Tag: okhi

  • ‘ಓಖಿ’ಯಬ್ಬರಕ್ಕೆ ನೋಡನೋಡ್ತಿದ್ದಂತೆ ಕುಸಿದು ಬಿತ್ತು ಕಡಲ ಕಿನಾರೆಯಲ್ಲಿದ್ದ ಮನೆ!

    ‘ಓಖಿ’ಯಬ್ಬರಕ್ಕೆ ನೋಡನೋಡ್ತಿದ್ದಂತೆ ಕುಸಿದು ಬಿತ್ತು ಕಡಲ ಕಿನಾರೆಯಲ್ಲಿದ್ದ ಮನೆ!

    ಮಂಗಳೂರು: ಓಖಿ ಚಂಡಮಾರುತ ಎಫೆಕ್ಟ್ ರಾಜ್ಯದ ಕರಾವಳಿ ಭಾಗದಲ್ಲೂ ಬೀರತೊಡಗಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲಿನ ಅಬ್ಬರ ಜೋರಾಗಿದೆ. ಮಂಗಳೂರಿಗೆ ಹೊಂದಿಕೊಂಡಂತೆ ಇರುವ ಕೇರಳದ ಕಾಸರಗೋಡು ತೀರ ಪ್ರದೇಶದ ಮನೆಗಳು ನೀರು ಪಾಲಾಗುತ್ತಿದೆ.

    ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕಡಪ್ಪರ, ಉಪ್ಪಳ ಬಳಿಯ ಕೊಯಿಪಾಡಿ ಎಂಬಲ್ಲಿ ಆರು ಮನೆಗಳು ಸಮುದ್ರ ಪಾಲಾಗಿವೆ. ಅಲ್ಲಿದ್ದ ನಿವಾಸಿಗಳನ್ನು ಮೊದಲೇ ಸ್ಥಳಾಂತರ ಮಾಡಿದ್ದರಿಂದ ಜೀವ ಹಾನಿ ತಪ್ಪಿದೆ. ಮಂಜೇಶ್ವರದಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ ಆಗುತ್ತಿದ್ದು ಬ್ರೇಕ್ ವಾಟರ್ ಅವೈಜ್ಞಾನಿಕ ವಾಗಿ ನಿರ್ಮಿಸಿದ್ದರಿಂದ ಕೆಲವು ಪ್ರದೇಶಗಳಲ್ಲಿ ಸಮುದ್ರದ ತೀವ್ರತೆ ಹೆಚ್ಚಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

     

    ಮಂಜೇಶ್ವರದ ಕಡಲ ಕಿನಾರೆ (ಕಡಪ್ಪರ) ಯಲ್ಲಿ ಮನೆಯೊಂದು ನೋಡ ನೋಡುತ್ತಲೇ ಸಮುದ್ರಕ್ಕೆ ಬಿದ್ದು ನೀರುಪಾಲಾಗುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಸಮುದ್ರ ರಫ್ ಅಗಿದ್ದರಿಂದ ಶನಿವಾರ ಸಂಜೆಯಿಂದಲೇ ಕಡಲ್ಕೊರೆತ ಆರಂಭವಾಗಿತ್ತು. ಇದರಿಂದಾಗಿ ಮನೆಯ ಅಡಿಪಾಯಕ್ಕಿಂತಲೂ ಕೆಳಗಿದ್ದ ಮರಳು ಕಡಲಿನ ಅಲೆಯಲ್ಲಿ ಕೊಚ್ಚಿ ಹೋಗಿತ್ತು. ಹೀಗೆ ಸುಮಾರು ಒಂದೂವರೆ ನಿಮಿಷಗಳ ಬಳಿಕ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ.

    ಈ ನಡುವೆ ಕೇರಳದ ಸಮುದ್ರದಲ್ಲಿ ರಕ್ಕಸ ಗಾತ್ರದ ಅಲೆಗಳು ಕಾಣಿಸಿದರೂ ಕೆಲವು ಮೀನುಗಾರರು ಅಲೆಯನ್ನು ಎದುರು ಹಾಕಿಕೊಂಡು ಬೋಟ್ ತೆಗೆದುಕೊಂಡು ಹೋಗಲು ಶ್ರಮಿಸಿದ್ದಾರೆ. ಈ ವೇಳೆ ಒಂದು ಬೋಟ್ ಯಶಸ್ವಿಯಾಗಿ ಅಲೆ ದಾಟಿದರೂ ಇನ್ನೊಂದು ಬೋಟ್ ಇದರಲ್ಲಿ ಸಫಲತೆ ಕಾಣಲಿಲ್ಲ. ಇದರ ಪರಿಣಾಮವಾಗಿ ಬೋಟ್ ಸುಮಾರು 2 ನಿಮಿಷಗಳ ಕಾಲ ಅಲೆಗಳ ನಡುವೆ ಸಿಲುಕಿತ್ತು. ಎರಡು ಬಾರಿ ಕಡಲಿನಲ್ಲೇ ಬೋಟ್ ಮುಳುಗುತ್ತೆ ಎನ್ನಿಸಿದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಕೊನೆಗೆ ಭಾರಿ ಗಾತ್ರದ ಅಲೆಯೊಂದು ಬೋಟನ್ನು ಕಡಲ ಕಿನಾರೆಗೆ ನೂಕಿದ ವೇಳೆ ಬೋಟ್ ಪಲ್ಟಿಯಾಯಿತು. ಆದರೆ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

    https://www.youtube.com/watch?v=IskPbU9PesM

    https://www.youtube.com/watch?v=ampmtdoQElk

    https://www.youtube.com/watch?v=QC37Q2pdg9w

    ಇದನ್ನೂ ಓದಿ: ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ

     

  • ಓಖಿ ಚಂಡಮಾರುತಕ್ಕೆ 12 ಜೀವ ಬಲಿ – ಕೇರಳ, ತಮಿಳುನಾಡು, ಬೆಂಗ್ಳೂರಲ್ಲಿ ಮಳೆ

    ಓಖಿ ಚಂಡಮಾರುತಕ್ಕೆ 12 ಜೀವ ಬಲಿ – ಕೇರಳ, ತಮಿಳುನಾಡು, ಬೆಂಗ್ಳೂರಲ್ಲಿ ಮಳೆ

    ಚೆನ್ನೈ: ಓಖಿ ಚಂಡಮಾರುತದ ಅಬ್ಬರ ಮುಂದುವರಿದಿದೆ. ಕೇರಳದಲ್ಲಿ ಸೈಕ್ಲೋನ್ ಅಬ್ಬರಕ್ಕೆ ನಾಲ್ಕು ಮಂದಿ, ತಮಿಳುನಾಡಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

    ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲೂ ನಾಲ್ವರು ಮೃತಪಟ್ಟಿದ್ದಾರೆ. ತಮಿಳುನಾಡು, ಕೇರಳ ಕರಾವಳಿಯಲ್ಲಿ ಇಂದೂ ಕೂಡ ಧಾರಾಕಾರ ಮಳೆಯಾಗಲಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಗುರುವಾರ ಕೇರಳ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿದಿದ್ದ 270 ಮಂದಿ ಮೀನುಗಾರರು ಇನ್ನೂ ಪತ್ತೆಯಾಗಿಲ್ಲ. ಒಂದು ನೌಕಾ ಹಡಗು, 28 ಮೀನುಗಾರಿಕಾ ದೋಣಿಗಳ ಮೂಲಕ ಮೀನುಗಾರರ ಹುಡುಕಾಟ ನಡೆಯುತ್ತಿದೆ.

    ವಿಶ್ವವಿಖ್ಯಾತ ಶಬರಿಮಲೆ ಅಯ್ಯಪ್ಪ ದೇಗುಲವನ್ನು ಎರಡು ದಿನದ ಮಟ್ಟಿಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಒಖಿ ಚಂಡಮಾರುತ ಅಬ್ಬರದಿಂದ ಕೇರಳದಲ್ಲೂ ಬಿರುಗಾಳಿ ಸಹಿತ ಭಾರೀ ಮಳೆ ಆಗ್ತಿದ್ದು, ಪಂಪಾ ನದು ಉಕ್ಕಿ ಹರಿಯುತ್ತಿದೆ. ಕಾರ್ ಪಾರ್ಕಿಂಗ್ ಸ್ಥಳ ಸಂಪೂರ್ಣವಾಗಿ ಮುಳುಗಿಹೋಗಿದೆ. ಅಯ್ಯಪ್ಪ ಮಾಲಾಧಾರಿಗಳು ತತ್ತರಿಸಿಹೋಗಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯುವುದು ಎಲ್ಲಿ ಎಂಬುದನ್ನು ತಿಳಿಯದೇ ಪರದಾಡುತ್ತಿದ್ದಾರೆ. ಕನ್ಯಾಕುಮಾರಿಯಿಂದ ಶಬರಿಮಲೆಗೆ ತೆರಳುವ ಹಾದಿಯಲ್ಲಿ ನೂರಾರು ಮರಗಳು ಧರೆಗುರುಳಿವೆ. ಅಯ್ಯಪ್ಪ ಭಕ್ತರ ಸುರಕ್ಷತೆ ದೃಷ್ಟಿಯಿಂದ ನಾಳೆವರೆಗೂ ಅಯ್ಯಪ್ಪ ದೇಗುಲವನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

    ಇತ್ತ ಬೆಂಗಳೂರಲ್ಲೂ ರಾತ್ರಿಯಿಂದಲೂ ತುಂತುರು ಮಳೆ ಮುಂದುವರೆದಿದೆ. ಇನ್ನೂ ಎರಡು ದಿನಗಳ ಕಾಲ ಮಹಾನಗರಿಯಲ್ಲಿ ಮಳೆ ಇರಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಬೆಳಗ್ಗೆಯಿಂದಲೇ ಸಿಲಿಕಾನ್ ಸಿಟಿಯಲ್ಲಿ ಮಳೆ ಆಗ್ತಿದೆ.