Tag: okuli

  • ಮಂಗಳೂರಿನ ಕಾರ್ ಸ್ಟ್ರೀಟ್ ವೆಂಕಟರಮಣನ ಕಲರ್‌ಫುಲ್ ಓಕುಳಿ

    ಮಂಗಳೂರಿನ ಕಾರ್ ಸ್ಟ್ರೀಟ್ ವೆಂಕಟರಮಣನ ಕಲರ್‌ಫುಲ್ ಓಕುಳಿ

    ಮಂಗಳೂರು: ರಥಸಪ್ತಮಿಯ ಪ್ರಯುಕ್ತ ಕಳೆದ ನಾಲ್ಕು ದಿನಗಳಿಂದ ಮಂಗಳೂರಿನಲ್ಲಿ ನಡೆಯುತ್ತಿರುವ ವಂಕಟರಮಣ ದೇವರ ಉತ್ಸವದಲ್ಲಿ ಭಾನುವಾರ ಕಲರ್ ಫುಲ್ ವಾತಾವರಣ ಸೃಷ್ಟಿಯಾಗಿತ್ತು. ಭಾನುವಾರ ಮಂಗಳೂರಿನ ರಥಬೀದಿಯಲ್ಲಿ ಸಂಪೂರ್ಣ ಹಬ್ಬದ ವಾತಾವರಣ ಮನೆ ಮಾಡಿತ್ತು.

    ಗೌಡ ಸಾರಸತ್ವ ಬ್ರಾಹ್ಮಣ ಸಮಾಜಕ್ಕೆ ಸೇರಿರುವ ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ನಡೆದಿದ್ದ ರಥೋತ್ಸವಕ್ಕೆ ನಡೆದ ಓಕುಳಿ ಆಟ ಇದಾಗಿತ್ತು. ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತಾದಿಗಳು ವೆಂಕಟರಮಣ ದೇವರನ್ನು ರಥದಲ್ಲಿ ಕೂರಿಸಿ ರಥೋತ್ಸವ ಸೇವೆ ನೀಡಿದ್ದರು. ಭಾನುವಾರ ಈ ದೇವರ ಅವಭೃತ ಸ್ನಾನ ನಡೆದು ಆ ಬಳಿಕ ದೇವರು ಗರ್ಭಗುಡಿಯನ್ನು ಸೇರಲಿದ್ದಾರೆ. ಹೀಗಾಗಿ ದೇವರ ಈ ಸ್ನಾನವನ್ನು ಬಣ್ಣದ ಹಬ್ಬವನ್ನಾಗಿ ಆಚರಿಸುವ ಮೂಲಕ ಮುಂಜಾನೆಯಿಂದ ಸಂಜೆಯವರೆಗೂ ಎಲ್ಲಾ ಭಕ್ತರೂ ಈ ರೀತಿ ಬಣ್ಣದ ಆಟದಲ್ಲೇ ಮುಳುಗಿ ಫುಲ್ ಎಂಜಾಯ್ ಮಾಡುತ್ತಾರೆ. ಚಂಡೆ ವಾದ್ಯಕ್ಕೆ ಸ್ಟೆಪ್ ಹಾಕುತ್ತಾ ಕುಣಿದು ಕುಪ್ಪಳಿಸಿದ್ದರು. ಹೆಣ್ಮಕ್ಕಳು, ಯುವಕರು ಸೇರಿದಂತೆ ಹಿರಿಯರು ಕೂಡ ಓಕುಲಿ ಆಟದಲ್ಲಿ ಮಿಂದೆದ್ದು ಸಖತ್ ಎಂಜಾಯ್ ಮಾಡಿದರು.

    ವೆಂಕಟರಮಣ ದೇವರ ರಥೋತ್ಸವ ಎಂದರೆ ಅದು ಪರವೂರಲ್ಲಿ ಇದ್ದ ಸಮಾಜ ಬಾಂಧವರು ಕೂಡ ಆಗಮಿಸಿ ಪಾಲ್ಗೊಳ್ಳುತ್ತಾರೆ. ಹೀಗಾಗಿ ವರ್ಷಕ್ಕೊಮ್ಮೆ ತಮ್ಮ ಆತ್ಮೀಯರನ್ನು ಭೇಟಿಯಾಗುವ ಒಂದು ಸದಾವಕಾಶವೂ ಸಿಕ್ಕಂತಾಗುತ್ತೆ. ಇದೇ ವೇಳೆ ನಡೆಯುವ ಈ ಓಕುಳಿ ಹಬ್ಬ ವರ್ಷಕ್ಕೊಮ್ಮೆ ಆತ್ಮೀಯರು ಹಾಗೂ ತಮ್ಮ ಕುಟುಂಬ ಸದಸ್ಯರೊಂದಿಗೆ ಎಂಜಾಯ್ ಮಾಡುವುದಕ್ಕೂ ಒಂದು ಅವಕಾಶ. ಹೀಗಾಗಿ ರಥೋತ್ಸವನ್ನು ಮಿಸ್ ಮಾಡಿಕೊಂಡರೂ ಈ ಓಕುಳಿ ಹಬ್ಬವನ್ನು ಹಲವರು ಮಿಸ್ ಮಾಡಿಕೊಳ್ಳುವುದಿಲ್ಲ. ಮುಂಜಾನೆಯಿಂದ ಸಂಜೆ ದೇವರ ಅವಭೃತ ಸ್ನಾನ ನಡೆಯುವವರೆಗೂ ಈ ರೀತಿ ಬಣ್ಣದ ಎರಚಾಟ, ಹಾಡು, ಕುಣಿತ ನಿರಂತರವಾಗಿ ಸಾಗುತ್ತೆ. ಯಾವುದೇ ಬೇದಭಾವ ಇಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸುವ ಈ ಓಕುಳಿ ಹಬ್ಬ ಒಗ್ಗಟ್ಟಿನ ಸಂಕೇತ ಕೂಡ ಆಗಿದೆ.

    ದೇವರನ್ನು ಸಂತೋಷ ಪಡಿಸಬೇಕು ಎನ್ನುವ ಕಾರಣಕ್ಕೆ ಎಲ್ಲರೂ ಸಂತೋಷದಿಂದ ಬಣ್ಣ ಎರಚಾಡಿ ಖುಷಿ ಪಡುವ ಈ ಓಕುಳಿ ಇತ್ತೀಚಿನ ದಿನಗಳಲ್ಲಿ ಬಾರಿ ಫೇಮಸ್. ಹೀಗಾಗಿ ಪರವೂರಿನ ಜನರೂ ಕೂಡ ಈ ಹಬ್ಬದಲ್ಲಿ ಪಾಲ್ಗೊಳ್ಳೊದಿಕ್ಕೆ ಅಂತಾನೆ ಆಗಮಿಸ್ತಾರೆ. ಅದರಲ್ಲೂ ಹೆಣ್ಮಕ್ಕಳು ಹುಡುಗರ ಜೊತೆ ಸೇರಿಕೊಂಡು ಒಂದೇ ಮನೆಯ ಮಕ್ಕಳಂತೆ ರಥಬೀದಿಯ ಗಲ್ಲಿಗಲ್ಲಿಗಳಲ್ಲೂ ಸಂಭ್ರಮಿಸುವುದನ್ನು ಕಣ್ತುಂಬಿಕೊಳ್ಳುವುದೇ ಚೆಂದ.

    ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್ಬಿ) ಸಮಾಜದ ರಥೋತ್ಸವ ಎಂದರೆ ಅದು ಅದ್ಧೂರಿ ಹಾಗೂ ಆಡಂಭರದಿಂದ ಕೂಡಿರುತ್ತೆ. ಅದೇ ರೀತಿ ಈ ಓಕುಳಿ ಕೂಡ ಬಹಳಷ್ಟು ಕಲರ್ ಫುಲ್ ಆಗಿದ್ದು, ನೋಡುಗರಿಗೆ ಕೂಡ ಬಹಳಷ್ಟು ಖುಷಿ ನೀಡುತ್ತೆ. ಅಸಲಿಗೆ ಈ ಓಕಳಿಯಲ್ಲಿ ಗುಲಾಬಿ ಬಣ್ಣ ಮಾತ್ರ ಬಳಸಬೇಕು ಎನ್ನುವ ನಿಯಮ ಇದ್ರೂ ಈಗ ಹಲವು ಬಣ್ಣಗಳು ಬಳಕೆಯಾಗುತ್ತಿದೆ. ಕಳೆದ ವರ್ಷದಿಂದ ಬ್ಯಾಂಡ್ ಡಿಜೆಗೆ ಬ್ರೇಕ್ ಹಾಕಲಾಗಿತ್ತು. ಆದರಿಂದ ಪಡ್ಡೆಗಳಿಗೆ ಸ್ವಲ್ಪ ಬೇಸರ ಮೂಡಿಸಿದರು ಎಲ್ಲರು ಎಂಜಾಯ್ ಮಾಡಿದ್ದಾರೆ.

  • ಎಳ್ಳು ಅಮಾವಾಸ್ಯೆ – ಯಾದಗಿರಿಯಲ್ಲಿ ವಿಶಿಷ್ಟ ಆಚರಣೆ

    ಎಳ್ಳು ಅಮಾವಾಸ್ಯೆ – ಯಾದಗಿರಿಯಲ್ಲಿ ವಿಶಿಷ್ಟ ಆಚರಣೆ

    – ಚರ್ಮದ ಚೀಲದಲ್ಲಿ ನೀರೋಕಳಿ ಆಟ

    ಯಾದಗಿರಿ: ಹೋಳಿ ಹುಣ್ಣಿಮೆಗೆ ಅಥವಾ ಯುಗಾದಿ ಹಬ್ಬ ಸಂದರ್ಭದಲ್ಲಿ ಬಣ್ಣದೊಕಳಿ ಆಡುವುದು ಸಾಮಾನ್ಯ. ಆದರೆ ಜಿಲ್ಲೆಯ ಶಹಪುರ ತಾಲೂಕಿನ ಸಗರ ಗ್ರಾಮದಲ್ಲಿ ಎಳ್ಳು ಅಮಾವಾಸ್ಯೆಯಂದು ಸಹ ಓಕಳಿ ಆಡಲಾಗುತ್ತದೆ. ಆದರೆ ಇದು ಬಣ್ಣದ ಓಕಳಿಯಲ್ಲ, ನೀರಿನ ಓಕಳಿ.

    ಈ ಗ್ರಾಮದಲ್ಲಿ ವರ್ಷಕ್ಕೊಮ್ಮೆ ನಡೆಯುವ ವಿಶಿಷ್ಟ ಆಚರಣೆ ಗ್ರಾಮಸ್ಥರಿಗೆ ಬಹು ದೊಡ್ಡ ಹಬ್ಬವಾಗಿದೆ. ಈ ಹಬ್ಬದ ಇನ್ನೊಂದು ವಿಶೇಷ ಎಂದರೆ ನೀರಿನ ಓಕಳಿ ಆಡಲು ಚರ್ಮ ಚೀಲ ಉಪಯೋಗಿಸಲಾಗುತ್ತದೆ.

    ಉತ್ತರ ಕರ್ನಾಟಕದಲ್ಲಿ ಎಳ್ಳು ಅಮವಾಸ್ಯೆ ಎಂದರೆ ಭೂಮಿ ತಾಯಿಗೆ ಬಾಗಿನ ಕೊಡುವ ಹಬ್ಬವೆಂದೇ ಪ್ರಸಿದ್ಧ. ಈ ದಿನ ಸಗರ ಗ್ರಾಮದಲ್ಲಿ ರೈತಾಪಿ ವರ್ಗ ಇನ್ನಷ್ಟು ವಿಶೇಷವಾಗಿ ಈ ಹಬ್ಬವನ್ನು ಆಚರಿಸುತ್ತದೆ. ಗ್ರಾಮದ ಹನುಮಂತ ದೇವರ ಮೂರ್ತಿಯನ್ನು ಗಂಗಾ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಗಂಗಾ ಪೂಜೆಯ ಬಳಿಕ ಮತ್ತೆ ಮರಳಿ ದೇವಸ್ಥಾನಕ್ಕೆ ದೇವರ ಮೂರ್ತಿಯನ್ನು ಕರೆತರುವಾಗ, ಈ ನೀರೋಕಳಿಯನ್ನು ಆಡಲಾಗುತ್ತದೆ. ಪ್ರಾಣಿಗಳ ಚರ್ಮದಿಂದ ಮಾಡಿದ ಚೀಲದಲ್ಲಿ ನೀರು ತುಂಬಿಕೊಂಡು ಮಾರ್ಗದ ಉದ್ದಕ್ಕೂ ಓಕಳಿ ಆಡುತ್ತಾರೆ. ಇದು ಅನಾದಿಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.