Tag: Old people

  • ಹಳ್ಳಕ್ಕೆ ಮೇಲ್ಸೇತುವೆಯಿಲ್ಲದೇ ವೃದ್ಧರನ್ನು ಹೊತ್ತು ಹಳ್ಳ ದಾಟಿಸ್ತಾರೆ..!

    ಹಳ್ಳಕ್ಕೆ ಮೇಲ್ಸೇತುವೆಯಿಲ್ಲದೇ ವೃದ್ಧರನ್ನು ಹೊತ್ತು ಹಳ್ಳ ದಾಟಿಸ್ತಾರೆ..!

    – ಹಳ್ಳ ದಾಟಲು ಶಾಲಾ ಮಕ್ಕಳು ಹರಸಾಹಸ

    ಹಾವೇರಿ: ಹಳ್ಳದಲ್ಲಿ ನೀರು ಹರಿಯುತ್ತಿರೋ ಕಾರಣ ಆಸ್ಪತ್ರೆಗೆ ಹೋಗುವ ವಯೋವೃದ್ಧೆಯನ್ನು ಹೊತ್ತುಕೊಂಡು ಹಳ್ಳವನ್ನು ದಾಟಿಸುವ ಹೃದಯ ವಿದ್ರಾವಕ ಘಟನೆ ಹಾವೇರಿ ತಾಲೂಕಿನ ಕೋಡಬಾಳ ಗ್ರಾಮದ ಬಳಿ ನಡೆದಿದೆ.

    ಹಳ್ಳಕ್ಕೆ ಮೇಲ್ಸೇತುವೆ ಇಲ್ಲದ ಕಾರಣ ಹಳ್ಳ ದಾಟಲು ಜನರು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಹೊರವಲಯದಲ್ಲಿ ತುಂಗಾ ಮೇಲ್ದಂಡೆ ಕಾಲುವೆ ನೀರು ತುಂಬಿ ಹರಿಯೋದ್ರಿಂದ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತದೆ.

    ಆಗ ಗ್ರಾಮದಿಂದ ಬೇರೆ ಕಡೆ ತೆರಳಲು ಆಸ್ಪತ್ರೆಗೆ ಹೋಗುವ ವೃದ್ಧರು ಮತ್ತು ಶಾಲಾ ಮಕ್ಕಳು ಹರಸಾಹಸ ಪಡುತ್ತಾರೆ. ವೃದ್ಧರನ್ನು ಯುವಕರು ಹೊತ್ತುಕೊಂಡು ಹಳ್ಳ ದಾಟಿಸಬೇಕಾದ ದುಃಸ್ಥಿತಿ ಎದುರಾಗಿದೆ. ಸಾಕಷ್ಟು ಬಾರಿ ಗ್ರಾಮಸ್ಥರು ಹಳ್ಳಕ್ಕೆ ಮೇಲ್ಸೇತುವೆ ನಿರ್ಮಿಸುವಂತೆ ಒತ್ತಾಯಿಸಿದ್ದರು ಪ್ರಯೋಜನವಾಗಿಲ್ಲ.

    ಈ ಗ್ರಾಮ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಪ್ರತಿನಿಧಿಸುವ ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿ ಬರುತ್ತದೆ. ಇನ್ನಾದರೂ ಆದಷ್ಟು ಬೇಗ ಜಿಲ್ಲಾ ಉಸ್ತುವಾರಿ ಸಚಿವರು ಹಳ್ಳಕ್ಕೆ ಮೇಲ್ಸೇತುವೆ ನಿರ್ಮಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

  • ರಸ್ತೆಯಲ್ಲಿ ಹೋಗೋ ವೃದ್ಧರೇ ಇವರ ಟಾರ್ಗೆಟ್- ನಕಲಿ ಔಷಧಿ ಕೊಡಿಸಿ ಯಾಮಾರಿಸ್ತಿದ್ದ ಗ್ಯಾಂಗ್ ಅರೆಸ್ಟ್

    ರಸ್ತೆಯಲ್ಲಿ ಹೋಗೋ ವೃದ್ಧರೇ ಇವರ ಟಾರ್ಗೆಟ್- ನಕಲಿ ಔಷಧಿ ಕೊಡಿಸಿ ಯಾಮಾರಿಸ್ತಿದ್ದ ಗ್ಯಾಂಗ್ ಅರೆಸ್ಟ್

    ಹುಬ್ಬಳಿ: ಹುಬ್ಬಳ್ಳಿ ಧಾರವಾಡ ಜನರೇ ನೀವು ಔಷಧಿ ತೆಗೆದುಕೊಳ್ಳುವ ಮುನ್ನ ಸ್ವಲ್ಪ ಎಚ್ಚರವಿರಲಿ. ಯಾವುದು ನಕಲಿ, ಯಾವುದು ಅಸಲಿ ಎಂಬುದನ್ನು ಖಾತರಿ ಮಾಡಿಕೊಳ್ಳಿ. ಯಾಕೆಂದರೆ ವೃದ್ಧಾಪ್ಯವನ್ನೇ ಬಂಡವಾಳ ಮಾಡಿಕೊಂಡ ಕೆಲವರು ನಕಲಿ ಔಷಧಿ ಕೊಟ್ಟು ಯಾಮಾರಿಸುತ್ತಿದ್ದಾರೆ.

    ಹೌದು. ಇಂಥದೊಂದು ನಕಲಿ ಔಷಧಿ ಮಾರಾಟ ಮಾಡುವ ತಂಡ ನಿಮ್ಮನ್ನ ರಸ್ತೆಯಲ್ಲಿ ಮಾತನಾಡಿಸಿ ಯಾಮಾರಿಸುತ್ತಾರೆ. ಆದರೆ ಸದ್ಯ ಇವರನ್ನು ಧಾರವಾಡದಲ್ಲಿ ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ. ರಾಘವೇಂದ್ರ ಆಯುರ್ವೇದಿಕ್ ಎಂಬ ಹೆಸರಿಟ್ಟುಕೊಂಡಿರುವ ಈ ತಂಡ ನಕಲಿ ಔಷಧಿ ಮಾರಾಟ ಮಾಡುತ್ತಿತ್ತು. ವೃದ್ಧ ಜನರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅವರನ್ನು ಮಾತನಾಡಿಸಿ, ನಿಮಗೆ ಒಳ್ಳೆ ಔಷಧಿ ಕೊಡಿಸುತ್ತೇವೆ ಎಂದು ಹೇಳಿ ಲಕ್ಷ ಲಕ್ಷ ಹಣ ಪಡೆದು ಪಾರಾರಿಯಾಗುತ್ತಿದ್ದರು.

    ಇವರು ನೀಡಿದ ಔಷಧಿಯಿಂದ ವೃದ್ಧರಿಗೆ ಯಾವುದೇ ಪರಿಣಾಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಹಲವು ಜನರು ಹುಬ್ಬಳ್ಳಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದರು. ಈ ನಿಖರ ಮಾಹಿತಿ ಪಡೆದ ಪೊಲೀಸರು ಧಾರವಾಡದ ಅಂಗಡಿ ಮೇಲೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ವೆಂಕಟೇಶ ಹಾಗೂ ಎಲ್ಲಪ್ಪ ಎನ್ನುವವರನ್ನು ನಗರದ ದಾಸನಕೊಪ್ಪ ಕ್ರಾಸ್ ಬಳಿಯ ಅಂಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 6 ಲಕ್ಷ ರೂ. ನಗದು ಹಾಗೂ ಚೆಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ.