Tag: Old Student

  • ರೂಂಗೆ ಹೋದ ನಂತ್ರ ಬಟ್ಟೆ ಬಿಚ್ಚಲು ಶ್ರೀಗಳು ಹೇಳ್ತಿದ್ದರು: ಹಳೆ ವಿದ್ಯಾರ್ಥಿನಿ ಸ್ಫೋಟಕ ಹೇಳಿಕೆ

    ರೂಂಗೆ ಹೋದ ನಂತ್ರ ಬಟ್ಟೆ ಬಿಚ್ಚಲು ಶ್ರೀಗಳು ಹೇಳ್ತಿದ್ದರು: ಹಳೆ ವಿದ್ಯಾರ್ಥಿನಿ ಸ್ಫೋಟಕ ಹೇಳಿಕೆ

    ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ಮತ್ತಷ್ಟು ಕಾಮಕೇಳಿ ಪ್ರಕರಣ ಒಂದೊಂದು ಬಯಲಾಗುತ್ತಿದೆ. ಮುರುಘಾ ಶ್ರೀ ಕಪಿಮುಷ್ಠಿಯಲ್ಲಿ ಒದ್ದಾಡಿದವರು ಒಬ್ಬರಾ, ಇಬ್ಬರಾ..?. ಹಾಸ್ಟೆಲ್‍ನಲ್ಲಿ ಹಿಂಸೆ ಅನುಭವಿಸಿದ ಹಳೆ ವಿದ್ಯಾರ್ಥಿನಿ ಕೂಡ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದಾಳೆ.

    2012ರಲ್ಲಿ ನಾನು ಮಠದಲ್ಲಿ ಓದುತ್ತಿದ್ದೆ. 2012ರಲ್ಲಿ ನಾನು 8ನೇ ತರಗತಿ ಓದುತ್ತಿದ್ದೆ. ಆಗ ಹಾಸ್ಟೆಲ್ ವಾರ್ಡನ್ ಆಗಿ ರಶ್ಮಿ ನೇಮಕಗೊಂಡರು. ರಶ್ಮಿ ಬಂದ ಮೇಲೆ ಹಾಸ್ಟೆಲ್ ಚಿತ್ರಣ ಬದಲಾಯಿತು. ನನ್ನನ್ನು ಬಲವಂತವಾಗಿ ಸ್ವಾಮೀಜಿ ಹತ್ತಿರ ಕಳುಹಿಸುತ್ತಿದ್ದರು. ಹಣ್ಣು ಕೊಡುತ್ತಾರೆ ಹೋಗು ಅಂತ ಹೇಳುತ್ತಿದ್ದರು. ನಾನು ಹಾಗೂ ನನ್ನ ಸ್ನೇಹಿತೆ ಹೋಗುತ್ತಿದ್ದೆವು ಎಂದಿದ್ದಾಳೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಪೋಕ್ಸೋ ಸಂಕಷ್ಟ- ಪೊಲೀಸರಿಂದ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ

    ಎಲ್ಲರೂ ಮಲಗಿದ ಮೇಲೆ ಹಿಂಬಾಗಿಲಿನಿಂದ ಹೋಗುತ್ತಿದ್ದೆವು. ಶ್ರೀಗಳು ನನಗೆ ಡ್ರೈಫ್ರೂಟ್ಸ್, ಚಾಕ್ಲೇಟ್ ಕೊಡುತ್ತಿದ್ದರು. ನನ್ನ ವಸ್ತ್ರ ಕಳಚಲು ಹೇಳುತ್ತಿದ್ದರು. ನಾನು ಶ್ರೀಗಳು ಹೇಳಿದಂತೆ ನಡೆದುಕೊಳ್ಳುತ್ತಿದ್ದೆ. ನನ್ನನ್ನು ತೊಡೆಯ ಮೇಲೆ ಕೂರಿಸಿಕೊಳ್ಳುತ್ತಿದ್ದರು. ಅಲ್ಲದೆ ಅಂಗಾಂಗ ಮುಟ್ಟುತ್ತಿದ್ದರು. ಬಳಿಕ ನನ್ನೊಂದಿಗೆ ಗಂಡ-ಹೆಂಡತಿಯಂತೆ ಸೇರುತ್ತಿದ್ದರು ಎಂದು ತಿಳಿಸಿದ್ದಾಳೆ.

    ಬೆಳಗ್ಗಿನ ಜಾವ 4.30ಕ್ಕೆ ಅಲಾರಂ ಇಟ್ಟುಕೊಂಡು ನನ್ನನ್ನು ಎಚ್ಚರಿಸುತ್ತಿದ್ದರು. ನಾನು ಬೆಳಗ್ಗಿನ ಜಾವ ಹಾಸ್ಟೆಲ್‍ಗೆ ಸೇರಿಕೊಳ್ಳುತ್ತಿದ್ದೆ. ಈ ವಿಷಯ ಹಾಸ್ಟೆಲ್‍ನಲ್ಲಿದ್ದ ಕೆಲವರಿಗೆ ಗೊತ್ತಾಯಿತು. ಬಳಿಕ ನನ್ನನ್ನು ಮಲ್ಲಾಡಿಹಳ್ಳಿ ಹಾಸ್ಟೆಲ್‍ಗೆ ಕಳುಹಿಸಿದರು ಎಂದು ವಿದ್ಯಾರ್ಥಿನಿಯೊಬ್ಬಳು ನಡೆದ ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ.

    Live Tv
    [brid partner=56869869 player=32851 video=960834 autoplay=true]

  • ಅಕ್ಷರ ಜ್ಞಾನ ಪಡೆದ ಕನ್ನಡ ಶಾಲೆಯನ್ನು ಮಾದರಿ ಶಾಲೆಯಾಗಿಸಿದ ಹಳೇ ವಿದ್ಯಾರ್ಥಿಗಳು

    ಅಕ್ಷರ ಜ್ಞಾನ ಪಡೆದ ಕನ್ನಡ ಶಾಲೆಯನ್ನು ಮಾದರಿ ಶಾಲೆಯಾಗಿಸಿದ ಹಳೇ ವಿದ್ಯಾರ್ಥಿಗಳು

    ಮಡಿಕೇರಿ: ಒಂದು ಊರಿನ ಅಭಿವೃದ್ಧಿಯನ್ನು ನೋಡಬೇಕಾದರೆ ಆ ಊರಿನ ದೇವಾಲಯಗಳನ್ನು ನೋಡಬೇಕು. ಇಲ್ಲವೇ ಶಾಲೆಗಳನ್ನು ನೋಡಬೇಕು ಎನ್ನುವುದು ಹಿರಿಯರ ಮಾತು. ಇದು ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಅಕ್ಷರಶಃ ಒಪ್ಪುವಂತಹ ಮಾತಾಗಿದೆ. ತಾವು ಕಲಿತ ಸರ್ಕಾರಿ ಶಾಲೆಗೆ ಹೊಸ ಸ್ಪರ್ಶ ನೀಡಿ ಮಾದರಿ ಶಾಲೆಯನ್ನಾಗಿಸಿ ಹಳೇ ವಿದ್ಯಾರ್ಥಿಗಳು ಮೆಚ್ಚುಗೆ ಪಡೆದುಕೊಂಡಿದ್ದಾರೆ.

    ತಾವು ಕಲಿತ ಶಾಲೆಗೆ ಏನಾದರೂ ಕೊಡುಗೆ ನೀಡಬೇಕೆಂದು ಹಳೇ ವಿದ್ಯಾರ್ಥಿಗಳ ಸಂಘದ ಸದಸ್ಯರು ನಿರ್ಧರಿಸಿದ್ದರು. ಈ ನಿಟ್ಟಿನಲ್ಲಿ ಸುಮಾರು 40 ಸಾವಿರ ರೂ. ವೆಚ್ಚದಲ್ಲಿ ಶಾಲೆಗೆ ಬೆಂಚ್ ಹಾಗೂ ಡೆಸ್ಕ್ ನೀಡಿದ್ದಾರೆ.

    ಮಡಿಕೇರಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ನೂರಾರು ವರ್ಷಗಳ ಇತಿಹಾಸ ಹೊಂದಿದ್ದು, ಕೆಲವು ವರ್ಷಗಳ ಹಿಂದೆ ಕೊಡಗಿನ ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳ ಪಾಲಿನ ಜ್ಞಾನ ದೇಗುಲವಾಗಿತ್ತು.

    ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಅನೇಕ ವಿದ್ಯಾರ್ಥಿಗಳು ಬೇರೆ ಬೇರೆ ಪ್ರದೇಶದಲ್ಲಿ ಉನ್ನತ ಉದ್ಯೋಗದಲ್ಲಿದ್ದಾರೆ. ತಾವು ಕಲಿತ ಶಾಲೆಯಲ್ಲಿ ಮೂಲಸೌಲಭ್ಯ ಕೊರತೆ ಕಂಡಿದ್ದ ಅವರು ಏನಾದರೂ ವ್ಯವಸ್ಥೆ ಮಾಡಬೇಕು ಎನ್ನುವ ನಿರ್ಧಾರಕ್ಕೆ ಕೈ ಹಾಕಿದ್ದರು. ಇದಕ್ಕೆ ಸುಮಾರು 35ಕ್ಕೂ ಹೆಚ್ಚು ಹಳೇ ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ. ಮೊದಲ ಹಂತದಲ್ಲಿ ಈ ಸಂಘವು ಶಾಲೆಗೆ ಪೀಠೋಪಕರಣ ನೀಡುವ ಕೆಲಸ ಮಾಡಿದೆ.

    ಸರ್ಕಾರಿ ಕನ್ನಡ ಶಾಲೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ, ಉತ್ತಮ ಶಿಕ್ಷಣ, ವಾತಾವರಣ ನೀಡುವ ಕೆಲಸವನ್ನು ಹಳೇ ವಿದ್ಯಾರ್ಥಿಗಳು ಮಾಡುತ್ತಿರುವುದು ಮೆಚ್ಚುಗೆಗೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚನೆ ಮಾಡಿಕೊಂಡ ಸ್ನೇಹ ಮಿಲನ ಸವಿ ನೆನಪು ಎನ್ನುವ ಕಾರ್ಯಕ್ರಮ ಮಾಡಲಾಗುತ್ತಿದೆ. ಹೀಗೆ ಸಂಘಟನೆಯಾದ ವಿದ್ಯಾರ್ಥಿಗಳು ಶಾಲೆ/ಕಾಲೇಜುಗಳ ಅಭಿವೃದ್ಧಿಗೆ ಸಹಕರಿಸಿದರೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ.

    ಶಾಲೆಗೆ ಕೊಡುಗೆಯಾಗಿ ನೀಡಿದ ಬೆಂಚ್ ಹಾಗೂ ಡೆಸ್ಕ್ ಗಳನ್ನು ಇಂದು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಕುಶಾಲಿನಿ, ಸದಸ್ಯರಾದ ಪೀಟರ್, ದಯಾನಂದ, ಲೋಹಿತ್, ರಾಜೇಶ್, ಮಲ್ಲಿಕಾರ್ಜುನ್, ಪವಿತ್ರ, ಭಾಗೀರಥಿ, ಶ್ವೇತಾ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv