Tag: One Election

  • ʻಒಂದು ದೇಶ, ಒಂದು ಚುನಾವಣೆʼ ಮಸೂದೆ ಲೋಕಸಭೆಯಲ್ಲಿ ಮಂಡನೆ – ಮೊದಲ ಬಾರಿಗೆ ಇ-ವೋಟಿಂಗ್‌ ಸಿಸ್ಟಂ ಬಳಕೆ!

    ʻಒಂದು ದೇಶ, ಒಂದು ಚುನಾವಣೆʼ ಮಸೂದೆ ಲೋಕಸಭೆಯಲ್ಲಿ ಮಂಡನೆ – ಮೊದಲ ಬಾರಿಗೆ ಇ-ವೋಟಿಂಗ್‌ ಸಿಸ್ಟಂ ಬಳಕೆ!

    – ವಿಪಕ್ಷಗಳಿಂದ ವಿರೋಧ – ಮಸೂದೆ ಮಂಡನೆ ಪರ 269, ವಿರುದ್ಧ 198 ಮತ

    ನವದೆಹಲಿ: ಇಡೀ ದೇಶವೇ ಕುತೂಹಲದಿಂದ ನೋಡುತ್ತಿದ್ದ ʻಒಂದು ರಾಷ್ಟ್ರ ಒಂದು ಚುನಾವಣೆʼ ಮಸೂದೆಯನ್ನು (One Nation, One Election Bill) ಕೇಂದ್ರ ಸರ್ಕಾರ ಲೋಕಸಭೆಯಲ್ಲಿ (Lok Sabha) ಮಂಡಿಸಿದೆ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

    ಮಸೂದೆ ಮಂಡನೆ ಬಳಿಕ ಉಭಯ ಸದನಗಳ ಪರಾಮರ್ಷೆಗಾಗಿ ಜಂಟಿ ಸಂಸದೀಯ ಸಮಿತಿಗೆ (JPC) ಕಳುಹಿಸಲಾಗಿದೆ. ಆದರೆ, ಇದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದನ್ನೂ ಓದಿ: Delhi Assembly Election | ಚುನಾವಣಾ ಆಯೋಗದಿಂದ ಪೂರ್ವಸಿದ್ಧತಾ ಸಭೆ – ಮುಂದಿನ ವಾರವೇ ದಿನಾಂಕ ಪ್ರಕಟ ಸಾಧ್ಯತೆ

    ಹೊಸ ಸಂಸತ್‌ ಭವನದಲ್ಲಿ ಮಸೂದೆ ಮಂಡನೆಗೆ ಇದೇ ಮೊದಲ ಬಾರಿಗೆ ಎಲೆಕ್ಟ್ರಾನಿಕ್‌ ವೋಟಿಂಗ್‌ (E Voting) ವ್ಯವಸ್ಥೆ ಬಳಕೆ ಮಾಡಲಾಯಿತು. 269 ಸದಸ್ಯರು ಪರವಾಗಿ ಮತ ಚಲಾಯಿಸಿದ್ರೆ, 198 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ನಂತರ ಕಲಾಪವನ್ನು 1 ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು. ನಂತರ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌, ಸರ್ಕಾರದ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆ, 1963, ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶದ ಕಾಯ್ದೆ, 1991 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ಅನ್ನು ದಿನದ ವೇಳಾಪಟ್ಟಿಯಂತೆ ತಿದ್ದುಪಡಿ ಮಸೂದೆ ಮಂಡಿಸಿದರು.

    ಒಂದು ದೇಶ – ಒಂದು ಚುನಾವಣೆ ಅಂದ್ರೆ ಏನು?
    ಪ್ರಮುಖವಾಗಿ ಒಂದು ದೇಶ, ಒಂದು ಚುನಾವಣೆ ಅಂದ್ರೆ ಏನು ಎಂಬುದನ್ನು ನೋಡುವುದಾದರೆ, ಹೆಸರೇ ಹೇಳುವಂತೆ ಒನ್‌ ನೇಷನ್‌ ಒನ್‌ ಎಲೆಕ್ಷನ್‌ ಅಂದ್ರೆ ರಾಷ್ಟ್ರದ ಎಲ್ಲ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಯತ್ನ. ಈಗ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬೇರೆ ಬೇರೆ ಅವಧಿಯಲ್ಲಿ ನಡೆಯುತ್ತಿದ್ದು, ಅವುಗಳನ್ನು ಏಕಕಾಲದಲ್ಲಿ ನಡೆಸಬೇಕು ಎನ್ನುವ ಉದ್ದೇಶ ಈ ಮಸೂದೆಯ ಹಿಂದಿದೆ.

    ಸ್ವಾತಂತ್ರ್ಯ ಬಂದಾಗಿನಿಂದ ವಿಧಾನಸಭೆ, ಲೋಕಸಭೆ ಸೇರಿ ಭಾರತದಲ್ಲಿ ಸುಮಾರು 400 ಚುನಾವಣೆಗಳು ನಡೆದಿವೆ. ಇದರಿಂದ ಭಾರೀ ಹಣ ಖರ್ಚಾಗುತ್ತಿದೆ. ಜೊತೆಗೆ ಪ್ರತಿ ಚುನಾವಣೆಗೂ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಹಿನ್ನೆಲೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಈ ಕಾರಣಕ್ಕಾಗಿ ಒಂದು ದೇಶ, ಒಂದು ಚುನಾವಣೆ ತರಬೇಕು ಎಂದು ಕೇಂದ್ರ ಸರ್ಕಾರ ಮುಂದಾಗಿದೆ. ಅದರಲ್ಲೂ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರುತ್ತೇವೆ ಎಂದು ಭರವಸೆಯನ್ನು ಕೂಡ ನೀಡಿದ್ದು, ಅದರಂತೆ ಲೋಕಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡನೆಯಾಗಿದೆ.

    ವಿಧೇಯಕ ಮಂಡಿಸಲು ನಡೆದ ಮತದಾನದಲ್ಲಿ 461 ಸದಸ್ಯರು ಪಾಲ್ಗೊಂಡಿದ್ದರು. ಈ ಪೈಕಿ ಬಹುಮತಕ್ಕೆ 3ನೇ ಎರಡರಷ್ಟು ಅಂದ್ರೆ, 307 ಮತಗಳ ಅಗತ್ಯವಿತ್ತು. ಆದ್ರೆ ಎನ್‌ಡಿಎ 269 ಮತಗಳನ್ನು ಪಡೆದುಕೊಂಡು, ಪ್ರತಿಪಕ್ಷಗಳು 198 ಮತ ಗಳಿಸಿಕೊಂಡವು. ಇದರಿಂದ ಬಬಹುಮತ ಗಳಿಸುವಲ್ಲಿ ಸರ್ಕಾರ ವಿಫಲವಾಯಿತು. ಈ ಕುರಿತ ಇ-ವೋಟಿಂಗ್‌ನ ಸ್ಕ್ರೀನ್‌ಶಾಟ್‌ ಚಿತ್ರವೊಂದನ್ನು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2ನೇ ತ್ರೈಮಾಸಿಕದಲ್ಲಿ ದೇಶದ ಬೆಳವಣಿಗೆ ದರವು 5.4% ರಷ್ಟಿದೆ – ನಿರ್ಮಲಾ ಸೀತಾರಾಮನ್

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ಈ ಮತದಾನದ ಮೂಲಕ ಬಿಜೆಪಿಯವರು ಹೆಚ್ಚುಕಾಲ ಉಳಿಬಾರದು ಎಂಬ ಸಂದೇಶ ಸ್ಪಷ್ಟವಾಗಿದೆ. ಈ ಮಸೂದೆಗೆ ಸ್ಪಷ್ಟ ಬೆಂಬಲ ಸಿಕ್ಕಿಲ್ಲ. ಅನೇಕ ಪಕ್ಷಗಳು ಇದರ ವಿರುದ್ಧವಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಅಲ್ಪಸಂಖ್ಯಾತರ ಪರ ಪ್ರಿಯಾಂಕಾ ಧ್ವನಿ

  • ಒಂದು ದೇಶ ಒಂದು ಚುನಾವಣೆ ಮಸೂದೆ ಈ ಬಾರಿ ಮಂಡನೆಯಾಗುವುದು ಅನುಮಾನ

    ಒಂದು ದೇಶ ಒಂದು ಚುನಾವಣೆ ಮಸೂದೆ ಈ ಬಾರಿ ಮಂಡನೆಯಾಗುವುದು ಅನುಮಾನ

    ನವದೆಹಲಿ: ಒಂದು ದೇಶ ಒಂದು ಚುನಾವಣೆಗೆ (One Nation, One Election) ಸಂಬಂಧಿಸಿದ ಮಸೂದೆ ಈ ಬಾರಿ ಲೋಕಸಭಾ ಅಧಿವೇಶನದಲ್ಲಿ (Lok Sabha Session) ಮಂಡನೆಯಾಗುವುದು ಅನುಮಾನ ಎನ್ನಲಾಗುತ್ತಿದೆ.

    ಒಂದು ದೇಶ ಒಂದು ಚುನಾವಣೆಗೆ ಸಂಬಂಧಿಸಿದ ಮಸೂದೆ ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರವೇ ಹೇಳಿತ್ತು. ಆದರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಪುನರಾಲೋಚನೆಯಲ್ಲಿ ತೊಡಗಿದಂತೆ ಕಂಡುಬಂದಿದೆ.

     

    ಲೋಕಸಭೆ ಕಲಾಪದ ಪಟ್ಟಿಯಿಂದ ದಿಢೀರ್ ಎಂದು ಇದಕ್ಕೆ ಸಂಬಂಧಿಸಿದ ಮಸೂದೆಗಳನ್ನು ಕೈಬಿಡಲಾಗಿದೆ. ಹೀಗಾಗಿ ಪ್ರಸಕ್ತ ಅಧಿವೇಶನದಲ್ಲಿ ಈ ಮಸೂದೆ ಮಂಡನೆ ಆಗುತ್ತಾ ಆಗಲ್ವಾ ಎಂಬ ಬಗ್ಗೆ ಸದ್ಯ ಸಂದಿಗ್ಧತೆ ನೆಲೆಸಿದೆ. ಇದನ್ನೂ ಓದಿ: Delhi assembly polls: ಎಎಪಿ ಅಂತಿಮ ಪಟ್ಟಿ ರಿಲೀಸ್‌ – ನವದೆಹಲಿಯಿಂದ ಕೇಜ್ರಿವಾಲ್‌ ಕಣಕ್ಕೆ

    ಈ ಮಧ್ಯೆ, ಒಂದು ದೇಶ ಒಂದು ಚುನಾವಣೆ ಹೊಸದಲ್ಲ. ದೇಶದಲ್ಲಿ ಮೂರು ಬಾರಿ ಏಕಕಾಲದಲ್ಲಿ ಚುನಾವಣೆ ನಡೆದಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (amit sha) ಹೇಳಿದ್ದಾರೆ. ಈ ಮೂಲಕ ಏಕಚುನಾವಣೆ ವಿರೋಧಿಸುತ್ತಿರುವ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

     

    ಕೆಲ ದಿನಗಳ ಹಿಂದೆ ನಡೆದ ಸಂಪುಟ ಸಭೆಯಲ್ಲಿ ಕೋವಿಂದ್ (Ram Nath Kovind) ಸಮಿತಿ ಶಿಫಾರಸುಗಳ ಪೈಕಿ ಸಾಂವಿಧಾನಿಕ ತಿದ್ದುಪಡಿ ಅಗತ್ಯವಿರುವ ಮಸೂದೆಯನ್ನು ಪರಿಗಣಿಸಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವನ್ನು ಪಕ್ಕಕ್ಕೆ ಇಟ್ಟಿರುವ ಕೇಂದ್ರ ಸರ್ಕಾರ, ಸದ್ಯಕ್ಕೆ ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಮಸೂದೆ ಮಂಡಿಸಲು ತೀರ್ಮಾನಿಸಿದೆ. ಇದಕ್ಕೆ ಅರ್ಧದಷ್ಟು ರಾಜ್ಯಗಳು ಅನುಮೋದನೆ ನೀಡುವ ಅಗತ್ಯ ಇರುವುದಿಲ್ಲ.

    ಸ್ಥಳೀಯ ಚುನಾವಣೆಗಳ (Election) ಜೊತೆಗೆ ಲೋಕಸಭೆ, ಅಸೆಂಬ್ಲಿ ಚುನಾವಣೆ ನಡೆಸುವುದಾದರೆ ಮಾತ್ರ ಸಂವಿಧಾನಿಕ ತಿದ್ದುಪಡಿ ಮತ್ತು 50% ರಾಜ್ಯಗಳ ಒಪ್ಪಿಗೆ ಪಡೆಯಬೇಕಿದೆ. ಕೇಂದ್ರದ ನಡೆಗೆ ವಿಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ.

     

  • ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

    ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

    ನವದೆಹಲಿ: ಒಂದು ದೇಶ ಒಂದು ಚುನಾವಣೆ (One Nation, One Election) ಸಂಬಂಧ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಾರ್ವಜನಿಕರ ಸಲಹೆಯನ್ನು ಆಹ್ವಾನಿಸಲಾಗಿದೆ.

    ಒಂದು ದೇಶ ಒಂದು ಚುನಾವಣೆ ಸಂಬಂಧ ನೇಮಕವಾದ ಸಮಿತಿಯ ಧ್ಯಮಗಳಲ್ಲಿ ಜಾಹೀರಾತು ಪ್ರಕಟಸಿದ್ದು ಸಲಹೆ ನೀಡುವಂತೆ ಕೇಳಲಾಗಿದೆ. ಸಾರ್ವಜನಿಕರು ಜ.15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್‌ ಮಾಡಬಹುದು ಅಥವಾ sc-hlc@gov.in ಗೆ ಇಮೇಲ್‌ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು.

    ಜನರು ನೀಡಿದ ಎಲ್ಲಾ ಸಲಹೆಯನ್ನು ಸಮಿತಿಯ ಮುಂದೆ ಇಡಲಾಗುತ್ತದೆ ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ. ಸಮಿತಿಯ ಉಲ್ಲೇಖದ ನಿಯಮಗಳ ವಿವರಗಳು ಮತ್ತು ತಜ್ಞರ ಸಂಸ್ಥೆಗಳ ವರದಿಗಳನ್ನು ವೆಬ್‌ಸೈಟ್‌ನಲ್ಲಿ ನೋಡಬಹುದು: www.onoe.gov.in/onoe-reports

     

    ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸದಸ್ಯರಾಗಿದ್ದಾರೆ.  ಇದನ್ನೂ ಓದಿ: ಗರ್ಭಗುಡಿಯಲ್ಲಿ ರಾಮ – ಮಂದಿರದ ಬೇರೆ ಗುಡಿಗಳಲ್ಲಿ ಯಾವ ದೇವರು ಇರುತ್ತಾರೆ?

    ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ.

     

    ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು (Election) ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಬಿಜೆಪಿ (BJP) ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹಲವಾರು ಸಂದರ್ಭಗಳಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿ ಈ ಅಂಶ ಸೇರಿತ್ತು. ಇದನ್ನೂ ಓದಿ: ನಾವು ಮಸೀದಿಗಳ ಮೇಲೆ ದೇವಾಲಯಗಳನ್ನ ನಿರ್ಮಿಸಲು ಬಯಸುವುದಿಲ್ಲ: ಓವೈಸಿಗೆ ಧೀರೇಂದ್ರ ಶಾಸ್ತ್ರಿ ಟಾಂಗ್

    1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು.

    2016ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, 2019ರ ಲೋಕಸಭೆ ಚುನಾವಣೆ ಬಳಿಕ ಈ ವಿಷಯದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದರು. ಸಭೆಯನ್ನು ಹಲವು ವಿರೋಧ ಪಕ್ಷಗಳು ವಿರೋಧಿಸಿದ್ದವು.

     

    ʼಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

    ಪ್ರಧಾನಿ ಮೋದಿ ಈ ಹಿಂದೆ ಹಲವು ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ʼಒಂದು ದೇಶ, ಒಂದು ಚುನಾವಣೆʼಯ ಪರ ಬ್ಯಾಟಿಂಗ್‌ ಮಾಡಿದ್ದರು. ಈ ಚುನಾವಣೆ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತಿರುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಬಹಳ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದರು.

     

  • One Nation, One Election – ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆ

    One Nation, One Election – ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆ

    ನವದೆಹಲಿ: ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ʼಒಂದು ದೇಶ, ಒಂದು ಚುನಾವಣೆʼ ನಡೆಸಲು ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.

    ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದ್ದರಿಂದ ಈಗ ಈ ಪ್ರಶ್ನೆ ಎದ್ದಿದೆ.

    ಸಮಿತಿಯ ಸದಸ್ಯರ ಬಗ್ಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ. ಇದನ್ನೂ ಓದಿ: ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

    ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ (Special Session of the Parliament) ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದ ಮರು ದಿನ ಕೇಂದ್ರದಿಂದ ಈ ಅಚ್ಚರಿಯ ನಿರ್ಧಾರ ಪ್ರಕಟವಾಗಿದೆ. ಅಧಿವೇಶನದಲ್ಲಿ ʼಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ ಎಂಬ ಮಾತು ಕೇಳಿ ಬಂದಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾರೂ ಇದನ್ನು ಖಚಿತಪಡಿಸಿಲ್ಲ.

    ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು (Election) ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ.  ಬಿಜೆಪಿ (BJP) ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹಲವಾರು ಸಂದರ್ಭಗಳಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಅಧಿವೇಶನದ ಬಗ್ಗೆ ನಿರೀಕ್ಷೆ ಈಗ ಹೆಚ್ಚಾಗಿದೆ.

    1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು.

    2016ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, 2019ರ ಲೋಕಸಭೆ ಚುನಾವಣೆ ಬಳಿಕ ಈ ವಿಷಯದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದರು. ಸಭೆಯನ್ನು ಹಲವು ವಿರೋಧ ಪಕ್ಷಗಳು ವಿರೋಧಿಸಿದ್ದವು.  ಇದನ್ನೂ ಓದಿ: ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಬೆಲೆ 158 ರೂ. ಇಳಿಕೆ

    ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ  ನವೆಂಬರ್-ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷ ಮೇ ಆಸುಪಾಸಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

    ಪ್ರಧಾನಿ ಮೋದಿ ಈ ಹಿಂದೆ ಹಲವು ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ʼಒಂದು ದೇಶ, ಒಂದು ಚುನಾವಣೆʼಯ ಪರ ಬ್ಯಾಟಿಂಗ್‌ ಮಾಡಿದ್ದರು. ಈ ಚುನಾವಣೆ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತಿರುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದರು.

    ಒಂದೇ ಮತದಾರರ ಪಟ್ಟಿಯನ್ನು ಲೋಕಸಭಾ, ವಿಧಾನಸಭಾ ಹಾಗೂ ಇತರ ಚುನಾವಣೆ ಬಳಸಿಕೊಳ್ಳಬೇಕು. ಸರ್ಕಾರದ ದುಡ್ಡು ಅಂದರೆ ಅದು ಜನರದ್ದೇ ದುಡ್ಡು. ಎರಡು ಬಾರಿ ಚುನಾವಣೆ ಮಾಡಿ ಸಮಯ ಹಾಗೂ ಹಣವನ್ನು ಯಾಕೆ ವ್ಯರ್ಥ ಮಾಡಬೇಕು? ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಆಗಾಗ ನಡೆಯುವ ಮತದಾನದಿಂದಾಗಿ  ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಹೇರುವ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು  ಪ್ರತಿಪಾದಿಸಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]