.

    ಅಡುಗೆ ಎಣ್ಣೆ ತುಂಬಿಕೊಳ್ಳಲು ಸಿಬ್ಬಂದಿ ಹಾಗೂ ಗ್ರಾಮದ ಜನರು ಮುಗಿಬಿದ್ದದ್ದರು. ಸ್ಥಳೀಯರ ಜೊತೆಗೆ ಅಂಬ್ಯುಲೆನ್ಸ್ ನಲ್ಲಿದ್ದ ಸಿಬ್ಬಂದಿ ಸಹ ಡಬ್ಬಿಗಳಲ್ಲಿ ಎಣ್ಣೆ ತುಂಬಿಕೊಳ್ಳುವಲ್ಲಿ ನಿರತರಾಗಿದ್ದರು. ಇತ್ತ ಗಾಯಾಳುಗಳು ರಸ್ತೆಯಲ್ಲೇ ನರಳಾಡುತ್ತಿದ್ದರು. ಸ್ಥಳೀಯರು ಇದನ್ನು ವಿಡಿಯೋ ಮಾಡಿದ್ದಾರೆ. ನಂತರ ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    ಸ್ಥಳೀಯರು ಸಹ ಮಾನವೀಯತೆಯನ್ನು ಮರೆತು ಗಾಯಾಳುಗಳನ್ನು ರಸ್ತೆಯಲ್ಲಿಯೇ ಬಿಟ್ಟು ಅಡುಗೆ ಎಣ್ಣೆ ತುಂಬಿಕೊಳ್ಳಲು ಪರದಾಡುತ್ತಿದ್ದರು. ಟ್ಯಾಂಕರ್ ಪಲ್ಟಿಯಾಗುತ್ತಿದ್ದಂತೆ ಕೆಳಗೆ ಬೀಳುತ್ತಿದ್ದ ಅಡುಗೆ ಎಣ್ಣೆಯನ್ನು ತುಂಬಿಕೊಳ್ಳಲು ಜನ ಮುಗಿಬಿದ್ದಿದ್ದರು. ಈ ವೇಳೆ ನೂಕುನುಗ್ಗಲು ಸಂಭವಿಸಿತ್ತು. ಎಣ್ಣೆ ತುಂಬಿಕೊಳ್ಳಲು ಬಿಂದಿಗೆ, ಡಬ್ಬಿ, ಕ್ಯಾನ್, ಡ್ರಮ್ ಹಿಡಿದುಕೊಂಡು ಜನ ಮುಗಿಬಿದ್ದಿದ್ದರು.

  • ಸೌದಿ ಕಂಪನಿ ಜೊತೆ ಡೀಲ್ – ಭಾರತದ ಅತಿ ದೊಡ್ಡ ಎಫ್‍ಡಿಐ ಒಪ್ಪಂದಕ್ಕೆ ರಿಲಯನ್ಸ್ ಸಹಿ

    ಸೌದಿ ಕಂಪನಿ ಜೊತೆ ಡೀಲ್ – ಭಾರತದ ಅತಿ ದೊಡ್ಡ ಎಫ್‍ಡಿಐ ಒಪ್ಪಂದಕ್ಕೆ ರಿಲಯನ್ಸ್ ಸಹಿ

    ಮುಂಬೈ: ರಿಲಯನ್ಸ್ ಕಂಪನಿ ಭಾರತದ ಇತಿಹಾಸದಲ್ಲಿ ಅತಿ ದೊಡ್ಡ ವಿದೇಶಿ ನೇರ ಹೂಡಿಕೆ(ಎಫ್‍ಡಿಐ) ಸಂಬಂಧ ಸೌದಿ ಕಂಪನಿಯ ಜೊತೆ ಒಪ್ಪಂದ ಮಾಡಿಕೊಳ್ಳಲಿದೆ.

    ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿ ಸೌದಿ ಅರಾಮ್ಕೋ ಜೊತೆ ರಿಲಯನ್ಸ್ ಆಯಿಲ್ ಟು ಕೆಮಿಕಲ್ಸ್(ಒಟಿಸಿ) ಕಂಪನಿ ತನ್ನ ಶೇ.20 ರಷ್ಟು ಪಾಲನ್ನು ಮಾರಾಟ ಮಾಡಲು ಸಮ್ಮತಿ ಸೂಚಿಸಿದೆ. ಒಟ್ಟು 75 ಶತಕೋಟಿ ಡಾಲರ್(5.3 ಲಕ್ಷ ಕೋಟಿ) ಒಪ್ಪಂದಕ್ಕೆ ರಿಲಯನ್ಸ್ ಸಹಿ ಹಾಕಲಿದೆ  ಎಂದು ವಾರ್ಷಿಕ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

    ಈ ಒಪ್ಪಂದದ ಅನ್ವಯ ಸೌದಿ ಅರಾಮ್ಕೋ ಕಂಪನಿ ಜಾಮ್ ನಗರದಲ್ಲಿರುವ ರಿಲಾಯನ್ಸ್ ರಿಫೈನಿಂಗ್ ಘಟಕಕ್ಕೆ ಪ್ರತಿದಿನ 5 ಲಕ್ಷ ಬ್ಯಾರಲ್ ಕಚ್ಚಾ ತೈಲವನ್ನು ಪೂರೈಸಲಿದೆ. ಇದನ್ನೂ ಓದಿ: ಸೆ.5 ರಿಂದ ಜಿಯೋ ಬ್ರಾಡ್‍ಬ್ಯಾಂಡ್ ಕಮಾಲ್ – ಬೆಲೆ ಎಷ್ಟು? ವಿಶೇಷತೆ ಏನು?

    ಸೌದಿ ಅರಾಮ್ಕೋ ಸೌದಿ ಅರೇಬಿಯಾದ ರಾಷ್ಟ್ರೀಯ ಪೆಟ್ರೋಲ್ ಮತ್ತು ನೈಸರ್ಗಿಕ ಗ್ಯಾಸ್ ಕಂಪನಿಯಾಗಿದೆ. ವಿಶ್ವದಲ್ಲೇ ಅತಿ ಹೆಚ್ಚು ಆದಾಯ ಮತ್ತು ವಿಶ್ವದಲ್ಲೇ ಅತಿ ಹೆಚ್ಚು ಲಾಭಗಳಿಸುವ ತೈಲ ಕಂಪನಿಯಾಗಿದೆ.

    ಜಾಮ್ ನಗರದಲ್ಲಿರುವ ಘಟಕ ಸದ್ಯ ಪ್ರತಿ ದಿನ 14 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮಥ್ರ್ಯವನ್ನು ಹೊಂದಿದ್ದು 2030ರ ವೇಳೆಗೆ 20 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದೇವೆ ಎಂದು ಕೇಂದ್ರ ಸರ್ಕಾರಕ್ಕೆ ಕಂಪನಿ ತಿಳಿಸಿದೆ.

    ತೈಲ, ಟೆಲಿಕಾಂ, ರಿಟೇಲ್ ಈ ಮೂರು ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈಯುತ್ತಿರುವ ದೇಶದ ಏಕೈಕ ಕಂಪನಿ ರಿಲಯನ್ಸ್ ಎಂದು ಮುಕೇಶ್ ಅಂಬಾನಿ ವಾರ್ಷಿಕ ಸಭೆಯಲ್ಲಿ ತಿಳಿಸಿದರು.

     

  • ಎಣ್ಣೆ ಖರೀದಿಗೆ ಮುಂದಾದವನಿಗೆ 5.95 ಲಕ್ಷ ಪಂಗನಾಮ ಹಾಕಿದ್ಲು!

    ಎಣ್ಣೆ ಖರೀದಿಗೆ ಮುಂದಾದವನಿಗೆ 5.95 ಲಕ್ಷ ಪಂಗನಾಮ ಹಾಕಿದ್ಲು!

    ಚಂಢೀಗಡ್: ಆಲ್‍ಲೈನ್ ಮೂಲಕ ಎಣ್ಣೆ ಖರೀದಿಸಲು ಮುಂದಾದ ಯುವಕನೊಬ್ಬನಿಗೆ ಖತರ್ನಾಕ್ ಮಹಿಳೆಯೊಬ್ಬಳು ಬರೋಬ್ಬರಿ 5.95 ಲಕ್ಷ ರೂ. ಪಂಗನಾಮ ಹಾಕಿರುವ ಘಟನೆ ಹರಿಯಾಣದ ಕುರುಕ್ಷೇತ್ರ ಜಿಲ್ಲೆಯಲ್ಲಿ ನಡೆದಿದೆ.

    ಕುರುಕ್ಷೇತ್ರ ಜಿಲ್ಲೆಯ ಸಲರ್‍ಪುರ ರೋಡ್‍ನ ಏಕ್ತಾ ವಿಹಾರ್ ಕಾಲೋನಿಯ ನಿವಾಸಿ ಪಂಕಜ್ ಕುಮಾರ್ ಮೋಸ ಹೋಗಿರುವ ಯುವಕ. ಮೋಸ ಮಾಡಿರುವ ಮಹಿಳೆಯನ್ನು ಸುನಿತಾ ಎಂದು ಗುರುತಿಸಲಾಗಿದೆ. ಪಂಕಜ್ ಕುಮಾರ್ ಫೇಸ್‍ಬುಕ್ ಲಿಂಕ್‍ವೊಂದರ ಮೂಲಕ ಸುನಿತಾಳನ್ನು ಸಂಪರ್ಕಿಸಿದ್ದನು. ಆಗ ಆಕೆ ನಾನು ಆನ್‍ಲೈನ್‍ನಲ್ಲಿ ನ್ಯಾಚುರಲ್ ಆಯಿಲ್ ಮಾರಾಟ ಮಾಡುತ್ತೇನೆ ಎಂದು ಹೇಳಿದ್ದಾಳೆ. ಅಲ್ಲದೆ ಆ ಎಣ್ಣೆಯ ಪ್ರಯೋಜನಗಳು, ಬಳಸುವ ಪದಾರ್ಥಗಳ ಬಗ್ಗೆ ಪಂಕಜ್‍ಗೆ ವಿವರಿಸಿದ್ದಾಳೆ. ಮಹಿಳೆಯು ಎಣ್ಣೆ ಬಗ್ಗೆ ವಿವರಿಸಿದ ಪರಿಗೆ ಮಾರುಹೋದ ಯುವಕ ಅದರ ಖರೀದಿಗೆ ಮುಂದಾಗಿದ್ದಾನೆ.

    ಈ ವೇಳೆ ಮಹಿಳೆ ಬ್ಯಾಂಕ್ ಅಕೌಂಟ್ ವಿವರವನ್ನು ಯುವಕನಿಗೆ ನೀಡಿ ತನ್ನ ಖಾತೆಗೆ ಹಣ ಹಾಕುವಂತೆ ಹೇಳಿದ್ದಾಳೆ. ಮಹಿಳೆಯ ಮೋಡಿಗೆ ಮರುಳಾಗಿದ್ದ ಯುವಕ ತನ್ನ ಕೈಗೆ ಎಣ್ಣೆ ಸಿಗುತ್ತದೆ ಎಂಬ ಆಸೆಯಲ್ಲಿ 5 ಲಕ್ಷದ 95 ಸಾವಿರ ರೂಪಾಯಿಯನ್ನು ಆಕೆಯ ಖಾತೆಗೆ ಹಾಕಿದ್ದಾನೆ. ತನ್ನ ಖಾತೆಗೆ ಹಣ ಜಮೆಯಾದ ಕೂಡಲೇ ಆಯಿಲ್ ಪಾರ್ಸಲ್ ಮಾಡ್ತೇನೆಂದು ಮಹಿಳೆ ಹೇಳಿದ್ದಳು, ಆದ್ರೆ ಹಣ ಖಾತೆಗೆ ಬೀಳುತ್ತಿದ್ದಂತೆ ಮಹಿಳೆ ಕಾಲ್ಕಿತ್ತಿದ್ದು, ಯುವಕನಿಗೆ ಪಂಗನಾಮ ಹಾಕಿದ್ದಾಳೆ.

    ಎಣ್ಣೆ ಪಾರ್ಸಲ್ ಇವತ್ತು ಬರುತ್ತೆ, ನಾಳೆ ಬರುತ್ತೆ ಎಂದು ಯುವಕ ಕಾದಿದ್ದಾನೆ. ಬಳಿಕ ಈ ಬಗ್ಗೆ ವಿಚಾರಿಸಲು ಮಹಿಳೆಗೆ ಫೋನ್ ಕೂಡ ಮಾಡಿದ್ದಾನೆ. ಆದ್ರೆ ಅತ್ತ ಮಹಿಳೆ ಫೋನ್‍ಗೆ ಸಿಗದೇ, ಇತ್ತ ಎಣ್ಣೆನೂ ಸಿಗದೇ, ಹಣವನ್ನೂ ಕಳೆದುಕೊಂಡು ಕಂಗಾಲಾಗಿದ್ದನು.

    ಬಳಿಕ ಶನಿವಾರದಂದು ಈ ಬಗ್ಗೆ ಪೊಲೀಸರಿಗೆ ಯುವಕ ದೂರು ನೀಡಿದ್ದು, ವಂಚಕಿಯನ್ನು ಸೆರೆಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

  • ವಾಹನ ಸವಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್

    ವಾಹನ ಸವಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್

    ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸುಸ್ತಾಗಿರುವ ವಾಹನ ಸವಾರರಿಗೆ ಬೆಸ್ಕಾಂ ಗುಡ್ ನ್ಯೂಸ್ ಕೊಡುತ್ತಿದೆ.

    ಹೌದು. ವಾಹನ ಸವಾರರಿಗೆ ಬೆಸ್ಕಾಂ ಸಂಜೀವಿನಿ ನೀಡಿದೆ. ಕಡಿಮೆ ದರದಲ್ಲಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಮಾಡುವ ಕೇಂದ್ರಗಳಿಗೆ ಚಾಲನೆ ನೀಡಿದೆ. ನೂತನ ಚಾರ್ಜಿಂಗ್ ಕೇಂದ್ರಗಳಿಗೆ ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ.

    ಬೈಕ್ ಮತ್ತು ಕಾರ್ ಗಳಿಗೆ ಚಾರ್ಜಿಂಗ್ ಕೇಂದ್ರದ ಮೂಲಕ ಚಾರ್ಜ್ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ 14 ಕಡೆ ಚಾರ್ಜಿಂಗ್ ಸ್ಟೇಷನ್‍ ಗಳ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಬೆಸ್ಕಾಂ ಕೇಂದ್ರ ಕಚೇರಿ, ವಿಧಾನಸೌಧ ಹಾಗೂ ಕೆಇಆರ್ ಸಿ ಕಚೇರಿಯಲ್ಲಿ ಈ ವ್ಯವಸ್ಥೆ ಇರಲಿದೆ. ಪ್ರತಿ ಯೂನಿಟ್ ಚಾರ್ಜ್ ಗೆ 4 ರೂಪಾಯಿ 85 ಪೈಸೆ ನಿಗದಿ ಪಡಿಸಿದ್ದು, ಕಿಲೋ ವ್ಯಾಟ್ ಗೆ 50 ರೂಪಾಯಿ ಆಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಅವರು ಹೇಳಿದ್ದಾರೆ.

    ಚಾರ್ಜಿಂಗ್ ಹೇಗೆ..?
    * ಎರಡು ಹಂತದಲ್ಲಿ ಚಾರ್ಜಿಂಗ್ ವ್ಯವಸ್ಥೆ
    1- ಡಿಸಿ ಫಾಸ್ಟ್ ಚಾರ್ಜಿಂಗ್
    2- ಎಸಿ ಸ್ಲೋ ಚಾರ್ಜಿಂಗ್
    * ಪೂರ್ತಿ ಚಾರ್ಜ್ ಆಗಲು 90 ನಿಮಿಷ ಬೇಕಾಗಿದ್ದು 15 ಕಿಲೋ ವ್ಯಾಟ್ ವಿದ್ಯುತ್.
    * ಪೂರ್ತಿ ಚಾರ್ಜ್ ಗೆ 6-7 ಗಂಟೆ. 3.3 ಕಿಲೋ ವ್ಯಾಟ್ ವಿದ್ಯುತ್.
    * ಎಸಿ ರಹಿತ ವಾಹನ 120 ಕಿಲೋ ಮೀಟರ್ ಬಳಸಬಹುದು.
    * ಎಸಿ ಸಹಿತ 100 ಕಿಲೋಮೀಟರ್ ದೂರ ಬಳಸಬಹುದು.

    ಹೀಗಾಗಿ ಜನರು ವಿದ್ಯುತ್ ಚಾರ್ಜಿಂಗ್ ವಾಹನ ಬಳಕೆ ಮಾಡಿದರೆ ಹಣವನ್ನು ಉಳಿಸಬಹುದು ಜೊತೆಗೆ ಮಾಲಿನ್ಯವನ್ನ ತಡೆಯಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸೌದಿ ಅರೇಬಿಯಾದಿಂದ ತೈಲ ಉತ್ಪಾದನೆ ಕಡಿತ – ಮತ್ತೆ ದರ ಏರಿಕೆ ಸಾಧ್ಯತೆ

    ಸೌದಿ ಅರೇಬಿಯಾದಿಂದ ತೈಲ ಉತ್ಪಾದನೆ ಕಡಿತ – ಮತ್ತೆ ದರ ಏರಿಕೆ ಸಾಧ್ಯತೆ

    ಅಬುಧಾಬಿ: ಸೌದಿ ಅರೇಬಿಯಾ ಡಿಸೆಂಬರ್ ಬಳಿಕ ತೈಲೋತ್ಪಾದನೆಯನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದು, ತೈಲ ದರ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ.

    ಡಿಸೆಂಬರ್ ನಲ್ಲಿ  ದಿನದ ಸರಾಸರಿ ಉತ್ಪಾದನೆಯಲ್ಲಿ 5 ಲಕ್ಷ ಬ್ಯಾರೆಲ್‍ನಷ್ಟು ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರ ಪ್ರಕಟವಾದ ಬೆನ್ನಲ್ಲೇ ಬ್ರೆಂಟ್ ಕಚ್ಚಾ ತೈಲ ದರದಲ್ಲಿ ಶೇ.2ರಷ್ಟು ಏರಿಕೆಯಾಗಿದ್ದು ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 71.52 ಡಾಲರ್  ತಲುಪಿದೆ.

    ಮಾರುಕಟ್ಟೆಯಲ್ಲಿ ದರವನ್ನು ಸ್ಥಿರಗೊಳಿಸಲು 10 ಲಕ್ಷ ಬ್ಯಾರೆಲ್ ತನಕ ತೈಲ ಉತ್ಪಾದನೆಯನ್ನು ಕಡಿತಗೊಳಿಸಬೇಕಾದ ಅಗತ್ಯವಿದೆ. ಹೀಗಾಗಿ ತೈಲ ಉತ್ಪಾದನೆಯನ್ನು ಕಡಿತಗೊಳಿಸಿದ್ದೇವೆ ಎಂದು ಸೌದಿ ಅರೇಬಿಯಾದ ಇಂಧನ ಸಚಿವ ಖಲೀದ್ ಅಲ್ ಫಾಲಿ ಅಬುಧಾಬಿಯಲ್ಲಿ ನಿರ್ಧಾರಕ್ಕೆ ಸಮರ್ಥನೆ ನೀಡಿದ್ದಾರೆ.

    14 ಸದಸ್ಯರನ್ನು ಒಳಗೊಂಡಿರುವ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಸಂಘಟನೆ(ಒಪೆಕ್) ಸದಸ್ಯ ರಾಷ್ಟ್ರಗಳ ಪೈಕಿ ಸೌದಿ ಅರೇಬಿಯಾ ಒಂದೇ ಜಾಗತಿಕ ಕಚ್ಚಾ ತೈಲದ ಮೂರನೇ ಒಂದರಷ್ಟನ್ನು ಪೂರೈಸುತ್ತದೆ. ಮಾರುಕಟ್ಟೆಯನ್ನು ಸ್ಥಿರಗೊಳಿಸಲು ಒಪೆಕ್ ರಾಷ್ಟ್ರಗಳು ಸಹ ತೈಲ ಉತ್ಪಾದನೆಯನ್ನು ಮುಂದಿನ ವರ್ಷ ಕಡಿತಗೊಳಿಸಬೇಕು ಎಂದು ಖಲೀದ್ ಅಲ್ ಫಾಲಿ ಹೇಳಿದ್ದಾರೆ.

    ಮಾರುಕಟ್ಟೆಯಲ್ಲಿ ಬೇಡಿಕೆಗಿಂತ ಜಾಸ್ತಿ ಪ್ರಮಾಣದಲ್ಲಿ ತೈಲ ಪೊರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ 1 ತಿಂಗಳಿನಿಂದ ಕಚ್ಚಾ ತೈಲ ದರ ಐದನೇ ಒಂದರಷ್ಟು ಇಳಿಕೆಯಾಗಿದೆ. ಇರಾನ್ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದರೂ ಮಾರುಕಟ್ಟೆಯ ಮೇಲೆ ಅಷ್ಟೊಂದು ಪರಿಣಾಮ ಬೀರದ ಪರಿಣಾಮ ಬೆಲೆ ಕಡಿಮೆಯಾಗಿತ್ತು.

    ಪ್ರತಿದಿನ ಒಟ್ಟು 10 ಲಕ್ಷ ಬ್ಯಾರೆಲ್ ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಒಪೆಕ್ ರಾಷ್ಟ್ರಗಳು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 6 ರಂದು ವಿಯೆನ್ನಾದಲ್ಲಿ ಒಪೆಕ್ ರಾಷ್ಟ್ರಗಳ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಕಚ್ಚಾ ತೈಲ ದರ ಶುಕ್ರವಾರ ಬ್ಯಾರೆಲ್‍ಗೆ 70 ಡಾಲರ್ ಗೆ  ಇಳಿದಿದ್ದರೆ, ಸೋಮವಾರ 71  ಡಾಲರ್ ಗೆ ಏರಿಕೆಯಾಗಿತ್ತು.

    ಸೌದಿ ಅರೇಬಿಯಾ ತೈಲವೇ ದೊಡ್ಡ ಆರ್ಥಿಕ ಸಂಪನ್ಮೂಲ. ಕೆಲ ದಿನಗಳಿಂದ ತೈಲ ದರ ಇಳಿಕೆಯಾಗುತ್ತಿದೆ. ದರ ಇಳಿಕೆಯಾದರೆ ದೇಶದ ಆದಾಯಕ್ಕೆ ಹೊಡೆತ ಬೀಳುತ್ತದೆ. ಹೀಗಾಗಿ ಉತ್ಪಾದನೆಯನ್ನು ಕಡಿತಗೊಳಿಸಿ ಕೃತಕ ಅಭಾವ ಸೃಷ್ಟಿಸಿ ಬೆಲೆ ಏರಿಸಿ ಆದಾಯವನ್ನು ಹೆಚ್ಚಿಸಲು ಈ ತಂತ್ರಕ್ಕೆ  ಸೌದಿ ಅರೇಬಿಯಾ ಮುಂದಾಗಿದೆ.

    ಸೌದಿ ಅರೇಬಿಯಾ ಈ ನಿರ್ಧಾರಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರೋಧ ವ್ಯಕ್ತಪಡಿಸಿದ್ದಾರೆ. ಒಪೆಕ್ ಮತ್ತು ಸೌದಿ ಅರೇಬಿಯಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಿಲ್ಲ ಎನ್ನುವ ಆಶಾವಾದವನ್ನು ನಾನು ಇಟ್ಟುಕೊಂಡಿದ್ದೇನೆ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

     

     

  • ಹಡಗಿನ ಟ್ಯಾಂಕರ್ ಒಡೆದು, ಸಮುದ್ರ ಸೇರಿದ ತೈಲ

    ಹಡಗಿನ ಟ್ಯಾಂಕರ್ ಒಡೆದು, ಸಮುದ್ರ ಸೇರಿದ ತೈಲ

    ಮಂಗಳೂರು: ನಗರದ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (ಎನ್‍ಎಂಪಿಟಿ) ಬಂದರಿನಲ್ಲಿ ಹಡಗಿನ ಟ್ಯಾಂಕರ್ ಒಡೆದ ಪರಿಣಾಮ ಸುಮಾರು 150 ಲೀಟರಿಗೂ ಅಧಿಕ ಪ್ರಮಾಣದ ತೈಲ ಸಮುದ್ರಕ್ಕೆ ಸೇರಿದೆ.

    ಶ್ರೀಲಂಕಾದ ಕೊಲಂಬೋದಿಂದ ಬಂದಿದ್ದ ಎಂ.ವಿ. ಎಕ್ಸ್‌ಪ್ರೆಸ್‌ ಬ್ರಹ್ಮಪುತ್ರ ಹಡಗಿನ ಟ್ಯಾಂಕರ್ ಒಡೆದ ಪರಿಣಾಮ, 150 ಲೀಟರಿಗೂ ಅಧಿಕ ಪ್ರಮಾಣದ ತೈಲ ಸಮುದ್ರ ಸೇರಿದೆ. ನಗರದ ಎನ್‍ಎಂಪಿಟಿ ಬಂದರಿನಿಂದ ಕಂಟೈನರ್ ಲೋಡ್ ಮಾಡಿ ಹಿಂದಿರುಗುವ ವೇಳೆ ಈ ಅವಘಡ ನಡೆದಿದೆ.

    ಮಾಹಿತಿಗಳ ಪ್ರಕಾರ ಹಡಗನ್ನು ಟಗ್‍ನಲ್ಲಿ ಬಂದರಿನ ಜೆಟ್ಟಿಯಿಂದ ಹೊರಕ್ಕೆ ಒಯ್ಯಲಾಗುತ್ತಿತ್ತು. ಈ ವೇಳೆ ಜೆಟ್ಟಿಯ ಗೋಡೆ ಹಡಗಿನಲ್ಲಿದ್ದ ಟ್ಯಾಂಕರ್ ಗೆ ಬಡಿದ ಪರಿಣಾಮ, ಟ್ಯಾಂಕರ್ ನಿಂದ ತೈಲ ಸೋರಿಕೆಯಾಗಿದೆ. ಕೂಡಲೇ ಎಚ್ಚೆತ್ತ ಹಡಗಿನ ಸಿಬ್ಬಂದಿ ಹಾಗೂ ಸ್ಥಳೀಯರು ಸೋರಿಕೆಯನ್ನು ತಡೆದು, ಸಮುದ್ರದಲ್ಲಿ ತೈಲ ಹರಡದಂತೆ ಕ್ರಮ ವಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇರಾಕ್‍ನಿಂದ ತೈಲ ಖರೀದಿಗೆ ನಿರ್ಬಂಧ- ಭಾರತಕ್ಕೆ ಅಮೆರಿಕದಿಂದ ಗುಡ್‍ನ್ಯೂಸ್

    ಇರಾಕ್‍ನಿಂದ ತೈಲ ಖರೀದಿಗೆ ನಿರ್ಬಂಧ- ಭಾರತಕ್ಕೆ ಅಮೆರಿಕದಿಂದ ಗುಡ್‍ನ್ಯೂಸ್

    ನವದೆಹಲಿ: ನಿರ್ಬಂಧದ ಬಳಿಕವೂ ಭಾರತ ಸೇರಿದಂತೆ ಒಟ್ಟು 8 ರಾಷ್ಟ್ರಗಳು ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಅಮೆರಿಕ ಒಪ್ಪಿಗೆ ನೀಡಿದೆ.

    ಇರಾನ್ ಮೇಲೆ ನಿರ್ಬಂಧ ಜಾರಿಯಾದ ಬಳಿಕವೂ ಭಾರತ ಸೇರಿದಂತೆ ಜಪಾನ್, ಚೀನಾ ಹಾಗೂ ದಕ್ಷಿಣ ಕೊರಿಯಾ ಒಳಗೊಂಡ 8 ರಾಷ್ಟ್ರಗಳಿಗೆ ಇರಾನ್ ನೊಂದಿಗೆ ತೈಲ ಖರೀದಿಗೆ ಅನುವು ಮಾಡಿಕೊಡಲಾಗಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ನವೆಂಬರ್ 4ರಿಂದ ಅಮೆರಿಕ ವಿಧಿಸಿರುವ ನಿರ್ಬಂಧಗಳು ಜಾರಿಗೆ ಬರಲಿದ್ದು, ನಿರ್ಬಂಧದ ನಂತರವೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಭಾರತ ಸೇರಿದಂತೆ ಎಂಟು ರಾಷ್ಟ್ರಗಳು ಅಮೆರಿಕಕ್ಕೆ ಒತ್ತಾಯಿಸಿತ್ತು.

    ಅಮೆರಿಕ ನಿರ್ಬಂಧ ಏಕೆ?
    2015ರಲ್ಲಿ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ್ದ ಅಮೆರಿಕ, ಈಗ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಮತ್ತೆ ನಿರ್ಬಂಧ ವಿಧಿಸಿತ್ತು. ನಿರ್ಬಂಧದ ಮೊದಲ ಹಂತ ಈಗಾಗಲೇ ಜಾರಿಯಲ್ಲಿದ್ದು, ಅದು ನವೆಂಬರ್ 4ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ. ಇರಾನ್‍ನಿಂದ ತೈಲ ಆಮದನ್ನು ಅಮೆರಿಕ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಅಲ್ಲದೇ ತನ್ನ ಮಿತ್ರ ರಾಷ್ಟ್ರಗಳು ಸಹ ಇರಾನ್ ನೊಂದಿಗೆ ಖರೀದಿಯನ್ನು ಸ್ಥಗಿತಗೊಳಿಸಲಿವೆ ಎನ್ನುವ ನಿರೀಕ್ಷೆಹೊಂದಿದ್ದೇವೆ. ಇರಾನ್ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮುಂದುವರಿಸುವ ಯಾವುದೇ ದೇಶದೊಂದಿಗೆ ಅಮೆರಿಕಾದ ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಸ್ಥೆಯೊಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗುತ್ತದೆ ಎಂದು ಹೇಳಿತ್ತು.

    ಇರಾನ್ ಜೊತೆ ತೈಲ ಖರೀದಿಯಲ್ಲಿ ಭಾರತ ಎರಡನೇ ಸ್ಥಾನವನ್ನು ಪಡೆದುಕೊಂಡರೆ, ಮೊದಲನೇ ಸ್ಥಾನದಲ್ಲಿ ಚೀನಾ ಇದೆ. ಅಮೆರಿಕದ ಇರಾನ್ ನಿರ್ಬಂಧ ವಿಶ್ವದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಅಷ್ಟು ಪ್ರಮಾಣದ ತೈಲವನ್ನು ಇರಾನ್ ಹೊರತು ಪಡಿಸಿ, ಎಲ್ಲಿಂದ ಸಂಗ್ರಹಿಸುವುದು ಎನ್ನುವುದರ ಬಗ್ಗೆ ವಿವಿಧ ದೇಶಗಳು ಆತಂಕವನ್ನು ವ್ಯಕ್ತಪಡಿಸಿದ್ದವು.

    ಈಗ ತೈಲ ದರ ಕಡಿಮೆಯಾಗುತ್ತಿದ್ದರೂ, ಕೆಲ ದಿನಗಳ ಹಿಂದೆ ಭಾರೀ ಏರಿಕೆಯಾಗಿತ್ತು. ತೈಲ ಖರೀದಿಗೆ ನಿರ್ಬಂಧ ಹೇರಿದ ಸುದ್ದಿಯಿಂದಾಗಿ ಷೇರು ಮಾರುಕಟ್ಟೆಗೂ ಭಾರೀ ಹೊಡೆತ ಬಿದ್ದಿತ್ತು. ಅಷ್ಟೇ ಅಲ್ಲದೇ ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತಿತ್ತು. ಈಗ ಈ ನಿರ್ಬಂಧದಿಂದ ಭಾರತವನ್ನು ಹೊರಗೆ ಇಟ್ಟ ಹಿನ್ನೆಲೆಯಲ್ಲಿ ತೈಲ ದರ ಏರಿಕೆಯ ಭೀತಿಯಿಂದ ಭಾರತೀಯರು ಪಾರಾಗಿದ್ದಾರೆ.

    ಎಲ್ಲ ದೇಶಗಳನ್ನು ತನ್ನ ಹಿಡಿತದಲ್ಲಿಡಲು ಅಮೆರಿಕ ಮುಂದಾಗುತ್ತಿದ್ದು, ಈ ಹಿಂದೆ ಭಾರತ ರಷ್ಯಾ ಜೊತೆಗಿನ ಎಸ್-400 ಟ್ರಯಂಫ್ ಖರೀದಿ ಸಮಯದಲ್ಲೂ ಹಸ್ತಕ್ಷೇಪ ನಡೆಸಿತ್ತು. ರಷ್ಯಾ, ಇರಾನ್ ಆರ್ಥಿಕ ವ್ಯವಹಾರ ನಡೆಸುವ ಕುರಿತು ದಿಗ್ಬಂಧನ ವಿಧಿಸಿರುವ ಅಮೆರಿಕ ವಿಶ್ವದ ಇತರೆ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿತ್ತು. ಒಂದೊಮ್ಮೆ ಇದನ್ನು ಮೀರಿ ಇತರ ದೇಶಗಳು ಈ ರಾಷ್ಟ್ರಗಳೊಂದಿಗೆ ಹೆಚ್ಚಿನ ಆರ್ಥಿಕ ಒಪ್ಪಂದ ಮಾಡಿಕೊಂಡರೆ ಆ ದೇಶಗಳ ಮೇಲೂ ದಿಗ್ಬಂಧನ ವಿಧಿಸುವ ಅವಕಾಶವನ್ನು `ಕಾಟ್ಸಾ’ ಒಪ್ಪಂದ ಮೂಲಕ ಅಮೆರಿಕ ಹೊಂದಿದೆ. ಭಾರತ ಅಮೆರಿಕದಿಂದ ಸಾಕಷ್ಟು ಪ್ರಮಾಣದಲ್ಲಿ ರಕ್ಷಣಾ ಸಾಮಾಗ್ರಿಗಳನ್ನು ಖರೀದಿಸುತ್ತಿರುವ ಕಾರಣ ಭಾರತದ ಮೇಲೆ ನಿರ್ಬಂಧ ಹೇರಲಿಕ್ಕಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

    ಏನಿದು ಕಾಟ್ಸಾ?
    ರಕ್ಷಣಾ ಹಾಗೂ ಆರ್ಥಿಕ ಒಪ್ಪಂದಗಳನ್ನು ಭದ್ರಪಡಿಸಲು ಅಮೆರಿಕ ಕಾಟ್ಸಾ(ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ಥ್ರೂ ಸ್ಯಾಂಕ್ಷನ್ಸ್ ಆಕ್ಟ್) ಕಾಯ್ದೆಯನ್ನು ತಂದಿದೆ. ವಿಶ್ವದ ದೊಡ್ಡಣ್ಣನಾಗಿರುವ ಅಮೆರಿಕ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಜೊತೆ ಉತ್ತಮ ಬಾಂಧವ್ಯಕ್ಕಾಗಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತದೆ. ದ್ವಿಪಕ್ಷೀಯ ಸಂಬಂಧ ಹೊಂದಿರುವ ದೇಶಗಳು ಅಮೆರಿಕ ನಿರ್ಬಂಧ ಹೇರಿದ ದೇಶಗಳೊಂದಿಗೆ ರಕ್ಷಣಾ ವ್ಯವಹಾರ ನಡೆಸಿದರೆ ಆ ದೇಶಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಈ ಕಾಯ್ದೆಯಲ್ಲಿದೆ.

    ವಿಶ್ವಸಂಸ್ಥೆಯ ಕಾಯ್ದೆಯಲ್ಲ:
    ರಷ್ಯಾದಿಂದ ಟ್ರಯಂಫ್ ಖರೀದಿಗೆ ಅಮೆರಿಕದಿಂದ ವಿರೋಧ ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿ, ಕಾಟ್ಸಾ ಕಾಯ್ದೆ ಅಮೆರಿಕದ್ದು ಹೊರತು ವಿಶ್ವಸಂಸ್ಥೆಯದ್ದಲ್ಲ. ಇದು ಭಾರತ ಮತ್ತು ರಷ್ಯಾದ ಆಂತರಿಕ ವಿಚಾರ ಎಂದು ಹೇಳಿ ತಿರುಗೇಟು ನೀಡಿದ್ದರು.

    ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟ್ಯಾಂಕರ್ ಪಲ್ಟಿ- ಮಾನವೀಯತೆ ಮರೆತು ಅಡುಗೆ ಎಣ್ಣೆಗೆ ಮುಗಿಬಿದ್ದ ಜನ!

    ಟ್ಯಾಂಕರ್ ಪಲ್ಟಿ- ಮಾನವೀಯತೆ ಮರೆತು ಅಡುಗೆ ಎಣ್ಣೆಗೆ ಮುಗಿಬಿದ್ದ ಜನ!

    ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಸೋಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

    ಸೋಯಾಬಿನ್ ಎಣ್ಣೆ ತುಂದಿದ್ದ ಟ್ಯಾಂಕರ್ ಮಹಾರಾಷ್ಟ್ರದ ಲಾತೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಡಚಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್ ಬಿದ್ದ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಲಾರಿಯಿಂದ ಅಪಾರ ಪ್ರಮಾಣದ ಸೋಯಾಬಿನ್ ಎಣ್ಣೆ ಸೋರಿಕೆಯಾಗಿದೆ.

    ಹೀಗೆ ಸೋರುತ್ತಿದ್ದ ಎಣ್ಣೆಯನ್ನು ಬಾಟಲಿ, ಬಿಂದಿಗೆ ಹಾಗೂ ಬಕೆಟ್‍ಗಳಲ್ಲಿ ತುಂಬಿಕೊಳ್ಳಲು ಮುಗಿಬಿದ್ದಿದ್ದಾರೆ. ಆದ್ರೆ ಯಾರೊಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದ ಚಾಲಕನತ್ತ ಗಮನಹರಿಸದೇ ಮಾನವೀಯತೆ ಮರೆತಿದ್ದಾರೆ.

    ಎಣ್ಣೆ ಟ್ಯಾಂಕರ್ ನಗರದ ವಿದ್ಯಾಶ್ರೀ ಟ್ರೇಡರ್ಸ್ ಆಯಿಲ್ ಮಿಲ್‍ಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾಕಷ್ಟು ಟ್ವಿಸ್ಟ್, ಜೊತೆ ಕನ್ಫ್ಯೂಷನ್ ಆಗೋ ಕ್ರೈಂ ಸ್ಟೋರಿ

    ಸಾಕಷ್ಟು ಟ್ವಿಸ್ಟ್, ಜೊತೆ ಕನ್ಫ್ಯೂಷನ್ ಆಗೋ ಕ್ರೈಂ ಸ್ಟೋರಿ

    ಉಡುಪಿ: ಅಡುಗೆ ಎಣ್ಣೆ ಸಾಗಿಸುವ ಕಾರ್ಗೋ ವಾಹನದ ಚಾಲಕ ನಾಪತ್ತೆಯಾಗಿದ್ದು, 20 ದಿನಗಳ ನಂತರ ಆತನ ಶವ ಕೊಲೆಗೈದ ಸ್ಥಿತಿಯಲ್ಲಿ ಬೆಂಗಳೂರು ಹೊರವಲಯದ ರಾಮನಗರದ ಕುಂಬಳಗೋಡು ಎಂಬಲ್ಲಿ ಪತ್ತೆಯಾಗಿದೆ. ಈಗ ಮೃತ ಚಾಲಕನ ಸಾವಿನ ಸುತ್ತಾ ಹಲವಾರು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

    ಅನಿಲ್ ಮೃತ ದುರ್ದೈವಿ. ಈತ ಮೂಲತಃ ಉಡುಪಿಯ ಪೆರ್ಡೂರಿನವನಾಗಿದ್ದು, ವೃತ್ತಿಯಲ್ಲಿ ಕಾರ್ಗೋ ಲಾರಿ ಚಾಲಕನಾಗಿದ್ದನು. ಆಗಸ್ಟ್ 28 ರಂದು ಮಂಗಳೂರಿನಿಂದ ಬೆಂಗಳೂರಿಗೆ ರುಚಿಗೋಲ್ಡ್ ಆಯಿಲ್ ಹೊತ್ತು ಮಾಹಾವೀರ ಕಾರ್ಗೋ ಹೊರಟಿದ್ದ. ಆದರೆ ಕಾರ್ಗೋ ಬೆಂಗಳೂರು ತಲುಪಲಿಲ್ಲ. ಅನಿಲ್, ಲಾರಿ ಮತ್ತು ಲಕ್ಷಾಂತರ ರೂಪಾಯಿ ಎಣ್ಣೆ ನಾಪತ್ತೆಯಾಗಿತ್ತು. 20 ದಿನದ ಬಳಿಕ ಅನಿಲ್ ಮೃತದೇಹ ವಾಪಸ್ಸಾಗಿದೆ. ಈಗ ಕೊಲೆಯ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆದರೆ ಅನಿಲ್ ಕುಟುಂಬಸ್ಥರು ಕೊಲೆಯ ಹಿಂದೆ ಮಾಜಿ ಸಚಿವ ಅಭಯಚಂದ್ರ ಜೈನ್ ಕೈವಾಡವಿದೆ ಎಂದು ಆರೋಪಿದ್ದಾರೆ.

    ಏನಿದು ಪ್ರಕರಣ?
    ಅನಿಲ್ ಜಿಲ್ಲೆಯ ಕಾರ್ಕಳ ತಾಲೂಕಿನ ಪಾಡಿಗಾರ್ ನಿವಾಸಿ. ಪ್ರೀತಿಸಿ ಮದುವೆಯಾಗಿದ್ದ ಅನಿಲ್ ಪತ್ನಿ ಸಂಧ್ಯಾ ಹಾಗೂ ಪುಟ್ಟ ಮಗನ ಜೊತೆ ಚೊಕ್ಕ ಸಂಸಾರ ಕಟ್ಟಿಕೊಂಡಿದ್ದನು. ಚಾಲಕನಾಗಿದ್ದ ಅನಿಲ್ ಮಂಗಳೂರು ಜಿಲ್ಲೆಯ ಪಣಂಬೂರಿನಲ್ಲಿ ಇರುವ ಹೆಸರಾಂತ ಕಾರ್ಗೊ ಕಂಪೆನಿ ಸುಗಮದ ಮಹಾವೀರ ಕಾರ್ಗೋ ಸ್ ನಲ್ಲಿ ಎರಡು ವರ್ಷದಿಂದ ದುಡಿಯುತ್ತಿದ್ದನು. ಆಗಸ್ಟ್ 28 ರಂದು 7 ಲಕ್ಷ ಮೌಲ್ಯದ ಅಡುಗೆ ಎಣ್ಣೆ ತುಂಬಿದ ಲಾರಿ ಹತ್ತಿ ಬೆಂಗಳೂರು ಹೊರಟಿದ್ದನು.

    ಆದರೆ ಆತ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆ ಹಾರ ದಾಟಿ ಮೇಲೆ ನೆಟ್ ವರ್ಕ್ ಜೊತೆ ಅನಿಲ್ ಕೂಡ ನಾಪತ್ತೆಯಾಗಿದ್ದಾನೆ. ಹುಡುಕಾಟ ನಡೆಸಿದ ನಂತರ ಪತ್ನಿ ಹೆಬ್ರಿ ಠಾಣೆಯಲ್ಲಿ ದೂರು ನೀಡಿದ್ದರು. ರುಚಿ ಗೋಲ್ಡ್ ಅಡುಗೆ ಎಣ್ಣೆ ಕಂಪೆನಿಯ ಮಾಲೀಕರು ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದರು. ಇದೇ ದೂರಿನ ಆಧರಿಸಿ ಪಣಂಬೂರು ಪೊಲೀಸರು ತನಿಖೆ ನಡೆಸಿದ್ದರು. ಇದಾಗಿ 20 ದಿನಗಳ ಬಳಿಕ ಅನಿಲ್ ಮೃತ ದೇಹ ರಾಮನಗರದ ಕುಂಬಳಗೋಡಿನಲ್ಲಿ ಪತ್ತೆಯಾಗಿದೆ. ಜೊತೆಗೆ ಕೆಲಸ ಮಾಡುತ್ತಿದ್ದ ಡ್ರೈವರ್ ಹಾಗೂ ಆತನ ಸಂಬಂಧಿಗಳು ಸೇರಿ ಕೊಲೆ ನಡೆಸಿ ಪ್ಲಾಸ್ಟಿಕ್ ಸುತ್ತಿ ಹೂತು ಹಾಕಿದ್ದಾರೆ ಎನ್ನುವುದು ಪೊಲೀಸ್ ಮೂಲದ ಮಾಹಿತಿಯಿಂದ ತಿಳಿದು ಬಂದಿದೆ

    ರಾಮನಗರದಲ್ಲಿ ಪತ್ತೆಯಾದ ಅನಿಲ್ ಮೃತ ದೇಹ ಮರಣೋತ್ತರ ಪರೀಕ್ಷೆ ಒಳಪಡಿಸಿದ ನಂತರ ಪಾರ್ಥಿವ ಶರೀರವನ್ನು ಮನೆಯವರಿಗೆ ಹಸ್ತಾಂತರ ಮಾಡಿದ್ದಾರೆ. ಮಗನ ಮೃತ ದೇಹಕ್ಕೆ ಅಂತಿಮ ವಿಧಿವಿಧಾನ ಜೊತೆ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ಆದರೆ ಸಾವಿನ ಹಿಂದೆ ಮಹಾವೀರ ಟ್ರಾವೆಲ್ಸ್ ಮಾಲೀಕ ಮಾಜಿ ಸಚಿವ ಅಭಯ ಚಂದ್ರ ಜೈನ್ ಕೈವಾಡವಿದೆ. ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎಂದು ಅನಿಲ್ ಮನೆ ಮಂದಿ ಆರೋಪಿಸಿದ್ದಾರೆ. ಅಭಯ ಚಂದ್ರ ಜೈನ್, ಮಗ ನಾಪತ್ತೆಯಾದಾಗ ದೂರು ನೀಡಿಲ್ಲ. ಮಗನನ್ನೇ ಕಳ್ಳನಂತೆ ಬಿಂಬಿಸುವ ಪ್ರಯತ್ನ ಮಾಡಿದ್ದಾರೆ. ಸಾವಿನ ನಂತರ ಮನೆಗೂ ಭೇಟಿ ನೀಡಿಲ್ಲ ಎಂದು ಪೋಷಕರು ದೂರಿದ್ದಾರೆ.

    ಪತಿ ನಾಪತ್ತೆಯಿಂದ ಕಂಗಾಲಾದ ಅನಿಲ್ ಪತ್ನಿ ಸಿಎಂಗೆ ದೂರು ನೀಡಿದ್ದರು. ಅನಿಲ್ ಕುಮಾರ್ ಗೆಳೆಯರ ಬಳಗ ಅನಿಲ್ ನಾಪತ್ತೆಯಾಗಿದ್ದಾನೆ ಹುಡುಕಿಕೊಡಿ ಅನ್ನುವ ಅಭಿಯಾನವನ್ನೇ ಆರಂಭಿಸಿದ್ದರು. ಆದರೆ ಏನು ಪ್ರಯೋಜವಾಗಿಲ್ಲ. ಅನಿಲ್ ಜೀವಂತವಾಗಿ ಮನೆ ತಲುಪಲಿಲ್ಲ.

    ಸದ್ಯಕ್ಕೆ ಕೊಲೆಗಾರರು ಹಣ ಹಾಗೂ ಎಣ್ಣೆ ದೋಚುವಾಸೆಯಿಂದ ಕೊಲೆ ಮಾಡಿದರೇ, ಸಾವಿನ ಹಿಂದೆ ರಹಸ್ಯವಿದೆಯೇ? ಮಾಜಿ ಸಚಿವ ಅಭಯಚಂದ್ರ ಜೈನ್ ಪಾತ್ರವೇನು ಎಂಬೆಲ್ಲಾ ದೃಷ್ಟಿಕೋನದಲ್ಲಿ ತನಿಖೆ ಆಗಬೇಕಿದೆ ಎಂದು ಪೋಷಕರು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಂಧ್ರದಂತೆ ನಮ್ಮಲ್ಲೂ ಪೆಟ್ರೋಲ್, ಡೀಸೆಲ್ ಸೆಸ್ ಇಳಿಸಿ: ಸುಧಾಕರ್

    ಆಂಧ್ರದಂತೆ ನಮ್ಮಲ್ಲೂ ಪೆಟ್ರೋಲ್, ಡೀಸೆಲ್ ಸೆಸ್ ಇಳಿಸಿ: ಸುಧಾಕರ್

    ಬೆಂಗಳೂರು: ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್ ಕಡಿಮೆ ಮಾಡಿ ಎಂದು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ ಸುಧಾಕರ್ ಸಿಎಂ ಕುಮಾರಸ್ವಾಮಿ ಅವರಿಗೆ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

    ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ದಯವಿಟ್ಟು ಅನುಸರಿಸಿ. ನಾಯ್ಡು ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ತೆರಿಗೆಯನ್ನು 3-4% ಕಡಿತಗೊಳಿಸಿದ್ದಾರೆ. ಕರ್ನಾಟಕದಲ್ಲಿ ಪೆಟ್ರೋಲ್, ಡಿಸೇಲ್ ದರ ಭಾರತದ ಇತರ ರಾಜ್ಯಗಳಿಗಿಂತ ಅಧಿಕವಾಗಿದೆ. ಇದರಿಂದಾಗಿ ಬಡಜನರು, ರೈತರು ಹಾಗೂ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ತೈಲ ಬೆಲೆ ಏರಿಕೆ ವಿರೋಧಿಸಿ ಬಂದ್ ನಡೆಸುತ್ತಿರುವಂತೆಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ರಾಜಸ್ಥಾನ ಸರ್ಕಾರ 4%ರಷ್ಟು ಇಳಿಕೆ ಮಾಡಿತ್ತು. ಅದರ ಬೆನ್ನಲ್ಲೇ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‍ಗೆ 2 ರೂ ಕಡಿಮೆ ಮಾಡಿದ್ದರು.  ಇದನ್ನು ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv