Tag: Om Saiprakash

  • ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

    ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

    ತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ (Om Saiprakash) ಅವರ ನಿರ್ದೇಶನ ಹಾಗೂ ನಿರ್ಮಾಣದ `ಸೆಪ್ಟೆಂಬರ್ 10′ (September‌ 10) ಚಿತ್ರವು ಬಿಡುಗಡೆಗೂ ಮುನ್ನವೇ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.

    ಎಲ್ಲಾ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ ಎಂಬ ಸಂದೇಶ ಹೊತ್ತು ತೆರೆಗೆ ಬರುತ್ತಿರುವ ಸೆಪ್ಟೆಂಬರ್ 10 ಚಲನಚಿತ್ರಕ್ಕೆ ಇದೀಗ ಯುನಿವರ್ಸಲ್ ಫಿಲಂ ಮೇಕರ್ಸ್ ಕೌನ್ಸಿಲ್ ಹಾಗೂ ಜೆನಸಿಸ್ ಅಲ್ಟಿಮಾ ದುಬೈನ ಸಹಯೋಗದೊಂದಿಗೆ ನಡೆಯುತ್ತಿರುವ ಹೈದರಾಬಾದ್‌ನ ಚಾರ್ ಮಿನಾರ್ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗಳಿಸಿದೆ. ಇದನ್ನೂ ಓದಿ: ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ

    ಹೈದರಾಬಾದ್‌ನ ಪ್ರಸಾದ್ ಫಿಲಂ ಲ್ಯಾಬ್‌ನಲ್ಲಿ ಜುಲೈ 26, 27ರಂದು ನಡೆಯುತ್ತಿರುವ ಕಾರ್ಯಕ್ರಮದಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಓಂ ಸಾಯಿಪ್ರಕಾಶ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಡಾ.ಎಸ್.ರಾಜು ಅವರು ಬೆನ್ನೆಲುಬಾಗಿ ನಿಂತು ಬಿಡುಗಡೆಗೆ ತಮ್ಮ ಸಹಕಾರ ನೀಡುತ್ತಿದ್ದಾರೆ. ಇದನ್ನೂ ಓದಿ: ಹೊಳೆನರಸೀಪುರ‌ ರೇಪ್ ಕೇಸ್ – 2ನೇ ಬಾರಿಯೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

    ಈ ಬಗ್ಗೆ ನಿರ್ದೇಶಕ ಸಾಯಿಪ್ರಕಾಶ್ ಮಾತನಾಡಿ, ನಾನು 2020ರಲ್ಲಿ ಸೆಪ್ಟೆಂಬರ್ 10 ಸಿನಿಮಾ ಪ್ರಾರಂಭ ಮಾಡಿದೆ. ಅಷ್ಟರಲ್ಲಿ ಕೊರೋನಾ ಬಂದಿದ್ದರಿಂದ ರಿಲೀಸ್ ಮಾಡಲಾಗಲಿಲ್ಲ. ಈಗ ಎಲ್ಲರ ಸಹಕಾರದಿಂದ ಬಿಡುಗಡೆ ಮಾಡಲು ಹೊರಟಿದ್ದೇನೆ. ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುತ್ತೇನೆ. ಅದಕ್ಕೂ ಮುನ್ನ ಚಿತ್ರಕ್ಕೆ ಪ್ರಶಸ್ತಿ ದೊರೆತಿದೆ ಎಂದು ಹೇಳಿದರು.

    ನಟಿ ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೆಜಿ.ಕೃಷ್ಣ ಚಿತ್ರದ ಛಾಯಾಗ್ರಾಹಕರು, ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನ ಹೊರತಂದಿದೆ.

  • ಸಂಕ್ರಾಂತಿ ದಿನದಂದು ‘ಶಭ್ಬಾಷ್’ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ ಓಂ ಸಾಯಿಪ್ರಕಾಶ್

    ಸಂಕ್ರಾಂತಿ ದಿನದಂದು ‘ಶಭ್ಬಾಷ್’ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ ಓಂ ಸಾಯಿಪ್ರಕಾಶ್

    ರುದ್ರಶಿವ (Rudrashiva) ನಿರ್ದೇಶನದಲ್ಲಿ ಮೂಡಿ ಬರಲಿರುವ `ಶಭ್ಬಾಷ್’ (Sabhbash) ಚಿತ್ರದ ಮುಹೂರ್ತ ಸಮಾರಂಭ ಸಂಕ್ರಾಂತಿ ದಿನದಂದು ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ (Om Saiprakash) ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ.

    ಮುಹೂರ್ತದ ನಂತರ ಚಿತ್ರತಂಡ ಸುದ್ದಿಗೋಷ್ಟಿಯಲ್ಲಿ ಚಿತ್ರತಂಡ `ಶಭ್ಬಾಷ್’ ಕುರಿತಾದ ಒಂದಷ್ಟು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದೆ. ಪ್ರಧಾನವಾಗಿ ಈ ಹಂತದಲ್ಲಿ ನಿರ್ದೇಶಕ ರುದ್ರಶಿವ ಶೀರ್ಷಿಕೆಯ ಒಳಾರ್ಥವನ್ನು ಸಮರ್ಥವಾಗಿ ತೆರೆದಿಡುವ ಪ್ರಯತ್ನ ಮಾಡಿದ್ದಾರೆ. ಸಾಮಾನ್ಯವಾಗಿ ಮಹತ್ತರವಾದುದನ್ನು ಸಾಧಿಸಿದಾಗ, ಮೆಚ್ಚುವಂತೆ ನಡೆದುಕೊಂಡಾಗ ಶಭ್ಬಾಷ್ ಗಿರಿಯ ಮೂಲಕ ಮೆಚ್ಚಿಕೊಳ್ಳಲಾಗುತ್ತೆ. ಹಾಗಾದರೆ, ಈ ಸಿನಿಮಾ ನಾಯಕ ಶಭ್ಬಾಷ್ ಅನ್ನಿಸಿಕೊಳ್ಳುವಂಥಾ ಯಾವ ಕೆಲಸ ಮಾಡುತ್ತಾನೆ? ಯಾವ ಥರದ ಕಥೆ ಇದರ ಸುತ್ತ ಚಲಿಸುತ್ತದೆಂಬುದು ಈ ಸಿನಿಮಾ ಜೀವಾಳ. ಅಂದಹಾಗೆ, `ಹೊಡಿರೋ ಸೆಲ್ಯೂಟ್’ ಎಂಬ ಅಡಿ ಬರಹ ಹೊಂದಿರುವ ಶಭ್ಬಾಷ್, ಆಕ್ಷನ್ ಡ್ರಾಮಾ ಜಾನರಿನ ಸಿನಿಮಾ.

    ಶಭ್ಬಾಷ್ ಮೂಲಕ ರುದ್ರಶಿವ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಏಸ್ 22 (ACE 22) ಬ್ಯಾನರಿನಡಿಯಲ್ಲಿ ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ದಶಕಗಳಿಗೂ ಹೆಚ್ಚು ಕಾಲ ದಿಗ್ಗಜ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ, ಒಂದೊಳ್ಳೆ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರಂತೆ. ಶಿವಮಣಿ, ಅಯ್ಯಪ್ಪ ಶರ್ಮಾ, ಪಲ್ಲಕ್ಕಿ ರಾಧಾಕೃಷ್ಣರಂಥಾ ನಿರ್ದೇಶಕರೊಂದಿಗೆ ಕಾರ್ಯ ನಿರ್ವಹಿಸಿದ್ದ ರುದ್ರಶಿವ, ಓಂ ಸಾಯಿಪ್ರಕಾಶ್ ನಿರ್ದೇಶನದ ಗಂಗ ಎಂಬ ಚಿತ್ರದಲ್ಲಿಯೂ ಕೆಲಸ ಮಾಡಿದ್ದರು. ಈ ಮೂಲಕ ಸಾಯಿಪ್ರಕಾಶ್ ಅವರನ್ನು ಗುರುವೆಂದೇ ಪರಿಭಾವಿಸಿಕೊಂಡಿದ್ದರು. ಇದೀಗ ಓಂ ಸಾಯಿಪ್ರಕಾಶ್ ತಮ್ಮ ಶಿಷ್ಯನ ಮೊದಲ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿ ಶುಭ ಹಾರೈಸಿದ್ದಾರೆ.

    ಈ ಚಿತ್ರದಲ್ಲಿ ಶರತ್ ನಾಯಕನಾಗಿ ನಟಿಸಿದ್ದಾರೆ. ನಿಸರ್ಗ ನಾಯಕಿಯಾಗಿ ಜೊತೆಯಾಗಿದ್ದಾರೆ. ಈಗಾಗಲೇ `ಕ’ ಮತ್ತು `ಮಳೆಬಿಲ್ಲು’ ಎಂಬೆರಡು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದ ಶರತ್, ಸುದೀರ್ಘ ಕಾಲಾವಧಿಯ ನಂತರ ಶಭ್ಬಾಷ್ ಮೂಲಕ ನಾಯಕನಾಗಿ ಮರಳುತ್ತಿದ್ದಾರೆ. ಎಲ್ಲ ತಯಾರಿಗಳನ್ನೂ ಮುಗಿಸಿಕೊಂಡಿರುವ ಚಿತ್ರತಂಡ ಇಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ನೀಡಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಹದಿನೈದು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಆ ನಂತರ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

     

    ವಿಶೇಷವೆಂದರೆ, ಚಿತ್ರೀಕರಣ ಶುರುವಾಗುವ ಮುನ್ನವೇ ಶಭ್ಬಾಷ್ ನ ಆರು ಹಾಡುಗಳನ್ನು ರೂಪಿಸಲಾಗಿದೆ. ಈ ಆರೂ ಹಾಡುಗಳಿಗೆ ಮ್ಯಾಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಆಂಜನೇಯನ ಕುರಿತಾದ ಹಾಡಿಗೆ ಶಂಕರ್ ಮಹಾದೇವನ್  ಧ್ವನಿಯಾಗಿದ್ದಾರೆ.  ರವೀಂದ್ರ ಸೊರಗಾವಿ ಹಾಗೂ ಶಮಿತಾ ಮಲ್ನಾಡ್ ಕಂಠಸಿರಿಯಲ್ಲಿ ಒಂದು ಗೀತೆ, ಇಂದೂ ನಾಗರಾಜ್ ಹಾಗೂ ವ್ಯಾಸರಾಜ್ ಕಾಂಬಿನೇಷನ್ ನಲ್ಲಿ ಒಂದು ಹಾಡು, ವಿಜಯ್ ಪ್ರಕಾಶ್ ಮತ್ತು ಅನುರಾಧ್ ಭಟ್ ಧ್ವನಿಯಲ್ಲಿ ಮತ್ತೊಂದು ಸುಮಧುರ ಗೀತೆ,  ಜೋಗಿ ಪ್ರೇಮ್, ನವೀನ್ ಸಜ್ಜು ಕೂಡ ಶಭ್ಬಾಷ್ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರಂತೆ. ಸದ್ಯಕ್ಕೆ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಳ್ಳುವತ್ತ ಗಮನ ಹರಿಸಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಮತ್ತಷ್ಟು ರಸವತ್ತಾದ ವಿಚಾರಗಳನ್ನು ಪ್ರೇಕ್ಷಕರೊಂದಿಗೆ ಹಂಚಿಕೊಳ್ಳುವ ಉಮೇದಿನಲ್ಲಿದೆ.