Tag: okkaliga

  • ಕಾಂಗ್ರೆಸ್‌ನಲ್ಲಿ ಜಾತಿ ಗಣತಿ ದಂಗಲ್‌ – ಒಕ್ಕಲಿಗ ಶಾಸಕರ ಸಭೆ ಕರೆದ ಡಿಸಿಎಂ

    ಕಾಂಗ್ರೆಸ್‌ನಲ್ಲಿ ಜಾತಿ ಗಣತಿ ದಂಗಲ್‌ – ಒಕ್ಕಲಿಗ ಶಾಸಕರ ಸಭೆ ಕರೆದ ಡಿಸಿಎಂ

    ಬೆಂಗಳೂರು: ಕಾಂಗ್ರೆಸ್‌ (Congress) ಜಾತಿ ಗಣತಿ (Caste Survey) ದಂಗಲ್ ಜೋರಾಗಿದೆ. ಕಾಂಗ್ರೆಸ್‌ನಲ್ಲಿ ಜಾತಿ ಗಣತಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ನಾಳೆ ಸಂಜೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸಭೆ ಕರೆದಿದ್ದಾರೆ.

    ನಾಳೆ ಸಂಜೆ 6 ಗಂಟೆಗೆ ಡಿಕೆಶಿ ತಮ್ಮ ಸರ್ಕಾರಿ ನಿವಾಸದಲ್ಲಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಈ ಸಭೆಗೆ ಒಕ್ಕಲಿಗ ಸಚಿವರು, ಶಾಸಕರು, ಎಂಎಲ್‌ಸಿಗಳಿಗೆ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಜಾತಿಗಣತಿ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ಮರ್ಯಾದೆ, ಮಾತನಾಡುವ ಯೋಗ್ಯತೆ ಇಲ್ಲ: ಬೈರತಿ ಸುರೇಶ್

     

     ಜಾತಿ ಗಣತಿ ಸಂಬಂಧ ಏ.17 ರಂದು ಸಿಎಂ ಸಿದ್ದರಾಮಯ್ಯ ವಿಶೇಷ ಕ್ಯಾಬಿನೆಟ್‌ ಸಭೆಯನ್ನು ಕರೆದಿದ್ದಾರೆ. ಈ ಸಭೆಗೂ ಮುನ್ನ ಒಕ್ಕಲಿಗ ನಾಯಕರ ನಿಲುವು ಏನಿರಬೇಕೆಂದು ಡಿಕೆಶಿ ಅಭಿಪ್ರಾಯ ಸಂಗ್ರಹ ಮಾಡಲು ಈ ಸಭೆಯನ್ನು ಕರೆದಿದ್ದಾರೆ. ಇದನ್ನೂ ಓದಿ: ಇದು ಜಾತ್ಯಾತೀತ ರಾಷ್ಟ್ರ, ಜಾತಿಗಣತಿಗೆ ಯಾವುದೇ ಮಹತ್ವ ಇಲ್ಲ: ಡಾ.ಮಂಜುನಾಥ್

    ಜಾತಿ ಗಣತಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಇನ್ನೂ ನಾನು ವರದಿಯನ್ನೇ ಓದಿಲ್ಲ. ಶಾಸಕರ ಜೊತೆ ಚರ್ಚಿಸಿದ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಬಿಸಿ ಮೀಸಲಾತಿ ಪ್ರಮಾಣವನ್ನು 32% ರಿಂದ 51%ಕ್ಕೆ ಏರಿಸಿ – ಆಯೋಗದ ಶಿಫಾರಸು ಏನು? ಯಾವ ಜಾತಿಗೆ ಎಷ್ಟು ಮೀಸಲಾತಿ ಏರಿಕೆ?

  • ಲೋಕಸಭೆಗೆ ಮತ್ತೆ ಒಕ್ಕಲಿಗ ಕಾರ್ಡ್, ಎರಡೂವರೆ ವರ್ಷ ನಂತರ ಡಿಕೆ ಸಿಎಂ ಸಾಧ್ಯತೆ – ಒಕ್ಕಲಿಗ ನಾಯಕರ ಸಭೆಯ ಇನ್‌ಸೈಡ್‌ ಸುದ್ದಿ

    ಲೋಕಸಭೆಗೆ ಮತ್ತೆ ಒಕ್ಕಲಿಗ ಕಾರ್ಡ್, ಎರಡೂವರೆ ವರ್ಷ ನಂತರ ಡಿಕೆ ಸಿಎಂ ಸಾಧ್ಯತೆ – ಒಕ್ಕಲಿಗ ನಾಯಕರ ಸಭೆಯ ಇನ್‌ಸೈಡ್‌ ಸುದ್ದಿ

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕನಿಷ್ಠ 7 ಕ್ಷೇತ್ರಗಳನ್ನು ಒಕ್ಕಲಿಗರಿಗೆ (Vokkaliga) ನೀಡಬೇಕೆಂಬ ಬೇಡಿಕೆ ಕಾಂಗ್ರೆಸ್‌ನಲ್ಲಿ ವ್ಯಕ್ತವಾಗಿದೆ.

