Tag: Online Gambling

  • ಚಿಕ್ಕಬಳ್ಳಾಪುರ | ಆನ್‌ಲೈನ್‌ ಜೂಜಿಗೆ ದಾಸನಾಗಿದ್ದ ಹೆಡ್ ಕಾನ್‌ಸ್ಟೆಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಚಿಕ್ಕಬಳ್ಳಾಪುರ | ಆನ್‌ಲೈನ್‌ ಜೂಜಿಗೆ ದಾಸನಾಗಿದ್ದ ಹೆಡ್ ಕಾನ್‌ಸ್ಟೆಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಹೆಡ್‌ ಕಾನ್ಸ್‌ಟೇಬಲ್‌ (Head Constable) ಒಬ್ಬರು ಪೊಲೀಸ್‌ ಠಾಣೆ ಆವರಣದಲ್ಲೇ ಇರುವ ಕ್ವಾಟ್ರಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.

    ಮಂಚೇನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ರಾಜಶೇಖರ್ (45) ಆತ್ಯಹತ್ಯೆ ಮಾಡಿಕೊಂಡವರು. ಠಾಣಾ ಆವರಣದಲ್ಲಿದ್ದ ಕ್ವಾಟ್ರಸ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆಶಿ ಇಬ್ಬರೂ ಪಾಲಿಸುತ್ತೇವೆ – ಮತ್ತೆ ಸಿಎಂ ಸ್ಪಷ್ಟನೆ

    ಕಾರಣ ಏನು?
    ಮೊಬೈಲ್ ಆನ್‌ಲೈನ್ ಜೂಜಾಟಗಳಿಗೆ (Online gambling) ದಾಸನಾಗಿದ್ದ ಕಾನ್ಸ್‌ಟೇಬಲ್‌ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಹಲವರ ಬಳಿ ಬಡ್ಡಿಗೆ ಕೈಸಾಲ ಮಾಡಿಕೊಂಡಿದ್ದರು. ಈ ಬಗ್ಗೆ ತನ್ನ ಪೋಷಕರ ಬಳಿ ಕಷ್ಟ ಹೇಳಿಕೊಂಡಿದ್ದರು. ಜೊತೆಗೆ ಪತ್ನಿಯ ಚಿನ್ನಾಭರಣವನ್ನ ಸಾಲ ತೀರಿಸಲು ಅಡವಿಟ್ಟಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಹೈಕೋರ್ಟ್‌ನಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

  • ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳ ನಿಷೇಧ – ಮಧ್ಯಂತರ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

    ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳ ನಿಷೇಧ – ಮಧ್ಯಂತರ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

    ಚೆನೈ: ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳನ್ನು (Online Gambling) ನಿಷೇಧಿಸಿ ತಮಿಳುನಾಡು ಸರ್ಕಾರ (Tamil Nadu Govt) ಜಾರಿಗೆ ತಂದಿರುವ ಹೊಸ ಕಾನೂನು ಪ್ರಶ್ನಿಸಿ ಗೇಮಿಂಗ್ ಕಂಪನಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ (Madras High Court) ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.

    ಮುಖ್ಯ ನ್ಯಾಯಮೂರ್ತಿ ಎಸ್‌.ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ.ಡಿ ಆದಿಕೇಶವಲು ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಪರವಾಗಿ ಹಾಜರಿದ್ದ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲು ಆರಂಭಿಸಿದರು. ಇದನ್ನೂ ಓದಿ: ಹಂತ ಹಂತವಾಗಿ ಮೀಸಲಾತಿ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ – 25,000 ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

    ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠ, ಮಧ್ಯಂತರ ತಡೆಗೆ ಮಾಡುವ ವಾದ ಮತ್ತು ಅಂತಿಮ ವಿಚಾರಣೆಗೆ ಮಾಡುವ ವಾದ ಒಂದೇಯಾಗಿರುತ್ತದೆ. ಈ ಹಿನ್ನಲೆ ಮಧ್ಯಂತರ ತಡೆ ಬದಲು ನಾವು ಅಂತಿಮ ವಾದಕ್ಕೆ ಪ್ರಕರಣವನ್ನು ಪೋಸ್ಟ್ ಮಾಡುತ್ತಿದ್ದೇವೆ. ಜುಲೈ 13 ರಂದು ಅಂತಿಮ ವಾದವನ್ನು ಆಲಿಸುವುದಾಗಿ ಕೋರ್ಟ್ ಹೇಳಿತು.

    ರಮ್ಮಿ ಮತ್ತು ಪೋಕರ್‌ನಂತಹ ಆಟಗಳು ಕೌಶಲ್ಯದ ಆಟಗಳಲ್ಲ ಮತ್ತು ಅವಕಾಶದ ಆಟಗಳಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದ್ದರೂ, ಅರ್ಜಿದಾರ ಕಂಪನಿಗಳು ಬಲವಂತದ ಕ್ರಿಮಿನಲ್ ಕ್ರಮದ ಬೆದರಿಕೆಯನ್ನು ಎದುರಿಸುತ್ತಿವೆ ಎಂದು ಇದೇ ವೇಳೆ ಹಿರಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಕರ್ನಾಟಕ, ಮಹಾರಾಷ್ಟ್ರದಂತೆ ಬಿಜೆಪಿ ವಿರೋಧ ಪಕ್ಷಗಳ ಸರ್ಕಾರ ಉರುಳಿಸುತ್ತಿದೆ: ಕಪಿಲ್‌ ಸಿಬಲ್‌ ಆರೋಪ

    ತಮಿಳುನಾಡು ಸರ್ಕಾರವು ಆನ್‌ಲೈನ್ ಗೇಮಿಂಗ್‌ ವ್ಯಸನವು “ಕುಟುಂಬಗಳನ್ನು ನಾಶಪಡಿಸುತ್ತಿದೆ” ಎಂದು ಅಭಿಪ್ರಾಯಪಟ್ಟಿದೆ. ರಾಜ್ಯದ ನಾಗರಿಕರನ್ನು ರಕ್ಷಿಸಲು “ತಮಿಳುನಾಡು ಆನ್‌ಲೈನ್ ಜೂಜಿನ ನಿಷೇಧ ಮತ್ತು ಆನ್‌ಲೈನ್ ಗೇಮ್ಸ್ ಆಕ್ಟ್, 2022 ರ ನಿಯಂತ್ರಣ” ಕಾಯಿದೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆನ್‍ಲೈನ್ ಗ್ಯಾಂಬ್ಲಿಂಗ್ ಗೇಮ್‍ಗಳ ನಿಷೇಧ – ಗೇಮಿಂಗ್ ಕಂಪನಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್

    ಆನ್‍ಲೈನ್ ಗ್ಯಾಂಬ್ಲಿಂಗ್ ಗೇಮ್‍ಗಳ ನಿಷೇಧ – ಗೇಮಿಂಗ್ ಕಂಪನಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್

    ನವದೆಹಲಿ: ಆನ್‍ಲೈನ್ ಗ್ಯಾಂಬ್ಲಿಂಗ್ (Online Gambling) ಗೇಮ್‍ಗಳ(Game) ನಿಷೇಧಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್(Supreme Court) ಇಂದು ಆನ್‍ಲೈನ್ ಗೇಮಿಂಗ್ ಕಂಪನಿಗಳಿಗೆ ನೋಟಿಸ್(Notice) ಜಾರಿ ಮಾಡಿದೆ.

    ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅಬ್ದುಲ್ ನಜೀರ್(Abdul Nazir) ನೇತೃತ್ವದ ದ್ವಿ ಸದಸ್ಯ ಪೀಠ ಈ ನೋಟಿಸ್ ಜಾರಿ ಮಾಡಿದ್ದು, ರಾಜ್ಯದಲ್ಲಿ ಆನ್‍ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧರಿಸಿದ್ದ ಕರ್ನಾಟಕ ಸರ್ಕಾರ (Karnataka Government) ಆನ್‍ಲೈನ್ ಗೇಮ್ ಬ್ಯಾನ್ ಮಾಡಿ ಈ ಹಿಂದೆ ಆದೇಶ ಹೊರಡಿಸಿತ್ತು. ಅಕ್ಟೋಬರ್ 10 ರಿಂದ ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್‍ಜಿ ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆ್ಯಪ್‍ಗಳನ್ನು (Fantasy Game App) ಸ್ಥಗಿತಗೊಳಿಸಿತ್ತು. ಸರ್ಕಾರದ ಈ ಕ್ರಮವನ್ನು ಗೇಮಿಂಗ್ ಕಂಪನಿಗಳು (Gaming Company) ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದವು.  ಇದನ್ನೂ ಓದಿ: ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೋಷಕರ ಮೇಲೆ ಹಲ್ಲೆ- ವೀಡಿಯೋ ಮಾಡಿ ಲವ್ವರ್ಸ್ ಮನವಿ

    ಅರ್ಜಿ ವಿಚಾರಣೆ ನಡೆಸಿದ್ದ ಸಿಜೆ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ದೀಕ್ಷಿತ್‍ರ (Krishna Dixit) ಪೀಠ ಆನ್‍ಲೈನ್ ಗೇಮ್‍ಗೆ ಗ್ರೀನ್ ಸಿಗ್ನಲ್ ನೀಡಿತ್ತು. ಹೈಕೋರ್ಟ್ (High Court) ಆದೇಶವನ್ನು ಪ್ರಶ್ನೆ ಮಾಡಿ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇಂದು ವಿಚಾರಣೆ ನಡೆಸಿದ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ದೇಣಿಗೆಯಾಗಿ 2,000 ರೂ. ಕೊಡದ ತರಕಾರಿ ವ್ಯಾಪಾರಿಗೆ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ವಿರಾಟ್ ಕೊಹ್ಲಿ ಬಂಧನ ಕೋರಿ ಹೈಕೋರ್ಟಿನಲ್ಲಿ ಅರ್ಜಿ

    ವಿರಾಟ್ ಕೊಹ್ಲಿ ಬಂಧನ ಕೋರಿ ಹೈಕೋರ್ಟಿನಲ್ಲಿ ಅರ್ಜಿ

    ಚೆನ್ನೈ: ಆನ್‍ಲೈನ್ ಜೂಜಾಟವನ್ನು ಉತ್ತೇಜಿಸಿದ್ದಕ್ಕಾಗಿ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ನಟಿ ತಮನ್ನಾ ಅವರನ್ನು ಬಂಧಿಸುವಂತೆ ಕೋರಿ ಮದ್ರಾಸ್ ಹೈ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

    ಚೆನ್ನೈ ಮೂಲದ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಯುವ ಜನತೆ ಆನ್‍ಲೈನ್ ಜೂಜಾಟದ ಗೀಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದು, ಪರಿಣಾಮ ಇವುಗಳ ಮೇಲೆ ನಿಷೇಧ ವಿಧಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆನ್‍ಲೈನ್ ಜೂಜಾಟ ಕಂಪೆನಿಗಳು ಭಾರೀ ಹಣವನ್ನು ನೀಡಿ ವಿರಾಟ್ ಕೊಹ್ಲಿ, ತಮನ್ನಾ ರಂತಹ ಸ್ಟಾರ್ ಕ್ರೀಡಾಪಟು ಹಾಗೂ ನಟ-ನಟಿಯನ್ನು ಬಳಿಸಿಕೊಂಡು ಯುವ ಜನತೆಯ ಬ್ರೈನ್ ವಾಶ್ ಮಾಡುತ್ತಿದ್ದಾರೆ ವಕೀಲರು ಆರೋಪಿಸಿದ್ದಾರೆ.

    ಆನ್‍ಲೈನ್ ಜೂಜಾಟಕ್ಕೆ ಯುವಕರು ಮಾಡಿದ ಸಾಲದ ಹಣವನ್ನು ಹಿಂದಿರುಗಿಸಲು ಸಾಧ್ಯವಾಗದ ಹಣ ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ ಎಂದು ಪ್ರಕರಣವೊಂದರ ಉದಾರಣೆಯೊಂದನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣವನ್ನು ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಮುಂದೂಡಿದೆ.