Tag: Old Age home

  • ಬೆಂಗಳೂರಿನ ಮಗ, ಸೊಸೆ ಹೊರ ಹಾಕಿದ್ದ ಅಜ್ಜಿಯನ್ನು ರಕ್ಷಿಸಿದ ಗ್ರಾಮಸ್ಥರು

    ಬೆಂಗಳೂರಿನ ಮಗ, ಸೊಸೆ ಹೊರ ಹಾಕಿದ್ದ ಅಜ್ಜಿಯನ್ನು ರಕ್ಷಿಸಿದ ಗ್ರಾಮಸ್ಥರು

    ತುಮಕೂರು: ಮಗ ಮತ್ತು ಸೊಸೆಯ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಬೀದಿಯಲ್ಲಿ ಭಿಕ್ಷೆ ಬೇಡಿ ಬದುಕುತ್ತಿದ್ದ ಅಜ್ಜಿಯನ್ನು ಜಿಲ್ಲೆಯ ಐಡಿ ಹಳ್ಳಿ ಗ್ರಾಮಸ್ಥರು ರಕ್ಷಿಸಿ ವೃದ್ಧಾಶ್ರಮಕ್ಕೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿ ಹಳ್ಳಿ ಗ್ರಾಮಸ್ಥರು ವೃದ್ಧೆಯನ್ನು ರಕ್ಷಿಸಿ ವೃದ್ಧಾಶ್ರಮಕ್ಕೆ ಬಿಟ್ಟಿದ್ದಾರೆ. ಬೆಂಗಳೂರಿನ ಹಾರೋಹಳ್ಳಿಯಿಂದ ಮನೆ ಬಿಟ್ಟು ಬಂದ ವೃದ್ಧೆ ಐಡಿಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಓಡಾಡಿಕೊಂಡಿದ್ದಳು.

    ಅಜ್ಜಿಯನ್ನು ಕಂಡು ಹಲವು ಯುವಕರು ಯಾರೋ ಭಿಕ್ಷುಕರು ಬಂದಿರಬೇಕು ಎಂದು ಸುಮ್ಮನಾಗಿದ್ದಾರೆ. ಅಜ್ಜಿ ಕುಸಿದು ಬಿದ್ದಾಗ ಅವರನ್ನು ರಕ್ಷಿಸಿ ಊಟ ಮಾಡಿಸಿ ನಂತರ ಅವರ ಕುಶಲೋಪರಿಯನ್ನು ವಿಚಾರಿಸಿದ್ದಾರೆ. ಈ ವೇಳೆ ಅಜ್ಜಿ ತಮ್ಮ ಮಗ ಹಾಗೂ ಸೊಸೆಯ ಕುರಿತು ವಿವರಿಸಿದ್ದಾರೆ.

    ಆಗ ಗ್ರಾಮಸ್ಥರಿಗೆ ನಿಜಾಂಶ ಗೊತ್ತಾಗಿದ್ದು, ಮಗ ಸೊಸೆಯ ಕಾಟ ತಾಳಲಾರದೆ ಮನೆ ಬಿಟ್ಟು ಬಂದಿದ್ದಾರೆ ಎಂದು ತಿಳಿದಿದೆ. ಅಜ್ಜಿ ಬೆಂಗಳೂರಿನ ಹಾರೋಹಳ್ಳಿಯ ಶಾಂತಮ್ಮ ಎಂದು ತಿಳಿದು ಬಂದಿದ್ದು, ನಂತರ ಮನೆಗೆ ಸೇರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಆಗ ಮಗ ಸೊಸೆ ನನ್ನನ್ನು ಹೊಡೆಯುತ್ತಾರೆ ನಾನು ಮನೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ನಂತರ ಗ್ರಾಮಸ್ಥರೆಲ್ಲ ಸೇರಿ ತುಮಕೂರಿನ ಶಾರದಾಂಬಾ ವೃದ್ಧಾಶ್ರಮದ ಅಧ್ಯಕ್ಷೆ ಯಶೋಧ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ನೆರವಿಗೆ ಬಂದ ಸಂಸ್ಥೆಯ ಅಧ್ಯಕ್ಷೆ ಯಶೋಧ ಅಜ್ಜಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ವೃದ್ಧಾಶ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ.

  • ವೃದ್ಧಾಶ್ರಮದಲ್ಲಿ ವೃದ್ಧೆಯರ  ಸಖತ್ ಡ್ಯಾನ್ಸ್: ವಿಡಿಯೋ ನೋಡಿ

    ವೃದ್ಧಾಶ್ರಮದಲ್ಲಿ ವೃದ್ಧೆಯರ ಸಖತ್ ಡ್ಯಾನ್ಸ್: ವಿಡಿಯೋ ನೋಡಿ

    ದಿಸ್ಪುರ್: ಅಸ್ಸಾಂನ ಗುವಾಹಟಿಯ ವೃದ್ಧಾಶ್ರಮದಲ್ಲಿ ವೃದ್ಧೆಯರ ಡ್ಯಾನ್ಸ್ ಮಾಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿ ಪ್ರತಿಯೊಬ್ಬರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

    ವೃದ್ಧಾಶ್ರಮದ ಹಾಲ್‍ನಲ್ಲಿ ಎಲ್ಲರಿಗೂ ಚೇರ್ ಗಳನ್ನು ಹಾಕಲಾಯಿತು. ಬಳಿಕ ಇಬ್ಬರು ಅಸ್ಸಾಂ ಹಾಡು ಹಾಡುವ ಮೂಲಕ ವೃದ್ಧರಿಗೆ ಮನರಂಜನೆ ನೀಡಿದ್ದರು. ಈ ಹಾಡು ಕೇಳಿ ವೃದ್ಧರು ಖುಷಿಪಟ್ಟಿದಲ್ಲದೇ ಡ್ಯಾನ್ಸ್ ಮಾಡಲು ಶುರು ಮಾಡಿದ್ದಾರೆ. ಕೆಲವರು ತಮ್ಮ ಸ್ನೇಹಿತರಿಗಾಗಿ ಹಾಗೂ ಇತರ ಸದಸ್ಯರಿಗಾಗಿ ಕುಣಿಯಲು ಶುರು ಮಾಡಿದ್ದರು.

    ಈ ವಿಡಿಯೋವನ್ನು ‘ಮದರ್ ಓಲ್ಡ್ ಏಜ್ ಹೋಮ್, ಗುವಾಹಟಿ’ ಶುಕ್ರವಾರ ತನ್ನ ಫೇಸ್‍ಬುಕ್ ಪೇಜಿನಲ್ಲಿ ಹಂಚಿಕೊಂಡಿತ್ತು. ಈ ವಿಡಿಯೋಗೆ ಇದುವರೆಗೂ 5 ಲಕ್ಷಕ್ಕೂ ಹೆಚ್ಚು ವ್ಯೂ ಬಂದಿದೆ. ಅಲ್ಲದೆ 8 ಸಾವಿರಕ್ಕೂ ಹೆಚ್ಚು ಲೈಕ್ಸ್ ಹಾಗೂ 9 ಸಾವಿರಕ್ಕೂ ಹೆಚ್ಚು ಶೇರ್ ಆಗಿದೆ.

    ಈ ವೈರಲ್ ವಿಡಿಯೋ ನೋಡಿ ಜನರು ಖುಷಿಯಾಗಿದ್ದು, ವೃದ್ಧರ ಉತ್ಸಾಹ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರು ಅವರು ತಮ್ಮ ಜೀವನವನ್ನು ಇದೇ ರೀತಿಯಲ್ಲಿ ಬದುಕಲಿ ಹಾಗೂ ಆರೋಗ್ಯದಿಂದ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಮೆಂಟ್ ಮಾಡಿದ್ದಾರೆ.

  • ಮಗ-ಸೊಸೆ ಮೇಲೆ ಕೋಪ- ಆಸ್ತಿಯನ್ನು ಸರ್ಕಾರಕ್ಕೆ ಬರೆದ ತಂದೆ

    ಮಗ-ಸೊಸೆ ಮೇಲೆ ಕೋಪ- ಆಸ್ತಿಯನ್ನು ಸರ್ಕಾರಕ್ಕೆ ಬರೆದ ತಂದೆ

    -ವೃದ್ಧಾಶ್ರಮ ನಿರ್ಮಿಸುವಂತೆ ಮನವಿ

    ಭುವನೇಶ್ವರ: ಒಡಿಶಾದ ಜಜ್ಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ ವಾಸಿಸುವ 75 ವರ್ಷದ ಮಾಜಿ ಪತ್ರಕರ್ತ ತಮ್ಮ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ದಾನ ಮಾಡಿದ್ದಾರೆ. ತಾವೂ ನೀಡಿರುವ ಜಮೀನಿನಲ್ಲಿ ವೃದ್ಧಾಶ್ರಮವನ್ನು ನಿರ್ಮಿಸಬೇಕೆಂದು ಬಯಸಿದ್ದಾರೆ.

    ಮಾಜಿ ಪತ್ರಕರ್ತ ಖೇತ್ರಮೋಹನ್ ಮಿಶ್ರಾ ಅವರು ತಮ್ಮ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ್ದಾರೆ. ಮಿಶ್ರಾ ಅವರನ್ನು ಮಗ ಮತ್ತು ಸೊಸೆ ಸರಿಯಾಗಿ ನೋಡಿಕೊಳ್ಳದಿದ್ದಕ್ಕೆ ಈ ರೀತಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಇಬ್ಬರು ಮಿಶ್ರಾ ಅವರನ್ನು ಕೊಲೆ ಮಾಡಲೂ ಸಾಕಷ್ಟು ಬಾರಿ ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ.

    ನನ್ನ ಮಗ ಮತ್ತು ಸೊಸೆಯ ನಡವಳಿಕೆಯಿಂದ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನ್ನ ಇಚ್ಛೆಯಿಂದ ಸಹಿ ಹಾಕಿದ್ದೇನೆ. ನನ್ನ ಜೀವನದ ಉಳಿದ ಭಾಗವನ್ನು ವೃದ್ಧಾಶ್ರಮದಲ್ಲಿ ಕಳೆಯುತ್ತೇನೆ. ಹೀಗಾಗಿ ಸರ್ಕಾರವು ನನ್ನ ಜಮೀನಿನಲ್ಲಿ ವೃದ್ಧಾಶ್ರಮವನ್ನು ನಿರ್ಮಿಸಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ಅಲ್ಲಿ ನನ್ನಂತಹ ವೃದ್ಧರಿಗೆ ಆಶ್ರಯ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಖೇತ್ರಮೋಹನ್ ಮಿಶ್ರಾ ಹೇಳಿದ್ದಾರೆ.

    ಮಿಶ್ರಾ ಅವರನ್ನು ವೃದ್ಧಾಶ್ರಮಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಜಜ್ಪುರ ಜಿಲ್ಲಾಧಿಕಾರಿ ರಂಜನ್ ಕೆ. ದಾಸ್ ತಿಳಿಸಿದ್ದಾರೆ.

    ನಾವು ಮಿಶ್ರಾ ಅವರನ್ನು ಚಂಡಿಖೋಲೆ ಬಳಿಯ ವೃದ್ಧಾಶ್ರಮವೊಂದರಲ್ಲಿ ಇರಿಸಲು ವ್ಯವಸ್ಥೆ ಮಾಡಿದ್ದೇವೆ. ಅವರ ಮರಣದ ನಂತರವೂ ಕುಟುಂಬದವರು ಅವರ ಅಂತ್ಯಕ್ರಿಯೆಗೆ ಬರುವುದಕ್ಕೆ ಅನುಮತಿ ನೀಡಬಾರದೆಂದು ನಮ್ಮ ಬಳಿ ಮನವಿ ಮಾಡಿಕೊಂಡಿದ್ದಾರೆ. ಮಿಶ್ರಾ ಅವರು ತಮ್ಮ ಭೂಮಿಯನ್ನು ಸರ್ಕಾರಕ್ಕೆ ದಾನ ಮಾಡಿದ್ದಾರೆ. ಜೊತೆಗೆ ಅಲ್ಲಿ ವೃದ್ಧಾಶ್ರಮ ಕಟ್ಟಬೇಕೆಂದು ಬಯಸಿದ್ದಾರೆ. ಹೀಗಾಗಿ ನಾವು ಕೂಡ ಅಲ್ಲಿ ವೃದ್ಧಾಶ್ರಮವನ್ನು ನಿರ್ಮಿಸಲು ನಿರ್ಧರಿಸಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

  • ವೃದ್ಧಾಶ್ರಮದ ವಯೋವೃದ್ಧರ ಆಸೆಯನ್ನು ಎಸ್‍ಪಿ ಅಣ್ಣಾಮಲೈ ನೆರವೇರಿಸಿದ್ರು: ವಿಡಿಯೋ ನೋಡಿ

    ವೃದ್ಧಾಶ್ರಮದ ವಯೋವೃದ್ಧರ ಆಸೆಯನ್ನು ಎಸ್‍ಪಿ ಅಣ್ಣಾಮಲೈ ನೆರವೇರಿಸಿದ್ರು: ವಿಡಿಯೋ ನೋಡಿ

    ಚಿಕ್ಕಮಗಳೂರು: ಪ್ರತಿದಿನ ಟಿವಿಯಲ್ಲಿ ಚಿಕ್ಕಮಗಳೂರು ಎಸ್‍ಪಿ ಕಾರ್ಯವೈಖರಿಯನ್ನು ವೀಕ್ಷಿಸುತ್ತಿದ್ದ ವಯೋವೃದ್ಧರ ಆಸೆಯನ್ನು ಅಣ್ಣಾಮಲೈ ನೆರವೇರಿಸಿದ್ದಾರೆ.

    ಚುನಾವಣೆ ಪೂರ್ವದಿಂದಲೂ ಪ್ರತಿದಿನ ಟಿವಿಯಲ್ಲಿ ಅಣ್ಣಾಮಲೈ ಕಾರ್ಯವೈಖರಿಯನ್ನು ವೀಕ್ಷಿಸುತ್ತಿದ್ದ ಚಿಕ್ಕಮಗಳೂರಿನ ಗೌರಿ ಕಾಲುವೆಯಲ್ಲಿರೋ ಅನ್ನಪೂರ್ಣ ವೃದ್ಧಾಶ್ರಮದ ವಯೋವೃದ್ಧರು ಎಸ್‍ಪಿ ಅವರನ್ನು ಕಣ್ತುಂಬ ನೋಡಬೇಕೆಂದು ಇಂಗಿತ ವ್ಯಕ್ತಪಡಿಸಿದ್ದರು.

    ವಿಷಯ ತಿಳಿದ ಅಣ್ಣಾಮಲೈ ಸ್ಥಳಕ್ಕೆ ಭೇಟಿ ನೀಡಿ ವಯೋವೃದ್ಧರ ಯೋಗಕ್ಷೇಮ, ಕಷ್ಟವನ್ನು ವಿಚಾರಿಸಿದ್ದಾರೆ. ಮಂಗಳವಾರ ಸಂಜೆ ದಿಢೀರನೇ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ಅಣ್ಣಾಮಲೈ ಅಲ್ಲಿನ ಹಿರಿ ಜೀವಗಳ ನೋವನ್ನು ಆಲಿಸಿದ್ದಾರೆ.

    ಎಸ್‍ಪಿ ಅಣ್ಣಾಮಲೈ ಅವರನ್ನು ನೋಡುತ್ತಿದ್ದಂತೆ ವಯೋವೃದ್ಧರು ಆನಂದಭಾಷ್ಪ ಸುರಿಸಿದರು. ಎಸ್‍ಪಿ ಪಕ್ಕದಲ್ಲಿ ಮಕ್ಕಳಂತೆ ಕೂತು ಹಿರಿಯ ಜೀವಗಳು ತಮ್ಮ ನೋವಗಳನ್ನು ಹೇಳಿ ಕಣ್ಣೀರಿಟ್ಟರು. ಒಬ್ಬೊಬ್ಬರ ನೋವನ್ನು ಕೇಳಿದ ಅಣ್ಣಾಮಲೈ ಅವರಿಗೆ ಸಾಂತ್ವಾನ ಹೇಳಿದ್ದರು.\

  • ಅನಾಥ ಹಿರಿಯ ಜೀವಗಳಿಗೆ ಆಧಾರವಾದ ತುಮಕೂರಿನ ಯಶೋಧ

    ಅನಾಥ ಹಿರಿಯ ಜೀವಗಳಿಗೆ ಆಧಾರವಾದ ತುಮಕೂರಿನ ಯಶೋಧ

    – ವೃದ್ಧಾಶ್ರಮಕ್ಕಾಗಿ ತಿಂಗಳ ಸಂಬಳ ಮೀಸಲು

    ತುಮಕೂರು: ಊರಿಗೊಂದು ಮರ ಇರಬೇಕು. ಮನೆಗೊಬ್ಬರು ಹಿರಿಯರು ಇರಬೇಕು ಅನ್ನೋ ಮಾತಿದೆ. ಇತ್ತೀಚಿಗೆ ಕೆಲವರಿಗೆ ಮನೆಯಲ್ಲಿ ಹಿರಿಯರು ಇರೋದೇ ಕಿರಿಕಿರಿ ಆಗ್ಬಿಟ್ಟಿದೆ. ಆದ್ರೆ, ಇಂತಹ ಅನಾಥ ಹಿರಿ ಜೀವಗಳ ಬಾಳಿಗೆ ಬೆಳಕಾಗಿದ್ದಾರೆ ತುಮಕೂರಿನ ಎಲ್‍ಐಸಿ ಏಜೆಂಟ್ ಯಶೋಧ.

    ಯಶೋಧಾ ಅವರು ಚಿಕ್ಕ ವಯಸ್ಸಿನಲ್ಲೇ ಶ್ರೀಶಾರದಾಂಭ ಎಂಬ ವೃದ್ಧಾಶ್ರಮ ತೆರೆದಿದ್ದಾರೆ. ಈ ಆಶ್ರಮದ ಮೂಲಕ ಅನಾಥ ಹಿರಿ ಜೀವಗಳಿಗೆ ಆಧಾರವಾಗಿದ್ದಾರೆ. ತಮ್ಮ ತಿಂಗಳ 20 ಸಾವಿರ ಸಂಬಳದ ಹಣವನ್ನೂ ಸಹ ವೃದ್ಧ ಜೀವಗಳಿಗಾಗಿ ಖರ್ಚು ಮಾಡುತ್ತಿದ್ದಾರೆ.

    ಯಶೋಧ ವೃದ್ಧಾಶ್ರಮ ತೆರೆಯಲು ಸಹ ಒಂದು ಕಾರಣವಿದೆ. 2014ರಲ್ಲಿ ಬೀದಿಯಲ್ಲಿ ಬಿದ್ದಿದ್ದ ವೃದ್ಧರೊಬ್ಬರನ್ನು ಯಾವುದೋ ಒಂದು ಆಶ್ರಮಕ್ಕೆ ಸೇರಿಸಲು ಯಶೋಧ ಹೋದರಂತೆ. ಆದರೆ ಅಲ್ಲಿದ್ದವರು ನಿಮಗೆ ಅಷ್ಟೊಂದು ಆಸಕ್ತಿ ಇದ್ರೆ ನೀವೇ ಒಂದು ಆಶ್ರಮ ತೆರೆಯಿರಿ ಅಂದ್ರಂಥೆ. ಇದನ್ನೇ ಚಾಲೆಂಜಾಗಿ ತೆಗೆದುಕೊಂಡ ಯಶೋಧ, ತುಮಕೂರಿನ ಜಯನಗರದಲ್ಲಿ ಬಾಡಿಗೆ ಮನೆಯೊಂದನ್ನು ಪಡೆದು 30 ವೃದ್ಧರಿಗೆ ದಾರಿಯಾಗಿದ್ದಾರೆ.

    2014ರಲ್ಲಿ ವೃದ್ಧಾಶ್ರಮ ಪ್ರಾರಂಭವಾದಾಗ ಹಣಕಾಸಿನ ಸಮಸ್ಯೆ ಜೊತೆಗೆ ಹತ್ತು ಹಲವು ಸಮಸ್ಯೆಗಳು ಎದುರಾದವು. ಆದರೂ ಛಲ ಬಿಡದೇ ಯಶೋಧ ಮುನ್ನುಗ್ಗುತ್ತಿದ್ದಾರೆ. ಇವರ ಸಾಮಾಜಿಕ ಸೇವೆ ಹೀಗೆ ಮುಂದುವರೆಯಲಿ ಎಂಬುವುದು ಪಬ್ಲಿಕ್ ಟಿವಿಯ ಆಶಯ.

    https://www.youtube.com/watch?v=CZuJNS92Rmo