    ನಾನಾ ಹುದ್ದೆಗಳಿಗೆ, ಸ್ಥಾನಗಳಿಗೆ ಮತ್ತು ನಿಗಮ, ಮಂಡಳಿಗಳಿಗೆ ಆಯ್ಕೆಯಾದ, ನೇಮಕಗೊಂಡ ಒಕ್ಕಲಿಗ ಸಮುದಾಯದ ನಾಯಕರು ಮತ್ತು ಪ್ರತಿನಿಧಿಗಳನ್ನು ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಕಾಂಗ್ರೆಸ್ ಒಕ್ಕಲಿಗ ನಾಯಕರು ಲೋಕಸಭೆ ಚುನಾವಣೆ ಹಾಗೂ ರಾಜ್ಯಸಭಾ ಚುನಾವಣೆ ಸಂಬಂಧ ಸಾಕಷ್ಟು ಚರ್ಚೆ ಮಾಡಿದ್ದಾರೆ.  ಇದನ್ನೂ ಓದಿ: ‘ತಿರುವನಂತಪುರಂ-ಕಾಸರಗೋಡು’ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೂ ವಿಸ್ತರಣೆ

    ಹಳೆ ಮೈಸೂರು (Old Mysuru) ಭಾಗದಲ್ಲಿ 11 ಕ್ಷೇತ್ರಗಳಲ್ಲಿ ಒಕ್ಕಲಿಗರ ಪ್ರಾಬಲ್ಯವಿದೆ. ಅಷ್ಟೇ ಅಲ್ಲದೆ ಕರಾವಳಿ ಹಾಗೂ ಮಲೆನಾಡಿನ ಮೂರು ಕ್ಷೇತ್ರಗಳಲ್ಲೂ ಒಕ್ಕಲಿಗರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಕನಿಷ್ಠ 7 ರಿಂದ 9 ಕ್ಷೇತ್ರದಲ್ಲಿ ಒಕ್ಕಲಿಗರು ಟಿಕೆಟ್ ಕೇಳಿದರೆ ತಪ್ಪೇನು? ಕನಿಷ್ಠ 7 ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್‌ ನೀಡಬೇಕೆಂದು ಶಾಸಕರು ಒತ್ತಾಯ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.  ಇದನ್ನೂ ಓದಿ: ಯುಪಿ ಬಗ್ಗೆ ರಾಗಾ ವಿವಾದಾತ್ಮಕ ಮಾತು- ಮಗನಿಗೆ ಬುದ್ಧಿ ಹೇಳುವಂತೆ ಸೋನಿಯಾಗೆ ಸ್ಮೃತಿ ಸಲಹೆ

    ವಿಧಾನಸಭೆ ಚುನಾವಣೆಯಲ್ಲಿ ಡಿಕೆ ಶಿವಕುಮಾರ್‌ (DK Shivakumar) ಸಿಎಂ ಆಗಬಹುದು ಎಂಬ ಕಾರಣಕ್ಕೆ ಸಮುದಾಯ ಕೈ ಹಿಡಿದಿತ್ತು. ಈ ಬಾರಿ ಹೆಚ್ಚಿನ ಸ್ಥಾನ ಗೆಲುವುದು ಹೇಗೆ ಎಂಬುದರ ಬಗ್ಗೆಯೂ ಗಂಭೀರ ಚರ್ಚೆ ನಡೆದಿದೆ.

     

    ಬಿಜೆಪಿ – ಜೆಡಿಎಸ್ (BJP-JDS) ಮೈತ್ರಿ ಆಗಿದ್ದರೂ ಒಕ್ಕಲಿಗ ಸಮುದಾಯ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಬಿಟ್ಟಂತೆ ಕಾಣುತ್ತಿಲ್ಲ. ರಾಜ್ಯ ಮಟ್ಟದಲ್ಲಿ ಮುಂದಿರುವ ದೊಡ್ಡ ಅವಕಾಶವನ್ನು ಸಮುದಾಯದ ಗಮನಕ್ಕೆ ತಂದು ಮನವೊಲಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಪರೋಕ್ಷವಾಗಿ ಎರೆಡೂವರೆ ವರ್ಷದ ನಂತರ ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂಬ ಕಾರ್ಡ್ ಪ್ಲೇ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

     

  • ಭಗವಾನ್ ಅವರದ್ದು ತೆವಲಿನ ಹೋರಾಟ: ನಟ ಜಗ್ಗೇಶ್ ಆಕ್ರೋಶ

    ಭಗವಾನ್ ಅವರದ್ದು ತೆವಲಿನ ಹೋರಾಟ: ನಟ ಜಗ್ಗೇಶ್ ಆಕ್ರೋಶ

    ಒಂದು ಸಮುದಾಯಕ್ಕೆ ಅಪಮಾನ ಮಾಡುವಂತಹ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣಕ್ಕಾಗಿ ಕೆ.ಎಸ್ ಭಗವಾನ್ (KS Bhagwan) ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಯುತ್ತಿದೆ. ಈ ಕುರಿತಂತೆ ನಟ ಜಗ್ಗೇಶ್ (Jaggesh) ಕೂಡ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ಸರಣಿಯಾಗಿ ಎಕ್ಸ್ ನಲ್ಲಿ ಬರೆದುಕೊಂಡಿರುವ ಜಗ್ಗೇಶ್ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಸನ್ಮಾನ್ಯ ಭಗವಾನರೆ, ಸಾಧ್ಯವಾದರೆ ಬಡತನ ನಿರ್ಮೂಲನೆ ಹೋರಾಡಿ. ಜಾತಿಯತೆ ದೂರಮಾಡಿ.ಸಾಮರಸ್ಯಕ್ಕೆ ಹೋರಾಡಿ. ದೇಶ ಮೊದಲು ಜಾತಿ ನಂತರ ಎಂದು ಹೋರಾಡಿ. ಎಲ್ಲ ಮಕ್ಕಳಿಗೂ ಸಮಾನ ವಿದ್ಯೆ ಸಿಗಲಿ ಎಂದು ಹೋರಾಡಿ. ಬಡವ ಶ್ರೀಮಂತರ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ. ಯಾವುದು ಇದು ಪ್ರಚಾರ ತೆವಲಿನ ಹೋರಾಟ. ಧಿಕ್ಕಾರವಿರಲಿ ನಿಮ್ಮ ಗುಣಕ್ಕೆ ಎಂದು ಬರೆದುಕೊಂಡಿದ್ದಾರೆ.

    JAGGESH

    ಸನ್ಮಾನ್ಯ ಭಗವಾನ ಅವರೆ, ನೀವು ವಿದ್ಯಾವಂತರ? ನೀವು ಜ್ಞಾನಿಗಳ? ನೀವು ಹಿರಿಯರಾ? ನೀವು ಸಮಾಜ ಸುಧಾಕರ? ಒಕ್ಕಲುತನ ಸಮುದಾಯ ಅಣಕಮಾರಿ, ಯಾಕೆ ಕುವೆಂಪು ಅವರ ಮೇಲೆ ಹಾಕಿ ತೆವಲು ತೀರಿಸಿಕೊಂಡು ಪಲಾಯನ ಮಾಡಿದಿರಿ. ಕರ್ನಾಟಕ ಆರಕ್ಷಕ ಇಲಾಖೆ ಯಾಕಿ ಮೌನ?. ಸಮಾಜ ಸ್ವಾಸ್ಥ ಕೆಡಿರುವವರ ಮೇಲೆ ಕ್ರಮ ಜರುಗಿಸಿ ಆರಕ್ಷಕ ಮಹಿನೀಯರೆ ಎಂದು ಮತ್ತೊಂದು ಬರಹ ಪೋಸ್ಟ್ ಮಾಡಿದ್ದಾರೆ.

    ಭಗವಾನ್ ಮನೆಗೆ ಮುತ್ತಿಗೆ

    ನಗರದಲ್ಲಿ ಶುಕ್ರವಾರ (ಅ.13) ನಡೆದ ಮಹಿಷ ಉತ್ಸವದ ವೇಳೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ (KS Bhagawan) ಒಕ್ಕಲಿಗ ಸಮುದಾಯದ (Okkaliga Community) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಂದು ಪ್ರೊ.ಭಗವಾನ್ ನಿವಾಸಕ್ಕೆ ಮೈಸೂರು ಚಾಮರಾಜ ಕ್ಷೇತ್ರದ ಒಕ್ಕಲಿಗರ ಸಂಘದಿಂದ ಮುತ್ತಿಗೆಗೆ ಯತ್ನಿಸಲಾಯಿತು.

    ಅವಹೇಳನಕಾರಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರು ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು. ಬ್ಯಾರಿಕೇಡ್ ಕಿತ್ತು ಭಗವಾನ್ ಮನೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು (Mysuru City Police) ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ಹಾಗೂ ತಳ್ಳಾಟ ನೂಕಾಟವೂ ನಡೆದಿದ್ದು, ಕೆಲವರು ಕೈ ಮತ್ತು ಹಣೆಯ ಭಾಗಕ್ಕೆ ಗಾಯವನ್ನೂ ಮಾಡಿಕೊಂಡರು.

    ಶುಕ್ರವಾರ ಮಹಿಷ ಉತ್ಸವ ಕಾರ್ಯಕ್ರಮದಲ್ಲಿ ಪ್ರೊ.ಭಗವಾನ್ ಒಕ್ಕಲಿಗರು ಸಂಸ್ಕೃತಿ ಹೀನರೆಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರಿಂದ ರೊಚ್ಚಿಗೆದ್ದ ಒಕ್ಕಲಿಗ ಸಮುದಾಯದ ಮುಖಂಡರು ಭಗವಾನ್ ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು.

     

    ಒಕ್ಕಲಿಗ ಜನಾಂಗಕ್ಕೆ ಸಂಸ್ಕೃತಿ ಕಲಿಸಿ, ಭಗವಾನ್ ತಾವೂ ಒಕ್ಕಲಿಗ ಸಮುದಾಯದವರು ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಸಮುದಾಯವನ್ನೇ ನಿಂದಿಸುತ್ತಾರೆ. ಅವರು ಒಕ್ಕಲಿಗ ಸಮುದಾಯದವರು ಎಂಬುದೇ ಅನುಮಾನವಿದೆ. ಅವರನ್ನು ಈಗಲೆ ಕರೆಸಿ, ಇಲ್ಲವೇ ದೂರು ನೀಡುತ್ತೇವೆ. ಕೂಡಲೇ ಎಫ್‌ಐಆರ್ ಮಾಡಿಸಿ ಎಂದು ಪಟ್ಟು ಹಿಡಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಡ್ಯ ಜಿಲ್ಲೆಯ 6 ಕ್ಷೇತ್ರಗಳಲ್ಲಿ 3 ಪಕ್ಷಗಳಿಂದ ಒಕ್ಕಲಿಗರೇ ಅಭ್ಯರ್ಥಿಗಳು

    ಮಂಡ್ಯ ಜಿಲ್ಲೆಯ 6 ಕ್ಷೇತ್ರಗಳಲ್ಲಿ 3 ಪಕ್ಷಗಳಿಂದ ಒಕ್ಕಲಿಗರೇ ಅಭ್ಯರ್ಥಿಗಳು

    ಮಂಡ್ಯ: ಸಕ್ಕರೆನಾಡು ಮಂಡ್ಯ (Mandya) ಜಿಲ್ಲೆ ಎಂದರೆ ಒಕ್ಕಲಿಗರ ಪ್ರಾಬಲ್ಯವಿರುವ ಜಿಲ್ಲೆಯಾಗಿದೆ. ಇಲ್ಲಿನ ರಾಜಕೀಯ ಚಿತ್ರಣ ಸಂಪೂರ್ಣ ಅವಲಂಬಿತವಾಗಿರುವುದು ಒಕ್ಕಲಿಗ ಸಮುದಾಯದ ಮೇಲೆ. ಒಕ್ಕಲಿಗ ಸಮುದಾಯದವರು ರಾಜ್ಯದಲ್ಲಿ ಸಿಎಂ (Chief Minister) ಆಗುತ್ತಾರೆ ಎಂದ್ರೆ ಮಂಡ್ಯ ಜಿಲ್ಲೆಯೇ ಪ್ರಮುಖ ನಿರ್ಣಾಯಕವಾಗುತ್ತದೆ. ಇದಕ್ಕೆ ಹತ್ತು ಹಲವು ಚುನಾವಣೆಗಳು ನಿದರ್ಶನವಾಗಿವೆ.

    ಮಂಡ್ಯ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಇವೆ. ಈ 7 ಕ್ಷೇತ್ರಗಳ ಪೈಕಿ ಮಳವಳ್ಳಿ ಮೀಸಲು ಕ್ಷೇತ್ರವಾಗಿದೆ. ಮಳವಳ್ಳಿ ಕ್ಷೇತ್ರವನ್ನು ಹೊರತುಪಡಿಸಿ ಉಳಿದ 6 ಕ್ಷೇತ್ರಗಳಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕರಾಗಿದ್ದಾರೆ. ಹೀಗಾಗಿಯೇ ಮೂರು ಪಕ್ಷಗಳು ಒಕ್ಕಲಿಗರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುತ್ತವೆ. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮೇಲುಕೋಟೆ, ಕೆ.ಆರ್.ಪೇಟೆ, ನಾಗಮಂಗಲ ಈ ಕ್ಷೇತ್ರಗಳಲ್ಲಿ ಈಗ ಮೂರು ಪಕ್ಷದವರು ಅಭ್ಯರ್ಥಿಯನ್ನಾಗಿ ಮಾಡುತ್ತಿರುವುದು ಹಾಗೂ ಹಿಂದಿನ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಮಾಡಿರುವುದು ಒಕ್ಕಲಿಗರನ್ನೆ. ಒಂದು ಜಿಲ್ಲೆಯಲ್ಲಿ ಒಕ್ಕಲಿಗರನ್ನೇ ಮೂರು ಪಕ್ಷಗಳು ಅಭ್ಯರ್ಥಿಗಳನ್ನಾಗಿ ಮಾಡುವುದು ಮಂಡ್ಯ ಜಿಲ್ಲೆಯ ವಿಶೇಷವಾಗಿದೆ. ಇದನ್ನೂ ಓದಿ: ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ಟೆನ್ಶನ್- ವಲಸಿಗ ಶಾಸಕರಿಗೆ ಮೂಲ ಬಿಜೆಪಿಗರಿಂದ ಕಿರಿಕ್

    ರಾಜ್ಯದಲ್ಲಿ ಒಬ್ಬ ಒಕ್ಕಲಿಗ ಸಮುದಾಯದ ವ್ಯಕ್ತಿ ಸಿಎಂ ಆಗುತ್ತಾರೆ ಎಂದ್ರೆ ಮಂಡ್ಯ ಜಿಲ್ಲೆ ನಿರ್ಣಾಯಕ ಪಾತ್ರವಹಿಸುತ್ತದೆ. 1999ರಲ್ಲಿ ಎಸ್.ಎಂ.ಕೃಷ್ಣ (S M Krishna) ಅವರು ಕಾಂಗ್ರೆಸ್‍ನಿಂದ ಸಿಎಂ ಆದ ವೇಳೆ ಆಗ ಮಂಡ್ಯ ಜಿಲ್ಲೆಯಲ್ಲಿ 9 ಕ್ಷೇತ್ರಗಳು ಇದ್ದವು. 9 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಮೂಲಕ ಒಕ್ಕಲಿಗ ಸಮೂದಾಯದ ನಾಯಕ ಎಸ್.ಎಂ.ಕೃಷ್ಣ ಅವರು ಸಿಎಂ ಆಗಲು ಅನುಕೂಲವಾಯಿತು. ಕಳೆದ 2018ರ ಚುನಾವಣೆಯ ವೇಳೆ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಸಿಎಂ ಆಗುತ್ತಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ (JDS) ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜೆಡಿಎಸ್ ರಾಜ್ಯದಲ್ಲಿ 37 ಸೀಟ್‍ಗಳನ್ನು ತೆಗೆದುಕೊಳ್ಳಲು ಅನುಕೂಲ ಮಾಡಿತು. ಇದಲ್ಲದೇ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲು ಸಹಾಯವಾಗಿತ್ತು.

  • ಜೆಡಿಎಸ್ ನಂಬಿ ಮೋಸ ಹೋದ ಒಕ್ಕಲಿಗರು ಈಗ ಅಭಿವೃದ್ಧಿ ಕಡೆಗೆ ಮುಖ ಮಾಡಿದ್ದಾರೆ: ಮಸಾಲಾ ಜಯರಾಮ್

    ಜೆಡಿಎಸ್ ನಂಬಿ ಮೋಸ ಹೋದ ಒಕ್ಕಲಿಗರು ಈಗ ಅಭಿವೃದ್ಧಿ ಕಡೆಗೆ ಮುಖ ಮಾಡಿದ್ದಾರೆ: ಮಸಾಲಾ ಜಯರಾಮ್

    ತುಮಕೂರು: ಜೆಡಿಎಸ್ (JDS) ಪಕ್ಷ ಒಕ್ಕಲಿಗರನ್ನು (Okkaliga) ಕೇವಲ ಮತಕ್ಕಾಗಿ ಮಾತ್ರ ಬಳಸಿಕೊಂಡಿದೆ. ಅವರ ಅಭಿವೃದ್ಧಿ ಮಾಡಿಲ್ಲ. ಒಕ್ಕಲಿಗರು ಈಗ ಅಭಿವೃದ್ಧಿಗಾಗಿ ಬಿಜೆಪಿ (BJP) ಕಡೆ ಮುಖ ಮಾಡಿದ್ದಾರೆ ಎಂದು ತುರುವೇಕೆರೆ (Turuvekere) ಶಾಸಕ ಮಸಾಲಾ ಜಯರಾಮ್ (Masala Jayaram) ಹೇಳಿದ್ದಾರೆ.

    ತುರುವೇಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಒಕ್ಕಲಿಗ ಮತದಾರರು ಜೆಡಿಎಸ್ ನಂಬಿ ಮೋಸ ಹೋಗಿದ್ದಾರೆ. ದಬ್ಬೆಗಟ್ಟದಲ್ಲಿ ಒಕ್ಕಲಿಗರೇ ಹೆಚ್ಚಿದ್ದು, ಈ ಹಿಂದೆ ಯಾವ ಅಭಿವೃದ್ಧಿಯೂ ಆಗಿರಲಿಲ್ಲ. ರಸ್ತೆ ಸೇರಿದಂತೆ ಹಲವು ಅಭಿವೃದ್ಧಿ ಕೆಲಸವನ್ನು ನಾನು ಶಾಸಕನಾದ ಮೇಲೆ ಮಾಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದೂರು ಕೊಡಲು ಹೋದ ಯುವತಿಯನ್ನೇ ಮಂಚಕ್ಕೆ ಕರೆದಿದ್ದ ಇನ್‌ಸ್ಪೆಕ್ಟರ್‌ ಅಮಾನತು

    ಮಾಜಿ ಶಾಸಕ ಎಮ್.ಟಿ ಕೃಷ್ಣಪ್ಪ ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗೆ 75 ವರ್ಷ ವಯಸ್ಸಾಗಿದೆ. ಅವರು ಈಗ ಶಾಸಕರಾಗಿ ಏನೂ ಅಭಿವೃದ್ಧಿ ಮಾಡಲು ಆಗುವುದಿಲ್ಲ. ಮೊಮ್ಮಕ್ಕಳನ್ನು ನೋಡಿಕೊಂಡು ವಿಶ್ರಾಂತಿ ಪಡೆಯಲಿ. ಆಗಾಗಾ ಹೋಗಿ ಅವರ ಕುಶಲೋಪರಿ ವಿಚಾರಿಸುತ್ತೇನೆ ಎಂದು ಲೇವಡಿ ಮಾಡಿದ್ದಾರೆ. ಈಗಾಗಲೇ ಅವರು ಮನೆಯಲ್ಲಿ ಇದ್ದಾರೆ. ಚುನಾವಣೆ (Election) ನಂತರ ಅದು ಮುಂದುವರೆಯಲಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ

  • ಬಂಡೆ ಅರೆಸ್ಟ್ ವಿರುದ್ಧ ಸಿಡಿದೆದ್ದ ಒಕ್ಕಲಿಗರು – ಸಿಲಿಕಾನ್ ಸಿಟಿಯಲ್ಲಿ ಬೃಹತ್ ಧರಣಿ

    ಬಂಡೆ ಅರೆಸ್ಟ್ ವಿರುದ್ಧ ಸಿಡಿದೆದ್ದ ಒಕ್ಕಲಿಗರು – ಸಿಲಿಕಾನ್ ಸಿಟಿಯಲ್ಲಿ ಬೃಹತ್ ಧರಣಿ

    – ಎಲ್ಲೆಲ್ಲಿ ಟ್ರಾಫಿಕ್ ಜಾಮ್?

    ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಪ್ರತಿಭಟನೆಗೆ ಲಕ್ಷಾಂತರ ಜನರು ಬರುವ ನಿರೀಕ್ಷೆಯಿದ್ದು ಬೆಂಗಳೂರು ಸಂಚಾರ ವ್ಯವಸ್ಥೆ ಅಲ್ಲೋಲ ಕಲ್ಲೋಲವಾಗಲಿದೆ.

    ಡಿಕೆಶಿ ಬಂಧನ ಖಂಡಿಸಿ ಇಂದು ನ್ಯಾಷನಲ್ ಕಾಲೇಜ್ ಮೈದಾನದಿಂದ ರಾಜಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂ ಪಾರ್ಕ್ ವರೆಗೂ ರ‍್ಯಾಲಿ ಆಯೋಜನೆ ಮಾಡಲಾಗಿದ್ದು ಮಾರ್ಗದುದ್ದಕ್ಕೂ ಸಂಚಾರ ಅಸ್ತವ್ಯಸ್ತವಾಗಲಿದೆ.

    ರ‍್ಯಾಲಿ ಸಾಗೋ ಮಾರ್ಗ:
    ನ್ಯಾಷನಲ್ ಕಾಲೇಜ್ ಮೈದಾನದಿಂದ ಎಡ ತಿರುವು- ಪಿ ಎಂ.ಕೆ ರಸ್ತೆಯಲ್ಲಿ ಎಡ ತಿರುವು – ವಾಣಿವಿಲಾಸ ರಸ್ತೆ- ನ್ಯಾಷನಲ್ ಕಾಲೇಜ್ ಜಂಕ್ಷನ್- ಡಯಾಗನಲ್ ರಸ್ತೆ- ಸಜ್ಜನ್ ರಾವ್ ಸರ್ಕಲ್- ಮಿನರ್ವ ಸರ್ಕಲ್- ಜೆಸಿ ರಸ್ತೆ- ಶಿವಾಜಿ ಜಂಕ್ಷನ್- ಟೌನ್ ಹಾಲ್- ಎನ್.ಆರ್.ಜಂಕ್ಷನ್- ಪೋಲಿಸ್ ಠಾಣೆ ಜಂಕ್ಷನ್- ಪೊಲೀಸ್ ಕಾರ್ನರ್ ಎಡ ತಿರುವು- ಕೆ.ಜಿ.ರಸ್ತೆ- ಮೈಸೂರು ಬ್ಯಾಂಕ್ ಸರ್ಕಲ್ ಬಲ ತಿರುವು – ಪ್ಯಾಲೇಸ್ ರೋಡ್- ಪ್ಯಾಲೇಸ್ ಜಂಕ್ಷನ್ ಎಡ ತಿರುವು- ವೈ ರಾಮಚಂದ್ರ ರಸ್ತೆ- ಕನಕದಾಸ ವೃತ್ತ ಬಲ ತಿರುವು – ಕಾಳಿದಾಸ ರಸ್ತೆ- ಫ್ರೀಡಂಪಾರ್ಕ್

    ರ‍್ಯಾಲಿಯಿಂದ ನಗರದ ಪ್ರಮುಖ ರಸ್ತೆಗಳೆಲ್ಲವೂ ಫುಲ್ ಲಾಕ್ ಆಗೋದರಲ್ಲಿ ಯಾವುದೇ ಡೌಟ್ ಇಲ್ಲ. ಇದರಿಂದ ಅರ್ಧ ಬೆಂಗಳೂರು ಸ್ತಬ್ಧವಾಗಲಿದ್ದು, ವಾಹನ ಸವಾರರು 2 ಗಂಟೆ ಮುಂಚೆಯೇ ತಮ್ಮ ತಮ್ಮ ಕಚೇರಿಗಳಿಗೆ ಹೋಗೋದು ಉತ್ತಮ.

    ಎಲ್ಲೆಲ್ಲಿ ಟ್ರಾಫಿಕ್ ಜಾಮ್?
    *ಜೆ.ಸಿ. ರೋಡ್
    *ಟೌನ್‍ಹಾಲ್
    *ಕೆ.ಆರ್. ಮಾರ್ಕೆಟ್
    *ಕಾರ್ಪೋರೇಷನ್ ಸರ್ಕಲ್
    *ಮೈಸೂರು ಬ್ಯಾಂಕ್ ಸರ್ಕಲ್
    *ಕೆ.ಆರ್. ಸರ್ಕಲ್
    *ಆನಂದರಾವ್ ವೃತ್ತ
    *ನೃಪತುಂಗ ರೋಡ್
    *ವಿಧಾನಸೌಧ ಸುತ್ತಮುತ್ತ
    *ಮೆಜೆಸ್ಟಿಕ್

    ಸಂಚಾರ ನಿರ್ವಹಣೆಗಾಗಿಯೇ ಸುಮಾರು 1200 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

  • ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ – ಮಗನ ಮಾತು ಕೇಳದೇ ಕೆಟ್ಟೆ ಎಂದ್ರಂತೆ ಸಿದ್ದರಾಮಯ್ಯ

    ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ – ಮಗನ ಮಾತು ಕೇಳದೇ ಕೆಟ್ಟೆ ಎಂದ್ರಂತೆ ಸಿದ್ದರಾಮಯ್ಯ

    ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ರಾಜಕೀಯ ಲೆಕ್ಕಾಚಾರದಲ್ಲಿ ಎಡವಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇನ್ನಿಲ್ಲದ ನೋವು ಕಾಡುತ್ತಿದೆಯಾ ಅನ್ನೋ ಪ್ರಶ್ನೆ ಎದುರಾಗಿದೆ.

    ಯಾಕಂದರೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು 2018 ರ ವಿಧಾನಸಭಾ ಚುನಾವಣೆ ಎದುರಿಸಿದ ಸಿದ್ದರಾಮಯ್ಯರಿಗೆ ಹಿನ್ನಡೆಯ ಸೂಚನೆಯನ್ನು ಪುತ್ರ ಯತೀಂದ್ರ ಮೊದಲೇ ಕೊಟ್ಟಿದ್ದರು. ಈ ಎರಡು ತಪ್ಪು ನೀವು ಮಾಡುತ್ತಿದ್ದೀರಾ ಅದು ಸರಿ ಅಲ್ಲ ಎಂದಿದ್ದರು. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ಪಕ್ಷದ ಮುಖಂಡರ ಬಳಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಈಗ ವರುಣ ಕ್ಷೇತ್ರದ ಶಾಸಕ. 2018ರ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯ ಗೊತ್ತಿಲ್ಲದವರು. ಆದರೆ ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯ ವಿವಾದವಾಗುತ್ತಿದ್ದಂತೆ ಡಾ.ಯಂತೀಂದ್ರ ಅವರೇ ಸಿದ್ದರಾಮಯ್ಯ ಅವರನ್ನು ಮೊದಲು ಎಚ್ಚರಿಸಿದ್ದರು ಎನ್ನಲಾಗಿದೆ.

    ಲಿಂಗಾಯತ ಪ್ರತ್ಯೇಕ ಧರ್ಮ ವಿಷಯಕ್ಕೆ ಕೈ ಹಾಕಬೇಡಿ ಅದು ನಿಮ್ಮ ರಾಜಕೀಯ ಹಿನ್ನಡೆಗೆ ಕಾರಣವಾಗಬಹುದು. ಸುಮ್ಮನಿದ್ದು ಬಿಡಿ ಎಂದು ಪುತ್ರ ಹೇಳಿದ್ದರಂತೆ. ಆಗ ಸಿದ್ದರಾಮಯ್ಯ ಅವರು ರಾಜಕೀಯ ಅನುಭವ ಇಲ್ಲದ ಯತೀಂದ್ರ ಏನೋ ಹೇಳುತ್ತಾನೆ. ನಿನಗೆ ಅದೆಲ್ಲ ಗೊತ್ತಾಗಲ್ಲ ಸುಮ್ಮನಿರು ಎಂದು ಪುತ್ರನಿಗೆ ಹೇಳಿದ್ದರು. ಇನ್ನು ಚುನಾವಣಾ ಸಂದರ್ಭದಲ್ಲಿ ಸಿದ್ದರಾಮಯ್ಯ ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡುವುದಕ್ಕೂ ಯತೀಂದ್ರ ವಿರೋಧ ವ್ಯಕ್ತಪಡಿಸಿದ್ದರು. ಆಗಲೂ ಅದಕ್ಕೆ ಸಮಜಾಯಿಷಿ ನೀಡಿದ್ದ ಸಿದ್ದರಾಮಯ್ಯ, ರಾಜಕಾರಣದಲ್ಲಿ ಅದೆಲ್ಲಾ ಮಾಡಬೇಕಾಗುತ್ತೆ ನಿನಗೆ ಗೊತ್ತಾಗಲ್ಲ ಎಂದಿದ್ದರೆಂದು ತಿಳಿದು ಬಂದಿದೆ.

    ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಯತೀಂದ್ರ, ರಾಜ್ಯದಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಎರಡು ಪ್ರಬಲ ಸಮುದಾಯದವರು ಅವರನ್ನ ಎದುರು ಹಾಕಿಕೊಂಡು ಅಧಿಕಾರ ಹಿಡಿಯುವುದು ಕಷ್ಟ. ಅಲ್ಲದೆ ಮೈಸೂರಿನಲ್ಲಿ ಒಕ್ಕಲಿಗರು ಹಾಗೂ ಲಿಂಗಾಯತರ ಪ್ರಾಬಲ್ಯ ಇರುವುದು ತಮ್ಮ ಗೆಲುವಿಗೂ ತೊಂದರೆ ಆಗಬಹುದು. ಆದ್ದರಿಂದ ಆ ಎರಡು ವಿಷಯಗಳಲ್ಲಿ ಜಾಗೃತೆಯ ಹೆಜ್ಜೆ ಇಡಿ ಎಂದು ಸಿದ್ದರಾಮಯ್ಯಗೆ ಯತೀಂದ್ರ ಹೇಳಿದ್ದರು ಎನ್ನಲಾಗಿದೆ.

    ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಹಾಗೂ ಒಕ್ಕಲಿಗರ ಸಿದ್ದರಾಮಯ್ಯ ಬಗೆಗಿನ ಕೋಪ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲುವಂತೆ ಮಾಡಿತ್ತು. ರಾಜ್ಯದಲ್ಲಿ ಇದೇ ಕಾರಣಕ್ಕೆ ಕಾಂಗ್ರೆಸ್ ಗೆ ಹಿನ್ನಡೆ ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಆಗುವಂತಾಯ್ತು. ತಂದೆಗೆ ಬುದ್ಧಿ ಹೇಳಿದ್ದ ಡಾ.ಯತೀಂದ್ರ ರಾಜಕೀಯ ಅನುಭವದ ಕೊರತೆ ನಡುವೆಯೂ ವರುಣ ಕ್ಷೇತ್ರದಲ್ಲಿ ಮೊದಲ ಯತ್ನದಲ್ಲೇ ಗೆದ್ದು ಶಾಸಕರಾಗಿದ್ದಾರೆ. ಈ ಎಲ್ಲಾ ಘಟನೆಗಳನ್ನ ತಮ್ಮ ಆಪ್ತರ ಬಳಿ ಇತ್ತೀಚೆಗೆ ಸಾಕಷ್ಟು ಬಾರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಜೆಡಿಎಸ್ ಕೋಟೆ ಕೆಡವಲು ಬಿಜೆಪಿ ಪ್ಲಾನ್!

    ಜೆಡಿಎಸ್ ಕೋಟೆ ಕೆಡವಲು ಬಿಜೆಪಿ ಪ್ಲಾನ್!

    ಬೆಂಗಳೂರು: ಹಳೆ ಮೈಸೂರು ಪ್ರಾಂತ್ಯದಲ್ಲಿರುವ ಜೆಡಿಎಸ್ ಕೋಟೆಯನ್ನು ಕೆಡವಲು ಬಿಜೆಪಿ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಅವರನ್ನು ಪ್ರಚಾರಕ್ಕೆ ಬಳಸಲು ಬಿಜೆಪಿ ಪ್ಲಾನ್ ಮಾಡಿದೆ.

    ಈ ಸಂಬಂಧವಾಗಿ ಇಂದು ಬಿಜೆಪಿ ಮುಖಂಡ ಆರ್ ಅಶೋಕ್ ಅವರು ಸದಾಶಿವ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಎಸ್‍ಎಂ ಕೃಷ್ಣ ಅವರ ಜೊತೆ ಮಾತನಾಡಿದ್ದಾರೆ.

    ಮಂಡ್ಯ, ಮೈಸೂರು, ತುಮಕೂರು, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ಹಾಸನದಲ್ಲಿ ಒಕ್ಕಲಿಗರ ಪ್ರಭಾವ ಜಾಸ್ತಿ ಇದೆ. ಈ ಕಾರಣಕ್ಕಾಗಿ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿರುವ ಎಸ್‍ಎಂ ಕೃಷ್ಣ ಅವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರೆ ಲಾಭವಾಗಬಹುದು ಎನ್ನುವ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

    ಅಶೋಕ್ ಭೇಟಿ ಬಳಿಕ ಮಾತನಾಡಿದ ಎಸ್‍ಎಂಎಕೆ, ಇಲ್ಲಿ ವ್ಯಕ್ತಿಗಳು ಮುಖ್ಯ ಆಗಲ್ಲ, ಸಿದ್ಧಾಂತ ಮುಖ್ಯ ಆಗುತ್ತದೆ. ನಾವು ಸಿದ್ಧಾಂತದ ಜತೆ ಚುನಾವಣೆಗೆ ಹೋಗುತ್ತೇವೆ. ಜನ ತುಲನೆ ಮಾಡುತ್ತಾರೆ. ಬೆಂಗಳೂರಿಗೆ ಯಾರು ಏನು ಮಾಡಿದ್ದಾರೆ ಎಂದು ಜನ ನೋಡುತ್ತಾರೆ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿಗೆ ಮಾಡಿರುವ ಅಭಿವೃದ್ಧಿಯನ್ನು ಜನ ಮರೆಯುವುದಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗಬೇಕು ಎಂದು ಹೇಳಿದರು.

    ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಹಾಗಾಗಿ ನಾನು ರಾಜ್ಯಾದ್ಯಂತ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲು ಬಯಸಿದ್ದೇನೆ. ಬೆಂಗಳೂರಿನ ಮೂರೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಬಲವಾದ ನೆಲೆ ಇದೆ ಎಂದು ತಿಳಿಸಿದರು.

    ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಅನುಭವಿ, ಅನಾನುಭವಿ ಎನ್ನುವುದು ಇಲ್ಲ. 25 ವರ್ಷ ತುಂಬಿದವರು ಯಾರೂ ಬೇಕಾದರೂ ಚುನಾವಣೆಗೆ ಸ್ಪರ್ಧೆ ಮಾಡಬಹುದು. ಕುಟುಂಬ ರಾಜಕಾರಣದ ಬಗ್ಗೆ ರಾಜ್ಯಾಂಗದಲ್ಲಿ ಏನಾದ್ರೂ ನಿರ್ಬಂಧ ಇದೆಯೋ? ಸ್ಪರ್ಧೆ ಮಾಡಿದಾಗ ನಮ್ಮ ಅಭ್ಯರ್ಥಿಯೋ? ಅವರ ಅಭ್ಯರ್ಥಿಯೋ ಎನ್ನುವುದನ್ನು ಜನರು ತುಲನೆ ಮಾಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv\