Tag: Opening Ceremony

  • ಐಪಿಎಲ್ ಫೈನಲ್ – ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಲಿದ್ದಾರೆ ರಣ್‌ವೀರ್ ಸಿಂಗ್, ಎಆರ್ ರೆಹಮಾನ್

    ಐಪಿಎಲ್ ಫೈನಲ್ – ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಲಿದ್ದಾರೆ ರಣ್‌ವೀರ್ ಸಿಂಗ್, ಎಆರ್ ರೆಹಮಾನ್

    ಗಾಂಧಿನಗರ: ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿರುವ ಐಪಿಎಲ್ ಸಮಾರೋಪ ಕಾರ್ಯಕ್ರಮಕ್ಕೆ ಬಿಸಿಸಿಐ ಗ್ರೀನ್ ಸಿಗ್ನಲ್ ನೀಡಿದೆ. ಈ ವರ್ಷದ ಐಪಿಎಲ್ ಕೊನೆಯ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ರಣ್‌ವೀರ್ ಸಿಂಗ್ ಹಾಗೂ ಖ್ಯಾತ ಗಾಯಕ ಎಆರ್ ರೆಹಮಾನ್ ಮಿಂಚಲಿದ್ದಾರೆ.

    ಹೌದು, ಐಪಿಎಲ್‌ನ ಸಮಾರೋಪ ಕಾರ್ಯಕ್ರಮದಲ್ಲಿ ಕ್ರಿಕೆಟ್ ಪ್ರೇಮಿಗಳನ್ನು ಖ್ಯಾತ ಬಾಲಿವುಡ್ ನಟ ಹಾಗೂ ಗಾಯಕ ರಂಜಿಸುತ್ತಿರುವುದು ಖುಷಿಯ ವಿಚಾರ. ಇದರೊಂದಿಗೆ ಕಾರ್ಯಕ್ರಮದಲ್ಲಿ ಜಾರ್ಖಂಡ್‌ನ ಪ್ರಸಿದ್ಧ ‘ಚೌ’ ನೃತ್ಯವನ್ನೂ ಪ್ರದರ್ಶಿಸಲಾಗುತ್ತಿದ್ದು, ಇದಕ್ಕಾಗಿ 11 ಸದಸ್ಯರ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ.

    ವೇಳಾಪಟ್ಟಿಯಲ್ಲಿ ಏನಿದೆ?
    ಐಪಿಎಲ್ ಸಮಾರೋಪ ಕಾರ್ಯಕ್ರಮ ಭಾನುವಾರ ಸಂಜೆ 6:30ರ ವೇಳೆ ಪ್ರಾರಂಭವಾಗಲಿದ್ದು, 50 ನಿಮಿಷಗಳ ಕಾಲ ಸಾಂಸ್ಕೃತಿಕ ಪ್ರದರ್ಶನ ನಡೆಯಲಿದೆ. 7:30ರ ವೇಳೆ ಟಾಸ್ ನಡೆಯಲಿದ್ದು, 30 ನಿಮಿಷಗಳ ಬಳಿಕ ಪಂದ್ಯ ಆರಂಭವಾಗಲಿದೆ. ಇದನ್ನೂ ಓದಿ: ಕೊಹ್ಲಿಯ ರನ್ ಮೆಷಿನ್ ಬಿರುದು ಕಿತ್ತುಕೊಂಡ ಸಿರಾಜ್

    ಐಪಿಎಲ್ ಪ್ರಾರಂಭವಾದ ಮೊದಲ ದಶಕದಲ್ಲಿ ಆರಂಭ ಹಾಗೂ ಸಮಾರೋಪ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ನಡೆಸಲಾಗುತ್ತಿತ್ತು. ಆದರೆ ಸುಪ್ರಿಂ ಕೋರ್ಟ್ ನೇಮಕದ ಆಡಳಿತಾಧಿಕಾರಿಗಳ ಸಮಿತಿಯ ಅಡಿಯಲ್ಲಿ ಅದನ್ನು 3 ವರ್ಷಗಳ ವರೆಗೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ 2 ವರ್ಷಗಳಿಂದ ಐಪಿಎಲ್ ಆರಂಭ ಹಾಗೂ ಸಮಾರೋಪ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದನ್ನೂ ಓದಿ: ಒಂದೇ ಐಪಿಎಲ್‌ನಲ್ಲಿ 4 ಶತಕ ಸಿಡಿಸಿದ ಬಟ್ಲರ್- ಕೊಹ್ಲಿ ದಾಖಲೆಗೆ ಸಮ

    ಈ ಬಾರಿ ಮಾರ್ಚ್ 26ರಂದು ಐಪಿಎಲ್ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರಾರಂಭವಾದಾಗ ಉದ್ಘಾಟನಾ ಸಮಾರಂಭ ನಡೆದಿರಲಿಲ್ಲ. ಬಳಿಕ ಸಭೆ ನಡೆಸಿದ ಐಪಿಎಲ್ ಆಡಳಿತ ಮಂಡಳಿ ಸಮಾರೋಪ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಿದೆ. ಈ ಬಾರಿ ಸಮಾರೋಪ ಕಾರ್ಯಕ್ರಮವನ್ನು ಆಯೋಜಿಸಲು ಬಿಸಿಸಿಐ ಟೆಂಡರ್ ಪ್ರಕ್ರಿಯೆ ಮೂಲಕ ಪ್ರತಿಷ್ಠಿತ ಸಂಸ್ಥೆಗಳಿAದ ಬಿಡ್‌ಗಳನ್ನು ಆಹ್ವಾನಿಸಿತ್ತು.

  • ಟೋಕಿಯೋ ಒಲಿಂಪಿಕ್ಸ್-21ನೇ ಕ್ರಮಾಂಕದಲ್ಲಿ ಧ್ವಜ ಹಿಡಿದು ಆಗಮಿಸಿದ ಭಾರತ ತಂಡ

    ಟೋಕಿಯೋ ಒಲಿಂಪಿಕ್ಸ್-21ನೇ ಕ್ರಮಾಂಕದಲ್ಲಿ ಧ್ವಜ ಹಿಡಿದು ಆಗಮಿಸಿದ ಭಾರತ ತಂಡ

    ಟೋಕಿಯೋ: 2021ರ ಕ್ರೀಡಾ ಜಾತ್ರೆ ಟೋಕಿಯೋ ಒಲಿಂಪಿಕ್ಸ್ ಸರಳವಾಗಿ ಇಂದು ಉದ್ಘಾಟನೆಗೊಂಡಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತದ 20 ಮಂದಿ ಅಥ್ಲೀಟ್ಸ್ ಗಳು ಭಾಗವಹಿಸಿದರು. 21ನೇ ಕ್ರಮಾಂಕದಲ್ಲಿ ಭಾರತ ತಂಡ ತ್ರಿವರ್ಣ ಧ್ವಜ ಹಿಡಿದು ಪಥಸಂಚಲನದಲ್ಲಿ ಭಾಗವಹಿಸಿತು.

    ಜಪಾನ್‍ನ ಟೋಕಿಯೋದಲ್ಲಿ 2020ರಲ್ಲಿ ನಡೆಯ ಬೇಕಾಗಿದ್ದ ಒಲಿಂಪಿಕ್ಸ್ ಕ್ರೀಡಾಕೂಟ ಕೊರೊನಾದಿಂದಾಗಿ ಒಂದು ವರ್ಷದ ಬಳಿಕ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡು ಆರಂಭಗೊಂಡಿದೆ. ಉದ್ಘಾಟನ ಸಮಾರಂಭದ ಪಥಸಂಚಲನದಲ್ಲಿ ಭಾರತ 20 ಮಂದಿ ಕ್ರೀಡಾ ಪಟುಗಳು ಭಾಗವಹಿಸಿದ್ದರು. ಹಾಕಿ ತಂಡದ ನಾಯಕ ಮನ್‍ಪ್ರೀತ್ ಸಿಂಗ್ ಮತ್ತು ಬಾಕ್ಸರ್ ಮೇರಿ ಕೋಮ್ ಭಾರತ ತ್ರಿವರ್ಣ ಧ್ವಜ ಹಿಡಿದು ಜಪಾನ್‍ನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಹೆಜ್ಜೆ ಇಟ್ಟರು. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್ ಪದಕಕ್ಕೆ ಮುತ್ತಿಕ್ಕಲು ಸಜ್ಜಾದ ಭಾರತೀಯ ಕ್ರೀಡಾಪಟುಗಳು

    ಜಪಾನಿನ ವರ್ಣಮಾಲೆಯ ಅಕ್ಷರದ ಕ್ರಮದಂತೆ ರಾಷ್ಟ್ರಗಳ ಪಥಸಂಚಲನ ನಡೆಯಿತು. ಈ ಪ್ರಕಾರ ಭಾರತಕ್ಕೆ ವರ್ಣಮಾಲೆಯ 21 ಅಕ್ಷರವಾಗಿ ಗಮನ ಸೆಳೆಯಿತು. ಈ ಬಾರಿ ಕೊರೊನಾದಿಂದಾಗಿ ಸರಳವಾಗಿ ಆರಂಭಕಂಡ ಒಲಿಂಪಿಕ್ಸ್ ನಲ್ಲಿ ಕೆಲ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆಯಿತು. ಒಲಿಂಪಿಕ್ಸ್ ರಿಂಗ್‍ನಲ್ಲಿ ನೃತ್ಯ, ಲೈಟಿಂಗ್ ಕಲರವ ಸೆರಿದಂತೆ ಕೆಲ ಅಚ್ಚುಕಟ್ಟಾದ ಕಾರ್ಯಕ್ರಮಗಳು ನೋಡುಗರ ಗಮನಸೆಳೆಯಿತು.

  • ಐಪಿಎಲ್ ಉದ್ಘಾಟನಾ ಸಮಾರಂಭ ‘ವೇಸ್ಟ್ ಆಫ್ ಮನಿ’ ಎಂದ ಬಿಸಿಸಿಐ

    ಐಪಿಎಲ್ ಉದ್ಘಾಟನಾ ಸಮಾರಂಭ ‘ವೇಸ್ಟ್ ಆಫ್ ಮನಿ’ ಎಂದ ಬಿಸಿಸಿಐ

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅದ್ಧೂರಿ ಉದ್ಘಾಟನಾ ಸಮಾರಂಭ ಮಾಡುವುದು ವೇಸ್ಟ್ ಆಫ್ ಮನಿ ಎಂದು ಬಿಸಿಸಿಐ ಅಭಿಪ್ರಾಯ ವ್ಯಕ್ತಪಡಿಸಿದೆ.

    ಐಪಿಎಲ್ ಎಂದರೆ ಒಂದು ವರ್ಣ ರಂಜಿತ ಕ್ರಿಕೆಟ್ ಹಬ್ಬ. ವಿಶ್ವ ಕ್ರಿಕೆಟಿನಲ್ಲಿ ದುಡ್ಡಿನ ಹೊಳೆಯನ್ನೇ ಹರಿಸುವ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಉದ್ಘಾಟನಾ ಸಮಾರಂಭ ವರ್ಷ ವರ್ಷ ಬಹಳ ಅದ್ಧೂರಿಯಾಗಿ ಆಯೋಜನೆ ಆಗುತಿತ್ತು. ಆದರೆ ಈ ವರ್ಷದಿಂದ ಅದಕ್ಕೆ ಬ್ರೇಕ್ ಹಾಕಲು ಬಿಸಿಸಿಐ ತೀರ್ಮಾನ ಮಾಡಿದೆ.

    ಕಳೆದ ವರ್ಷ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ದಾಳಿ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಉದ್ಘಾಟನಾ ಸಮಾರಂಭವನ್ನು ರದ್ದು ಮಾಡಲಾಗಿತ್ತು. ಸಮಾರಂಭ ಆಯೋಜಿಸಲು ನಿಗದಿಯಾಗಿದ್ದ ಹಣವನ್ನು ಬಿಸಿಸಿಐ ಸೇನೆಗೆ ನೀಡಿತ್ತು. ಪ್ರತಿ ಬಾರಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲು ಅಂದಾಜು 20 ಕೋಟಿ ರೂ ಖರ್ಚಾಗುತ್ತಿತ್ತು. ಅದರಲ್ಲಿ 2019ರ ಪುಲ್ವಾಮಾ ದಾಳಿಯಲ್ಲಿ ಹುತತ್ಮಾರಾದ ಸೈನಿಕರಿಗೆ 11 ಕೋಟಿ ರೂ. ಸಿಆರ್‌ಪಿಎಫ್‌ಗೆ 7 ಕೋಟಿ ರೂ, ನೌಕಾಪಡೆ ಮತ್ತು ವಾಯುಪಡೆಗೆ ತಲಾ 1 ಕೋಟಿ ರೂ. ನೀಡಿತ್ತು.

    ಈ ವಿಚಾರವಾಗಿ ಮಾತನಾಡಿರುವ ಬಿಸಿಸಿಐನ ಆಡಳಿತ ಅಧಿಕಾರಿಗಳ ಮುಖ್ಯಸ್ಥ ವಿನೋದ್ ರಾಯ್ ಪ್ರತಿ ಬಾರಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಮಾಡುವುದರಿಂದ ಸುಮ್ಮನೆ ದುಡ್ಡು ವ್ಯರ್ಥವಾಗುತ್ತಿದೆ. ಯಾವ ಕ್ರೀಡಾಭಿಮಾನಿಯು ಸಹ ಈ ಕಾರ್ಯಕ್ರಮವನ್ನು ಇಷ್ಟಪಡುತ್ತಿಲ್ಲ. ಇದಕ್ಕೆ ಸುಮ್ಮನೇ ಅಪಾರ ಪ್ರಮಾಣದ ಹಣವನ್ನು ಖರ್ಚುಮಾಡುವ ಬದಲಿಗೆ ಈ ಹಣವನ್ನು ಸಮಾಜಕ್ಕೆ ಒಳ್ಳೆಯದಾಗುವ ಕೆಲಸಕ್ಕೆ ಉಪಯೋಗಿಸಬಹುದು. ಆದ್ದರಿಂದ ಈ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಬಾರದು ಎಂದು ನಾವು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

    ಪ್ರತಿ ವರ್ಷ ಐಪಿಎಲ್ ಆರಂಭವಾಗುವ ದಿನ ವರ್ಣರಂಜಿತ ಅದ್ಧೂರಿ ಉದ್ಘಾಟನಾ ಸಮಾರಂಭ ಮಾಡಲಾಗುತ್ತಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ಸ್ಟಾರ್ಸ್ ಭಾಗವಹಿಸುತ್ತಿದ್ದರು. ಇವರ ಜೊತೆಗೆ ಅಂತಾರಾಷ್ಟ್ರೀಯ ತಾರೆಗಳು ಪ್ರದರ್ಶನ ನೀಡುತ್ತಿದ್ದರು.

  • ಮತ ಹಾಕದ್ದಕ್ಕೆ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟ ಶಾಸಕ ಪರಮೇಶ್ವರ್ ನಾಯ್ಕ್

    ಮತ ಹಾಕದ್ದಕ್ಕೆ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟ ಶಾಸಕ ಪರಮೇಶ್ವರ್ ನಾಯ್ಕ್

    ಬಳ್ಳಾರಿ: ತನಗೆ ಮತ ಹಾಕದ್ದಕ್ಕೆ ಆಕ್ರೋಶಗೊಂಡು ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮತದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಮತ್ತೊಮ್ಮೆ ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ.

    ಬುಧವಾರ ಮೈಲಾರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಶಿಲಾನ್ಯಾಸ ಕ್ರಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರೇ ವಹಿಸಿಕೊಳ್ಳಬೇಕು. ಆದರೆ ಮೈಲಾರ ಗ್ರಾಮದ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ತನಗೆ ಮತ ಹಾಕಲಿಲ್ಲದ್ದಕ್ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾವೇ ವಹಿಸಿಕೊಳ್ಳುವ ಮೂಲಕ ಶಿಲಾನ್ಯಾಸ ಮಾಡಲು ಮುಂದಾಗಿದ್ದಾರೆ.

    ಈ ವೇಳೆ ಗ್ರಾಮಸ್ಥರು ಹಾಗೂ ಪಂಚಾಯಿತಿ ಸದಸ್ಯರು ಶಾಸಕರ ನಡೆಯನ್ನು ಪ್ರಶ್ನಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಪರಮೇಶ್ವರ್ ನಾಯ್ಕ್, 40 ವರ್ಷದಿಂದ ಯಾವ ಶಾಸಕ, ಸಚಿವನೂ ಇಲ್ಲಿ ಕೆಲಸ ಮಾಡಿಲ್ಲ. ಎಲ್ಲಾ ನಾನೇ ಮಾಡಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ್ ವಿರುದ್ಧ ಹರಿಹಾಯ್ದಿದ್ದಾರೆ.

    ಮಕ್ಕಳಾ ಮತವನ್ನು ಗಡಿಗೆ ಗುರ್ತಿಗೆ ಹಾಕ್ತೀರಾ, ಕೆಲಸಕ್ಕೆ ಮಾತ್ರ ನನ್ನ ಹತ್ತಿರ ಬರುತ್ತಿರಾ ಎಂದು ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವೇಳೆ ಶಾಸಕರ ಪರಮಾಪ್ತನಾದ ತಾಲೂಕು ಪಂಚಾಯಿತಿ ಅಧ್ಯಕ್ಷ ಗ್ರಾಮಸ್ಥರ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಶಾಸಕನ ವರ್ತನೆಗೆ ಬೇಸತ್ತ ಜನ ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರ ನಡೆದು ಹೋದರು. ಗ್ರಾಮಸ್ಥರ ವಿರೋಧವನ್ನು ಲೆಕ್ಕಿಸದೇ ನೂತನ ಕಟ್ಟಡದ ಶಿಲಾನ್ಯಸ ನೇರವೇರಿಸಿ ತಮ್ಮ ದಬ್ಬಾಳಿಕೆಯನ್ನು ಪರಮೇಶ್ವರ್ ನಾಯ್ಕ್ ತೋರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=GG_B4uw-ZGA

  • 10 ರೂಪಾಯಿಗೆ ಸಿಗಲಿದೆ ಯೋಗಿ ಥಾಲಿ!

    10 ರೂಪಾಯಿಗೆ ಸಿಗಲಿದೆ ಯೋಗಿ ಥಾಲಿ!

    ಲಕ್ನೋ: ಬಡಜನರಿಗೆ ಕಡಿಮೆ ದರದಲ್ಲಿ ಊಟ ಸಿಗುವ ಯೋಜನೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಾರಿಗೆ ತಂದಿದ್ದಾರೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಊಟವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಪ್ರಾರಂಭಿಕವಾಗಿ ಅಲಹಾಬಾದ್‍ನಲ್ಲಿ 10 ರೂಪಾಯಿಗೆ ಊಟ ನೀಡುವ ಕ್ಯಾಂಟಿನನ್ನು ಆರಂಭಿಸಿದ್ದಾರೆ. ಭಾನುವಾರ ನೂತನ ಕ್ಯಾಂಟಿನನ್ನು  ಮೇಯರ್ ಅಭಿಲಾಷ ಗುಪ್ತಾರವರು ಉದ್ಘಾಟಿಸಿದ್ದಾರೆ. ಈ ಯೋಜನೆಗೆ ಯೋಗಿ ಥಾಲಿ ಎಂದು ಹೆಸರಿಡಲಾಗಿದೆ.

    ಉದ್ಘಾಟನೆಯ ನಂತರ ಮಾತನಾಡಿದ ಮೇಯರ್ ಗುಪ್ತರವರು, ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಬಡ ವರ್ಗ ಹಾಗೂ ಅಂಗವೈಕಲ್ಯಕ್ಕೆ ತುತ್ತಾದ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

    ಈ ಕುರಿತು ಪ್ರತಿಕ್ರಿಯಿಸಿರುವ ಯೋಜನೆ ರೂವಾರಿ ದಿಲೀಪ್ ಅಲಿಯಾಸ್ ಕಾಕೆ, ಖಾಲಿ ಹೊಟ್ಟೆಯಲ್ಲಿ ಯಾರೂ ಮಲಗಬಾರದು ಎಂಬ ಉದ್ಧೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ. ಬಡ ಜನರಿಗಾಗಿ ದುಡಿಯುತ್ತಿರುವ ಸಿಎಂ ಯೋಗಿ ಆದಿತ್ಯನಾಥ್ ಅವರ ಹೆಸರಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, ಪ್ರಾರಂಭಿಕವಾಗಿ ಅಲಹಾಬಾದ್‍ನ ಅಟಾರ್ಸುಯಿಯಾ ಭಾಗದಲ್ಲಿರುವ ಮಳಿಗೆಯಲ್ಲಿ ಕ್ಯಾಂಟೀನ್ ಆರಂಭಗೊಳಿಸಲಾಗಿದ್ದೇವೆ ಎಂದು ತಿಳಿಸಿದರು.

    ಈಗಾಗಲೇ ಕರ್ನಾಟಕದಲ್ಲಿ ಇಂದಿರಾ, ತಮಿಳುನಾಡಿನಲ್ಲಿ ಅಮ್ಮಾ, ಆಂಧ್ರಪ್ರದೇಶದಲ್ಲಿ ಅಣ್ಣಾ ಕ್ಯಾಂಟೀನ್ ಆರಂಭಗೊಂಡಿದ್ದು, ಕಡಿಮೆ ಬೆಲೆಗೆ ಬಡವರಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಗದ್ದೆಯಲ್ಲಿ ಓಡಿದ ಮೂಡಿಗೆರೆ ಬಿಜೆಪಿ ಶಾಸಕ

    ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಗದ್ದೆಯಲ್ಲಿ ಓಡಿದ ಮೂಡಿಗೆರೆ ಬಿಜೆಪಿ ಶಾಸಕ

    ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಗ್ರಾಮೀಣ ಕ್ರೀಡಾಕೂಟದ ಉದ್ಘಾಟಿಸಿ ಬಳಿಕ ಕೆಸರು ಗದ್ದೆ ಓಟದಲ್ಲಿ ಭಾಗವಹಿಸಿ ಮನರಂಜನೆ ನೀಡಿದ್ದಾರೆ.

    ಭಾನುವಾರ ಮೂಡಿಗೆರೆ ತಾಲೂಕಿನ ಬಡವನದಿಡ್ಡೆ ಗ್ರಾಮದಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಬಳಿಕ ತಾನು ಓರ್ವ ಸ್ಫರ್ಧಾಳು ಆಗಿ ಕೆಸರು ಗದ್ದೆಯಲ್ಲಿ ಓಡಿದ್ದಾರೆ.

    ಮಕ್ಕಳು ಹಾಗೂ ದೊಡ್ಡವರು ಇಬ್ಬರ ಜೊತೆಗೂ ಸ್ಪರ್ಧೆಗೆ ನಿಂತ ಕುಮಾರಸ್ವಾಮಿ ನಾನು ಜನರ ಶಾಸಕ ಎಂದು ಮಕ್ಕಳೊಂದಿಗೆ ಮಕ್ಕಳಾಗಿ ಕೆಸರು ಗದ್ದೆಯಲ್ಲಿ ಎದ್ದು, ಬಿದ್ದು, ಓಡಿ ಸಂಭ್ರಮಿಸಿದ್ದಾರೆ. ಶಾಸಕರ ಓಟ ಕಂಡ ಸ್ಥಳಿಯರು ಕೂಡ ಅವರ ಜೊತೆ ಓಡಿದ್ದಾರೆ.

    ತಾನು ಶಾಸಕ ಎನ್ನುವ ಹಮ್ಮು-ಬಿಮ್ಮನ್ನು ಬಿಟ್ಟು ಓಡಿದ್ದನ್ನು ನೋಡಿದ ಜನ ಕುಮಾರಸ್ವಮಿಯವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಐಪಿಎಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರಣ್‍ವೀರ್ ಸಿಂಗ್ ಡ್ಯಾನ್ಸ್ ಮಾಡಲ್ಲ

    ಐಪಿಎಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರಣ್‍ವೀರ್ ಸಿಂಗ್ ಡ್ಯಾನ್ಸ್ ಮಾಡಲ್ಲ

    ಮುಂಬೈ: ಐಪಿಎಲ್-11 ಉದ್ಘಾಟನಾ ಕಾರ್ಯಕ್ರಮದಲ್ಲಿ ರಣ್‍ವೀರ್ ಸಿಂಗ್ ಡ್ಯಾನ್ಸ್ ಮಾಡಲು 15 ಕೋಟಿ ರೂ. ಪಡೆದಿದ್ದರು. ಆದರೆ ಈಗ ಅವರು ಭುಜದ ಸಮಸ್ಯೆಯಿಂದ ಬಳಲುತ್ತಿದ್ದು, ಡ್ಯಾನ್ಸ್ ಮಾಡಬಾರದೆಂದು ವೈದ್ಯರು ರಣ್‍ವೀರ್ ಗೆ ತಿಳಿಸಿದ್ದಾರೆ.

    ರಣ್‍ವೀರ್ ಸಿಂಗ್ ಫುಟ್‍ಬಾಲ್ ಪಂದ್ಯದ ವೇಳೆ ತಮ್ಮ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದರು. ನಂತರ ವೈದ್ಯರು ಹಲವಾರು ವೈದ್ಯಕೀಯ ಪರೀಕ್ಷೆ ನಡೆಸಿದ ಮೇಲೆ ರಣ್‍ವೀರ್ ಐಪಿಎಲ್ ನಲ್ಲಿ ಡ್ಯಾನ್ಸ್ ಮಾಡುವುದು ಬೇಡ ಎಂದು ವೈದ್ಯರು ಹೇಳಿದ್ದಾರೆ.

    ಏಪ್ರಿಲ್ 7 ರಂದು ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ರಣ್‍ವೀರ್ ಸಿಂಗ್ ನೃತ್ಯ ಪ್ರದರ್ಶನ ಮಾಡಬೇಕಿತ್ತು. ಆದರೆ ರಣ್‍ವೀರ್ ಹೈ-ಎನರ್ಜಿಯಲ್ಲಿ ಡ್ಯಾನ್ಸ್ ಮಾಡುವ ಕಾರಣ ಭುಜದ ನೋವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನೃತ್ಯ ಮಾಡದೇ ಇರುವುದು ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.

    ಭುಜದ ನೋವಿನಿಂದ ರಣ್‍ವೀರ್ ಸಿಂಗ್ ಬಳಲುತ್ತಿದ್ದು, ತಮ್ಮ ಅಭಿಮಾನಿಗಳಿಗೆ ಟ್ವೀಟ್ ಮಾಡಿದ್ದಾರೆ. “ನಿಮ್ಮ ಎಲ್ಲ ಶುಭ ಹಾರೈಕೆಗಳಿಗೆ ಧನ್ಯವಾದಗಳು. ನಾನು ಆರೋಗ್ಯವಾಗಿದ್ದೇನೆ. ನನ್ನ ಎಡಭಾಗದ ಭುಜ ಸ್ವಲ್ಪ ನೋವಾಗಿದ್ದು, ನಾನು ಇನ್ನಷ್ಟು ಶಕ್ತಿಶಾಲಿಯಾಗಿ ಹಿಂತಿರುಗಿ ಬರುತ್ತೇನೆ. ಲವ್ ಯೂ ಆಲ್” ಎಂದು ರಣ್‍ವೀರ್ ಸಿಂಗ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಸದ್ಯ ರಣ್‍ವೀರ್ ಸಿಂಗ್ ‘ಗಲ್ಲಿಬಾಯ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಯಾವುದೇ ಸಾಹಸ ದೃಶ್ಯ ಹಾಗೂ ಡ್ಯಾನ್ಸ್ ಇಲ್ಲದ ಕಾರಣ ರಣ್‍ವೀರ್ ಸಿಂಗ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

  • ಚುನಾವಣಾ ದಿನಾಂಕ ಘೋಷಣೆ ಆಗ್ತಿದ್ದಂತೆ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಲ್ಲಿ ಹೋದ ಸಿಎಂ!

    ಚುನಾವಣಾ ದಿನಾಂಕ ಘೋಷಣೆ ಆಗ್ತಿದ್ದಂತೆ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಲ್ಲಿ ಹೋದ ಸಿಎಂ!

    ಚಿಕ್ಕಬಳ್ಳಾಪುರ: ಚುನಾವಣಾ ದಿನಾಂಕ ಘೋಷಣೆ ಆಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಿಗದಿಯಾಗಿದ್ದ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿದ್ದ ಹಿನ್ನೆಲೆಯಲ್ಲಿ ಸಿಎಂ ಖಾಸಗಿ ಕಾರಿನಲ್ಲಿ ಪ್ರಯಾಣಿಸಿದರು.

    ಚಿಕ್ಕಬಳ್ಳಾಪುರ ನಗರದ ನಂದಿ ಕ್ರಾಸ್ ಬಳಿ ನಿರ್ಮಾಣವಾಗಿರುವ ಕೋಚಿಮುಲ್ ಮೆಗಾಡೈರಿ ಉದ್ಘಾಟನೆಗೆ ಸಿಎಂ ಆಗಮಿಸಿದ್ದರು. ರಾಜ್ಯ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಆದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮ ಹಾಗೂ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಉದ್ಘಾಟನೆ ಮಾಡದೆ ಮೆಗಾಡೈರಿ ವೀಕ್ಷಿಸಿ ನಂತರ ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು.

    ಮೆಗಾಡೈರಿ ಉದ್ಘಾಟನೆ ರದ್ದುಗೊಳಿಸಿ ನಂತರ ಮಾಧ್ಯಮಗಳ ಹತ್ತಿರ ಮಾತನಾಡಿದ ಸಿದ್ಧರಾಮಯ್ಯ, ನೀತಿ ಸಂಹಿತೆ ಜಾರಿಗೆ ಬರಲ್ಲ. ನೋಟಿಫಿಕೇಷನ್ ಆದ ನಂತರ ಅಧಿಕೃತವಾಗಿ ಜಾರಿಗೆ ಬರುತ್ತೆ. ಆದರೆ ಆಯೋಗಕ್ಕೆ ಗೌರವ ಕೊಟ್ಟು ಉದ್ಘಾಟನೆ ಬದಲು ವೀಕ್ಷಣೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

    ಅಷ್ಟೇ ಅಲ್ಲದೇ ಬಿಜೆಪಿಯವರು ಹತಾಶರಾಗಿ ಏನೇನೋ ಮಾತಾಡುತ್ತಿದ್ದಾರೆ. ಈ ಬಾರಿಯೂ ನಾವೇ ಬಹುಮತದಿಂದ ಗೆದ್ದೇ ಬರಲಿದ್ದೇವೆ. ಜೆಡಿಎಸ್, ಬಿಜೆಪಿ ಜೊತೆ ಸಂಬಂಧ ಇಟ್ಟುಕೊಂಡಿದೆ. ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೆ ಎಂದು ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಾರೆ.

    ಚುನಾವಣೆ ನೀತಿ ಸಂಹಿತೆ ಜಾರಿ ಆಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ ತಮ್ಮ ಫೇಸ್‍ಬುಕ್ ಕವರ್ ಫೋಟೋ ಹಾಗೂ ಪ್ರೊಫೈಲ್ ಫೋಟೋವನ್ನು ಬದಲಾಯಿಸಿಕೊಂಡಿದ್ದಾರೆ.

  • ಕರ್ನಾಟಕಕ್ಕೆ ಬಂತು ಮೋಡಿಫೈಯಿಂಗ್ ಆಂದೋಲನ

    ಕರ್ನಾಟಕಕ್ಕೆ ಬಂತು ಮೋಡಿಫೈಯಿಂಗ್ ಆಂದೋಲನ

    ಉಡುಪಿ: ಗುಜರಾತ್ ಸಿಎಂ ಮೋದಿಯನ್ನು ಪ್ರಧಾನಿ ಮಾಡಿದ ಮೋಡಿಫೈಯಿಂಗ್ ಸಂಸ್ಥೆ ಕರ್ನಾಟಕಕ್ಕೂ ಕಾಲಿಟ್ಟಿದೆ. ಉಡುಪಿಯಲ್ಲಿ ಮೋಡಿಫೈಯಿಂಗ್ ಉದಯವಾಗಿದೆ. ಕಟಪಾಡಿಯ ಮಹೇಶ್ ಶೆಣೈ ಕರ್ನಾಟಕದ ಉಸ್ತುವಾರಿಯಾಗಿದ್ದಾರೆ.

    ಉಡುಪಿಯಲ್ಲಿ ಮೈಸೂರು ಸಂಸದ, ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ಈ ಸಂಸ್ಥೆಯ ಉದ್ಘಾಟನೆ ಮಾಡಿದ್ದಾರೆ. 7 ವರ್ಷದ ಹಿಂದೆ ದೆಹಲಿಯ ತೇಜೇಂದ್ರಪಾಲ್ ಸಿಂಗ್ ಭಾಗ್ ಅವರು ಮೋಡಿಫೈಯಿಂಗ್ ಆಂದೋಲನ ಶುರು ಮಾಡಿದ್ದರು. ಇದೀಗ ಆಂದೋಲನ ಕರ್ನಾಟಕಕ್ಕೆ ವಿಸ್ತರಿಸಿದೆ.

    ಚಾಯ್ ಪೆ ಚರ್ಚಾ, ಚಹಾ ವಿತರಣೆ, ರನ್ ಫಾರ್ ಯೂನಿಟಿ ಮತ್ತಿತರ ಕಾರ್ಯಕ್ರಮ ವನ್ನು ತೇಜ್ ಪಾಲ್ ಮಾಡಿದ್ದರು. ಚುನಾವಣೆವರೆಗೂ ನಿರಂತರವಾಗಿ ಮೋಡಿಫೈಯಿಂಗ್ ಕ್ಯಾಂಪೇನ್ ಇರಲಿದೆ. ಸಿದ್ದರಾಮಯ್ಯ ಸರ್ಕಾರದ ವೈಫಲ್ಯ, ಮೋದಿ ಸರ್ಕಾರದ ಸಾಧನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸುವ ಕೆಲಸವನ್ನು ಮೋಡಿಫೈಯಿಂಗ್ ಮಾಡುತ್ತದೆ. ರಾಜಕೀಯ ರಹಿತವಾಗಿರುವ, ಮೋದಿ ಅಭಿಮಾನಿಗಳನ್ನು, ಕೇಂದ್ರ ಸರ್ಕಾರವನ್ನು ಒಪ್ಪುವ ಜನರನ್ನು ಒಗ್ಗೂಡಿಸುವುದು ಮೋಡಿಫೈಯಿಂಗ್ ಕೆಲಸ.

    ದೇಶಕ್ಕೆ ಮೋದಿ ಸಮರ್ಥ ಪ್ರಧಾನಿಯಾಗಿದ್ದರೆ ರಾಜ್ಯಕ್ಕೊಬ್ಬ ಸಮರ್ಥ ಮುಖ್ಯಮಂತ್ರಿ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶ ಇಟ್ಟುಕೊಂಡಿದ್ದೇವೆ. ಮೋದಿ ಸಾಧನೆ ಜನಕ್ಕೆ ಮುಟ್ಟಿಸುವ ಗುರಿಯಿದೆ. ದಕ್ಷಿಣ ಭಾರತದಲ್ಲಿ ಮೋದಿ ಹವಾ ಕ್ರಿಯೇಟ್ ಮಾಡುವ ಅಭಿಲಾಷೆಯಿದೆ. ಕರ್ನಾಟಕಕ್ಕೂ ಬಿಜೆಪಿ ಆಡಳಿತ ಬೇಕು ಅಂತ ಕರ್ನಾಟಕ ಉಸ್ತುವಾರಿ, ಉಡುಪಿ ಸಂಚಾಲಕ ಮಹೇಶ್ ಶೆಣೈ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

  • ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಿಎಂ

    ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಿಎಂ

    ಮೈಸೂರು: ನಗರದಲ್ಲಿ ಇಂದು ಇಂದಿರಾ ಕಾಂಟೀನ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ.

    ಸಿಎಂ ಸಿದ್ದರಾಮಯ್ಯ ಮೈಸೂರಿನ ಕಾಡಾ ಕಚೇರಿಯ ಆವರಣದಲ್ಲಿ ಇಂದು ಬೆಳಗ್ಗೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಈ ಮೂಲಕ ಮೈಸೂರು ನಗರ ವ್ಯಾಪ್ತಿಯಲ್ಲಿ ಒಟ್ಟು 11 ಇಂದಿರಾ ಕ್ಯಾಂಟೀನ್‍ಗಳು ಇಂದಿನಿಂದ ಕಾರ್ಯಾರಂಭ ಆಗಿವೆ.

    ಜಿಲ್ಲೆಯಲ್ಲಿ ಒಟ್ಟು 17 ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಮೊದಲ ಹಂತದಲ್ಲಿ ನಗರಪ್ರದೇಶ ನಂತರ ತಾಲೂಕು ಕೇಂದ್ರದಲ್ಲಿ ಪ್ರಾರಂಭವಾಗಲಿದೆ ಎಂಬುದಾಗಿ ತಿಳಿದುಬಂದಿದೆ.