Tag: om prakash

  • ನಿವೃತ್ತ ಡಿಜಿಪಿ ಬರ್ಬರ ಹತ್ಯೆ – ತಂಗಿಯರಿಗೆ ಆಸ್ತಿ ಕೊಟ್ಟಿದ್ದಕ್ಕೆ ನಡೀತಾ ಕೊಲೆ?

    ನಿವೃತ್ತ ಡಿಜಿಪಿ ಬರ್ಬರ ಹತ್ಯೆ – ತಂಗಿಯರಿಗೆ ಆಸ್ತಿ ಕೊಟ್ಟಿದ್ದಕ್ಕೆ ನಡೀತಾ ಕೊಲೆ?

    – ತಂಗಿಯರ ವಿಚಾರಕ್ಕೆ ಬರಬೇಡ ಎಂದು ಪತ್ನಿಗೆ ಎಚ್ಚರಿಕೆ ಕೊಟ್ಟಿದ್ರಾ ಓಂ ಪ್ರಕಾಶ್?

    ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಂಗಿಯರಿಗೆ ಆಸ್ತಿ ಕೊಟ್ಟಿದ್ದಕ್ಕೆ ಕೊಲೆ ನಡೆಯಿತೆ ಎಂಬ ಅನುಮಾನ ಮೂಡಿದೆ.

    ಓಂ ಪ್ರಕಾಶ್ ಅವರಿಗೆ ಸೇರಿದ ಎರಡು ಮನೆ ಬೆಂಗಳೂರಿನಲ್ಲಿ ಇದೆ. ಕಾವೇರಿ ಜಂಕ್ಷನ್‌ನ ಪ್ರೆಸ್ಟೀಜ್ ಅಪಾರ್ಟ್ಮೆಂಟ್‌ನಲ್ಲಿ ಫ್ಲಾಟ್ ಇದೆ. ಹೆಚ್‌ಎಸ್‌ಆರ್ ಲೇಔಟ್‌ನ ಐಪಿಎಸ್ ಕ್ವಾಟ್ರಸ್‌ನಲ್ಲಿ ಮನೆ ಇವೆ. ಮನೆಯಲ್ಲಿ ಗಲಾಟೆ ಆದಾಗ ಪ್ರೆಸ್ಟೀಜ್ ಅಪಾರ್ಟ್ಮೆಂಟ್‌ನಲ್ಲಿ ಓಂ ಪ್ರಕಾಶ್ ವಾಸ ಇರುತ್ತಿದ್ದರು.

    ದಾಂಡೇಲಿಯ ಆಸ್ತಿ ವಿಚಾರಕ್ಕೆ ಐಪಿಎಸ್ ಅಧಿಕಾರಿಯ ಹತ್ಯೆ ಆಗಿದೆಯಾ ಎಂಬ ಅನುಮಾನ ಪೊಲೀಸರಲ್ಲಿ ಮೂಡಿದೆ. ತಂಗಿಯರ ಹೆಸರಿಗೆ ಓಂ ಪ್ರಕಾಶ್ ಪ್ರಾಪರ್ಟಿ ಮಾಡಿದ್ದರು. ತಂಗಿಯರ ಹೆಸರಿಗೆ ಯಾಕೆ ಆಸ್ತಿ ಮಾಡಿದ್ದೀರಾ ಅನ್ನೋ ವಿಚಾರಕ್ಕೆ ಹಲವು ದಿನಗಳಿಂದ ಗಲಾಟೆ ನಡೆದಿತ್ತು ಎನ್ನಲಾಗಿದೆ. ತಂಗಿಯರ ವಿಚಾರ ಮಾತಾಡಬೇಡ ಎಂದು ಈ ಹಿಂದೆ ಪತ್ನಿಗೆ ಎಚ್ಚರಿಕೆ ಕೊಟ್ಟಿದ್ದರು ಎನ್ನಲಾಗಿದೆ.

    ಆಸ್ತಿ ವಿಚಾರಕ್ಕೆ ಪತ್ನಿ ಜೊತೆ ಪದೇ ಪದೆ ಜಗಳ ಆಗುತ್ತಿತ್ತಾ ಎಂಬ ಪ್ರಶ್ನೆ ಮೂಡಿದೆ. ಕೊಲೆ ಪ್ರಕರಣ ಸಂಬಂಧ ಓಂ ಪ್ರಕಾಶ್ ಪತ್ನಿ ಹಾಗೂ ಪುತ್ರಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • ನಿವೃತ್ತ IPS ಅಧಿಕಾರಿಗೆ 10 ಬಾರಿ ಚಾಕುವಿನಿಂದ ಇರಿದು ಕೊಂದ ಪತ್ನಿ; 15 ನಿಮಿಷ ನರಳಿ ಪ್ರಾಣಬಿಟ್ಟ ಓಂ ಪ್ರಕಾಶ್‌

    ನಿವೃತ್ತ IPS ಅಧಿಕಾರಿಗೆ 10 ಬಾರಿ ಚಾಕುವಿನಿಂದ ಇರಿದು ಕೊಂದ ಪತ್ನಿ; 15 ನಿಮಿಷ ನರಳಿ ಪ್ರಾಣಬಿಟ್ಟ ಓಂ ಪ್ರಕಾಶ್‌

    – ಪತಿ ನರಳಾಟ ನೋಡುತ್ತಾ ನಿಂತಿದ್ದ ಹೆಂಡತಿ

    ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಬರ್ಬರ ಕೊಲೆಯಾಗಿದೆ. ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಪತ್ನಿ ಪಲ್ಲವಿ ಅವರೇ ಓಂ ಪ್ರಕಾಶ್‌ಗೆ ಚಾಕುವಿನಿಂದ 8-10 ಬಾರಿ ಎದೆ, ಹೊಟ್ಟೆ ಭಾಗಕ್ಕೆ ಇರಿದು ಕೊಂದಿದ್ದಾರೆ.

    ಈ ವೇಳೆ, ಸುಮಾರು 10-15 ನಿಮಿಷ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ (Om Prakash) ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಈ ವೇಳೆ ಗಂಡನ ನರಳಾಟ ನೋಡುತ್ತಾ ಪತ್ನಿ ನಿಂತಿದ್ದರು. ಕೆಳಗಿನ ಮಹಡಿಯ ಹಾಲ್ ಸಂಪೂರ್ಣ ರಕ್ತಸಿಕ್ತವಾಗಿತ್ತು. ಸ್ಥಳ ಮಹಜರು ನಡೆಸಿದ ಪೊಲೀಸರು, ಪತ್ನಿ ಪಲ್ಲವಿ, ಮಗಳನ್ನು ವಶಕ್ಕೆ ಪಡೆದ್ದಾರೆ. ಇದನ್ನೂ ಓದಿ: ರಾಜ್ಯದ 38ನೇ ಡಿಜಿ & ಐಜಿಪಿ ಆಗಿದ್ದ ಓಂ ಪ್ರಕಾಶ್‌ ಹತ್ಯೆ – ಪತ್ನಿಯಿಂದಲೇ ಕೊಲೆ

    ಸ್ಥಳದಲ್ಲೇ ಇದ್ದ ಚಾಕು ಸೀಜ್ ಮಾಡಿದ್ದಾರೆ. ಸೊಸೆ, ಮಗ ಊಟಕ್ಕೆ ಹೊರಗಡೆ ಹೋದಾಗ ತಾಯಿ ಪಲ್ಲವಿ, ಮಗಳು ಕೃತಿಕಾ ಜೊತೆ ಸೇರಿ ಕೊಂದಿದ್ದಾರೆ. ಘಟನೆ ಬೆನ್ನಲ್ಲೇ ಡಿಜಿ ಅಲೋಕ್‌ಮೋಹನ್, ಬೆಂಗಳೂರು ಕಮಿಷನರ್ ದಯಾನಂದ್ ಸೇರಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಓಂ ಪ್ರಕಾಶ್ ದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರದ ಚಂಪಾರಣ್ ಮೂಲದ ಓಂ ಪ್ರಕಾಶ್ 1981ನೇ ಕೇಡರ್‌ನ ಐಪಿಎಸ್ ಅಧಿಕಾರಿ, ರಾಷ್ಟçಪತಿಗಳ ಪದಕ ಪಡೆದಿದ್ದರು. 2015ರಲ್ಲಿ 3 ವರ್ಷ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿದ್ದರು. ಇದನ್ನೂ ಓದಿ: ಭಾರೀ ಗಾಳಿ ಮಳೆ – ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾರಿಗೆ ನೌಕರ ದುರ್ಮರಣ

  • ʻನಟಭಯಂಕರʼ ಸಿನಿಮಾ ಬಗ್ಗೆ ಓಂ ಪ್ರಕಾಶ್‌ ರಾವ್‌ ಮಾತು

    ʻನಟಭಯಂಕರʼ ಸಿನಿಮಾ ಬಗ್ಗೆ ಓಂ ಪ್ರಕಾಶ್‌ ರಾವ್‌ ಮಾತು

     

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k