Tag: Open

  • ಇಂದು SSLC ಕೊನೆ ಪರೀಕ್ಷೆ- ಕನ್ನಡ, ಇಂಗ್ಲಿಷ್, ಹಿಂದಿ ಎಕ್ಸಾಂ

    ಇಂದು SSLC ಕೊನೆ ಪರೀಕ್ಷೆ- ಕನ್ನಡ, ಇಂಗ್ಲಿಷ್, ಹಿಂದಿ ಎಕ್ಸಾಂ

    – 4 ದಿನದಲ್ಲಿ ಕಾಲೇಜು ಶುರು, ಹಾಜರಾತಿ ಕಡ್ಡಾಯವಲ್ಲ

    ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಕೊನೆಯ ಪರೀಕ್ಷೆ. ಇಂದು ಭಾಷಾ ವಿಷಯಗಳಾದ ಕನ್ನಡ, ಇಂಗ್ಲಿಷ್, ಹಿಂದಿ ಪರೀಕ್ಷೆಗಳು ನಡೆಯಲಿದೆ.

    ಕಳೆದ ಸೋಮವಾರ ಕೋರ್ ಸಬ್ಜೆಕ್ಟ್ ವಿಷಯಗಳ ಪರೀಕ್ಷೆ ಯಾವುದೇ ಸಮಸ್ಯೆ ಇಲ್ಲದೆ ನಡೆದಿತ್ತು. ಬೆಳಗ್ಗೆ 10.30ರಿಂದ 1.30 ವರೆಗೆ ಪರೀಕ್ಷೆಗಳು ನಡೆಯಲಿದೆ. ರಾಜ್ಯದ 4885 ಪರೀಕ್ಷಾ ಕೇಂದ್ರಗಳ ಸುಮಾರು 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಇಂದೂ ಕೂಡಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.

    ಪರೀಕ್ಷೆ ಆರಂಭಕ್ಕೂ ಮುನ್ನ-ನಂತರ ಕೊಠಡಿ ಸ್ಯಾನಿಟೈಸ್ ಮಾಡಲಾಗಿರುತ್ತದೆ. 1 ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಕೂರಲು ಮಾತ್ರ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಂದು ಡೆಸ್ಕ್ ಗೆ ಒಬ್ಬರೇ ವಿದ್ಯಾರ್ಥಿ ಪರೀಕ್ಷೆ ಬರೆಯಲಿದ್ದಾರೆ. ಜ್ವರ ಸೇರಿ ಅನ್ಯರೋಗದ ಲಕ್ಷಣ ಇದ್ದರೇ ಪ್ರತ್ಯೇಕ ಕೊಠಡಿ ನೀಡಿದ್ರೆ, ಸೋಂಕಿತ ವಿದ್ಯಾರ್ಥಿಗೆ ಕೇರ್ ಸೆಂಟರ್ ನಲ್ಲೇ ಪರೀಕ್ಷೆ ಅವಕಾಶ ನೀಡಲಾಗಿದೆ. ಆಗಸ್ಟ್ 10ರ ಒಳಗೆ ಫಲಿತಾಂಶ ಪ್ರಕಟ ಆಗಲಿದೆ.

    ಕಾಲೇಜು ಆಯ್ತು ಶೀಘ್ರದಲ್ಲಿ ಸ್ಕೂಲ್ ಓಪನ್ ಗೆ ಚಿಂತನೆ ನಡೆಸಲಾಗುತ್ತಿದೆ. ಪ್ರಾಥಮಿಕ ಶಾಲೆ ಓಪನ್‍ಗೆ ಐಸಿಎಂಆರ್ ಗ್ರೀನ್‍ಸಿಗ್ನಲ್ ನೀಡಿದೆ. ದೊಡ್ಡವರಿಗಿಂತ ಮಕ್ಕಳೇ ಕೊರೋನಾ ವಿರುದ್ಧ ಸೇಫ್ ಆಗುತ್ತಿದ್ದು, ಹಾಗಾಗಿ ಪ್ರಾಥಮಿಕ ಶಾಲೆ ಮೊದಲು ತೆರೆಯುವಂತೆ ಐಸಿಎಂಆರ್ ಸಿಗ್ನಲ್ ನೀಡಿದೆ. ಆದರೆ ಕರ್ನಾಟಕದಲ್ಲೂ ಪ್ರಾಥಮಿಕ ಶಾಲೆ ಓಪನ್ ಆಗುತ್ತಾ ಎಂಬುದು ಪ್ರಶ್ನೆಯಾಗಿದೆ.

    ಇತ್ತ ಪ್ರಾಥಮಿಕ ಶಾಲೆ ಮೊದಲು ತೆರೆಯುವಂತೆ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಸಲಹೆ ನೀಡಿದೆ. ಐಸಿಎಂಆರ್ ನಡೆಸಿದ ಸರ್ವೆಯಲ್ಲಿ ಮಕ್ಕಳಲ್ಲೇ ಅತ್ಯಧಿಕ ರೋಗ ನಿರೋಧಕ ಶಕ್ತಿ ಪತ್ತೆಯಾಗಿದೆ. ಮೊದಲ ಬಾರಿಗೆ 6 ವರ್ಷ ಮೇಲ್ಪಟ್ಟ ಮಕ್ಕಳಲ್ಲಿ ಸಿರೋ ಸರ್ವೆ ಮಾಡಿದ್ದ ಐಸಿಎಂಆರ್, ಈಗಾಗಲೇ ಹೆಚ್ಚು ಮಕ್ಕಳು ಕೊರೋನಾಗೆ ತುತ್ತಾಗಿದ್ದಾರೆ, ಆದರೂ ಸೇಫ್ ಎಂದಿದೆ. ದೊಡ್ಡವರಷ್ಟೇ ಮಕ್ಕಳಲ್ಲಿಯೂ ರೋಗನಿರೋಧಕ ಶಕ್ತಿ ಪತ್ತೆಯಾಗಿದೆ. ದೊಡ್ಡವರಿಗಿಂತ ಚೆನ್ನಾಗಿ ಮಕ್ಕಳ ದೇಹ ಕೊರೋನಾ ವಿರುದ್ಧ ಸೆಣಸಬಲ್ಲದು. ಯುರೋಪ್ ಸೇರಿದಂತೆ ಅನೇಕ ಭಾಗದಲ್ಲಿ ಸ್ಕೂಲ್ ಮುಚ್ಚಿಲ್ಲ. ಕೊರೋನಾ ಬಂದ್ರೂ ಸ್ಕೂಲ್ ಓಪನ್ ಆಗಿಯೇ ಇತ್ತು. ಹಾಗಾಗಿ ಯಾವುದೇ ಆತಂಕವಿಲ್ಲದೇ ಶಾಲೆ ಆರಂಭಿಸಬಹುದು ಎಂದು ಐಸಿಎಂಆರ್ ಹೇಳಿದೆ.

  • ನಾಳೆಯಿಂದ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ- ತೀರ್ಥ, ಪ್ರಸಾದ ಇಲ್ಲ

    ನಾಳೆಯಿಂದ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ- ತೀರ್ಥ, ಪ್ರಸಾದ ಇಲ್ಲ

    ಉಡುಪಿ: ಜುಲೈ 11 ಭಾನುವಾರ ಮಧ್ಯಾಹ್ನದಿಂದ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಪರ್ಯಾಯ ಅದಮಾರು ಮಠ ಹೇಳಿದೆ.

    ವಾರದ ಹಿಂದೆ ರಾಜ್ಯ ಸರ್ಕಾರ ದೇವಸ್ಥಾನಗಳನ್ನು ತೆರೆಯಲು ಅವಕಾಶ ಕಲ್ಪಿಸಿತ್ತು. ರಾಜ್ಯಾದ್ಯಂತ ಮಠ, ಮಂದಿರಗಳು ತೆರೆದರೂ, ಉಡುಪಿ ಶ್ರೀ ಕೃಷ್ಣ ಮಠ ತೆರೆದಿರಲಿಲ್ಲ. ಕೊರೊನಾ ಹತೋಟಿಗೆ ಬಂದ ನಂತರ ಮಠದಲ್ಲಿ ಅವಕಾಶ ಕಲ್ಪಿಸುವುದಾಗಿ ಹೇಳಿತ್ತು.

    ಇದೀಗ ಪರ್ಯಾಯ ಅದಮಾರು ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಇದೇ ಭಾನುವಾರದಿಂದ ಭಕ್ತರಿಗೆ ಮಠ ಪ್ರವೇಶಿಸಲು ಅವಕಾಶ ನೀಡಿದ್ದಾರೆ. ಮಧ್ಯಾಹ್ನದ ಪೂಜೆಯ ನಂತರ ಉಡುಪಿ ಶ್ರೀಕೃಷ್ಣನ ದರ್ಶನ ಮಾಡಬಹುದು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಠದ ಒಳಗೆ ಬರುವ ಅವಕಾಶವನ್ನು ನೀಡಲಾಗಿದೆ.

    ಉಡುಪಿ ಶ್ರೀಕೃಷ್ಣ ಮಠದ ಒಳಗೆ ಪ್ರವೇಶಿಸುವ ಸರತಿಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿ ಮಠದೊಳಗೆ ಬರಬೇಕು ಎಂದು ಮಠ ಹೇಳಿದೆ. ತೀರ್ಥ ಪ್ರಸಾದದ ಅವಕಾಶ ಇಲ್ಲ. ದೇವರ ದರ್ಶನಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಲಾಗಿದೆ.

  • 31 ವರ್ಷಗಳ ನಂತರ ಶ್ರೀನಗರದ ದೇವಾಲಯ ಓಪನ್

    31 ವರ್ಷಗಳ ನಂತರ ಶ್ರೀನಗರದ ದೇವಾಲಯ ಓಪನ್

    ಶ್ರೀನಗರ: ಉಗ್ರವಾದದಿಂದಾಗಿ ಮುಚ್ಚಿದ ಶೀತಲ್ ನಾಥ್ ದೇವಾಲಯವಯವನ್ನು 31 ವರ್ಷಗಳ ನಂತರ ತೆರೆಯಲಾಗಿದೆ.

    ಬಸಂತ ಪಂಚಮಿಯ ಶುಭ ಸಂದರ್ಭದಲ್ಲಿ ಶೀತಲ್ ನಾಥ್ ದೇವಾಲಯವನ್ನು ತೆರೆಯಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ದೇವಾಲಯದ ಆಡಳಿತಮಂಡಳಿ ಸದಸ್ಯರು ತಿಳಿಸಿದ್ದಾರೆ.

    ಶ್ರೀನಗರದ ಹಬ್ಬಾ ಕಡಲ್ ಪ್ರದೇಶದಲ್ಲಿ ನೆಲೆಗೊಂಡಿರುವ ಶೀತಲ್ ನಾಥ್ ದೇವಾಲಯವನ್ನು ಉಗ್ರವಾದದ ಹಿನ್ನೆಲೆಯಲ್ಲಿ ಕಳೆದ 31 ವರ್ಷಗಳಿಂದ ಮುಚ್ಚಲಾಗಿತ್ತು. ದೇವಾಲಯವನ್ನು ಮುಚ್ಚಿದ ಬಳಿಕ ಇಲ್ಲಿನ ನೆಲೆಸಿದ್ದ ಹಿಂದೂ ಸಮುದಾಯದವರು ವಲಸೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

    ದೇವಾಲಯವನ್ನು ತೆರೆಯಲು ಸ್ಥಳೀಯ ಮುಸ್ಲಿಂ ಸಮುದಾಯದವರಿಂದ ಬೆಂಬಲ ಹಾಗೂ ಅಗತ್ಯ ಸಹಕಾರ ದೊರೆತಿದೆ. ಮುಂದಿನದಿನಗಳಲ್ಲಿ ನಿತ್ಯ ಪೂಜೆ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಸದಸ್ಯರಾದ ಸಂತೋಷ್ ರಾಜಧನ್ ತಿಳಿಸಿದ್ದಾರೆ.

  • ಡಿಸೆಂಬರ್ 1ರಿಂದ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳು ಪ್ರಾರಂಭ

    ಡಿಸೆಂಬರ್ 1ರಿಂದ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳು ಪ್ರಾರಂಭ

    ಬೆಂಗಳೂರು: ಡಿಸೆಂಬರ್ 1ರಿಂದ ರಾಜ್ಯದಲ್ಲಿ ಮೆಡಿಕಲ್ ಕಾಲೇಜು ಆರಂಭ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

    ಕೊರೊನಾ ಕಾರಣದಿಂದ ಬಾಗಿಲು ಮುಚ್ಚಿದ್ದ ರಾಜ್ಯದ ವೈದ್ಯಕೀಯ ಕಾಲೇಜುಗಳು ಮತ್ತೆ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ. ಮೆಡಿಕಲ್, ಡೆಂಟಲ್, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುಧಾಕರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.

    ಮಾರ್ಗಸೂಚಿ ಏನಿದೆ?
    * ನಿತ್ಯ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವುದು ಕಡ್ಡಾಯ.
    * ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
    * ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು.
    * ತರಗತಿ ಮುಗಿದ ಬಳಿಕ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
    * ಪ್ರತಿ ಕ್ಯಾಂಪಸ್‍ಗಳಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭಿಸಬೇಕು.

    * ಬೋಧಕ-ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್, ಗ್ಲೌಸ್ ಧರಿಸಬೇಕು.
    * ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರದ ಬಗ್ಗೆ ಅಗತ್ಯ ಜಾಗೃತಿ ಮೂಡಿಸಬೇಕು.
    * ಕನಿಷ್ಠ ಸಾಮಾಜಿಕ ಅಂತರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಬೇಕು.
    * ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ಶುಚಿತ್ವ ಕಾಪಾಡಬೇಕು.
    * ವಾಹನ ವ್ಯವಸ್ಥೆ ಇರೋ ಕಾಲೇಜುಗಳು ನಿತ್ಯ ವಾಹನಗಳನ್ನು ಸ್ಯಾನಿಟೈಸ್ ಮಾಡಬೇಕು.

    * ಶೈಕ್ಷಣಿಕ ವರ್ಷ ತಡವಾಗಿರೋದ್ರಿಂದ ಶನಿವಾರ ಪೂರ್ತಿ ತರಗತಿ, ರಜೆಗಳಿಗೆ ಬ್ರೇಕ್ ಹಾಕಲು ನಿರ್ಧಾರ.
    * ಶನಿವಾರ-ಭಾನುವಾರ ಆನ್‍ಲೈನ್ ತರಗತಿಗೆ ಹೆಚ್ಚು ಒತ್ತು ನೀಡುವುದು.
    * ಶಿಫ್ಟ್ ಪ್ರಕಾರ ತರಗತಿ ನಡೆಸಲು ನಿರ್ಧಾರ.
    * ಒಂದು ತರಗತಿಯಲ್ಲಿ 30 ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಮಾಡಲು ಅವಕಾಶ.
    * ಮಾರ್ಗಸೂಚಿ ಅನುಷ್ಠಾನಕ್ಕೆ ಪ್ರಾಂಶುಪಾಲರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ.

  • 31 ಸಾವಿರ ಕೊರೊನಾ ಪ್ರಕರಣವಿರುವ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ಓಪನ್

    31 ಸಾವಿರ ಕೊರೊನಾ ಪ್ರಕರಣವಿರುವ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ಓಪನ್

    – ಶಾಲೆಯಲ್ಲಿ ಪಾಠ ಮಾಡೋ ಶಿಕ್ಷಕರೇ ಹಾಕಿಲ್ಲ ಮಾಸ್ಕ್

    ಬಳ್ಳಾರಿ: ಕೊರೊನಾ ಮಹಾಮಾರಿ ಅಟ್ಟಹಾಸ ನಡೆಸುತ್ತಿರುವ ಈ ಸಮಯದಲ್ಲಿ ಶಾಲೆಯನ್ನು ಯಾವಾಗ ಆರಂಭ ಮಾಡಬೇಕು ಎನ್ನುವ ಬಹುದೊಡ್ಡ ಚರ್ಚೆ ನಡೆಯುತ್ತಿದೆ. ಆದರೆ ಗಣಿನಾಡು ಬಳ್ಳಾರಿಯಲ್ಲಿ ಸರ್ಕಾರಿ ಶಾಲೆಯೊಂದನ್ನು ಆರಂಭವಾಗಿದೆ.

    ಹೌದು ಸರ್ಕಾರ ವಿದ್ಯಾಗಮ ಯೋಜನೆಯನ್ನು ಜಾರಿ ಮಾಡಿ ಮಕ್ಕಳನ್ನು ಶಾಲೆಯಿಂದ ದೂರ ಉಳಿಯದಂತೆ ವಠಾರ ಶಾಲೆ ಆರಂಭ ಮಾಡಿದೆ. ಆದರೆ ಶಿಕ್ಷಣ ಇಲಾಖೆಯ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಬಳ್ಳಾರಿ ದುರ್ಗಾಮ್ಮ ದೇವಸ್ಥಾನದ ಬಳಿ ಇರುವ ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯನ್ನು ಶಿಕ್ಷಕರು ಆರಂಭ ಮಾಡಿದ್ದಾರೆ.

    ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳು ಜೀವದ ಜೊತೆಯಲ್ಲಿ ಇಲ್ಲಿನ ಶಿಕ್ಷಕರು ಚೆಲ್ಲಾಟ ಆಡುತ್ತಿದ್ದಾರೆ. ಶಾಲಾ ಕೊಠಡಿಯ ಒಳಗಡೆಯೇ ಮಕ್ಕಳನ್ನು ಕೂರಿಸಿ ಪಾಠ ಮಾಡುತಿದ್ದಾರೆ. ವಿಪರ್ಯಾಸವೆಂದರೆ ಪಾಠ ಮಾಡುವ ಶಿಕ್ಷಕರೇ ಮಾಸ್ಕ್ ಹಾಕಿಲ್ಲ. ಜೊತೆಗೆ ಹಲವಾರು ಮಕ್ಕಳು ಶಾಲೆಗೆ ಮಾಸ್ಕ್ ಧರಿಸದೇ ಬಂದಿದ್ದಾರೆ. 31 ಸಾವಿರ ಸೋಂಕಿತರು ಇರುವ ಜಿಲ್ಲೆಯಲ್ಲಿ ಇದೆಂತಾ ನಿರ್ಲಕ್ಷ್ಯ ಎಂದು ಜನರು ಪ್ರಶ್ನೆ ಮಾಡಿದ್ದಾರೆ.

  • ಎರಡೆರಡು ಬಾರಿ ಸೀಲ್‍ಡೌನ್- 4 ತಿಂಗಳ ನಂತ್ರ ರಾಮನಗರ ಕಾರಾಗೃಹ ಓಪನ್

    ಎರಡೆರಡು ಬಾರಿ ಸೀಲ್‍ಡೌನ್- 4 ತಿಂಗಳ ನಂತ್ರ ರಾಮನಗರ ಕಾರಾಗೃಹ ಓಪನ್

    ರಾಮನಗರ: ಎರಡೆರಡು ಬಾರಿ ಸೀಲ್‍ಡೌನ್ ಆಗಿದ್ದ ರಾಮನಗರ ಕಾರಾಗೃಹ ಸತತ ನಾಲ್ಕು ತಿಂಗಳ ಬಳಿಕ ಮುಕ್ತವಾಗಿದೆ.

    ಕಳೆದ 4 ತಿಂಗಳ ಹಿಂದೆ ಪಾದರಾಯನಪುರ ಪ್ರಕರಣದ ಆರೋಪಿಗಳನ್ನ ತಂದು ಹಾಕಿದ ಸಂದರ್ಭದಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದಲ್ಲದೆ ಸೀಲ್‍ಡೌನ್ ಆಗಿತ್ತು. ಅದಾದ ಬಳಿಕ ಮತ್ತೆ ಕಾರಾಗೃಹದ ವಾರ್ಡನ್‍ಗೆ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಸೀಲ್‍ಡೌನ್ ಮುಂದುವರಿಸಲಾಗಿತ್ತು. ಸತತ ನಾಲ್ಕು ತಿಂಗಳ ಬಳಿಕ ಇದೀಗ ರಾಮನಗರ ಜಿಲ್ಲಾ ಕಾರಾಗೃಹ ಸೀಲ್‍ಡೌನ್ ಮುಕ್ತವಾಗಿದೆ.

    ಮಾರ್ಚ್ 22ರಂದು ಪಾದರಾಯನಪುರ ಗಲಭೆ ಪ್ರಕರಣದ 121 ಆರೋಪಿಗಳನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದರು. ಇದಾದ ಎರಡೇ ದಿನದಲ್ಲಿ ಅಲ್ಲಿದ್ದವರಲ್ಲಿ ಐವರಿಗೆ ಪಾಸಿಟಿವ್ ಕಾಣಿಸಿಕೊಂಡಿತ್ತು. ಬಳಿಕ ಮತ್ತೆ ವಾಪಸ್ ಬೆಂಗಳೂರಿಗೆ ಆರೋಪಿಗಳನ್ನು ಶಿಫ್ಟ್ ಮಾಡಲಾಗಿತ್ತು. ಅದಕ್ಕೂ ಮೊದಲು ರಾಮನಗರ ಜೈಲಿನಲ್ಲಿದ್ದ 177 ಮಂದಿ ವಿಚಾರಣಾಧೀನ ಖೈದಿಗಳು ಬೆಂಗಳೂರಿಗೆ ಶಿಫ್ಟ್ ಮಾಡಿದ್ದರು.

    ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲೂ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಲ್ಲಿನ ಖೈದಿಗಳನ್ನ ಕರೆತಂದರೆ ಮತ್ತೆ ಆತಂಕ ಮೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸತತ ನಾಲ್ಕು ತಿಂಗಳ ಬಳಿಕ ಇದೀಗ ಸೀಲ್‍ಡೌನ್ ಮುಕ್ತವಾದ ಕಾರಾಗೃಹಕ್ಕೆ ಹೊಸದಾಗಿ 5 ಮಂದಿ ಆರೋಪಿಗಳನ್ನು ಜೈಲಿನಲ್ಲಿ ಹಾಕಲಾಗಿದೆ.

  • ಜೂನ್ 14ರಿಂದ ಉಚಿತ ಇ-ಟಿಕೆಟ್ ಮೂಲಕ ಕಟೀಲು ಶ್ರೀ ದುರ್ಗಾಪರಮೇಶ್ವರಿಯ ದರ್ಶನ

    ಜೂನ್ 14ರಿಂದ ಉಚಿತ ಇ-ಟಿಕೆಟ್ ಮೂಲಕ ಕಟೀಲು ಶ್ರೀ ದುರ್ಗಾಪರಮೇಶ್ವರಿಯ ದರ್ಶನ

    – ರಾಜ್ಯದಲ್ಲೇ ಮೊದಲ ಪ್ರಯೋಗ

    ಮಂಗಳೂರು: ಲಾಕ್‍ಡೌನ್ ನಂತರ ಈಗಾಗಲೇ ಹಲವು ದೇವಾಲಯಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲೂ ಜೂನ್ 14ರ ಭಾನುವಾರದಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

    ಆದರೆ ಭಕ್ತರು ದೇವಸ್ಥಾನದ ವೆಬ್‍ಸೈಟ್‍ನಿಂದ ಉಚಿತವಾಗಿ ಇ-ಟಿಕೆಟ್ ಮೂಲಕ ತಮ್ಮ ದರ್ಶನದ ಅವಕಾಶವನ್ನು ಕಾದಿರಿಸಬೇಕಾಗುತ್ತದೆ. ದೇವಸ್ಥಾನವೊಂದು ದೇವರ ದರ್ಶನಕ್ಕೆ ಇ-ಟಿಕೆಟ್ ಮೂಲಕ ಕಾದಿರಿಸುವ ವ್ಯವಸ್ಥೆ ಮಾಡಿರುವುದು ರಾಜ್ಯದಲ್ಲೇ ಮೊದಲ ಪ್ರಯೋಗವಾಗಿದೆ. ದೇವರ ದರ್ಶನಕ್ಕೆ ಸರ್ಕಾರ ಕೆಲವೊಂದು ನಿಯಮಗಳನ್ನು ರೂಪಿಸಿರುವುದರಿಂದ ಇದನ್ನು ಪಾಲಿಸಲು ಕಟೀಲು ದೇವಸ್ಥಾನದಲ್ಲಿ ಕೊಂಚ ಕಷ್ಟವಾಗಿತ್ತು.

    ಭಕ್ತರ ಭೇಟಿಯ ಸಂದರ್ಭ ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಮಾಡಬೇಕಾಗಿರುವುದರಿಂದ ಭಕ್ತರ ಸರತಿ ಸಾಲಿನ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇತ್ಯಾದಿ ಸಮಸ್ಯೆಗಳಿಗೆ ಸಿದ್ಧತೆಯ ಅಗತ್ಯ ಇತ್ತು. ಹಾಗಾಗಿ ಕಳೆದ ಜೂನ್ 8ರಂದು ಕಟೀಲು ದೇಗುಲ ಭಕ್ತರ ದರ್ಶನಕ್ಕೆ ತೆರೆದಿರಲಿಲ್ಲ. ಇದೀಗ ಜೂನ್ 14ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಲು ದೇಗುಲದ ವಠಾರದಲ್ಲಿ ಅಲ್ಲಲ್ಲಿ ಬಿಳಿ ಬಣ್ಣದ ಬಾಕ್ಸ್ ಹಾಕಲಾಗಿದೆ. ಇ-ಪಾಸ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗಿದ್ದು, ಪ್ರಾಯೋಗಿಕವಾಗಿಯೂ ನೋಡಲಾಗಿದೆ ಎಂದು ದೇವಸ್ಥಾನದ ಅಡಳಿತ ಮಂಡಳಿ ತಿಳಿಸಿದೆ.

    ಭಕ್ತರು ವೆಬ್‍ಸೈಟ್ ಮೂಲಕ ನೋಂದಾಯಿಸಿ ದೇಗುಲಕ್ಕೆ ಬರಬಹುದಾಗಿದೆ. ಪ್ರತಿ ಹದಿನೈದು ನಿಮಿಷಕ್ಕೆ ಅರವತ್ತು ಮಂದಿಯಷ್ಟು ದೇವಾಲಯಕ್ಕೆ ಭೇಟಿ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 7.30ರಿಂದ ಸಂಜೆ 7.30ರತನಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಸ್ಥಳೀಯ ಭಕ್ತರಿಗೆ ಇ-ಪಾಸ್ ಇಲ್ಲದೆ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ ಗಂಟೆ 6ರಿಂದ 7.30ರವರೆಗಿನ ಒಂದೂವರೆ ಗಂಟೆ ಸಮಯ ನಿಗದಿಪಡಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ಮಾಡಿ ಭಕ್ತರನ್ನು ಒಳ ಬಿಡಲಾಗುತ್ತದೆ. ಆದರೆ ಅನ್ನಪ್ರಸಾದ ಸೇರಿದಂತೆ ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ.

  • ಎರಡೂವರೆ ತಿಂಗಳ ನಂತರ ಹೋಟೆಲ್ ಓಪನ್ – ಮಾರ್ಗಸೂಚಿಗಳೇನು?

    ಎರಡೂವರೆ ತಿಂಗಳ ನಂತರ ಹೋಟೆಲ್ ಓಪನ್ – ಮಾರ್ಗಸೂಚಿಗಳೇನು?

    ಬೆಂಗಳೂರು: ಕೊರೊನಾ ವೈರಸ್ ನಿಂದ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ ನೀಡಿದೆ.

    ಕೊರೊನಾ ಭೀತಿಯಿಂದ ಹೋಟೆಲ್‍ಗಳು ಮುಚ್ಚಿದ್ದವು. ಆದರೆ ಇದರ ನಡುವೆ ಪಾರ್ಸೆಲ್ ನೀಡುವುದಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈಗ ಹಂತ ಹಂತವಾಗಿ ಲಾಕ್‍ಡೌನ್ ಅನ್ನು ಸಡಿಲಿಕೆ ಮಾಡುತ್ತಿದ್ದು, ಹೋಟೆಲ್ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಜೊತೆಗೆ ಕೆಲ ಮಾರ್ಗ ಸೂಚಿಯನ್ನು ಸೂಚಿಸಲಾಗಿದೆ.

    ಮಾರ್ಗಸೂಚಿ ಏನು?
    ಹೋಟೆಲ್‍ಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಸರಿಯಾದ ವ್ಯವಸ್ಥೆ ಮಾಡಬೇಕು ಹಾಗೂ ಹೋಟೆಲ್‍ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳವುದು ಕಡ್ಡಾಯವಾಗಿರುತ್ತದೆ. ಪ್ರತ್ಯೇಕ ಆಗಮನ ಮತ್ತು ನಿರ್ಗಮನ ಇರಬೇಕು. ಹೋಟೆಲ್ ರಿಸೆಪ್ಷನ್‍ನಲ್ಲಿ ಗೆಸ್ಟ್‍ಗಳು ಐ.ಡಿ. ಕಾರ್ಡ್, ಟ್ರಾವೆಲ್ ಹಿಸ್ಟರಿಯನ್ನು ಕಡ್ಡಾಯವಾಗಿ ನೀಡಬೇಕು. ಸಂಪರ್ಕ ರಹಿತ ಪ್ರಕ್ರಿಯೆ ಅಂದರೆ ಕ್ಯೂ ಆರ್ ಕೋಡ್ ಅನ್ನು ಹೋಟೆಲ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

    ಅತಿಥಿಗಳ ಲಗೇಜ್‍ಗೆ ಕ್ರಿಮಿನಾಶಕ ಸಿಂಪಡಿಸಬೇಕು. ಹೋಟೆಲ್ ಅತಿಥಿಗಳು ಕಂಟೈನ್ಮೆಂಟ್ ಝೋನ್‍ಗೆ ಭೇಟಿ ನೀಡಬಾರದು. ರೆಸ್ಟೋರೆಂಟ್‍ನಲ್ಲಿ ಸಾಮಾಜಿಕ ಅಂತರ ಕಾಪಾಡುವ ರೀತಿ ಸೀಟುಗಳನ್ನು ವ್ಯವಸ್ಥೆ ಮಾಡಿರಬೇಕು. ಡಿಜಿಟಲ್ ಪೇಮೆಂಟ್‍ಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಫೆಟ್ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಹೋಟೆಲ್‍ಗಳಿಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

  • ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ ಓಪನ್

    ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ ಓಪನ್

    – ಮಾರ್ಗಸೂಚಿಯಲ್ಲಿ ಏನಿದೆ..?

    ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

    ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್‍ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ ಕೆಲ ಸಡಿಲಿಕೆಗಳನ್ನು ಮಾಡಲಾಗುತ್ತಿದೆ. ಇದರ ನಡುವೆ ಈಗ ಕಂಟೈನ್ಮೆಂಟ್ ಝೋನ್‍ಗಳಲ್ಲದೇ ಇರುವಂತಹ ಪ್ರದೇಶಗಳಲ್ಲಿನ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.

    ಈ ಹಿಂದೆಯೇ ಜೂನ್ 8ರಿಂದ ಮಾಲ್‍ಗಳನ್ನು ಓಪನ್ ಮಾಡಲಾಗುವುದು ಎಂದು ಹೇಳಲಾಗಿತ್ತು. ಅಂತೆಯೇ ಸರ್ಕಾರ ಈ ತೀರ್ಮಾನ ಮಾಡಿದ್ದು, 65 ವರ್ಷದೊಳಗಿನ ವೃದ್ಧರು ಹಾಗೂ 10 ವರ್ಷದೊಳಗಿನ ಮಕ್ಕಳು ಮಾಲ್‍ಗಳಿಗೆ ಪ್ರವೇಶಿಸುವಂತಿಲ್ಲ. ಜೊತೆಗೆ ಪ್ರತಿಯೊಬ್ಬರೂ ಕೂಡ 6 ಅಡಿಯಷ್ಟು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು ಎಂಬ ಷರತ್ತು ವಿಧಿಸಿದೆ.

    ಮಾಲ್‍ಗಳಿಗೆ ಮಾರ್ಗಸೂಚಿ
    ಮಾಲ್ ಪ್ರವೇಶಿಸುವ ಅಂಗಡಿಗಳ ನೌಕರರು, ಮಾಲ್ ಕೆಲಸಗಾರರು, ಗ್ರಾಹಕರು, ಸಿಬ್ಬಂದಿಗೆ ಫೇಸ್ ಮಾಸ್ಕ್ ಮತ್ತು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ನಿಯಮ ಪಾಲಿಸಲು ಸಿಬ್ಬಂದಿ ನೇಮಿಸಬೇಕು. ವೃದ್ಧ ನೌಕಕರು, ಗರ್ಭಿಣಿ ಕೆಲಸಗಾರು ಕೆಲಸಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಜೊತೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಬೇಕು. ಪಾರ್ಕಿಂಗ್ ಮತ್ತು ಮಾಲ್ ಆವರಣದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ನಿಭಾಯಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿಲಾಗಿದೆ.

    ಪಾರ್ಕಿಂಗ್ ಸಿಬ್ಬಂದಿಗೆ ಮಾಸ್ಕ್, ಗ್ಲವ್ಸ್ ಬಳಕೆ ಕಡ್ಡಾಯವಾಗಿರಬೇಕು. ಮಾಲ್ ಒಳಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಸೀಮಿತ ಜನರ ಪ್ರವೇಶಕ್ಕೆ ಆದ್ಯತೆ ನೀಡಬಹುದು. ಎಸ್ಕಲೇಟರ್‍ನಲ್ಲಿ ಒಂದು ಮೆಟ್ಟಿಲು ನಡುವೆ ಅಂತರ ಕಾಪಾಡಿಕೊಳ್ಳಬೇಕು. ಎಸಿ ಅವಶ್ಯಕ ಇದ್ದರೆ 24-30 ಡಿಗ್ರಿ ಬಳಕೆ ಮಾಡಬಹುದು, ಇಲ್ಲದಿದ್ದರೆ ನೈಸರ್ಗಿಕ ಗಾಳಿಗೆ ಒತ್ತು ನೀಡಬೇಕು. ದೊಡ್ಡ ಪ್ರಮಾಣ ಜನ ಸೇರಿ ಪಾರ್ಟಿ ಸಭೆ ಮಾಡುವಂತಿಲ್ಲ. ಮಾಲ್‍ನಲ್ಲಿ ಬಳಕೆಯಾದ ಎಲ್ಲ ವಸ್ತುಗಳನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಲಾಗಿದೆ.

    ಶೌಚಾಲಯಗಳನ್ನು ಆಗ್ಗಾಗ್ಗೆ ಸ್ವಚ್ಛ ಮಾಡಬೇಕು. ಫುಡ್ ಕೋರ್ಟ್ ನಲ್ಲಿ ಅಂತರ ಕಾಯ್ದುಕೊಳ್ಳಬೇಕು. ಮಾಲ್‍ನಲ್ಲಿರಿವ ರೆಸ್ಟೋರೆಂಟ್ ನಲ್ಲಿ ಶೇ.50 ಸಾರ್ಮಥ್ಯಕ್ಕೆ ಅವಕಾಶ ನೀಡಬೇಕು. ಜೊತೆಗೆ ಕೂರುವಾಗ ಅಂತರವಿರಬೇಕು. ಪ್ರತಿ ಗ್ರಾಹಕರು ಬದಲಾದ ಮೇಲೆ ಟೇಬಲ್ ಸ್ಯಾನಿಟೈಜ್ ಮಾಡಬೇಕು. ಕಿಚನ್‍ನಲ್ಲೂ ಅಂತರ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಮಾಲ್‍ನಲ್ಲಿರುವ ಗೇಮಿಂಗ್ ಸೆಂಟರ್, ಮಕ್ಕಳ ಆಟದ ಪ್ರದೇಶ, ಸಿನಿಮಾ ಮಂದಿರ ಬಂದ್ ಆಗಬೇಕು. ಒಂದು ವೇಳೆ ಮಾಲ್‍ನಲ್ಲಿ ಸೋಂಕು ಪತ್ತೆಯಾದರೆ ಸೋಂಕಿತ ಓಡಾಡಿದ ಪ್ರದೇಶ ಐಸೋಲೇಟ್ ಮಾಡಬೇಕು. ಜೊತೆಗೆ ಹತ್ತಿರದ ಆರೋಗ್ಯ ಇಲಾಖೆ ಮಾಹಿತಿ ನೀಡಬೇಕು ಎಂದು ಮಾರ್ಗ ಸೂಚಿಯಲ್ಲಿ ವಿವರಿಸಲಾಗಿದೆ.

  • ಸದ್ಯಕ್ಕೆ ಜಿಮ್‍ಗಳು ಆರಂಭವಾಗಲ್ಲ: ಆರ್ ಅಶೋಕ್

    ಸದ್ಯಕ್ಕೆ ಜಿಮ್‍ಗಳು ಆರಂಭವಾಗಲ್ಲ: ಆರ್ ಅಶೋಕ್

    ಬೆಂಗಳೂರು: ಸದ್ಯಕ್ಕೆ ಜಿಮ್‍ಗಳು ಆರಂಭವಾಗುವುದಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

    ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಬೆಂಗಳೂರು ನಗರ ಸಕ್ಸಸ್ ಆಗಿದೆ. ಕೇಂದ್ರ ಸರ್ಕಾರ ಪ್ರಶಂಸೆ ಮಾಡಿದ್ದು ಖುಷಿ ತಂದಿದೆ. ಇದಕ್ಕೆ ನಮ್ಮ ವೈದ್ಯ ಸಿಬ್ಬಂದಿ, ಅಧಿಕಾರಿ ವರ್ಗ ಸೇರಿ ಎಲ್ಲ ಇಲಾಖೆಗಳ ಶ್ರಮವೂ ಕಾರಣ ಎಂದು ತಿಳಿಸಿದರು.

    ಸದ್ಯ ಜಿಮ್‍ಗಳು ಆರಂಭವಾಗಲ್ಲ. ಲಾಕ್‍ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಮುದಾಯಗಳಿಗೆ ಈಗಾಗಲೇ ಸಹಾಯಧನ ಘೋಷಣೆ ಮಾಡಿದ್ದೇವೆ. ನೇಕಾರರು, ಕ್ಷೌರಿಕ ವೃತ್ತಿ ಅವರಿಗೂ ಸಂಕಷ್ಟ ಇತ್ತು ಆ ಸಮುದಾಯಗಳನ್ನು ಗುರುತಿಸಿದ್ದೇವೆ. ನಮ್ಮ ರಾಜ್ಯದ ಹಣಕಾಸು ಸ್ಥಿತಿ ಬಗ್ಗೆಯು ನೋಡಬೇಕಿದೆ. ಮುಂದಿನ ದಿನಗಳಲ್ಲಿ ಕೆಲ ಸಮುದಾಯಗಳಿಗೆ ಸಹಾಯಧನ ನೀಡುವ ಬಗ್ಗೆ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸುತ್ತೇವೆ ಎಂದು ಮಾಹಿತಿ ನೀಡಿದರು.

    ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಸ್ಟಾಪ್ ಡ್ಯೂಟಿಗೆ ರಿಯಾಯಿತಿ ಕೊಡುವ ಬಗ್ಗೆ ಚಿಂತನೆ ನಡೆದಿದೆ. ತಮಿಳುನಾಡು ಸರ್ಕಾರ ಅಪಾರ್ಟ್‍ಮೆಂಟ್ ರಿಜಿಸ್ಟರ್ ನಲ್ಲಿ ನೋಂದಣಿ ಶುಲ್ಕದಲ್ಲಿ ರಿಯಾಯಿತಿ ಕೊಟ್ಟಿದೆ. ಈ ಬಗ್ಗೆ ಇಂದು ಸಂಜೆ ಸಿಎಂ ಜತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಕೊರೊನಾ ಸಂಕಷ್ಟದಲ್ಲಿ ಹಣಕಾಸಿನ ತೊಂದರೆ ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಆರ್ ಆಶೋಕ್ ಅವರು ಹೇಳಿದ್ದಾರೆ.