Tag: Olympic

  • U19 World Cup ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ ಬಾವ ಯಾರು ಗೊತ್ತಾ?

    U19 World Cup ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ ಬಾವ ಯಾರು ಗೊತ್ತಾ?

    ಮುಂಬೈ: ಟೀಂ ಇಂಡಿಯಾ ಅಂಡರ್-19 ವಿಶ್ವಕಪ್ ಜಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ ಬಾವ, 1948ರ ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ತರ್ಲೋಚನ್ ಸಿಂಗ್ ಬಾವಾರ ಮೊಮ್ಮಗ ಎಂಬ ವಿಷಯ ಇದೀಗ ರಿವೀಲ್ ಆಗಿದೆ.

    2022ರ ಅಂಡರ್-19 ವಿಶ್ವಕಪ್ ಫೈನಲ್‍ನಲ್ಲಿ ಇಂಗ್ಲೆಂಡ್ ಅಲ್ಪ ಮೊತ್ತಕ್ಕೆ ಕುಸಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ ರಾಜ್ ಬಾವಾ ಫೈನಲ್ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದರು. ಟೀಂ ಇಂಡಿಯಾದ ಅಂಡರ್-19 ತಂಡದಲ್ಲಿ ಆಲ್‍ರೌಂಡರ್ ಆಗಿ ತಂಡದೊಂದಿಗಿದ್ದ ರಾಜ್‍ಬಾವಾ ಪ್ರತಿ ಪಂದ್ಯದಲ್ಲೂ ಅದ್ಭುತ ಪ್ರದರ್ಶನದ ಮೂಲಕ ಗಮನಸೆಳೆದಿದ್ದಾರೆ. ಇದನ್ನೂ ಓದಿ: ಧೋನಿ ಸಿಕ್ಸರ್ ನೆನಪಿಸಿದ ದಿನೇಶ್ ಬಣ ಫಿನಿಶಿಂಗ್ ಶಾಟ್

    ರಾಜ್ ಬಾವಾರದ್ದು, ಹಿಂದಿನಿಂದಲೂ ಕ್ರೀಡಾ ಆಸಕ್ತರ ಕುಟುಂಬ ರಾಜ್ ಬಾವಾರ ಅಜ್ಜ ತರ್ಲೋಚನ್ ಸಿಂಗ್ ಬಾವಾ ಭಾರತದ ಹಾಕಿ ತಂಡದಲ್ಲಿ ಮಿಂಚಿದ ಪ್ರತಿಭೆ. 1948ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಹಾಕಿಯಲ್ಲಿ ಚಿನ್ನಗೆದ್ದಾಗ ಭಾರತದ ಜಯದಲ್ಲಿ ತರ್ಲೋಚನ್ ಸಿಂಗ್ ಬಾವಾ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಅವರ ಮೊಮ್ಮಗ 74 ವರ್ಷದ ಬಳಿಕ ಭಾರತದ ಮುಡಿಗೆ ಪ್ರಶಸ್ತಿ ಗೆದ್ದುಕೊಡಲು ಪ್ರಮುಖ ಪಾತ್ರ ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ

    ರಾಜ್ ಬಾವಾ ಅಂಡರ್-19 ವಿಶ್ವಕಪ್‍ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಸಿಡಿಸಿದವರ ಪಟ್ಟಿಯಲ್ಲಿ 2ನೇ ಮತ್ತು ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ. ಟೂರ್ನಿಯಲ್ಲಿ ರಾಜ್ ಬಾವ ಒಟ್ಟು 252 ರನ್ ಮತ್ತು 9 ವಿಕೆಟ್ ಪಡೆದು ಯುವ ಆಲ್‍ರೌಂಡರ್ ಆಟಗಾರನಾಗಿ ಭರವಸೆ ಮೂಡಿಸಿದ್ದಾರೆ.

  • ದುಬೈನಲ್ಲಿ ಸ್ಕೈ ಡೈವ್ ಮಾಡಿದ ನೀರಜ್

    ದುಬೈನಲ್ಲಿ ಸ್ಕೈ ಡೈವ್ ಮಾಡಿದ ನೀರಜ್

    ದುಬೈ: ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ದುಬೈನಲ್ಲಿ ಜಾಲಿ ಮೂಡ್‍ನಲ್ಲಿ ಸಮಯ ಕಳೆಯುತ್ತಿದ್ದಾರೆ.

    ನಿನ್ನೆ ಅವರು ಸ್ಕೈ ಡೈವ್ ಮಾಡುವ ವೀಡಿಯೋವೊಂದನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವೀಡಿಯೋ ನೋಡಿದ ನೀರಜ್ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:  ಅಂಡರ್‌ವಾಟರ್‌ನಲ್ಲಿ ಚಿನ್ನದ ಹುಡುಗ- ವೀಡಿಯೋ ನೋಡಿ

     

    View this post on Instagram

     

    A post shared by Neeraj Chopra (@neeraj____chopra)

    ವಿಮಾನದಿಂದ ಜಿಗಿಯುವ ಮೊದಲು ನಾನು ಹೆದರುತ್ತಿದ್ದೆ. ಆದರೆ ಈಗ ಖುಷಿಯಾಗುತ್ತಿದೆ. ಒಮ್ಮೆಯಾದ್ರೂ ಸ್ಕೈ ಡೈವ್ ಮಾಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನೀರಜ್ ಅವರ ಈ ವೀಡಿಯೋ ಇದೀಗ ಸಖತ್ ವೈರಲ್ ಆಗಿದೆ. ಇದನ್ನೂ ಓದಿ:  ಪತ್ನಿಯಾಗುವವಳು ನನ್ನಂತೆಯೇ ಕ್ರೀಡಾಪಟುವಾಗಿರಬೇಕು: ನೀರಜ್ ಚೋಪ್ರಾ

    ಜಾಲಿ ಮೂಡ್‍ನಲ್ಲಿ ಇರುವ ನೀರಜ್ ಕೆಲವು ದಿನಗಳ ಹಿಂದೆ ಮಾಲ್ಡೀವ್ಸ್‍ಗೆ ಹೋಗಿದ್ದರು. ಸಮುದ್ರದಡಿಯಲ್ಲಿ ಸ್ಕೂಬಾ ಡೈವಿಂಗ್ ಮಾಡುತ್ತಾ ಜಾವೆಲಿನ್ ಎಸೆತಯವಂತೆ ನಟಿಸಿದ್ದರು. ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು ಆಕಾಶದಲ್ಲಿ, ನೆಲದ ಮೇಲೆ ಅಥವಾ ನೀರಿನಲ್ಲಿ ನಾನು ಜಾವೆಲಿನ್ ಬಗ್ಗೆಯೇ ಯೋಚಿಸುತ್ತಿದ್ದೇನೆ ಎಂದು ಶಿರ್ಷಿಕೆಯನ್ನು ನೀಡಿದ್ದರು.

  • ಪಿ.ವಿ. ಸಿಂಧುಗೆ ಮೆಗಾ ಸ್ಟಾರ್ ಸನ್ಮಾನ

    ಪಿ.ವಿ. ಸಿಂಧುಗೆ ಮೆಗಾ ಸ್ಟಾರ್ ಸನ್ಮಾನ

    ಹೈದರಾಬಾದ್: ಕ್ರೀಡಾ ಪಟು ಪಿ.ವಿ. ಸಿಂಧುಗೆ ಟಾಲಿವುಡ್ ನಟ ಚಿರಂಜೀವಿ ವಿಶೇಷ ಔತಣಕೂಟ ಏರ್ಪಡಿಸಿ ಸನ್ಮಾನ ಮಾಡಿದ್ದಾರೆ.

    ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಪಿ.ವಿ.ಸಿಂಧು ದೇಶಕ್ಕೆ ಕೀರ್ತಿ ತಂದಿದ್ದರು. ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೂ ಸಿಂಧು ಪಾತ್ರರಾಗಿದ್ದರು. ಪದಕ ಗೆದ್ದು ದೇಶದ ಹಿರಿಮೆ ಹೆಚ್ಚಿಸಿದ ಸಿಂಧುಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು. ಇದೀಗ ಮೆಗಾ ಸ್ಟಾರ್ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ ಅವರು ತಮ್ಮ ಮನೆಯಲ್ಲಿ ಸಾಧಕಿ ಸಿಂಧು ಅವರಿಗಾಗಿ ಒಂದು ವಿಶೇಷ ಔತಣಕೂಟವನ್ನೇ ಏರ್ಪಡಿಸಿದ್ದರು. ಇದೇ ವೇಳೆ ತೆಲುಗು ಚಿತ್ರರಂಗದ ಗಣ್ಯರು ಸಿಂಧುಗೆ ಸನ್ಮಾನಿಸಿದ್ದಾರೆ ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ನಟ ಚಿರಂಜೀವಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜಾತಿ ಗಣತಿ ವರದಿಯನ್ನ ಬಿಜೆಪಿ ಒಪ್ಪಿಕೊಳ್ಳಲು ತಯಾರಿಲ್ಲ: ಸಿದ್ದರಾಮಯ್ಯ

    ವಿಶೇಷ ಔತಣಕೂಟದಲ್ಲಿ ಅತಿಥಿಗಳಾಗಿ ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ಮತ್ತು ತೆಲಂಗಾಣದ ಇತರ ಪ್ರಸಿದ್ಧ ವ್ಯಕ್ತಿಗಳು ಸೇರಿದ್ದರು. ತೆಲಂಗಾಣ ಐಟಿ ಪ್ರಧಾನ ಕಾರ್ಯದರ್ಶಿ ಜಯೇಶ್ ರಂಜನ್, ನಟಿ ಸುಹಾಸಿನಿ, ನಾಗಾರ್ಜುನ ಮತ್ತು ಅವರ ಪುತ್ರ ಅಖಿಲ್, ರಾಣಾ ದಗ್ಗುಬಾಟಿ, ವರುಣ್ ತೇಜ್, ಸಾಯಿ ಧರಮ್ ತೇಜ್, ನಿರ್ಮಾಪಕ ಅಲ್ಲು ಅರವಿಂದ್ ಮತ್ತು ಇತರರು ಸೇರಿದ್ದರು.

    ಪ್ರೀತಿಯ ಅತಿಥಿಗಳು ಮತ್ತು ಉತ್ತಮ ಸಂಭಾಷಣೆಗಳೊಂದಿಗೆ ಈ ಸಂಭ್ರಮದ ಪಾಟೀಯಲ್ಲಿ ನಾನು ಕಳೆದಿದ್ದೇನೆ. ನಾನು ಈ ಔತಣಕೂಟದ ಭಾಗವಾಗಿರುವುದು ತುಂಬಾ ಸಂತೋಷವಾಗಿದೆ. ಧನ್ಯವಾದಗಳು ಚಿರಂಜೀವಿ ಸರ್ ಎಂದು ಸಿಂಧು ಕೂಡ ಟ್ವೀಟ್ ಮಾಡಿದ್ದಾರೆ.

  • ಯುವ ಕ್ರೀಡಾಪಟುಗಳು ಮೇಜರ್ ಧ್ಯಾನ್ ಚಂದ್ ಅವರ ಕೆಚ್ಚನ್ನು ಬೆಳೆಸಿಕೊಳ್ಳಬೇಕು: ಡಾ. ನಾರಾಯಣಗೌಡ

    ಯುವ ಕ್ರೀಡಾಪಟುಗಳು ಮೇಜರ್ ಧ್ಯಾನ್ ಚಂದ್ ಅವರ ಕೆಚ್ಚನ್ನು ಬೆಳೆಸಿಕೊಳ್ಳಬೇಕು: ಡಾ. ನಾರಾಯಣಗೌಡ

    ಬೆಂಗಳೂರು: ಮೇಜರ್ ಧ್ಯಾನ್ ಚಂದ್ ಅವರು ಕ್ರೀಡಾಪಟುಗಳಿಗೆ ಸ್ಪೂರ್ತಿ. ರಾತ್ರಿ ಚಂದ್ರನ ಬೆಳಕಿನಲ್ಲಿಯೂ ಕ್ರೀಡಾಭ್ಯಾಸ ಮಾಡುತ್ತಿದ್ದ ಕಾರಣ ಧ್ಯಾನ್ ಸಿಂಗ್ ಅವರು ಮುಂದೆ ಧ್ಯಾನ್ ಚಂದ್ ಎಂದೇ ಪ್ರಸಿದ್ಧಿಯಾದರು. ಅವರಂತೆ ಪ್ರತಿಯೊಬ್ಬ ಕ್ರೀಡಾಪಟುಗಳು ಶ್ರದ್ಧೆಯಿಂದ ಕ್ರೀಡಾಭ್ಯಾಸ ಮಾಡಬೇಕು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿಪ್ರಾಯಪಟ್ಟರು.

    ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಸತತ ಮೂರು ಒಲಿಂಪಿಕ್ಸ್ ನಲ್ಲಿ ಪದಕ ಗಳಿಸಿದ ಭಾರತದ ಹಾಕಿ ತಂಡದ ಭಾಗವಾಗಿದ್ದರು. ಅವರ ಹೆಸರಿನಲ್ಲಿ ಪ್ರತಿ ವರ್ಷ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಖೇಲ್ ರತ್ನ ಪ್ರಶಸ್ತಿಯನ್ನು ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಕರಣ ಮಾಡಿ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಿಂದ ಪ್ರಶಸ್ತಿ ನೀಡುವ ಮೂಲಕ ಧ್ಯಾನ್ ಚಂದ್ ಅವರ ಸಾಧನೆಗೆ ಹೆಚ್ಚಿನ ಗೌರವ ನೀಡಿದೆ ಎಂದರು. ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಅಲ್ಲ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ

    ಬೆಂಗಳೂರಿನ ಅಕ್ಕಿತಿಮ್ಮಯ್ಯ ಹಾಕಿ ಕ್ರೀಡಾಂಗಣದಲ್ಲಿ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಸಚಿವರು, ಕ್ರೀಡೆಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಕೇಂದ್ರ ಸ್ಥಾಪಿಸುತ್ತಿದ್ದೇವೆ. ಪ್ರತಿ ತಾಲೂಕಿನಲ್ಲೂ ಕ್ರೀಡಾಂಗಣ ನಿರ್ಮಿಸುತ್ತಿದ್ದೇವೆ. ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪಿಸುತ್ತಿದ್ದೇವೆ. ಆ ಮೂಲಕ ಕ್ರೀಡೆಗೆ, ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯ ನೀಡುತ್ತಿದ್ದೇವೆ. ಮುಂದಿನ ಒಲಿಂಪಿಕ್ಸ್‌ಗೆ ರಾಜ್ಯದಿಂದ 75 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಅದಕ್ಕಾಗಿ ಅಮೃತ ಕ್ರೀಡಾ ದತ್ತು ಯೋಜನೆ ಜಾರಿಗೆ ತಂದಿದ್ದೇವೆ. ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರತಿ ದಿನ ಒಂದು ಗಂಟೆ ಕ್ರೀಡೆಗೆ ಮೀಸಲಿಡುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಸಹ ಹಿಂದೆಂದೂ ನೀಡದಂತಹ ಪ್ರೋತ್ಸಾಹವನ್ನು ಕ್ರೀಡೆಗೆ ನೀಡುತ್ತಿದೆ. ಕ್ರೀಡಾಪಟುಗಳು ಸತತ ಅಭ್ಯಾಸ ನಡೆಸಿ, ಪದಕ ಗಳಿಸುವತ್ತ ಗಮನ ಹರಿಸಲಿ. ಎಲ್ಲಾ ರೀತಿಯ ಪ್ರೋತ್ಸಾಹ ಸರ್ಕಾರ ನೀಡುತ್ತದೆ ಎಂದು ಮಾಹಿತಿ ಹಂಚಿಕೊಂಡರು.

    ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ಪ್ರಾಧಿಕಾರ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ಕ್ರೀಡಾ ದಿನಾಚರಣೆಯಲ್ಲಿ ಸಚಿವರು ಪಾಲ್ಗೊಂಡರು. ವಿವಿಧ ವಯೋಮಾನದವರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಸಚಿವರು ಪದಕ ಪ್ರದಾನ ಮಾಡಿದರು. ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಾಕಿ ಪಂದ್ಯಾವಳಿಯನ್ನು ಸಚಿವರು ಉದ್ಘಾಟಿಸಿದರು. ಇದೇ ವೇಳೆ ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾಗಿರುವ ಅಂಕಿತ ಅವರನ್ನು ಸನ್ಮಾನಿಸಲಾಯಿತು. ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಧರಿಸಿದ ವಾಚ್ ಬೆಲೆ ಕೇಳಿ ದಂಗಾದ ಅಭಿಮಾನಿಗಳು

    ರಾಜ್ಯ ಒಲಿಂಪಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜು, ಕ್ರೀಡಾ ಪ್ರಾಧಿಕಾರದ ಪ್ರಮುಖರು, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್, ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರುಗುಂದೆ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

  • ಒಲಿಂಪಿಕ್ಸ್ ಡೋಪಿಂಗ್ ಪರೀಕ್ಷೆ- 18 ಅಥ್ಲೀಟ್ಸ್ ಅನರ್ಹ

    ಒಲಿಂಪಿಕ್ಸ್ ಡೋಪಿಂಗ್ ಪರೀಕ್ಷೆ- 18 ಅಥ್ಲೀಟ್ಸ್ ಅನರ್ಹ

    ಟೋಕಿಯೋ: ಜಪಾನ್‍ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನಲ್ಲಿ ಡೋಪಿಂಗ್ ಪರೀಕ್ಷೆಯಲ್ಲಿ 18 ಅಥ್ಲೀಟ್ಸ್ ಗಳು ಅನರ್ಹರಾಗಿದ್ದಾರೆ. ಈಗಾಗಲೇ ಪದಕ ಜಯಿಸಿದವರು ಕೂಡ ಡೋಪಿಂಗ್ ಪರೀಕ್ಷೆಯಲ್ಲಿ ಅನರ್ಹರಾದ ಬಗ್ಗೆ ವರದಿಯಾಗಿದೆ.

    ಪ್ರಮುಖವಾಗಿ ಸ್ವಿಸ್ ಓಟಗಾರ ಅಲೆಕ್ಸ್ ವಿಲ್ಸನ್ ಅನರ್ಹವಾಗಿರುವ ಬಗ್ಗೆ ವರದಿಯಾಗಿದ್ದು, ಅಲೆಕ್ಸ್ ವಿಲ್ಸನ್ ಮೂಲತಃ ಜಮೈಕಾದವರಾಗಿದ್ದು ಪ್ರಸ್ತುತ ಸ್ವಿಸ್ ಪರವಾಗಿ ವೇಗದ ಓಟದ ವಿಭಾಗದಲ್ಲಿ ಪ್ರತಿನಿದಿಸುತ್ತಿದ್ದರು. ಆದರೆ ಇದೀಗ ಒಲಿಂಪಿಕ್ಸ್ ಸಮಿತಿ ನಡೆಸಿದ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲರಾಗಿ ಕೂಟದಿಂದ ಹೊರ ಬಿದ್ದಿದ್ದಾರೆ. ಇದನ್ನೂ ಓದಿ: ಒಲಿಂಪಿಕ್ಸ್ ಕ್ರೀಡಾಪಟುಗಳು ಗೆದ್ದ ಪದಕವನ್ನು ಕಚ್ಚಲು ಇದು ಅಸಲಿ ಕಾರಣ!

    ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತದ ಪರ ಪದಕ ಭರವಸೆ ಮೂಡಿಸಿದ್ದ ಮಹಿಳಾ ಬಾಕ್ಸರ್ ಮೇರಿ ಕೋಮ್ ಪ್ರೀ ಕ್ವಾರ್ಟರ್ ಫೈನಲ್‍ನಲ್ಲಿ ಹೊರ ಬಿದ್ದಿದ್ದಾರೆ. 51 ಕೆಜಿ ವಿಭಾಗದಲ್ಲಿ ಕೊಲಂಬಿಯಾದ ಇಂಗ್ರಿಟ್ ವೆಲೆನ್ಸಿಯಾ ವಿರುದ್ಧ 16 ಸುತ್ತು ಸೆಣಸಿ, 2-3 ಅಂತರದಲ್ಲಿ ಸೋಲನ್ನಪ್ಪಿದ್ದಾರೆ. ಇನ್ನುಳಿದಂತೆ ಪುರುಷರ ಹಾಕಿ ತಂಡ ಅರ್ಜೇಂಟೀನಾ ವಿರುದ್ಧ 3-1 ಗೋಲ್‍ಗಳಿಂದ ಜಯಿಸಿ ಕ್ವಾರ್ಟರ್ ಫೈನಲ್‍ಗೆ ಲಗ್ಗೆ ಇಟ್ಟಿದೆ. ಆದರೆ, ಮಹಿಳೆಯರ ತಂಡ ಬ್ರಿಟನ್ ವಿರುದ್ಧ 1-4 ಗೋಲ್‍ಗಳಿಂದ ಸೋಲಪ್ಪಿ ನಿರಾಸೆ ಅನುಭವಿಸಿದೆ.

    ಬ್ಯಾಡ್ಮಿಂಟನ್‍ನಲ್ಲಿ ಪಿವಿ ಸಿಂಧೂ, 91 ಕೆಜಿ ವಿಭಾಗದ ಬಾಕ್ಸಿಂಗ್‍ನಲ್ಲಿ ಸತೀಶ್‍ಕುಮಾರ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಶೂಟಿಂಗ್‍ನಲ್ಲಿ ಮನು ಬಾಕರ್, ಆರ್ಚರಿಯಲ್ಲಿ ಅತನುದಾಸ್ ಪ್ರೀ ಕ್ವಾರ್ಟರ್ ಫೈನಲ್ ತಲುಪಿದ್ದು, ಭಾರತಕ್ಕೆ ಪದಕ ಭರವಸೆ ಮೂಡಿಸಿದ್ದಾರೆ.

  • ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಸಂಭ್ರಮ – ಮೀರಾಬಾಯಿ ಚಾನುವಿಗೆ ಬೆಳ್ಳಿ!

    ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಸಂಭ್ರಮ – ಮೀರಾಬಾಯಿ ಚಾನುವಿಗೆ ಬೆಳ್ಳಿ!

    ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೊದಲ ದಿನವೇ ಭಾರತ ಶುಭಾರಂಭ ಮಾಡಿದೆ. 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟಿದ್ದಾರೆ.

    ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದರು.

    84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು.

    ಇದು ಒಲಿಂಪಿಕ್ಸ್ ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.

    ಮಣಿಪುರದ ಚಾನು ಬೆಳ್ಳಿ ಪದಕ ಪಡೆಯುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್ ಆದ್ರು. ಮೀರಾಬಾಯಿ ಚಾನು ಹೆಸರು ಟ್ವಿಟ್ಟರ್‍ನಲ್ಲಿ ಟ್ರೆಂಡ್ ಆಗಲು ಶುರುವಾಯಿತು. ಮೀರಾಬಾಯಿ ಸಾಧನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲಾದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

  • ಟೋಕಿಯೋ ಒಲಿಂಪಿಕ್ಸ್‌ಗೆ ರೈಲ್ವೇ ಕಲೆಕ್ಟರ್ ಆಯ್ಕೆ

    ಟೋಕಿಯೋ ಒಲಿಂಪಿಕ್ಸ್‌ಗೆ ರೈಲ್ವೇ ಕಲೆಕ್ಟರ್ ಆಯ್ಕೆ

    ಚೆನ್ನೈ: ಟೋಕಿಯೋ ಒಲಿಂಪಿಕ್ಸ್‌ಗೆ ದಕ್ಷಿಣ ರೈಲ್ವೇ ಟಿಕೆಟ್ ಕಲೆಕ್ಟರ್ ರೇವತಿ ಆಯ್ಕೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಜುಲೈ 23ರಿಂದ ಆರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗೆ ತಮಿಳುನಾಡಿನ ಮಧುರೈ ಮೂಲದ ರೇವತಿ ವೀರಮಣೆ ಆಯ್ಕೆಯಾಗಿದ್ದಾರೆ. ಸದ್ಯ ರೇವತಿ ದಕ್ಷಿಣ ರೈಲ್ವೇ ಟಿಕೆಟ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಲಿಂಪಿಕ್ಸ್‌ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇದನ್ನೂ ಓದಿ:  ಅಂದು ಬೆಸ್ಟ್ ಫ್ರೆಂಡ್ ಹೆಂಡ್ತಿಯಾದ್ರು, ಇಂದು ಪತ್ನಿಯೇ ಬೆಸ್ಟ್ ಫ್ರೆಂಡ್: ರಮೇಶ್

    ಇದಕ್ಕೂ ಮೊದಲು 1988 ರಲ್ಲಿ ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ನಡೆದ ಒಲಿಂಪಿಕ್ಸ್‍ನಲ್ಲಿ ಮಧುರೈ ಅಥ್ಲೀಟ್ ತಿರುಗ್ನಾನದುರೈ 4100 ಮೀಟರ್ ಪುರುಷರ ವಿಭಾಗದಲ್ಲಿ ಭಾಗವಹಿಸಿದ್ದರು. ರೇವತಿ ವೀರಮಣಿ ರಿಲೇಯಲ್ಲಿ ಭಾಗವಹಿಸಿದ್ದಾರೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

    ರೇವತಿಗೆ ಸುಮಾರು ಆರು ವರ್ಷ ವಯಸ್ಸಾಗಿದ್ದಾಗ, ಆಕೆಯ ತಂದೆ ಅನಾರೋಗ್ಯದಿಂದ ನಿಧನರಾದರು ಮತ್ತು ಅವರ ತಾಯಿ ಎಂಟು ತಿಂಗಳ ನಂತರ ನಿಧನರಾದರು. ನಂತರ ರೇವತಿ ಮತ್ತು ಆಕೆಯ ತಂದೆ ರೇಖಾ ಅಜ್ಜಿಯ ಜೊತೆಗೆ ಸಕ್ಕಿಮಂಗಲಂನಲ್ಲಿ ವಾಸವಾಗಿದ್ದಾರೆ.

    ರೇವತಿ ಶಾಲಾ ದಿನಗಳಲ್ಲಿ ಅಥ್ಲೆಟಿಕ್ಸ್ ಬಗ್ಗೆ ಆಸಕ್ತಿ ವಹಿಸಿದಳು ಮತ್ತು ತನ್ನ ಹಾಸ್ಟೆಲ್ ವಾರ್ಡನ್‍ಗಳ ಪ್ರೇರಣೆಯಿಂದ ರೇಸ್ ಕೋರ್ಸ್ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದಳು. 2015 ರಲ್ಲಿ ಪಿಯುಸಿಯಲ್ಲಿದ್ದಾಗ ರೇವತಿ ಪ್ರತಿಭೆಯನ್ನು ಗುರುತಿಸಿದೆ. ನಾನು ಒಬ್ಬ ಕ್ರೀಡಾಪಟುವನ್ನು ದೇಶವನ್ನು ಪ್ರತಿನಿಧಿಸಲು ಒಲಿಂಪಿಕ್ಸ್‌ಗೆ ಕಳುಹಿಸುವ ಗುರಿಯನ್ನು ಹೊಂದಿದ್ದೇನೆ ಎಂದು ರೇವತಿಯ ಕೋಚ್ ಕೆ ಕಣ್ಣನ್ ಅವರು ಹೇಳಿದ್ದಾರೆ.

    ರೇವತಿ ಅವರನ್ನು ದೂರವಾಣಿ ಮೂಲಕ ಅಭಿನಂದಿಸಿದ ವಾಣಿಜ್ಯ ತೆರಿಗೆ ಮತ್ತು ಮಧುರೈ ಪೂರ್ವ ಶಾಸಕ ಪಿ ಮೂರ್ತಿ ಅವರು ಆಕೆಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಹೇಳಿದರು. ಹಣಕಾಸು ಸಚಿವ ಮತ್ತು ಮಧುರೈ ಕೇಂದ್ರ ಶಾಸಕ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಮತ್ತು ಮಧುರೈ ಸಂಸದ ಎಸ್.ವೆಂಕಟೇಶನ್ ಟ್ವೀಟ್ ಮಾಡಿ ಕ್ರೀಡಾಪಟುವಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ:  ಜು.12 ರಂದು ಯಾರೂ ಮನೆಯ ಬಳಿ ಬರಬೇಡಿ: ಶಿವಣ್ಣ ಮನವಿ

    ಈ ನಡುವೆ ಮತ್ತೊಬ್ಬ ಸ್ಟಾರ್ ಆಟಗಾರ್ತಿ ಅಥ್ಲಿಟ್ ಹಿಮಾದಾಸ್ ಒಲಿಂಪಿಕ್ಸ್‌ ನಿಂದ ಹೊರಗುಳಿದಿದ್ದಾರೆ. ಕಳೆದ ತಿಂಗಳು ನಡೆದಿದ್ದ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 100 ಮೀಟರ್ ಓಟದ ವೇಳೆ ಹಿಮಾ ದಾಸ್ ಮಂಡಿ ನೋವಿನಿಂದ ಬಳಲಿದ್ದರು. ಈಗ ಗಾಯದ ಸಮಸ್ಯೆಯಿಂದಲೇ ಅವರು ಒಲಿಂಪಿಕ್ಸ್ ಕ್ರೀಡಾಕೂಡದಿಂದ ಹೊರಗೆ ಉಳಿದಿದ್ದಾರೆ.

  • ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಸುಶೀಲ್ ಕುಮಾರ್ ಬಂಧನ

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಸುಶೀಲ್ ಕುಮಾರ್ ಬಂಧನ

    ನವದೆಹಲಿ: ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ಸ್ ಗೇಮ್ಸ್ ನಲ್ಲಿ ಭಾರತದ ಪರ ಎರಡು ಬಾರಿ ಪದಕ ಗೆದ್ದಿದ್ದ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಬಂಧಿಸಲಾಗಿದೆ.

    ಕಳೆದ 20ದಿನಗಳಿಂದ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ಅವರನ್ನು ಇಂದು ದೆಹಲಿ ವಿಶೇಷ ಪೊಲೀಸ್ ತಂಡ ಬಂಧಿಸಿದೆ. ಈ ಕುರಿತು ಅಧಿಕೃತವಾಗಿ ತಿಳಿಸಿರುವ ದೆಹಲಿ ಪೊಲೀಸರು, ಸುಶೀಲ್ ಕುಮಾರ್ ಮತ್ತು ಸಹಚರನನ್ನು ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4 ರಂದು ಸಾಗರ್ ರಾಣಾ ಕೊಲೆಯಾಗಿದ್ದರು. ಬಳಿಕ ಸುಶೀಲ್ ಹಾಗೂ ಸಾಗರ್ ರಾಣಾ ನಡುವಣ ಘರ್ಷಣೆಯಲ್ಲಿ ಸಾಗರ್ ಹತ್ಯೆಗೀಡಾಗಿದ್ದರು ಎಂದು ವರದಿಯಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ರನ್ನು ಬಂಧಿಸಲು ಪೊಲೀಸರು ತೀವ್ರ ಪ್ರಯತ್ನ ನಡೆಸುತ್ತಿದ್ದರು. ನಂತರ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು. ಪೊಲೀಸರು ಸುಶೀಲ್ ಕುಮಾರ್ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ, ಆತನ ಸಹಚರ ಅಜಯ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 50,000 ರೂ ಬಹುಮಾನ ಕೂಡ ಘೋಷಿಸಿದ್ದರು.

    ಇದಾದ ಬಳಿಕ ಮೇ 18ರಂದು ಸುಶೀಲ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ರೋಹಿಣಿ ನ್ಯಾಯಾಲಯ ವಜಾಗೊಳಿಸಿತ್ತು. ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಸುಶೀಲ್ ಕುಮಾರ್ ಮತ್ತು ಅವರ ಸ್ನೇಹಿತನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಸುಶೀಲ್ ಕುಮಾರ್ 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚು ಮತ್ತು 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜಯಿಯಾಗಿದ್ದರು.

  • ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ಆಯೋಜನೆ

    ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ಆಯೋಜನೆ

    ಶಿವಮೊಗ್ಗ: ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನವೆಂಬರ್ 23 ರಿಂದ 30 ರವರೆಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದೆ.

    ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾಗಿ ಈಶ್ವರಪ್ಪ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಈ ರೀತಿಯ ರಾಜ್ಯಮಟ್ಟದ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದ್ದು ಇದು ಜಿಲ್ಲೆಯ ಅಭಿವೃದ್ಧಿ ಜೊತೆಗೆ ಕ್ರೀಡಾಪಟುಗಳ ಉತ್ತೇಜನಕ್ಕೆ ಸಹಕಾರಿಯಾಗಿದೆ. ಈ ಕ್ರೀಡಾಕೂಟವು ಶಿವಮೊಗ್ಗದ ನೆಹರೂ ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ ಸೇರಿದಂತೆ, ನಗರದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಸಲು ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

    ಕ್ರೀಡಾಕೂಟದ ಯಶಸ್ವಿ ಅಯೋಜನೆಗೆ ಸಾರ್ವಜನಿಕ ಸಂಘ-ಸಂಸ್ಥೆಗಳಿಗೆ ಕೈ ಜೋಡಿಸಲು ಮನವಿ ಕೂಡ ಮಾಡಿಕೊಳ್ಳಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳ ವಸತಿ ಊಟ ಉಪಹಾರ ಮತ್ತು ಸಾರಿಗೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಹಾಗು ಎಲ್ಲಾ ಕ್ರೀಡಾ ಸಂಸ್ಥೆಗಳು ಸಕ್ರಿಯವಾಗಿ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಕೈ ಜೋಡಿಸಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

    ಇದೇ ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ಈ ಒಲಿಂಪಿಕ್ ಕ್ರೀಡಾಕೂಟ ಆಯೋಜಿಸಲಾಗಿದ್ದು ಈ ಕ್ರೀಡಾಕೂಟದಲ್ಲಿ, ಒಟ್ಟು 25 ವಿವಿಧ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಸುಮಾರು 4 ಸಾವಿರ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಶಿವಮೊಗ್ಗ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಕೆಲವು ಸ್ಪರ್ಧೆಗಳನ್ನು ಆಯೋಜಿಸಲು ಕೂಡ ಉದ್ದೇಶಿಸಲಾಗಿದೆ.

    ಈ ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಸ್ವಿಮ್ಮಿಂಗ್, ರೆಸ್ಲಿಂಗ್, ಆರ್ಚರಿ, ಫೆನ್ಸಿಂಗ್, ಸೈಕ್ಲಿಂಗ್, ಜೂಡೋ, ಹಾಕಿ, ಬಾಲ್ ಬ್ಯಾಡ್ಮಿಂಟನ್, ನೆಟ್ಬಾಲ್ ಬ್ಯಾಡ್ಮಿಂಟನ್ ಸೇರಿದಂತೆ 25 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ನಗರದ ನೆಹರು ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ, ಕ್ರೀಡಾ ಸಂಕೀರ್ಣ, ಸೇರಿದಂತೆ ವಿವಿಧ ಕಾಲೇಜುಗಳ ಕ್ರೀಡಾಂಗಣಗಳಲ್ಲಿ ಹಲವು ಸ್ಪರ್ಧೆಗಳನ್ನ ಆಯೋಜಿಸಲು ತೀರ್ಮಾನಿಸಲಾಗಿದೆ.