Tag: online casino

  • ಆನ್‌ಲೈನ್ ಕ್ಯಾಸಿನೋ ಹುಚ್ಚು – ಬ್ಯಾಂಕ್‌ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದ ಮ್ಯಾನೇಜರ್ ಜೈಲುಪಾಲು

    ಆನ್‌ಲೈನ್ ಕ್ಯಾಸಿನೋ ಹುಚ್ಚು – ಬ್ಯಾಂಕ್‌ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದ ಮ್ಯಾನೇಜರ್ ಜೈಲುಪಾಲು

    ಚಿಕ್ಕಬಳ್ಳಾಪುರ: ಆನ್‌ಲೈನ್‌ ಕ್ಯಾಸಿನೋ (Online Casino) ಬೆಟ್ಟಿಂಗ್‌ ಹುಚ್ಚಿನಿಂದಾಗಿ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ನಲ್ಲಿ ಹಣ ದೋಚಿ ಪರಾರಿಯಾಗಿದ್ದ, ಅದೇ ಬ್ಯಾಂಕ್‌ ಮ್ಯಾನೇಜರ್‌ನನ್ನು (Bank Manager) ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲೆಯ ಗೌರಿಬಿದನೂರು ನಗರದ ಕಲ್ಲೂಡಿ ಶಾಖೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಮ್ಯಾನೇಜರ್ ಮಣೀಂದ್ರ ರೆಡ್ಡಿ ಜೈಲುಪಾಲಾದ ವ್ಯಕ್ತಿ. ಈತ ಬ್ಯಾಂಕ್‌ನ ಗ್ರಾಹಕರ ಖಾತೆಯಲ್ಲಿದ್ದ 1,53,83,000 ರೂ. ಹಣವನ್ನು ದೋಚಿ ಪರಾರಿಯಾಗಿದ್ದ. ಈತನನ್ನ ಬಂಧಿಸಿ ಜೈಲುಗಟ್ಟುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಸ್ನೇಹಿತನಿಗೆ ಕಾರು ನೀಡದೇ ಕಿರಿಕ್‌- ನಲಪಾಡ್‌ ವಿರುದ್ಧ ದೂರು

    ಆನ್‌ಲೈನ್ ಕ್ಯಾಸಿನೊ ಬೆಟ್ಟಿಂಗ್ ಹುಚ್ಚು ಅಂಟಿಸಿಕೊಂಡಿದ್ದ ಈ ಭೂಪ ಬರೋಬ್ಬರಿ 1.53 ಕೋಟಿ ರೂ. ಹಣವನ್ನು ಕಳೆದುಕೊಂಡಿದ್ದ. ಬ್ಯಾಂಕ್‌ನ 12 ಗ್ರಾಹಕರ ಅಕೌಂಟ್‌ನಲ್ಲಿದ್ದ ಹಣ ಹಾಗೂ ಗ್ರಾಹಕರ ಹೆಸರಿನಲ್ಲಿ ತಾನೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲದ ರೂಪದಲ್ಲಿ ಹಣ ಡ್ರಾ ಮಾಡಿದ್ದಾನೆ. ಅಷ್ಟೇ ಅಲ್ಲದೆ, ಕಷ್ಟಕ್ಕೆ ಅಂತ ಬ್ಯಾಂಕ್‌ನಲ್ಲಿ ಎಫ್‌ಡಿ ಮಾಡಿದ್ದ ಇಬ್ಬರು ಗ್ರಾಹಕರ ಹಣವನ್ನು ಆನ್‌ಲೈನ್ ಗೇಮ್‌ನಲ್ಲಿ ತೊಡಗಿಸಿ, ಗ್ರಾಹಕರ ಅಕೌಂಟ್‌ಗಳನ್ನು ಖಾಲಿ ಮಾಡಿದ್ದ.

    ಮಣೀಂದ್ರ ರೆಡ್ಡಿ ವಿರುದ್ಧ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಟಿ.ದೇವದಾಸ್, ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೊನೆಗೆ ಚಿಕ್ಕಬಳ್ಳಾಪುರ ಸೈಬರ್ ಪೊಲೀಸ್ ಠಾಣೆಯ ಪೊಲೀಸರು, ನಾಪತ್ತೆಯಾಗಿದ್ದ ಮಣೀಂದ್ರ ರೆಡ್ಡಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ವರ್ಗಾವಣೆ ಆಗಿದ್ದ ಬ್ಯಾಂಕ್‌ನ ಹಣದಲ್ಲಿ 84 ಲಕ್ಷ ರೂ. ಹಣವನ್ನು ಪ್ರೀಜ್ ಮಾಡಿಸಿದ್ದಾರೆ. ಇದನ್ನೂ ಓದಿ: ವಿಧಾನಪರಿಷತ್‌ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

    ಇದೆ ಆಸಾಮಿ ಗುಡಿಬಂಡೆಯ ಉಲ್ಲೋಡು ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಸಹಾಯಕ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಯ ಕ್ಯಾಶಿಯರ್ ಸುನಿಲ್ ಲಾಗಿನ್‌ನಲ್ಲಿ ಗ್ರಾಹಕರ ಹಣ ಡ್ರಾ ಮಾಡಿದ್ದ. ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗುತ್ತಿದ್ದಂತೆ, ತನ್ನ ಕುಕೃತ್ಯದ ವಿಷಯ ಎಲ್ಲಿ ಬಯಲಾಗುತ್ತೋ ಎಂಬ ಭಯದಿಂದ ಆತ್ಮಹತ್ಯೆಗೂ ಯತ್ನಿಸಿದ್ದ. ಸದ್ಯ ಆರೋಪಿ ಬ್ಯಾಂಕ್‌ ಮ್ಯಾನೇಜರ್‌ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದಲ್ಲಿ ಬಂಧಿತನಾಗಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಆನ್‌ಲೈನ್‌ ಜೂಜಾಟದಿಂದ ಬಂತು 11 ಕೋಟಿ – ಆ ಹಣಕ್ಕಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್‌ಗೈದವರು ಅರೆಸ್ಟ್‌

    ಆನ್‌ಲೈನ್‌ ಜೂಜಾಟದಿಂದ ಬಂತು 11 ಕೋಟಿ – ಆ ಹಣಕ್ಕಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್‌ಗೈದವರು ಅರೆಸ್ಟ್‌

    ಹುಬ್ಬಳ್ಳಿ: ಆನ್‌ಲೈನ್‌ ಜೂಜಾಟದಿಂದ 11 ಕೋಟಿ ಗೆದ್ದ ಸ್ನೇಹಿತನನ್ನೇ ಅಪಹರಣಗೈದ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಆನ್‌ಲೈನ್ ಜೂಜಾಟದ ಅಪ್ಲಿಕೇಶನ್‌ಗಳು ಹೆಚ್ಚಾಗಿದ್ದು, ಈ ಆಪ್‌ಗಳಲ್ಲಿ ದಿನಕ್ಕೆ ನೂರು ರೂಪಾಯಿಯಿಂದ ಕೋಟಿ ರೂಪಾಯಿ ಗೆಲ್ಲುವವರು ಇದ್ದಾರೆ. ಅದೇ ತರಹ ಸೋಲುವವರು ಇದ್ದಾರೆ. ಆದರೆ ಹುಬ್ಬಳ್ಳಿಯ ಗಿಲಾವರ್‌ಗೆ ಮಾತ್ರ ಅದೃಷ್ಟ ಫುಲ್ ಕುಲಾಯಿಸಿದೆ. ಆನ್ ಲೈನ್ ಕ್ಯಾಸಿನೋ ಆಪ್ ನಲ್ಲಿ ಬೇರೊಬ್ಬರಿ 11 ಕೋಟಿ ಗೆದ್ದಿದ್ದಾನೆ. ಈಗ ಇದೇ ಗಿಲಾವರ್ ಪ್ರಾಣ ಸ್ನೇಹಿತ ಗರೀಬ್‌ನ ಪ್ರಾಣಕ್ಕೆ ಕುತ್ತು ತಂದಿದೆ. ಹಣಕ್ಕಾಗಿ ಗರೀಬ್ ಸ್ನೇಹಿತರೇ ಆತನನ್ನು ಕಿಡ್ನಾಪ್ ಮಾಡಿದ್ದಾರೆ.

    ಗಿಲಾವರ್ ಮತ್ತು ಗರೀಬ್ ಇಬ್ಬರು ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾರೆ. ಗಿವಾವರ್ ಗೆ ಆನ್ ಲೈನ್ ಜೂಜಾಟವಾಡುವ ಅಭ್ಯಾಸವಿದ್ದು, ಹಲವಾರು ದಿನಗಳಿಂದ ಆನ್ ಲೈನ್ ಕ್ಯಾಸಿನೋ ಜೂಜು ಆಡುತ್ತಿದ್ದ. ಕಳೆದ ತಿಂಗಳು ಗಿಲಾವರ್ ಅದೃಷ್ಟ ಕುಲಾಯಿಸಿ ಬರೊಬ್ಬರಿ 11 ಕೋಟಿ ಗೆದ್ದಿದ್ದ.

    ಹಣವನ್ನು ಬಿಡಿಸಿಕೊಳ್ಳಲು ಗಿಲಾವರ್‌ಗೆ ಬ್ಯಾಂಕ್ ಖಾತೆ ಇರಲಿಲ್ಲ. ಹೀಗಾಗಿ ಆತನ ಸ್ನೇಹಿತ ಗರೀಬ್ ಬಳಿ ಹಣ ತೆಗೆಯಲು ಸಹಾಯ ಕೇಳಿದ್ದು, ಗರೀಬ್ ತನ್ನ ಇನ್ನೊಬ್ಬ ಸ್ನೇಹಿತ ಮಹಮ್ಮದ್ ಎಂಬಾತನಗೆ ವಿಷಯ ತಿಳಿಸಿ, ಆತನ ಖಾತೆಗೆ 2 ಕೋಟಿ ಹಣ ವರ್ಗಾವಣೆ ಮಾಡಿಸಿದ್ದಾನೆ. ಹಣ ವರ್ಗಾವಣಾಗುತ್ತಿದ್ದಂತೆ, ಗರೀಬ್, ಗಿಲಾವರ್ ಮತ್ತು ಮಹಮ್ಮದ್ ಫುಲ್ ಮಜಾ ಮಾಡಿದ್ದಾರೆ. ಇದನ್ನೂ ಓದಿ: ಬಿಕಿನಿ ಧರಿಸಿದ ಫೋಟೋ ಹಾಕಿದ್ದಕ್ಕೆ ಕೆಲಸ ಕಳೆದುಕೊಂಡ ಪ್ರಾಧ್ಯಾಪಕಿ

    ಸ್ವಲ್ಪ ದಿನವಾದ ಮೇಲೆ ಮಹಮ್ಮದ್‌ಗೆ ದುರಾಸೆ ಹುಟ್ಟಿಕೊಂಡಿದೆ. ಇವರ ಬಳಿ ಇನ್ನೂ ಹಣವಿದೆ ಹೇಗಾದರೂ ಮಾಡಿ ವಶಪಡಿಸಿಕೊಳ್ಳಬೇಕು ಎಂದು ಆಲೋಚಿಸಿ ಗಿಲಾವರ್‌ನನ್ನು ಕಿಡ್ನ್ಯಾಪ್‌ ಮಾಡುವ ಪ್ಲಾನ್ ಮಾಡಿದ್ದಾನೆ. ಈ ವಿಚಾರವನ್ನು ಸ್ನೇಹಿತರಿಗೆ ತಿಳಿಸಿದ್ದಾನೆ. ಸ್ನೇಹಿತರು ಈ ಕೆಲಸಕ್ಕೆ ಸಾಥ್‌ ನೀಡುತ್ತೇವೆ ಎಂದು ಹೇಳಿದ್ದಾರೆ.

    ಗಿಲಾವರ್‌ಗೆ ಕರೆ ಮಾಡಿದಾಗ ಆತ ಊರಿಗೆ ಹೋಗಿರುವ ವಿಚಾರ ತಿಳಿಯುತ್ತದೆ. ಗಿಲಾವರ್‌ ಇಲ್ಲದ ಹಿನ್ನೆಲೆಯಲ್ಲಿ ಗರೀಬ್‌ನನ್ನು ಅಪಹರಣ ಮಾಡಲು ಗ್ಯಾಂಗ್‌ ಮುಂದಾಗುತ್ತದೆ. ಆ.6 ರಂದು ಸ್ನೇಹಿತರ ಮೂಲಕ ಗರೀಬ್‌ಗೆ ಬಿವಿಬಿ ಕಾಲೇಜಿಗೆ ಬರುವಂತೆ ಕರೆ ಮಾಡಿದ್ದಾರೆ. ಗರೀಬ್‌ ಕಾಲೇಜಿಗೆ ಬರುತ್ತಿದ್ದಂತೆ ಗ್ಯಾಂಗ್‌ ಕಿಡ್ನ್ಯಾಪ್‌ ಮಾಡಿ, ಗಿಲಾವರ್‌ಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

    ಗಾಬರಿಗೊಂಡ ಗಿಲಾವರ್, ಗರೀಬ್ ಮನೆಗೆ ಕಾಲ್ ಮಾಡಿ ವಿಷಯ ತಿಳಿಸಿದ್ದಾನೆ. ಕೂಡಲೇ ಮನೆಯವರು ವಿವಿಧ ಕಡೆ ಗರೀಬ್‌ಗಾಗಿ ಹುಡುಕಿದ್ದಾರೆ. ಬಳಿಕ ಬೆಂಡಿಗೇರಿ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಒಟ್ಟು ‌ಐದು ತಂಡಗಳನ್ನು ರಚಿಸಿಕೊಂಡು, ಶೀಘ್ರವಾಗಿ ಕಾರ್ಯೋನ್ಮುಖರಾಗಿದ್ದಾರೆ. ಮೊಬೈಲ್ ನೆಟ್‌ವರ್ಕ್‌ ಆಧರಿಸಿ ಕಿಡ್ನ್ಯಾಪ್‌ ಮಾಡಿ ಗರೀಬ್ ಬಚ್ಚಿಟ್ಟಿದ್ದ ಸ್ಥಳವನ್ನು ಪತ್ತೆ ಮಾಡಿ ರಕ್ಷಣೆ ಮಾಡಿದ್ದಾರೆ. ಇದಾದ ಬಳಿಕ ಕಿಡ್ನ್ಯಾಪ್‌ ಮಾಡಿದ್ದ ಮಹಮ್ಮದ್ ಮತ್ತು ಆತನ 7 ಮಂದಿ ಸ್ನೇಹಿತರು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]